Author: admin

ತುಮಕೂರು: ಭಕ್ತರ ಪಾಲಿಗೆ ನಡೆದಾಡುವ ದೇವರು ಎನಿಸಿಕೊಂಡಿದ್ದ ಪರಮಪೂಜ್ಯ ಶಿವಕುಮಾರ ಶ್ರೀಗಳ ಜಯಂತೋತ್ಸವ  ಇಂದು ಇಡೀ ನಾಡಿನಾದ್ಯಂತ ಅರ್ಥ ಪೂರ್ಣವಾಗಿ ಆಚರಣೆ ಮಾಡಲಾಗ್ತಿದೆ. ಅವರು ತೊರಿಸಿಕೊಟ್ಟ ಮಾರ್ಗದರ್ಶನದಂತೆ ಎಲ್ಲರು ನಡೆದುಕೊಳ್ತಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದರು. ತುಮಕೂರಿನ ಸಿದ್ದಗಂಗಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಎರಡು ಪ್ರಮುಖ ಹೋರಾಟ ಕೈಗೊಂಡಿದ್ದೇವೆ.  ಎರಡು ಹಂತದ ಹೋರಾಟ ನಡೆಸುತ್ತೇವೆ.  ರಾಜ್ಯದ ಸರ್ಕಾರದ ನೀತಿ ಖಂಡಿಸಿ, ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸುವುದಾಗಿ ಅವರು ತಿಳಿಸಿದರು. ಹಾಲು ಪೆಟ್ರೋಲ್ ನೀರು ವಿದ್ಯುತ್ ದರ ಜಾಸ್ತಿ ಆಗಿದೆ.  ಜನ ಸಾಮಾನ್ಯರಿಗೆ ಬರೆ ಎಳೆದಿದ್ದಾರೆ. ಎರಡನೇ ಹಂತದ ಹೋರಾಟ.ಏ 7ಕ್ಕೆ ನಡೆಯಲಿದೆ. ಬೆಲೆ ಏರಿಕೆ ಕುರಿತು ಅಹೋರಾತ್ರಿ ಧರಣಿ ನಡೆಯಲಿದೆ ಎಂದರು. ಎರಡನೇ ಹಂತದ ಹೋರಾಟ  ಮುಸ್ಲಿಮರಿಗೆ ಕೊಟ್ಟ ಮೀಸಲಾತಿ ವಿರುದ್ದ ಹಾಗೂ ಎಸ್ಸಿ ಎಸ್ಟಿ ಹಣ ದುರುಪಯೋಗ ಮಾಡಿದುರ ಕುರಿತು ಹೋರಾಟ ಎಂದು ತಿಳಿಸಿದರು. ಮೈಸೂರಿನಿಂದ ಜನ ಆಕ್ರೋಶ…

