Subscribe to Updates
Get the latest creative news from FooBar about art, design and business.
- ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
- ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
- ಬೀದರ್: ಪೊಲೀಸರ ಭರ್ಜರಿ ಕಾರ್ಯಾಚರಣೆ; ₹14.50 ಲಕ್ಷ ಮೌಲ್ಯದ ಗಾಂಜಾ ಜಪ್ತಿ, ಮೂವರ ಬಂಧನ!
- “ಆರ್. ಅಶೋಕ್ ಕಸ ಮಾಫಿಯಾ ಗ್ಯಾಂಗ್ ನ ಏಜೆಂಟ್: ನನ್ನ ಮೇಲೆ ಅಸೂಯೆ ರಾಜಕೀಯ: ಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು
- ಹಾಸ್ಟೇಲ್ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಆಹಾರವನ್ನು ನೀಡಿ: ಶಾಸಕ ಸಿ.ಬಿ.ಸುರೇಶ್ ಬಾಬು
- ಕೊಟ್ಟೂರು: ಪ್ರೊ.ಬಿ.ಕೃಷ್ಣಪ್ಪನವರ 89ನೇ ಜನ್ಮದಿನಾಚರಣೆ; ದಸಂಸ ವತಿಯಿಂದ ಅರ್ಥಪೂರ್ಣ ಆಚರಣೆ
- ತುಮಕೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಆಹ್ವಾನ
- ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ವೃದ್ಧೆಯ ಕೊಲೆ: ಮುಖ್ಯ ಆರೋಪಿಗೆ ಜೀವಾವಧಿ, ಮತ್ತೊಬ್ಬಳಿಗೆ 3 ವರ್ಷ ಜೈಲು
Author: admin
ಬಳ್ಳಾರಿ: ಕನ್ನಡ ಚಿತ್ರರಂಗದ ಧ್ರುವತಾರೆ, ಕರ್ನಾಟಕ ರತ್ನ ಡಾ.ರಾಜ್ ಕುಮಾರ್ ಅವರ 97ನೇ ಜನ್ಮದಿನದ ಅಂಗವಾಗಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್ಕುಮಾರ್ ಉದ್ಯಾನವನದಲ್ಲಿನ ಡಾ.ರಾಜ್ ಕುಮಾರ್ ಅವರ ಪುತ್ಥಳಿಗೆ ಮಾಲಾರ್ಪಣೆ ಹಾಗೂ ಪುಷ್ಪನಮನ ಸಲ್ಲಿಸುವ ಮೂಲಕ ಜಿಲ್ಲಾಡಳಿತ ಮತ್ತು ಜನಪ್ರತಿನಿಧಿಗಳು, ವಿವಿಧ ಸಂಘ–ಸಂಸ್ಥೆಗಳ ಪದಾಧಿಕಾರಿಗಳು ಅಭೂತ ಗೌರವ ನಮನ ಸಲ್ಲಿಸಿದರು. ಈ ವೇಳೆ ಡಾ.ಬಾಬು ಜಗಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ಮಾತನಾಡಿ, ಡಾ.ರಾಜ್ ಕುಮಾರ್ ಅವರು ಅಪ್ಪಟ ಕನ್ನಡಪ್ರೇಮಿಯಾಗಿದ್ದರು. ಅವರ ಸಾಧನೆ ಹಾಗೂ ಕನ್ನಡ ನಾಡು–ನುಡಿಗೆ ಅವರು ನೀಡಿದ ಕೊಡುಗೆ ಅಪಾರ. ಕರ್ನಾಟಕ ಏಕೀಕರಣ ಮತ್ತು ಕನ್ನಡ ಭಾಷೆಯ ಉಳಿವಿಗಾಗಿ ನಡೆದ ಗೋಕಾಕ್ ಚಳುವಳಿಯಲ್ಲಿ ಡಾ.