Subscribe to Updates
Get the latest creative news from FooBar about art, design and business.
- ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
- ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
- ಬೀದರ್: ಪೊಲೀಸರ ಭರ್ಜರಿ ಕಾರ್ಯಾಚರಣೆ; ₹14.50 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಮೂವರ ಬಂಧನ!
- “ಆರ್. ಅಶೋಕ್ ಕಸ ಮಾಫಿಯಾ ಗ್ಯಾಂಗ್ ನ ಏಜೆಂಟ್: ನನ್ನ ಮೇಲೆ ಅಸೂಯೆ ರಾಜಕೀಯ: ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು
- ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್ ಬಾಬು
- ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ
- ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
- ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು
Author: admin
ಗುಬ್ಬಿ (ತುಮಕೂರು): ತಾಲ್ಲೂಕಿನ ಅಂಬಾರಪುರ ಗ್ರಾಮದಲ್ಲಿ ಕಳೆದ ಕೆಲವು ದಿನಗಳಿಂದ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ಚಿರತೆಯೊಂದು ಕೊನೆಗೂ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದೆ. ಅಂಬಾರಪುರ ಗ್ರಾಮ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆ ಹಾವಳಿ ಮಿತಿಮೀರಿತ್ತು. ಇದರಿಂದಾಗಿ ಗ್ರಾಮಸ್ಥರು ಸಂಜೆ ವೇಳೆಗೆ ಮನೆಯಿಂದ ಹೊರಬರಲು ಹಾಗೂ ತಮ್ಮ ದನಕರುಗಳನ್ನು ಮೇಯಿಸಲು ತೀವ್ರ ಭಯಭೀತರಾಗಿದ್ದರು. ಗ್ರಾಮಸ್ಥರ ನಿರಂತರ ಒತ್ತಾಯ ಮತ್ತು ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಚಿರತೆ ಸಂಚರಿಸುವ ಆಯಕಟ್ಟಿನ ಜಾಗದಲ್ಲಿ ಬೋನು ಇರಿಸಿದ್ದರು. ಭಾನುವಾರ ಬೆಳಗಿನ ಜಾವ ಸುಮಾರು 3 ವರ್ಷದ ಹೆಣ್ಣು ಚಿರತೆಯು ಆಹಾರದ ಆಮಿಷಕ್ಕೆ ಒಳಗಾಗಿ ಬೋನಿನಲ್ಲಿ ಸೆರೆಯಾಗಿದೆ. ಬೆಳಿಗ್ಗೆ ಚಿರತೆ ಬೋನಿಗೆ ಬಿದ್ದ ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸೆರೆಯಾದ ಚಿರತೆಯನ್ನು ಸುರಕ್ಷಿತವಾಗಿ ಬೋನಿನ ಸಮೇತ ಬೇರೆಡೆಗೆ ಸ್ಥಳಾಂತರಿಸಲಾಗಿದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ. ಚಿರತೆ ಸೆರೆಯಾಗಿರುವುದರಿಂದ ಅಂಬಾರಪುರ ಗ್ರಾಮದ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ. ನಮ್ಮತುಮಕೂರಿನ…
ಮಧುಗಿರಿ: ತಾಲ್ಲೂಕಿನ ಮಿಡಿಗೇಶಿ ಹೋಬಳಿಯ ಬೆನಕನಹಳ್ಳಿ–ಮಿಡಿಗೇಶಿ ರಸ್ತೆಯ ಸಮೀಪವಿರುವ ಹೊಂಡಕ್ಕೆ ಬಿದ್ದು ಅಕ್ಕ ಮತ್ತು ತಮ್ಮ ಸಾವನ್ನಪ್ಪಿರುವ ಧಾರುಣ ಘಟನೆ ಭಾನುವಾರ ನಡೆದಿದೆ. ಮಧುಗಿರಿ ತಾಲ್ಲೂಕಿನ ಕಸಾಪುರ ಗ್ರಾಮದ ನಿವಾಸಿ ಮಂಜುನಾಥ್ ಎಂಬುವವರ ಮಕ್ಕಳಾದ ಸುಚಿತ್ರಾ (11) ಮತ್ತು ರವೀಂದ್ರ (9) ಮೃತಪಟ್ಟ ದುರ್ದೈವಿಗಳು. ಮಂಜುನಾಥ್ ಅವರ ಮೂವರು ಮಕ್ಕಳು ಅಂದು ಮೇಕೆ ಮೇಯಿಸಲು ಹೋಗಿದ್ದರು. ಈ ಸಂದರ್ಭದಲ್ಲಿ ನೀರು ಕುಡಿಯಲೆಂದು ಹೊಂಡದ ಬಳಿ ಹೋದಾಗ ಮೊದಲು ರವೀಂದ್ರ ಕಾಲುಜಾರಿ ಹೊಂಡಕ್ಕೆ ಬಿದ್ದಿದ್ದಾನೆ. ನೀರಿನಲ್ಲಿ ಮುಳುಗುತ್ತಿದ್ದ ತಮ್ಮನನ್ನು ರಕ್ಷಿಸಲು ಹೋದ ಅಕ್ಕ ಸುಚಿತ್ರಾ ಕೂಡ ಕಾಲುಜಾರಿ ಹೊಂಡಕ್ಕೆ ಬಿದ್ದಿದ್ದಾಳೆ. ಇವರಿಬ್ಬರೂ ನೀರಿನಲ್ಲಿ ಮುಳುಗುತ್ತಿರುವುದನ್ನು ಕಂಡ ಮತ್ತೊಬ್ಬ ಮಗಳು ತಕ್ಷಣ ಪೋಷಕರನ್ನು ಕರೆತರಲು ಓಡಿದ್ದಾಳೆ. ಆದರೆ, ಪೋಷಕರು ಸ್ಥಳಕ್ಕೆ ಬರುವಷ್ಟರಲ್ಲಿ ಇಬ್ಬರೂ ಮಕ್ಕಳು ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಮಧುಗಿರಿ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಮಿಡಿಗೇಶಿ ಪೊಲೀಸ್ ಠಾಣೆಯಲ್ಲಿ…
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ಮತ್ತೆ ಮುನ್ನೆಲೆಗೆ ಬಂದಿರುವ ಬೆನ್ನಲ್ಲೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ. “ಪಕ್ಷದ ಹೈಕಮಾಂಡ್ ಮೇಲೆ ನನಗೆ ಸಂಪೂರ್ಣ ವಿಶ್ವಾಸವಿದೆ, ಯಾವಾಗ ಏನು ಆಗಬೇಕೋ ಅದು ಆಗಿಯೇ ತೀರುತ್ತದೆ” ಎಂದು ಅವರು ಹೇಳಿದ್ದಾರೆ. ನಾಯಕತ್ವದ ಬದಲಾವಣೆ ಅಥವಾ ಅಧಿಕಾರ ಹಂಚಿಕೆಯ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಪಕ್ಷದ ವರಿಷ್ಠರ ತೀರ್ಮಾನಕ್ಕೆ ತಾವು ತಲೆಬಾಗುವುದಾಗಿ ತಿಳಿಸಿದರು. ಈ ಮೂಲಕ ಪಕ್ಷದ ಆಂತರಿಕ ವಿಚಾರಗಳನ್ನು ಹೈಕಮಾಂಡ್ ಗಮನಿಸುತ್ತಿದೆ ಎಂಬ ಸಂದೇಶ ರವಾನಿಸಿದ್ದಾರೆ. ಇದೇ ಮೇ 15 ರಂದು ತಮ್ಮ ಜನ್ಮದಿನವಿದ್ದು, ಅಭಿಮಾನಿಗಳು ಹಾಗೂ ಬೆಂಬಲಿಗರು ಯಾವುದೇ ಕಾರಣಕ್ಕೂ ಫ್ಲೆಕ್ಸ್ ಅಥವಾ ಬ್ಯಾನರ್ಗಳನ್ನು ಹಾಕಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಸಾರ್ವಜನಿಕರಿಗೆ ತೊಂದರೆಯಾಗದಂತೆ ಸರಳವಾಗಿ ಜನ್ಮದಿನ ಆಚರಿಸಲು ಅವರು ಮನವಿ ಮಾಡಿದ್ದಾರೆ. ಸುಮಾರು 30–40 ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಒಳ ಮೀಸಲಾತಿ ಸಮಸ್ಯೆಗೆ ತಮ್ಮ ಸರ್ಕಾರ ನ್ಯಾಯ ಒದಗಿಸಿದೆ. ಸಾಮಾಜಿಕ ನ್ಯಾಯದ…
ಬೆಂಗಳೂರು: ರಾಜ್ಯದ ಆರೋಗ್ಯ ಇಲಾಖೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಸರ್ಕಾರಿ ಆಸ್ಪತ್ರೆಗಳು ಕೋಮಾ ಸ್ಥಿತಿಯಲ್ಲಿವೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇತ್ತೀಚೆಗೆ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳನ್ನು ಉಲ್ಲೇಖಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿರುವ ಅವರು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಕಾರ್ಯವೈಖರಿಯನ್ನು ಕಟುವಾಗಿ ಟೀಕಿಸಿದ್ದಾರೆ. ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಗಳ ದಾಸ್ತಾನಿಲ್ಲ. ವೈದ್ಯರು ಮತ್ತು ಶುಶ್ರೂಷಕರ ನೂರಾರು ಹುದ್ದೆಗಳು ಖಾಲಿ ಇವೆ. ಸ್ಕ್ಯಾನಿಂಗ್ ಸೇವೆ ಒದಗಿಸುವ ಕಂಪನಿಗಳಿಗೆ ಬಾಕಿ ಹಣ ಪಾವತಿ ಮಾಡದ ಕಾರಣ, ರಾಜ್ಯಾದ್ಯಂತ ಸ್ಕ್ಯಾನಿಂಗ್ ಸೇವೆಗಳು ಕುಂಠಿತಗೊಂಡಿವೆ. ಇದರಿಂದ ಬಡ ರೋಗಿಗಳು ಸಂಕಷ್ಟಕ್ಕೀಡಾಗಿದ್ದಾರೆ. ಕಾಂಗ್ರೆಸ್ ಸರ್ಕಾರವು ಆಂತರಿಕ ಕಚ್ಚಾಟ, ಬಣ ರಾಜಕೀಯ ಮತ್ತು ಅಧಿಕಾರದ ಮೇಲಾಟದಲ್ಲಿ ಮುಳುಗಿದೆ. ಇದರಿಂದಾಗಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯು ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ ಎಂದು ಅವರು ಆರೋಪಿಸಿದ್ದಾರೆ. “ವಿಧಾನಸಭಾ ಅಧಿವೇಶನದಲ್ಲಿ ನಾನು ಈ ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿದಾಗ ಆರೋಗ್ಯ ಸಚಿವರು ಎಲ್ಲವೂ…
