Author: admin

ಬೆಂಗಳೂರು: ಕಬಡ್ಡಿ ಪಂದ್ಯವೊಂದರ ಸಂದರ್ಭದಲ್ಲಿ ಬೆಟ್ಟಿಂಗ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಎಫ್‌ ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಸ್ಪಷ್ಟನೆ ನೀಡಿದ್ದಾರೆ. “ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ, ಈಗಿನ ಕಾಲದಲ್ಲಿ ತಮಾಷೆ ಕೂಡ ಮಾಡುವಂತಿಲ್ಲ ಎಂಬಂತಾಗಿದೆ” ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಾನು ಹೇಳಿದ್ದು ಗ್ರಾಮೀಣ ಭಾಗದಲ್ಲಿ ಕಬಡ್ಡಿ ಪಂದ್ಯಗಳ ವೇಳೆ ಸಾಮಾನ್ಯವಾಗಿ ಆಡುವಂತಹ ಮಾತುಗಳು. ಕಾನೂನಿನ ದೃಷ್ಟಿಯಿಂದ ಅದು ತಪ್ಪಾಗಿ ಕಾಣಿಸಬಹುದು, ಆದರೆ ನಾನು ಯಾವ ಉದ್ದೇಶದಿಂದ ಹೇಳಿದ್ದೇನೆ ಎಂಬುದು ಮುಖ್ಯವಾಗುತ್ತದೆ” ಎಂದು ಸಮರ್ಥಿಸಿಕೊಂಡರು. “ನಾನು ಬೆಟ್ಟಿಂಗ್ ಪ್ರಮೋಟ್ ಮಾಡಿ ಎಂದು ಹೇಳಿದ್ದರೆ ಅದು ತಪ್ಪು. ಜವಾಬ್ದಾರಿಯುತ ಸ್ಥಾನದಲ್ಲಿರುವ ನಾನು ಬೆಟ್ಟಿಂಗ್ ಪ್ರೋತ್ಸಾಹಿಸುತ್ತೇನೆ ಎಂಬುದು ಶುದ್ಧ ಸುಳ್ಳು. ಜನರು ಇದನ್ನು ಹೇಗೆ ಅರ್ಥೈಸಿಕೊಳ್ಳುತ್ತಾರೆ ಎಂಬುದರ ಮೇಲೆ ಇದು ಅವಲಂಬಿತವಾಗಿದೆ” ಎಂದು ತಿಳಿಸಿದರು. “ನಾನು ಕಾನೂನನ್ನು ಗೌರವಿಸುವವನು. ಕಾನೂನು ರಕ್ಷಣೆ ಮಾಡುವ ಖಾತೆಯನ್ನು ನಿಭಾಯಿಸುತ್ತಿದ್ದೇನೆ. ನೋಟಿಸ್ ನೀಡದೆ ಏಕಾಏಕಿ ಆದೇಶ ಮಾಡಲಾಗಿದೆ. ಆದರೂ…

Read More

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಇಂದು ಬಹುನಿರೀಕ್ಷಿತ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ (10ನೇ ತರಗತಿ) ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ. ಈ ಬಾರಿ ರಾಜ್ಯದಲ್ಲಿ ದಾಖಲೆಯ ಶೇ. 94.10 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಈ ವರ್ಷ ಒಟ್ಟು 7,70,209 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 7,24,794 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯು ಶೇ. 98.40 ಫಲಿತಾಂಶದೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದರೆ, ಉಡುಪಿ (ಶೇ. 98.18) ದ್ವಿತೀಯ ಹಾಗೂ ಉತ್ತರ ಕನ್ನಡ (ಶೇ. 98.09) ಜಿಲ್ಲೆಗಳು ತೃತೀಯ ಸ್ಥಾನ ಪಡೆದಿವೆ. ಕಲಬುರಗಿ ಜಿಲ್ಲೆಯು ಕೊನೆಯ ಸ್ಥಾನದಲ್ಲಿದೆ. ಈ ಬಾರಿ ಒಟ್ಟು 7 ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಹಂಚಿಕೊಂಡಿದ್ದಾರೆ. ಇವರಲ್ಲಿ ದಾವಣಗೆರೆಯ ಭರತ್ ಜಿ, ಬೆಳಗಾವಿಯ ರೂಪಾ ಚನ್ನೇಗೌಡ ಪಾಟೀಲ್, ಮತ್ತು ಹಾಸನದ ಜಾಹ್ನವಿ ಪ್ರಮುಖರು. ಪ್ರತಿ ಬಾರಿಯಂತೆ ಈ…

Read More

ತುಮಕೂರು: “ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ. ಕನ್ನಡ ಮತ್ತು ಕನ್ನಡಿಗರಿಗೆ ಮೊದಲ ಮನ್ನಣೆ ಸಿಗಬೇಕು ಎಂಬುದು ನಮ್ಮ ಸಂಘಟನೆಯ ಮೂಲ ಆಶಯ,” ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಅರುಣ್ ಕೃಷ್ಣಪ್ಪ ಅವರು ತಿಳಿಸಿದರು. ನಗರದಲ್ಲಿ ಬುಧವಾರ ನಡೆದ ಕರವೇ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯಾಧ್ಯಕ್ಷರಾದ ನಾರಾಯಣಗೌಡರ ಮಾರ್ಗದರ್ಶನದಲ್ಲಿ ಜಿಲ್ಲೆಯಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಿಷ್ಠಗೊಳಿಸುವ ಉದ್ದೇಶದಿಂದ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಪ್ರಕಟಿಸಿದರು. ಜಿಲ್ಲೆಯ ಕೈಗಾರಿಕಾ ವಲಯದಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಮಾತನಾಡಿದ ಅವರು, “ಜಿಲ್ಲೆಯ ಕಾರ್ಖಾನೆಗಳಲ್ಲಿ ಪರರಾಜ್ಯದವರೇ ತುಂಬಿ ಹೋಗಿದ್ದಾರೆ. ಅರ್ಹ ಕನ್ನಡಿಗರು ಕೆಲಸವಿಲ್ಲದೆ ಮೂಲೆಗುಂಪಾಗುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಎಚ್ಚೆತ್ತು ಕನ್ನಡಿಗರಿಗೆ ಮೊದಲ ಆದ್ಯತೆಯ ಮೇರೆಗೆ ಉದ್ಯೋಗ ನೀಡಲು ಕ್ರಮ ಕೈಗೊಳ್ಳಬೇಕು. ಈ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿದರೆ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ತೀವ್ರ ಹೋರಾಟ ಹಮ್ಮಿಕೊಳ್ಳಲಾಗುವುದು,” ಎಂದು ಎಚ್ಚರಿಸಿದರು. ನೂತನ ಪದಾಧಿಕಾರಿಗಳ ಪಟ್ಟಿ ಜಿಲ್ಲಾ ಉಪಾಧ್ಯಕ್ಷರು: ಎಂ.ಡಿ. ಮನ್ಸೂರ್ ಅಲಿ, ಅರುಣ್‌ಗೌಡ. ಜಿಲ್ಲಾ ಸಂಘಟನಾ…

Read More

ತುಮಕೂರು: ನಗರದ ಜನತೆಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಗೃಹ ಸಚಿವರು ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಜಿ. ಪರಮೇಶ್ವರ್ ಅವರು ಇಂದು ಅಧಿಕಾರಿಗಳ ತಂಡದೊಂದಿಗೆ ಬುಗುಡನಹಳ್ಳಿ ಕೆರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರಕ್ಕೆ ಪ್ರಮುಖ ನೀರಿನ ಮೂಲವಾಗಿರುವ ಬುಗುಡನಹಳ್ಳಿ ಕೆರೆಯಲ್ಲಿ ಪ್ರಸ್ತುತ ಇರುವ ನೀರಿನ ಸಂಗ್ರಹದ ಬಗ್ಗೆ ಖುದ್ದು ಮಾಹಿತಿ ಪಡೆದ ಸಚಿವರು, ಲಭ್ಯವಿರುವ ನೀರು ಇನ್ನೂ ಎಷ್ಟು ದಿನಗಳ ಕಾಲ ಪೂರೈಕೆಗೆ ಸಾಕಾಗುತ್ತದೆ ಎಂಬುದನ್ನು ಅಧಿಕಾರಿಗಳಿಂದ ಕೇಳಿ ತಿಳಿದುಕೊಂಡರು. ತುಮಕೂರು ನಗರದಲ್ಲಿ ಕುಡಿಯುವ ನೀರಿನ ಅಭಾವ ಸೃಷ್ಟಿಯಾಗದಂತೆ ತಡೆಯಲು ಸಚಿವರು ತಕ್ಷಣದ ಕ್ರಮ ಕೈಗೊಂಡಿದ್ದಾರೆ. ಈ ಕುರಿತು ಮಾತನಾಡಿದ ಅವರು, “ಹಾಸನ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಅವರಿಗೆ ಖುದ್ದು ಕರೆ ಮಾಡಿ ಮಾತನಾಡಿದ್ದೇನೆ. ಹೇಮಾವತಿ ಜಲಾಶಯದಿಂದ ಕೂಡಲೇ ನೀರು ಹರಿಸುವ ಕುರಿತು ಸಮಾಲೋಚನೆ ನಡೆಸಲಾಗಿದ್ದು, ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ,” ಎಂದು ತಿಳಿಸಿದರು. ಕೆರೆ ಪರಿಶೀಲನೆಯ ನಂತರ ಅಧಿಕಾರಿಗಳೊಂದಿಗೆ…

