Subscribe to Updates
Get the latest creative news from FooBar about art, design and business.
- ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
- ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
- ಬೀದರ್: ಪೊಲೀಸರ ಭರ್ಜರಿ ಕಾರ್ಯಾಚರಣೆ; ₹14.50 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಮೂವರ ಬಂಧನ!
- “ಆರ್. ಅಶೋಕ್ ಕಸ ಮಾಫಿಯಾ ಗ್ಯಾಂಗ್ ನ ಏಜೆಂಟ್: ನನ್ನ ಮೇಲೆ ಅಸೂಯೆ ರಾಜಕೀಯ: ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು
- ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್ ಬಾಬು
- ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ
- ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
- ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು
Author: admin
ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಧಾರವಾಡ ಶಾಸಕ ವಿನಯ್ ಕುಲಕರ್ಣಿ ಅವರು, ತಮಗೆ ವಿಧಿಸಲಾದ ಶಿಕ್ಷೆಯನ್ನು ಪ್ರಶ್ನಿಸಿ ಮತ್ತು ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಇಂದು ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಧಿಸಿರುವ ಜೀವಾವಧಿ ಶಿಕ್ಷೆ ಮತ್ತು ಕನ್ವಿಕ್ಷನ್ ಆದೇಶವನ್ನು ಪ್ರಶ್ನಿಸಿರುವ ವಿನಯ್ ಕುಲಕರ್ಣಿ, ತಕ್ಷಣವೇ ಶಿಕ್ಷೆಗೆ ತಡೆಯಾಜ್ಞೆ ನೀಡಬೇಕು ಮತ್ತು ಜಾಮೀನು ಮಂಜೂರು ಮಾಡಬೇಕೆಂದು ಹೈಕೋರ್ಟ್ಗೆ ಮನವಿ ಮಾಡಿದ್ದಾರೆ. ಕಾನೂನಿನ ಪ್ರಕಾರ ಶಿಕ್ಷೆಯ ತೀರ್ಪು ಪ್ರಕಟವಾದ 90 ದಿನಗಳೊಳಗೆ ಅದಕ್ಕೆ ತಡೆಯಾಜ್ಞೆ ಸಿಗದಿದ್ದರೆ ಶಾಸಕ ಸ್ಥಾನದಿಂದ ಅನರ್ಹಗೊಳ್ಳುವ ಭೀತಿ ಇರುವುದರಿಂದ, ವಿನಯ್ ಕುಲಕರ್ಣಿ ಅವರು ತುರ್ತಾಗಿ ಈ ಮೇಲ್ಮನವಿ ಸಲ್ಲಿಸಿದ್ದಾರೆ. ಈಗಾಗಲೇ ಸಲ್ಲಿಕೆಯಾಗಿರುವ ಈ ಅರ್ಜಿಯ ವಿಚಾರಣೆಯು ಮುಂದಿನ ವಾರ ನಡೆಯುವ ಸಾಧ್ಯತೆಯಿದೆ. ಈ ವೇಳೆ ನ್ಯಾಯಾಲಯವು ಸಿಬಿಐ ಪರ ವಾದವನ್ನೂ ಆಲಿಸಲಿದೆ. 2016ರ ಜೂನ್ ನಲ್ಲಿ ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೇಶ್ ಗೌಡ ಅವರನ್ನು ಕೊಲೆ…
ಬೆಂಗಳೂರು: ಕನ್ನಡ ಚಿತ್ರರಂಗದ ಧ್ರುವತಾರೆ, ವರನಟ ಡಾ. ರಾಜ್ಕುಮಾರ್ ಅವರ ಸಮಾಧಿ ಸ್ಥಳದ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಹಂಚಿಕೊಂಡಿದ್ದ ನಟ ಚೇತನ್ ಅಹಿಂಸಾ ಅವರ ವಿರುದ್ಧ ಈಗ ಕಾನೂನು ಸಂಕಷ್ಟ ಎದುರಾಗಿದೆ. ಅಭಿಮಾನಿಗಳ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಬಸವೇಶ್ವರ ನಗರ ಪೊಲೀಸ್ ಠಾಣೆಯಲ್ಲಿ ಅವರ ವಿರುದ್ಧ ದೂರು ದಾಖಲಿಸಲಾಗಿದೆ. ಇತ್ತೀಚೆಗೆ ಡಾ. ರಾಜ್ಕುಮಾರ್ ಅವರ ಜನ್ಮದಿನದ ಸಂದರ್ಭದಲ್ಲಿ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿದ್ದ ಚೇತನ್, ರಾಜ್ಕುಮಾರ್ ಅವರ ಸಮಾಧಿಗಾಗಿ ಸರ್ಕಾರ 2.5 ಎಕರೆ ಜಾಗ ನೀಡಿರುವುದನ್ನು ಪ್ರಶ್ನಿಸಿದ್ದರು. 21ನೇ ಶತಮಾನದಲ್ಲಿ ಭೂಮಿಯೇ ಅತ್ಯಂತ ಪ್ರಮುಖ ಹೋರಾಟದ ವಸ್ತುವಾಗಿದೆ. ಸರ್ಕಾರವು ಸಾರ್ವಜನಿಕ ಭೂಮಿಯನ್ನು ಜನರ ಉಪಯೋಗಕ್ಕೆ ಬಳಸಬೇಕೇ ಹೊರತು, ಕೇವಲ ಮತಗಳ ಲಾಭಕ್ಕಾಗಿ ವ್ಯಕ್ತಿಗಳ ಸ್ಮರಣಾರ್ಥ ಹಂಚಬಾರದು ಎಂದಿದ್ದರು. ನಟ ಚೇತನ್ ಅವರ ಈ ನಡೆಗೆ ರಾಜ್ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಾ. ರಾಜ್ಕುಮಾರ್ ಸೇನೆಯ ವತಿಯಿಂದ ಪೊಲೀಸರಿಗೆ ದೂರು ನೀಡಲಾಗಿದ್ದು, ಕೋಟಿಗಟ್ಟಲೆ ಅಭಿಮಾನಿಗಳ…
ತುಮಕೂರು: ಡಾ.ಬಿ.ಆರ್. ಅಂಬೇಡ್ಕರ್ ಅವರು ಕೇವಲ ಒಂದು ಜಾತಿಗೆ ಸೀಮಿತವಾದವರಲ್ಲ, ಅವರು ಇಡೀ ವಿಶ್ವಕ್ಕೆ ಮಾರ್ಗದರ್ಶಕರು ಎಂದು ವಿಶ್ವಸಂಸ್ಥೆಯ ವಿಶೇಷ ವರದಿಗಾರರಾದ ಡಾ. ಅಶ್ವಿನಿ ಕೆ.ಪಿ. ಅಭಿಪ್ರಾಯಪಟ್ಟರು. ತುಮಕೂರು ವಿಶ್ವವಿದ್ಯಾನಿಲಯದ ಡಾ. ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರ ಹಾಗೂ ಬೆಂಗಳೂರಿನ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಸಹಯೋಗದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಸಂವಿಧಾನ ಎಷ್ಟೇ ಉತ್ತಮವಾಗಿದ್ದರೂ, ಅದು ಯಾರ ಕೈಯಲ್ಲಿದೆ ಎನ್ನುವುದು ಮುಖ್ಯ. ಕೆಟ್ಟವರ ಕೈಯಲ್ಲಿ ಒಳ್ಳೆಯ ಸಂವಿಧಾನವೂ ಕೆಟ್ಟದಾಗಿ ಬಳಕೆಯಾಗಬಹುದು, ಅದೇ ಒಳ್ಳೆಯವರ ಕೈಯಲ್ಲಿ ಕೆಟ್ಟ ಸಂವಿಧಾನವೂ ಉತ್ತಮ ಫಲ ನೀಡಬಲ್ಲದು