Subscribe to Updates
Get the latest creative news from FooBar about art, design and business.
- ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ
- ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!
- ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ
- ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ
- ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್, ಲೇಖನಿ ಸಾಮಗ್ರಿ ವಿತರಣೆ
- ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ
- ಕುರುಗೋಡಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಗೃತಿ ಜಾಥಾ, ಉದ್ದಿಮೆಗಳ ಮೇಲೆ ದಾಳಿ: ಬಾಲಕನ ರಕ್ಷಣೆ
- ಬಳ್ಳಾರಿಯಲ್ಲಿ ಜೂನ್ 19ರಂದು ಪಿಎಂ: ವಿಬಿಆರ್ ವೈ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ
Author: admin
ಕೇರಳದ ಕಣ್ಣೂರಿನ ದೇವಾಲಯದಲ್ಲಿ ನಟ ದರ್ಶನ್ ಇಂದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕೇರಳದ ಕಣ್ಣೂರಿನ ಪ್ರಸಿದ್ಧ ಮಾಡಾಯಿಕಾವು ಶ್ರೀಭಗವತೀ ದೇವಸ್ಥಾನದಲ್ಲಿ ಇಂದು ಪುತ್ರ ವಿನೀಶ್, ಧನ್ವೀರ್ ಗೌಡ ಸೇರಿದಂತೆ ಹಲವಾರು ಸ್ನೇಹಿತರ ಜೊತೆಗೆ ದರ್ಶನ್ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಮಾಡಾಯಿಕಾವು ಶ್ರೀಭಗವತೀ ದೇವಾಲಯದಲ್ಲಿ ಪಾರ್ವತಿ ದೇವಿಯು ಭದ್ರಕಾಳಿ ಅವತಾರದಲ್ಲಿ ಸಂಚಾರ ಮಾಡುತ್ತಾಳೆ ಎಂಬ ಪ್ರತೀತಿ ಇದೆ. ಅಂದ ಹಾಗೆ ಈ ದೇವಾಲಯಕ್ಕೆ ಮಹಿಳೆಯರ ಪ್ರವೇಶ ನಿಷೇಧವಿದೆಯಂತೆ! ದೇವಿಗೆ ಕಲಶಂ ಎನ್ನುವ ಪೂಜೆ ನಡೆಸುವಾಗ ಕೋಳಿಗಳನ್ನು ಬಲಿ ಕೊಡಲಾಗುತ್ತದೆ. ಇಲ್ಲಿ ಭಕ್ತರಿಗೆ ಪ್ರಸಾದವಾಗಿ ಕೋಳಿ ಮಾಂಸವನ್ನು ನೀಡಲಾಗುತ್ತದೆ. ಮಾಂಸಾಹಾರ ತಿನ್ನದವರಿಗೆ ಬೇಯಿಸಿದ ಹೆಸರು ಕಾಳು, ಅಕ್ಕಿ, ಬೆಲ್ಲದಿಂದ ಮಾಡಲಾದ ಪ್ರಸಾದವನ್ನು ನೀಡಲಾಗುತ್ತದೆ. ಇನ್ನೂ ನಟ ದರ್ಶನ್ ದೇವಸ್ಥಾನಕ್ಕೆ ಭೇಟಿ ನೀಡಿರ ಶತ್ರು ಸಂಹಾರಕ್ಕೆ ಪೂಜೆ ಮಾಡಿಸಿದ್ದಾರೆ ಅಂತ ವಿವಿಧ ಸುದ್ದಿವಾಹಿನಿಗಳು ವರದಿ ಮಾಡಿವೆ. ಇದು ಎಷ್ಟು ಸತ್ಯವೋ, ಎಷ್ಟು ಸುಳ್ಳೋ ಎನ್ನುವುದು ತಿಳಿದು ಬಂದಿಲ್ಲ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…
