Author: admin

ಕೊಡಿಗೇನಹಳ್ಳಿ (ತುಮಕೂರು ಜಿಲ್ಲೆ): ಮಗಳ ಪ್ರಿಯಕರನ ಜೊತೆ ಸೇರಿ ಅತ್ತೆಯೇ ತನ್ನ ಅಳಿಯನನ್ನು ಕೊಲೆ ಮಾಡಿರುವ ಭೀಕರ ಘಟನೆ ಇಲ್ಲಿನ ದಂಡೀಪುರದಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ವ್ಯಕ್ತಿಯ ಅತ್ತೆ ಜಯಮ್ಮ (50), ಆಕೆಯ ಪುತ್ರ ನಂದೀಶ್ (35) ಮತ್ತು ಮಗಳ ಪ್ರಿಯಕರ ಅಮರ್ ನಾರಾಯಣ್ (23) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆಯಾದ ವ್ಯಕ್ತಿಯನ್ನು ನರಸಿಂಹಮೂರ್ತಿ ಎಂದು ಗುರುತಿಸಲಾಗಿದೆ. ಇವರು ಮೂರು ವರ್ಷಗಳ ಹಿಂದೆ ಜಯಮ್ಮ ಅವರ ಪುತ್ರಿ ಸುಜಾತಾ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು ಮತ್ತು ಅತ್ತೆ ಮನೆಯಲ್ಲೇ ವಾಸವಾಗಿದ್ದರು. ಆದರೆ, ಸುಜಾತಾ ಅವರು ಅನಾರೋಗ್ಯದ ಕಾರಣದಿಂದ ಕಳೆದ ಜನವರಿ 31ರಂದು ಮೃತಪಟ್ಟಿದ್ದರು. ಸುಜಾತಾ ಬದುಕಿದ್ದಾಗ ಆಕೆಗೆ ಅಮರ್ ಎಂಬಾತನೊಂದಿಗೆ ಅಕ್ರಮ ಸಂಬಂಧವಿತ್ತು ಎನ್ನಲಾಗಿದೆ. ಈ ವಿಷಯವಾಗಿ ನರಸಿಂಹಮೂರ್ತಿ ಅವರು ಅತ್ತೆ ಜಯಮ್ಮ ಅವರೊಂದಿಗೆ ಆಗಾಗ ಗಲಾಟೆ ಮಾಡುತ್ತಿದ್ದರು. ಇದರಿಂದ ರೋಸಿಹೋದ ಜಯಮ್ಮ, ತನ್ನ ಮಗ ನಂದೀಶ್ ಮತ್ತು ಮಗಳ ಪ್ರಿಯಕರ ಅಮರ್ ಜೊತೆ ಸೇರಿ ಅಳಿಯನನ್ನು ಮುಗಿಸಲು ಸಂಚು…