ರಾಜ್ ಅವರ ಪಾತ್ರ ಅವಿಸ್ಮರಣೀಯ. ಅವರ ನಾಯಕತ್ವದಲ್ಲಿ ನಡೆದ ಈ ಹೋರಾಟ ಕನ್ನಡ ಭಾಷೆಯ ಇತಿಹಾಸದಲ್ಲಿ ಮೈಲಿಗಲ್ಲಾಗಿದೆ ಎಂದು ಹೇಳಿದರು. ಡಾ.ರಾಜ್ ಕುಮಾರ್…
ಗುಬ್ಬಿ: “ತನ್ನ ಕೆಲಸದಲ್ಲಿ ದೇವರನ್ನು ಕಾಣು ಎಂದು ಹೇಳಿದ ಬಸವಣ್ಣನವರ ನಾಡು ಇದು. ದೇವರು ಇದ್ದಾನೆ ಎಂಬುದು ಅವರವರ ನಂಬಿಕೆಯಾಗಿದ್ದು, ಕೋಟ್ಯಾಂತರ ಜನರು ಆ ನಂಬಿಕೆಯ ಮೇಲೆ ಜೀವನ ಸಾಗಿಸುತ್ತಿದ್ದಾರೆ,” ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು. ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ನೂತನ ಶಿಲಾ ದೇವಾಲಯ ಲೋಕಾರ್ಪಣೆ, ಸಂಪ್ರೋಕ್ಷಣೆ, ಸ್ಥಿರ ಬಿಂಬ ಪ್ರತಿಷ್ಠಾಪನೆ ಹಾಗೂ ಮಹಾ ಕುಂಭಾಭಿಷೇಕ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪ್ರತಿಯೊಬ್ಬರೂ ಉತ್ತಮ ಕೆಲಸ ಮಾಡಿದಾಗ ದೇವರು ರಕ್ಷಣೆ ಮಾಡುತ್ತಾನೆ. ದೇವಾಲಯಗಳಿಗೆ ಹೋದಾಗ ಮನಸ್ಸಿಗೆ ನೆಮ್ಮದಿ ಸಿಗುತ್ತದೆ. ಇದೇ ಕಾರಣಕ್ಕೆ ಹಳ್ಳಿಗಳಿಂದ ನಗರಗಳವರೆಗೆ ದೇವಾಲಯಗಳು ನಿರ್ಮಾಣಗೊಂಡಿವೆ. ಕಷ್ಟ ಬಂದಾಗ ದೇವರ ಮೊರೆ ಹೋಗುವುದು ಪುರಾತನ ಕಾಲದಿಂದಲೂ ಬಂದ ನಂಬಿಕೆ. ‘ನನ್ನನ್ನು ಎಂಎಲ್ಎ ಮಾಡು’ ಎಂದು ಕೂಡ ದೇವರಲ್ಲಿ ಪ್ರಾರ್ಥಿಸುತ್ತೇವೆ. ಪ್ರಾರ್ಥನೆಯಿಂದ ಮನಸ್ಸಿಗೆ ಶಾಂತಿ ಮತ್ತು ಕೆಲಸಗಳು ಯಶಸ್ವಿಯಾಗುತ್ತವೆ ಎಂಬ ಗಾಢ ನಂಬಿಕೆ ನಮ್ಮಲ್ಲಿದೆ ಎಂದರು. ಗುಬ್ಬಿ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ…
ತುಮಕೂರು: ಸ್ವಾಭಿಮಾನಿ ಕರ್ನಾಟಕ ವೇದಿಕೆಯು ಪ್ರತಿವರ್ಷದಂತೆ ಈ ವರ್ಷವೂ ‘ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ’ಗೆ 2025 ರಲ್ಲಿ ಪ್ರಕಟಗೊಂಡ ವಿವಿಧ ಪ್ರಕಾರದ ಸಾಹಿತ್ಯ ಕೃತಿಗಳಿಗೆ ಪ್ರಶಸ್ತಿ ನೀಡಲು ನಿರ್ಧರಿಸಿದ್ದು, ಲೇಖಕರು ಮತ್ತು ಪ್ರಕಾಶಕರಿಂದ ಪುಸ್ತಕಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ 4 ಪ್ರಕಾರದ, 4 ಕೃತಿಗಳಿಗೆ (ಅದರಲ್ಲಿ ಒಂದು ಡಾ.