ಬೆಳಗಾವಿ: ರಾಜ್ಯ ಸರ್ಕಾರದ ಒಳ ಮೀಸಲಾತಿ ಜಾರಿಗೊಳಿಸುವ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಬೆಂಬಲ ಮತ್ತು ಜನಮನ್ನಣೆ ವ್ಯಕ್ತವಾಗುತ್ತಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಶನಿವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆಗೆದುಕೊಂಡಿರುವ ಈ ತೀರ್ಮಾನವು ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಒಂದು ‘ಐತಿಹಾಸಿಕ’ ನಡೆಯಾಗಿದೆ ಎಂದು ಬಣ್ಣಿಸಿದರು. ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಜಾರಿ ಬಗ್ಗೆ ಸುದೀರ್ಘ ಚರ್ಚೆ ನಡೆದಿದ್ದು, ಎಲ್ಲಾ ಸಮುದಾಯಗಳನ್ನು ಪ್ರತಿನಿಧಿಸುವ ಸಚಿವರು ಒಮ್ಮತದಿಂದ ಈ ನಿರ್ಧಾರಕ್ಕೆ ಅಸ್ತು ಎಂದಿದ್ದಾರೆ. ಸಂಪುಟದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿರಲಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ಬಹುಕಾಲದ ಬೇಡಿಕೆಯಾಗಿದ್ದ ಒಳ ಮೀಸಲಾತಿಯಿಂದಾಗಿ ಅರ್ಹ ಸಮುದಾಯಗಳಿಗೆ ಮೀಸಲಾತಿಯ ಸೌಲಭ್ಯಗಳು ಸಮಾನವಾಗಿ ಹಂಚಿಕೆಯಾಗಲಿವೆ. ಇದು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯ ತಲುಪಿಸಲು ಸಹಕಾರಿಯಾಗಲಿದೆ. ಸರ್ಕಾರದ ಈ ಕ್ರಮವನ್ನು ಟೀಕಿಸುತ್ತಿರುವ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಜಾರಕಿಹೊಳಿ, ವಿರೋಧ ಪಕ್ಷದವರು ಸರ್ಕಾರದ ಪ್ರತಿಯೊಂದು…
ಬೆಂಗಳೂರು: ಡಾ. ರಾಜ್ಕುಮಾರ್ ಸ್ಮಾರಕಕ್ಕೆ ಸರ್ಕಾರ ಜಮೀನು ನೀಡಿರುವುದನ್ನು ವಿರೋಧಿಸಿ ಪೋಸ್ಟ್ ಮಾಡಿದ್ದ ನಟ ಚೇತನ್ ಅಹಿಂಸಾ, ಇದೀಗ ಕನ್ನಡಪರ ಹೋರಾಟಗಾರ ಸಾ.