Read More

ತುಮಕೂರು: ಕಲ್ಪತರು ನಾಡು ತುಮಕೂರು ಈಗ ರಾಷ್ಟ್ರೀಯ ಮಟ್ಟದ ಕ್ರೀಡಾ ಸಂಭ್ರಮಕ್ಕೆ ಸಜ್ಜಾಗಿದೆ. ಇದೇ ಏಪ್ರಿಲ್ 24ರಿಂದ ಮೂರು ದಿನಗಳ ಕಾಲ ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ’24ನೇ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ ಕ್ರೀಡಾಕೂಟ’ (U–20) ಆಯೋಜನೆಯಾಗಿದ್ದು, ಜಿಲ್ಲೆಗೆ ಈ ಪ್ರತಿಷ್ಠಿತ ಕೂಟದ ಆತಿಥ್ಯ ವಹಿಸುವ ಅವಕಾಶ ಒದಗಿ ಬಂದಿದೆ. ಈ ಬಾರಿಯ ಕ್ರೀಡಾಕೂಟ ಕೇವಲ ಸ್ಪರ್ಧೆಯಲ್ಲ, ಬದಲಾಗಿ ಅಂತರರಾಷ್ಟ್ರೀಯ ಮಟ್ಟಕ್ಕೆ ಏರಲು ಕ್ರೀಡಾಪಟುಗಳಿಗೆ ಇರುವ ದೊಡ್ಡ ಅವಕಾಶ. ಆಗಸ್ಟ್ 5 ರಿಂದ 9 ರವರೆಗೆ ಅಮೆರಿಕದ ಒರೆಗನ್ ಸ್ಟೇಟ್‌ನಲ್ಲಿ ನಡೆಯಲಿರುವ ವಿಶ್ವ ಚಾಂಪಿಯನ್‌ ಶಿಪ್‌ ಗೆ ಭಾರತವನ್ನು ಪ್ರತಿನಿಧಿಸುವ ಅಥ್ಲೀಟ್‌ ಗಳನ್ನು ಈ ಕೂಟದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ. ರಾಷ್ಟ್ರದಾದ್ಯಂತ ವಿವಿಧ ರಾಜ್ಯಗಳಿಂದ ಸುಮಾರು 1500 ಕ್ರೀಡಾಪಟುಗಳು ಆಗಮಿಸಲಿದ್ದಾರೆ. ಒಟ್ಟು 40 ವಿವಿಧ ಅಥ್ಲೆಟಿಕ್ ಸ್ಪರ್ಧೆಗಳು ನಡೆಯಲಿವೆ. ರಾಜ್ಯದಿಂದ 110 ಅಥ್ಲೀಟ್‌ ಗಳು ಪಾಲ್ಗೊಳ್ಳುತ್ತಿದ್ದು, ಅದರಲ್ಲಿ 6…

