Author: admin

ಬೀದರ್ : ಔರಾದ್ ಬಿಜೆಪಿ ಶಾಸಕ ಪ್ರಭು ಚವ್ಹಾಣ್ ವಿರುದ್ಧದ ಸರ್ಕಾರಿ ಜಮೀನು ಕಬಳಿಕೆ ಪ್ರಕರಣದ ವರದಿ ನೀಡದ ಕಾರಣಕ್ಕೆ ಬೆಂಗಳೂರಿನ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಬೀದರ್ ಜಿಲ್ಲಾಧಿಕಾರಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೂಲಕ 1 ಲಕ್ಷ ರೂ. ಭದ್ರತೆಯ ಜಾಮೀನು ಸಹಿತ ವಾರಂಟ್ ಜಾರಿಗೊಳಿಸಲು ಆದೇಶ ಹೊರಡಿಸಿದೆ. ಪ್ರಕರಣದ ವಿವರ : ಔರಾದ್ ಶಾಸಕ ಪ್ರಭು ಚವ್ಹಾಣ್ ಅವರು ನಕಲಿ ದಾಖಲೆ ಸೃಷ್ಟಿಸಿ ಬೀದರ್ ತಾಲ್ಲೂಕಿನ ಕಪಲಾಪುರ್ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಬರುವ ಕೊಳಾರ(ಬಿ) ಗ್ರಾಮದ ಸರ್ವೇ ಸಂಖ್ಯೆ 102 ರಲ್ಲಿ ಬರುವ 3 ಎಕರೆ 19 ಗುಂಟೆ ಸರ್ಕಾರಿ ಜಮೀನು ನಕಲಿ ದಾಖಲೆ ಸೃಷ್ಟಿ ಮಾಡಿ, ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಔರಾದ್ ತಾಲ್ಲೂಕಿನ ಚಾಂದೋರಿ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷ ದೀಪಕ್ ಪಾಟೀಲ್ ಅವರು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ಚವ್ಹಾ ಣ್ ಜತೆಗೆ ಜಿಲ್ಲಾಧಿಕಾರಿ, ಉಪ…

Read More

ಚಿಕ್ಕಮಗಳೂರು: ಅಪಘಾತದಲ್ಲಿ 17 ಹಲ್ಲುಗಳನ್ನ ಕಳೆದುಕೊಂಡಿದ್ದಕ್ಕೆ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ  ನಡೆದಿದೆ. ಕೊಪ್ಪ ತಾಲೂಕಿನ ಭುವನಕೋಟೆ ಗ್ರಾಮದ ವಿಘ್ನೇಶ್(18) ಆತ್ಮಹತ್ಯೆಗೆ ಶರಣಾದ ಯುವಕನಾಗಿದ್ದಾನೆ. ಈತ ಮೊದಲ ವರ್ಷದ ಐಟಿಐ ಓದುತ್ತಿದ್ದ. ನಾಲ್ಕು ವರ್ಷದ ಹಿಂದೆ ಸಂಭವಿಸಿದ್ದ ಅಪಘಾತದಲ್ಲಿ ವಿಘ್ನೇಶ್ 17 ಹಲ್ಲುಗಳನ್ನ ಕಳೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಸದಾ ಆಸ್ಪತ್ರೆಗೆ ಹೋಗಿ ಬರುತ್ತಿದ್ದರು. ಇದೀಗ, ಮನನೊಂದು ವಿಘ್ನೇಶ್​ ಆತ್ಮಹತ್ಯೆಗೆ ಶರಣಾಗಿದ್ದಾರೆ. ಜಯಪುರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಕನ್ನಡದ ಮಾಣಿಕ್ಯ ಚಿತ್ರದ ನಟಿ ವರಲಕ್ಷ್ಮೀ ಶರತ್ ಕುಮಾರ್ ಅವರು ತಮಗೆ ಬಾಲ್ಯದಲ್ಲಿ ನಡೆದ ಲೈಂಗಿಕ ಕಿರುಕುಳವನ್ನು ನೆನೆದು ಕಾರ್ಯಕ್ರಮವೊಂದರಲ್ಲಿ ಕಣ್ಣೀರು ಹಾಕಿದ್ದಾರೆ. ಡ್ಯಾನ್ಸ್ ಜೋಡಿ ಡ್ಯಾನ್ಸ್ ಕಾರ್ಯಕ್ರಮಕ್ಕೆ ತೀರ್ಪುಗಾರರಾಗಿ ಆಗಮಿಸಿರುವ ವರಲಕ್ಷ್ಮೀ ಅವರು, ಮಹಿಳಾ ಸ್ಪರ್ಧಿಯೊಬ್ಬರು ತಾವು ಎದುರಿಸಿದ ಕಹಿ ಅನುಭವಗಳ ಬಗ್ಗೆ ಡ್ಯಾನ್ಸ್ ಮೂಲಕ ತೋರಿಸಿದ್ದಾರೆ. ಇದನ್ನು ಕಂಡು ಭಾವುಕರಾದ ವರಲಕ್ಷ್ಮೀ ಅವರು ಬಾಲ್ಯದಲ್ಲಿ ನಾನು ಕೂಡ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೆ, ನನ್ನ ಕಥೆಯೂ ನಿನ್ನ ಕಥೆಯೂ ಒಂದೇ ಎಂದಿದ್ದಾರೆ. ಪೋಷಕರು ಅವರ ಕೆಲಸದಲ್ಲಿದ್ದ ಕಾರಣ ನಾನು ಚಿಕ್ಕವಳಿದ್ದಾಗ ನನ್ನನ್ನು ಬೇರೆಯವರ ಮನೆಯಲ್ಲಿ ಬಿಟ್ಟು ಹೋಗುತ್ತಿದ್ದರು. ಆಗ 5ರಿಂದ 6 ಜನ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದರು. ನಿನ್ನ ಸ್ಟೋರಿ ನನ್ನ ಸ್ಟೋರಿ ಎರಡು ಒಂದೆ ಎಂದು ಅವರು ಭಾವುಕರಾದರು. ಅಲ್ಲದೇ ನಿಮ್ಮ ಮಕ್ಕಳಿಗೆ ಗುಡ್ ಟಚ್ ಮತ್ತು ಬ್ಯಾಡ್ ಟಚ್ ಬಗ್ಗೆ ಅರಿವು ಮೂಡಿಸಿ ಎಂದು ಪೋಷಕರಿಗೆ ನಟಿ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ…

Read More

ಬೆಳಗಾವಿ: ಗೃಹಲಕ್ಷ್ಮಿ ಯೋಜನೆಯ ಎರಡು ಕಂತುಗಳ ಹಣ ಬಿಡುಗಡೆ ಮಾರ್ಚ್‌ 31ರ ನಂತರ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ತಿಂಗಳ ಗೃಹಲಕ್ಷ್ಮಿ ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೇ ಅಂಗನವಾಡಿ ಕಾರ್ಯಕರ್ತೆಯರ ಗೌರವಧನವನ್ನು ರೂ.2 ಸಾವಿರ ಹೆಚ್ಚಿಸಿದ್ದೆವು. ಅದಾದ ನಂತರ ಯಾವುದೇ ಸರ್ಕಾರಗಳೂ ಹೆಚ್ಚಿಸಲಿಲ್ಲ. ಈ ಬಜೆಟ್‌ ನಲ್ಲಿ ಕಾರ್ಯಕರ್ತೆಯರ ಗೌರವಧನವನ್ನು ರೂ.1,000, ಸಹಾಯಕಿಯರ ಗೌರವಧನವನ್ನು ರೂ.750 ಹೆಚ್ಚಿಸಿ ಘೋಷಿಸಿದ್ದೇವೆ. ಅದನ್ನು ಜಾರಿಗೆ ತರುತ್ತೇವೆಂದು ಹೇಳಿದರು. ಹನಿಟ್ರ್ಯಾಪ್ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಚಿವರೊಬ್ಬರಿಗೆ ಹನಿಟ್ರ್ಯಾಪ್ ಮಾಡಲು ಯತ್ನಿಸಿರುವುದು ದುರಾದೃಷ್ಟಕರ ಸಂಗತಿ. ಈ ಬಗ್ಗೆ ರಾಜಣ್ಣ ಅವರು ತಮಗಾದ ಅನುಭವವನ್ನು ಸದನದಲ್ಲಿ ಹಂಚಿಕೊಂಡಿದ್ದಾರೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿ, ಸಚಿವರು ಈಗಾಗಲೇ ಇದರ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಗೃಹ ಸಚಿವರು ಆ ವಿಷಯ ನೋಡಿಕೊಳ್ಳುತ್ತಾರೆ. ಆ ಬಗ್ಗೆ ಹೆಚ್ಚು ಮಾತನಾಡಲ್ಲ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣ ಸಂಬಂಧ ಸಚಿವ ಕೆ.ಎನ್‌ ರಾಜಣ್ಣ ದೂರು ನೀಡಿದರೆ ಉನ್ನತ ಮಟ್ಟದಲ್ಲಿ ತನಿಖೆ ನಡೆಸುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಣ್ಣ ದೂರು ಕೊಡೋದಾಗಿ ಹೇಳಿದ್ದಾರೆ, ಇನ್ನೂ ಕೊಟ್ಟಿಲ್ಲ. ಅವರು ದೂರು ಕೊಟ್ಟರೆ ತನಿಖೆಗೆ ವಹಿಸ್ತೇವೆ ಎಂದರು. ನಾನು ಸಿಎಂ ಜೊತೆ ಉನ್ನತ ಮಟ್ಟದ ತನಿಖೆ ಬಗ್ಗೆ ಚರ್ಚೆ ಮಾಡ್ತೇನೆ. ಯಾವ ತನಿಖೆಗೆ ಕೊಡಬೇಕು ಅಂತ ಸಿಎಂ ಜೊತೆಗೆ ಚರ್ಚೆ ಮಾಡ್ತೇನೆ. ಈಗಾಗಲೇ ಯಾವ ತನಿಖೆಗೆ ಕೊಡಬೇಕು ಅಂತ ಪ್ರಾಥಮಿಕವಾಗಿ ಅಂದುಕೊಂಡಿದ್ದೇವೆ, ಸಿಎಂ ಜೊತೆಗೆ ಚರ್ಚೆ ಮಾಡಿದ ಬಳಿಕ ಪ್ರಕಟಿಸುತ್ತೇವೆ ಅಂತ ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೆಂಗಳೂರು: ಸಹಕಾರ ಸಚಿವ ಕೆ.ಎನ್. ರಾಜಣ್ಣ ಅವರ ಮೇಲೆ ಹನಿಟ್ರ್ಯಾಪ್ ಪ್ರಯತ್ನ ನಡೆದಿದೆ ಎಂಬ ವಿಚಾರ ಇದೀಗ ಕಾಂಗ್ರೆಸ್ ಹೈಕಮಾಂಡ್ ಅಂಗಳಕ್ಕೆ ತಲುಪಿದೆ. ನಿನ್ನೆಯಷ್ಟೇ ರಾಜಣ್ಣ ಅವರ ಪುತ್ರ ಹಾಗೂ ಎಂಎಲ್‌ಸಿ ರಾಜೇಂದ್ರ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿ ನೀಡಿ ಈ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಿದ್ದಾರೆ. ಹನಿಟ್ರ್ಯಾಪ್ ಪ್ರಕರಣದ ಹಿಂದೆ ಪ್ರಭಾವಿ ಸಚಿವರೊಬ್ಬರ ಕೈವಾಡವಿದೆ ಎಂದೂ ಅವರು ಆರೋಪಿಸಿದ್ದಾರೆ. ಇನ್ನು ಪ್ರಕರಣ ಸಂಬಂಧ ರಾಜಣ್ಣ ಹಾಗೂ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಶೀಘ್ರದಲ್ಲೇ ನವದೆಹಲಿಗೆ ತೆರಳಲಿದ್ದು, ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಲಿದ್ದಾರೆಂದು ತಿಳಿದುಬಂದಿದೆ. ರಾಜಕೀಯವಾಗಿ ತಮ್ಮನ್ನು ಹಿಮ್ಮೆಟ್ಟಿಸಲು ಪಕ್ಶದ ನಾಯಕರು ಹನಿಟ್ರ್ಯಾಪ್ ಮಾಡಲು ಪಿತೂರಿ ನಡೆಸಿದ್ದಾರೆಂದು ಇಬ್ಬರೂ ದೂರು ನೀಡಲಿದ್ದಾರೆಂದು ತಿಳಿದುಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

ತುಮಕೂರು:  ಬರೋಬ್ಬರಿ 13 ಲಕ್ಷ ರೂ. ಮೌಲ್ಯದ ಗಾಂಜಾ ಮಾರಾಟ ಮಾಡಲು ಸಾಗಿಸುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ತುಮಕೂರು ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ರಾಕೇಶ್, ಮಂಡ್ಯ ಜಿಲ್ಲೆಯ ಹರ್ಷ ಪಿ.ಜೆ. ಬಂಧಿತ ಆರೋಪಿಗಳಾಗಿದ್ದಾರೆ. ತುಮಕೂರು ನಗರದ  ಗಾರ್ಡನ್ ರಸ್ತೆ, ಟೂಡಾ ಲೇಔಟ್ ನಲ್ಲಿ ಗಾಂಜಾವನ್ನು ಮಾರಾಟ ಮಾಡುವ ಸಲುವಾಗಿ ಸಾಗಾಟ ಮಾಡುತ್ತಿದ್ದರು. ಡ್ರಗ್ ಪೆಡ್ಲರ್ ಬಳಿ ಇದ್ದ 13,60,000 ರೂ ಮೌಲ್ಯದ 17 ಕೆ.ಜಿ. 89 ಗ್ರಾಂ ಗಾಂಜಾವನ್ನು ಅಮಾನತ್ತು ಪಡಿಸಿಕೊಂಡಿದ್ದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು:  ವಿಕಲಚೇತನರ ಆತ್ಮಸ್ಥೈರ್ಯಕ್ಕೆ ಸಮಾಜದ ಬೆಂಬಲ ಅಗತ್ಯ. ಅವರನ್ನು ಕಡೆಗಣಿಸದೆ, ನಿಂದಿಸದೆ ಆತ್ಮಗೌರವದಿಂದ ಬದುಕಲು ಅವಕಾಶ ನೀಡಬೇಕು ಎಂದು ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಶನಿವಾರ ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಹಾಗೂ ವಿಕಲಚೇತನರ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಎಡಿಐಪಿ(ADIP) ಯೋಜನೆಯಡಿ ಜಿಲ್ಲೆಯ ಕುಣಿಗಲ್, ಶಿರಾ, ಪಾವಗಡ ತಾಲೂಕಿನ ವಿಕಲಚೇತನರಿಗೆ ವಿವಿಧ ಸಾಧನ ಸಲಕರಣೆಗಳ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ನಮ್ಮ ದೇಶದ ಜನಸಂಖ್ಯೆಯಲ್ಲಿ ಶೇಕಡಾ 5ರಷ್ಟು ವಿಶೇಷ ಚೇತನರಿದ್ದು, ಸಾಮಾನ್ಯ ಜನರಿಗಿಂತ ಹೆಚ್ಚು ಪ್ರತಿಭೆ, ಬುದ್ದಿವಂತಿಕೆ ಹೊಂದಿದ್ದಾರೆ ಎಂದು ತಿಳಿಸಿದರು. ಇತ್ತೀಚಿನ ದಿನಗಳಲ್ಲಿ ವಿಕಲಚೇತನರು ಅಂತರಾಷ್ಟ್ರೀಯ ಮಟ್ಟದಲ್ಲಿ ಕ್ರೀಡೆ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡು ಸಾಧನೆ ಮಾಡಿದ್ದಾರೆ. ಸ್ವಾವಲಂಬಿ ಬದುಕಿಗಾಗಿ ಅವರ ಉದ್ಯೋಗ ಕ್ಷೇತ್ರಗಳೂ ಬದಲಾಗುತ್ತಾ, ಹೊಸ ಅವಕಾಶಗಳೂ ದೊರೆಯುತ್ತಿವೆ. ಪ್ರಸ್ತುತ ದಿನಗಳಲ್ಲಿ ವಿಕಲಚೇತನರು ಆಧುನಿಕ ತಂತ್ರಜ್ಞಾನದ ಶಿಕ್ಷಣ ಪಡೆದು…