Read More

ತುಮಕೂರು:  ರಾಜೇಂದ್ರ ರಾಜಣ್ಣ ಹತ್ಯೆಗೆ  ಸುಪಾರಿ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ  ಸಚಿವ ಕೆ.ಎನ್.ರಾಜಣ್ಣ ತುಮಕೂರಲ್ಲಿ ಪ್ರತಿಕ್ರಿಯಿಸಿದ್ದು,  ಸುಫಾರಿ ಪ್ರಕರಣದ ಬಗ್ಗೆ ರಾಜೇಂದ್ರ ಅವರನ್ನೇ ಕೇಳಿ ಎಂದಿದ್ದಾರೆ. ಹನಿಟ್ಯಾಪ್‌ ಪ್ರಕರಣ ತನಿಖೆಯಾಗುವಾಗ ಮಧ್ಯದಲ್ಲಿ ಏನ್ ಹೇಳೋಕಾಗುತ್ತೆ.  ಯಾವುದರಲ್ಲಿ ಮಾಡ್ತಾರೆ ಮಾಡಲಿ ಎಸ್ ಐ ಟಿ ಮಾಡ್ತಾರ  ಇನ್ನೊಂದು ಮಾಡ್ತಾರ ಮಾಡಲಿ,  ಅದು ಗೃಹಮಂತ್ರಿಗಳಿಗೆ ಮತ್ತು ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ ಎಂದರು. ಕೆಲವು ವಿಚಾರಗಳನ್ನ ಹೇಳಲಿಕ್ಕೆ ಆಗೋದಿಲ್ಲ ಆಮೇಲೆ ಹೇಳ್ತೀನಿ ಬನ್ನಿ. ರಾಜೇಂದ್ರ ಹತ್ಯೆ ಸುಫಾರಿ ಆಡಿಯೋ ಪ್ರಕರಣ ಸಂಬಂಧ ಪ್ರಶ್ನೆಗೆ ಉತ್ತರಿಸಿದ ಅವರು, ನೀವೇ ತೋರಿಸಿದ್ದೀರಾ ಎಲ್ಲಾ ಅದರ ಬಗ್ಗೆ ನಾನು ಏನು ಹೇಳೋಕೆ ಆಗೋಲ್ಲ.  ಪ್ರಭಾವ ಇದ್ದೋರು ಇದ್ದಾರೋ ಇಲ್ವೋ.  ಈ ರೀತಿಯ ಕಾನೂನು ಬಾಹಿರ ಕ್ರಮಗಳಿಗೆ ಯಾರೇ ಪ್ರಯತ್ನ ಮಾಡಿರಲಿ ದೇವರು ಒಳ್ಳೆದು ಮಾಡೋಲ್ಲ ಅನ್ನೋದರ ಜೊತೆಗೆ ಸಾರ್ವಜನಿಕ ಜೀವನದಲ್ಲಿ ಅವರ ಇರಬಾರದು ಎಂದರು. ಯಾರೇ ಆಗಿರಲಿ ನಾನೇ ಆಗಿರಲಿ ಇರಬಾರದು. ನಾನು ಹೇಳೋದು ಬೇರೆಯವರಿಗೋಸ್ಕರ ಅಲ್ಲಾ ನಾನು ಸೇರಿಸಿ…

Read More

ಬೆಂಗಳೂರು:  ಬೆಲೆ ಏರಿಕೆ ವಿಚಾರವಾಗಿ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆ ಬಿಜೆಪಿ ಪಕ್ಷದೊಳಗಿನ ಕೋಲಾಹಲವನ್ನು ಮುಚ್ಚಿಹಾಕಲು ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಬಿಜೆಪಿ ನಾಯಕ ಬಿ.ವೈ.ವಿಜಯೇಂದ್ರ ಅವರು ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಹೊರಹಾಕಿದ್ದಾರೆ. ತಮ್ಮ ಪಕ್ಷದೊಳಗಿನ ಕಲಹವನ್ನು ‘ಮುಚ್ಚಿಹಾಕಲು’ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ದೂರಿದರು. ಪ್ರಧಾನಿ ಮೋದಿಯವರ ಆರ್ಥಿಕ ನೀತಿಯಿಂದಾಗಿ ಸಾಮಾನ್ಯ ಜನರ ಜೀವನ ನರಕವಾಗಿದೆ. ಈ ಎಲ್ಲ ಬೆಲೆ ಏರಿಕೆಗೆ ಯಾರು ಹೊಣೆ, ಪ್ರಧಾನಿ ಮೋದಿಯವರ ಮಾಸ್ಟರ್ ಸ್ಟ್ರೋಕ್‌ ನಿಂದ ಆರ್ಥಿಕತೆ ಕುಸಿದಿದೆ. ಅದಾನಿ ಅಂಬಾನಿಯಿಂದಾಗಿಯೇ ಪರಿಸ್ಥಿತಿ ಹೀಗಿದೆ ಎಂದು ಆರೋಪಿಸಿದರು. ಬಜೆಟ್ ಬಗ್ಗೆ ಚರ್ಚೆ ಏಕೆ ನಡೆಯಲಿಲ್ಲ, ಸಿದ್ದರಾಮಯ್ಯ ಅವರು 4 ಲಕ್ಷ ಕೋಟಿ ರೂ. ಬಜೆಟ್ ಮಂಡಿಸಿದ್ದಾರೆ. ಅದನ್ನು ಎಳೆ ಎಳೆಯಾಗಿ ಬಿಚ್ಚಬಹುದಿತ್ತು. ಆದರೆ, ಇಂದು ವಿಜಯೇಂದ್ರ ಮತ್ತು ಯತ್ನಾಳ್ ನಡುವಿನ ಜಗಳವನ್ನು ಮುಚ್ಚಿಹಾಕಲು ಜನರ ದಾರಿ ತಪ್ಪಿಸುತ್ತಿದ್ದಾರೆ. ಅವರಲ್ಲಿ…

