Author: admin

ಬೆಂಗಳೂರು: ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಕಪ್ಪು ಹಣವನ್ನು ಬಿಳಿ ಹಣವಾಗಿ ಪರಿವರ್ತಿಸುವ ಸಾಧನಗಳಾಗಿ ಮಾರ್ಪಟ್ಟಿದ್ದು, ಇದಕ್ಕೆ ಕಡಿವಾಣ ಹಾಕುವ ಅಗತ್ಯವಿದೆ ಎಂದು ಕಾನೂನು ಸಚಿವ ಎಚ್.ಕೆ. ಪಾಟೀಲ್ ಹೇಳಿದ್ದಾರೆ. ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಮೈಕ್ರೋ ಫೈನಾನ್ಸ್) ಮಸೂದೆಗೆ ವಿಧಾನಸಭೆಯಲ್ಲಿ ಸೋಮವಾರ ಅಂಗೀಕಾರ ದೊರೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರವಾಗಿ ವಿಧೇಯಕದ ಕುರಿತು ಮಾತನಾಡಿದ ಎಚ್.ಕೆ. ಪಾಟೀಲ್ ಅವರು, ನೋಂದಾಯಿತವಲ್ಲದ ಲೇವಾದೇವಿದಾರರನ್ನು ನಿಯಂತ್ರಿಸುವುದು, ಮೂಲಭೂತ ಹಕ್ಕುಗಳ ರಕ್ಷಣೆಯನ್ನು ಖಚಿತಪಡಿಸುವುದು ಮೊದಲಾದ ಅಂಶಗಳನ್ನು ಒಳಗೊಂಡಿದೆ. ಕಾನೂನು ಬದ್ಧ ಲೇವಾದೇವಿಯನ್ನು ನಿಷೇಧಿಸುವುದಿಲ್ಲ ಆದರೆ ಬಲವಂತವಾದ ಸಾಲ ವಸೂಲಾತಿಯನ್ನು ನಿರ್ಬಂಧಿಸಲಿದೆ ಎಂದು ತಿಳಿಸಿದರು. ಅಧಿಕ ಬಡ್ಡಿ ವಿಧಿಸಿ ತೊಂದರೆ ಕೊಡುವುದರಿಂದ ಸಾಲಗಾರರು ಬೀದಿಗೆ ಬರುವಂತಹ ಮತ್ತು ಆತಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿಗೆ ದೂಡುವುದನ್ನು ತಡೆಯಲು ಹಾಗೂ ತಪ್ಪಿತಸ್ಥರಿಗೆ 10 ವರ್ಷ ಶಿಕ್ಷೆ ಹಾಗೂ 5 ಲಕ್ಷ ರೂ. ದಂಡ ವಿಧಿಸಲು ಅವಕಾಶ ಕಲ್ಪಿಸಲು ಈ ವಿಧೇಯಕವನ್ನು ಮಂಡಿಸಲಾಗಿದೆ ಎಂದು ಹೇಳಿದರು. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ವ್ಯವಹಾರದಲ್ಲಿ…

Read More

ಬೆಂಗಳೂರು: ಕಾರಿನಲ್ಲಿ ತೆರಳುತ್ತಿದ್ದ ದಂಪತಿಗೆ ಪುಂಡರು ಅಡ್ಡಗಟ್ಟಿ ಕಿರುಕುಳ ನೀಡಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದ್ದು, ಬೆಂಗಳೂರಿನ ಕೆಆರ್ ಪುರಂ ನ ಟಿಸಿ ಪಾಳ್ಯ ಜಂಕ್ಷನ್ ನಲ್ಲಿ ಮಾರ್ಚ್ 9ರ ರಾತ್ರಿ 9 ಗಂಟೆ ಸುಮಾರಿನಲ್ಲಿ ಈ ಘಟನೆ ನಡೆದಿದೆ. KA 01 Q 9634 ಸಂಖ್ಯೆಯ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ರೆಡ್ ಸಿಗ್ನಲ್ ಇದ್ದಾಗ ಸೈಡ್ ಬಿಟ್ಟಿಲ್ಲ ಎಂದು ಆರೋಪಿಸಿ ಪುಂಡಾಟ ಮೆರೆದಿದ್ದಾರೆ. ಕಾರಿನಲ್ಲಿ ದಂಪತಿಗಳ ಜೊತೆ ಮಗು ಕೂಡ ಇದ್ದರೂ, ಬೈಕ್ ನಲ್ಲಿ ಬಂದ ದುಷ್ಕರ್ಮಿಗಲು ಕಾರಿನ ಮೇಲೆ ದಾಳಿ ಮಾಡಿದ್ದಾರೆ. ಕಾರನ್ನು ಅಡ್ಡಗಟ್ಟಿ ಕಾರಿನಲ್ಲಿದ್ದವರ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೆ ಕಾರಿನ ಮಿರರ್ ಅನ್ನು ಜಖಂಗೊಳಿಸಿ ಪರಾರಿಯಾಗಿದ್ದಾರೆ. ಈ ಕುರಿತು ಸಂತ್ರಸ್ಥ ಕಾರು ಮಾಲೀಕ ನಿರಂಜನ್ ಅವರು ಟ್ವೀಟ್ ಮಾಡಿದ್ದು, ‘ಈ ಘಟನೆ ಮಾರ್ಚ್ 9 ರಂದು ರಾತ್ರಿ 9 ಗಂಟೆಗೆ ಟಿಸಿ ಪಾಳ್ಯ ಸಿಗ್ನಲ್ ಬಳಿ ನಡೆದಿತ್ತು. ಸಿಗ್ನಲ್ ಇದ್ದ ಕಾರಣ…

Read More

ನಟ ದರ್ಶನ್ ನಟನೆಯ ‘ಡೆವಿಲ್’ ಚಿತ್ರ ಿದೀಗ ಮತ್ತೆ ಶೂಟಿಂಗ್ ಆರಂಭಗೊಳ್ಳಲಿದೆ. ಮೈಸೂರಿನಲ್ಲಿ 4 ದಿನಗಳ ಕಾಲ ಚಿತ್ರೀಕರಣ ನಡೆಸಲು ಚಿತ್ರತಂಡ ಮುಂದಾಗಿದೆ. ಮಾರ್ಚ್ 12ರಿಂದ 15ರವರೆಗೆ ಮೈಸೂರಿನಲ್ಲಿ ಶೂಟಿಂಗ್ ನಡೆಯಲಿದೆ. ಮಾ.12 ರಿಂದ ಮಾ.14 ರವರೆಗೆ ಸರ್ಕಾರಿ ಅಥಿತಿ ಗೃಹದಲ್ಲಿ ‘ಡೆವಿಲ್’ ತಂಡ ಬೆಳಿಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಶೂಟಿಂಗ್ ಮಾಡಲಿದೆ ಎನ್ನಲಾಗಿದೆ. ಮಾ.15 ರಂದು ಲಲಿತಮಹಲ್ ಪ್ಯಾಲೆಸ್ನಲ್ಲಿ ಬೆಳಿಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆ ವರೆಗೂ ಚಿತ್ರೀಕರಣ ನಡೆಯಲಿದೆಯಂತೆ, ಅಂದ ಹಾಗೆ ಶೂಟಿಂಗ್ ನಡೆಸುವ ಸ್ಥಳದಲ್ಲಿ ಭದ್ರತೆಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ತಿಳಿದು ಬಂದಿದೆ. ಒಂದು ಪಾಳಿಯಲ್ಲಿ 10 ಮಂದಿ ಪೊಲೀಸ್ ಸಿಬ್ಬಂದಿಯಂತೆ ಒಟ್ಟು 32 ಸಿಬ್ಬಂದಿ ಶೂಟಿಂಗ್ ಭದ್ರತೆಗೆ ನಿಯೋಜನೆ ಮಾಡಲಾಗಿದೆ. ಭದ್ರತೆಗಾಗಿ ಚಿತ್ರತಂಡ ಸುಮಾರು 1.64 ಲಕ್ಷ ರೂಪಾಯಿ ಪಾವತಿಸಿದೆ ಎಂದು ವರದಿಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ತುಮಕೂರು: ಹ್ಯುಂಡೈ ಸಂಸ್ಥೆಯ ರಾಷ್ಟ್ರಮಟ್ಟದ ಪ್ರತಿಷ್ಠಿತ ‘ಆರ್ಟ್ ಫಾರ್ ಹೋಪ್’ ಪುರಸ್ಕಾರಕ್ಕೆ ನಗರದ ಯಕ್ಷದೀವಿಗೆ ಸಂಸ್ಥೆಯು ಪಾತ್ರವಾಗಿದೆ. ಈ ಸಂಬಂಧ ನವದೆಹಲಿಯಲ್ಲಿ ನಡೆದ ಕಲಾಪ್ರದರ್ಶನದಲ್ಲಿ ಸಂಸ್ಥೆಯ ಅಧ್ಯಕ್ಷೆ ಆರತಿ ಪಟ್ರಮೆ ಹಾಗೂ ಕೋಶಾಧಿಕಾರಿ ಡಾ.ಸಿಬಂತಿ ಪದ್ಮನಾಭ ಕೆ.ವಿ. ಗೌರವವನ್ನು ಸ್ವೀಕರಿಸಿದರು. ಹ್ಯುಂಡೈ ಮೋಟಾರ್ ಇಂಡಿಯಾ ಮ್ಯಾನೇಜಿಂಗ್ ಡೈರೆಕ್ಟರ್ ಉನ್ಸೂ ಕಿಮ್ ಹಾಗೂ ಹಿರಿಯ ಛಾಯಾಗ್ರಾಹಕ ಆದಿತ್ಯ ಆರ್ಯ ಪ್ರಶಸ್ತಿ ಪ್ರದಾನ ಮಾಡಿದರು. ‘ಆರ್ಟ್ ಫಾರ್ ಹೋಪ್’ ಯೋಜನೆಯಡಿಯಲ್ಲಿ ರಾಷ್ಟ್ರದ ವಿವಿಧ ಭಾಗಗಳಿಂದ ಸಲ್ಲಿಕೆಯಾದ 520 ಪ್ರಸ್ತಾವನೆಗಳಲ್ಲಿ 10 ಸಂಸ್ಥೆಗಳನ್ನು ಹಾಗೂ 40 ಕಲಾವಿದರನ್ನು ಆಯ್ಕೆ ಮಾಡಲಾಗಿತ್ತು. ಹೀಗೆ ಆಯ್ಕೆಯಾದ ಸಂಸ್ಥೆಗಳಲ್ಲಿ ಯಕ್ಷದೀವಿಗೆಯೂ ಒಂದು. ಈ ಅನುದಾನದಡಿಯಲ್ಲಿ ಪರಿಸರ ಸಂರಕ್ಷಣೆ ಹಾಗೂ ಸುಸ್ಥಿರ ಅಭಿವೃದ್ಧಿಗೆ ಸಂಬಂಧಿಸಿದ ‘ಚಂದ್ರಮಂಡಲಚರಿತೆ’ ಎಂಬ ಯಕ್ಷಗಾನವನ್ನು ಯಕ್ಷದೀವಿಗೆ ತಂಡವು ಸಿದ್ಧಪಡಿಸಿತ್ತು. ಹಿರಿಯ ಕಲಾವಿದ ಗಣರಾಜ ಕುಂಬ್ಳೆ ಪ್ರಸಂಗವನ್ನು ರಚಿಸಿದ್ದರು. ನವದೆಹಲಿಯ ಟ್ರಾವಂಕೋರ್ ಪ್ಯಾಲೇಸ್‌ನಲ್ಲಿ ನಡೆದ ಕಲಾಮೇಳದಲ್ಲಿ ಯಕ್ಷಗಾನದ ಸಾಕ್ಷ್ಯ ಚಿತ್ರ ಹಾಗೂ ಆಯ್ದ ಭಾಗವನ್ನು ಪ್ರದರ್ಶಿಸಲಾಯಿತು. ನಮ್ಮತುಮಕೂರಿನ ಕ್ಷಣ…

Read More

ಬೆಂಗಳೂರು: ನಟಿ ರನ್ಯಾ ರಾವ್ ಅವರನ್ನು ಬಳಸಿಕೊಂಡು ಚಿನ್ನ ಕಳ್ಳ ಸಾಗಣೆ ಮಾಡುತ್ತಿದ್ದ ಆ ಇಬ್ಬರು ಪ್ರಭಾವಿ ಸಚಿವರು ಯಾರು ಎಂದು ರಾಜ್ಯ ಸರ್ಕಾರಕ್ಕೆ  ಜೆಡಿಎಸ್ ಪ್ರಶ್ನೆ ಮಾಡಿದೆ. ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಯಾರು ಆ ಗೋಲ್ಡ್ ಸ್ಮಗ್ಲಿಂಗ್ ಸಚಿವರು? ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಕೇಳಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ನಿಮ್ಮ ಶೇ. 