Subscribe to Updates
Get the latest creative news from FooBar about art, design and business.
- ಗಣೇಶನ ಹಬ್ಬ, ಬಕ್ರೀದ್ ಸೌಹಾರ್ದತೆಯಿಂದ ಆಚರಿಸಿ: ವೃತ್ತ ನಿರೀಕ್ಷಕ ಪ್ರಸನ್ನ ಕುಮಾರ್ ಮನವಿ
- ಸರಗೂರು: ಶಾಸಕ ಸಿ.ಅನಿಲ್ ಕುಮಾರ್ ಅವರಿಗೆ ಸಚಿವ ಸ್ಥಾನ ನೀಡಲು ಒತ್ತಾಯ!
- ಸಿಎಂ ಸಿದ್ದರಾಮಯ್ಯ ಮಾದಿಗರ ವಿರೋಧಿ: ಸುಧಾಕರ ಕೋಟೆ ಕಿಡಿ
- ಓದಿನಿಂದ ಜೀವನ ಪರಿವರ್ತನೆ ಆಗುತ್ತದೆ: ಮಹದೇವಸ್ವಾಮಿ
- ಸಹಕಾರ ಸಚಿವ ಕೆ.ಎನ್.ರಾಜಣ್ಣ ಸಚಿವರಾಗಿ ಮುಂದುವರಿಸಲು ಪಾಳೇಗಾರ್ ಲೋಕೇಶ್ ಒತ್ತಾಯ
- ಬೆಳಕಿನ ವೇಗದ ಬಗ್ಗೆ ಒಂದು ಸಣ್ಣ ಆತ್ಮಾವಲೋಕನ
- ಕೆ.ಎನ್.ರಾಜಣ್ಣ ವಜಾ ಖಂಡಿಸಿ: ತುಮಕೂರಿನಲ್ಲಿ ಭಾರೀ ಪ್ರತಿಭಟನೆ
- ಗ್ರಾ.ಪಂ. ವ್ಯಾಪ್ತಿಯಲ್ಲಿ ಅಭಿವೃದ್ಧಿ ಸಹಿಸದೇ ಸುಖಾಸುಮ್ಮನೆ ಅಪಪ್ರಚಾರ: ಗ್ರಾ.ಪಂ. ಅಧ್ಯಕ್ಷೆ ಅನಿತಾಲಕ್ಷ್ಮಿ ನಾಗರಾಜು ಬೇಸರ
Author: admin
ವರದಿ: ಮಂಜುಸ್ವಾಮಿ ಎಂ.ಎನ್. ಕೊರಟಗೆರೆ: ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿದ ನಂತರ ಶವವನ್ನು ತುಂಡು ತುಂಡಾಗಿ ಕತ್ತರಿಸಿದ ಪ್ರಕರಣದಲ್ಲಿ ಶುಕ್ರವಾರವು ಸಹ ಮತ್ತೆ ಕೊರಟಗೆರೆ ತಾಲ್ಲೂಕಿನ ಸುತ್ತ–ಮುತ್ತಲಿನ 12 ಸ್ಥಳಗಳಲ್ಲಿ ಮಹಿಳೆಯ ಶವದ ತುಂಡಿನ ಪಾಕೇಟ್ ಜೊತೆಯಲ್ಲಿ ಕಬ್ಬಿಣದ ಮೇಟಲ್ ಪೀಸ್ಗಳು ಸಹ ಪೊಲೀಸರಿಗೆ ಸ್ಥಳ ಪರಿಶೀಲನೆ ವೇಳೆ ದೊರೆತಿವೆ. ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಹೋಬಳಿಯ ಚಿಂಪುಗಾನಹಳ್ಳಿ ಸೇರಿದಂತೆ 8 ಕಡೆ ಮಹಿಳೆಯ ಕೈಗಳು ಮತ್ತು ದೇಹದ ಭಾಗಗಳು ಸಿಕ್ಕಿದ್ದವು. ಮತ್ತೆ ಶುಕ್ರವಾರ ರಾತ್ರಿ ಸಿದ್ದರಬೆಟ್ಟ ಮತ್ತು ಮಲ್ಲೇಕಾವು ಸುತ್ತಮುತ್ತ 10 ಕಡೆಯ ವಿವಿಧ ಸ್ಥಳಗಳಲ್ಲಿ ಕಪ್ಪು ಕವರ್ ನ ಪಾಕೇಟ್ ನಲ್ಲಿ ಮಹಿಳೆಯ ಕಾಲು, ದೇಹ ಸೇರಿದಂತೆ ತಲೆಯು ಸಹ ಪತ್ತೆಯಾಗಿದೆ. ಕೊರಟಗೆರೆಯ ಸಿದ್ದರಬೆಟ್ಟದ ಸಮೀಪ ಕೊಳೆತ ಸ್ಥಿತಿಯಲ್ಲಿ ಕಾಲುಗಳು ಪತ್ತೆಯಾಗಿದೆ, ಮರೇನಾಯಕನಹಳ್ಳಿ ಗ್ರಾಮದಲ್ಲಿ ಮಹಿಳೆಯ ಮಾಂಸದ ತುಂಡಿನ ಪ್ಯಾಕೆಟ್ ನಲ್ಲಿ ಹಸಿರು ಬಣ್ಣದ ಬಟ್ಟೆ ಪತ್ತೆ, ಗಟ್ಟಿತಿಮ್ಮನಹಳ್ಳಿ, ಮಲ್ಲೇಕಾವು, ಚಿಕ್ಕಾವಳಿ ಕೆರೆ, ಲಿಂಗಾಪುರ, ಜೋನಿಗರಹಳ್ಳಿ ಸೇರಿದಂತೆ ಇಂದು ೧೨…
ಪಾವಗಡ: ತಾಲೂಕಿನ ಕೋಟಗುಡ್ಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಕೋಟಗುಡ್ಡ ಕಡಪಲ ಕೆರೆ ಅರೆಕ್ಯಾತನಹಳ್ಳಿ ಗ್ರಾಮಗಳಲ್ಲಿ ಜೆಡಿಎಸ್ ಪಕ್ಷದ ಜಾತ್ಯತೀತ ಜನತಾದಳ ವತಿಯಿಂದ ಸದಸ್ಯತ್ವ ನೋಂದಣಿ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಕೆ.ಎಂ.ತಿಮ್ಮರಾಯಪ್ಪ ಜಿಲ್ಲಾ ಜೆಡಿಎಸ್ ಅಧ್ಯಕ್ಷರಾದ ಆರ್.ಸಿ.ಅಂಜನಪ್ಪ, ರಾಜ್ಯ ಕಮಿಟಿ ಸದಸ್ಯರಾದ ಎನ್.ತಿಮ್ಮಾರೆಡ್ಡಿ, ತಾಲೂಕ್ ಜೆಡಿಎಸ್ ಅಧ್ಯಕ್ಷರಾದ ಎನ್.ಎ.ಈರಣ್ಣ, ಮಹಾ ಪ್ರಧಾನ ಕಾರ್ಯದರ್ಶಿ ಸೊಗಡು ವೆಂಕಟೇಶ್ ಕೋಟುಗುಡ್ಡ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಅಂಜಯ್ಯ, ಗೌರವ ಅಧ್ಯಕ್ಷರಾದ ರಾಜಶೇಖರಪ್ಪ, ಹೋಬಳಿ ಘಟಕದ ಅಧ್ಯಕ್ಷರಾದ ಹನುಮಂತ ರಾಯ, ಹೊಟ್ಟೆ ಬೊಮ್ಮನಹಳ್ಳಿ ಸರ್ವೇಶ್ವರ ರೆಡ್ಡಿ, ನಾಗರೆಡ್ಡಿ, ಉದಯ್ ಕುಮಾರ್, ಈರಣ್ಣ, ಮಂಜುನಾಥ ಇನ್ನಿತರೆ ಎಲ್ಲಾ ಗ್ರಾಮಗಳ ಮುಖಂಡರು ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮೊಬೈಲ್ ಮುಖಾಂತರ ಆನ್ಲೈನ್ ಸದಸ್ಯತ್ವ ಮತ್ತು ಪುಸ್ತಕದಲ್ಲಿ ಸದಸ್ಯರ ಆಯ್ಕೆಯನ್ನು ಮಾಡಿ ದಾಖಲು ಮಾಡಲಾಯಿತು. ಎಲ್ಲಾ ಗ್ರಾಮಗಳಲ್ಲಿ ಅಭೂತಪೂರ್ವ ಸ್ವಾಗತ ದೊರೆತಿದ್ದು ನೂರಾರು ಜನ ಕಾರ್ಯಕರ್ತರು ಮುಖಂಡರು ಪ್ರತಿ ಗ್ರಾಮದಲ್ಲಿ ಭಾಗವಹಿಸಿದ್ದರು. ರೈತ ಘಟಕದ ಗಂಗಾಧರ ನಾಯ್ಡು…
ಸರಗೂರು: ತಾಲೂಕಿನ ಹುಸ್ಕೂರು ಹಾಡಿಗೆ ಬಸ್ ಸಂಪರ್ಕ ಕಲ್ಪಿಸಲು ಆಗ್ರಹಿಸಿ ಅಖಿಲ ಭಾರತ ಜನಾಧಿಕಾರ ಸುರಕ್ಷಾ ಸಮಿತಿಯ ನೇತೃತ್ವದಲ್ಲಿ ಗುರುವಾರದಂದು ಪ್ರತಿಭಟನೆಯನ್ನು ಮಾಡಲಾಯಿತು. ಸಮಿತಿಯ ಸಂಚಾಲಕ ಸುನಿಲ್ ಟಿ.ಆರ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ಸಂಪೂರ್ಣವಾಗಿ ಅರಣ್ಯ ಒಳಗೆ ಇರುವ ಈ ಹಾಡಿಗೆ ಕನಿಷ್ಠಪಕ್ಷ ಬೆಳಿಗ್ಗೆ 8:30ಕ್ಕೆ ಹಾಡಿಯಿಂದ ಸರಗೂರಿಗೆ ಹೊರಡುವಂತೆ ಹಾಗೂ ಸಂಜೆ 4 ಗಂಟೆಗೆ ಸರಗೂರಿನಿಂದ ಹುಸ್ಕೂರು ಹಾಡಿಗೆ ಬರುವಂತೆ ಬಸ್ ವ್ಯವಸ್ಥೆ ಮಾಡಬೇಕು. ಈಗಾಗಲೇ ದಡದಹಳ್ಳಿ ಮಾರ್ಗವಾಗಿ ಹೋಗುವ ಬಸ್ ಇಲ್ಲಿಗೆ ಬಂದು ಹೋಗುವಂತೆ ಮಾಡಬೇಕು. ಈ ವಿಚಾರವಾಗಿ ಐಟಿಡಿಪಿ ಇಲಾಖೆ,ಸಾರಿಗೆ ಇಲಾಖೆಯ ನಿರ್ಲಕ್ಷ್ಯ ಕಾರಣವಾಗಿದೆ. ಇದರಿಂದ ಬಡ ಆದಿವಾಸಿ ಜನರು ಹಾಗೂ ಅವರ ಮಕ್ಕಳು ಎಲ್ಲಾ ನಾಗರಿಕ ಸೌಲಭ್ಯ ಮತ್ತು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಹಾಗಾಗಿ ಈ ಕೂಡಲೇ ಸಮಸ್ಯೆಯನ್ನು ಬಗೆಹರಿಸದಿದ್ದರೆ ಮುಂದಿನ ಹಂತದಲ್ಲಿ ಹುಸ್ಕೂರು ಹಾಡಿ ಜನರು ಸೇರಿ ಅನಿರ್ದಿಷ್ಟಾವಧಿ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಲಾಗುವುದು. ಹಾಡಿಯ ಮುಖಂಡ ತಿರುಪತಿ ಮಾತನಾಡಿ, ಪ್ರತಿದಿನ ಆನೆ ಭಯದಿಂದ ನಡೆದುಕೊಂಡು…
