Subscribe to Updates
Get the latest creative news from FooBar about art, design and business.
- ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ
- ಗುಬ್ಬಿ: ಆ.17ರಿಂದ22ರವರೆಗೆ ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ
- ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ
- ತುಮಕೂರು: ಮಹಾನ್ ಕ್ರಾಂತಿಕಾರಿ ಖುದಿರಾಮ್ ಬೋಸ್ 118ನೇ ಹುತಾತ್ಮ ದಿನಾಚರಣೆ – ಎಐಡಿಎಸ್ ಒ ವತಿಯಿಂದ ಶ್ರದ್ಧಾಂಜಲಿ
- ಸರಗೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ₹3.5 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅನಿಲ್ ಚಿಕ್ಕಮಾದು ಚಾಲನೆ
- ಸಚಿವ ಈಶ್ವರ ಖಂಡ್ರೆ ಆಗಮನ ವೇಳೆ ಗದ್ದಲ: ಮುಜುಗರದಿಂದ ಪ್ರವಚನ ಅರ್ಧಕ್ಕೇ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ!
- ನೂತನ ಸಚಿವರಿಗೆ ಸರ್ಕಾರಿ ನಿವಾಸ ಹಾಗೂ ಕಾರು ಹಂಚಿಕೆ: ಡಿಪಿಎಆರ್ ಆದೇಶ
- ಆಗಸ್ಟ್ 14 ರಂದು ಕರ್ನಾಟಕ ವಿಧಾನಸಭೆಗೆ ಹೊಸ ಸ್ಪೀಕರ್ ಆಯ್ಕೆ
Author: admin
ಕಲಬುರಗಿ: ನೀಟ್ ಪರೀಕ್ಷೆ ವೇಳೆ ವಿದ್ಯಾರ್ಥಿಯೊಬ್ಬನ ಜನಿವಾರ ತೆಗಿಸಲಾಗಿದೆ ಎಂದು ಆರೋಪಿಸಿ ಕಲಬುರಗಿಯ ಪರೀಕ್ಷಾ ಕೇಂದ್ರದ ಹೊರಗೆ ಬ್ರಾಹ್ಮಣ ಸಮುದಾಯದ ಸದಸ್ಯರು ಇಂದು ಪ್ರತಿಭಟನೆ ನಡೆಸಿದರು. ನೀಟ್ ಪರೀಕ್ಷೆ ಬರೆಯಲು ನಗರದ ಸೆಂಟ್ ಮೇರಿ ಶಾಲೆಗೆ ಬಂದಿದ್ದ ಬಸವ ಕಲ್ಯಾಣದ ಶ್ರೀಪಾದ ಪಾಟೀಲ್ ಎಂಬ ವಿದ್ಯಾರ್ಥಿಯನ್ನು ತಪಾಸಣಾ ಸಿಬ್ಬಂದಿ ತಡೆದು, ಪರೀಕ್ಷಾ ಕೇಂದ್ರದ ಒಳಗೆ ಹೋಗುವಾಗ ಜನಿವಾರ ತೆಗೆಯುವಂತೆ ಸೂಚನೆ ನೀಡಿದ್ದಾರೆ. ಜನಿವಾರ ತೆಗೆಸಿದ ಘಟನೆ ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ಬ್ರಾಹ್ಮಣ ಸಮಾಜದ ಕೆಲ ಮುಖಂಡರು ಪರೀಕ್ಷಾ ಕೇಂದ್ರದ ಸಮೀಪ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW ————————————