ಎಂದರು. ಮಿಸಲಾತಿ ಕೇವಲ ಎಸ್ಸಿ/ಎಸ್ಟಿ ಸಮುದಾಯಕ್ಕೆ ಸೀಮಿತವಾಗಿಲ್ಲ. ದೇಶದಲ್ಲಿ ಮಿಸಲಾತಿ ವ್ಯವಸ್ಥೆ ಸಮರ್ಪಕವಾಗಿ ಜಾರಿಯಲ್ಲಿದೆ. ಕನ್ನಡ ಮಾಧ್ಯಮ, ಹೈದರಾಬಾದ್–ಕರ್ನಾಟಕ, ಮಿಲಿಟರಿ ಮಿಸಲಾತಿ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಎಲ್ಲರಿಗೂ ಅವಕಾಶಗಳಿವೆ. ವಿದ್ಯಾರ್ಥಿಗಳು ಈ ಬಗ್ಗೆ ಸರಿಯಾದ ತಿಳುವಳಿಕೆ ಬೆಳೆಸಿಕೊಳ್ಳಬೇಕು ಎಂದರು. ಸಹಪ್ರಾಧ್ಯಾಪಕ ಪ್ರೊ.ರಾಜೇಂದ್ರ ಬಾಬು ಸಮ್ಮೇಳನದ ವರದಿ ಮಂಡಿಸಿದರು. ತುಮಕೂರಿನ ಪ್ರಥಮ ದರ್ಜೆ ಮಹಿಳಾ…
ತುಮಕೂರು: ತುಮಕೂರು ನಗರದ ಮಾಜಿ ಶಾಸಕರಾದ ಡಾ.ರಫೀಕ್ ಅಹಮದ್ ಅವರ ತಾಯಿ ಫಾತಿಮಾ ಬೇಗಂ ಅವರು ಇಂದು ದೈವಾಧೀನರಾಗಿದ್ದಾರೆ. ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದರು. ಇಂದು ತುಮಕೂರಿಗೆ ಭೇಟಿ ನೀಡಿದ ಸಚಿವರು, ಮೃತರ ಪಾರ್ಥಿವ ಶರೀರದ ದರ್ಶನ ಪಡೆದು ಪುಷ್ಪಗುಚ್ಛ ಅರ್ಪಿಸಿ ಗೌರವ ಸಲ್ಲಿಸಿದರು. ಬಳಿಕ ಮಾಜಿ ಶಾಸಕ ರಫೀಕ್ ಅಹಮದ್ ಹಾಗೂ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿರುವ ಸಚಿವರು, “ಫಾತಿಮಾ ಬೇಗಂ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತುಂಬಲಾರದ ದುಃಖವಾಗಿದೆ. ಭಗವಂತನು ಮೃತರ ಆತ್ಮಕ್ಕೆ ಸದ್ಗತಿ ಕರುಣಿಸಲಿ. ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ವರ್ಗದವರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ಬೆಂಗಳೂರು: ನಗರದ ಜ್ಞಾನ ಜ್ಯೋತಿ ಸಭಾಂಗಣದಲ್ಲಿ ರಾಷ್ಟ್ರೀಯ ಅಂಬೇಡ್ಕರ್ ಸೇನೆ, ಡಾ.ಮನಮೋಹನ್ ಸಿಂಗ್ ನಗರ ವಿವಿಯ ಆಶ್ರಯದಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಅವರ 135ನೇ ಜಯಂತಿ ಮತ್ತು ಮನ ಮನೆಗೆ ಸಂವಿಧಾನ ಎಂಬ ವಿಶೇಷ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದ ಚಾಮರಾಜನಗರ ವಿವಿಯ ಕುಲಪತಿ ಪ್ರೊ. ಬಿ.ಎಲ್. ಗಂಗಾಧರ್ ಅವರು ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ನಾವೆಲ್ಲರೂ ಅಳವಡಿಸಿಕೊಳ್ಳುವ ಮೂಲಕ ಉನ್ನತ ಸ್ಥಾನಕ್ಕೇರಬೇಕು ಎಂದು ಸಲಹೆ ನೀಡಿದರು. ನಂತರದಲ್ಲಿ ಮಾತನಾಡಿದ ಅವರು, ರಾಷ್ಟ್ರ ನಿರ್ಮಾಣದ ಹರಿಕಾರ ಬಾಬಾಸಾಹೇಬರು, ಎಲ್ಲಾ ಕ್ಷೇತ್ರಗಳಲ್ಲಿಯೂ ಅವರ ಕೊಡುಗೆ ಇದೆ. ಅಂಬೇಡ್ಕರ್ ರವರ ಚಿಂತನೆಗಳು ಸರ್ವಕಾಲಿಕ ಪ್ರಸ್ತುತವಾಗಿದ್ದು, ಹಾಗೆ ವಿವಾಹ ಕಾಯಿದೆಗಳಲ್ಲಿ ಸಹ ಇವರ ಮೌಲ್ಯಗಳನ್ನು ನಮ್ಮ ಜೀವನದಲ್ಲಿ ಅಳವಡಿಕೊಂಡರೆ ಮಾತ್ರ ಅಂಬೇಡ್ಕರ್ ಅವರಿಗೆ ಗೌರವ ನೀಡಿದಂತೆ ಎಂದು ತಿಳಿಸಿದರು. ನಂತರದಲ್ಲಿ ಬೆಂಗಳೂರು ನಗರ ವಿವಿಯ ಕುಲಪತಿಯಾದ ಪ್ರೊ. ಬಿ. ರಮೇಶ್ ಅವರು ಮಾತನಾಡಿ, ‘ಅಂಬೇಡ್ಕರ್ ಅವರು ಮಹಿಳಾ ಶಿಕ್ಷಣಕ್ಕೆ ನೀಡಿದ ಆದ್ಯತೆ ರಾಷ್ಟ್ರದಲ್ಲಿ ಮಹತ್ತರ ಬೆಳವಣಿಗೆಗೆ ಕಾರಣವಾಗಿದೆ.…
ತುಮಕೂರು: ಜಿಲ್ಲೆಯ ಕ್ರೀಡಾ ಇತಿಹಾಸದಲ್ಲಿ ಹೊಸ ಅಧ್ಯಾಯ ಬರೆಯುತ್ತಿರುವ 24ನೇ ರಾಷ್ಟ್ರೀಯ ಜೂನಿಯರ್ (20 ವರ್ಷದೊಳಗಿನ) ಅಥ್ಲೆಟಿಕ್ ಕ್ರೀಡಾಕೂಟಕ್ಕೆ ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಅದ್ಧೂರಿ ಚಾಲನೆ ದೊರೆಯಿತು. ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ ಅವರು ಶುಕ್ರವಾರ ಒಳಾಂಗಣ ಕ್ರೀಡಾ ಸಂಕೀರ್ಣದಲ್ಲಿ ದೀಪ ಬೆಳಗುವ ಮೂಲಕ ಕ್ರೀಡಾಕೂಟವನ್ನು ಉದ್ಘಾಟಿಸಿದರು. ಉದ್ಘಾಟನಾ ಭಾಷಣ ಮಾಡಿದ ಸಚಿವ ಪರಮೇಶ್ವರ ಅವರು, ತುಮಕೂರು ಶೀಘ್ರದಲ್ಲೇ ಅಂತರಾಷ್ಟ್ರೀಯ ಕ್ರೀಡಾ ಹಬ್ ಆಗಿ ಹೊರಹೊಮ್ಮಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿ ಈಗಾಗಲೇ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣವಾಗುತ್ತಿದ್ದು, ಹಾಕಿ ಮತ್ತು ಕಬಡ್ಡಿ ಅಂಕಣಗಳಿಗೂ ಜಾಗ ಗುರುತಿಸಲಾಗಿದೆ ಎಂದು ತಿಳಿಸಿದರು. ಮುಂಬರುವ ಮೇ ತಿಂಗಳಲ್ಲಿ ಅಂತರಾಷ್ಟ್ರೀಯ ಮಹಿಳಾ ಟೆನಿಸ್ ಕ್ರೀಡಾಕೂಟ ನಡೆಯಲಿದ್ದು, ಸರ್ಕಾರವು ಕ್ರೀಡಾ ಅಭಿವೃದ್ಧಿಗಾಗಿ ₹3 ಕೋಟಿ ಅನುದಾನ ಮೀಸಲಿಟ್ಟಿದೆ ಎಂದು ಅವರು ತಿಳಿಸಿದರು. ಈ ಕ್ರೀಡಾಕೂಟದ ವಿಶೇಷವೆಂದರೆ, ಇಲ್ಲಿ ಮೊದಲ ಎರಡು ಸ್ಥಾನ ಪಡೆಯುವ ಪ್ರತಿಭಾವಂತ ಅಥ್ಲೀಟ್ ಗಳು ಆಗಸ್ಟ್ ನಲ್ಲಿ…