ಕೊರಟಗೆರೆ: ವರಮಹಾಲಕ್ಷ್ಮಿ ಹಬ್ಬರ ಹಿನ್ನೆಲೆ ಕೊರಟಗೆರೆ ತಾಲೂಕಿನ ಗೊರವನಹಳ್ಳಿಯ ಮಹಾಲಕ್ಷ್ಮಿ ಸನ್ನಿಧಾನಕ್ಕೆ ಭಕ್ತಾದಿಗಳ ಸಾಗರವೇ ಹರಿದು ಬಂದಿದೆ. ಬೆಳಗ್ಗೆ 6:00 ಯಿಂದಲೇ ಪಂಚಾಮೃತ ಅಭಿಷೇಕ ಕುಂಕುಮ ಅಭಿಷೇಕ ಹೂವಿನ ಅಭಿಷೇಕ ಸೇರದಂತೆ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು, ವಿವಿಧ ವಿಶೇಷ ಹೂಗಳಿಂದ ಗೊರವನಹಳ್ಳಿ ಮಹಾಲಕ್ಷ್ಮಿ ಮಂಟಪ ಹಾಗೂ ದೇವಿಯ ಅಲಂಕಾರ ಮಾಡಲಾಗಿತ್ತು. ದರ್ಶನಕ್ಕೆ ಬಂದ ಭಕ್ತಾದಿಗಳು ತಮ್ಮ ಇಷ್ಟಾರ್ಥಗಳನ್ನು ನೆರವೇರಿಸುವಂತೆ ಭಕ್ತಿಯಿಂದ ಬೇಡಿಕೊಂಡು ತಾಯಿ ಅಲಂಕಾರವನ್ನ ಕಣ್ತುಂಬಿಕೊಂಡರು. ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಭಕ್ತರ ದಂಡು ಹರಿದು ಬಂತು. ಹಬ್ಬದ ಅಂಗವಾಗಿ ಮುಂಜಾನೆಯಿಂದಲೇ ಪಂಚಾಮೃತ ಅಭಿಷೇಕ, ಹೋಮ–ಹವನ, ಹೂವಿನ ಅಲಂಕಾರ, ವಿದ್ಯುತ್ ದೀಪಾಲಂಕಾರ, ವಿಶೇಷ ಪೂಜೆಗಳು ಜರುಗಿದವು. ಭಕ್ತರ ದರ್ಶನಕ್ಕೆ ಶ್ರೀಮಹಾಲಕ್ಷ್ಮೀ ಚಾರಿಟಬಲ್ ಟ್ರಸ್ಟ್ ವತಿಯಿಂದ ವಿಶೇಷ ವ್ಯವಸ್ಥೆ ಮಾಡಲಾಗಿತ್ತು. ಪೋಲಿಸ್ ಬಿಗಿ ಬಂದೋಬಸ್ತ್ ನಲ್ಲಿ ಶ್ರೀ ಮಹಾಲಕ್ಷ್ಮೀ ದೇವಾಲಯದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯಿತು. ರಾಜ್ಯದ ನಾನಾ ಭಾಗದಿಂದ ಆಗಮಿಸಿ ಶ್ರೀಗಳು, ಗಣ್ಯರು, ಅಧಿಕಾರಿ ವರ್ಗ…
ಬೆಂಗಳೂರು: ಬಿಗ್ ಬಾಸ್ ಮಾಜಿ ಸ್ಪರ್ಧಿ, ನಟ ರಜತ್ ಕಿಶನ್ ಅವರನ್ನು ಕೊಲೆ ಮಾಡುವುದಾಗಿ ಪತ್ನಿ ಅಕ್ಷಿತಾಗೆ ಕೊಲೆ ಬೆದರಿಕೆ ಸಂದೇಶ ಬಂದ ಹಿನ್ನೆಲೆ ರಜತ್ ಡಿಜಿಐಜಿಪಿಗೆ ದೂರು ನೀಡಿದ್ದಾರೆ. ಧರ್ಮಸ್ಥಳದಲ್ಲಿ ಯೂಟ್ಯೂಬರ್ಸ್ ಮೇಲೆ ಹಲ್ಲೆ ನಡೆದ ವೇಳೆ ರಜತ್ ಕಿಶನ್ ಸ್ಥಳದಲ್ಲಿದ್ದರು. ಈ ಹಿನ್ನೆಲೆ ರಜತ್ ಪತ್ನಿ ಅಕ್ಷಿತಾಗೆ ಕೆಲವು ಕಿಡಿಗೇಡಿಗಳು ಕೊಲೆ ಬೆದರಿಕೆ ಸಂದೇಶ ಕಳುಹಿಸಿದ್ದಾರೆನ್ನಲಾಗಿದೆ. ಈ ಸಂಬಂಧ ದೂರು ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ರಜತ್, ನನ್ನ ಪತ್ನಿ ಅಕ್ಷಿತಾಗೆ, ಕೊಲೆ ಮಾಡ್ತೀವಿ ಅಂಥ ಬೆದರಿಕೆ ಸಂದೇಶ ಬಂದಿತ್ತು. ಇದು ಬಹಳ ಕೆಟ್ಟದ್ದು. ನಾವು ಯಾವುದೇ ಜಾತಿ, ಧರ್ಮ ಜಾಗ ದೇವಸ್ಥಾನ ಬಗ್ಗೆ ಮಾತಾಡಿಲ್ಲ. ನಾವು ಹೋಗಿದ್ದು ಸೌಜನ್ಯ ಪರ ನ್ಯಾಯಕ್ಕಾಗಿ. ಕತ್ತರಿಸ್ತೀನಿ ಅಂದ್ರೆ ಹೇಗೆ ಎಂದು ಪ್ರಶ್ನಿಸಿದರು. ಹಾಡಹಗಲೇ ನಮ್ಮ ಕಣ್ಣಮುಂದೆನೇ ಎಲ್ಲ ನಡೆದಿದ್ದು. ಹಲ್ಲೆ ಮಾಡಿದವರ ಮೇಲೆ ದೂರು ಕೊಟ್ಟಿದ್ದೇನೆ. ನನ್ನ ಪತ್ನಿಗೆ ಬೆದರಿಕೆ ಸಂದೇಶ ಹಾಕಿದವರ ವಿರುದ್ಧವೂ ದೂರು ಕೊಟ್ಟಿದ್ದೇವೆ. ನಾವು ಕೊಟ್ಟ…
ಹಾಸನ: ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆ ಹೂ ಕೀಳಲು ಹೋದ ವ್ಯಕ್ತಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಆಲೂರು ತಾಲೂಕಿನ ಬೆಳಮೆ ಗ್ರಾಮದಲ್ಲಿ ನಡೆದಿದೆ. ರಾಮೇಶ್ವರ ಗ್ರಾಮದಲ್ಲಿ ವಾಸವಿದ್ದ ಬಿಕ್ಕೋಡು ಗ್ರಾಮದ ದೇವರಾಜ್ (38) ಮೃತಪಟ್ಟವರಾಗಿದ್ದಾರೆ. ವರಮಹಾಲಕ್ಷ್ಮಿ ಹಬ್ಬ ಹಿನ್ನೆಲೆಯಲ್ಲಿ ತಾವರೆ ಹೂವು ಕೀಳಲು ಕೆರೆಗೆ ಇಳಿದಿದ್ದ ದೇವರಾಜ್ ಅಲ್ಲೇ ಮುಳುಗಿ ಸಾವನ್ನಪ್ಪಿದ್ದಾರೆ. ಸತತ ಮೂರು ಗಂಟೆಗಳ ಕಾಲ ಶೋಧ ಕಾರ್ಯ ನಡೆಸಿ ಅಗ್ನಿಶಾಮಕದಳದ ಸಿಬ್ಬಂದಿ ಮೃತದೇಹ ಮೇಲೆತ್ತಿದ್ದಾರೆ. ಆಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಇತ್ತೀಚೆಗಿನ ದಿನಗಳಲ್ಲಿ ಜನರು ತಮ್ಮ ದೈನಂದಿನ ಒತ್ತಡದ ಬದುಕಿನಲ್ಲಿ ಬ್ರೆಡ್ ಜಾಮ್ ನಂತಹ ಅತ್ಯಂತ ಸುಲಭದ ಆಹಾರಗಳ ಕಡೆಗೆ ಹೆಚ್ಚಿನ ಗಮನ ಕೊಡುತ್ತಿದ್ದಾರೆ. ಇದು ಜನರಲ್ಲಿ ನಾನಾ ರೀತಿಯ ರೋಗಗಳಿಗೆ ಅಪೌಷ್ಠಿಕತೆಗೆ ಕಾರಣವಾಗುತ್ತಿದೆ. ತರಕಾರಿಗಳು, ಕಾಳುಗಳನ್ನು ಜನ ಮರೆಯುತ್ತಿರುವುದರಿಂದಾಗಿ ಸಣ್ಣ ವಯಸ್ಸಿನಲ್ಲೇ ವೃದ್ಧರಿಗೆ ಬರುವಂತಹ ಕಾಯಿಲೆಗಳಿಗೆ ತುತ್ತಾಗುವಂತಹ ಸನ್ನಿವೇಶಗಳು ನಮ್ಮ ಸುತ್ತಮುತ್ತ ನೋಡಬಹುದಾಗಿದೆ. ಹಿಂದಿನ ಕಾಲದಲ್ಲಿ ನನೆಸಿಟ್ಟ ಕಾಳುಗಳನ್ನು ಸೇವನೆ ಮಾಡುವಂತಹ ಹವ್ಯಾಸ ಹೊಂದಿದ್ದ ಜನರು ಹೆಚ್ಚು ಕಾಲದ ವರೆಗೆ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುತ್ತಿದ್ದರು. ಸಾಮಾನ್ಯವಾಗಿ ಜನರು ಚಳಿಗಾಲ ಬರುತ್ತಿದ್ದಂತೆಯೇ ಅನೇಕ ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಾರೆ. ಅಂತಹ ಸಮಸ್ಯೆಗಳಿಗೆ ನನೆಸಿಟ್ಟ ಹೆಸರು ಕಾಳುಗಳು ಉತ್ತಮವಾಗಿದೆ. ನೆನೆಸಿಟ್ಟ ಕಾಳುಗಳು ನಮ್ಮ ದೇಹಕ್ಕೆ ಹೆಚ್ಚಿನ ರೋಗ ನಿರೋಧಕ ಸಾಮರ್ಥ್ಯವನ್ನು ನೀಡುತ್ತದೆ. ಮೊಳಕೆ ಕಟ್ಟಿದ ಹೆಸರುಕಾಳನ್ನು ಸಲಾಡ್ ಗಳಲ್ಲಿ ಬೆರೆಸಿ ಬಳಸಬಹುದು. ಮೊಳಕೆಯೊಡೆದ ಹೆಸರುಕಾಳು ದೇಹದಲ್ಲಿರುವ ಹೆಚ್ಚುವರಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಕೆಲಸ ಮಾಡುತ್ತದೆ. ಪ್ರತಿದಿನ ಬೆಳಗ್ಗೆ ಮೊಳಕೆಯೊಡೆದ ಹೆಸರುಕಾಳು ಸೇವಿಸಿದರೆ ದೇಹದಲ್ಲಿನ…
ಚಿಕ್ಕಮಗಳೂರು: ಭದ್ರಾ ಅಭಯಾರಣ್ಯದ ಹುಲಿ ಮೀಸಲು ಪ್ರದೇಶದ ವ್ಯಾಪ್ತಿಯಲ್ಲಿ ಹುಲಿಯೊಂದು ಸಾವನ್ನಪ್ಪಿರುವ ಘಟನೆ ನಡೆದಿದೆ. ಕಾದಾಟದಲ್ಲಿ ಹುಲಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಲಕ್ಕವಳ್ಳಿ ವಲಯದ ಕೂಟ್ ರಸ್ತೆಯಲ್ಲಿ ಹುಲಿಯ ಮೃತದೇಹ ಪತ್ತೆಯಾಗಿದೆ. ಅರಣ್ಯ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ವೇಳೆ ಹುಲಿಯ ಕಳೆಬರಹ ಕಂಡು ಬಂದಿದೆ. 