ಸಿ.ಸೋಮಶೇಖರ್/ ಸರ್ವಮಂಗಳಮ್ಮ ಸಾಹಿತ್ಯ ಸೇವಾ ಪ್ರತಿಷ್ಠಾನ (ರಿ) ಬೆಂಗಳೂರು ದತ್ತಿ ಪ್ರಶಸ್ತಿ ಸೇರಿದೆ) ಕಥೆ, ಕಾದಂಬರಿ, ಕವಿತೆ, ಮಕ್ಕಳ ಸಾಹಿತ್ಯ, ನಾಟಕ ಇತ್ಯಾದಿಯಾಗಿ ತಲಾ 5000 ರೂ.ಗಳ ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹೊಂದಿದೆ. ಪುಸ್ತಕದ ಮೂರು ಪ್ರತಿಗಳನ್ನು ಮೇ 30ರ ಒಳಗೆ ಕಳುಹಿಸಬೇಕೆಂದು ವೇದಿಕೆಯ ಅಧ್ಯಕ್ಷರಾದ ದ್ವಾರನಕುಂಟೆ ಪಾತಣ್ಣ ಅವರು ತಿಳಿಸಿದ್ದಾರೆ. ಪುಸ್ತಕಗಳನ್ನು ಕಳುಹಿಸಬೇಕಾದ ವಿಳಾಸ: ದ್ವಾರನಕುಂಟೆ ಪಾತಣ್ಣ, ಅಧ್ಯಕ್ಷರು ಸ್ವಾಭಿಮಾನಿ ಕರ್ನಾಟಕ ವೇದಿಕೆ, ನಂ.118, ‘ಹೊಂಬೆಳಕು’ 5ನೇ ಕ್ರಾಸ್, ಹೆಚ್.ಎಂ.ಟಿ. ಲೇಔಟ್, ನಾಗಸಂದ್ರ ಅಂಚೆ, ಬೆಂಗಳೂರು-560073 ಇಲ್ಲಿಗೆ ಕಳುಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 9686073837 ಇವರನ್ನು ಸಂಪರ್ಕಿಸುವುದು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಸಿರಾ: 2025–26ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು ಸಿರಾ ತಾಲೂಕಿಗೆ ಶೇ.89.75 ರಷ್ಟು ಫಲಿತಾಂಶ ಲಭ್ಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಒಟ್ಟು 3,553 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 3189 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 364 ಮಂದಿ ಅನುತ್ತೀರ್ಣರಾಗಿದ್ದಾರೆ. ಸರ್ಕಾರಿ ಪ್ರೌಢಶಾಲೆಗಳ ಫಲಿತಾಂಶ ಶೇ.91.58%, ಅನುದಾನಿತ ಪ್ರೌಢಶಾಲೆಗಳ ಫಲಿತಾಂಶ ಶೇ.79.88%, ಅನುದಾನ ರಹಿತ ಪ್ರೌಢಶಾಲೆಗಳ ಫಲಿತಾಂಶ ಶೇ.96.02% ಆಗಿದೆ. ನಗರದ ಆರ್. ರೆಹಾನ್ ಶಾಲೆಯ ಟಿ.