Read More

ತುಮಕೂರು:   ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದರು. ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಯವರ  ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಅವರು,   ಮೊದಲಿಗೆ ಶ್ರೀ ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ಭೇಟಿ ನೀಡಿ ದರ್ಶನ ಪಡೆದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಇಂದು ಏಪ್ರಿಲ್ 1. ಪ್ರತಿ ವರ್ಷವೂ ಏಪ್ರಿಲ್ 1ನ್ನು ಮೂರ್ಖರ ದಿನಾಚರಣೆಯಾಗಿ ಆಚರಿಸುತ್ತಾರೆ. ಏಪ್ರಿಲ್  ಫೂಲ್ ಯಾಕೆ ಆಚರಿಸುತ್ತಾರೆ ಎನ್ನುವುದಕ್ಕೆ ಒಬ್ಬೊಬ್ಬರೂ ಒಂದೊಂದು ಕಾರಣಗಳನ್ನು ನೀಡುತ್ತಾರೆ. ಆದ್ರೆ ತಮಾಷೆಯ ಪ್ರಜ್ಞೆ ಬೆಳೆಸಲು ಈ ದಿನ ಬಳಕೆಯಾಗುತ್ತಿದೆ. ಕೆಲವೊಮ್ಮೆ ತಮಾಷೆಗಳು ಅತಿರೇಕಕ್ಕೆ ಹೋದರೆ, ದುಃಖಕರ ಸನ್ನಿವೇಶಗಳನ್ನೂ ಎದುರಿಸುವಂತಹ ಸನ್ನಿವೇಶಗಳು ಪ್ರತಿ ವರ್ಷವೂ ಸಂಭವಿಸುತ್ತಲೇ ಇರುತ್ತದೆ. ಏಪ್ರಿಲ್ ಫೂಲ್ ಕೇವಲ ಒಂದು ದಿನದ ತಮಾಷೆಯ ದಿನ. ಆದ್ರೆ ನಾವು ಪ್ರತಿ ದಿನವೂ ಯಾವುದಾದರೂ ಒಂದು ವಿಷಯದಲ್ಲಿ ಫೂಲ್ ಆಗುತ್ತಲೇ ಇರುತ್ತೇವೆ. ನಾವು ಬೇರೆಯವರ ಮೇಲೆ ವಿಶ್ವಾಸ ನಂಬಿಕೆ ಇಟ್ಟಿರುತ್ತೇವೆ. ಆದರೆ ಅವರು ತಮ್ಮ ಸ್ವಾರ್ಥಕ್ಕೆ ನಮ್ಮ ನಂಬಿಕೆಗಳನ್ನು ಬಲಿ ಕೊಡುತ್ತಾರೆ. ಸುಳ್ಳು ಹೇಳುತ್ತಾರೆ. ಯಜಮಾನನ ಮೇಲೆ ನಿಷ್ಠೆಯಿಂದ ಕೆಲಸ ಮಾಡುವ ಕೆಲಸಗಾರ, ಕೆಲಸಗಾರನ ಮೇಲೆ ನಂಬಿಕೆ ಇಡುವ ಯಜಮಾನ, ಮಕ್ಕಳ ಮೇಲೆ ನಂಬಿಕೆ ಇಡುವ ಪೋಷಕರು, ಪೋಷಕರ ಮೇಲೆ ನಂಬಿಕೆ ಇಡುವ ಮಕ್ಕಳು, ಸ್ನೇಹಿತರ ಮೇಲೆ ನಂಬಿಕೆ ಇಡುವ ಸ್ನೇಹಿತರು ಹೀಗೆ ನಂಬಿಕೆಗಳ ಮೇಲೆ…