ತುಮಕೂರು: ನಗರದ ವಿವಿಧ ಭಾಗಗಳಲ್ಲಿ ಸರಣಿ ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು ₹2.32 ಲಕ್ಷ ಮೌಲ್ಯದ ಒಟ್ಟು 10 ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ಮರಳೂರು ದಿಣ್ಣೆಯ ನಾಸೀಂ ಪಾಷ (18) ಮತ್ತು ಖಾದರ್ ನಗರದ ಮಹ್ಮದ್ ಅನೀಸ್ (18) ಎಂದು ಗುರುತಿಸಲಾಗಿದೆ. ಗಮನಾರ್ಹವೆಂದರೆ, ಬಂಧಿತ ಮಹ್ಮದ್ ಅನೀಸ್ ಸಶಸ್ತ್ರ ಮೀಸಲು ಪಡೆಯ (DAR) ನಿವೃತ್ತ ಎಆರ್ ಎಸ್ ಐ (ARSI) ಅವರ ಮೊಮ್ಮಗ ಎಂದು ತಿಳಿದುಬಂದಿದೆ. ಆರೋಪಿಗಳಿಂದ ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳುವಾಗಿದ್ದ 4 ಬೈಕ್ ಗಳು ಹಾಗೂ ಹೊಸ ಬಡಾವಣೆ ಠಾಣಾ ವ್ಯಾಪ್ತಿಯಲ್ಲಿ ಕಳುವಾಗಿದ್ದ 6 ಬೈಕ್ ಗಳು ಸೇರಿದಂತೆ ಒಟ್ಟು 10 ದ್ವಿಚಕ್ರ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ. ತಿಲಕ್ ಪಾರ್ಕ್ ಸಿಪಿಐ ಎಫ್.ಕೆ. ನದಾಫ್, ಪಿಎಸ್ಐಗಳಾದ ಎನ್. ಮೋಹನ್, ಎಚ್. ಮಂಜುನಾಥ್, ಜಿ.…
ಬೆಂಗಳೂರು: ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಐದು ದಶಕಗಳ ಸುದೀರ್ಘ ರಾಜಕೀಯ ಜೀವನವನ್ನು ಸಂಭ್ರಮಿಸಲು ಮೇ 9ರಂದು ಚಿತ್ರದುರ್ಗದಲ್ಲಿ ಬೃಹತ್ ‘ಅಭಿಮಾನೋತ್ಸವ’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಚಿತ್ರದುರ್ಗದಲ್ಲಿ ನಡೆಯಲಿರುವ ಈ ಐತಿಹಾಸಿಕ ಕಾರ್ಯಕ್ರಮವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಉದ್ಘಾಟಿಸಲಿದ್ದಾರೆ. ಇದೇ ವೇಳೆ ಅವರು ಯಡಿಯೂರಪ್ಪನವರ ಸಾರ್ವಜನಿಕ ಸೇವೆ ಮತ್ತು ಸಾಧನೆಯನ್ನು ಗೌರವಿಸಿ ಸನ್ಮಾನಿಸಲಿದ್ದಾರೆ. ಮೇ 9ರಂದು ಕಾರ್ಯಕ್ರಮ ನಡೆಯಲಿದೆ. ಚಿತ್ರದುರ್ಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಮೇ 8ರ ಸಂಜೆ 6 ಗಂಟೆಗೆ ಯಡಿಯೂರಪ್ಪನವರನ್ನು ಚಿತ್ರದುರ್ಗ ನಗರಕ್ಕೆ ಅದ್ಧೂರಿಯಾಗಿ ಬರಮಾಡಿಕೊಳ್ಳಲಾಗುವುದು. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಮಾಜಿ ಸಂಸದ ಗೋವಿಂದ ಕಾರಜೋಳ ಅವರು, ಕಾರ್ಯಕ್ರಮದಲ್ಲಿ ಸುಮಾರು 10 ಲಕ್ಷಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ತಿಳಿಸಿದ್ದಾರೆ. ರಾಜ್ಯದ ವಿವಿಧ ಮಠಗಳ ಸ್ವಾಮೀಜಿಗಳು, ಮಾಜಿ ಮುಖ್ಯಮಂತ್ರಿಗಳು, ಸಚಿವರು, ಸಾಹಿತಿಗಳು, ಕಲಾವಿದರು ಮತ್ತು ರೈತ ಸಮುದಾಯದ…