ತುಮಕೂರು: ಕರ್ನಾಟಕ ಬಂದ್ ಹಿನ್ನಲೆ ನಗರದಲ್ಲಿ ಪ್ರತಿಭಟನೆ ನಡೆಸಿದ ಕನ್ನಡಪರ ಸಂಘಟನೆ ಸದಸ್ಯರು ಗೃಹ ಸಚಿವ ಪರಮೇಶ್ವರ್ ಅವರಿಗೆ ಮನವಿ ಸಲ್ಲಿಸಿದರು. ತುಮಕೂರಿನ ಕ್ರೀಡಾಂಗಣ ಆವರಣದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದ ವೇದಿಕೆ ಬಳಿ ಮನವಿ ಸಲ್ಲಿಕೆ ಮಾಡಿದರು. ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರನ್ನು ಕಂಡು ವೇದಿಕೆಯಿಂದ ಇಳಿದು ಬಂದ ಪರಮೇಶ್ವರ್ ಸಂಘಟನೆ ಮುಖಂಡ ಅರುಣಕುಮಾರ್ ಅವರಿಂದ ಮನವಿ ಸ್ವೀಕರಿಸಿದರು. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಗೆ ಡಿಸಿ ಶುಭಕಲ್ಯಾಣ್, ಎಸ್ಪಿ ಅಶೋಕ್ ವೆಂಕಟ್ ಸಾಥ್ ನೀಡಿದರು. ಅಹಿತಕರ ಘಟನೆ ನಡೆದಿಲ್ಲ: ಇಂದಿನ ಕರ್ನಾಟಕ ಬಂದ್ ವೇಳೆ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬಂದ್ ವೇಳೆ ಅಹಿತಕರ ಘಟನೆಗಳು ನಡೆದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಪತ್ರಕರ್ತ ರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ಎರಡು ದಿನಗಳಿಂದ ಅಧಿಕಾರಿಗಳ ಸಭೆ ನಡೆಸಲಾಗಿತ್ತು ಎಂದರು. ಯಾವದೇ ರೀತಿಯ ಅಹಿತಕರ ಘಟನೆಗಳು ನಡೆದರೆ ತಕ್ಷಣ ಅವರನ್ನು ಬಂಧಿಸುವಂತೆ ಸೂಚಿಸಲಾಗಿದೆ. ಇದುವರೆಗೂ ರಾಜ್ಯದಲ್ಲಿ ಯಾವದೇ…
ಬೀದರ್: ಜಿಲ್ಲೆಯ ಔರಾದ ತಾಲೂಕಿನ ಸಂತಪೂರ ಪೊಲೀಸ್ ಠಾಣಾ ವ್ಯಾಪ್ತಿಯ ವಿಜಯನಗರ ತಾಂಡಾ (ಬಾರ್ಡರ್) ಸಿವಾರದಲ್ಲಿ ಮಾದಕ ವಸ್ತು ಗಾಂಜಾವನ್ನು ಮಾರಾಟ/ಸಾಗಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯನಗರ ತಾಂಡಾ ನಿವಾಸಿ ಅಂಬಾಜಿ (56) ಬಂಧಿತ ಆರೋಪಿಯಾಗಿದ್ದು, ಬಂಧಿತನಿಂದ 7.5 ಕೆ.ಜಿ. ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯು ತನ್ನ ಹೊಲದಲ್ಲಿ ಸೋಯಾ ಹೊಟ್ಟಿನಲ್ಲಿ ಬಚ್ಚಿಟ್ಟಿದ್ದ 7.5 ಕೆ.