Read More

ಪಾವಗಡ: ತಾಲ್ಲೂಕಿನ ವೈ.ಎನ್. ಹೊಸಕೋಟೆ ಹೋಬಳಿಯ ಜೋಡಿ ಅಚ್ಚಮ್ಮನಹಳ್ಳಿ ಗ್ರಾಮದಲ್ಲಿ ಯುಗಾದಿ ಹಬ್ಬದ ಅಂಗವಾಗಿ, ಶ್ರೀ ಚೌಡೇಶ್ವರಿ ಅಮ್ಮನವರ 60ನೇ ಜ್ಯೋತಿ ಉತ್ಸವವನ್ನು ಸೋಮವಾರದಂದು ವಿಜೃಂಭಣೆಯಿಂದ ಆಚರಿಸಲಾಯಿತು. ಬೆಳಿಗ್ಗೆ 9 ಗಂಟೆಗೆ ಪ್ರಾರಂಭವಾದ ಉತ್ಸವ, ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿ ಮಧ್ಯಾಹ್ನ 2 ಗಂಟೆಯ ವೇಳೆ ದೇವಾಲಯದಲ್ಲಿ ಕೊನೆಗೊಂಡಿತು. ಉತ್ಸವದ ಉದ್ದಕ್ಕೂ ಹರಕೆ ಹೊತ್ತ ಭಕ್ತಾಧಿಗಳು ನಾರದ ಹಾಕಿಸಿಕೊಂಡು ಹರಕೆ ತೀರಿಸಿದರು. ಗ್ರಾಮಕ್ಕೆ ದುಷ್ಟಶಕ್ತಿಗಳ ಹಾವಳಿ ಬಾರದಿರಲೆಂದು ಪೂಜಾನ್ನವನ್ನು ಹಾಕಲಾಯಿತು. ಮೆರವಣಿಗೆಯಲ್ಲಿ ತೊಗಟವೀರ ಸಮುದಾಯ ಆನಂದ ಪದಗಳನ್ನು ಹಾಡುತ್ತ ದೇವಿಯ ಮೂರ್ತಿಗೆ ಶಕ್ತಿ ತುಂಬಿದರು. ಹಬ್ಬದ ಅಂಗವಾಗಿ ಮೂಲ ದೇವತಾ ಮೂರ್ತಿಗೆ ‘ಅರಶಿಣ ಕುಂಕುಮ’ದ ಅಲಂಕಾರ ಮಾಡಲಾಗಿತ್ತು. ವರದಿ :  ನಂದೀಶ್ ನಾಯ್ಕ ಪಿ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಪಾವಗಡ:  ಶಾಸಕರಾದ ಹೆಚ್.ವಿ.ವೆಂಕಟೇಶ್ ತುಮಕೂರು ಹಾಲು ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ವೈ.ಎನ್.ಹೊಸಕೋಟೆ ಆರ್ಯ ವೈಶ್ಯ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ವೆಂಕಟೇಶ್ ಅವರನ್ನು ಹಾಗೂ ಮಾಜಿ ಸಚಿವರಾದ ವೆಂಕಟರಮಣಪ್ಪ ನವರನ್ನು ಭೇಟಿ ಮಾಡಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಎನ್ ಆರ್ ಅಶ್ವಥ್ ಕುಮಾರ್ , ವಿಶ್ವನಾಥ್ ಟಿ.ಆರ್.ವಿ ಪ್ರಸಾದ್ , ಎಂ.ಆರ್ ಶಿವಾನಂದ ಗುಪ್ತ, ಎನ್.ಜಿ ರಾಮು ರವರು,ಎನ್.