ಬೆಂಗಳೂರು: ಮೆಟ್ರೋ ನಿಲ್ದಾಣದಲ್ಲಿ ಪಾನ್ ಉಗುಳಿದ ಪ್ರಯಾಣಿಕನೊಬ್ಬನಿಗೆ ಬಿಎಂಆರ್ಸಿಎಲ್ ದಂಡ ವಿಧಿಸಿದೆ. ಮೇ 2 ರಂದು ಸಂಜೆ 6.30 ಕ್ಕೆ ದೊಡ್ಡಕಲ್ಲಸಂದ್ರ ಗ್ರೀನ್ ಲೈನ್ ಮೆಟ್ರೋ ನಿಲ್ದಾಣದ ಪ್ಲಾಟ್ ಫಾರ್ಮ್ 1 ರ ಲಿಫ್ಟ್ ಬಳಿ ಪ್ರಯಾಣಿಕ ಪಾನ್ ಮಸಾಲ ಜಗಿದು ಉಗುಳುತ್ತಿದ್ದ. ಈ ವೇಳೆ ಪ್ರಯಾಣಿಕನಿಗೆ ಮೆಟ್ರೋ ಅಧಿಕಾರಿಗಳು ದಂಡ ವಿಧಿಸಿದ್ದಾರೆ. ಮೆಟ್ರೊ ಆವರಣದಲ್ಲಿ ಉಗುಳುವುದು ಮತ್ತು ಕಸದಂಚುಗಳನ್ನು ಎಸೆಯುವುದು ಪರಿಸರ ಹಾಳಾಗುವುದಲ್ಲದೆ, ಇತರ ಪುಯಾಣಿಕರ ಆರೋಗ್ಯಕ್ಕೂ ಅಪಾಯವನ್ನು ಉಂಟುಮಾಡುತ್ತದೆ. ಬೆಂಗಳೂರು ಮೆಟ್ರೊ ರೈಲು ನಿಗಮ ನಿಯಮಿತ ಸ್ವಚ್ಛ, ಆರೋಗ್ಯಕರ ಮತ್ತು ಸುರಕ್ಷಿತ ಸಾರ್ವಜನಿಕ ಸಾರಿಗೆಯ ವ್ಯವಸ್ಥೆಗಾಗಿ ಕಟಿಬದ್ಧವಾಗಿದೆ. ಸ್ವಚ್ಛತಾ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಎಲ್ಲ ಪ್ರಯಾಣಿಕರು ಸಹಕರಿಸಿ, ಇಂತಹ ಘಟನೆಗಳು ಸಂಭವಿಸಿದರೆ ತಕ್ಷಣವೇ ಮೆಟ್ರೊ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಬಿಎಂಆರ್ಸಿಎಲ್ ಭಾನುವಾರ ಪ್ರಕಟಣೆಯಲ್ಲಿ ಮನವಿ ಮಾಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಹಾವೇರಿ: ಕುಸುಮ್ ಯೋಜನೆ ಮೂಲಕ ಪ್ರತಿ ತಾಲ್ಲೂಕಿನಲ್ಲಿ 20 ಮೆ.ವ್ಯಾ ಸಾಮರ್ಥ್ಯದ ಸೋಲಾರ್ ವಿದ್ಯುತ್ ಘಟಕ ಸ್ಥಾಪನೆ ಮಾಡಿ ಇದರಿಂದ ಹಗಲು ಹೊತ್ತಿನಲ್ಲಿಯೇ ರೈತರ ಪಂಪ್ ಸೆಟ್ ಗಳಿಗೆ ವಿದ್ಯುತ್ ನೀಡಲು ಸರ್ಕಾರ ತೀರ್ಮಾನಿಸಲಾಗಿದೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್ ವಿಧಾನಸಭಾ ಕ್ಷೇತ್ರದ ಅಕ್ಕಿ ಆಲೂರಿನಲ್ಲಿ ನಡೆದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಮಾಜಿ ಸಿಎಂ ಬಂಗಾರಪ್ಪ ಅವರ ಅವಧಿಯಲ್ಲಿ ರೈತರ ಪಂಪ್ ಸೆಟ್ ಗೆ ಉಚಿತ ವಿದ್ಯುತ್ ನೀಡಲಾಯಿತು. 