ಜಿ. ಗಾಂಜಾವನ್ನು ಪತ್ತೆ ಹಚ್ಚುವಲ್ಲಿ ಬೀದರ್ ಜಿಲ್ಲಾ ಪೊಲೀಸ್ ಘಟಕದಲ್ಲಿ ಮಾದಕ ದ್ರವ್ಯ ಪತ್ತೆ ಪರಿಣತಿ ಹೊಂದಿರುವ`ದೀಪಾ’ ಎಂಬ ಶ್ವಾನ ಯಶಸ್ವಿಯಾಗಿರುವುದು ವಿಶೇಷ. ಸೋಯಾ ಹೊಟ್ಟಿನಲ್ಲಿ ಗಾಂಜಾ ಪತ್ತೆ ಹಚ್ಚಿದ ಪೊಲೀಸ್ ತನಿಖಾ ತಂಡದಲ್ಲಿ ತಹಶೀಲ್ದಾರ್ ಮಲ್ಲಶೆಟ್ಟಿ ಚಿದ್ರೆ, ಸಂತಪೂರ ಠಾಣಾ ಪಿಎಸ್ ಐ ನಂದುಕುಮಾರ್ ಮುಳೆ, ಸುನೀಲ್ ಕುಮಾರ್ ಕೋರೆ, ಏಕನಾಥ, ಕೊಟ್ರೇಶ, ರಾಮರೆಡ್ಡಿ ಸುಭಾಷ, ಸಿದ್ದಣ್ಣಾ ಗೌತಮ್ ಹಾಗೂ ಮತ್ತಿತರರು ಇದ್ದರು. ಶ್ವಾನ ದೀಪಾ ತರಬೇತುದಾರ ಅಶೋಕ ಹಾಗೂ ತನಿಖಾ ತಂಡದ ಕಾರ್ಯದಕ್ಷತೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ…
ತುಮಕೂರು: ಹೈಕಮಾಂಡ್ ಗೆ ಯಾವುದಾದರೂ ಸಿಡಿ ತೆಗೆದುಕೊಂಡು ಹೋಗಿ ಕೊಟ್ಟರೆ ಮೊದಲೇ ಅವರಿಗೆ ಗೊತ್ತಿರಬೇಕಲ್ಲ. ನಾನು ಯಾವ್ದೆ ರೀತಿಯ ಲೋಪ ಎಸಗಿಲ್ಲ. ದೂರು ಬಂದ್ರೆ ನಂಬಬಾರದು. ಮತ್ತು ನನ್ನ ಮೇಲೆ ಕ್ರಮ ತೆಗೆದುಕೊಳ್ಳುವ ಮುನ್ನ ನನ್ನನ್ನು ಒಮ್ಮೆ ಹೈಕಮಾಂಡ್ ಕೇಳಬೇಕು ಎಂಬುದು ನನ್ನ ಅಭಿಪ್ರಾಯ ಎಂದು ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ನನಗೆ ಯಾವತ್ತೂ ಕೂಡ ಕೆಟ್ಟದನ್ನು ಬಯಸಲ್ಲ. ಕೆಟ್ಟದನ್ನು ಬಯಸಿದವರು ಉದ್ದಾರ ಆಗಿಲ್ಲ. ನನಗೆ ಕೆಟ್ಟದು ಮಾಡಲು ಅವಶ್ಯಕತೆ ಇಲ್ಲ. ನನಗೆ ಆದ ರೀತಿ ಯಾರಿಗೂ ಆಗಬಾರದು ಎಂದರು. ನಾನು ಯಾವ್ದೆ ರಾಜಕೀಯ ಹಿನ್ನೆಲೆವುಳ್ಳವನಲ್ಲ, ಕಷ್ಟಪಟ್ಟು ರಾಜಕೀಯವಾಗಿ ಬೆಳೆದು ಬಂದಿದ್ದೇನೆ. ಆದ್ರೆ ಈ ರೀತಿ ತೇಜೋವಧೆ ಮಾಡುವುದು ಭೂಷಣ ತರಲ್ಲ. ನನಗೆ ಮಾಟ ಮಂತ್ರ ಮಾಡಿಸೋದು ಎಲ್ಲಾ ಮಾಡಿದ್ದಾರೆ ನನಗೆ ಏನೂ ಆಗಲ್ಲ. ಆದ್ರೆ ಯಾರು ಇದ್ರಲ್ಲಿ ಭಾಗಿಯಾಗಿದ್ದಾರೆ ಎಂದರು. ಅಧಿಕಾರದ ಆಸೆಗೆ, ಇನ್ನೊಬ್ಬನ ಮುಗಿಸಲು ವಿಷಕನ್ಯೆಯರನ್ನು ಬಳಸುತ್ತಿದ್ದಾರೆ. ಗುರುವಾರ ಸತೀಶ್ ಜಾರಕಿಹೊಳಿಯವರು ಸೇರಿದಂತೆ ಸಮಾನಮನಸ್ಕರೆಲ್ಲರೂ ಸೇರಿ…
