Subscribe to Updates
Get the latest creative news from FooBar about art, design and business.
- ಎಚ್ಚೆತ್ತ ಪೊಲೀಸರು: ವಾಹನ ತಪಾಸಣೆಗೆ ಹೊಸ ನಿಯಮ ಬಿಡುಗಡೆ
- ಇಬ್ಬರು ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳಿದ ಮಹಿಳೆಗೆ 14 ವರ್ಷ ಜೈಲು ಶಿಕ್ಷೆ
- ಕನ್ನಡವೇ ನನ್ನ ಮೊದಲ ಆದ್ಯತೆ: ಟೀಕಾಕಾರರಿಗೆ ಶಿವರಾಜ್ ಕುಮಾರ್ ತಿರುಗೇಟು
- ಆಟೋ ಚಾಲಕನಿಗೆ ಚಪ್ಪಲಿಯಿಂದ ಹೊಡೆದ ಯುವತಿ!
- ವನ್ಯಜೀವಿಗಳ ಚಲನೆ ಬಗ್ಗೆ ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ!
- ಜನರ ತೆರಿಗೆ ಹಣ ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ಬಳಕೆ: ಬಿ.ವೈ.ವಿಜಯೇಂದ್ರ ಕಿಡಿ
- ಒಂದೇ ವರ್ಷದಲ್ಲಿ 700 ಬಾಲ್ಯ ವಿವಾಹ: ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡ ಸಿಎಂ ಸಿದ್ದರಾಮಯ್ಯ
- ಶಿಕ್ಷಕನ ಅಮಾನತು ಪ್ರಕರಣ: ಸರ್ಕಾರಿ ನೌಕರರಿಗೆ ಪ್ರತಿಭಟನೆ ಅವಕಾಶವಿಲ್ಲ: ಸಚಿವ ಮಧು ಬಂಗಾರಪ್ಪ
Author: admin
ತಿಪಟೂರು: ತಾಲ್ಲೂಕಿನ ಹಾಲ್ಕುರಿಕೆ ಗ್ರಾಮದಲ್ಲಿ ಅಕ್ರಮ ಮದ್ಯಮಾರಾಟ ಅವ್ಯಹತವಾಗಿ ನಡೆಯುತ್ತಿದರೂ, ಅಬಕಾರಿ ಇಲಾಖೆ ಹಾಗೂ ಪೊಲೀಸ್ ಇಲಾಖೆಗಳು ಕಣ್ಮುಚ್ಚಿ ಕುಳಿತಿವೆ. ಹಾಲ್ಕುರಿಕೆ ಗ್ರಾಮದ ಬಸ್ ನಿಲ್ದಾಣ ಹಾಗೂ ಸಾರ್ವಜನಿಕ ದೇವಾಲಯಗಳ ಬಳಿಯೇ ಅಕ್ರಮವಾಗಿ ಮದ್ಯಮಾರಾಟ ಮಾಡಲಾಗುತ್ತಿದೆ. ಪ್ರತಿದಿನ ಕುಡುಕರ ಹಾವಳಿಗೆ ಜನಹೈರಾಣಾಗಿ ಹೋಗಿದ್ದಾರೆ. ಹಾಲ್ಕುರಿಕೆ ಬಸ್ ನಿಲ್ದಾಣದ ಬಳಿಯೇ ನಾಲ್ಕೈದು ಅಕ್ರಮ ಮದ್ಯಮಾರಾಟದ ಅಂಗಡಿಗಳಿವೆ, ಒಂದೆಡೆ ಬಸ್ ನಿಲ್ದಾಣ, ಇನ್ನೊಂದೆಡೆ ತರಳಬಾಳು ವಿದ್ಯಾಸಂಸ್ಥೆಗೆ ಸೇರಿದ ಶಾಲಾ ಕಾಲೇಜುಗಳು ಹಾಗೂ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು. ಬ್ಯಾಂಕ್ ಇದ್ದರೂ ಸಹ. ರಾಜಾರೋಷವಾಗಿಯೆ ಅಕ್ರಮವಾಗಿ ಅಂಗಡಿಗಳಲ್ಲಿ ಮದ್ಯಮಾರಾಟ ಮಾಡಲಾಗುತ್ತಿದೆ. ಪ್ರತಿದಿನ ಹಾಲ್ಕುರಿಕೆ ಸೇರಿದಂತೆ ಸುತ್ತಮುತ್ತಲ ಹಳ್ಳಿಗಳ ಜನ ಬಸ್ ಸೌಕರ್ಯಕ್ಕಾಗಿ ಹಾಲ್ಕುರಿಕೆಗೆ ಬರಬೇಕಿದೆ. ಆದರೆ, ಬಸ್ ನಿಲ್ದಾಣದ ಬಳಿ ಇತರ ಸರಕು ಸರಜಾಮುಗಳ ಮಾರಾಟಕ್ಕಿಂತ ಅಕ್ರಮ ಮದ್ಯವೇ ನಿರ್ಭಯವಾಗಿ ಮಾರಾಟವಾಗುತ್ತಿದೆ. ಬಸ್ ಗಾಗಿ ಕಾಯುವ ಮಹಿಳೆಯರು, ವೃದ್ದರು. ಮಕ್ಕಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಕುಡುಕರ ಕಾಟಕ್ಕೆ ಬೇಸತ್ತು ಹೋಗಿದ್ದಾರೆ. ಮದ್ಯಪಾನ ಮಾಡುವುದು. ಬಸ್ ನಿಲ್ದಾಣದ…
ತುಮಕೂರು: ದಕ್ಷಿಣ ಕರ್ನಾಟಕದ ಏಕೈಕ ಸರ್ಕಾರಿ ಚಿತ್ರಕಲಾ ಪದವಿ ಕಾಲೇಜು 2025–26ನೇ ಸಾಲಿನಿಂದ “ತುಮಕೂರು ನಗರದ ರೇಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡದಲ್ಲಿ ನಡೆಯುತ್ತಿದೆ” ಈ ಕಾಲೇಜಿನಲ್ಲಿ ಕಳೆದ 30 ವರ್ಷಗಳಿಂದ ಬಿ.ವಿ.ಎ.ಪೇಟಿಂಗ್ ಪದವಿ ಶಿಕ್ಷಣವನ್ನು ನೀಡಲಾಗುತ್ತಿದೆ. ಇದರೊಂದಿಗೆ 2024—25 ನೇ ಸಾಲಿನಿಂದ ಬಡ–ವಿದ್ಯಾರ್ಥಿಗಳಿಗಾಗಿ ಸರ್ಕಾರದ ಅನುಮತಿ ಮೇರೆಗೆ ಹೊಸದಾಗಿ ಬಿ.ವಿ.ಎ.ಅನಿಮೇಶನ್ ಪದವಿ ಮತ್ತು ಬಿ.ವಿ.ಎ. ಗ್ರಾಫಿಕ್ಸ್ ಡಿಸೈನ್ ಪದವಿ ಕೋರ್ಸ್ ಗಳನ್ನು ಪ್ರಾರಂಭಿಸಲಾಗಿದೆ. ಪ್ರತಿವರ್ಷವೂ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರ ರಾಜ್ಯಗಳಿಂದ ಈ ಕಾಲೇಜಿಗೆ ಚಿತ್ರಕಲಾ ಪದವಿ ಶಿಕ್ಷಣ ಬಯಸಿ ಅನೇಕ ವಿದ್ಯಾರ್ಥಿಗಳು ಬರುತ್ತಿದ್ದಾರೆ. ಈ ಕಾಲೇಜಿನಲ್ಲಿ ಎಲ್ಲ ಮೂಲಭೂತ ಸೌಕರ್ಯಗಳ ಜೊತೆಗೆ ನುರಿತ ಅಧ್ಯಾಪಕರಿದ್ದು, ಗುಣಮಟ್ಟದ ಕಲಾ ಶಿಕ್ಷಣಕ್ಕೆ ಹೆಚ್ಚಿನ ಆಧ್ಯತೆ ನೀಡಲಾಗುತ್ತಿದೆ. ಈ ಪದವಿಗಳು ವಿವಿಧ ವೃತ್ತಿ ಕೌಶಲ್ಯಗಳನ್ನು ಒಳಗೊಂಡಿದ್ದು, ವಿವಿಧ ಉದ್ಯೋಗಾವಕಾಶಗಳನ್ನು ಪಡೆಯಬಹುದಾಗಿದೆ. ಹಾಗೂ ಪದವಿ ಪಡೆದ ವಿದ್ಯಾರ್ಥಿಗಳು ಸ್ವಯಂ ಉದ್ಯೋಗ ಕೈಗೊಳ್ಳಬಹುದಾಗಿದೆ. ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ…
