Author: admin

ಬೀದರ್: ಗ್ರಾಮೀಣ ಭಾಗದಲ್ಲಿ ಬಹುತೇಕ ಗ್ರಾಮಸ್ಥರು ಅವರ ಕೆಲಸ –ಕಾರ್ಯಗಳಿಗಾಗಿ  ಗ್ರಾಮ ಪಂಚಾಯತ್ ಕಚೇರಿಗೆ ಹೋಗುವುದು ಸಹಜ. ಪಂಚಾಯತ್ ಕಚೇರಿಗೆ ಹೋದರೆ ಅಲ್ಲಿ ಪಿಡಿಓ ಆಗಲಿ ಕಾರ್ಯದರ್ಶಿ ಆಗಲಿ  ಇರುವುದಿಲ್ಲ, ಅವರೆಲ್ಲಿ ಎಂದು ಕೇಳಿದಾಗ ತಾಲೂಕ್ ಪಂಚಾಯತ್ ಅಥವಾ ಜಿಲ್ಲಾ ಪಂಚಾಯತ್ ನಲ್ಲಿ ಸಭೆಗೆ ಹೋಗಿದ್ದಾರೆ ಎನ್ನುವ ಉತ್ತರ ಸಿಗುತ್ತಿದೆ, ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು  ಕೌಠಾ (ಬಿ) ಗ್ರಾಮ ಪಂಚಾಯತ್  ಸದಸ್ಯ ಪ್ರದೀಪ ಯನಗುಂದೆ ಬೇಸರ ವ್ಯಕ್ತಪಡಿಸಿದ್ದಾರೆ. ರಾಜ್ಯ ಸರ್ಕಾರವು ಸುಮಾರು ಸುತ್ತೋಲೆಗಳನ್ನು ಹೊರಡಿಸಿ. ತಾಲೂಕು ಪಂಚಾಯತ್ ಹಾಗೂ  ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸುವ ಸಭೆಗಳನ್ನು ವರ್ಚುವಲ್ ಮೂಲಕ ಸಭೆಗಳನ್ನು ಆಯೋಜಿಸುವಂತೆ ಸೂಚಿಸಿದೆ. ಇಂಟರ್ನೆಟ್ ಇರದ ಪಂಚಾಯತಿಯ ಪಿಡಿಓ / ಕಾರ್ಯದರ್ಶಿ ಹತ್ತಿರದ ಗ್ರಾಮ ಪಂಚಾಯಿತಿಗೆ ಹೋಗಿ ಸದರಿ ವರ್ಚುವಲ್ ಸಭೆಯಲ್ಲಿ ಭಾಗವಹಿಸಬಹುದೆಂದು ಅವಕಾಶ ಕಲ್ಪಿಸಿರುತ್ತದೆ. ಆದರೆ ಬೀದರ್ ಜಿಲ್ಲೆಯಲ್ಲಿ ಪಿಡಿಓ ಕಾರ್ಯದರ್ಶಿಗಳು ಜಿಲ್ಲಾ ಪಂಚಾಯತ್ ಹಾಗೂ ತಾಲೂಕ ಪಂಚಾಯತಿಯಲ್ಲಿ ಸಭೆ/ ಮೀಟಿಂಗ್ ನೆಪದಲ್ಲಿ ತಿಂಗಳಲ್ಲಿ 8 ರಿಂದ 10…