Read More

ಬೆಂಗಳೂರು: ಬಹುಚರ್ಚಿತ ಚಿನ್ನದ ಕಳ್ಳಸಾಗಣೆ (Gold Smuggling) ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ಸ್ಯಾಂಡಲ್‌ ವುಡ್ ನಟಿ ರನ್ಯಾ ರಾವ್ ಅವರಿಗೆ ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಕೆಲ ದಿನಗಳ ಹಿಂದೆ ಚಿನ್ನದ ಕಳ್ಳಸಾಗಣೆ ಆರೋಪದ ಮೇಲೆ ನಟಿ ರನ್ಯಾ ರಾವ್ ಅವರನ್ನು ಅಧಿಕಾರಿಗಳು ಬಂಧಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯವು ರನ್ಯಾ ರಾವ್ ಅವರ ಜಾಮೀನು ಅರ್ಜಿಯನ್ನು ಪುರಸ್ಕರಿಸಿದೆ. ನ್ಯಾಯಾಲಯವು ಜಾಮೀನು ನೀಡಿದ ಹಿನ್ನೆಲೆಯಲ್ಲಿ ಇಂದು (ಏಪ್ರಿಲ್ 22) ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ರನ್ಯಾ ರಾವ್ ಅವರು ಸುದೀಪ್ ನಟನೆಯ ‘ಮಾಣಿಕ್ಯ’ ಸೇರಿದಂತೆ ಕೆಲವು ಸಿನಿಮಾಗಳಲ್ಲಿ ನಟಿಸಿದ್ದರು. ಈ ಸ್ಮಗ್ಲಿಂಗ್ ಪ್ರಕರಣ ಸ್ಯಾಂಡಲ್‌ ವುಡ್‌ ನಲ್ಲಿ ಸಾಕಷ್ಟು ಸಂಚಲನ ಮೂಡಿಸಿತ್ತು. ಸದ್ಯ ನ್ಯಾಯಾಲಯದ ಆದೇಶದಂತೆ ಅವರು ಜೈಲಿನಿಂದ ಹೊರಬರುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಕೊಡಿಗೇನಹಳ್ಳಿ (ತುಮಕೂರು ಜಿಲ್ಲೆ): ಮಗಳ ಪ್ರಿಯಕರನ ಜೊತೆ ಸೇರಿ ಅತ್ತೆಯೇ ತನ್ನ ಅಳಿಯನನ್ನು ಕೊಲೆ ಮಾಡಿರುವ ಭೀಕರ ಘಟನೆ ಇಲ್ಲಿನ ದಂಡೀಪುರದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ವ್ಯಕ್ತಿಯ ಅತ್ತೆ ಜಯಮ್ಮ (50), ಆಕೆಯ ಪುತ್ರ ನಂದೀಶ್ (35) ಮತ್ತು ಮಗಳ ಪ್ರಿಯಕರ ಅಮರ್ ನಾರಾಯಣ್ (23) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ನರಸಿಂಹಮೂರ್ತಿ ಎಂದು ಗುರುತಿಸಲಾಗಿದೆ. ಇವರು ಮೂರು ವರ್ಷಗಳ ಹಿಂದೆ ಜಯಮ್ಮ ಅವರ ಪುತ್ರಿ ಸುಜಾತಾ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು ಮತ್ತು ಅತ್ತೆ ಮನೆಯಲ್ಲೇ ವಾಸವಾಗಿದ್ದರು. ಆದರೆ, ಸುಜಾತಾ ಅವರು ಅನಾರೋಗ್ಯದ ಕಾರಣದಿಂದ ಕಳೆದ ಜನವರಿ 31ರಂದು ಮೃತಪಟ್ಟಿದ್ದರು. ಸುಜಾತಾ ಬದುಕಿದ್ದಾಗ ಆಕೆಗೆ ಅಮರ್ ಎಂಬಾತನೊಂದಿಗೆ ಅಕ್ರಮ ಸಂಬಂಧವಿತ್ತು ಎನ್ನಲಾಗಿದೆ. ಈ ವಿಷಯವಾಗಿ ನರಸಿಂಹಮೂರ್ತಿ ಅವರು ಅತ್ತೆ ಜಯಮ್ಮ ಅವರೊಂದಿಗೆ ಆಗಾಗ ಗಲಾಟೆ ಮಾಡುತ್ತಿದ್ದರು. ಇದರಿಂದ ರೋಸಿಹೋದ ಜಯಮ್ಮ, ತನ್ನ ಮಗ ನಂದೀಶ್ ಮತ್ತು ಮಗಳ ಪ್ರಿಯಕರ ಅಮರ್ ಜೊತೆ ಸೇರಿ ಅಳಿಯನನ್ನು ಮುಗಿಸಲು ಸಂಚು…