ಬೀದರ್: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (ಕೆಕೆಆರ್ ಟಿಸಿ) ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟಿರುವ ಘಟನೆ ಔರಾದ್ ತಾಲ್ಲೂಕಿನ ಶೆಂಬಳ್ಳಿ ಕ್ರಾಸ್ ಸಮೀಪ ಗುರುವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ನಡೆದಿದೆ. ಔರಾದ್ ತಾಲ್ಲೂಕಿನ ಜೊನ್ನೆಕೇರಿ ಗ್ರಾಮದ ಯುವರಾಜ್ ಶರಣಪ್ಪಾ ಬಿರಾದಾರ (35) ಮೃತರು ಪತ್ನಿ ತಂದೆ- ತಾಯಿ, ಸಹೋದರರು, 2 ವರ್ಷದ ಪುತ್ರ ಹಾಗೂ ಬಂಧು ಮಿತ್ರರಿದ್ದಾರೆ ಬೀದರ್ ನಿಂದ ಬೈಕ್ ಮೇಲೆ ಸ್ವಗ್ರಾಮಕ್ಕೆ ತೆರಳುತ್ತಿದ್ದರು ರಾಷ್ಟ್ರೀಯ ಹೆದ್ದಾರಿ –161(ಎ) ರಲ್ಲಿ ಔರಾದ್ ಕಡೆಯಿಂದೆ ಬಂದ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ತೀವ್ರ ಗಾಯಗೊಂಡ ಯುವರಾಜ ಅವರನ್ನು ಬೀದರ್ ಬ್ರಿಮ್ಸ್ ಆಸ್ಪತ್ರೆಗೆ ಸಾಗಿಸಿದರು, ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ ಸ್ಥಳಕ್ಕೆ ಸಂತಪೂರ ಪೊಲೀಸ್ ಠಾಣೆ ಪಿಎಸ್ ಐ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲಿಸಿದರು.ಸಂತಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿದೆ ಎಂದು ತಿಳಿಸಿದ್ದಾರೆ ವರದಿ:…
ಬೆಂಗಳೂರು: ಕನ್ನಡ ವಿವಾದಕ್ಕೆ ಸಂಬಂಧಿಸಿದಂತೆ ಕಮಲ್ ಹಾಸನ್ ಕ್ಷಮೆ ಕೇಳಲ್ಲ ಎಂದು ಹೇಳಿದ ಬೆನ್ನಲ್ಲೇ ಅವರ ಭಾವಚಿತ್ರದ ಬ್ಯಾನರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ನಗರದ ಬಸವೇಶ್ವರನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪವಿತ್ರ ಪ್ಯಾರಡೈಸ್ ಸಿಗ್ನಲ್ ಬಳಿ ಈ ಘಟನೆ ನಡೆದಿದೆ. ರಾತ್ರೋ ರಾತ್ರಿ ಕನ್ನಡ ಅಭಿಮಾನಿಯೊಬ್ಬ ಕಮಲ್ ಹಾಸನ್ ಹೇಳಿಕೆಗೆ ಧಿಕ್ಕಾರ ಕೂಗಿ ಕಮಲ್ ಹಾಸನ್ ಅವರ ಭಾವಚಿತ್ರದ ಬ್ಯಾನರ್ಗೆ ಬೆಂಕಿ ಹಚ್ಚಿದ್ದಾರೆ. ಫೋಟೋಗೆ ಬೆಂಕಿ ಹಚ್ಚಿದ ಬೆನ್ನಲ್ಲೇ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ನೀರು ಹಾಕಿ ಬ್ಯಾನರ್ ನ್ನು ರಸ್ತೆಯಿಂದ ತೆಗೆದು ಹಾಕಿದ್ದಾರೆ. `ಥಗ್ ಲೈಫ್’ ಸಿನಿಮಾದ ಪ್ರಚಾರದ ವೇಳೆ ಸಿನಿಮಾದ ನಾಯಕ ಕಾಲಿವುಡ್ ನಟ ಕಮಲ್ ಹಾಸನ್ `ತಮಿಳಿನಿಂದ ಕನ್ನಡ ಹುಟ್ಟಿದ್ದು’ ಎಂದು ಹೇಳಿಕೆ ನೀಡಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW
ಬೆಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 28 ವರ್ಷದ ನೃತ್ಯ ಶಿಕ್ಷಕನನ್ನು ಬಂಧಿಸಲಾಗಿದೆ ಮೇ 24 ರಂದು ಕಾಡುಗೋಡಿ ಪ್ರದೇಶದಲ್ಲಿ ಈ ಘಟನೆ ನಡೆದಿತ್ತು. ಭಾರತಿ ಕಣ್ಣನ್ ಬಂಧಿತ ಆರೋಪಿಯಾಗಿದ್ದಾನೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂತ್ರಸ್ತೆಯ ಬಳಿ ಕಾರು ನಿಲ್ಲಿಸಿದ್ದಾನೆ, ನಂತರ ತಾನು ನೃತ್ಯ ಶಿಕ್ಷಕ ಎಂದು ಪರಿಚಯಿಸಿಕೊಂಡು ನೃತ್ಯ ತರಗತಿಗಳ ಬಗ್ಗೆ ವಿವರಗಳನ್ನು ವಿವರಿಸುವ ನೆಪದಲ್ಲಿ ಆಕೆಯನ್ನು ಕಾರಿಗೆ ಹತ್ತಿಸಿಕೊಂಡಿದ್ದಾನೆ. ಸಂತ್ರಸ್ತೆ ಕಾರು ಹತ್ತುತ್ತಿದ್ದಂತೆ, ಆರೋಪಿ ಬಾಗಿಲುಗಳನ್ನು ಲಾಕ್ ಮಾಡಿ ಸ್ವಲ್ಪ ದೂರ ಹೋಗಿದ್ದಾನೆ. ಈ ಸಮಯದಲ್ಲಿ, ಅವನು ಹುಡುಗಿಯ ಜೊತೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ವಲ್ಪ ಸಮಯದ ನಂತರ ಕಣ್ಣನ್, ಸಂತ್ರಸ್ತೆಯನ್ನು ತಾನು ಕರೆದುಕೊಂಡು ಹೋದ ಸ್ಥಳದಲ್ಲೇ ಇಳಿಸಿದ್ದಾನೆ. ಸಂತ್ರಸ್ತೆ ಮನೆಗೆ ತಲುಪಿದ ನಂತರ, ಘಟನೆಯ ಬಗ್ಗೆ ತನ್ನ ಪೋಷಕರಿಗೆ ತಿಳಿಸಿದ್ದಾಳೆ. ಅದಾದ ಮೇಲೆ ಅವರು ದೂರು ದಾಖಲಿಸಿದ್ದರು, ನಂತರ, ಕಣ್ಣನ್ ನನ್ನು ಬಂಧಿಸಲಾಯಿತು ಎಂದು ವಿವರಿಸಿದ್ದಾರೆ. ನಮ್ಮತುಮಕೂರಿನ ಕ್ಷಣ…
ಬೆಂಗಳೂರು: ಡೆವಿಲ್ ಸಿನಿಮಾ ಶೂಟಿಂಗಾಗಿ ದುಬೈ ಮತ್ತು ಯೂರೋಪ್ ಗೆ ತೆರಳಲು ಅನುಮತಿ ಕೋರಿ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ. ಜೂನ್ 1 ರಿಂದ 25 ರವರೆಗೆ 25 ದಿನಗಳ ಕಾಲ ವಿದೇಶಕ್ಕೆ ತೆರಳಲು ಅನುಮತಿ ಕೋರಿ ಸಿಆರ್ ಪಿಸಿ ಸೆಕ್ಷನ್ 439(1) (b) ಅಡಿ 57 ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಹಾಕಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್ನ ಎರಡನೇ ಆರೋಪಿ ದರ್ಶನ್ ಅವರು ಜಾಮೀನಿನ ಮೇಲೆ ಹೊರಗಿದ್ದಾರೆ. ಜಾಮೀನು ನೀಡುವಾಗ ವಿದೇಶಕ್ಕೆ ತೆರಳುವಂತಿಲ್ಲ ಎಂಬ ಷರತ್ತನ್ನು ಕೋರ್ಟ್ ವಿಧಿಸಿತ್ತು. ಹೀಗೆ ತೆರಳಬೇಕು ಎಂದರೆ ಕೋರ್ಟ್ ಅನುಮತಿ ಕಡ್ಡಾಯ ಎಂಬ ಷರತ್ತನ್ನು ನ್ಯಾಯಾಲಯ ವಿಧಿಸಿತ್ತು. ಈಗ ದರ್ಶನ್ ಅವರು ವಿದೇಶಕ್ಕೆ ತೆರಳಲು ಅನುಮತಿ ಕೋರಿ 57ನೇ ಸಿಸಿಹೆಚ್ ಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಕೋರ್ಟ್ ಇದರಲ್ಲಿ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ಚೆನ್ನೈ: ಕನ್ನಡ ತಮಿಳಿನಿಂದ ಹುಟ್ಟಿತು ಎನ್ನುವ ತಮಿಳಿನ ಮೆಗಾಸ್ಟಾರ್ ಕಮಲ್ ಹಾಸನ್ ಅವರ ಹೇಳಿಕೆ ವಿರುದ್ಧ ವ್ಯಾಪಕ ಆಕ್ರೋಶ ಹುಟ್ಟಿಕೊಂಡ ಬೆನ್ನಲ್ಲೇ ತಮ್ಮ ಹೇಳಿಕೆಗೆ ಕಮಲ್ ಹಾಸನ್ ವಿವರಣೆ ನೀಡಿದ್ದಾರೆ. ಥಗ್ ಲೈಫ್ ನಟ– ಕಮ್ ರಾಜಕಾರಣಿ ಕಮಲ್ ಹಾಸನ್, “ನಾನು ಪ್ರೀತಿಯಿಂದ ಹೇಳಿದ್ದೇನೆ. ಬಹಳಷ್ಟು ಇತಿಹಾಸಕಾರರು ನನಗೆ ಭಾಷಾ ಇತಿಹಾಸವನ್ನು ಕಲಿಸಿದ್ದಾರೆ. ನಾನು ಬೇರೆನೂ ಹೇಳಿಲ್ಲ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು. ತಮಿಳುನಾಡು ಎಲ್ಲರಿಗೂ ಆಶ್ರಯ ನೀಡುವ ಅಪರೂಪದ ರಾಜ್ಯವಾಗಿದೆ.‘ತಮಿಳುನಾಡಿನಲ್ಲಿ ಮೆನನ್ ಮುಖ್ಯಮಂತ್ರಿ ಆಗಿದ್ದರು. ರೆಡ್ಡಿ ಒಬ್ಬರು ಮುಖ್ಯಮಂತ್ರಿ ಆಗಿದ್ದಾರೆ. ತಮಿಳರೊಬ್ಬರು ಸಿಎಂ ಆಗಿದ್ದು, ಕನ್ನಡಿಗ ಅಯ್ಯಂಗಾರ್ ಒಬ್ಬರು ಮುಖ್ಯಮಂತ್ರಿಯಾಗಿದ್ದಾರೆ ಎಂದು ತಿಳಿಸಿದರು. ಥಗ್ ಲೈಫ್ ಬ್ಯಾನ್ ಕುರಿತ ಕರೆಗೆ ಪ್ರತಿಕ್ರಿಯಿಸಿದ ಕಮಲ್ ಹಾಸನ್, ಕರ್ನಾಟಕದ ಜನರು ನನ್ನನ್ನು ಮತ್ತು ನನ್ನ ಸಿನಿಮಾ ನೋಡಿಕೊಳ್ಳುತ್ತಾರೆ ಎಂಬ ಭರವಸೆ ವ್ಯಕ್ತಪಡಿಸಿದರು. ಕರ್ನಾಟಕದಿಂದ ಬಂದ ಮುಖ್ಯಮಂತ್ರಿಯೊಬ್ಬರಿಂದ (ಜಯಲಲಿತಾ) ಸಮಸ್ಯೆ ಎದುರಾದಾಗ ನನಗೆ ಬೆಂಬಲ ನೀಡಿದ್ದು ಕರ್ನಾಟಕ. ಇಲ್ಲಿಗೆ ಬಾ, ಮನೆ ಕೊಡುತ್ತೇವೆ, ಎಲ್ಲೂ…