Read More

ಬೆಂಗಳೂರು:  ರಾಜ್ಯಕ್ಕೆ ಭೇಟಿ ನೀಡುವ ಪ್ರವಾಸಿಗರು ಸೇರಿದಂತೆ ಪ್ರತಿಯೊಬ್ಬ ವ್ಯಕ್ತಿಗೂ ರಕ್ಷಣೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು  ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸಣಾಪುರದಲ್ಲಿ ಇಸ್ರೇಲಿ ಪ್ರಜೆ ಮತ್ತು ಹೋಂಸ್ಟೇ ಮಾಲೀಕರ ಮೇಲೆ ನಡೆದ ಅತ್ಯಾಚಾರ ಪ್ರಕರಣ ಸಂಬಂಧ  ಪ್ರತಿಕ್ರಿಯಿಸಿದ ಅವರು,  ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇಸ್ರೇಲಿ ಪ್ರಜೆ ಹಾಗೂ ಹೋಮ್‌ ಸ್ಟೇ ಮಾಲಕಿ ಮೇಲೆ ನಡೆದ ಹಲ್ಲೆ ಹಾಗೂ ಅತ್ಯಾಚಾರ ಅತ್ಯಂತ ಹೇಯ ಕೃತ್ಯ ಎಂದಿದ್ದಾರೆ. ಘಟನೆ ವರದಿಯಾದ ಕೂಡಲೇ ಸಂಬಂಧಪಟ್ಟ ಪೊಲೀಸರಿಂದ ಮಾಹಿತಿ ಪಡೆದು, ಕಟ್ಟುನಿಟ್ಟಿನ ತನಿಖೆ ಕೈಗೊಂಡು, ಅಪರಾಧಿಗಳನ್ನು ಶೀಘ್ರ ಪತ್ತೆಹಚ್ಚುವಂತೆ ಸೂಚಿಸಿದ್ದೆ ಎಂದು ಹೇಳಿದ್ದಾರೆ. ಪ್ರಕರಣದ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ತನಿಖೆ ಮುಂದುವರೆಸಿದ್ದಾರೆ. ರಾಜ್ಯಕ್ಕೆ ಬರುವ ಪ್ರವಾಸಿಗರು ಸೇರಿದಂತೆ ಪ್ರತಿಯೊಬ್ಬರಿಗೂ ರಕ್ಷಣೆ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಎಲ್ಲಾ ಅಗತ್ಯ ಕ್ರಮ ವಹಿಸಲಾಗುವುದು ಎಂದು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ…