Read More

ಬೆಂಗಳೂರು: ಪ್ರೀತಿಸಿ, ಮನೆಯವರನ್ನು ಒಪ್ಪಿಸಿ ಮದುವೆಯಾಗಿದ್ದ ಪತ್ನಿಯೊಬ್ಬಳು, ಪತಿಯ ಸ್ನೇಹಿತನನ್ನೇ ‘ಅಣ್ಣ’ ಎಂದು ಕರೆದು ಈಗ ಆತನ ಜೊತೆಯೇ ಪರಾರಿಯಾಗಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಜಿಮ್ ಟ್ರೈನರ್ ಆಗಿರುವ ನಿತೇಶ್ ಎಂಬುವವರು ನಂದಿನಿ (ಹೆಸರು ಬದಲಾಯಿಸಲಾಗಿದೆ) ಎಂಬಾಕೆಯನ್ನು ಪ್ರೀತಿಸಿ ವಿವಾಹವಾಗಿದ್ದರು. ನಿತೇಶ್ ಅವರು ಈ ಹಿಂದೆ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾಗ ನವೀನ್ ಎಂಬಾತನ ಪರಿಚಯವಾಗಿತ್ತು. ಇಬ್ಬರು ಆಪ್ತ ಸ್ನೇಹಿತರಾಗಿದ್ದರು. ಮದುವೆಯ ನಂತರ ನವೀನ್, ನಿತೇಶ್ ಅವರ ಮನೆಯಲ್ಲೇ ಬಾಡಿಗೆಗೆ ವಾಸವಿದ್ದನು. ಮನೆಯಲ್ಲೇ ವಾಸವಿದ್ದ ನವೀನ್ ಜೊತೆ ಪತ್ನಿ ನಂದಿನಿ ಅತಿಯಾದ ಸಲುಗೆ ಬೆಳೆಸಿಕೊಂಡಿದ್ದಳು. ಇದನ್ನು ಗಮನಿಸಿದ ಪತಿ ನಿತೇಶ್ ಹಲವಾರು ಬಾರಿ ಪತ್ನಿಗೆ ಬುದ್ಧಿವಾದ ಹೇಳಿದ್ದರು. ಅಷ್ಟೇ ಅಲ್ಲದೆ, ಈ ಕಾರಣಕ್ಕಾಗಿಯೇ ಅವರು ಮನೆ ಬದಲಾಯಿಸಿದ್ದರು. ಆದರೂ ನಂದಿನಿ ಮಾತ್ರ ನವೀನ್ ಜೊತೆಗಿನ ಸಂಪರ್ಕವನ್ನು ಮುಂದುವರಿಸಿದ್ದಳು. ಘಟನೆ ನಡೆದ ದಿನದಂದು ತನಗೆ ಹೊಟ್ಟೆನೋವು ಇದೆ ಎಂದು ಕೆಲಸಕ್ಕೆ ರಜೆ ಹಾಕಿದ್ದ ನಂದಿನಿ, ಪತಿ ಇಲ್ಲದ ವೇಳೆ ನವೀನ್ ಜೊತೆ…