Read More

ಬೆಂಗಳೂರು: ಪ್ರೀತಿಸಿ, ಮನೆಯವರನ್ನು ಒಪ್ಪಿಸಿ ಮದುವೆಯಾಗಿದ್ದ ಪತ್ನಿಯೊಬ್ಬಳು, ಪತಿಯ ಸ್ನೇಹಿತನನ್ನೇ ‘ಅಣ್ಣ’ ಎಂದು ಕರೆದು ಈಗ ಆತನ ಜೊತೆಯೇ ಪರಾರಿಯಾಗಿರುವ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಜಿಮ್ ಟ್ರೈನರ್ ಆಗಿರುವ ನಿತೇಶ್ ಎಂಬುವವರು ನಂದಿನಿ (ಹೆಸರು ಬದಲಾಯಿಸಲಾಗಿದೆ) ಎಂಬಾಕೆಯನ್ನು ಪ್ರೀತಿಸಿ ವಿವಾಹವಾಗಿದ್ದರು. ನಿತೇಶ್ ಅವರು ಈ ಹಿಂದೆ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾಗ ನವೀನ್ ಎಂಬಾತನ ಪರಿಚಯವಾಗಿತ್ತು. ಇಬ್ಬರು ಆಪ್ತ ಸ್ನೇಹಿತರಾಗಿದ್ದರು. ಮದುವೆಯ ನಂತರ ನವೀನ್, ನಿತೇಶ್ ಅವರ ಮನೆಯಲ್ಲೇ ಬಾಡಿಗೆಗೆ ವಾಸವಿದ್ದನು. ಮನೆಯಲ್ಲೇ ವಾಸವಿದ್ದ ನವೀನ್ ಜೊತೆ ಪತ್ನಿ ನಂದಿನಿ ಅತಿಯಾದ ಸಲುಗೆ ಬೆಳೆಸಿಕೊಂಡಿದ್ದಳು. ಇದನ್ನು ಗಮನಿಸಿದ ಪತಿ ನಿತೇಶ್ ಹಲವಾರು ಬಾರಿ ಪತ್ನಿಗೆ ಬುದ್ಧಿವಾದ ಹೇಳಿದ್ದರು. ಅಷ್ಟೇ ಅಲ್ಲದೆ, ಈ ಕಾರಣಕ್ಕಾಗಿಯೇ ಅವರು ಮನೆ ಬದಲಾಯಿಸಿದ್ದರು. ಆದರೂ ನಂದಿನಿ ಮಾತ್ರ ನವೀನ್ ಜೊತೆಗಿನ ಸಂಪರ್ಕವನ್ನು ಮುಂದುವರಿಸಿದ್ದಳು. ಘಟನೆ ನಡೆದ ದಿನದಂದು ತನಗೆ ಹೊಟ್ಟೆನೋವು ಇದೆ ಎಂದು ಕೆಲಸಕ್ಕೆ ರಜೆ ಹಾಕಿದ್ದ ನಂದಿನಿ, ಪತಿ ಇಲ್ಲದ ವೇಳೆ ನವೀನ್ ಜೊತೆ…

Read More

ಕೊರಟಗೆರೆ: ತಾಲ್ಲೂಕಿನ ಸಾರ್ವಜನಿಕರ ಅನುಕೂಲಕ್ಕಾಗಿ ಫ್ರೆಂಡ್ಸ್ ಗ್ರೂಪ್ ಸೇವಾ ಸಮಿತಿ ವತಿಯಿಂದ ನೂತನ ಉಚಿತ ತುರ್ತು ವಾಹನವನ್ನು (Ambulance) ಇಂದು ಲೋಕಾರ್ಪಣೆ ಮಾಡಲಾಗುತ್ತಿದೆ ಎಂದು ಸಮಿತಿಯ ಅಧ್ಯಕ್ಷರಾದ ರವಿಕುಮಾರ್ ತಿಳಿಸಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಫ್ರೆಂಡ್ಸ್ ಗ್ರೂಪ್ ಸೇವಾ ಸಮಿತಿ ಮತ್ತು ಜಗ್ಗೇಶ್ ಅಭಿಮಾನಿಗಳ ಸಂಘದ ಜಂಟಿ ಆಶ್ರಯದಲ್ಲಿ ಇಂದು ಸಂಜೆ 5:00 ಗಂಟೆಗೆ ಪಟ್ಟಣದ ಪುರಸಭಾ ಕಾರ್ಯಾಲಯದ ಮುಂಭಾಗದಲ್ಲಿ ಈ ಸೇವಾ ಕಾರ್ಯಕ್ರಮ ನಡೆಯಲಿದೆ ಎಂದರು. ಹೊಸ ವಾಹನದ ಅವಶ್ಯಕತೆ: ಕಳೆದ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಹಳೆಯ ತುರ್ತು ವಾಹನವು ದುರಸ್ತಿಯಲ್ಲಿದ್ದ ಕಾರಣ, ಸಾರ್ವಜನಿಕರ ತುರ್ತು ಅಗತ್ಯಗಳಿಗಾಗಿ ನೂತನ ವಾಹನವನ್ನು ಸಜ್ಜುಗೊಳಿಸಲಾಗಿದೆ. ವಾಹನ ಸಮರ್ಪಣೆಯ ಜೊತೆಗೆ ಗುರುವಂದನೆ ಮತ್ತು ಶಾಲಾ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ, ಇದೇ ವೇಳೆ ಚಲನಚಿತ್ರ ಹಾಸ್ಯ ಕಲಾವಿದರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ತಿಳಿಸಿದರು. ಸಿದ್ದರಬೆಟ್ಟದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಹಾಗೂ ಎಲೆರಾಂಪುರದ ಡಾ. ಶ್ರೀ ಹನುಮಂತನಾಥ ಸ್ವಾಮೀಜಿ ಅವರು…