Read More

ಬೆಂಗಳೂರು: ಹಸಿರು  ಬಟಾಣಿಯಲ್ಲಿ ಕೃತಕ ಕಲಬೆರಕೆ ಅಂಶ ಪತ್ತೆಯಾಗಿದೆ. ಪ್ರಾಥಮಿಕ ಲ್ಯಾಬ್ ವರದಿಯಲ್ಲಿ ಸ್ಫೋಟಕ ಅಂಶ ಬಯಲಾಗಿದೆ ಎನ್ನಲಾಗಿದೆ.  ಇದು ಸಾರ್ವಜನಿಕರಲ್ಲಿ ಆತಂಕ್ಕೆ ಕಾರಣವಾಗಿದೆ. ಬ್ರಿಲಿಯಂಟ್​ ಬ್ಲೂ, ಟೆಟಾರ್ಜಿನ್ ಅಂದ್ರೆ ಹಳದಿ ಬಣ್ಣವಿರುವ ರಾಸಾಯನಿಕ ಇರುವುದು ಪತ್ತೆಯಾಗಿದೆ. ಬಟಾಣಿಯಲ್ಲೂ ಕ್ಯಾನ್ಸರ್ ತರುವ ಅಂಶ ಬೆಳಕಿಗೆ ಬಂದಿದೆ ಎಂದು ವರದಿ ಹೇಳಿದೆ. ಈಗಾಗಲೇ ಆಹಾರ ಇಲಾಖೆ ಆಯುಕ್ತ ಶ್ರೀನಿವಾಸ್​ ಕಲರ್​ ಬಳಕೆ ನಿಷೇಧದ ಬಗ್ಗೆ ಶಿಫಾರಸು ಮಾಡಿದ್ದಾರೆ ಎಂದು ಹೇಳಲಾಗಿದೆ.  ನಂತರ ಮತ್ತೊಂದು ಸುತ್ತಿನ ಪರೀಕ್ಷೆ ಬಳಿಕ ಬಟಾಣಿಗೆ ಬಣ್ಣ ಬಳಕೆ ಬ್ಯಾನ್‌ಗೆ ಸಿದ್ಧತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು:  ಪ್ರಸ್ತುತ ಬದಲಾಗುತ್ತಿರುವ ಮಾಡ್ರನ್ ಜಗತ್ತಿನಲ್ಲಿ ಡ್ರಗ್ಸ್ ಬಳಕೆ ಪಿಡುಗಾಗಿ ಪರಿಣಮಿಸಿದೆ. ಇದನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಈ ರೀತಿ ತುಮಕೂರಿನಲ್ಲಿ ಜಾಗೃತಿ ನಡಿಗೆ ಆಯೋಜನೆ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಅಶೋಕ್ ತಿಳಿಸಿದ್ದಾರೆ. ನಮ್ಮ ಪೊಲೀಸ್ ನಮ್ಮ ಹೆಮ್ಮೆ ಧ್ಯೇಯ ವಾಕ್ಯದಡಿ, ತುಮಕೂರು ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಡ್ರಗ್ಸ್  ಮತ್ತು ಸೈಬರ್ ವಂಚನೆ ವಿರುದ್ಧ ಜಾಗೃತಿ ನಡಿಗೆ ಆಯೋಜಿಸಲಾಗಿತ್ತು. 1,500 ಮಂದಿ ಪೊಲೀಸ್ ಸಿಬ್ಬಂದಿಗಳು, ವಿದ್ಯಾಥಿಗಳು, ಕ್ರೀಡಾಪಟುಗಳು ಈ ಜಾಥಾದಲ್ಲಿ ಪಾಲ್ಗೊಂಡಿದ್ದರು. ಮೊದಲ 50 ಮಂದಿಗೆ ಮೆಡಲ್ ಗಳನ್ನು ಕೊಡಲಾಯಿತು. ಜಾಗೃತಿ ನಡಿಗೆಯಲ್ಲಿ ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಕೂಡ ಸಕ್ರಿಯವಾಗಿ ಪಾಲ್ಗೊಂಡರು. ನಮ್ಮ_ಪೋಲಿಸ್_ನಮ್ಮ_ಹೆಮ್ಮೆಎಂಬ ದ್ಯೇಯ ವಾಕ್ಯ ದೊಂದಿಗೆ “TUMAKURU RUN–5K & 10K” ಇಂದು  ಜಿಲ್ಲಾ ಪೊಲೀಸ್ ಕವಾಯಿತು ಮೈದಾನದಿಂದ ಬೆಳಗ್ಗೆ 7 ಗಂಟೆಗೆ  ಏರ್ಪಡಿಸಿದ್ದು ಓಟವನ್ನು ಜಿಲ್ಲಾಧಿಕಾರಿಗಳಾದ ಶುಭ ಕಲ್ಯಾಣ್  ರವರು ಉದ್ಘಾಟಿಸಿದರು. ಎಸ್.ಎಸ್. ಸರ್ಕಲ್, ಟೌನ್ ಹಾಲ್ ಸರ್ಕಲ್, ಕಾಲ್ಟಾಕ್ಸ್ ಸರ್ಕಲ್, ಮಂಡಿ ಪೇಟೆ,…

Read More

ಬೆಳಗಾವಿ: ರಾಜ್ಯ ಮುಂಗಡಪತ್ರದಲ್ಲಿ ಒಂದು ಲಕ್ಷ ಕೋಟಿಗೂ ಅಧಿಕ ಸಾಲ ಮಾಡಲು ಪ್ರಸ್ತಾಪಿಸುವ ಮೂಲಕ ಅತಿ ಹೆಚ್ಚು ಸಾಲ ಮಾಡಿದ ಮುಖ್ಯಮಂತ್ರಿ ಎನ್ನುವ ದಾಖಲೆಗೆ ಸಿದ್ದರಾಮಯ್ಯ ಪಾತ್ರರಾಗಿದ್ದಾರೆ ಎಂದು ಬಿಜೆಪಿ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಟೀಕಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿ ನಾಲ್ಕು ಲಕ್ಷ ಕೋಟಿಗೂ ಅಧಿಕ ಮೊತ್ತದ ರಾಜ್ಯ ಮುಂಗಡಪತ್ರ ಮಂಡಿಸಿದ್ದು, ಅದರಲ್ಲಿ 1 ಲಕ್ಷ ಕೋಟಿ ರೂಪಾಯಿ ಸಾಲ ಪಡೆಯುವುದಾಗಿ ಉದ್ದೇಶಿಸಿದ್ದಾರೆ ಎಂದರು. ಈ ಬಾರಿ ಒಂಭತ್ತೂವರೆ ಸಾವಿರ ಕೋಟಿ ರೂಪಾಯಿ ತೆರಿಗೆ ಸಂಗ್ರಹ ಕಡಿತವಾಗಲಿದೆ ಎಂದು ಅಂದಾಜು ಮಾಡಿದ್ದಾರೆ. ಮೂಲಸೌಕರ್ಯ ಹೂಡಿಕೆಗೆ ಹೆಚ್ಚಿನ ಆದ್ಯತೆ ನೀಡಿದ್ದರೆ, ತೆರಿಗೆ ಕಡಿತ ಆಗುತ್ತಿರಲಿಲ್ಲ ಎಂದು ತಿಳಿಸಿದರು. ಒಂದು ಸಮುದಾಯವನ್ನು ಗಮನದಲ್ಲಿಟ್ಟುಕೊಂಡು ಆ ಸಮುದಾಯಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗಿದೆ. ಜೊತೆಗೆ ಸರ್ಕಾರಿ ಕಾಮಗಾರಿಗಳಲ್ಲಿ ಮೀಸಲಾತಿಯನ್ನು ನೀಡಲು ಪ್ರಸ್ತಾಪಿಸಿದ್ದಾರೆ. ಸಂವಿಧಾನ ರಚನಾ ಸಮಿತಿಯಲ್ಲಿ ಧರ್ಮಾಧಾರಿತ ಮೀಸಲಾತಿ ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಲಾಗಿತ್ತು. ಆದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಓಲೈಕೆ ರಾಜಕಾರಣ ಮಾಡುತ್ತಿರುವುದು…

Read More

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಫೆಬ್ರವರಿ 14ರಂದು ಆರು ವರ್ಷದ ‘ಹಿಮಾ’ ಹೆಸರಿನ ಹುಲಿ ನಾಲ್ಕು ಮರಿಗಳಿಗೆ ಜನ್ಮ ನೀಡಿದೆ. ಈ ಬಗ್ಗೆ ಬನ್ನೇರುಘಟ್ಟ ಜೈವಿಕ ಉದ್ಯಾನವನ ಪ್ರಕಟನೆ ನೀಡಿದೆ. ಅಧಿಕಾರಿಗಳ ಪ್ರಕಾರ, ‘ಹಿಮಾ’ 2024ರ ಜೂನ್ ನಲ್ಲಿ ತನ್ನ ಮೊದಲ ಮರಿಗಳಿಗೆ ಜನ್ಮ ನೀಡಿತು. ಇದೀಗ ಎರಡನೇ ಬಾರಿಗೆ ಮರಿಗಳನ್ನು ಹಾಕಿದೆ. ತಾಯಿ ಮತ್ತು ಮರಿಗಳು ಎರಡೂ ಆರೋಗ್ಯವಾಗಿವೆ. ಫೆಬ್ರವರಿ 16ರಂದು ‘ಅರುಣ್ಯ’ ಹೆಸರಿನ ಹುಲಿ ಮೊದಲ ಬಾರಿಗೆ ಎರಡು ಮರಿಗಳಿಗೆ ಜನ್ಮ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. ಈ ಮರಿಗಳನ್ನು ಪ್ರಾಣಿ ವಿನಿಮಯ ಕಾರ್ಯಕ್ರಮದ ಅಡಿಯಲ್ಲಿ ಚೆನ್ನೈನ ಅರಿಗ್ನಾರ್ ಅನ್ನಾ ಪ್ರಾಣಿಶಾಸ್ತ್ರ ಉದ್ಯಾನವನದಿಂದ ತರಿಸಿಕೊಳ್ಳಲಾಗಿತ್ತು. ತಾಯಿ ಮತ್ತು ಮರಿಗಳು ಎರಡೂ ಆರೋಗ್ಯವಾಗಿವೆ ಎಂದು ಜೈವಿಕ ಉದ್ಯಾನವನವು ಹೇಳಿಕೆಯಲ್ಲಿ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಕಲಬುರಗಿ: ಜನರು ತಮ್ಮ ನಾಯಕರನ್ನು ಒಳ್ಳೆಯ ಆಕಾಂಕ್ಷೆಗಳೊಂದಿಗೆ ಆಯ್ಕೆ ಮಾಡುತ್ತಾರೆ. ಜನರ ಆಕಾಂಕ್ಷೆಗಳನ್ನು ಈಡೇರಿಸುವುದು ನಾಯಕರ ಕರ್ತವ್ಯ. ನಾಯಕರೇ ವಿರುದ್ಧ ದಿಕ್ಕಿನಲ್ಲಿ ಹೋದರೆ, ಜನರನ್ನು ಹೇಗೆ ಎದುರಿಸಬಹುದು ಎಂದು ಮಲ್ಲಿಕಾರ್ಜುನ ಖರ್ಗೆ ಪ್ರಶ್ನಿಸಿದ್ದಾರೆ. ಜೇವರ್ಗಿಯ ಕಟ್ಟಿ ಸಾಂಗವಿ ಗ್ರಾಮದಲ್ಲಿನ ಧರ್ಮ ಸಿಂಗ್ ಆಸ್ಪತ್ರೆಯ ಆವರಣದಲ್ಲಿ ಕಲ್ಯಾಣ ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆಗಳನ್ನು ಹಾಕುವ ಗುರಿಯನ್ನು ಹೊಂದಿರುವ ‘ಕಲ್ಯಾಣ ಪಥ ಯೋಜನೆ’ಗೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದ್ದಾರೆ. ಹಣಕಾಸು ಸಚಿವರಾಗಿ 16 ಬಾರಿ ಬಜೆಟ್ ಮಂಡಿಸಿದ್ದು ಬಹುಶಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ದಾಖಲೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ಗಳಿಗೆ ಮೆಚ್ಚುಗೆಯ ಅಗತ್ಯವಿದೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು: ಲಸಿಕೆ ಹಾಕಿದ ಕೆಲವೇ ಗಂಟೆಯಲ್ಲಿ ಮಗು ಸಾವನ್ನಪ್ಪಿದ ಆರೋಪ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಮಾಗೋಡು ಗ್ರಾಮದಲದಲ್ಲಿ ಕೇಳಿ ಬಂದಿದ್ದು, 5 ತಿಂಗಳ ಶಿಶು ಸಾವನ್ನಪ್ಪಿರುವುದರ ಬಗ್ಗೆ ಶಿರಾ ನಗರ ಠಾಣೆ ಪೊಲೀಸರಿಗೆ ಮಗುವಿನ ತಂದೆ ದೂರು ನೀಡಿದ್ದಾರೆ. ಗ್ರಾಮದಲ್ಲಿ ಎಎನ್ ಎಂ. ಮುದ್ದಮ್ಮ ಮಗುವಿಗೆ ರೋಟ್ — 2 ಲಸಿಕೆ ಹಾಕಿದ್ದರು. ಕಳೆದ ಗುರುವಾರ 11:-30 ಸುಮಾರಿಗೆ ಲಸಿಕೆ ಪಡೆದ ಮಗು ನಿದ್ದೆಗೆ ಜಾರಿತ್ತು. ಮಧ್ಯಾಹ್ನ 3.30 ಸುಮಾರಿಗೆ ಬೇಧಿಯಿಂದ ಮಗು ಅಸ್ವಸ್ಥಗೊಂಡಿದೆ. ತಕ್ಷಣ ಶಿರಾ ಸರ್ಕಾರಿ ಆಸ್ಪತ್ರೆ ಗೆ ಹೋದಾಗ ಪರಿಶೀಲಿಸಿದ ವೈದ್ಯರು ತುಮಕೂರು ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಸೂಚನೆ ನೀಡಿದ್ದಾರೆ. ಬಳಿಕ ಶ್ರೀದೇವಿ ಆಸ್ಪತ್ರೆಗೆ ಬಂದಾಗ ಮಗು ಸಾವನಪ್ಪಿದೆ. ಶಿರಾ ಮಕ್ಕಳ ಆಸ್ಪತ್ರೆಯಲ್ಲಿ ಸರಿಯಾದ ವ್ಯವಸ್ಥೆ ಹಾಗೂ ವೆಂಟಿಲೇಟರ್ ಇಲ್ಲದಿದ್ದರಿಂದ ಸಾವು ಸಂಭವಿಸಿದೆ ಎಂದು ಮಗುವಿನ ತಂದೆ ದೂರು ನೀಡಿದ್ದಾರೆ. ಕೀರ್ತನಾ ಹಾಗೂ ಲಕ್ಚ್ಮೀಕಾಂತ್ ದಂಪತಿಯ ಮಗಳು ಸಾವನ್ನಪ್ಪಿದ ಮಗುವಾಗಿದ್ದಾಳೆ. ಒಪಿಓ, ರೋಟ, ಪೆಂಟ ಲಸಿಕೆಯಿಂದಲೇ…

Read More

 ( ಈ ದಿನ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆ ನೆನಪಿಗಾಗಿ) ವಿಶ್ವದ ಅತಿ ಹೆಚ್ಚು ದೇಶಗಳು ಕ್ರಿಶ್ಚಿಯನ್ ಧರ್ಮಿಯ ಸಮುದಾಯಗಳನ್ನು ಹೊಂದಿವೆ. ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಕೂಡ ಕ್ರಿಶ್ಚಿಯನ್ನರು. ವಿಶ್ವದಲ್ಲಿ 200 ಕೋಟಿ ಕ್ರಿಶ್ಚಿಯನ್ನರು ಇರುವ ಅಂದಾಜಿದೆ. ಹಾಗೆಯೇ ವಿಶ್ವದ 150 ದೇಶಗಳು ಕ್ರಿಶ್ಚಿಯನ್ ಧರ್ಮೀಯ ರಾಷ್ಟ್ರಗಳಾಗಿವೆ. ದಿನಾಂಕ 7-3-1804ರಂದು ಥಾಮಸ್ ಚಾರ್ಲ್ಸ್ ,  ವಿಲಿಯಂ ವಿಲ್ಟರ್ ಫೋರ್ಸ್ ಮತ್ತು ಅವರ ತಂಡದವರು ಸೇರಿ ಇಂಗ್ಲೆಂಡ್ ನಲ್ಲಿ “British & Foreigne Bible Society @ Bible Society” ಎಂಬ ಈ ಸಂಸ್ಥೆಯನ್ನು ಸ್ಥಾಪಿಸಿದರು. ಜಾತ್ಯತೀತ ಭಾರತ ದೇಶವನ್ನು ಒಳಗೊಂಡಂತೆ 150ಕ್ಕೂ ಹೆಚ್ಚು ದೇಶಗಳಲ್ಲಿ ಈ “ಬೈಬಲ್ ಸೊಸೈಟಿ’ ಅಸ್ತಿತ್ವದಲ್ಲಿದೆ. ಸುಮಾರು 18ನೇ ಶತಮಾನದಿಂದ ಸತತವಾಗಿ, ಲಾಭರಹಿತ ಸಂಸ್ಥೆಯಾಗಿ,  ಕ್ರಿಶ್ಚಿಯನ್ ಧರ್ಮಿಯರ ‘ಧರ್ಮಗ್ರಂಥ’ ವಾಗಿರುವ “ಬೈಬಲ್” ಅನ್ನು ಶ್ರೀಸಾಮಾನ್ಯ ಜನರ ಕೈಗೆಟುಕುವ ಬೆಲೆಯಲ್ಲಿ ಮತ್ತು ಧಾರ್ಮಿಕ ಕೇಂದ್ರಗಳಲ್ಲಿ ಪುಕ್ಕಟೆಯಾಗಿ ಮತ್ತು ವಿಶ್ವದ ಎಲ್ಲಾ ಅಧಿಕೃತ ಭಾಷೆಗಳಲ್ಲಿ ಭಾಷಾಂತರ, ಮುದ್ರಣ, ಪ್ರಕಟಣೆ,…

Read More

ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೂ ಮುನ್ನ ಡೆವಿಲ್ ಸಿನಿಮಾ ಶೂಟಿಂಗ್ ನಲ್ಲಿ ಭಾಗಿಯಾಗಿದ್ದ ನಟ ದರ್ಶನ್ ಇದೀಗ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದ ಬಳಿಕ ಮತ್ತೆ ಸಿನಿಮಾ ಸೆಟ್ ಗೆ ಕಾಲಿಡಲಿದ್ದಾರೆ. ಸುಮಾರು 9 ತಿಂಗಳುಗಳ ನಂತರ ನಟ ದರ್ಶನ್  ಸೆಟ್ ಗೆ ಕಾಲಿಡಲಿದ್ದಾರೆ.  ಮುಂದಿನ ವಾರದಿಂದಲೇ ಶೂಟಿಂಗ್ ಆರಂಭಗೊಳ್ಳಲಿದ್ದು, ಅದಕ್ಕಾಗಿ ಶೂಟಿಂಗ್ ಸೆಟ್ ಗಳ ನಿರ್ಮಾಣ ಕೂಡ ಆಗ್ತಾ ಇದೆ ಎಂದು ಹೇಳಲಾಗಿದೆ. ಎರಡನೇ ಹಂತದ ಚಿತ್ರೀಕರಣ ಇದಾಗಿದ್ದು, ಚಿತ್ರೀಕರಣದಲ್ಲಿ ನಟ ದರ್ಶನ್ ಭಾಗಿ ಆಗಲಿದ್ದಾರೆ. ಬೆನ್ನು ನೋವಿಗೆ ಚಿಕಿತ್ಸೆ ಪಡೆಯುತ್ತಿರುವ ನಟ ದರ್ಶನ್ ಅದರ ಜೊತೆಗೆ ಜಿಮ್​ಗೂ ಸಹ ಹೋಗಲು ಆರಂಭಿಸಿದ್ದು, ಸಿನಿಮಾದ ಚಿತ್ರೀಕರಣದಲ್ಲಿ ಭಾಗವಹಿಸಲೆಂದೇ ಜಿಮ್​ಗೆ ಹೋಗಿ ದೇಹ ದಂಡಿಸುತ್ತಿದ್ದಾರೆ. ಬೆಂಗಳೂರು, ಮೈಸೂರು, ಹೈದರಾಬಾದ್ ಹಾಗೂ ರಾಜಸ್ಥಾನದಲ್ಲಿ ಎರಡನೇ ಹಂತದ ಚಿತ್ರೀಕರಣ ನಡೆಯಲಿದೆ ಎನ್ನಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More