2013 ರ ಕಾಂಗ್ರೆಸ್ ಸರ್ಕಾರದ ವೇಳೆ ನಾನು ಇಂಧನ ಸಚಿವನಾಗಿದ್ದಾಗ ರೈತರ ಪಂಪ್ ಸೆಟ್ ಗಳಿಗೆ ನೀಡುವ ತ್ರೀ ಫೇಸ್ ವಿದ್ಯುತ್ ಪೂರೈಕೆಯನ್ನು 6 ಗಂಟೆಯಿಂದ 7 ಗಂಟೆಗೆ ಹೆಚ್ಚಳ ಮಾಡಲಾಯಿತು ಎಂದು ಹೇಳಿದರು. 665.75 ಕೋಟಿ ಹಣವನ್ನು ನಿಮ್ಮ ಕ್ಷೇತ್ರದ ಅಭಿವೃದ್ಧಿಗೆ ನೀಡುತ್ತಿದ್ದೇವೆ. 418 ಕೋಟಿ ವೆಚ್ಚದಲ್ಲಿ ಬಾಳಂಬೀಡು ಹಾಗೂ ಇತರೇ 72 ಗ್ರಾಮಗಳ 162 ಕೆರೆಗಳು. 116 ಕೋಟಿ ವೆಚ್ಚದಲ್ಲಿ…
ಬೆಂಗಳೂರು: ಕನ್ನಡ ಅಭಿಮಾನವನ್ನು ಪಹಲ್ಗಾಮ್ ಉಗ್ರರ ದಾಳಿಗೆ ಹೋಲಿಸಿದ ಗಾಯಕ ಸೋನು ನಿಗಮ್ ವಿರುದ್ಧ ರಾಜ್ಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಇದರ ನಡುವೆಯೇ ಸೋನು ನಿಗಮ್ ವಿರುದ್ಧ ಸಮನ್ಸ್ ಜಾರಿ ಮಾಡಲು ಪೊಲೀಸರು ಮುಂದಾಗಿದ್ದಾರೆ. ಬೆಂಗಳೂರಿನ ಕಾಲೇಜು ಒಂದರಲ್ಲಿ ನಡೆದ ಈವೆಂಟ್ ಕಾರ್ಯಕ್ರಮದಲ್ಲಿ ಗಾಯಕ ಸೋನು ನಿಗಮ್ ‘ಕನ್ನಡ ಹಾಡು ವಿನಂತಿ ಮಾಡಿದಕ್ಕೆ ಪಹಲ್ಲಾಮ್ನಲ್ಲಿ ಆಗಿದ್ಯಲ್ಲ.. ಅದಕ್ಕೆ ಇದೇ ಕಾರಣ ಎಂದಿದ್ದರು. ಈ ಹೇಳಿಕೆ ಬೆನ್ನಲ್ಲೇ ಸೋನು ನಿಗಮ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಇದೀಗ ಪೊಲೀಸರು ತನಿಖಾ ಅಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡುವ ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW ————————————