ರಾ. ಗೋವಿಂದು ಅವರ ವರ್ತನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. “ನನ್ನ ಮನೆ ಮುಂದೆ ಬಂದು ಗೂಂಡಾಗಳ ರೀತಿ ವರ್ತಿಸಿ ಧಮ್ಕಿ ಹಾಕಿದರೆ ನಾನು ಹೆದರುವುದಿಲ್ಲ, ಕಾನೂನು ಹೋರಾಟ ಮಾಡುತ್ತೇನೆ” ಎಂದು ಅವರು ಎಚ್ಚರಿಸಿದ್ದಾರೆ. ನಿನ್ನೆ ತಮ್ಮ ಮನೆ ಮುಂದೆ ಪ್ರತಿಭಟನೆ ನಡೆದಾಗ ಚೇತನ್ ಕ್ಷಮೆ ಕೇಳಿದ್ದರು. ಆದರೆ ಇಂದು ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದ ಅವರು, “ನಾನು ಕ್ಷಮೆ ಕೇಳಿದ್ದು ಅಣ್ಣಾವ್ರ ಅಭಿಮಾನಿಗಳಿಗೆ ನೋವಾಗಿದ್ದರೆ ಮಾತ್ರ. ಆದರೆ ನನ್ನ ನಿಲುವು ಮತ್ತು ನಾನು ಮಾಡಿದ ಟ್ವೀಟ್ ಗೆ ನಾನು ಇಂದಿಗೂ ಬದ್ಧನಾಗಿದ್ದೇನೆ” ಎಂದು ಹೇಳಿದ್ದಾರೆ. ಸಾ.ರಾ. ಗೋವಿಂದು ಅವರು ಬಳಸಿದ ಪದಗಳು ಸರಿಯಿಲ್ಲ. ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ. ಅವರು ಸೌಜನ್ಯದಿಂದ ಚರ್ಚಿಸಬಹುದಿತ್ತು. ಅದನ್ನು ಬಿಟ್ಟು ಮನೆ ಮುಂದೆ ಬಂದು ಗೂಂಡಾಗಿರಿ ಮಾಡುವುದು ಸರಿಯಲ್ಲ. ಇಂತಹ ವರ್ತನೆಗಳಿಂದ ಅವರು ಡಾ.…
ತುಮಕೂರು: ನಗರದ ಮಹಾತ್ಮಾ ಗಾಂಧಿ (ಎಂ.ಜಿ.) ಕ್ರೀಡಾಂಗಣದಲ್ಲಿ ನಡೆಯುತ್ತಿರುವ 24ನೇ ರಾಷ್ಟ್ರೀಯ ಜೂನಿಯರ್ (U–20) ಅಥ್ಲೆಟಿಕ್ಸ್ ಫೆಡರೇಶನ್ ಕಪ್ ನಲ್ಲಿ ಡೋಪಿಂಗ್ ಶಂಕೆ ವ್ಯಕ್ತವಾಗಿದೆ. ಕ್ರೀಡಾಂಗಣದ ಶೌಚಾಲಯದಲ್ಲಿ ಬಳಸಿದ 4ರಿಂದ 5 ಸಿರಿಂಜ್ ಗಳು ಮತ್ತು ಸೂಜಿಗಳು ಪತ್ತೆಯಾಗಿರುವುದು ಈ ಅನುಮಾನಕ್ಕೆ ಬಲ ನೀಡಿದೆ. ಕೆಲವು ಅಥ್ಲೀಟ್ ಗಳು ತಮ್ಮ ಪ್ರದರ್ಶನವನ್ನು ಉತ್ತಮಪಡಿಸಿಕೊಳ್ಳಲು ನಿಷೇಧಿತ ಉತ್ತೇಜಕಗಳನ್ನು ಬಳಸಿರುವ ಸಾಧ್ಯತೆ ಇದೆ ಎಂದು ಶಂಕಿಸಲಾಗಿದೆ. ಸ್ಪರ್ಧೆಯ ನಿರ್ದೇಶಕ ಸತ್ಯನಾರಾಯಣ ಅವರು ಶೌಚಾಲಯದಲ್ಲಿ ಸಿರಿಂಜ್ ಗಳು ಪತ್ತೆಯಾಗಿರುವುದನ್ನು ಖಚಿತಪಡಿಸಿದ್ದಾರೆ. ಆದರೆ, ಇದರಲ್ಲಿ ಭಾಗಿಯಾಗಿರುವ ನಿರ್ದಿಷ್ಟ ಅಥ್ಲೀಟ್ಗಳ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿಸಿದ್ದಾರೆ. ರಾಷ್ಟ್ರೀಯ ಡೋಪಿಂಗ್ ವಿರೋಧಿ ಸಂಸ್ಥೆಯ (NADA) ಅಧಿಕಾರಿಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಕ್ರೀಡಾಪಟುಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಿದ್ದಾರೆ. ಪದಕ ವಿಜೇತರು ಮತ್ತು ಅಂತಿಮ ಸುತ್ತು ತಲುಪಿದ ಅಥ್ಲೀಟ್ ಗಳ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಒಂದು ವೇಳೆ ಡೋಪಿಂಗ್ ಪರೀಕ್ಷೆಯಲ್ಲಿ ಪಾಸಿಟಿವ್ ಬಂದರೆ, ಅಂತಹ ಕ್ರೀಡಾಪಟುಗಳಿಗೆ ನಾಲ್ಕು ವರ್ಷಗಳ ಕಾಲ…
ಕೊರಟಗೆರೆ: ಶಿಕ್ಷಣವೇ ಜೀವನವನ್ನು ರೂಪಿಸುವ ಶಕ್ತಿಯಾಗಿದೆ. ವಿದ್ಯೆಯಿಂದ ವ್ಯಕ್ತಿಯ ಚಿಂತನೆ, ನಡೆ–ನುಡಿ ಎಲ್ಲವೂ ಬದಲಾಗುತ್ತದೆ. ಆದ್ದರಿಂದ ನಾವು ಶಿಕ್ಷಣ ಪಡೆದವರಾಗಿಯೂ, ಸಂಸ್ಕಾರವಂತರಾಗಿಯೂ ಬದುಕುವುದನ್ನು ಕಲಿಯಬೇಕು ಎಂದು ಬೆಂಗಳೂರಿನ ಬೇಲಿ ಮಠದ ಪೀಠಾಧ್ಯಕ್ಷ ಶಿವರುದ್ರ ಮಹಾ ಸ್ವಾಮೀಜಿ ಹೇಳಿದರು. ತಾಲೂಕಿನ ಎಲೆರಾಂಪುರ ಕುಂಚಿಟಿಗ ಮಹಾಸಂಸ್ಥಾನ ಮಠದಲ್ಲಿ ನಡೆಯುತ್ತಿರುವ ಸಂಸ್ಕಾರ ಶಿಬಿರದಲ್ಲಿ ಶುಕ್ರವಾರ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದ ಅವರು, “ನಮ್ಮಲ್ಲಿರುವ ಸಂಪತ್ತೆಲ್ಲವೂ ಕಳೆದುಹೋಗಬಹುದು. ಆದರೆ ನಾವು ಕಲಿತ ವಿದ್ಯೆಯನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ. ಹಣವಂತರಿಗಿಂತ ಗುಣವಂತರಿಗೆ ಮತ್ತು ಜ್ಞಾನಿಗಳಿಗೆ ಸಮಾಜದಲ್ಲಿ ಹೆಚ್ಚಿನ ಗೌರವ ದೊರಕುತ್ತದೆ” ಎಂದು ಹೇಳಿದರು. ಶಿಬಿರದ ವೈಶಿಷ್ಟ್ಯವನ್ನು ವಿವರಿಸಿದ ಮಠದ ಪೀಠಾಧ್ಯಕ್ಷ ಡಾ.ಹನುಮಂತನಾಥ ಸ್ವಾಮೀಜಿ, ಇಲ್ಲಿ ಭಾಗವಹಿಸಿರುವ ಮಕ್ಕಳು ಮೊಬೈಲ್ ಮತ್ತು ಟಿವಿಗಳಿಂದ ದೂರವಿದ್ದು, ಜಂಕ್ ಫುಡ್ ಸೇರಿದಂತೆ ಆರೋಗ್ಯಕ್ಕೆ ಹಾನಿಕರ ಆಹಾರ ಪದಾರ್ಥಗಳನ್ನು ತ್ಯಜಿಸಿ, ಮಠದಲ್ಲಿ ನೀಡುವ ಸಾತ್ವಿಕ ಆಹಾರವನ್ನು ಸೇವಿಸುತ್ತಿದ್ದಾರೆ. ವರ್ಷದಿಂದ ವರ್ಷಕ್ಕೆ ಶಿಬಿರದಲ್ಲಿ ಭಾಗವಹಿಸುವ ಮಕ್ಕಳ ಸಂಖ್ಯೆ ಹೆಚ್ಚುತ್ತಿದ್ದು, ಸಂಸ್ಕಾರ ಬೆಳೆದಂತೆ ಮೌಲ್ಯವೂ ಹೆಚ್ಚುತ್ತದೆ ಎಂದು ಹೇಳಿದರು.…
ತುಮಕೂರು: ದೇಶದ ಭವಿಷ್ಯವಾಗಿರುವ ಯುವ ಸಮುದಾಯ ಮಾದಕ ವ್ಯಸನಗಳಿಂದ ದೂರವಿದ್ದು, ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಕೇಂದ್ರ ಸಚಿವ ವಿ. ಸೋಮಣ್ಣ ಅವರು ಕರೆ ನೀಡಿದರು. ನಗರದ ಸರ್ಕಾರಿ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ನಶಾ ಮುಕ್ತ ಭಾರತ’ ಹಾಗೂ ‘ಯುವ ಶುದ್ಧ ಅಭಿಯಾನ ವಾಕಥಾನ್’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ‘ನಶಾ ಮುಕ್ತ ಕ್ಯಾಂಪಸ್’, ‘ಆತ್ಮಹತ್ಯೆ ಮುಕ್ತ ಕ್ಯಾಂಪಸ್’ ಹಾಗೂ ‘ಅಂಗಾಂಗ ದಾನ ಅಭಿಯಾನ’ಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ವ್ಯಸನ ಮುಕ್ತ ಕ್ಯಾಂಪಸ್: ಕಾಲೇಜು ಕ್ಯಾಂಪಸ್ ಗಳಲ್ಲಿ ಕಲಿಯುತ್ತಿರುವ ಯುವಕರು ನಶಾ ಪದಾರ್ಥಗಳಿಂದ ಸಂಪೂರ್ಣವಾಗಿ ಮುಕ್ತರಾಗಬೇಕು. ಮಾದಕ ವ್ಯಸನವು ಕೇವಲ ವ್ಯಕ್ತಿಯನ್ನಲ್ಲದೆ, ಅವರ ಕುಟುಂಬ ಹಾಗೂ ಇಡೀ ದೇಶದ ಭವಿಷ್ಯವನ್ನೇ ನಾಶಪಡಿಸುತ್ತದೆ ಎಂದು ಸಚಿವರು ಎಚ್ಚರಿಸಿದರು. ಯುವಜನತೆ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು. ಪ್ರತಿನಿತ್ಯ ಯೋಗ, ಪ್ರಾಣಾಯಾಮ ಹಾಗೂ ಕ್ರೀಡಾ ಚಟುವಟಿಕೆಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಅವರು ಕಿವಿಮಾತು ಹೇಳಿದರು. ವಿದ್ಯಾರ್ಥಿಗಳಲ್ಲಿ ಜಾಗೃತಿ…
ಹುಬ್ಬಳ್ಳಿ: ಮೊಬೈಲ್ ನಲ್ಲಿ ಆನ್ ಲೈನ್ ಗೇಮ್ ಆಡದಂತೆ ತಾಯಿ ಬುದ್ಧಿವಾದ ಹೇಳಿ ಮೊಬೈಲ್ ಕಿತ್ತುಕೊಂಡಿದ್ದಕ್ಕೆ ಮನನೊಂದ 14 ವರ್ಷದ ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಹುಬ್ಬಳ್ಳಿಯ ಬೆಂಗೇರಿಯ ಉದಯನಗರದಲ್ಲಿ ನಡೆದಿದೆ. ಮೃತ ಬಾಲಕನನ್ನು ಸಮರ್ಥ್ ಪಟಿಕೆ ಎಂದು ಗುರುತಿಸಲಾಗಿದೆ. ಈತ ಕಳೆದ ಕೆಲವು ದಿನಗಳಿಂದ ‘ಫ್ರೀ ಫೈರ್’ (Free Fire) ಎಂಬ ಆನ್ ಲೈನ್ ಗೇಮ್ ಗೆ ತೀವ್ರವಾಗಿ ವ್ಯಸನಿಯಾಗಿದ್ದ ಎನ್ನಲಾಗಿದೆ. ಘಟನೆಯ ದಿನ ರಾತ್ರಿ ಸಮರ್ಥ್ ಸತತವಾಗಿ ಮೊಬೈಲ್ ನಲ್ಲಿ ಗೇಮ್ ಆಡುತ್ತಿದ್ದನ್ನು ಗಮನಿಸಿದ ತಾಯಿ, “ಮೊಬೈಲ್ ಸಾಕು ಮಾಡು, ಓದಿನ ಕಡೆ ಗಮನ ಕೊಡು” ಎಂದು ಬುದ್ಧಿವಾದ ಹೇಳಿದ್ದಾರೆ. ಅಲ್ಲದೆ, ಆತನ ಕೈಯಲ್ಲಿದ್ದ ಮೊಬೈಲ್ ಫೋನನ್ನು ಕಿತ್ತುಕೊಂಡಿದ್ದಾರೆ. ಇದರಿಂದ ತೀವ್ರವಾಗಿ ನೊಂದ ಬಾಲಕ ತಕ್ಷಣವೇ ತನ್ನ ಕೋಣೆಗೆ ಹೋಗಿ ಒಳಗಿನಿಂದ ಬಾಗಿಲು ಹಾಕಿಕೊಂಡಿದ್ದಾನೆ. ಸುಮಾರು 15–20 ನಿಮಿಷಗಳಾದರೂ ಮಗ ಹೊರಬಾರದಿದ್ದಾಗ ಆತಂಕಗೊಂಡ ತಂದೆ ಕಿಟಕಿಯಿಂದ ಇಣುಕಿ ನೋಡಿದಾಗ, ಸಮರ್ಥ್ ಸೀರೆಯಿಂದ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ತಕ್ಷಣವೇ…