ಮೈಸೂರು: ಮದ್ಯ ಸೇವಿಸಲು ಹಣಕ್ಕಾಗಿ ಪೀಡಿಸುತ್ತಿದ್ದ ಮಗನ ಕಾಟ ತಾಳಲಾರದೆ ಹೆತ್ತ ತಾಯಿಯೇ ಮಗನನ್ನು ಕಲ್ಲಿನಿಂದ ಜಜ್ಜಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಚಾಮುಂಡಿಬೆಟ್ಟದ ರಸ್ತೆಯ ತಾವರೆಕಟ್ಟೆ ಎಂಬಲ್ಲಿ ಈ ಘಟನೆ ಸಂಭವಿಸಿದೆ. 45 ವರ್ಷದ ರಮೇಶ್ ಕೊಲೆಯಾದ ವ್ಯಕ್ತಿ. ಮೃತ ರಮೇಶ್ ಕುಡಿತದ ವ್ಯಸನಕ್ಕೆ ತುತ್ತಾಗಿದ್ದು, ಪ್ರತಿದಿನ ಮದ್ಯಕ್ಕಾಗಿ ತಾಯಿಯ ಬಳಿ ಹಣ ಕೇಳಿ ಪೀಡಿಸುತ್ತಿದ್ದ ಎನ್ನಲಾಗಿದೆ. ಘಟನೆ ನಡೆದ ದಿನವೂ ಸಹ ಮದ್ಯಕ್ಕಾಗಿ ಹಣ ಕೇಳಿ ತಾಯಿಯೊಂದಿಗೆ ಗಲಾಟೆ ಮಾಡಿದ್ದಾನೆ. ಮಗನ ಮದ್ಯದ ಚಟ ಮತ್ತು ನಿರಂತರ ಕಿರುಕುಳದಿಂದ ರೋಸಿಹೋಗಿದ್ದ ಮಂಜುಳಾ, ರೋಷಗೊಂಡು ತಾವರೆಕಟ್ಟೆ ಬಳಿ ಕಲ್ಲಿನಿಂದ ಮಗನ ತಲೆಯನ್ನು ಜಜ್ಜಿ ಹತ್ಯೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮಗನ ಹತ್ಯೆ ಮಾಡಿದ ಆರೋಪದ ಮೇಲೆ ತಾಯಿ ಮಂಜುಳಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಮೈಸೂರು ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ನಮ್ಮತುಮಕೂರಿನ…
ಕೊರಟಗೆರೆ : ವ್ಯಾಸ ಮಹರ್ಷಿಗಳ 18 ಪುರಾಣದ ಕೊನೆಯ ಪುಟದಲ್ಲಿ ‘‘ಪರೋಪಕಾರಿಯೇ ಪುಣ್ಯ. ಪರಪೀಡಿನೇ ಪಾಪ’’ ಎಂಬುದನ್ನು ಅರಿತು ಫ್ರೆಂಡ್ಸ್ ಗ್ರೂಪ್ ಮತ್ತು ಜಗ್ಗೇಶ್ ಅಭಿಮಾನಿ ಬಳಗ ಜನರಿಂದ ಏನನ್ನು ಬಯಸದೇ ನಿಸ್ವಾರ್ಥ ಸೇವೆ ಸಲ್ಲಿಸುತ್ತಿದೆ ಎಂದು ಸಿದ್ದರಬೆಟ್ಟ ಬಾಳೆಹೊನ್ನೂರು ಖಾಸಾ ಶಾಖಾ ಶ್ರೀಮಠದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು. ಕೊರಟಗೆರೆ ಪುರಸಭೆ ಮುಂಭಾಗದಲ್ಲಿ ಫ್ರೆಂಡ್ಸ್ ಗ್ರೂಪ್ ಮತ್ತು ಜಗ್ಗೇಶ್ ಅಭಿಮಾನಿ ಬಗಳದಿಂದ ಆಯೋಸಿದ್ದ ಉಚಿತ ಆಂಬ್ಯುಲೆನ್ಸ್ ಲೋಕಾರ್ಪಣೆ ಮತ್ತು ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಮಾತನಾಡಿದರು. ಎರಡು ಸಂಘಗಳು 18 ವರ್ಷಗಳಿಂದೇ ಪ್ರಾರಂಭಿಸಿದ ಉಚಿತ ಆಂಬ್ಯುಲೆನ್ಸ್ ಸೇವೆಯನ್ನು ಮುಂದುವರೆಸಿ ಸೇವೆಗೆ ಮತ್ತೊಂದು ಆಂಬ್ಯುಲೆನ್ಸ್ ಖರೀದಿಸಿ ನಿಸ್ವಾರ್ಥ ಸೇವೆಗೆ ಮುಂದಾಗಿರುವುದು ನಿಜಕ್ಕೂ ಪ್ರಶಂಸನೀಯ. ಪೀಠಾಧಿಪತಿಗಳಾಗಿ 20 ವರ್ಷವಾಗಿದೆ ತಿಂಗಳಿಗೆ 8 ರಿಂದ 10 ಸಂಘಗಳ ಉದ್ಘಾಟನೆ ಮಾಡುತ್ತೇವೆ, ಇಲ್ಲಿಯವೆರಗೂ ಸಾವಿರಾರು ಸಂಘ ಉದ್ಘಾಟಿಸಿದರು ಜನ ಮನ್ನಣೆ ಪಡೆದಿರುವುದು…