ಪಾವಗಡ: ರಾಷ್ಟೀಯ ಗೋರ್ ಸಿಕವಾಡಿ & ಗೋರ್ ಸೇನಾ ಸಂಘಟನೆ ಹಾಗೂ ಭೀಮಾಸತಿ ಗ್ರಾಮೀಣಾಭಿವೃದ್ಧಿ ಮತ್ತು ಯುವಕರ ಸಬಲೀಕರಣ ಸಂಸ್ಥೆ(ರಿ.) ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಎಲ್ಲಾ ಬಂಜಾರ ತಾಂಡಾಗಳಲ್ಲಿ ಪರಿಶಿಷ್ಟ ಜಾತಿಗಳ ಉಪವರ್ಗೀಕರಣ (ಒಳಮೀಸಲಾತಿ) ಸಮೀಕ್ಷೆಯ ಕುರಿತು ಜನಜಾಗೃತಿ ಹಾಗೂ ಸಮಾಲೋಚನ ಅಭಿಯಾನ ನಡೆಯಿತು. ಪ್ರತಿ ತಾಂಡದಲ್ಲಿ ಜಾತಿ ಸಮೀಕ್ಷೆಯ ಉದ್ದೇಶ, ಅಗತ್ಯ ಮಾಹಿತಿ , ತಾಂಡಾದ ಪ್ರತಿ ಮನೆಯೂ, ಕುಟುಂಬದ ಸದಸ್ಯನೂ ಅವರು ಎಲ್ಲೇ ಇದ್ದರೂ, ಈ ಒಂದು ಸಮೀಕ್ಷೆ ಯಿಂದ ಹೊರಗುಳಿಯಬಾರದು ಹಾಗೂ ಉಪಜಾತಿ ಕಾಲಂನಲ್ಲಿ ಕಡ್ಡಾಯವಾಗಿ ಲಂಬಾಣಿ ಎಂದು ಬರೆಸಲು ಮಾಹಿತಿ ನೀಡಲಾಯಿತು. ಪ್ರತಿ ತಾಂಡಾದ ಹಿರಿಯರು , ಯುವಕರು & ಮಹಿಳೆಯರು ತುಂಬಾ ಒಳ್ಳೆಯ ಸಂದೇಶ, ಕೆಲಸ ಮಾಡುತ್ತಿದ್ದೀರಿ ತಮಗೆ ಧನ್ಯವಾದಗಳು ತಿಳಿಸಿದರು. ಅವರಿಗೆಲ್ಲರಿಗೂ ಅಭಾರಿ ಯಾಗಿರುತ್ತೇವೆ ಎಂದರು. ತಾಂಡಾಗಳ ನಾಯಕ್ , ಡಾವೋ, ಕಾರಬಾರಿ & ಪ್ರತಿನಿಧಿಗಳು , ವಿದ್ಯಾವಂತ ಯುವಕ, ಯುವತಿಯರು ಈ ಸಮೀಕ್ಷೆಯನ್ನು ತಮ್ಮ ಸ್ವಂತ ಕೆಲಸವೆಂದು ತಿಳಿದು ತಮ್ಮ…
ತುಮಕೂರು: ಮಂಗಳೂರು ಘಟನೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ನಿಷ್ಕ್ರಿಯ ಆದಾಗ ಎನ್ ಐಎ ಮತ್ತು ಕೇಂದ್ರ ಸರಕಾರ ಮಧ್ಯೆ ಪ್ರವೇಶಿಸಲಿದೆ. ಅಂತಹ ಆರೋಪಿಗಳನ್ನು ರಕ್ಷಣೆ ಮಾಡುವುದನ್ನು ರಾಜ್ಯ ಸರಕಾರ ಬಿಡಬೇಕು. ಮನುಷ್ಯನ ಜೀವವನ್ನು ತೆಗೆಯುತ್ತೇವೆ ಎಂಬುವರ ಮೇಲೆ ಅನುಕಂಪ ತೋರಿಸಬಾರದು. ಪಹಲ್ಗಾಮ್ ಘಟನೆಗೆ ಸಂಬಂಧಿಸಿದಂತೆ ತೆಗೆದುಕೊಂಡ ಕಠಿಣ ಕ್ರಮವನ್ನು ಮಂಗಳೂರು ಘಟನೆಗೂ ತೆಗೆದುಕೊಳ್ಳಬೇಕು ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. ತುಮಕೂರು ಜಿಲ್ಲೆಯಲ್ಲಿ ಮಾತನಾಡಿದ ಅವರು, ಮುಲಾಜಿಲ್ಲದೆ ಗೃಹ ಸಚಿವ ತಮ್ಮ ಅನುಭವವನ್ನು ಇದ್ರಲ್ಲಿ ತೋರಿಸಬೇಕು. ಇಲ್ಲದಿದ್ದರೆ ಯಾವ ರೀತಿ ಕ್ರಮ ತೆಗೆದುಕೊಳ್ಳಬೇಕು ಎಂಬುದನ್ನು ಗೊತ್ತಾಗದಿದ್ದಲ್ಲಿ ಕೇಂದ್ರ ಸರಕಾರ ಪತ್ರ ಬರೆಯಲಿ, 10 ನಿಮಿಷದಲ್ಲಿ ಕ್ರಮ ಆಗಲಿದೆ ಎಂದರು. ಕೆಲ ಅಯೋಗ್ಯರು, ದೇಶಕ್ಕೆ ಮಾರಕವಾಗಿರ ಬಗ್ಗೆ ಮೃಧು ಧೋರಣೆ ಅನುಸರಿಸಿದರೆ ಬಹಳ ಕಷ್ಟವಾಗಲಿದೆ. ಆರೋಪಿಗಳು ಎಷ್ಟೆ ದೊಡ್ಡವರಾದ್ರೂ ಅವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದರು. ರಾಜ್ಯ ಸರಕಾರ ಮಾತನಾಡುವುದನ್ನು ಕಡಿಮೆ ಮಾಡಿ, ಆರೊಪಿಗಳನ್ನು ಸರಿಯಾದ…
ತುಮಕೂರು: ನೀಟ್ ಎಕ್ಸಾಮ್ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಬಳಿ ಕೆಲವು ಮಾನದಂಡಗಳನ್ನು ಪರೀಕ್ಷಾ ಸಿಬ್ಬಂದಿಗಳು ಅನುಸರಿಸುತ್ತಿರುವ ದೃಶ್ಯ ಸರ್ವೇ ಸಾಮಾನ್ಯವಾಗಿದೆ. ವಿದ್ಯಾರ್ಥಿನಿಯರ ಕಿವಿಯೋಲೆ ಹೇರ್ ಕ್ಲಿಪ್, ಪೆನ್ನುಗಳು ಸೇರಿದಂತೆ ಅನೇಕ ವಸ್ತುಗಳನ್ನು ಪರೀಕ್ಷಾ ಸಿಬ್ಬಂದಿಗಳು ತೆಗೆಸುತ್ತಿರುವ ದೃಶ್ಯ ಕಂಡು ಬಂದಿತು. ಪರೀಕ್ಷಾ ಕೊಠಡಿಯೊಳಗೆ ತೆರಳುವ ವಿದ್ಯಾರ್ಥಿಗಳ ಸಂಪೂರ್ಣ ಪರಿಶೀಲನೆಯನ್ನು ಪೊಲೀಸ್ ಸಿಬ್ಬಂದಿಗಳು ಮಾಡುತ್ತಿದ್ದಾರೆ. ನೀಟ್ ಎಕ್ಸಾಮ್ ಬರೆಯಲು ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ನಿರಾಕರಿಸಲಾಯಿತು. ಅಲ್ಲದೆ ಬೇರೆ ಪ್ಯಾಂಟ್ ಧರಿಸಿ ಬರುವಂತೆ ಪರೀಕ್ಷಾ ಸಿಬ್ಬಂದಿಗಳು ಸೂಚಿಸಿದ ನಂತರ ತಕ್ಷಣ ಮನೆಗೆ ವಾಪಸ್ ತೆರಳಿ ಬೇರೆ ಪ್ಯಾಂಟ್ ಧರಿಸಿ ವಿದ್ಯಾರ್ಥಿಯೋ ಬಂದು ಪರೀಕ್ಷಾ ಕೊಠಡಿಯೊಳಗೆ ಪ್ರವೇಶಿಸಿದ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW ————————————
ತುಮಕೂರು: ನಗರದ ಮಹಾಲಕ್ಷ್ಮಿ ಬಡಾವಣೆ ವಾಸಿ ಶಿವಣ್ಣ ಟೈರ್ಸ್ ಮಾಲಿಕರಾದ ಕಾರ್ತಿಕ್ ರವರ ಕಟ್ಟಡ ಕಾರ್ಮಿಕರ ಶೆಡ್ ನಲ್ಲಿ ಕಾಣಿಸಿಕೊಂಡ 43 ಕೊಳಕುಮಂಡಲ (ರಸೆಲ್ಸ್ ವೈಪರ್) ಮರಿಗಳು ಹಾಗೂ 4 ಅಡಿ ಉದ್ದದ ತಾಯಿ ಕೊಳಕುಮಂಡಲ ಹಾವು ಕಾಣಿಸಿಕೊಂಡಿದೆ. ಈ ಹಾವುಗಳು ನವೆಂಬರ್ ಡಿಸೆಂಬರ್ ನಲ್ಲಿ ಮಿಲನಗೊಂಡು ಪೂರ್ವ ಮುಂಗಾರು ಸಮಯದಲ್ಲಿ ಸಂತಾನೋತ್ಪತಿ ಮಾಡುತ್ತವೆ. ಕೊಳಕುಮಂಡಲ ಹಾವುಗಳು (Ovoviviparous) ಅಂದರೆ ತಾಯಿಯ ದೇಹದೊಳಗೆ ಮೊಟ್ಟೆಗಳು ಬೆಳೆದು ಹೊಟ್ಟೆ ಒಳಗಿನಿಂದಲೆ ಜೀವಂತ ಮರಿಗಳು ಹೊರಬಂದಿವೆ. ಈ ವಿಷಯ ತಿಳಿದ ವನ್ಯಜೀವಿ ಜಾಗೃತಿ ಹಾಗೂ ಉರಗ ಸಂರಕ್ಷಣಾ ಸಂಸ್ಥೆಯ (ವಾರ್ಕೊ) ಉರಗ ರಕ್ಷಕರಾದ ಚಂದನ್, ಮನು ಅಗ್ನಿವಂಶಿ ಮತ್ತು ಕಾರ್ತಿಕ್ ಸಿಂಗ್ ರವರು ಸುರಕ್ಷಿತವಾಗಿ ಹಾವಿನ ಮರಿಗಳನ್ನು ರಕ್ಷಸಿ ಸಮೀಪದ ದೇವರಾಯನ ದುರ್ಗಾ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ. ತುಮಕೂರು ನಗರ ಹಾಗೂ ಹೊರವಲಯಗಳಲ್ಲಿ ಈ ಪ್ರಕ್ರಿಯೆ ಪ್ರಸ್ತುತ ಪ್ರಾರಂಭವಾಗಿದ್ದು ಸಾರ್ವಜನಿಕರು ಹೆಚ್ಚು ಜಾಗೃತವಾಗಿರಬೇಕು, ಮನೆಯ ಸುತ್ತಮುತ್ತ ಸ್ವಚ್ಛತೆಯನ್ನು ಕಾಪಾಡಿಕೊಳ್ಳಬೇಕು. ಸಂಜೆ ಕತ್ತಲು ಸಮಯದಲ್ಲಿ ಟಾರ್ಚ್…
ತುಮಕೂರು: ಜಿಲ್ಲೆಯ ವಿವಿಧ ಪ್ರದೇಶಗಳ ತೆಂಗಿನ ತೋಟಗಳಲ್ಲಿ ರೋಗೋಸ್ ಬಿಳಿ ನೊಣ ಬಾಧೆಯು ಹೆಚ್ಚಾಗಿ ಕಂಡು ಬರುತ್ತಿದ್ದು, ರೋಗವನ್ನು ಸಮಗ್ರವಾಗಿ ಹತೋಟಿ ಮಾಡಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ತೋಟಗಾರಿಕೆ ಇಲಾಖೆ ಸಲಹೆ ನೀಡಿದೆ. ರೋಗದಿಂದ ಹಾನಿಯ ಲಕ್ಷಣಗಳು : ಬಿಳಿನೊಣದ ಪ್ರೌಢಕೀಟವು ಇತರೆ ಸಾಮಾನ್ಯ ಬಿಳಿನೊಣ ಗಳಿಗಿಂತ ಮೂರುಪಟ್ಟು ದೊಡ್ಡದಾಗಿರುತ್ತದೆ. ಹೆಣ್ಣು ಬಿಳಿನೊಣವು ಎಲೆಯ ಕೆಳಭಾಗದಲ್ಲಿ ವೃತ್ತಾಕಾರವಾಗಿ ಮೊಟ್ಟೆಯನ್ನು ಇಡುತ್ತದೆ. ಕೀಟವು ಹಳದಿ ಮೈಬಣ್ಣ ಹೊಂದಿದ್ದು, ಬಿಳಿಬಣ್ಣದ ರೆಕ್ಕೆಗಳ ಹಿಂಬದಿಯಲ್ಲಿ ಕಪ್ಪಾದ ಮಚ್ಚೆಗಳಿರುತ್ತದೆ. ಮರಿಗಳು ಹಾಗೂ ಪ್ರೌಢಕೀಟಗಳು ಎಲೆಗಳಿಂದ ರಸ ಹೀರುತ್ತವೆ. ಕೀಟಗಳು ಸಿಹಿಯಾದ ಅಂಟು ದ್ರಾವಣವನ್ನು ವಿಸರ್ಜನೆ ಮಾಡುವುದರಿಂದ ಬೂದುಬಣ್ಣದ ಶಿಲೀಂದ್ರ ಬೆಳೆದು ಎಲೆಗಳು ಕಪ್ಪುಬಣ್ಣಕ್ಕೆ ತಿರುಗುತ್ತವೆ. ಹತೋಟಿ ಕ್ರಮಗಳು : ತೆಂಗಿನ ತೋಟಗಳಲ್ಲಿ ಎಕರೆಗೆ 10ರಂತೆ ಹಳದಿ ಅಂಟಿನ ಬಲೆಗಳನ್ನು ಅಳವಡಿಸುವುದರಿಂದ ಅಥವಾ 5 ಮಿಲಿ ಬೇವಿನಎಣ್ಣೆ ಮತ್ತು 0.5 ಗ್ರಾಂ ಸಾಬೂನು ಪುಡಿಯನ್ನು ಪ್ರತಿ ಲೀಟರ್ ನೀರಿನಲ್ಲಿ ಬೆರೆಸಿ 15 ದಿನಗಳ ಅಂತರದಲ್ಲಿ ಮೂರು ಬಾರಿ ಸಿಂಪಡಣೆ…
ಮಧುಗಿರಿ ಪಟ್ಟಣವನ್ನೇ ಬೆಚ್ಚಿ ಬೀಳಿಸಿದ್ದ ಕೊಲೆ ಪ್ರಕರಣ: 4 ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ, ತಲಾ ರೂ.50 ಸಾವಿರ ದಂಡ
ತುಮಕೂರು : ಮಧುಗಿರಿ ಪಟ್ಟಣದಲ್ಲಿ ದಿನಾಂಕ: 12-03-2021 ರಂದು ಬೆಳಗ್ಗೆ ಸುಮಾರು 09:15 ಗಂಟೆ ಸಮಯದಲ್ಲಿ ಕೂಲ್ ಹೇರ್ ಸ್ಟೈಲ್ ಕಟಿಂಗ್ ಶಾಪ್ ಎದುರು ಇದೇ ಮಧುಗಿರಿಯ ಗುರುಕಿರಣ್ ಬಿನ್ ಗಂಗಾಧರಪ್ಪ, ಮಧುಗೌಡ ಬಿನ್ ರಂಗಪ್ಪ, ಎಂ.ವಿ. ಧನಂಜಯಾ ಬಿನ್ ವೀರಣ್ಣ ಇವರುಗಳು ಕೂಲ್ ಹೇರ್ ಸ್ಟೈಲ್ ಅಂಗಡಿಯ ಮುಂಭಾಗದ ಸಿಮೆಂಟ್ ಕಟ್ಟೆಯ ಮೇಲೆ ಕುಳಿತಿದ್ದ ಮೃತ ಆರ್. ವೀರಭದ್ರ ಸ್ವಾಮಿಯನ್ನು ಕೊಲೆ ಮಾಡುವ ಉದ್ದೇಶದಿಂದ ಕೆಳಕ್ಕೆ ಎಳೆದುಕೊಂಡು ಆರೋಪಿ–1 ಗುರುಕಿರಣ್ ಡ್ರಾಗರ್ ನಿಂದ, 2ನೇ ಆರೋಪಿ ಮಧುಗೌಡ ಬಟನ್ ಚಾಕುವಿನಿಂದ, 3ನೇ ಆರೋಪಿ ಸ್ಟೀಲ್ ರಾಡಿನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದು, ಚಿಕಿತ್ಸೆ ಫಲಕಾರಿಯಾಗದೇ ಅದೇ ದಿನ ಆರ್.ವಿ ಸ್ವಾಮಿ ತುಮಕೂರಿನ ಸಿದ್ದಗಂಗಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಸದರಿ 3 ಜನ ಆರೋಪಿತರಿಗೆ ಹಾಗೂ ಕೊಲೆಗೆ ಕುಮ್ಮಕ್ಕು ನೀಡಿದ ಚಂದನ್ ಕುಮಾರ್ ಬಿನ್ ರಾಮಪ್ಪ ಇವರುಗಳು ಸಂಚು ರೂಪಿಸಿ ಕೊಲೆ ಮಾಡಿದ್ದು ತನಿಖೆಯಿಂದ ದೃಢಪಟ್ಟ ಮೇರೆಗೆ ಅಂದಿನ ತನಿಖಾಧಿಕಾರಿಯಾದ ಎಂ.ಎಸ್ ಸರ್ದಾರ್ ರವರು…