ಎಸ್ ಮಂಜುನಾಥ್ ,ಇ.ವಿ ಶ್ರೀಧರ್ ,ಟಿ ವಿ ವೆಂಕಟೇಶ್, ಎನ್.ಶ್ರೀನಿವಾಸ್,ಇ.ಎನ್. ರಘು ರವರು ಸೇರಿ ಇನ್ನಿತರರು ಇದ್ದರು. ವರದಿ: ನಂದೀಶ್ ನಾಯ್ಕ ಪಿ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ನಾಗಲಮಡಿಕೆ ಹೋಬಳಿಯ ಕ್ಯಾತಗಾನಕೆರೆ ಗ್ರಾಮದಲ್ಲಿ ಚರ್ಚ್ ಉದ್ಘಾಟನೆಯು ವಿವಾದಕ್ಕೆ ಕಾರಣವಾಗಿದೆ. ಗ್ರಾಮದ ಜನರು ಚರ್ಚ್ ನಿರ್ಮಾಣದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಶಿಲಾನ್ಯಾಸ ಫಲಕವನ್ನು ಧ್ವಂಸಗೊಳಿಸುವ ಮೂಲಕ ಉದ್ಘಾಟನೆಯನ್ನು ತಡೆದಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಸುರೇಶ್ ಎಂಬ ಪಾದ್ರಿ ಗ್ರಾಮದಲ್ಲಿ ವಾಸವಿದ್ದು, ಕ್ರೈಸ್ತ ಧರ್ಮದ ಬಗ್ಗೆ ಜನರಲ್ಲಿ ಮಾಹಿತಿ ಪಸರಿಸುತ್ತಿದ್ದರು. ಆದರೆ, ಅವರ ವಿರುದ್ಧ ಗ್ರಾಮದ ನಿರ್ವಾಹಕರ ಪತ್ನಿಯೊಂದಿಗಿನ ಅನುಚಿತ ವರ್ತನೆಯ ಆರೋಪ ಹೊರಿಸಲಾಗಿದೆ. ಈ ಆರೋಪಗಳನ್ನು ವ್ಯಕ್ತಪಡಿಸಿದ ಮಹಿಳೆಯ ಪತಿ, ಪಾದ್ರಿಯ ವರ್ತನೆ ಅವರ ಕುಟುಂಬದ ಜೀವನವನ್ನು ಹಾಳು ಮಾಡಿದೆ ಎಂದು ದೂರಿದ್ದಾರೆ. ಸೋಮವಾರ ಉದ್ಘಾಟನೆಗೆ ಸಿದ್ಧವಾಗಿದ್ದ ಐಪಿಸಿ ಚಿಯೋನ್ ಪ್ರಾರ್ಥನಾ ಮಂದಿರವನ್ನು ಉದ್ಘಾಟಿಸಲು ಉದ್ದೇಶಿಸಿದ್ದಾಗ, ಗ್ರಾಮಸ್ಥರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಉದ್ಘಾಟನೆಗೆ ಸಿದ್ಧವಾಗಿದ್ದ ಶಿಲಾನ್ಯಾಸ ಫಲಕವನ್ನು ಧ್ವಂಸಗೊಳಿಸಿದರು. ಗ್ರಾಮದ ಯುವಕ ಅನಿಲ್ ಮಾತನಾಡಿ, “ಪಾದ್ರಿ ಸುರೇಶ್ ನಮ್ಮ ಗ್ರಾಮದಲ್ಲಿ ಜನರನ್ನು ಮತಾಂಧತೆಯತ್ತ ಕರೆದುಕೊಂಡು ಹೋಗುತ್ತಿದ್ದಾರೆ. ನಮಗೆ ಗೊತ್ತಿಲ್ಲದೆ ಚರ್ಚ್ ನಿರ್ಮಿಸಿದ್ದಾರೆ. ಜೊತೆಗೆ…