Read More

ತುಮಕೂರು: ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವ ಐತಿಹಾಸಿಕ ‘ನಾರಿಶಕ್ತಿ ವಂದನ್’ ಮಸೂದೆಯನ್ನು ವಿರೋಧಿಸುವ ಮೂಲಕ ಕಾಂಗ್ರೆಸ್ ಪಕ್ಷವು ದೇಶದ ಅರ್ಧದಷ್ಟು ಜನಸಂಖ್ಯೆಯಾಗಿರುವ ಮಹಿಳೆಯರಿಗೆ ದ್ರೋಹ ಬಗೆದಿದೆ ಎಂದು ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್ ಕಿಡಿಕಾರಿದ್ದಾರೆ. ಮಂಗಳವಾರ ನಗರದ ಜಿಲ್ಲಾ ಬಿಜೆಪಿ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಅದರ ಮಿತ್ರ ಪಕ್ಷಗಳ ನಡವಳಿಕೆಯನ್ನು ತೀವ್ರವಾಗಿ ಖಂಡಿಸಿದರು. ಪ್ರಧಾನಿ ನರೇಂದ್ರ ಮೋದಿಯವರು ಮಹಿಳೆಯರ ನಿಜವಾದ ಸಬಲೀಕರಣಕ್ಕಾಗಿ ತಂದ ಮಸೂದೆಯನ್ನು ‘ಇಂಡಿ’ ಒಕ್ಕೂಟವು ತಿರಸ್ಕರಿಸಿದೆ. ಇದು ಕೇವಲ ಬಿಜೆಪಿಯ ಮಹಿಳೆಯರಿಗಲ್ಲದೆ, ಎಲ್ಲಾ ಪಕ್ಷಗಳ ಮಹಿಳೆಯರ ರಾಜಕೀಯ ಅವಕಾಶವನ್ನು ಕಸಿದುಕೊಂಡಂತಾಗಿದೆ ಎಂದು ಅವರು ಹೇಳಿದರು. ಮಹಿಳಾ ಸಬಲೀಕರಣಕ್ಕಾಗಿ ಕೇಂದ್ರ ಸರ್ಕಾರವು ಜಲಜೀವನ್ ಮಿಷನ್ ಮೂಲಕ 15 ಕೋಟಿ ಮನೆಗಳಿಗೆ ನೀರು, 10 ಕೋಟಿ ಉಜ್ವಲ ಅನಿಲ ಸಂಪರ್ಕ, 12 ಕೋಟಿ ಶೌಚಾಲಯ ಹಾಗೂ 4 ಕೋಟಿಗೂ ಹೆಚ್ಚು ಮನೆಗಳನ್ನು ಮಹಿಳೆಯರ ಹೆಸರಿನಲ್ಲಿ ನೀಡಿದೆ ಎಂದು ಶಾಸಕರು ವಿವರಿಸಿದರು.…

Read More

ತಿಪಟೂರು: ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸಾರ್ವಜನಿಕ ಸಮಸ್ಯೆಗಳ ಕುರಿತು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ನಗರಸಭೆ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅಧಿಕಾರಿಗಳಿಗೆ ಹಲವು ಮಹತ್ವದ ನಿರ್ದೇಶನಗಳನ್ನು ನೀಡಿದರು. ಬೇಸಿಗೆ ಕಾಲ ಆರಂಭವಾಗುತ್ತಿರುವುದರಿಂದ ನಗರವಾಸಿಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು.  ವಾರ್ಡ್‌ಗಳ ಬೇಡಿಕೆಗೆ ಅನುಗುಣವಾಗಿ ನೀರು ಒದಗಿಸಬೇಕು ಹಾಗೂ ಅವಶ್ಯಕತೆ ಇರುವ ಕಡೆಗಳಲ್ಲಿ ಹೊಸ ಕೊಳವೆಬಾವಿಗಳನ್ನು ಕೊರೆಸಬೇಕು ಎಂದು ಸೂಚಿಸಿದರು. ನಗರದಲ್ಲಿ ನಿರ್ಮಾಣವಾಗುತ್ತಿರುವ ವಾಣಿಜ್ಯ ಮತ್ತು ವಸತಿ ಸಂಕೀರ್ಣಗಳ ಮಾಹಿತಿ ಪಡೆದು, ಅವುಗಳ ನಿಯಮಬದ್ಧ ಪರಿಶೀಲನೆ ನಡೆಸಲು ಆದೇಶಿಸಿದರು. ರಜತಾದ್ರಿಪುರ ಮತ್ತು ಕೊನೇಹಳ್ಳಿಯಲ್ಲಿ ಬೆಸ್ಕಾಂ ಕಚೇರಿ, ಎಪಿಎಂಸಿ ಆವರಣದಲ್ಲಿ ಕೋಲ್ಡ್ ಸ್ಟೋರೇಜ್ ಹಾಗೂ ಅಮಾನಿಕೆರೆಯಲ್ಲಿ ಗಾಜಿನ ಮನೆ ನಿರ್ಮಾಣದ ಕುರಿತು ಚರ್ಚಿಸಲಾಯಿತು. ಮುಖ್ಯಮಂತ್ರಿಗಳು ಮಂಜೂರು ಮಾಡಿರುವ ಯೋಜನೆಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ತಾಕೀತು ಮಾಡಿದರು. ಇನ್ನೂ, ಮಾಟನಹಳ್ಳಿ ಗ್ರಾಮದಲ್ಲಿ ಸಂಭವಿಸಿದ ಸಿಲಿಂಡರ್ ಸ್ಫೋಟದಿಂದ ಎರಡು ಮನೆಗಳು ಸುಟ್ಟು ಹೋಗಿರುವ…