ತುಮಕೂರು: ಸಂವಿಧಾನಾತ್ಮಕ ಮೌಲ್ಯಗಳು ವಿಶೇಷ ಉಪನ್ಯಾಸ ಕಾರ್ಯಕ್ರಮಗಳನ್ನು ಬುಧವಾರ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ತುಮಕೂರುನಲ್ಲಿ ನಡೆಸಲಾಯಿತು. ವಿದ್ಯಾರ್ಥಿಗಳನ್ನು ಉದ್ದೇಶಿಸಿ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಮಂಜುನಾಥ ಆರ್. ಮಾತನಾಡಿ, ಭಾರತದ ಸಂವಿಧಾನ ನಮ್ಮ ಜೀವ ಮತ್ತು ಜೀವನದ ವಿಧಾನಗಳ ರಕ್ಷಕವಾಗಿದೆ. ನಮ್ಮ ವ್ಯಕ್ತಿತ್ವದ ಘನತೆ ಮತ್ತು ಗೌರವಗಳ ಉನ್ನತಿಯ ಮಾರ್ಗದರ್ಶಕವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸಂವಿಧಾನದ ಮೌಲ್ಯಗಳನ್ನು ಅನುಸರಿಸಬೇಕು. ಮತ್ತು ಕುಟುಂಬ, ಸಮಾಜ, ಸಂವಿಧಾನ, ದೇಶದ ಪ್ರಭಾವಿ ಪ್ರಜೆಯಾಗಿ ಹೊರಹೊಮ್ಮಲು ಇದು ಸಹಕಾರಿಯಾಗುತ್ತದೆ ಎಂದು ತಿಳಿಸಿದರು. ತುಮಕೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಸಯೀದ್ ಅಕ್ರಂ ಅಲಿ ಅವರು ಮಾತನಾಡಿ, ಪ್ರಸ್ತುತ ಜನಪ್ರತಿನಿಧಿಗಳು, ಸರ್ಕಾರಗಳು, ಮತ್ತು ನ್ಯಾಯಾಂಗಗಳ ವರ್ತನೆ ಸಂವಿಧಾನಾತ್ಮಕವಾಗಿರಬೇಕು. ದೇಶದ ಪ್ರಜೆಗಳು ಇಂದು ತಮ್ಮ ಜವಾಬ್ದಾರಿಗಳನ್ನು ಅರಿತು ನಡೆದುಕೊಳ್ಳುವ ಅನಿವಾರ್ಯತೆಗಳ ಅರಿವಿನ ಬಗ್ಗೆ ಮಾಹಿತಿ ತಿಳಿಸಿದರು. ಪ್ರಾಂಶುಪಾಲರಾದ ಸಿ. ಸಿ.ಬಾರಕೇರ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂವಿಧಾನದಲ್ಲಿ ನಮಗೆ ಹಕ್ಕುಗಳು ಮತ್ತು ಕರ್ತವ್ಯಗಳನ್ನು ನೀಡಲಾಗಿದೆ. ನಾವುಗಳು…
ಬೀದರ್ : ಸಾರ್ವಜನಿಕರು ಕೊರೋನಾ ಬಗ್ಗೆ ಭಯ ಪಡುವ ಅಗತ್ಯವಿಲ್ಲ, ಜಾಗೃತಿ ಅಗತ್ಯವಾಗಿದೆ. ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯಿಂದ ಪರಿಸ್ಥಿತಿ ಎದುರಿಸಲು ಬ್ರಿಮ್ಸ್ ಹಾಗೂ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದ್ದಾರೆ. ಸಾರ್ವಜನಿಕರು ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆಯಿಂದ ನೀಡುವ ಮುನ್ನೆಚ್ಚೆರಿಕೆ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅವರು ತಿಳಿಸಿದ್ದಾರೆ. ಶಂಕಿತ ವ್ಯಕ್ತಿಗಳ ರಕ್ತ ಹಾಗೂ ಗಂಟಲಿನ ದ್ರವದ ಮಾದರಿಯನ್ನು ಸಂಗ್ರಹಿಸಿ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಲಾಗುತ್ತದೆ. ಸೋಂಕಿತ ವ್ಯಕ್ತಿ ಕೆಮ್ಮಿದಾಗ, ಸೀನಿದಾಗ ಪಕ್ಕದಲ್ಲಿರುವ ವ್ಯಕ್ತಿಗೆ ತುಂತುರು ಹನಿಗಳ ಮೂಲಕ ಈ ರೋಗ ಹರಡುತ್ತದೆ. ಆದುದ್ದರಿಂದ ಕೆಮ್ಮು, ನೆಗಡಿ ಹೊಂದಿರುವ ಯಾವುದೇ ವ್ಯಕ್ತಿಯು ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಿದಾಗ ಮೂಗು ಹಾಗೂ ಬಾಯಿ ಮುಚ್ಚಿಕೊಳ್ಳಲು ಮಾಸ್ಕ್ ಬಳಸಬೇಕು. ಈ ತರಹದ ಲಕ್ಷಣ ಹೊಂದಿರದ ವ್ಯಕ್ತಿಗಳು ಮಾಸ್ಕ್ ಬಳಸುವ ಅವಶ್ಯಕತೆ ಇರುವುದಿಲ್ಲ ಎಂದು ಅವರು ಮಾಹಿತಿ…
ಅರಸಿಕೆರೆ: ತಾಲ್ಲೂಕಿನ ಮಾವಿನಕೆರೆ ಗ್ರಾಮದ ಶ್ರೀ ಹುಚ್ಚಮ್ಮದೇವಿ ದೇವಸ್ಥಾನದ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಡಾ.ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ರೂ 50ಸಾವಿರ ಮೊತ್ತದ ಡಿಡಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಿಪಟೂರು ತಾಲ್ಲೂಕಿನ ಯೋಜನಾಧಿಕಾರಿಗಳಾದ ಕೆ.ಉದಯ್ ರವರ ನೇತೃತ್ವದಲ್ಲಿ ವಿತರಿಸಲಾಯಿತು. ಈ ಸಂದರ್ಭ ಮಾತನಾಡಿದ ಧಾರ್ಮಿಕ ಮುಜರಾಯಿ ಇಲಾಖೆ ಸದಸ್ಯರಾದ ಶ್ರೀಧರ್, ಧರ್ಮಸ್ಥಳ ಕ್ಷೇತ್ರದಿಂದ ರಾಜ್ಯದ ಜನತೆಗೆ ಧಾರ್ಮಿಕ ಕೇಂದ್ರಗಳ ಜೀರ್ಣೋದ್ದಾರಕ್ಕೆ ಸ್ವಾಮಿಯ ಪ್ರಸಾದದ ರೂಪದಲ್ಲಿ ಕೋಟ್ಯಾಂತರ ರೂ.ಗಳ ಹಣ ಸಹಾಯ ದೊರೆತಿದ್ದು, ಈ ಒಂದು ಉಡುಗೊರೆ ನಮ್ಮ ಗ್ರಾಮದ ಶ್ರೀ ಹುಚ್ಚಮ್ಮದೇವಿ ದೇವಸ್ಥಾನದ ಜೀರ್ಣೋದ್ದಾಕ್ಕೆ ದೊರೆತಿರುವುದು ಅತೀವ ಸಂತೋಷವುಂಟಾಗಿದೆ ಎಂದು ತಿಳಿಸಿದರು. ಬಳಿಕ ಮಾತನಾಡಿದ ಯೋಜನಾಧಿಕಾರಿ ಉದಯ್ ಕೆ., ವೀರೇಂದ್ರ ಹೆಗ್ಗಡೆಯವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಶಿಕ್ಷಣ ವಿಭಾಗ, ಮಹಿಳಾ ಸಬಲೀಕರಣ, ಕೃಷಿ ಚಟುವಟಿಕೆಗಳು, ರಾಜ್ಯದ ಜನತೆಗೆ ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ ಪ್ರಗತಿನಿಧಿ ಸೌಲಭ್ಯ, ಕೆರೆ ನಿರ್ಮಾಣ,…