Read More

ಬೀದರ್: ಪವಿತ್ರ ರಂಜಾನ್ ಹಬ್ಬದ ಹಿನ್ನೆಲೆ ಸಂಸದ   ಸಾಗರ್ ಖಂಡ್ರೆ ಬೀದರ್ ಈದ್ಗಾ ಮೈದಾನದಲ್ಲಿ ಮುಸ್ಲಿಮರೊಂದಿಗೆ ವಿಶೇಷ ಪ್ರಾರ್ಥನೆ ವೇಳೆ ಭಾಗಿಯಾಗಿ ಈದ್ ನ ಶುಭಾಶಯಗಳನ್ನು ಕೋರಿದರು. ಈ ಸಂದರ್ಭದಲ್ಲಿ  ಸಚಿವರಾದ ರಹಿಂ ಖಾನ್, ಸೇರಿದಂತೆ  ಹಲವು ಕಾಂಗ್ರೆಸ್ ಮುಖಂಡರು, ಧಾರ್ಮಿಕ ಪ್ರಮುಖ ಮುಖಂಡರು, ಮುಸ್ಲಿಂ ಬಾಂಧವರು ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಕೊರಟಗೆರೆ: ಭೀಕರ ಬಿಸಿಲಿನ ತಾಪಕ್ಕೆ ಬೃಹತ್ ಕಾಡ್ಗಿಚ್ಚು ಸೃಷ್ಟಿಯಾಗಿ, ಪ್ರವಾಸಿಗರ ಕಾರು ಬೆಂಕಿಯಲ್ಲಿ ಬೆಂದು ಹಾನಿಯಾಗಿರುವ ಘಟನೆ ಕೊರಟಗೆರೆ ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಸಿದ್ದರಬೆಟ್ಟದಲ್ಲಿ ನಡೆದಿದೆ. ಶ್ರೀ ಕ್ಷೇತ್ರದ ಸಿದ್ದೇಶ್ವರ ದರ್ಶನಕ್ಕೆ ಎಂದು ಬಂದ ಬೆಂಗಳೂರು ಮೂಲದ ಭಕ್ತರು.. ಸುಸಜ್ಜಿತವಾದ ವಾಹನ ಪಾರ್ಕಿಂಗ್ ವ್ಯವಸ್ಥೆ ಇಲ್ಲದೆ ರಸ್ತೆ ಬದಿಯಲ್ಲಿ ಕಾರು ಪಾರ್ಕಿಂಗ್ ಮಾಡಿದ್ದರು. ಇದಕ್ಕಿದ್ದಂತೆ ಕಾಡ್ಗಿಚ್ಚು ಸಂಭವಿಸಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಮುಜರಾಯಿ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳ ಮೇಲೆ ಪ್ರವಾಸಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಯುರ್ವೇದಿಕ್ ದಿವ್ಯೌಷಧಿಗಳ ಕ್ಷೇತ್ರ, ಸಿದ್ದರ ತಪೋವನ, ಸಾಧು ಸಂತರ ತವರೂರಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಸೃಷ್ಟಿಯಾಗಿದೆ. ಹಿಂದೂ ಧಾರ್ಮಿಕ ದತ್ತಿ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಸಿದ್ದರಬೆಟ್ಟದಲ್ಲಿ ಇದ್ದು ಇಲ್ಲದಂತಿದೆ ಎಂಬ ಆಕ್ರೋಶ ಕೇಳಿ ಬಂದಿದೆ. ಮುಜರಾಯಿ ಇಲಾಖೆ ವತಿಯಿಂದ ವಾಹನ ಪಾರ್ಕಿಂಗ್ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಆದ್ರೆ ವ್ಯವಸ್ಥಿತವಾದ ವಾಹನ ಪಾರ್ಕಿಂಗ್ ಸ್ಥಳವೇ ಇಲ್ಲ. ಹೀಗಾಗಿ ರಸ್ತೆ ಬದಿ ವಾಹನ ನಿಲ್ಲಿಸಿ…

Read More