ತುಮಕೂರು: ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ನ ಪ್ರಮುಖ ಯೋಜನೆಯಾದ ಸಮಗ್ರ ನಗರ ಕಮ್ಯಾಂಡ್ ಅಂಡ್ ಕಂಟ್ರೋಲ್ ಸೆಂಟರ್ CMCCC–Integrated City Management Command and Control Centreಗೆ ಪ್ರಥಮ ಪ್ರಶಸ್ತಿ ಲಭಿಸಿದೆ ಎಂದು ವ್ಯವಸ್ಥಾಪಕ ನಿರ್ದೇಶಕ ಬಿ.ವಿ.ಅಶ್ವಿಜ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸ್ಮಾರ್ಟ್ ಸಿಟಿ ಮಿಷನ್ ಯೋಜನೆಯಡಿ ತುಮಕೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ವತಿಯಿಂದ ನಗರದಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಕೈಗೊಂಡು ಯಶಸ್ವಿಯಾಗಿ ಅನುಷ್ಟಾನಗೊಳಿಸಲಾಗಿದೆ. ಕೇಂದ್ರದ ನಗರಾಭಿವೃದ್ಧಿ ಸಚಿವಾಲಯದಿಂದ ಆಯೋಜಿತ ಮಾರ್ಚ್ 19 ರಿಂದ 21ರವದರೆಗೆ ನವದೆಹಲಿಯ ಪ್ರಗತಿ ಮೈದಾನದಲ್ಲಿ ನಡೆದ ದೇಶದ 100 ಸ್ಮಾರ್ಟ್ ಸಿಟಿ ಭಾಗವಹಿಸಿದ್ದ 10ನೇ ಸ್ಮಾರ್ಟ್ ಸಿಟೀಸ್ ಇಂಡಿಯಾ-2025 ಮತ್ತು 32ನೇ ಕನ್ವರ್ ಜೆನ್ಸ್ ಇಂಡಿಯಾ 2025 ಎಕ್ಸ್ಪೋ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ತುಮಕೂರು ನಗರವು ಕರ್ನಾಟಕದ ಸ್ಮಾರ್ಟ್ ಸಿಟಿಗಳಲ್ಲಿ ಐಸಿಎಂಸಿಸಿಯನ್ನು ಸ್ಥಾಪಿಸಿ ಕಾರ್ಯಾರಂಭ ಮಾಡಿದ ಪ್ರಥಮ ಸ್ಮಾರ್ಟ್ ನಗರವಾಗಿದ್ದು, ಇ–ಆಡಳಿತದ ಗುರಿಯೊಂದಿಗೆ ನಗರದ ಕಾರ್ಯಾಚರಣೆಗಳು, ಸಂಚಾರ ನಿಯಮ ಉಲ್ಲಂಘನೆಗಾಗಿ…
ತುಮಕೂರು: ಗುಬ್ಬಿ ಪಟ್ಟಣದ ಡಾ.ಗುಬ್ಬಿ ವೀರಣ್ಣ ಟ್ರಸ್ಟ್ ವತಿಯಿಂದ ಗುಬ್ಬಿ ಪಟ್ಟಣದ ಡಾ.ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಮಕ್ಕಳಿಗಾಗಿ ಏಪ್ರಿಲ್ 4 ರಿಂದ ಮೇ 10ರವರೆಗೆ ಬೇಸಿಗೆ ರಂಗ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರದಲ್ಲಿ 8 ರಿಂದ 14 ವರ್ಷ ವಯೋಮಾನದ ಮಕ್ಕಳು ಭಾಗವಹಿಸಬಹುದಾಗಿದೆ. ಶಿಬಿರವು ಪ್ರತಿ ದಿನ ಬೆಳಿಗ್ಗೆ ಮತ್ತು ಮಧ್ಯಾಹ್ನ ನಡೆಯಲಿದೆ. ತರಬೇತಿಗೆ 1,000 ರೂ. ಶುಲ್ಕವನ್ನು ನಿಗದಿಪಡಿಸಲಾಗಿದ್ದು, ಭಾಗವಹಿಸುವ ಮಕ್ಕಳು ಊಟ, ಉಪಹಾರ ಮತ್ತು ಕುಡಿಯುವ ನೀರನ್ನು ಸ್ವಯಂ ವ್ಯವಸ್ಥೆ ಮಾಡಿಕೊಳ್ಳಬೇಕು. ಆಯ್ಕೆಯಾದ ಮಕ್ಕಳು ಟ್ರಸ್ಟ್ ಕಾಲ ಕಾಲಕ್ಕೆ ರೂಪಿಸುವ ನಿಯಮಗಳಿಗೆ ಬದ್ಧರಾಗಿರಬೇಕು. ಶಿಬಿರದಲ್ಲಿ ಭಾಗವಹಿಸಲಿಚ್ಛಿಸುವ ಮಕ್ಕಳು ನಿಗದಿತ ಅರ್ಜಿ ನಮೂನೆಯನ್ನು ಗುಬ್ಬಿ ಪಟ್ಟಣದ ಡಾ.ಗುಬ್ಬಿ ವೀರಣ್ಣ ರಂಗಮಂದಿರದಿಂದ ಪಡೆದು, ಭರ್ತಿ ಮಾಡಿದ ಆರ್ಜಿಯನ್ನು ಏಪ್ರಿಲ್ 5ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ: 08131–223336 / 0816–2275204, ಮೊ.ಸಂ.8546948858ನ್ನು ಸಂಪರ್ಕಿಸಬೇಕೆಂದು ಟ್ರಸ್ಟ್ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…
ತುಮಕೂರು: ಕರ್ನಾಟಕ ಸಾಹಿತ್ಯ ಅಕಾಡೆಯು ಹಾವೇರಿ ಜಿಲ್ಲೆ ಗೋಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಏಪ್ರಿಲ್ 21 ರಿಂದ 23ರವರೆಗೆ 3 ದಿನಗಳ ಕಾಲ ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳ ಕುರಿತು ಕಮ್ಮಟವನ್ನು ಏರ್ಪಡಿಸಿದ್ದು, ಕಮ್ಮಟದಲ್ಲಿ ಭಾಗವಹಿಸಲು ಆಸಕ್ತಿಯಿರುವವರಿಂದ ಅರ್ಜಿ ಆಹ್ವಾನಿಸಿದೆ. ಕಮ್ಮಟವು ಹಾವೇರಿ ಜಿಲ್ಲೆ ಗೋಟಗೋಡಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ನಡೆಸಲಾಗುವುದು. ಆಸಕ್ತ 20 ರಿಂದ 45 ವರ್ಷಗೊಳಗಿನ ಪರಿಶಿಷ್ಟ ಪಂಗಡಕ್ಕೆ ಸೇರಿದ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಏಪ್ರಿಲ್ 5 ಕಡೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಾಲತಾಣ http://karnatakasahithyaacademy.org ಸಂಪರ್ಕಿಸಬಹುದಾಗಿದೆ ಎಂದು ರಿಜಿಸ್ಟ್ರಾರ್ ಕರಿಯಪ್ಪ ಎನ್. ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಬೆಸ್ಕಾಂ ನಗರ ಉಪವಿಭಾಗ-1ರಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ಮಾರ್ಚ್ 23ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿವಿಧೆಡೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಚಿಕ್ಕಪೇಟೆ, ಅಗ್ರಹಾರ, ಗಾರ್ಡನ್ ರಸ್ತೆ, ಬಿ.ಜಿ.ಪಾಳ್ಯ, ವಿನಾಯಕನಗರ, ಜೆ.ಸಿ.ರಸ್ತೆ, ಸಿವಿಲ್ ಬಸ್ ನಿಲ್ದಾಣ, ಆಂಜನೇಯ ವಿಗ್ರಹ ಹತ್ತಿರ, ಜಿ.ಸಿ.ಆರ್. ಕಾಲೋನಿ, ಬಾವಿಕಟ್ಟೆ ಕಲ್ಯಾಣ ಮಂಟಪದ ಹತ್ತಿರ, ಶಿರಾ ರಸ್ತೆ ಸೇರಿದಂತೆ ಸುತ್ತಮುತ್ತಲ ಪ್ರದೇಶದಲ್ಲಿ ಮಧ್ಯಂತರ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ನಾಗರಾಜು ಹೆಚ್.ಪಿ. ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಮಾದಕ ದ್ರವ್ಯ ವ್ಯಸನಕ್ಕೆ ವಿದ್ಯಾರ್ಥಿಗಳೇ ಹೆಚ್ಚು ದಾಸರಾಗುತ್ತಿರುವುದು ಸಮಾಜಕ್ಕೆ ಮಾರಕವಾಗಿ ಪರಿಣಮಿಸುತ್ತಿದೆ ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆತಂಕ ವ್ಯಕ್ತಪಡಿಸಿದರು. ನಗರದ ಜಿಲ್ಲಾ ಬಾಲಭವನದಲ್ಲಿ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಹಾನಗರಪಾಲಿಕೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಯುವಜನ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಹಯೋಗದಲ್ಲಿ ಮದ್ಯ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಆಯೋಜಿಸಲಾಗಿದ್ದ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಹವಾಸದಿಂದ ಕಾಲೇಜು ವಿದ್ಯಾರ್ಥಿಗಳು ಮದ್ಯ ಹಾಗೂ ಮಾದಕ ದ್ರವ್ಯಗಳ ಚಟಕ್ಕೆ ಮಾರುಹೋಗುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು. ಮಾದಕ ವಸ್ತುಗಳ ಸೇವನೆಯಿಂದ ಮಾನಸಿಕ ಹಾಗೂ ದೈಹಿಕ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವುದಲ್ಲದೆ ವೈಯಕ್ತಿಕ ಬದುಕೂ ಸಹ ಹಾಳಾಗುತ್ತದೆ. ಒಮ್ಮೆ ಮದ್ಯ ಹಾಗೂ ಮಾದಕ ಸೇವನೆಯ ಚಟವನ್ನು ಅಂಟಿಸಿಕೊಂಡರೆ ಅದರಿಂದ ಹೊರ…
ತುಮಕೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾರ್ಚ್ 24ರಂದು ಬೆಳಿಗ್ಗೆ 11 ಗಂಟೆಗೆ ವಿಶ್ವ ಕ್ಷಯರೋಗ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ 2023 ಹಾಗೂ 2024ನೇ ಸಾಲಿನಲ್ಲಿ ಕ್ಷಯ ಮುಕ್ತ ಗ್ರಾಮ ಪಂಚಾಯತಿ ಎಂದು ಘೋಷಿಸಲ್ಪಟ್ಟಿರುವ ಗ್ರಾಮ ಪಂಚಾಯತಿಗಳಿಗೆ ಪ್ರಮಾಣ ಪತ್ರ ವಿತರಿಸಲಾಗುವುದು. ವಿಶ್ವ ಕ್ಷಯರೋಗ ದಿನಾಚರಣೆ ಪ್ರಯುಕ್ತ ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾಸ್ಪತ್ರೆ ಆವರಣದಲ್ಲಿ ಜಾಥಾ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4