7 ವರ್ಷ ಪ್ರಾಯದ ಹೆಣ್ಣು ಹುಲಿ ಮೃತಪಟ್ಟಿದೆ. ಎರಡು ಹುಲಿಗಳ ಮಧ್ಯೆ ಕಾದಾಟದಲ್ಲಿ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೃತಪಟ್ಟಿರುವ ಹುಲಿಯ ದೇಹದ ಮೇಲೆ ಕಾದಾಟ ನಡೆಸಿರುವ ಗಾಯದ ಗುರುತು ಪತ್ತೆಯಾಗಿದೆ. ಸ್ಥಳಕ್ಕೆ ಹಿರಿಯ ಅರಣ್ಯ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹುಲಿಯ ಮರಣೋತ್ತರ ಪರೀಕ್ಷೆ ನಡೆಸಿ, ರಕ್ತ ಮಾದರಿ, ದೇಹದ ಕೆಲ ಭಾಗ ಪ್ರಯೋಗಲಕ್ಕೆ ರವಾನೆ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಈ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಬೆಂಗಳೂರು: ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ಮಾಡುವ ಸಚಿವರ ಪಟ್ಟಿಯಿಂದ ಕೆ.ಎನ್. ರಾಜಣ್ಣ ಹೆಸರು ಕೈಬಿಡಲಾಗಿದೆ ಪ್ರತಿ ವರ್ಷ ಜಿಲ್ಲಾ ಉಸ್ತುವಾರಿ ಸಚಿವರುಗಳು ಆಯಾ ಜಿಲ್ಲೆಯ ಸ್ವಾತಂತ್ರ್ಯ ದಿನಾಚರಣೆಯಂದು ಧ್ವಜಾರೋಹಣ ನೆರವೇರಿಸುತ್ತಾರೆ. ಬಳ್ಳಾರಿ ಉಸ್ತುವಾರಿಯಾಗಿದ್ದ ಸಚಿವ ನಾಗೇಂದ್ರ ಅವರ ಅನುಪಸ್ಥಿತಿಯಲ್ಲಿ ಈ ಬಾರಿ ಯಾವ ಜಿಲ್ಲೆಯಲ್ಲಿ ಯಾವ ಸಚಿವರು ಧ್ವಜಾರೋಹಣ ಮಾಡುತ್ತಾರೆ ಎಂಬ ಪಟ್ಟಿಯನ್ನು ಒಳಗೊಂಡ ಆದೇಶವನ್ನು ಎರಡು ವಾರದ ಹಿಂದೆ ರಾಜ್ಯ ಸರ್ಕಾರ ಪ್ರಕಟ ಮಾಡಿತ್ತು. ಅದರಲ್ಲಿ ರಾಜಣ್ಣ ಅವರರಿಗೆ ಹಾಸನ ಜಿಲ್ಲೆಯ ಉಸ್ತುವಾರಿ ಸಚಿವರಾದ್ದರಿಂದ ಆ ಜಿಲ್ಲೆಯ ಕಾರ್ಯಕ್ರಮದ ಧ್ವಜಾರೋಹಕ್ಕೆ ನಿಗದಿ ಮಾಡಲಾಗಿತ್ತು. ಆದರೆ, ಗುರುವಾರ ಹೊಸ ಆದೇಶ ಹೊರಬಿದ್ದಿದ್ದು, ರಾಜಣ್ಣ ಹೆಸರು ಕೈಬಿಡಲಾಗಿದೆ. ಸೋಮವಾರ ಪ್ರಕಟವಾದ ಆದೇಶದ ಪ್ರಕಾರ, ಹಾಸನದಲ್ಲಿ ಕೃಷ್ಣಬೈರೇಗೌಡ ಧ್ವಜಾರೋಹಣ ಮಾಡಲಿದ್ದಾರೆ. ಬಳ್ಳಾರಿಯಲ್ಲಿ ಸಚಿವ ರಹೀಂ ಖಾನ್ ಧ್ವಜಾರೋಹಣ ಮಾಡಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಬೀಜಿಂಗ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ ವಿಧಿಸಿರುವ ಪ್ರತಿಸುಂಕ ಸಂಬಂಧ ಚೀನಾ ದೇಶ ಅಚ್ಚರಿಯ ಪ್ರತಿಕ್ರಿಯೆಯನ್ನು ನೀಡಿದೆ. ಭಾರತದ ಸರಕುಗಳ ಮೇಲೆ ಶೇ. 25+25 = 50 ರಷ್ಟು ಸುಂಕ ವಿಧಿಸುವ ಆದೇಶ ಹೊರಡಿಸಿರುವ ಟ್ರಂಪ್ ಅವರದು ‘ಪುಂಡ’ ವ್ಯಾಪಾರ ನೀತಿಯಾಗಿದೆ ಎಂದು ಭಾರತದಲ್ಲಿರುವ ಚೀನಾ ರಾಯಭಾರಿ ಕ್ಸು ಫೀಹಾಂಗ್ ವಾಗ್ದಾಳಿ ನಡೆಸಿದ್ದಾರೆ. ಟ್ರಂಪ್ ಸುಂಕ ನೀತಿಗೆ ಪ್ರತಿಕ್ರಿಯೆ ನೀಡಿರುವ ಫೀಹಾಂಗ್, ಬೆದರಿಕೆ ಹಾಕುವವರಿಗೆ ಮುಟ್ಟಿ ಕೊಳ್ಳುವಂತೆ ತಿರುಗೇಟು ನೀಡಿದರೆ ಒಂದು ಮೈಲಿ ದೂರ ಓಡಿ ಹೋಗಿ ನಿಲ್ಲುತ್ತಾರೆ. ಇಂಥ ಪುಂಡ ನೀತಿಗಳನ್ನು ಧೈರ್ಯವಾಗಿ ಎದುರಿಸಿದರೆ ತೆಪ್ಪಗಾಗುತ್ತಾರೆ, ಎಂದು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ. ‘ಟ್ರಂಪ್ ಪ್ರತಿಸುಂಕ ಕ್ರಮಗಳು ವಿಶ್ವ ವ್ಯಾಪಾರ ಒಕ್ಕೂಟವನ್ನು ದುರ್ಬಲಗೊಳಿಸಲಿವೆ. ವಿಶ್ವಸಂಸ್ಥೆಯ ನಿಮಯಗಳಿಗೆ ವಿರುದ್ಧವಾಗಿದೆ ಎಂದು ಫೀಹಾಂಗ್ ಹೇಳಿದ್ದಾರೆ. ಟ್ರಂಪ್ ಸುಂಕ ಬೆದರಿಕೆ ನಡುವೆ ಭಾರತ–ಚೀನಾ ಪರಸ್ಪರ ಹತ್ತಿರವಾಗುತ್ತಿವೆ. ತಿಂಗಳ ಅಂತ್ಯದಲ್ಲಿ ಚೀನಾ ಪ್ರವಾಸ ಕೈಗೊಳ್ಳಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕದ…