Author: admin

ಪಾವಗಡ: ತಾಲ್ಲೂಕಿನ ವೈ.ಎನ್. ಹೊಸಕೋಟೆ ಹೋಬಳಿಯ ಜೋಡಿ ಅಚ್ಚಮ್ಮನಹಳ್ಳಿ ಗ್ರಾಮದಲ್ಲಿ ಯುಗಾದಿ ಹಬ್ಬದ ಅಂಗವಾಗಿ, ಶ್ರೀ ಚೌಡೇಶ್ವರಿ ಅಮ್ಮನವರ 60ನೇ ಜ್ಯೋತಿ ಉತ್ಸವವನ್ನು ಸೋಮವಾರದಂದು ವಿಜೃಂಭಣೆಯಿಂದ ಆಚರಿಸಲಾಯಿತು. ಬೆಳಿಗ್ಗೆ 9 ಗಂಟೆಗೆ ಪ್ರಾರಂಭವಾದ ಉತ್ಸವ, ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿ ಮಧ್ಯಾಹ್ನ 2 ಗಂಟೆಯ ವೇಳೆ ದೇವಾಲಯದಲ್ಲಿ ಕೊನೆಗೊಂಡಿತು. ಉತ್ಸವದ ಉದ್ದಕ್ಕೂ ಹರಕೆ ಹೊತ್ತ ಭಕ್ತಾಧಿಗಳು ನಾರದ ಹಾಕಿಸಿಕೊಂಡು ಹರಕೆ ತೀರಿಸಿದರು. ಗ್ರಾಮಕ್ಕೆ ದುಷ್ಟಶಕ್ತಿಗಳ ಹಾವಳಿ ಬಾರದಿರಲೆಂದು ಪೂಜಾನ್ನವನ್ನು ಹಾಕಲಾಯಿತು. ಮೆರವಣಿಗೆಯಲ್ಲಿ ತೊಗಟವೀರ ಸಮುದಾಯ ಆನಂದ ಪದಗಳನ್ನು ಹಾಡುತ್ತ ದೇವಿಯ ಮೂರ್ತಿಗೆ ಶಕ್ತಿ ತುಂಬಿದರು. ಹಬ್ಬದ ಅಂಗವಾಗಿ ಮೂಲ ದೇವತಾ ಮೂರ್ತಿಗೆ ‘ಅರಶಿಣ ಕುಂಕುಮ’ದ ಅಲಂಕಾರ ಮಾಡಲಾಗಿತ್ತು. ವರದಿ :  ನಂದೀಶ್ ನಾಯ್ಕ ಪಿ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಪಾವಗಡ:  ಶಾಸಕರಾದ ಹೆಚ್.ವಿ.ವೆಂಕಟೇಶ್ ತುಮಕೂರು ಹಾಲು ಒಕ್ಕೂಟದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ವೈ.ಎನ್.ಹೊಸಕೋಟೆ ಆರ್ಯ ವೈಶ್ಯ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ವೆಂಕಟೇಶ್ ಅವರನ್ನು ಹಾಗೂ ಮಾಜಿ ಸಚಿವರಾದ ವೆಂಕಟರಮಣಪ್ಪ ನವರನ್ನು ಭೇಟಿ ಮಾಡಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಎನ್ ಆರ್ ಅಶ್ವಥ್ ಕುಮಾರ್ , ವಿಶ್ವನಾಥ್ ಟಿ.ಆರ್.ವಿ ಪ್ರಸಾದ್ , ಎಂ.ಆರ್ ಶಿವಾನಂದ ಗುಪ್ತ, ಎನ್.ಜಿ ರಾಮು ರವರು,ಎನ್.ಎಸ್ ಮಂಜುನಾಥ್ ,ಇ.ವಿ ಶ್ರೀಧರ್ ,ಟಿ ವಿ ವೆಂಕಟೇಶ್, ಎನ್.ಶ್ರೀನಿವಾಸ್,ಇ.ಎನ್. ರಘು ರವರು ಸೇರಿ ಇನ್ನಿತರರು ಇದ್ದರು. ವರದಿ: ನಂದೀಶ್ ನಾಯ್ಕ ಪಿ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು: ಜಿಲ್ಲೆಯ ಪಾವಗಡ ತಾಲೂಕಿನ ನಾಗಲಮಡಿಕೆ ಹೋಬಳಿಯ ಕ್ಯಾತಗಾನಕೆರೆ ಗ್ರಾಮದಲ್ಲಿ ಚರ್ಚ್ ಉದ್ಘಾಟನೆಯು ವಿವಾದಕ್ಕೆ ಕಾರಣವಾಗಿದೆ. ಗ್ರಾಮದ ಜನರು ಚರ್ಚ್ ನಿರ್ಮಾಣದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಶಿಲಾನ್ಯಾಸ ಫಲಕವನ್ನು ಧ್ವಂಸಗೊಳಿಸುವ ಮೂಲಕ ಉದ್ಘಾಟನೆಯನ್ನು ತಡೆದಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಸುರೇಶ್ ಎಂಬ ಪಾದ್ರಿ ಗ್ರಾಮದಲ್ಲಿ ವಾಸವಿದ್ದು, ಕ್ರೈಸ್ತ ಧರ್ಮದ ಬಗ್ಗೆ ಜನರಲ್ಲಿ ಮಾಹಿತಿ ಪಸರಿಸುತ್ತಿದ್ದರು. ಆದರೆ, ಅವರ ವಿರುದ್ಧ ಗ್ರಾಮದ ನಿರ್ವಾಹಕರ ಪತ್ನಿಯೊಂದಿಗಿನ ಅನುಚಿತ ವರ್ತನೆಯ ಆರೋಪ ಹೊರಿಸಲಾಗಿದೆ. ಈ ಆರೋಪಗಳನ್ನು ವ್ಯಕ್ತಪಡಿಸಿದ ಮಹಿಳೆಯ ಪತಿ, ಪಾದ್ರಿಯ ವರ್ತನೆ ಅವರ ಕುಟುಂಬದ ಜೀವನವನ್ನು ಹಾಳು ಮಾಡಿದೆ ಎಂದು ದೂರಿದ್ದಾರೆ. ಸೋಮವಾರ ಉದ್ಘಾಟನೆಗೆ ಸಿದ್ಧವಾಗಿದ್ದ ಐಪಿಸಿ ಚಿಯೋನ್ ಪ್ರಾರ್ಥನಾ ಮಂದಿರವನ್ನು ಉದ್ಘಾಟಿಸಲು ಉದ್ದೇಶಿಸಿದ್ದಾಗ, ಗ್ರಾಮಸ್ಥರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಉದ್ಘಾಟನೆಗೆ ಸಿದ್ಧವಾಗಿದ್ದ ಶಿಲಾನ್ಯಾಸ ಫಲಕವನ್ನು ಧ್ವಂಸಗೊಳಿಸಿದರು. ಗ್ರಾಮದ ಯುವಕ ಅನಿಲ್ ಮಾತನಾಡಿ, “ಪಾದ್ರಿ ಸುರೇಶ್ ನಮ್ಮ ಗ್ರಾಮದಲ್ಲಿ ಜನರನ್ನು ಮತಾಂಧತೆಯತ್ತ ಕರೆದುಕೊಂಡು ಹೋಗುತ್ತಿದ್ದಾರೆ. ನಮಗೆ ಗೊತ್ತಿಲ್ಲದೆ ಚರ್ಚ್ ನಿರ್ಮಿಸಿದ್ದಾರೆ. ಜೊತೆಗೆ…

Read More

ಬೀದರ್: ಪವಿತ್ರ ರಂಜಾನ್ ಹಬ್ಬದ ಹಿನ್ನೆಲೆ ಸಂಸದ   ಸಾಗರ್ ಖಂಡ್ರೆ ಬೀದರ್ ಈದ್ಗಾ ಮೈದಾನದಲ್ಲಿ ಮುಸ್ಲಿಮರೊಂದಿಗೆ ವಿಶೇಷ ಪ್ರಾರ್ಥನೆ ವೇಳೆ ಭಾಗಿಯಾಗಿ ಈದ್ ನ ಶುಭಾಶಯಗಳನ್ನು ಕೋರಿದರು. ಈ ಸಂದರ್ಭದಲ್ಲಿ  ಸಚಿವರಾದ ರಹಿಂ ಖಾನ್, ಸೇರಿದಂತೆ  ಹಲವು ಕಾಂಗ್ರೆಸ್ ಮುಖಂಡರು, ಧಾರ್ಮಿಕ ಪ್ರಮುಖ ಮುಖಂಡರು, ಮುಸ್ಲಿಂ ಬಾಂಧವರು ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಕೊರಟಗೆರೆ: ಭೀಕರ ಬಿಸಿಲಿನ ತಾಪಕ್ಕೆ ಬೃಹತ್ ಕಾಡ್ಗಿಚ್ಚು ಸೃಷ್ಟಿಯಾಗಿ, ಪ್ರವಾಸಿಗರ ಕಾರು ಬೆಂಕಿಯಲ್ಲಿ ಬೆಂದು ಹಾನಿಯಾಗಿರುವ ಘಟನೆ ಕೊರಟಗೆರೆ ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಸಿದ್ದರಬೆಟ್ಟದಲ್ಲಿ ನಡೆದಿದೆ. ಶ್ರೀ ಕ್ಷೇತ್ರದ ಸಿದ್ದೇಶ್ವರ ದರ್ಶನಕ್ಕೆ ಎಂದು ಬಂದ ಬೆಂಗಳೂರು ಮೂಲದ ಭಕ್ತರು.. ಸುಸಜ್ಜಿತವಾದ ವಾಹನ ಪಾರ್ಕಿಂಗ್ ವ್ಯವಸ್ಥೆ ಇಲ್ಲದೆ ರಸ್ತೆ ಬದಿಯಲ್ಲಿ ಕಾರು ಪಾರ್ಕಿಂಗ್ ಮಾಡಿದ್ದರು. ಇದಕ್ಕಿದ್ದಂತೆ ಕಾಡ್ಗಿಚ್ಚು ಸಂಭವಿಸಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಮುಜರಾಯಿ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳ ಮೇಲೆ ಪ್ರವಾಸಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಯುರ್ವೇದಿಕ್ ದಿವ್ಯೌಷಧಿಗಳ ಕ್ಷೇತ್ರ, ಸಿದ್ದರ ತಪೋವನ, ಸಾಧು ಸಂತರ ತವರೂರಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಸೃಷ್ಟಿಯಾಗಿದೆ. ಹಿಂದೂ ಧಾರ್ಮಿಕ ದತ್ತಿ ಇಲಾಖೆ ಮತ್ತು ಪ್ರವಾಸೋದ್ಯಮ ಇಲಾಖೆ ಸಿದ್ದರಬೆಟ್ಟದಲ್ಲಿ ಇದ್ದು ಇಲ್ಲದಂತಿದೆ ಎಂಬ ಆಕ್ರೋಶ ಕೇಳಿ ಬಂದಿದೆ. ಮುಜರಾಯಿ ಇಲಾಖೆ ವತಿಯಿಂದ ವಾಹನ ಪಾರ್ಕಿಂಗ್ ಶುಲ್ಕ ವಸೂಲಿ ಮಾಡಲಾಗುತ್ತಿದೆ. ಆದ್ರೆ ವ್ಯವಸ್ಥಿತವಾದ ವಾಹನ ಪಾರ್ಕಿಂಗ್ ಸ್ಥಳವೇ ಇಲ್ಲ. ಹೀಗಾಗಿ ರಸ್ತೆ ಬದಿ ವಾಹನ ನಿಲ್ಲಿಸಿ…

Read More

ತುಮಕೂರು: ಯುಗಾದಿ ಹಬ್ಬದ ಸಂಭ್ರಮದ ಮಧ್ಯೆ ಬಡ ಕುಟುಂಬವೊಂದು ಆಕಸ್ಮಿಕ ಬೆಂಕಿ ಅವಘಡಕ್ಕೆ ಸಿಲುಕಿದ ದಾರುಣ ಘಟನೆ ನಡೆದಿದೆ. ಈ ದುರ್ಘಟನೆ ಶೋಕದ ಛಾಯೆ ಮೂಡಿಸಿದೆ. ಬುಕ್ಕಾಪಟ್ಟಣ ಹೋಬಳಿಯ ಹುಣಸೆಕಟ್ಟೆ ಗ್ರಾಮದ ಭೋವಿ ಜನಾಂಗದ ರತ್ನಮ್ಮ, ತಮ್ಮ ಇಬ್ಬರು ಮಕ್ಕಳ ಜೊತೆ ಊರಿನಿಂದ, ಎರಡು ಕಿಲೋ ಮೀಟರ್ ದೂರದಲ್ಲಿರುವ ತಮ್ಮ ಜಮೀನಿನಲ್ಲಿ ಗುಡಿಸಲು ಕಟ್ಟಿಕೊಂಡು ಜೀವನ ಸಾಗಿಸುತ್ತಿದ್ದರು. ಅವರ ಪತಿ ಸಿದ್ದಾಭೋವಿ ಸುಮಾರು 20 ವರ್ಷಗಳ ಹಿಂದೆ ಕುಟುಂಬವನ್ನು ಬಿಟ್ಟು ಎಲ್ಲೋ ತೆರಳಿದ್ದು, ಇದುವರೆಗೆ ಮರಳಿಲ್ಲ. ಈ ಕಾರಣದಿಂದ, ರತ್ನಮ್ಮ ಹೊಲದಲ್ಲಿಯೇ ಹಸು, ಕರು, ಕುರಿ, ಮೇಕೆಗಳನ್ನು ಮೇಯಿಸಿಕೊಂಡು ಜೀವನ ಸಾಗಿಸುತ್ತಿದ್ದರು. ಶುಕ್ರವಾರ ರಾತ್ರಿ ಎಲ್ಲರೂ ಮಲಗಿದ್ದ ಸಂದರ್ಭದಲ್ಲಿ, ಸುಮಾರು ರಾತ್ರಿ ಎರಡು ಗಂಟೆ ಸುಮಾರಿಗೆ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ತೀವ್ರಗೊಳ್ಳುತ್ತಿದ್ದಂತೆ, ರತ್ನಮ್ಮ ಮತ್ತು ಅವರ ಮಕ್ಕಳು ಎಚ್ಚರಗೊಂಡು ಆರಿಸುವ ಪ್ರಯತ್ನ ನಡೆಸಿದರು. ಆದರೆ, ಊರಿನಿಂದ ದೂರವಾಗಿರುವ ಕಾರಣದಿಂದ, ಸ್ಥಳೀಯರು ಬರುವಷ್ಟರಲ್ಲಿ ಗುಡಿಸಲು ಸಂಪೂರ್ಣ ಸುಟ್ಟು ಭಸ್ಮವಾಗಿತ್ತು. ಎರಡು…

Read More

ಬೆಂಗಳೂರು: ಸ್ವಚ್ಛತೆ ಮತ್ತು ಕಳಪೆ ಗುಣಮಟ್ಟದ ಉತ್ಪನ್ನಗಳನ್ನು ಬಳಸಿ ಐಸ್ ಕ್ರೀಂ ಮತ್ತು ತಂಪು ಪಾನೀಯ ತಯಾರಿಕಾ ಘಟಕಗಳ ಮೇಲೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ದಾಳಿ ನಡೆಸಿದಿದೆ. ದಾಳಿಯ ನಂತರ ಒಟ್ಟು 220 ಅಂಗಡಿಗಳಲ್ಲಿ 97 ಅಂಗಡಿಗಳಿಗೆ ನೋಟಿಸ್ ನೀಡಲಾಗಿದೆ. ತಪಾಸಣೆ ವೇಳೆ ಐಸ್ ಕ್ರೀಮ್ ಗಳಲ್ಲಿ ಕೆನೆ ಬಣ್ಣದ ವಿನ್ಯಾಸವನ್ನು ರಚಿಸಲು ಡಿಟರ್ಜೆಂಟ್ ಪೌಡರ್ ಅನ್ನು ಬಳಸಲಾಗುತ್ತಿತ್ತು. ಕೂಲ್ ಡ್ರಿಂಕ್ ಗಳಲ್ಲಿ ಮೂಳೆಗಳನ್ನು ದುರ್ಬಲಗೊಳಿಸುವ ಫಾಸ್ಪರಿಕ್ ಆಮ್ಲ ಹಾಗೂ ಫಿಜ್ ಅನ್ನು ಹೆಚ್ಚಿಸಲು ಬಳಸಲಾಗುತ್ತಿತ್ತು ಎಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ ಎಂದು ವರದಿಯಾಗಿದೆ. ಆಘಾತಕಾರಿ ಉಲ್ಲಂಘನೆ ಮಾಡಿರುವವರಿಗೆ ಇಲಾಖೆಯು ಒಟ್ಟು 38,000 ರೂ. ದಂಡ ವಿಧಿಸಲಾಗಿದೆ. ಮಕ್ಕಳು ಸಾಮಾನ್ಯವಾಗಿ ಸೇವಿಸುವ ಆಹಾರದ ಗುಣಮಟ್ಟ ಮತ್ತು ತಯಾರಿಕೆಯ ವಿಧಾನಗಳನ್ನು ನಿರ್ಣಯಿಸುವ ಪ್ರಯತ್ನಗಳ ಭಾಗವಾಗಿ, ಇಲಾಖೆಯು ಎರಡು ದಿನಗಳಲ್ಲಿ ತಪಾಸಣೆ ನಡೆಸಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ಬೆಂಗಳೂರು: ಈದ್—ಉಲ್—ಫಿತ್ರ್ ಹಬ್ಬದ ಸಂದರ್ಭದಲ್ಲಿ ವಿಶೇಷ ನಮಾಝ್ ನ ಸಂದರ್ಭದಲ್ಲಿ ವಕ್ಫ್ ತಿದ್ದುಪಡಿ ಮಸೂದೆ 2024 ಅನ್ನು ವಿರೋಧಿಸಿ ಸಚಿವ ಜಮೀರ್ ಅಹ್ಮದ್ ಹಾಗೂ ಮುಸ್ಲಿಮರು ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು. ಬೆಂಗಳೂರು ಮತ್ತು ಬೀದರ್ನಲ್ಲಿ ಕ್ರಮವಾಗಿ ಕಪ್ಪು ಪಟ್ಟಿ ಧರಿಸಿ ಬೆಳಗಿನ ಪ್ರಾರ್ಥನೆ ನಡೆಸಲಾಯಿತು. ಸಚಿವ ಜಮೀರ್ ಅಹ್ಮದ್ ಖಾನ್ ಬೆಂಗಳೂರಿನ ಚಾಮರಾಜಪೇಟೆ ಮೈದಾನದಲ್ಲಿ ತೋಳಿಗೆ ಕಪ್ಪು ಪಟ್ಟಿ ಧರಿಸಿ ನಮಾಜ್ ಮಾಡಿದರು. ಅಂತೆಯೇ ಅವರ ನೂರಾರು ಬೆಂಬಲಿಗರು ಸಹ ಕಪ್ಪು ಪಟ್ಟಿ ಧರಿಸಿ ಪ್ರಾರ್ಥನೆಯಲ್ಲಿ ಭಾಗವಹಿಸಿದರು. ನಮಾಜ್ ಬಳಿಕ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್, ಜನರು ಭಾನುವಾರ ಯುಗಾದಿಯನ್ನು ಆಚರಿಸಿದರು ಮತ್ತು ಇಂದು ರಂಜಾನ್ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ನಾನು ಎಲ್ಲರಿಗೂ ನನ್ನ ಶುಭಾಶಯಗಳನ್ನು ಕೋರುತ್ತೇನೆ ಎಂದರು. ಬಕ್ರೀದ್ ಜೊತೆಗೆ ಮುಸ್ಲಿಮರ ಪ್ರಮುಖ ಹಬ್ಬಗಳಲ್ಲಿ ಒಂದಾದ ರಂಜಾನ್ ಸಮಯದಲ್ಲಿ ನಾವು 30 ದಿನಗಳ ಕಾಲ ಉಪವಾಸ ಮಾಡುತ್ತೇವೆ. ಹಿಂದೂಗಳಿಗೆ, ಭಾನುವಾರ ಆಚರಿಸಲಾದ ಯುಗಾದಿಯು ಹೊಸ ವರ್ಷದ ಆರಂಭವನ್ನು…

Read More

ತ್ರಿಶೂರ್: ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಬೆಂಗಾವಲು ಪಡೆಗೆ ಅಡ್ಡಿಪಡಿಸಿದ ಆರೋಪದ ಮೇಲೆ ಯೂಟ್ಯೂಬರ್ ಒಬ್ಬನನ್ನು ಬಂಧಿಸಲಾಗಿದೆ. ಎಲನಾಡು ನಿವಾಸಿ ಅನೀಶ್ ಅಬ್ರಹಾಂ ಎಂಬಾತನನ್ನು ಮನ್ನುತ್ತಿ ಪೊಲೀಸರು ಬಂಧಿಸಿದ್ದು, ಬಳಿಕ ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಶನಿವಾರ ರಾತ್ರಿ 9:30ರ ಸುಮಾರಿಗೆ ಪ್ರಿಯಾಂಕಾ ಗಾಂಧಿ ವಾದ್ರಾ ತಮ್ಮ ಕ್ಷೇತ್ರ ಮತ್ತು ಮಲಪ್ಪುರಂ ಜಿಲ್ಲೆಯಲ್ಲಿ ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಮಲಪ್ಪುರಂನ ವಂದೂರಿನಿಂದ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಪ್ರಯಾಣಿಸುತ್ತಿದ್ದಾಗ ಮನ್ನುತ್ತಿ ಬೈಪಾಸ್ ಜಂಕ್ಷನ್ ನಲ್ಲಿ ಈ ಘಟನೆ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪೊಲೀಸ್ ಮೂಲಗಳ ಪ್ರಕಾರ, ವಯನಾಡ್ ಸಂಸದರ ಪೈಲಟ್ ವಾಹನದ ಹಾರ್ನ್ನಿಂದ ಕೋಪಗೊಂಡ ಆರೋಪಿಯು ಬೆಂಗಾವಲು ಪಡೆಯ ಮುಂದೆ ತನ್ನ ಕಾರನ್ನು ನಿಲ್ಲಿಸಿದ್ದಾನೆ ಎಂದು ವರದಿಯಾಗಿದೆ. ಮನ್ನುತ್ತಿ ಸಬ್ ಇನ್ಸ್ಪೆಕ್ಟರ್ ನೇತೃತ್ವದ ಪೊಲೀಸ್ ತಂಡವು ಕಾರನ್ನು ತೆರವುಗೊಳಿಸಲು ಪ್ರಯತ್ನಿಸಿದಾಗ, ಆತ ಅವರೊಂದಿಗೆ ಘರ್ಷಣೆಯಲ್ಲಿ ತೊಡಗಿದ್ದನು ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

ವಿಜಯಪುರ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಕಾಂಗ್ರೆಸ್ ಗೆ ಸೇರ್ಪಡೆಗೊಳಿಸುವುದು ಕಷ್ಟ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್ ನಮ್ಮ ಪಕ್ಷಕ್ಕೆ ಅರ್ಜಿ ಹಾಕಿಲ್ಲ, ಹಾಕಿದರೂ ಅವರನ್ನು ಸೇರಿಸಿಕೊಳ್ಳುವುದು ಕಷ್ಟ ಸಾಧ್ಯ ಎಂದರು. ಯತ್ನಾಳ್ ಅವರು ಒಂದು ಸಮಾಜದ ಬಗ್ಗೆ ಬಹಳಷ್ಟು ಮಾತನಾಡಿದ್ದಾರೆ. ಹಾಗಾಗಿ ನಮ್ಮಲ್ಲಿ ಅವರನ್ನು ಸೇರಿಸಿಕೊಳ್ಳುವುದು ಕಷ್ಟ ಎಂದು ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ಸಚಿವ ರಾಜಣ್ಣ ಪುತ್ರನ ಹತ್ಯೆಗೆ ಸುಪಾರಿ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈ ಪ್ರಕರಣ ನೋಡಿಕೊಳ್ಳಲು ಗೃಹ ಸಚಿವರು, ಪೊಲೀಸರು ಇದ್ದಾರೆ. ಅವರು ಪ್ರಕರಣವನ್ನ ಬಯಲಿಗೆ ಎಳೆಯುತ್ತಾರೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More