Read More

ಕೊರಟಗೆರೆ: ತಾಲ್ಲೂಕಿನ ಸಾರ್ವಜನಿಕರ ಅನುಕೂಲಕ್ಕಾಗಿ ಫ್ರೆಂಡ್ಸ್ ಗ್ರೂಪ್ ಸೇವಾ ಸಮಿತಿ ವತಿಯಿಂದ ನೂತನ ಉಚಿತ ತುರ್ತು ವಾಹನವನ್ನು (Ambulance) ಇಂದು ಲೋಕಾರ್ಪಣೆ ಮಾಡಲಾಗುತ್ತಿದೆ ಎಂದು ಸಮಿತಿಯ ಅಧ್ಯಕ್ಷರಾದ ರವಿಕುಮಾರ್ ತಿಳಿಸಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಫ್ರೆಂಡ್ಸ್ ಗ್ರೂಪ್ ಸೇವಾ ಸಮಿತಿ ಮತ್ತು ಜಗ್ಗೇಶ್ ಅಭಿಮಾನಿಗಳ ಸಂಘದ ಜಂಟಿ ಆಶ್ರಯದಲ್ಲಿ ಇಂದು ಸಂಜೆ 5:00 ಗಂಟೆಗೆ ಪಟ್ಟಣದ ಪುರಸಭಾ ಕಾರ್ಯಾಲಯದ ಮುಂಭಾಗದಲ್ಲಿ ಈ ಸೇವಾ ಕಾರ್ಯಕ್ರಮ ನಡೆಯಲಿದೆ ಎಂದರು. ಹೊಸ ವಾಹನದ ಅವಶ್ಯಕತೆ: ಕಳೆದ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಹಳೆಯ ತುರ್ತು ವಾಹನವು ದುರಸ್ತಿಯಲ್ಲಿದ್ದ ಕಾರಣ, ಸಾರ್ವಜನಿಕರ ತುರ್ತು ಅಗತ್ಯಗಳಿಗಾಗಿ ನೂತನ ವಾಹನವನ್ನು ಸಜ್ಜುಗೊಳಿಸಲಾಗಿದೆ. ವಾಹನ ಸಮರ್ಪಣೆಯ ಜೊತೆಗೆ ಗುರುವಂದನೆ ಮತ್ತು ಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ, ಇದೇ ವೇಳೆ ಚಲನಚಿತ್ರ ಹಾಸ್ಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ತಿಳಿಸಿದರು. ಸಿದ್ದರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಹಾಗೂ ಎಲೆರಾಂಪುರದ ಡಾ. ಶ್ರೀ ಹನುಮಂತನಾಥ ಸ್ವಾಮೀಜಿ ಅವರು…

Read More

ತುಮಕೂರು: ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವ ಐತಿಹಾಸಿಕ ‘ನಾರಿಶಕ್ತಿ ವಂದನ್’ ಮಸೂದೆಯನ್ನು ವಿರೋಧಿಸುವ ಮೂಲಕ ಕಾಂಗ್ರೆಸ್ ಪಕ್ಷವು ದೇಶದ ಅರ್ಧದಷ್ಟು ಜನಸಂಖ್ಯೆಯಾಗಿರುವ ಮಹಿಳೆಯರಿಗೆ ದ್ರೋಹ ಬಗೆದಿದೆ ಎಂದು ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್ ಕಿಡಿಕಾರಿದ್ದಾರೆ. ಮಂಗಳವಾರ ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳ ನಡವಳಿಕೆಯನ್ನು ತೀವ್ರವಾಗಿ ಖಂಡಿಸಿದರು. ಪ್ರಧಾನಿ ನರೇಂದ್ರ ಮೋದಿಯವರು ಮಹಿಳೆಯರ ನಿಜವಾದ ಸಬಲೀಕರಣಕ್ಕಾಗಿ ತಂದ ಮಸೂದೆಯನ್ನು ‘ಇಂಡಿ’ ಒಕ್ಕೂಟವು ತಿರಸ್ಕರಿಸಿದೆ. ಇದು ಕೇವಲ ಬಿಜೆಪಿಯ ಮಹಿಳೆಯರಿಗಲ್ಲದೆ, ಎಲ್ಲಾ ಪಕ್ಷಗಳ ಮಹಿಳೆಯರ ರಾಜಕೀಯ ಅವಕಾಶವನ್ನು ಕಸಿದುಕೊಂಡಂತಾಗಿದೆ ಎಂದು ಅವರು ಹೇಳಿದರು. ಮಹಿಳಾ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರವು ಜಲಜೀವನ್ ಮಿಷನ್ ಮೂಲಕ 15 ಕೋಟಿ ಮನೆಗಳಿಗೆ ನೀರು, 10 ಕೋಟಿ ಉಜ್ವಲ ಅನಿಲ ಸಂಪರ್ಕ, 12 ಕೋಟಿ ಶೌಚಾಲಯ ಹಾಗೂ 4 ಕೋಟಿಗೂ ಹೆಚ್ಚು ಮನೆಗಳನ್ನು ಮಹಿಳೆಯರ ಹೆಸರಿನಲ್ಲಿ ನೀಡಿದೆ ಎಂದು ಶಾಸಕರು ವಿವರಿಸಿದರು.…

Read More