ಎಂ. ಜೀವನ್ 620 ಅಂಕಗಳನ್ನು ಪಡೆಯುವ ಮೂಲಕ ತಾಲೂಕಿಗೆ ಪ್ರಥಮ ಸ್ಥಾನ ಪಡೆದರೆ ಸೇಂಟ್ ಆನ್ ಪ್ರೌಢಶಾಲೆಯ ಆರ್ ಕೀರ್ತನ 619 ಅಂಕಗಳನ್ನು ಪಡೆದು ದ್ವಿತೀಯ ಸ್ಥಾನ ಪಡೆದರೆ ಇದೇ ಶಾಲೆಯ ಬಲ್ಕಿಸ್ ಖಾನಂ 618 ಅಂಕಗಳನ್ನು ಪಡೆದು ತೃತೀಯ ಸ್ಥಾನ ಹೊಂದಿದ್ದಾರೆ. ಸರ್ಕಾರಿ ಪ್ರೌಢಶಾಲೆಗಳಲ್ಲಿ ಓದಿದ ಸಿರಾ ಬುವನಹಳ್ಳಿ ಮೊರಾರ್ಜಿ ದೇಸಾಯಿ ವಸತಿಯುತ ಪ್ರೌಢಶಾಲೆಯ ಪುನೀತ್ 615, ಬರಗೂರು ಸರ್ಕಾರಿ ಪ್ರೌಢಶಾಲೆಯ ಪುಷ್ಪಲತಾ…
ತುಮಕೂರು: ಜಿಲ್ಲೆಯ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಎರಡು ಶೈಕ್ಷಣಿಕ ಜಿಲ್ಲೆಗಳು ಗಣನೀಯ ಪ್ರಗತಿ ಸಾಧಿಸಿವೆ. ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ಭಾರಿ ಏರಿಕೆ ಕಂಡುಬಂದಿದ್ದರೂ, ರಾಜ್ಯ ಮಟ್ಟದ ಶ್ರೇಯಾಂಕದಲ್ಲಿ ಮಾತ್ರ ಜಿಲ್ಲೆ ಸ್ವಲ್ಪ ಹಿನ್ನಡೆ ಅನುಭವಿಸಿದೆ. ತುಮಕೂರು ಶೈಕ್ಷಣಿಕ ಜಿಲ್ಲೆಯಲ್ಲಿ ಪರೀಕ್ಷೆ ಬರೆದ 20,466 ವಿದ್ಯಾರ್ಥಿಗಳ ಪೈಕಿ 9,214 ಮಂದಿ ಉತ್ತೀರ್ಣರಾಗಿದ್ದು, ಶೇ. 92.90 ಫಲಿತಾಂಶ ದಾಖಲಾಗಿದೆ. ಇದು ಕಳೆದ ಬಾರಿಗಿಂತ ಶೇ. 24.90 ರಷ್ಟು ಹೆಚ್ಚಳವಾಗಿದೆ. ಅದೇ ರೀತಿ, ಮಧುಗಿರಿ ಶೈಕ್ಷಣಿಕ ಜಿಲ್ಲೆಯಲ್ಲಿ 11,044 ವಿದ್ಯಾರ್ಥಿಗಳ ಪೈಕಿ 9,962 ಮಂದಿ ತೇರ್ಗಡೆಯಾಗಿದ್ದು, ಶೇ. 90.24 ಫಲಿತಾಂಶ ಬಂದಿದೆ. ಇದು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 29.61 ರಷ್ಟು ಅಧಿಕವಾಗಿದೆ. ಈ ಸಾಲಿನ ಪರೀಕ್ಷೆಯಲ್ಲಿ ತುಮಕೂರು ಶೈಕ್ಷಣಿಕ ಜಿಲ್ಲೆಗೆ ಸಾದಿಯಾಬಾನು ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲೆಗೆ ಹಿತಶ್ರೀ ಅವರು ಟಾಪರ್ಸ್ ಆಗಿ ಹೊರಹೊಮ್ಮುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ಹೆಣ್ಣು ಮಕ್ಕಳೇ ಮೊದಲು: ಎರಡೂ ಶೈಕ್ಷಣಿಕ ಜಿಲ್ಲೆಗಳಲ್ಲಿ ಬಾಲಕಿಯರೇ ಮೇಲುಗೈ…
ತುಮಕೂರು: ಬೆಸ್ಕಾಂ ಕ್ಯಾತ್ಸಂದ್ರ ಉಪವಿಭಾಗದ ವ್ಯಾಪ್ತಿಯಲ್ಲಿ ತುರ್ತು ಲಿಂಕ್ ಲೈನ್ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಏಪ್ರಿಲ್ 25ರಂದು ನಗರದ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. ಏಪ್ರಿಲ್ 25ರ ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ. ಕ್ಯಾತ್ಸಂದ್ರ ಉಪವಿಭಾಗದ ವ್ಯಾಪ್ತಿಗೆ ಬರುವ ಊರ್ಡಿಗೆರೆ, ಮೈದಾಳ, ಸೀತಕಲ್ಲು ಮತ್ತು ಅರೇಗುಜ್ಜನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಇರುವುದಿಲ್ಲ. ಕಾಮಗಾರಿ ನಡೆಯುವ ಅವಧಿಯಲ್ಲಿ ಸಾರ್ವಜನಿಕರು ಬೆಸ್ಕಾಂನೊಂದಿಗೆ ಸಹಕರಿಸಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC
ಪಾವಗಡ: ತಾಲೂಕಿನ ಕೋಟಗುಡ್ಡದ ಸಹನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಶಾಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಸಲುವಾಗಿ ಇಂದು ವಿಶೇಷ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಬಾರಿಯ ಪರೀಕ್ಷೆಯಲ್ಲಿ ಶಾಲೆಯ ರಿಷಿತಾ ಎಸ್. 613 ಅಂಕಗಳನ್ನು ಪಡೆಯುವ ಮೂಲಕ ಪಾವಗಡ ತಾಲೂಕಿಗೆ ತೃತೀಯ ಸ್ಥಾನ ಹಾಗೂ ಶಾಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ. ಪ್ರೀತಮ್ ಎ. 606 ಅಂಕಗಳೊಂದಿಗೆ ಶಾಲೆಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ಚಂದು ಆರ್.ಎಸ್. ಮತ್ತು ಸುಪ್ರೀತ್ ರೆಡ್ಡಿ ತಲಾ 605 ಅಂಕಗಳನ್ನು ಗಳಿಸಿ ಶಾಲೆಗೆ ಜಂಟಿಯಾಗಿ ತೃತೀಯ ಸ್ಥಾನ ತಂದುಕೊಟ್ಟಿದ್ದಾರೆ. ಶಾಲೆಯ ಆವರಣದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಅವರ ಪೋಷಕರ ಸಮ್ಮುಖದಲ್ಲಿ ಆತ್ಮೀಯವಾಗಿ ಸನ್ಮಾನಿಸಲಾಯಿತು. ಶಾಲೆಯ ಆಡಳಿತಾಧಿಕಾರಿಗಳಾದ ಶ್ರೀನಿವಾಸ್ ಅವರು ವಿದ್ಯಾರ್ಥಿಗಳ ಶ್ರಮವನ್ನು ಶ್ಲಾಘಿಸಿ, ಮುಂದಿನ ಭವಿಷ್ಯಕ್ಕೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ನರಸಿಂಹಪ್ಪ ಎಸ್., ಶಿಕ್ಷಕಿಯರಾದ ಮಮತಾ, ಶ್ವೇತ, ಲೀಲಾವತಿ,…
ತುಮಕೂರು: ರಾಜ್ಯದ ಹಲವು ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷ ಮಾಧ್ಯಮದ ಹೆಸರಿನಲ್ಲಿ ಕನ್ನಡ ಮಾಧ್ಯಮವನ್ನು ಕಿತ್ತುಹಾಕಿ ಇಂಗ್ಲಿಷ್ ಮಾಧ್ಯಮವನ್ನು ಕಡ್ಡಾಯ ಮಾಡುತ್ತಿರುವ ರಾಜ್ಯ ಸರ್ಕಾರದ ನೀತಿಯನ್ನು ಖಂಡಿಸಿ ಎಐಡಿಎಸ್ ಓ ತುಮಕೂರು ಜಿಲ್ಲಾ ವತಿಯಿಂದ ನಗರದ ಟೌನ್ ಹಾಲ್ ಬಳಿ ಪ್ರತಿಭಟನೆ ಮಾಡಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಎಐಡಿಎಸ್ ಓ ಜಿಲ್ಲಾ ಕಾರ್ಯದರ್ಶಿಗಳಾದ ಲಕ್ಕಪ್ಪ ಅವರು ಮಾತನಾಡಿ, ಕರ್ನಾಟಕದಲ್ಲಿ ಕನ್ನಡ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮವನ್ನು ಹೇರಿಕೆ ಮಾಡುವುದರ ಮೂಲಕ ಕನ್ನಡವನ್ನೇ ಮರೆಮಾಚುವ ಉನ್ನಾರವನ್ನು ಇಂದು ಸರ್ಕಾರ ರೂಪಿಸಿದೆ, ಮಾತೃಭಾಷೆ ನಮ್ಮ ಸಂವಹನದ ಭಾಷೆಯಾಗಿದ್ದು ಆ ಭಾಷೆಯ ಮೂಲಕವೇ ಕಲಿಕೆಯಾದಾಗ ಮಗುವು ಸರಿಯಾಗಿ ವಿಷಯಗಳನ್ನು ಗ್ರಹಿಸಲು ಮತ್ತು ತನ್ನ ಭಾವನೆಗಳನ್ನು ನಿರ್ದಿಷ್ಟವಾಗಿ ವ್ಯಕ್ತಪಡಿಸಲು ಸಹಾಯಕವಾಗುತ್ತದೆ. ಪ್ರಾಥಮಿಕ ಶಿಕ್ಷಣ ಮಾತೃ ಭಾಷೆಯ ಮೂಲಕ ಕೊಡುವುದರಿಂದ ಮಗುವಿನ ಬೌದ್ಧಿಕ ಮಟ್ಟವು ಹೆಚ್ಚುತ್ತದೆ ಹಾಗೂ ಮಾನಸಿಕವಾಗಿ ಸದೃಢವಾಗಲು ಸಹಾಯವಾಗುತ್ತದೆ ಎಂದು ಹೇಳಿದರು ಮುಂದುವರಿದು, ರಾಜ್ಯ ಸರ್ಕಾರವು ಇದ್ಯಾವುದನ್ನು ಪರಿಗಣಿಸದೆ, “ರಾಜ್ಯದ 4404 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಒಂದನೇ ತರಗತಿಯಿಂದಲೇ ಆಂಗ್ಲ…
ಮಧುಗಿರಿ : ಯಾವುದೇ ಸಹಕಾರಿ ಬ್ಯಾಂಕುಗಳಾಗಲಿ ಆರ್ಥಿಕ ಶಿಸ್ತು, ಸಾಲ ವಸೂಲಾತಿ, ಬಡವರ ಹಾಗೂ ರೈತರ ಬಗ್ಗೆ ಅಂತಃಕರಣ ಹೊಂದಿರುವ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳ ಪ್ರಾಮಾಣಿಕ ಸೇವೆಯೇ ಸಹಕಾರಿ ಕ್ಷೇತ್ರದಲ್ಲಿ ಸಾಧನೆ ಮಾಡಲು ಸಾಧ್ಯ ಎಂದು ಮಾಜಿ ಸಹಕಾರ ಸಚಿವರು, ಶಾಸಕರೂ ಹಾಗೂ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್.ರಾಜಣ್ಣ ಅಭಿಪ್ರಾಯಪಟ್ಟರು. ಪಟ್ಟಣದ ಕನಕ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ನಿಮ್ಮ ಈ ಕನಕಪತ್ತಿನ ಸಹಕಾರ ಸಂಘವು ಶೇ. 