Subscribe to Updates
Get the latest creative news from FooBar about art, design and business.
- ಮಹಿಳೆಯರಿಂದಲೇ ಮಹಿಳೆಯರ ಮೇಲೆ ನಡೆಯುವ ಶೋಷಣೆಗಳು ಮೊದಲು ನಿಲ್ಲಲಿ: ತಹಶೀಲ್ದಾರ್ ಮಮತಾ ಎಂ.
- ಕೊರಟಗೆರೆ: ಮೂಢನಂಬಿಕೆಯಿಂದಾಗಿ ಬಳಕೆಯಾಗದೆ ಪಾಳುಬಿದ್ದ ಬಾಲಿಕಾ ವಿದ್ಯಾರ್ಥಿನಿಲಯ
- ಕಣ್ಣಿನ ಶಸ್ತ್ರಚಿಕಿತ್ಸೆಗೆ ಲಂಚ ಕೇಳಿದ್ದ ತುಮಕೂರು ಜಿಲ್ಲಾ ಆಸ್ಪತ್ರೆ ವೈದ್ಯೆ ಲೋಕಾಯುಕ್ತ ಬಲೆಗೆ
- ನಡೆಯಲಿಲ್ಲ ಪವಾಡ!: ಮಲ್ಲಿಕಾರ್ಜುನ ಮುತ್ಯಾಗೆ ಬಿಗ್ ಶಾಕ್ | ಜಾಮೀನು ಅರ್ಜಿ ವಜಾ
- ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ: AIDSO ಆಗ್ರಹ
- ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!
- ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!
- RSS ನಿಷೇಧ ವಿಚಾರ ಅನಗತ್ಯ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
Author: admin
ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ಅವರು ಇಂದು (ಶುಕ್ರವಾರ) ವಿಧಾನಸಭೆಯಲ್ಲಿ ದಾಖಲೆಯ 17ನೇ ಬಜೆಟ್ ಮಂಡಿಸಿದ್ದಾರೆ. ಈ ಬಾರಿಯ ಬಜೆಟ್ನ ಒಟ್ಟು ಗಾತ್ರ 4,48,004 ಕೋಟಿ ರೂ. ಗಳಾಗಿದ್ದು, ವಿವಿಧ ಇಲಾಖೆಗಳಿಗೆ ಹಂಚಿಕೆಯಾದ ಅನುದಾನದ ವಿವರಗಳು ಈ ಕೆಳಗಿನಂತಿವೆ. ಶಿಕ್ಷಣ ಇಲಾಖೆ: ₹47,224 ಕೋಟಿ (ಅತಿ ಹೆಚ್ಚು ಅನುದಾನ) ಮಹಿಳಾ ಮತ್ತು ಮಕ್ಕಳ ಕಲ್ಯಾಣ: ₹34,929 ಕೋಟಿ ಇಂಧನ ಇಲಾಖೆ: ₹29,947 ಕೋಟಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್: ₹26,559 ಕೋಟಿ ಲೋಕೋಪಯೋಗಿ ಮತ್ತು ಸಾರಿಗೆ ಇಲಾಖೆ: ₹23,100 ಕೋಟಿ ನೀರಾವರಿ ಇಲಾಖೆ: ₹22,436 ಕೋಟಿ ನಗರಾಭಿವೃದ್ಧಿ ಮತ್ತು ವಸತಿ ಇಲಾಖೆ: ₹22,203 ಕೋಟಿ ಕಂದಾಯ ಇಲಾಖೆ: ₹19,843 ಕೋಟಿ ಸಮಾಜ ಕಲ್ಯಾಣ ಇಲಾಖೆ: ₹18,612 ಕೋಟಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ: ₹17,817 ಕೋಟಿ ಗೃಹ ಇಲಾಖೆ: ₹11,424 ಕೋಟಿ ಕೃಷಿ ಮತ್ತು ತೋಟಗಾರಿಕೆ ಇಲಾಖೆ: ₹8,373 ಕೋಟಿ ಆಹಾರ ಮತ್ತು ನಾಗರಿಕ ಸರಬರಾಜು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ 2026-27ನೇ ಸಾಲಿನ ರಾಜ್ಯ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ನಿರುದ್ಯೋಗಿ ಶಿಕ್ಷಕ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ರಾಜ್ಯದ ವಿವಿಧ ಶಾಲಾ-ಕಾಲೇಜುಗಳಲ್ಲಿ ಖಾಲಿ ಇರುವ ಒಟ್ಟು 15,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಸಿಎಂ ಘೋಷಿಸಿದ್ದಾರೆ. 15,000 ಶಿಕ್ಷಕರ ನೇಮಕ: 2026-27ನೇ ಸಾಲಿನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ 15,000 ಶಿಕ್ಷಕರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಉನ್ನತ ಶಿಕ್ಷಣದಲ್ಲೂ ನೇಮಕಾತಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಮತ್ತು ಯುವಿಸಿಇ ವಿಶ್ವವಿದ್ಯಾಲಯಗಳಲ್ಲಿ ಒಟ್ಟು 2,000 ಬೋಧಕ ಹುದ್ದೆಗಳ ಭರ್ತಿಗೆ ಅನುಮತಿ ನೀಡಲಾಗಿದೆ. ಅಲ್ಲದೆ, ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ ಹಂತ ಹಂತವಾಗಿ 1,000 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಮಾನಸಿಕ ಆರೋಗ್ಯಕ್ಕೆ ಆದ್ಯತೆ: ವಿದ್ಯಾರ್ಥಿಗಳ ಮಾನಸಿಕ ಒತ್ತಡ ನಿವಾರಿಸಲು 204 ಬಿಆರ್ಸಿ (BRC) ಕೇಂದ್ರಗಳಲ್ಲಿ ತಲಾ ಒಬ್ಬರಂತೆ ಅರ್ಹ ಮಾನಸಿಕ ಆರೋಗ್ಯ ಸಲಹೆಗಾರರನ್ನು ನೇಮಿಸಲು ನಿರ್ಧರಿಸಲಾಗಿದೆ. ಇಂಗ್ಲಿಷ್ ಭಾಷಾ ತರಬೇತಿ: ಸರ್ಕಾರಿ…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸಭೆಯಲ್ಲಿ 2026–27ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದರು. ಇದು ಅವರ ವೃತ್ತಿಜೀವನದ ದಾಖಲೆಯ 17ನೇ ಬಜೆಟ್ ಆಗಿದ್ದು, ರಾಜ್ಯದ ಸಮಗ್ರ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯಕ್ಕೆ ಒತ್ತು ನೀಡಿದ್ದಾರೆ. ಸುಮಾರು 4.48 ಲಕ್ಷ ಕೋಟಿ ರೂಪಾಯಿ ಗಾತ್ರದ ಈ ಬಜೆಟ್ನಲ್ಲಿ ಶಿಕ್ಷಣ, ಆರೋಗ್ಯ ಮತ್ತು ಬೆಂಗಳೂರು ಮೂಲಸೌಕರ್ಯಕ್ಕೆ ಹೆಚ್ಚಿನ ಅನುದಾನ ನೀಡಲಾಗಿದೆ. ಕರ್ನಾಟಕ ಬಜೆಟ್ 2026: ಮುಖ್ಯಾಂಶಗಳು ದಾಖಲೆಯ ಮಂಡನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ವೃತ್ತಿಜೀವನದ 17ನೇ ಬಜೆಟ್ ಮಂಡಿಸುವ ಮೂಲಕ ಕರ್ನಾಟಕದ ಇತಿಹಾಸದಲ್ಲಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಸುಮಾರು 4.48 ಲಕ್ಷ ಕೋಟಿ ರೂಪಾಯಿ ಗಾತ್ರದ ಬೃಹತ್ ಬಜೆಟ್ ಇದಾಗಿದೆ. ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ: ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 56,432 ಸರ್ಕಾರಿ ಹುದ್ದೆಗಳ ಭರ್ತಿಗೆ ಚಾಲನೆ ನೀಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ. ಸರ್ಕಾರಿ ಕೆಲಸಕ್ಕೆ ಸೇರಬಯಸುವ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಒಂದು ಬಾರಿಗೆ 5 ವರ್ಷಗಳ ಸಡಿಲಿಕೆ ನೀಡಲಾಗಿದೆ. ಆರೋಗ್ಯ…
ಪಾವಗಡ: ಪರಿಶಿಷ್ಟಜಾತಿ ಮತ್ತು ಪರಿಶಿಷ್ಟವರ್ಗಗಳ ಶ್ರೇಯಸ್ಸಿ ಗಾಗಿ ಗಣನೀಯಸೇವೆ ಸಲ್ಲಿಸಿದ ವ್ಯಕ್ತಿಗಳನ್ನು ಗುರುತಿಸಿ ರಾಜ್ಯ ಮಟ್ಟದಲ್ಲಿ ಸನ್ಮಾನಿಸಲು ಸರ್ಕಾರ ತೀರ್ಮಾನಿಸಿದ್ದು, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಏಪ್ರಿಲ್ 5ರಂದು ನಡೆಯುವ ಬಾಬು ಜಗಜೀವನರಾಮ್ ಅವರ 119ನೇ ಜಯಂತಿ ಹಾಗೂ ಏಪ್ರಿಲ್ 14ರಂದು ನಡೆಯುವ ಡಾ. ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ಅಂಗವಾಗಿ ಸಮಾಜಸೇವೆ, ಶಿಕ್ಷಣ, ಸಮಾನತೆ ಮತ್ತು ಹಿಂದುಳಿದ ವರ್ಗಗಳ ಅಭಿವೃದ್ಧಿಕ್ಷೇತ್ರದಲ್ಲಿ ವಿಶೇಷ ಸೇವೆ ಸಲ್ಲಿಸಿದವರನ್ನು ಪ್ರಶಸ್ತಿಗೆ ಆಯ್ಕೆಮಾಡಲಾಗುತ್ತದೆ. ಅರ್ಹರು ತಮ್ಮ ಸೇವಾ ವಿವರಗಳು ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಮಾರ್ಚ್ 8ರೊಳಗಾಗಿ ತಾಲೂಕುಸಮಾಜ ಕಲ್ಯಾಣಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಲು ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಜಿ.ಇ.ಮಲ್ಲಿಕಾರ್ಜುನಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬಳ್ಳಾರಿ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಬ್ಯಾಂಕ್ ವಲಯ ಯೋಜನೆಗಳನ್ನು ಜನರಿಗೆ ತಲುಪಿಸಲು ಸರ್ಕಾರಿ ಅಧಿಕಾರಿಗಳು ಮತ್ತು ಬ್ಯಾಂಕ್ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಬಳ್ಳಾರಿ ಲೋಕಸಭಾ ಕ್ಷೇತ್ರದ ಸಂಸದ ಈ.ತುಕಾರಾಮ್ ಅವರು ಹೇಳಿದರು. ಗುರುವಾರ ನಗರದ ಜಿಪಂ ನ ಹಳೆಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಬಳ್ಳಾರಿ ಜಿಲ್ಲಾ ಮಟ್ಟದ ಲೀಡ್ ಬ್ಯಾಂಕ್ನ ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರಿ ಅಧಿಕಾರಿಗಳು ಮತ್ತು ಬ್ಯಾಂಕ್ ಅಧಿಕಾರಿಗಳ ನಡುವೆ ಸಮನ್ವಯತೆ ಇಲ್ಲ; ಇದರಿಂದ ಸರ್ಕಾರದ ಯೋಜನೆಗಳು ಸಫಲತೆ ಕಾಣುತ್ತಿಲ್ಲ ಎಂದು ಕಳವಳ ವ್ಯಕ್ತಪಡಿಸಿದ ಅವರು, ಅಧಿಕಾರಿಗಳು ಮಾನವೀಯತೆಯಿಂದ ಕೆಲಸ ಮಾಡಬೇಕು ಎಂದು ತಿಳಿಸಿದರು. ಬಡಜನರು ಆರ್ಥಿಕವಾಗಿ ಸ್ವಾವಲಂಬನೆ ಬದುಕು ನಡೆಸಲು ಬ್ಯಾಂಕ್ಗಳು ಸಹಕಾರಿಯಾಗಬೇಕು. ಜನರು ನೆರವಿಗಾಗಿ ಸಲ್ಲಿಸುವ ಲೋನ್ ಅರ್ಜಿಗಳನ್ನು ಸಕಾಲದಲ್ಲಿ ಇತ್ಯರ್ಥಗೊಳಿಸುವ ಮೂಲಕ ಬಡಜನರ ಕಣ್ಣೊರೆಸುವ ಕೆಲಸ ಮಾಡಬೇಕು ಎಂದು ಸಂಸದರು ಸೂಚಿಸಿದರು. ಸರ್ಕಾರದಿಂದ ಜಾರಿಗೊಂಡಿರುವ ವಿವಿಧ ಜನಪರ ಯೋಜನೆಗಳ ಆರ್ಥಿಕ ಸೌಲಭ್ಯವನ್ನು…
ಬೆಂಗಳೂರು: ಸಮ ಸಮಾಜ ನಿರ್ಮಾಣದಲ್ಲಿ ಮಾಧ್ಯಮಗಳು ಬಹು ಮುಖ್ಯ ಪಾತ್ರವನ್ನು ವಹಿಸುತ್ತವೆ. ಹಾಗಾಗಿ ಮಾಧ್ಯಮಗಳು ಸಮಾಜದಲ್ಲಿ ಅವಕಾಶ ವಂಚಿತ ಸಮುದಾಯಗಳ ಪರವಾಗಿ ಧ್ವನಿ ಎತ್ತಬೇಕು ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ (ಕೋಲಾರ) ಕುಲಪತಿಗಳಾದ ಪ್ರೊ.ಬಿ.ಕೆ.