Read More

ತುಮಕೂರು: ನಗರದ ಕ್ಯಾತ್ಸಂದ್ರ ಸಮೀಪದ ಡಾ.ಪುನೀತ್ ರಾಜ್‌ ಕುಮಾರ್ ಬಡಾವಣೆಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿಂದಾಗಿ ನಿವಾಸಿಗಳು ನರಕಯಾತನೆ ಅನುಭವಿಸುತ್ತಿದ್ದು, ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರ (TUDA) ಮತ್ತು ಮಹಾನಗರ ಪಾಲಿಕೆಯ ವಿಳಂಬ ನೀತಿಯ ವಿರುದ್ಧ ನಾಗರಿಕ ಹಿತರಕ್ಷಣಾ ಸಮಿತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಮಂಗಳವಾರ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ ಬಡಾವಣೆಯ ನಾಗರಿಕರು, ತಮ್ಮ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸದಿದ್ದರೆ ಸಾಮೂಹಿಕ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಬಡಾವಣೆಯ ಚರಂಡಿ ವ್ಯವಸ್ಥೆಯು ಅತ್ಯಂತ ಕಳಪೆ ಗುಣಮಟ್ಟದಿಂದ ಕೂಡಿದ್ದು, ಒಳಚರಂಡಿ ನೀರು ರಸ್ತೆಗಳ ಮೇಲೆ ಹರಿಯುತ್ತಿದೆ.  ಬಡಾವಣೆಗೆ ಇನ್ನೂ ಅಧಿಕೃತ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗಿಲ್ಲ. ಇದರ ಜೊತೆಗೆ  ರಸ್ತೆ ಮೇಲೆ ಹರಿಯುವ ಕೊಳಚೆ ನೀರಿನಿಂದಾಗಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳು ಮತ್ತು ವೃದ್ಧರ ಆರೋಗ್ಯಕ್ಕೆ ಗಂಭೀರ ಅಪಾಯ ಉಂಟಾಗಿದೆ ಎಂದು ಪ್ರತಿಭಟನಾಕಾರರು ದೂರಿದರು. ಈ ಸಂದರ್ಭದಲ್ಲಿ ಮಾತನಾಡಿದ ನಾಗರಿಕ ಹಿತರಕ್ಷಣಾ ಸಮಿತಿಯ ಅಧ್ಯಕ್ಷರಾದ ಪ್ರತಾಪ್ ಮುದಕರಿ, “ಪ್ರಾಧಿಕಾರವು ಕಾಮಗಾರಿಗಳನ್ನು…

Read More

ತುಮಕೂರು: ಕೇಂದ್ರ ಸರ್ಕಾರ ಮಂಡಿಸಿರುವ ‘ನಾರಿಶಕ್ತಿ ವಂದನ್ ಮಸೂದೆ’ಯನ್ನು ವಿರೋಧಿಸುತ್ತಿರುವ ಕಾಂಗ್ರೆಸ್ ಹಾಗೂ ಅದರ ಮಿತ್ರಪಕ್ಷಗಳ ಧೋರಣೆಯನ್ನು ಖಂಡಿಸಿ, ಜಿಲ್ಲಾ ಜೆಡಿಎಸ್ ಘಟಕದ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ನಗರದ ಜೆಡಿಎಸ್ ಕಚೇರಿಯಿಂದ ಬಿಜಿಎಸ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಮುಖಂಡರು ಮತ್ತು ಕಾರ್ಯಕರ್ತರು, ಕಾಂಗ್ರೆಸ್ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಿಜಿಎಸ್ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸುವ ಮೂಲಕ ಕಾಂಗ್ರೆಸ್‌ನ ಮಹಿಳಾ ವಿರೋಧಿ ನೀತಿಯನ್ನು ತೀವ್ರವಾಗಿ ಖಂಡಿಸಲಾಯಿತು. ಜಿಲ್ಲಾ ಜೆಡಿಎಸ್ ಅಧ್ಯಕ್ಷ ಹೆಚ್. ಸಿಂಗಪ್ಪ ಮಾತನಾಡಿ, “ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವ ಐತಿಹಾಸಿಕ ಮಸೂದೆ ಮಂಡಿಸಿದರೆ, ಕಾಂಗ್ರೆಸ್ ಅದನ್ನು ತಿರಸ್ಕರಿಸುತ್ತಿದೆ. ಮಹಿಳೆಯರನ್ನು ಕೇವಲ ಮತಬ್ಯಾಂಕ್ ಆಗಿ ಬಳಸಿಕೊಳ್ಳುವುದು ಕಾಂಗ್ರೆಸ್ ಸಂಸ್ಕೃತಿ,” ಎಂದು ಟೀಕಿಸಿದರು. ತುರುವೇಕೆರೆ ಶಾಸಕ ಎಂ.ಟಿ. ಕೃಷ್ಣಪ್ಪ ಮಾತನಾಡಿ,  “ಗ್ಯಾರಂಟಿಗಳ ಆಮಿಷವೊಡ್ಡಿ ಮಹಿಳೆಯರ ಹಾದಿ ತಪ್ಪಿಸಬಹುದು ಎಂದು ಕಾಂಗ್ರೆಸ್ ನಾಯಕರು ಭಾವಿಸಿದ್ದಾರೆ. ಆದರೆ ಮಹಿಳೆಯರು ಜಾಗೃತರಾಗಿದ್ದಾರೆ,…