96 ರಷ್ಟು ಮರುಪಾವತಿಯ ದಾಖಲೆ ತೋರಿಸಿದ್ದು ಉತ್ತಮವಾಗಿದೆ. ಹಾಗೂ ಆರ್ಥಿಕ ಶಿಸ್ತನ್ನು ಇದೇ ರೀತಿ ಮುಂದುವರೆಸಿ. ನನ್ನ ಎಲ್ಲ ರೀತಿಯ ಸಹಕಾರ ಸದಾ ಇರಲಿದೆ. ಸಾಲ ಪಡೆಯುವುದು ಸದಸ್ಯರ ಹಕ್ಕು. ಹಾಗೆಯೇ ಸಾಲ ತೀರಿಸುವುದು ಅವರ ಜವಾಬ್ದಾರಿ ಆಗಬೇಕು. ಸಹಕಾರಿ ಸಂಘದಲ್ಲಿ ಠೇವಣಿ ಜೊತೆಗೆ ಆಸ್ತಿಯನ್ನು ಮಾಡಲು ಮುಂದಾಗಬೇಕು. ಅದು ಕಷ್ಟದ ಸಮಯದಲ್ಲಿ ಸಹಾಯಕ್ಕೆ ಬರಲಿದೆ. 1 ಸಾವಿರದಿಂದ 13696 ಸದಸ್ಯರು ಷೇರು ಹಾಕಿರುವ ಸಂಘವಾಗಿದ್ದು…
ತುಮಕೂರು: ಜಿಲ್ಲೆಯ ವಿವಿಧ ಭಾಗಗಳಲ್ಲಿ ಕೇವಲ ಒಂದು ವಾರದ ಅವಧಿಯಲ್ಲಿ ಬರೋಬ್ಬರಿ 32 ನವಿಲುಗಳು ನಿಗೂಢವಾಗಿ ಸಾವನ್ನಪ್ಪಿರುವುದು ಸ್ಥಳೀಯರಲ್ಲಿ ಹಾಗೂ ಪರಿಸರ ಪ್ರೇಮಿಗಳಲ್ಲಿ ತೀವ್ರ ಆತಂಕ ಮೂಡಿಸಿದೆ. ಏಪ್ರಿಲ್ 16ರಿಂದ ಏಪ್ರಿಲ್ 21ರ ಅವಧಿಯಲ್ಲಿ ಜಿಲ್ಲೆಯ ಬೊಮ್ಮನಹಳ್ಳಿ, ಕೋಳಿಹಳ್ಳಿ, ಭೈರಸಂದ್ರ ಮತ್ತು ಹುಲ್ಲೆನಹಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಈ ಸಾವುಗಳು ಸಂಭವಿಸಿವೆ. ಮೃತಪಟ್ಟ ನವಿಲುಗಳು ಬೇರೆ ಬೇರೆ ಕಡೆ ಪತ್ತೆಯಾಗಿದ್ದು, ಯಾವುದೇ ನಿರ್ದಿಷ್ಟ ಒಂದು ಪ್ರದೇಶಕ್ಕೆ ಈ ಸಾವುಗಳು ಸೀಮಿತವಾಗಿಲ್ಲ ಎಂಬುದು ಗಮನಾರ್ಹ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಇಲಾಖೆ ಈಗಾಗಲೇ ಪ್ರಕರಣ ದಾಖಲಿಸಿಕೊಂಡಿದೆ. ಈ ಬಗ್ಗೆ ಮಾಹಿತಿ ನೀಡಿರುವ ಉಪ ಅರಣ್ಯ ಸಂರಕ್ಷಣಾಧಿಕಾರಿ ಜಿ.ಆರ್. ಶಶಿಧರ್ ಅವರು, “ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ನೇತೃತ್ವದಲ್ಲಿ ತನಿಖೆಗಾಗಿ ವಿಶೇಷ ತಂಡವನ್ನು ರಚಿಸಲಾಗಿದೆ,” ಎಂದು ತಿಳಿಸಿದ್ದಾರೆ. ಪ್ರಾಥಮಿಕ ಮರಣೋತ್ತರ ಪರೀಕ್ಷೆಯ ಸಮಯದಲ್ಲಿ ನವಿಲುಗಳ ದೇಹದಲ್ಲಿ ಯಾವುದೇ ವಿಷಕಾರಿ ಅಂಶ ಅಥವಾ ಅನುಮಾನಾಸ್ಪದ ವಸ್ತುಗಳು ಮೇಲ್ನೋಟಕ್ಕೆ ಕಂಡುಬಂದಿಲ್ಲ. ಹೀಗಾಗಿ, ಪ್ರಖರ ಬಿಸಿಲು ಮತ್ತು ನೀರಿನ ಹಸಿವಿನಿಂದ ಉಂಟಾಗುವ…