ರವಿ ಕರೆ ಕೊಟ್ಟರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಡಾಕ್ಟರ್ ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಮತ್ತು ಬೆಂಗಳೂರು ವಿಶ್ವವಿದ್ಯಾನಿಲಯ, ಜ್ಞಾನಭಾರತಿ, ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಎರಡು ದಿನಗಳ ‘ಮಾಧ್ಯಮ ಹಬ್ಬ 2026’ ಕಾರ್ಯಾಗಾರದ ಸಮಾರೋಪ ಸಮಾರಂಭ ದಲ್ಲಿ ಸುಮಾರು ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು. ಜನರನ್ನು ದಿಕ್ಕುತಪ್ಪಿಸುವಂತಹ, ಅವರಿಗೆ ಸುಳ್ಳು ಸಂದೇಶವನ್ನು ಕೊಟ್ಟು ಅವರಲ್ಲಿ ಮಾನಸಿಕ ಗೊಂದಲವನ್ನು ಉಂಟು ಮಾಡುವುದು ಪತ್ರಕರ್ತರ ಕೆಲಸವಲ್ಲ. ಸತ್ಯ ಅಸತ್ಯತೆಯನ್ನು ತಿಳಿದುಕೊಂಡು ಸುದ್ದಿ, ಲೇಖನಗಳನ್ನು ಬರೆಯಬೇಕು. ಸಾಮಾಜಿಕ ಹೊಣೆಗಾರಿಕೆ ಮರೆತ ಮಾಧ್ಯಮ ಬಹಳ ಕಾಲ ಜನಸಾಮಾನ್ಯರ ವಿಶ್ವಾಸಾರ್ಹತೆ ಪಡೆಯಲಾರದು ಎಂದು ಭಾವಿ ಪತ್ರಕರ್ತರಾಗುವ ವಿದ್ಯಾರ್ಥಿಗಳನ್ನು ಅವರು ಎಚ್ಚರಿಸಿದರು. ತಂತ್ರಜ್ಞಾನ ಎಷ್ಟೇ ಮುಂದುವರೆದರೂ,…
ಕೊರಟಗೆರೆ : ಕೆರೆಗಳಲ್ಲಿ ರೈತರ ಜಮೀನಿಗೆ ಮಣ್ಣು ತುಂಬಲು ಅವಕಾಶ ಮಾಡಿ ಕೊಡಬೇಕು, ಜಮೀನುಗಳ ಮಣ್ಣು ಮಳೆ ಬಂದ ವೇಳೆ ಕೊಚ್ಚಿಕೊಂಡು ಕೆರೆ–ಕಟ್ಟೆಗಳಿಗೆ ಸೇರುತ್ತಿದೆ, ಇದು ಮತ್ತೆ ರೈತರ ಜಮೀನಿಗೆ ಸೇರಬೇಕು ಎಂದು ರಾಜ್ಯ ಹಸಿರು ಸೇನೆ ಸಂಚಾಲಕ ಆನಂದ್ ಪಾಟೇಲ್ ತಿಳಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಬುಧವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯಿಂದ ಆಯೋಜಿಸಿದ್ದ ಸುದ್ದಿಗೋಷ್ಠಿಯನ್ನ ಉದ್ದೇಶಿಸಿ ಮಾತನಾಡಿದರು. ಅರಣ್ಯ ಇಲಾಖೆಯು ಸುಮಾರು ವರ್ಷಗಳಿಂದ ಉಳುಮೆ ಮಾಡುತ್ತಿರುವ ರೈತರನ್ನು ಒಕ್ಕಲೆಬ್ಬಿಸಿ ರೈತರನ್ನು ಶೋಷಣೆ ಮಾಡುತ್ತಿದೆ ಎಂದು ಹೇಳಿದರು. ನಗರ ವ್ಯಾಪ್ತಿಗಳಲ್ಲಿ ಸುಮಾರು 50 ರಿಂದ 60 ವರ್ಷ ರೈತರು ಉಳುಮೆ ಮಾಡಿಕೊಂಡು ಟಿ.ಟಿ.ಕಟ್ಟಿ ಅರ್ಜಿ ಸಲ್ಲಿಸಿದ್ದು, ಇದುವರೆಗೂ ಸರ್ಕಾರ ಸ್ಪಷ್ಟ ನಿರ್ಧಾರ ಕೊಟ್ಟಿಲ್ಲ, ಕೆ.ಐ.ಎ.ಡಿ.ಬಿ ಇಲಾಖೆ ರೈತರ ಜಮೀನನ್ನು ಸ್ವಾಧೀನ ಪಡಿಸಿಕೊಂಡು ಇಂದು ಈ ಪ್ರದೇಶದಲ್ಲಿ ದೊಡ್ಡ ದೊಡ್ಡ ಕಂಪನಿಗಳು ಬಂದಿವೆ ಎಂದು ಹೇಳಿದರು. ಸ್ಥಳೀಯ ನಿರುದ್ಯೋಗಿ ಯುವಕರಿಗೆ ಉದ್ಯೋಗ ಭರವಸೆ ನೀಡಿ ಭೂಮಿ ಸ್ವಾಧೀನ…