Read More

ಗುಬ್ಬಿ : ಪಟ್ಟಣದ ಸಮೀಪದ ಎಂ.ಹೆಚ್.ಪಟ್ಟಣ ಗೇಟ್ ಬಳಿ ತಾಂತ್ರಿಕ ದೋಷದಿಂದ ಆಕ್ಸಲ್ ತುಂಡಾಗಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದ್ದು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿ ದೊಡ್ಡ ಅಪಾಯದಿಂದ ಪಾರದ ಘಟನೆ ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ತಿಪಟೂರು ಡಿಪೋದಿಂದ ಪ್ರಯಾಣಿಸುತ್ತಿದ್ದ ಸರ್ಕಾರಿ ಬಸ್‌ ನ ಅಕ್ಸೆಲ್ ಭಾಗದಲ್ಲಿ ತಾಂತ್ರಿಕ ದೋಷ ಉಂಟಾಗಿ, ಬಸ್ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಗೆ ಪಲ್ಟಿಯಾಗಿದೆ. ತಕ್ಷಣವೇ ಸ್ಥಳೀಯರು ಸ್ಪಂದಿಸಿ ಪ್ರಯಾಣಿಕರ ರಕ್ಷಣಾ ಕಾರ್ಯಾಚರಣೆಗೆ ಮುಂದಾದರು. ಮಾಹಿತಿ ತಿಳಿದ ಗುಬ್ಬಿ ಪೊಲೀಸರು ಕೂಡಲೇ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂಬುದೇ ನಿಟ್ಟುಸಿರು ಬಿಡುವ ಸಂಗತಿ. ಗಾಯಗೊಂಡ ಪ್ರಯಾಣಿಕರಿಗೆ ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅಪಘಾತದ ಪರಿಣಾಮವಾಗಿ ಕೆಲಕಾಲ ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾದರೂ, ನಂತರ ಪೊಲೀಸರು ಕ್ರಮ ಕೈಗೊಂಡು ಸಂಚಾರವನ್ನು ಸುಗಮಗೊಳಿಸಿದರು. ಈ ಘಟನೆ ಹಿನ್ನೆಲೆಯಲ್ಲಿ ವಾಹನಗಳ ನಿರ್ವಹಣೆ ಮತ್ತು ತಾಂತ್ರಿಕ ಪರಿಶೀಲನೆ…

