Subscribe to Updates
Get the latest creative news from FooBar about art, design and business.
- ತುಮಕೂರು: ಜೂ. 19ರಂದು ರಾಷ್ಟ್ರೀಯ PM-VBRY ಕಾರ್ಯಕ್ರಮ: ಫಲಾನುಭವಿಗಳಿಗೆ ₹2,400 ಕೋಟಿ ಪ್ರೋತ್ಸಾಹ ಧನ ವಿತರಿಸಲಿರುವ ಪ್ರಧಾನಿ ಮೋದಿ
- ಕರ್ನಾಟಕ ವಿಧಾನ ಪರಿಷತ್ ಚುನಾವಣೆ ವೇಳೆ ನಡೆದ ಹಲವು ಸ್ವಾರಸ್ಯಕರ ಘಟನೆಗಳು ಇಲ್ಲಿವೆ!
- ದಸಂಸ ಎಲ್ಲಾ ಬಣಗಳನ್ನು ಒಗ್ಗೂಡಿಸಿ ತಾಲೂಕು ಒಕ್ಕೂಟ ರಚನೆಗೆ ಸರಗೂರಿನಲ್ಲಿ ಪೂರ್ವಭಾವಿ ಸಭೆ
- ಬೀದರ್: ಬೀಜ ವಿತರಣೆಯಲ್ಲಿ ರೈತರಿಗೆ ವಂಚನೆ
- ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್, ಲೇಖನಿ ಸಾಮಗ್ರಿ ವಿತರಣೆ
- ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ
- ಕುರುಗೋಡಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಗೃತಿ ಜಾಥಾ, ಉದ್ದಿಮೆಗಳ ಮೇಲೆ ದಾಳಿ: ಬಾಲಕನ ರಕ್ಷಣೆ
- ಬಳ್ಳಾರಿಯಲ್ಲಿ ಜೂನ್ 19ರಂದು ಪಿಎಂ: ವಿಬಿಆರ್ ವೈ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ
Author: admin
ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಇವರ ಸಂಯುಕ್ತಾಶ್ರಯದಲ್ಲಿ ಮಾರ್ಚ್ 12ರಂದು ನಗರದ ಡಾ: ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಬೆಳಿಗ್ಗೆ 10:30 ಗಂಟೆಗೆ ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ವಿವಿಧ ಸಮುದಾಯ ಮುಖಂಡರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕನ್ನಡ ಮತ್ತುಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್ ಕು. ಮಿರ್ಜಿ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಕುಡಿಯುವ ನೀರು ಹಾಗೂ ಜಾನುವಾರು ಮೇವಿನ ಸಮಸ್ಯೆಗಳಿಗೆ ಸಂಬಂಧಿಸಿದ ಸಾರ್ವಜನಿಕ ದೂರುಗಳನ್ನು ಸಲ್ಲಿಸಲು ಸಾರ್ವಜನಿಕರ ಅನುಕೂಲಕ್ಕಾಗಿ ತಾಲೂಕು ಮಟ್ಟದಲ್ಲಿ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಸೋಮವಾರ ಸಂಜೆ ಕುಡಿಯುವ ನೀರು ಹಾಗೂ ಮೇವಿನ ಪರಿಸ್ಥಿತಿ ಕುರಿತಂತೆ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಸಹಾಯವಾಣಿ ಕೇಂದ್ರವು ದಿನದ 24 ಗಂಟೆಗಳ ಕಾಲವೂ ಕಾರ್ಯನಿರ್ವಹಿಸಬೇಕು. ಕುಡಿಯುವ ನೀರು ಹಾಗೂ ಮೇವಿನ ಸಮಸ್ಯೆಯನ್ನು ತ್ವರಿತವಾಗಿ ವಿಶ್ಲೇಷಿಸಿ, ಅಗತ್ಯವಿದ್ದಾಗ ಶೀಘ್ರವಾಗಿ ಕ್ರಮ ಕೈಗೊಳ್ಳಬೇಕು. ಸಹಾಯವಾಣಿ ಕೇಂದ್ರದಲ್ಲಿ ದಾಖಲಾಗುವ ಸಾರ್ವಜನಿಕರ ಸಮಸ್ಯೆ ಹಾಗೂ ಪರಿಹಾರ ಕ್ರಮದ ವರದಿಯನ್ನು ಪ್ರತಿದಿನ ತಮಗೆ ಮಾಹಿತಿ ನೀಡಬೇಕೆಂದು ಸೂಚಿಸಿದರು. ಕುಡಿಯುವ ನೀರಿನ ಸಮಸ್ಯೆ ತಲೆದೋರಿದಾಗ ತುರ್ತು ಕ್ರಮಗಳನ್ನು ಕೈಗೊಳ್ಳಬೇಕು. ಜನ–ಜಾನುವಾರುಗಳಿಗೆ ನೀರಿನ ಪೂರೈಕೆ, ಶುದ್ಧೀಕರಣ ಮತ್ತು ಲಭ್ಯತೆ ಬಗ್ಗೆ ಮುಂದಿನ ಸಭೆಯಲ್ಲಿ ಮಾಹಿತಿ ನೀಡಬೇಕು ಸೂಚನೆ ನೀಡಿದರು. ಕೊಳವೆ ಬಾವಿ ಕೊರೆದು…
ಬೀದರ್: ಶಾಸಕ ಪ್ರಭು ಚವ್ಹಾಣ್ ಕ್ಷೇತ್ರದಲ್ಲಿ ಕುಡಿಯುವ ನೀರಿಗಾಗಿ ಜನರು ಪರದಾಡುತ್ತಿದ್ದು, ಬೀದರ್ ಜಿಲ್ಲಾ ಕಮಲನಗರ ತಾಲ್ಲೂಕಿನ ಸಾವಳಿ ಗ್ರಾಮದಲ್ಲಿ ನೀರಿಗೆ ಹಾಹಾಕಾರ ಸೃಷ್ಟಿಯಾಗಿದೆ. ಗ್ರಾಮದಲ್ಲಿ ಹನಿ ಹನಿ ಕುಡಿಯೋ ನೀರಿಗೂ ಜನರು ಪರದಾಡುವಂತಾಗಿದೆ. ಟ್ಯಾಂಕ್ ಬಳಿ ಬಿಂದಿಗೆಗಳ ಸಾಲು, ನೀರಿಗಾಗಿ ಕ್ಯೂ ನಿಂತ ಮಹಿಳೆಯರ ದಂಡೇ ಕಾಣಿಸುತ್ತಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಸಾವಳಿ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಸೃಷ್ಟಿಯಾಗಿದೆ. ತಕ್ಷಣವೇ ಶಾಸಕರು ಮಧ್ಯಪ್ರವೇಶಿಸಿ ಕುಡಿಯುವ ನೀರಿನ ಸಮಸ್ಯೆ ಬಗೆ ಹರಿಸಬೇಕು, ಇಲ್ಲವಾದರೆ ಸಾರ್ವಜನಿಕರು ತೀವ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಚಲಿಸುತ್ತಿದ್ದ ವೇಳೆ ಏಕಾಏಕಿ ಕಾರಿನಲ್ಲಿ ದಟ್ಟ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟು ಕರಕಲಾಗಿರೋ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ದೇವರಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವೀಸ್ ರಸ್ತೆಯಲ್ಲಿ ನಡೆದಿದೆ. ಶಿರಾ ತಾಲ್ಲೂಕಿನ ಮದ್ದನಾಯಕನಹಳ್ಳಿ ಗ್ರಾಮಕ್ಕೆ ಸೇರಿದವರು ಕಾರು ಎನ್ನಲಾಗಿದೆ. ಕಾರು ಶಿರಾ ಕಡೆಯಿಂದ ತಾವರೆ ಕೆರೆ ಕಡೆ ಹೋಗುತ್ತಿದ್ದ ವೇಳೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಿದ್ದಾರೆ. ನೋಡು ನೋಡುತ್ತಿದ್ದಂತೆ ಕಾರು ಧಗಧಗನೆ ಹೊತ್ತಿ ಉರಿಯಿತು. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಅಗ್ನಿ ಶಾಮಕದಳದ ಸಿಬ್ಬಂದಿ ದೌಡಾಯಿಸಿ, ಅಗ್ನಿ ನಂದಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ನಟಿ ರನ್ಯಾ ರಾವ್ ಪ್ರಕರಣದಲ್ಲಿ ಮಿನಿಸ್ಟರ್ ಕೈವಾಡ ಇದೆ ಎನ್ನುವುದು ಊಹಾಪೋಹ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ರನ್ಯಾ ರಾವ್ ಕೇಸಲ್ಲಿ ಸಚಿವರು ಭಾಗಿಯಾಗಿರುವ ಆರೋಪಗಳು ಬಿಜೆಪಿಯವರ ಊಹಾಪೋಹ. ತನಿಖೆ ವೇಳೆ ಯಾರ ಕೈವಾಡವಿದೆ ಎನ್ನುವುದು ಗೊತ್ತಾಗುತ್ತದೆ ಎಂದರು. ಆ ಮಿನಿಸ್ಟರ್ ಕೈವಾಡವಿದೆ. ಈ ಮಿನಿಸ್ಟರ್ ಕೈವಾಡವಿದೆ ಎನ್ನುವುದು ಊಹಾಪೋಹ. ಎಲ್ಲ ಸತ್ಯ ತನಿಖೆಯಿಂದ ಹೊರಗೆ ಬರಲಿ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಕೈ ಹಿಡಿದೆಳೆದ ಅಭಿಮಾನಿಯೊಬ್ಬನಿಗೆ ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಕಪಾಳ ಮೋಕ್ಷ ಮಾಡಿರುವ ಘಟನೆ ಕಾರ್ಯಕ್ರಮವೊಂದರಲ್ಲಿ ನಡೆದಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ. ಅಭಿಮಾನಿಯೊಬ್ಬ ಫೋಟೋ ತೆಗೆಸಿಕೊಳ್ಳುವ ನೆಪದಲ್ಲಿ ರಾಗಿಣಿಯ ಕೈ ಹಿಡಿದು ಎಳೆದಿದ್ದಾರೆ. ಕೂಡಲೇ ನಟಿ ರಾಂಗ್ ಆಗಿದ್ದಾರೆ. ಕೈ ಹಿಡಿದು ಎಳೆದ ಆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ್ದಾರೆ. ಅಭಿಮಾನಿಯ ಕೆನ್ನೆಗೆ ಬಾರಿಸಿದ ನಂತರ ಸ್ಥಳದಲ್ಲೇ ಆತನಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ರಾಗಿಣಿ ಅವರ ರೌದ್ರಾವತಾರ ಕಂಡು ಸ್ಥಳದಲ್ಲಿದ್ದ ಜನರು ಶಾಕ್ ಆಗಿದ್ದಾರೆ. ತಕ್ಷಣವೇ ಕೈ ಹಿಡಿದೆಳೆದ ವ್ಯಕ್ತಿಯನ್ನು ಸ್ಥಳದಿಂದ ಹೊರ ದಬ್ಬಲಾಗಿದೆ. ಅಂದ ಹಾಗೆ ಇತ್ತೀಚೆಗೆ ಸಾಂಗ್ ಲಾಂಚ್ ಕಾರ್ಯಕ್ರಮಕ್ಕೆ ಬಂದ ವೇಳೆ ಈ ಘಟನೆ ನಡೆದಿದೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಮೈಸೂರು: ಮಸೀದಿ, ಚರ್ಚ್ ನಿಂದ ಸರ್ಕಾರಕ್ಕೆ ಐದು ರೂಪಾಯಿ ತೆರಿಗೆ ಬರ್ತಿದೆಯಾ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದು, ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಧರ್ಮದ ಆಧಾರದ ಮೇಲೆ ತೆರಿಗೆ ಸಂಗ್ರಹದ ವರದಿ ಸಿದ್ಧಪಡಿಸಿ. ಹಿಂದೂಗಳು ಎಷ್ಟು ತೆರಿಗೆ ಕಟ್ಟುತ್ತಿದ್ದಾರೆ? ಮುಸ್ಲಿಮರು ಎಷ್ಟು ತೆರಿಗೆ ಕಟ್ಟುತ್ತಿದ್ದಾರೆ? ಕ್ರಿಶ್ಚಿಯನ್ನರು ಎಷ್ಟು ತೆರಿಗೆ ಕಟ್ಟುತ್ತಿದ್ದಾರೆ? ಅದರ ವರದಿ ತಯಾರಿಸಿ ಬಿಡುಗಡೆ ಮಾಡಿ. ರಾಜ್ಯ ಬಜೆಟ್ಗೆ ಸಾಬ್ರ ಕೊಡುಗೆ ಎಷ್ಟು ಎಂಬುದು ಜನರಿಗೆ ಗೊತ್ತಾಗಲಿ ಎಂದರು. ಮಸೀದಿಯಿಂದ, ಚರ್ಚ್ ನಿಂದ ಸರ್ಕಾರಕ್ಕೆ ಐದು ರೂಪಾಯಿ ತೆರಿಗೆ ಬರ್ತಿದ್ದಿಯಾ? ಇದು ಹಲಾಲ್ ಬಜೆಟ್ ಅನ್ನೋದರಲ್ಲಿ ತಪ್ಪು ಇಲ್ಲ. ಒಕ್ಕಲಿಗರು, ಲಿಂಗಾಯತರು, ಬ್ರಾಹ್ಮಣ, ಮಡಿವಾಳರ ಹೀಗೆ ನಾನಾ ಜಾತಿಯ ಅಭಿವೃದ್ಧಿ ನಿಗಮಕ್ಕೆ ಎಷ್ಟು ಹಣ ಕೊಟ್ಟಿದ್ದೀರಾ? ಇವತ್ತು ಇಲ್ಲಿನ ಕೆಲ ಮುಸ್ಲಿಮರಿಗೆ ಪಾಕಿಸ್ತಾನ ನಿಷ್ಠೆ ಇದೆ. ರಾಜ್ಯದಲ್ಲಿ ಮದರಾಸ, ಉರ್ದು ಶಾಲೆ ಬಂದ್ ಮಾಡಿ ಎಂದು ಆಗ್ರಹಿಸಿದರು. ನಮ್ಮತುಮಕೂರಿನ ಕ್ಷಣ…
ಕೊಪ್ಪಳ: ವಿದೇಶಿ ಮಹಿಳೆ ಸೇರಿದಂತೆ ಇಬ್ಬರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆಯ ಬೆನ್ನಲ್ಲೇ ಕೊಪ್ಪಳ ಜಿಲ್ಲಾ ಪೊಲೀಸ್ ಇಲಾಖೆ ಗಂಗಾವತಿ ತಾಲೂಕಿನ ಆನೆಗೊಂದಿ ಮತ್ತು ಕೊಪ್ಪಳ ತಾಲೂಕಿನ ಬಸ್ಸಾಪುರ ಸುತ್ತಮುತ್ತಲಿರುವ ಹೋಂ ಸ್ಟೇ, ರೆಸಾರ್ಟ್ ಗಳ ಮೇಲೆ ದಾಳಿ ನಡೆಸಿದ್ದಾರೆ. ಹೋಂ ಸ್ಟೇ, ರೆಸಾರ್ಟ್ಗಳು ವಿದೇಶಿಗರ ಬಗ್ಗೆ ಯಾವುದೇ ಮಾಹಿತಿ ನೀಡದ ಆರೋಪ ಮತ್ತು ಅಕ್ರಮ ಚಟುವಟಿಕೆ ನಡೆಯುತ್ತಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಅರಸಿದ್ದಿ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ. ರಿಜಿಸ್ಟರ್ ಪುಸ್ತಕ ಸೇರಿದಂತೆ ವಿವಿಧ ದಾಖಲೆಗಳನ್ನು ಪರಿಶೀಲನೆ ನಡೆಸಿ, ಸಂಪೂರ್ಣ ತಪಾಸಣೆ ನಡೆಸಿ ಅಕ್ರಮ ಚಟುವಟಿಕೆ ನಡೆಸಿದರೇ ಕಠಿಣ ಕ್ರಮ ಕೈಗೊಳ್ಳುವುದಾಗಿ ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ತರಕಾರಿ ಬೆಲೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. ಸಗಟು ದರದಲ್ಲಿ ಹುರುಳಿಕಾಯಿ ಹೊರತುಪಡಿಸಿದರೆ ಎಲ್ಲಾ ತರಕಾರಿ ಬೆಲೆ 40 ರೂ. ಆಸುಪಾಸಿನಲ್ಲಿದೆ ಚಿಲ್ಲರೆ ದರದಲ್ಲಿ 50 ರೂ.ಗೆ ಮಾರಾಟವಾಗುತ್ತಿದೆ. ನಾಟಿ ಹುರುಳಿಕಾಯಿ ಹೊರತುಪಡಿಸಿದರೆ ಉಳಿದ ತರಕಾರಿಗಳ ಬೆಲೆ ಏನೂ ಹೆಚ್ಚಾಗಿಲ್ಲ. ಮಾರುಕಟ್ಟೆಯಲ್ಲಿ ಕಳೆದ ವಾರ ಕೆಜಿಗೆ 50 ರೂ.ಗೆ ಮಾರಾಟವಾಗುತ್ತಿದ್ದ ಬೀನ್ಸ್ ಇಂದು 65 ರೂ. ತಲುಪಿದೆ. ಉಳಿದಂತೆ ಬದನೆ ಕಾಯಿ ಕೆಜಿಗೆ 30, ಕ್ಯಾಪ್ತಿಕಂ 40, ಮೂಲಂಗಿ 30 ಟಮೋಟೋ 20, ಬೀಟ್ ರೊಟ್ 30, ನವಿಲ್ಸ್ 30. ಸೌತೆಕಾಯಿ 30, ಡೆಲ್ಲಿ ಕ್ಯಾರೆಟ್ 70, ನಾಟಿ ಕ್ಯಾರೆಟ್ 30, ಎಲೆಕೊಸು 30. ನುಗ್ಗೆಕಾಯಿ 80 ಈರುಳ್ಳಿ 40, ರೂ.ಗೆ ಮಾರಾಟವಾಗುತ್ತಿದೆ. ಕಳೆದ ಎರಡು ಮೂರು ದಿನಗಳ ಹಿಂದೆ 40 ರೂಗೆ ಮಾರಾಟ ವಾಗುತ್ತಿದ್ದ ಹಸಿರು ಬಟಾಣಿ ಇಂದು ದಿಢೀರನೆ 70 ರೂ ತಲುಪಿದೆ. ನೆರೆಯ ತಮಿಳುನಾಡು, ಆಂಧ್ರಪ್ರದೇಶಕ್ಕೆ ಬೆಂಗಳೂರಿನಿಂದ ತರಕಾರಿ ಹೋಗುತ್ತಿತ್ತು. ಆದರೆ ಆ ಭಾಗದಲ್ಲಿ ಹೆಚ್ಚಾಗಿ ಇಳುವರಿ ಬಂದಿದ್ದು…
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಜಿಂದಾಲ್ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತೀವ್ರ ಕಫಾ, ಕೆಮ್ಮಿನಿಂದ ಬಳಲುತ್ತಿರುವ ಹೆಚ್ ಡಿಕೆ, ತುಮಕೂರು ರಸ್ತೆಯಲ್ಲಿರುವ ಜಿಂದಾಲ್ ಪ್ರಕೃತಿ ಚಿಕಿತ್ಸಾಲಯದಲ್ಲಿ 3–4 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ.ಸದ್ಯ ಸ್ವಲ್ಪ ಆರೋಗ್ಯ ಸುಧಾರಣೆ ಆಗಿದೆ ಎಂಬ ಮಾಹಿತಿ ಲಭಿಸಿದೆ. ಇತ್ತೀಚೆಗೆ ಚೆನ್ನೈನ ಅಪೋಲೋ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದರು. ಆದರೂ ಕಫಾ, ಕೆಮ್ಮು ಕಡಿಮೆಯಾಗದ ಹಿನ್ನೆಲೆ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಅನಾರೋಗ್ಯದ ಕಾರಣ ನಾಳೆ ದೆಹಲಿಗೆ ತೆರಳಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4