60ರಷ್ಟು ಕಮಿಷನ್ ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತದಲ್ಲಿ ಚಿನ್ನ ಕಳ್ಳಸಾಗಣಿಕೆಯೂ ಕೂಡ ಒಂದು ಭಾಗವೇ? ಎಂದು ಪ್ರಶ್ನಿಸಿದೆ. ಗೋಲ್ಡ್ ಸ್ಮಗ್ಲಿಂಗ್ ಸಿಂಡಿಕೇಟ್ ಜೊತೆ ಹವಾಲಾ ದಂಧೆಯಲ್ಲಿಯೂ ಕಾಂಗ್ರೆಸ್ ಕೈವಾಡವಿರುವುದು ಬೆಳೆಕಿಗೆ ಬಂದಿದೆ. ಇನ್ನೂ ಚಿನ್ನದ ಕಳ್ಳ ಮಂತ್ರಿಯ ಬಗ್ಗೆ ವಿಧಾನಸೌಧದ ಪಡಸಾಲೆಯಲ್ಲಿ ಗುಸುಗುಸು ಜೋರಾಗಿದೆ ಎಂದು ಟೀಕಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಶಿರಾ:  ಮೈಕ್ರೊಫೈನಾನ್ಸ್ ಚಿತ್ರಹಿಂಸೆಗೆ ಮಹಿಳೆ ಬಲಿಯಾಗಿರುವ ಘಟನೆ  ತುಮಕೂರು ಜಿಲ್ಲೆಯ  ಶಿರಾ ತಾಲೂಕು ಕಸಬಾ ಹೋಬಳಿ ಚಿಕ್ಕನಕೋಟೆಯಲ್ಲಿ ನಡೆದಿದೆ. ಸುಮಾರು 35 ವರ್ಷದ ಲೀಲಾವತಿ ನೇಣಿಗೆ ಶರಣಾಗಿದ್ದಾರೆ.  ವಿವಿಧ ಮೈಕ್ರೋ ಫೈನಾನ್ಸ್ ಕಂಪನಿಗಳಲ್ಲಿ ಸುಮಾರು 9 ಲಕ್ಷ ರೂ. ಸಾಲ ಮಾಡಿದ್ದ ಮಹಿಳೆ, ಮೈಕ್ರೋ ಫೈನಾನ್ಸ್ ನವರ ಚಿತ್ರಹಿಂಸೆಗೆ ಬೇಸತ್ತು ನೇಣಿಗೆ ಶರಣಾಗಿದ್ದಾರೆ. ಪತಿ ಹಾಗೂ 13 ವರ್ಷದ ಹಾಗೂ  5 ವರ್ಷದ ಇಬ್ಬರು ಗಂಡು ಮಕ್ಕಳನ್ನು ಬಿಟ್ಟು ಮಹಿಳೆ ನೇಣಿಗೆ ಶರಣಾಗಿದ್ದಾರೆ. ಈ ಮೂಲಕ  ಮೈಕ್ರೋ ಫೈನಾನ್ಸ್ ಚಿತ್ರಹಿಂಸೆಗೆ ಮತ್ತೊಂದು ಬಲಿಯಾಗಿದೆ. ಮೈಕ್ರೋ ಫೈನಾನ್ಸ್ ನಿಂದಾಗಿ ಸಾವಿನ ಸರಣಿ ಮುಂದುವರಿದಿದೆ.  ಮೈಕ್ರೋ ಫೈನಾನ್ಸ್ ಕಂಪನಿಗಳ ವಿರುದ್ಧ ಕಠಿಣ ಕಾನೂನಿನ ಅವಶ್ಯಕತೆ ಇದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಪಟ್ಟನಾಯಕನಹಳ್ಳಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

ಶಿರಾ, ತಾಳಗುಂದ:  ಶಿರಾ ತಾಲೂಕಿನ ಕಳ್ಳಂಬೆಳ್ಳ ಹೋಬಳಿಯ ತಾಳಗುಂದ ಗ್ರಾಮ ಪಂಚಾಯತಿ ವ್ಯಾಪ್ತಿಯ ಮಾಟನಹಳ್ಳಿ ಗ್ರಾಮದಲ್ಲಿ ಮಾನವೀಯತೆಯನ್ನು ತಲೆ ತಗ್ಗಿಸುವ ದಾರುಣ ಘಟನೆ ಬೆಳಕಿಗೆ ಬಂದಿದೆ. ನವಜಾತ ಹೆಣ್ಣು ಶಿಶುವನ್ನು ನಿರ್ದಯವಾಗಿ ಬೇಲಿಯಲ್ಲಿ ಬಿಸಾಕಿ ಹೋಗಿರುವ ಘಟನೆ ಸ್ಥಳೀಯರಲ್ಲಿ ಆಘಾತ ಮೂಡಿಸಿದೆ. ಸ್ಥಳೀಯ ನಿವಾಸಿಗಳು ಶಿಶುವಿನ ಅಳುವಿನ ಶಬ್ದ ಕೇಳಿ ಪರಿಶೀಲನೆ ನಡೆಸಿದಾಗ, ಅವರು ಒಂದು ಹೆಣ್ಣು ಮಗುವನ್ನು ಬಿಸಾಕಿರುವ ದೃಶ್ಯ ಕಂಡುಬಂದಿದೆ. ಕೂಡಲೇ ಈ ವಿಷಯವನ್ನು ಸ್ಥಳೀಯ ಗ್ರಾಮ ಪಂಚಾಯತಿ ಮತ್ತು ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಈ ಹೀನಕೃತ್ಯ ಎಸಗಿದ ದುಷ್ಕರ್ಮಿಗಳ ಪತ್ತೆಗಾಗಿ ಪೊಲೀಸರು ತನಿಖೆ ಆರಂಭಿಸಿದ್ದು, ಶಿಶುವನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಗಾಂಧಿನಗರ: ಐದು ವರ್ಷದ ಬಾಲಕಿಯನ್ನು  ಅಪಹರಿಸಿದ ವ್ಯಕ್ತಿಯೊಬ್ಬ ಕತ್ತು ಸೀಳಿ ಭೀಕರವಾಗಿ ಹತ್ಯೆ ಮಾಡಿದ ಘಟನೆ  ಗುಜರಾತ್ ನ ಛೋಟೌದೇಪುರ ಜಿಲ್ಲೆಯಲ್ಲಿ ನಡೆದಿದೆ. ಹತ್ಯೆ ನಡೆಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಲಾಲಾ ತಡ್ವಿ ಎಂಬಾತ ಹತ್ಯೆ ನಡೆಸಿದ ಆರೋಪಿಯಾಗಿದ್ದಾನೆ. ಬಾಲಕಿಯನ್ನು ಆಕೆಯ ಮನೆಯಿಂದ ಅಪಹರಿಸಿದ ಬಳಿಕ   ತನ್ನ ಮನೆಗೆ ಕರೆದೊಯ್ದು, ಕೊಡಲಿಯಿಂದ ಆಕೆಯ ಕುತ್ತಿಗೆ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ನಂತರ  ಬಾಲಕಿಯ ಕುತ್ತಿಗೆಯಿಂದ ಹೊರಬರುತ್ತಿದ್ದ ರಕ್ತವನ್ನು ಸಂಗ್ರಹಿಸಿ, ಅದರಲ್ಲಿ ಸ್ವಲ್ಪ ಭಾಗವನ್ನು ತನ್ನ ಮನೆಯಲ್ಲಿರುವ ದೇವಾಲಯದ ಮೆಟ್ಟಿಲುಗಳ ಮೇಲೆ ಅರ್ಪಿಸಿದ್ದಾನೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಜಾರ್ಖಂಡ್‌:  ಭೀಕರ ಪಟಾಕಿ ಸ್ಫೋಟದಲ್ಲಿ   ಮೂವರು ಮಕ್ಕಳ ಸಹಿತ ಐವರು ಸಜೀವ ದಹನಗೊಂಡು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಜಾರ್ಖಂಡ್‌ ನ ಗರ್ವಾ ಜಿಲ್ಲೆಯ  ರಾಂಕಾ ಪೊಲೀಸ್ ಠಾಣೆ ವ್ಯಾಪ್ತಿಯ ಗೋದರ್ಮಲಾ ಮಾರುಕಟ್ಟೆಯಲ್ಲಿ ನಡೆದಿದೆ. ಐದು ಜನರು ಸಾವನ್ನಪ್ಪುವ ಮೊದಲು, ಸ್ಥಳೀಯರು  ಅವರನ್ನು ಚಿಕಿತ್ಸೆಗಾಗಿ ಛತ್ತೀಸ್‌ ಗಢದ ರಾಮಾನುಜ್‌ ಗಂಜ್‌ ನಲ್ಲಿರುವ ಆಸ್ಪತ್ರೆಗೆ ಸಾಗಿಸಿದರು, ಆದರೆ, ಅವರೆಲ್ಲರೂ ಆಗಲೇ ಸಾವನ್ನಪ್ಪಿದ್ದರು. ಘಟನೆಯಿಂದಾಗಿ ಇಡೀ ಪ್ರದೇಶವು ಪಟಾಕಿಗಳ ಶಬ್ದದಿಂದ ನಡುಗಿತು. ಬಾಂಬ್ ಸ್ಫೋಟಗೊಳ್ಳುತ್ತಿರುವಂತೆ ಕಾಣುತ್ತಿತ್ತು. ಐದು ಜನರು ಸಜೀವ ದಹನವಾಗಿದ್ದು ಸ್ಥಳದಲ್ಲಿ ನಿಲ್ಲಿಸಿದ್ದ ಮೋಟಾರ್ ಸೈಕಲ್ ಕೂಡ ಬೆಂಕಿಗೆ ಆಹುತಿಯಾಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಇನ್ನೂ  ಗರ್ವಾ ಜಿಲ್ಲೆಯಲ್ಲಿ ನಡೆದ ದುರಂತ ಘಟನೆಯ ಬಗ್ಗೆ ಮುಖ್ಯಮಂತ್ರಿ ಹೇಮಂತ್ ಸೊರೇನ್ ಕೂಡ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದು, ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ತುಮಕೂರು: ಕರ್ನಾಟಕ ಮಾಧ್ಯಮ ಅಕಾಡೆಮಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಕರ್ತರಿಗೆ ಉತ್ತೇಜನ ನೀಡುವ ಸಲುವಾಗಿ ಉಚಿತವಾಗಿ Mo—Jo—Kit ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅರ್ಜಿದಾರರು ಈ ಕೆಳಕಂಡ ಷರತ್ತು ಗೊಳಪಟ್ಟು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿದಾರರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾನ್ಯತೆ ಪಡೆದ ಪತ್ರಕರ್ತರಾಗಿರಬೇಕು ಅಥವಾ ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಪತ್ರಿಕೆಗಳಲ್ಲಿ ಅಥವಾ ಉಪಗ್ರಹ ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸುತ್ತಿರಬೇಕು. ಮಾಧ್ಯಮ ಕ್ಷೇತ್ರದಲ್ಲಿ ಕನಿಷ್ಠ 10 ವರ್ಷಗಳ ಅನುಭವವಿರಬೇಕು ಹಾಗೂ ಇದಕ್ಕೆ ಸಂಬಂಧಿಸಿದ ಪೂರಕ ದಾಖಲೆಗಳನ್ನು ಒದಗಿಸಬೇಕು. ಪತ್ರಿಕೆಯ ಸಂಪಾದಕರಾಗಿದ್ದಲ್ಲಿ ಪತ್ರಿಕೆಯು ವಾರ್ತಾ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿ ಸೇರಿರಬೇಕು. ಅರ್ಜಿದಾರರು ಜಾತಿ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ತಾವು ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗಳ ಮುಖ್ಯಸ್ಥರಿಂದ ಸೇವಾ ದೃಢೀಕರಣ ಪತ್ರ ಸಲ್ಲಿಸಬೇಕು. ಈ ಹಿಂದೆ ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಇಲಾಖೆ ಹಾಗೂ ಇತರೆ…

Read More