ಬೀದರ್: ನಗರದ ಪ್ರತಿಭೆಗಳಿಗೆ ರಾಷ್ಟ್ರಮಟ್ಟದ ವೇದಿಕೆ ಕಲ್ಪಿಸುವ ಉದ್ದೇಶದಿಂದ ಎಸ್.ಪಿ. ಮಾಡೆಲಿಂಗ್ ಹಬ್ ವತಿಯಿಂದ ‘ಐಕಾನ್ ಆಫ್ ಡೆಕ್ಕನ್ ಸೀಸನ್–3 (2026)’ ಫ್ಯಾಷನ್ ಮಾಡೆಲಿಂಗ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಈ ಪ್ರತಿಷ್ಠಿತ ಸ್ಪರ್ಧೆಯ ಗ್ರ್ಯಾಂಡ್ ಫಿನಾಲೆ ಕಾರ್ಯಕ್ರಮವು ಏಪ್ರಿಲ್ 18ರಂದು ನಗರದ ವಿಶ್ವಕರ್ಮ ಬಾಂಕ್ವೇಟ್ ಹಾಲ್ನಲ್ಲಿ ಜರುಗಲಿದೆ. ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಪರಿಣಿತ ಮಾರ್ಗದರ್ಶಕರಿಂದ ಸ್ಪರ್ಧಿಗಳಿಗೆ ತರಬೇತಿ ಹಾಗೂ ಮಾರ್ಗದರ್ಶನ ನೀಡಲಾಗುವುದು. ಆಸಕ್ತಿಯುಳ್ಳ ಮಕ್ಕಳು, ಯುವಕರು ಹಾಗೂ ಮಹಿಳೆಯರು ಈ ಸ್ಪರ್ಧೆಯಲ್ಲಿ ಭಾಗವಹಿಸಲು ಮುಕ್ತ ಅವಕಾಶವಿದೆ. ಸ್ಥಳೀಯ ಪ್ರತಿಭೆಗಳನ್ನು ಗುರುತಿಸಿ, ಅವರಿಗೆ ರಾಷ್ಟ್ರಮಟ್ಟದಲ್ಲಿ ಕೀರ್ತಿ ಗಳಿಸಲು ಸೂಕ್ತ ವೇದಿಕೆ ಒದಗಿಸುವುದು ಈ ಕಾರ್ಯಕ್ರಮದ ಮುಖ್ಯ ಗುರಿಯಾಗಿದೆ. “ಪ್ರತಿಯೊಬ್ಬರೂ ತಮ್ಮಲ್ಲಿರುವ ಕಲಾತ್ಮಕ ಪ್ರತಿಭೆಯನ್ನು ಹೊರಹಾಕಲು ಇದೊಂದು ಸುವರ್ಣಾವಕಾಶ. ಆಸಕ್ತಿಯುಳ್ಳವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು.” — ರಂಜನಾ ಪಾಟೀಲ್, ಕಾರ್ಯಕ್ರಮದ ಆಯೋಜಕಿ. ನೋಂದಣಿ ಮಾಡಿಕೊಳ್ಳುವುದು ಹೇಗೆ? ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಛಿಸುವವರು 8088980416 ಅಥವಾ 8618038059 ಮೊಬೈಲ್ ಸಂಖ್ಯೆಗಳಿಗೆ ಕರೆ ಮಾಡುವ…
ಔರಾದ: ಬದುಕು ಸುಗಮವಾಗಿರಬೇಕಾದ ರಸ್ತೆಗಳು ಇಂದು ನರಕಯಾತನೆಯ ತಾಣಗಳಾಗಿ ಮಾರ್ಪಟ್ಟಿವೆ. ಇದಕ್ಕೆ ಸಾಕ್ಷಿ ಔರಾದ ತಾಲ್ಲೂಕಿನ ಶೇಂಬೆಳ್ಳಿ ಕ್ರಾಸ್ನಿಂದ ಶೇಂಬೆಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯ ದುಃಸ್ಥಿತಿ. ಕೇವಲ 2.5 ಕಿ.ಮೀ. ಉದ್ದದ ಈ ರಸ್ತೆಯಲ್ಲಿ ಸಂಚರಿಸುವುದೆಂದರೆ ಸಾವಿನ ಜೊತೆ ಸರಸವಾಡಿದಂತೆ ಎಂದು ಗ್ರಾಮಸ್ಥರು ಅಳಲು ತೋಡಿಕೊಳ್ಳುತ್ತಿದ್ದಾರೆ. ಗುಂಡಿಗಳ ಸಾಮ್ರಾಜ್ಯ: ಸುಮಾರು ಹತ್ತು ವರ್ಷಗಳ ಹಿಂದೆ ನಿರ್ಮಾಣಗೊಂಡಿದ್ದ ಈ ಡಾಂಬರು ರಸ್ತೆ, ನಿರ್ವಹಣೆಯಿಲ್ಲದೆ ಸಂಪೂರ್ಣ ಹದಗೆಟ್ಟಿದೆ. ರಸ್ತೆಯುದ್ದಕ್ಕೂ ಬೃಹತ್ ಗಾತ್ರದ ಗುಂಡಿಗಳು ನಿರ್ಮಾಣವಾಗಿದ್ದು, ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವಂತಾಗಿದೆ. ನಿತ್ಯ ಶಾಲೆ–ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಗುಂಡಿಗಳ ನಡುವೆ ಸೈಕಲ್ ಅಥವಾ ಬಸ್ಗಳಲ್ಲಿ ಪ್ರಯಾಣಿಸಲು ಹರಸಾಹಸ ಪಡುತ್ತಿದ್ದಾರೆ. ಇದಲ್ಲದೇ, ಕೃಷಿ ಪ್ರಧಾನವಾದ ಈ ಭಾಗದಲ್ಲಿ ಟ್ರ್ಯಾಕ್ಟರ್ ಗಳ ಮೂಲಕ ಕಬ್ಬು, ಮೇವು ಹಾಗೂ ಹೊಟ್ಟು ಸಾಗಿಸುವುದು ದುಸ್ತರವಾಗಿದೆ. ಬಸ್ ಮತ್ತು ಲಾರಿಗಳಂತಹ ದೊಡ್ಡ ವಾಹನಗಳ ಸಂಚಾರವಂತೂ ಸ್ಥಗಿತಗೊಳ್ಳುವ ಹಂತಕ್ಕೆ ತಲುಪಿದೆ. ಕಳಪೆ ಕಾಮಗಾರಿ ಆರೋಪ: “ಕಳೆದ ವರ್ಷವಷ್ಟೇ ಎರಡು ಬಾರಿ…
ಊರು: ಸುರಪುರವೆಂಬ ಹಳ್ಳಿ, ಮಿತ್ರರ ಹೆಸರು: ಸೋಮ, ಭೀಮ, ಮತ್ತು ಚಾಮ. ವರ್ಗ: ಸ್ವಲ್ಪ ಮಧ್ಯಮ ವರ್ಗದ ಬಡತನದ ಜೀವನ, ಮಾತಿಗೆ ಸೇರುವ ಜಾಗ: ಊರ ಹೊರಗಿನ ಅರಳಿ ಕಟ್ಟೆ. ಭೀಮ:- (ಮತ್ತೆ ಅದೇ ಅರಳಿ ಕಟ್ಟೆ ಮೇಲೆ ಕುಳಿತು, ಎಲೆ ಅಡಿಕೆ ಹಾಕಿಕೊಂಡು ಚಾಮನೊಡನೆ ಮಾತನಾಡುತ್ತಾ “ಸಾನೆ ಬಿಸ್ಲು ಅಲ್ವನ್ಲಾ?”, ಅನ್ನುವಾಗ ಅಲ್ಲಿಗೆ ಬರಿಗಾಲಲ್ಲಿ ನಡೆದುಕೊಂಡು ಸೋಮ ಬರುತ್ತಾನೆ, ಅವನನ್ನು ನೋಡಿದ ಭೀಮ ಮುಖ ಬೇರೆ ಕಡೆ ತಿರುಗಿಸಿಕೊಳ್ಳುತ್ತಾನೆ) ಸೋಮ:- (ಮೆಲು ಧನಿಯಲ್ಲಿ) ಯಾಕಪ್ಪ ಭೀಮು ಮುಖ ಆ ಕಡೆ ತಿರುಗಿಸಿಕೊಳ್ಳುತ್ತೀ ನನ್ನ ನೋಡಿ. ಭೀಮ:- (ಖೈಡಾಗಿ) ಇನ್ನೇನು ನಡೆ ಮುಡಿ ಹಾಸಿ ಹಾರ ಹಾಕನೆ? ಸೋಮ:- ಯಾಕಪ್ಪ ಹೀಗೆಲ್ಲಾ ಮಾತನಾಡುತ್ತೀ, ನಾನು ಹಣ ಸಿಗದೆ ಬಹಳ ನೊಂದಿದಿನಪ್ಪಾ… ಭೀಮ:- ಅವತ್ತೇನೋ ವದರಾಡಿಕೊಂಡು ಹೋದೆ ನಂಗೆ ಸಾನೆ ಜನ ಅಔರೆ ದುಡ್ಡು ಕೊಡಕ್ಕೆ ಅಂತ, ಎಲ್ಲ ಮುಖಕ್ಕೆ ಮಂಗಳಾರತಿ ಎತ್ತಿ ಕಳಿಸವ್ರೆ ನಂಗೆ ಗೊತ್ತಿಲ್ವೇ? ಇವನು ಬಂದ ಗ್ಯಾರಂಟಿ ಗಿರಾಕಿ…