Read More

ತುಮಕೂರು:  ನಗರದ ಮಹಾನಗರ ಪಾಲಿಕೆ ಆವರಣ ಟೌನ್ ಹಾಲ್ ಐತಿಹಾಸಿಕ ಕಟ್ಟಡದ ಮುಂಭಾಗ ಏಪ್ರಿಲ್ 14ರಂದು ಡಾ.ಬಿ.ಆರ್.ಅಂಬೇಡ್ಕರ್ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಾಗುವುದೆಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶನಿವಾರ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಮ್ ಜಯಂತಿ ಕುರಿತು ಅಧಿಕಾರಿ ಹಾಗೂ ದಲಿತ ಮುಖಂಡರೊಂದಿಗೆ ಪೂರ್ವ ಭಾವಿ ಸಭೆ ನಡೆಸಿ ಮಾತನಾಡಿದ ಅವರು ಡಾ.ಬಿ.ಆರ್.ಅಂಬೇಡ್ಕರ್ ದಿನಾಚರಣೆಯಂದು ಪ್ರತಿಮೆಯನ್ನು ಅನಾವರಣಗೊಳಿಸಲಾಗುವುದು. ಅಂಬೇಡ್ಕರ್ ಪ್ರತಿಮೆ ಸ್ಥಾಪನೆಯಿಂದ ಸುಮಾರು 60 ವರ್ಷಗಳ ದಲಿತ ಸಮುದಾಯದವರ ಬೇಡಿಕೆ ಈಡೇರಿದಂತಾಗುತ್ತದೆ. ಪ್ರತಿಮೆಯು 12 ಅಡಿ ಎತ್ತರ, 1000 ಕೆ.ಜಿ. ತೂಕ ಹೊಂದಿದ್ದು, ತಯಾರಿಕೆಗೆ 39 ಲಕ್ಷ ರೂ. ವೆಚ್ಚವಾಗಿದೆ. ಪ್ರತಿಮೆಯನ್ನು ಸಿದ್ಧಾರ್ಥ ಸಂಸ್ಥೆಯಿಂದ ಕೊಡುಗೆಯಾಗಿ ನೀಡಲಾಗುತ್ತಿದೆ ಎಂದು ತಿಳಿಸಿದರು. ಚುನಾವಣೆ ನೀತಿ ಸಂಹಿತೆಯಿಂದ ಕಳೆದ ಮೂರ್ನಾಲ್ಕು ವರ್ಷಗಳಿಂದ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಮ್ ಅವರ ಜಯಂತಿಯನ್ನು ಅದ್ದೂರಿಯಾಗಿ ಆಚರಿಸಲು ಸಾಧ್ಯವಾಗಿಲ್ಲ. ಈ ಬಾರಿ ದಸರಾ ಹಬ್ಬದ ಮಾದರಿಯಲ್ಲಿ ವಿವಿಧ ಸಾಂಸ್ಕೃತಿಕ…

Read More

ಚೆನ್ನೈ: ಉದ್ದೇಶಿತ ಕ್ಷೇತ್ರ ಪುನರ್ ವಿಂಗಡಣೆ ನಿರ್ಣಯದಿಂದ ಒಕ್ಕೂಟ ವ್ಯವಸ್ಥೆ ಅಪಾಯದಲ್ಲಿದೆ ಎಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಶನಿವಾರ ಹೇಳಿದ್ದಾರೆ. ಚೆನ್ನೈನಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಕರೆದಿದ್ದ ಲೋಕಸಭಾ ಕ್ಷೇತ್ರಗಳ ವಿಂಗಡಣೆಯ ಕುರಿತ ಜಂಟಿ ಕ್ರಿಯಾ ಸಮಿತಿ ಸಭೆಯನ್ನುದ್ದೇಶಿಸಿ  ಅವರು ಮಾತನಾಡುತ್ತಿದ್ದರು. ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರ ಪುನರ್ ವಿಂಗಡಣೆ ಮಾಡಿದರೆ ಒಕ್ಕೂಟ ವ್ಯವಸ್ಥೆಗೆ ಧಕ್ಕೆಯಾಗಲಿದೆ. ಕ್ಷೇತ್ರ ಪುನರ್ ವಿಂಗಡಣೆಯು, ಜನಸಂಖ್ಯೆಯನ್ನು ನಿಯಂತ್ರಿಸಿದ, ಸಾಕ್ಷರತೆಯನ್ನು ಸುಧಾರಿಸಲು ಮತ್ತು ಮಹಿಳೆಯರ ಸಬಲೀಕರಣಕ್ಕೆ ಯತ್ನಿಸಿದ ದಕ್ಷಿಣ ಭಾರತದ ರಾಜ್ಯಗಳ ಮೇಲಿನ ರಾಜಕೀಯ ದಾಳಿ ಎಂದು ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ. ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಇತರ ದಕ್ಷಿಣ ರಾಜ್ಯಗಳು ಭಾರತದ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿವೆ. ನಾವು ಶಿಕ್ಷಣ, ಆರೋಗ್ಯ ರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿಗೆ ಆದ್ಯತೆ ನೀಡಿದ್ದೇವೆ. ಆದರೂ, ಕೇಂದ್ರವು ಈಗ ನಮ್ಮ ಸಂಸದೀಯ ಪ್ರಾತಿನಿಧ್ಯವನ್ನು ಕಡಿಮೆ ಮಾಡಲು ಯೋಜಿಸುತ್ತಿದೆ. ಸಂಸತ್ತಿನಲ್ಲಿ ನಮ್ಮ ಧ್ವನಿಯನ್ನು ಹತ್ತಿಕ್ಕಲಾಗುತ್ತಿದೆ ಎಂದು ಅವರು ಆಕ್ರೋಶ…

Read More