Read More

ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆಯುತ್ತಿದ್ದ ಜಮೀನಿನ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಳ್ಳಕೆರೆ ತಾಲೂಕಿನ ಗುಂತಕೊಲಮ್ಮನಹಳ್ಳಿ ಗ್ರಾಮದ ಪಾಲಯ್ಯ ಜಿ (58) ಬಂಧಿತ ಆರೋಪಿ. ಈತ ತನ್ನ ಜಮೀನಿನಲ್ಲಿ ಗುಟ್ಟಾಗಿ ಗಾಂಜಾ ಗಿಡಗಳನ್ನು ಬೆಳೆಸುತ್ತಿದ್ದನು. ಖಚಿತ ಮಾಹಿತಿ ಮೆರೆಗೆ ನಾಯಕನಹಟ್ಟಿ ಪೊಲೀಸರು ಜಮೀನಿನ ಮೇಲೆ ದಾಳಿ ನಡೆಸಿದ್ದಾರೆ. ಪೊಲೀಸರು ನಡೆಸಿದ ಈ ಕಾರ್ಯಾಚರಣೆಯಲ್ಲಿ ಸುಮಾರು 18 ಲಕ್ಷ ರೂಪಾಯಿ ಮೌಲ್ಯದ 791 ಗಾಂಜಾ ಗಿಡಗಳನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟು 187 ಕೆ.ಜಿ. ತೂಕದ ಗಾಂಜಾ ಸೊಪ್ಪನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಭಂಡಾರು ಹಾಗೂ ಚಳ್ಳಕೆರೆ ಉಪ ಡಿವೈಎಸ್ಪಿ ಸತ್ಯನಾರಾಯಣ ರಾವ್ ಅವರ ಮಾರ್ಗದರ್ಶನದಲ್ಲಿ ಈ ದಾಳಿ ನಡೆದಿದೆ. ತಳಕು ಪೊಲೀಸ್ ವೃತ್ತ ನಿರೀಕ್ಷಕ ಹನುಮಂತಪ್ಪ ಎಂ. ಶಿರೇಹಳ್ಳಿ ಹಾಗೂ ನಾಯಕನಹಟ್ಟಿ ಪೊಲೀಸ್ ಪಿಎಸ್‌ಐ ಜಿ. ಪಾಂಡುರಂಗಪ್ಪ ನೇತೃತ್ವದ ತಂಡ ಈ ಯಶಸ್ವಿ ಕಾರ್ಯಾಚರಣೆ ನಡೆಸಿದೆ. ದಾಳಿಯ…

Read More

ಬೀದರ್: ರಾಜ್ಯದಲ್ಲಿ ಸೂರ್ಯನ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬಿಸಿಲಿನ ತಾಪಕ್ಕೆ ಯುವಕನೊಬ್ಬ ಬಲಿಯಾಗಿರುವ ಘಟನೆ ಬೀದರ್ ಜಿಲ್ಲೆಯ ಕಮಲನಗರ ಪಟ್ಟಣದಲ್ಲಿ ನಡೆದಿದೆ. ಉತ್ತರ ಪ್ರದೇಶ ಮೂಲದ ಮೊಹ್ಮದ್ ಸಮೀರ್ ಅಹ್ಮದ್ (20) ಮೃತಪಟ್ಟ ದುರ್ದೈವಿ. ಸಮೀರ್ ಅಹ್ಮದ್ ಪಟ್ಟಣದ ಡಿಗ್ಗಿ ರಸ್ತೆ ಬಳಿ ತರಕಾರಿ ತರಲು ಹೊರಗಡೆ ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ. ತರಕಾರಿ ತರಲು ಹೋಗಿದ್ದಾಗ ಅತಿಯಾದ ಬಿಸಿಲಿನಿಂದಾಗಿ ಸಮೀರ್‌ಗೆ ತಲೆತಿರುಗಿದಂತಾಗಿದೆ. ಕೂಡಲೇ ಆತ ಸಮೀಪದಲ್ಲಿದ್ದ ಮೆಕಾನಿಕ್ ಅಂಗಡಿಯೊಂದಕ್ಕೆ ತೆರಳಿ ನೀರು ಕುಡಿದು ಸ್ವಲ್ಪ ಸಮಯ ವಿಶ್ರಾಂತಿ ಪಡೆದಿದ್ದಾನೆ. ವಿಶ್ರಾಂತಿಯ ನಂತರ ಮರಳಿ ಮನೆಗೆ ಹೋಗುತ್ತಿದ್ದಾಗ, ಡಿಗ್ಗಿ ಗ್ರಾಮದ ರಸ್ತೆ ಬಳಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾನೆ. ತಕ್ಷಣವೇ ಆತ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. “ನನ್ನ ಮಗ ಅತಿಯಾದ ಬಿಸಿಲಿನ ಝಳ ತಾಳಲಾರದೆ ಸಾವನ್ನಪ್ಪಿದ್ದಾನೆ” ಎಂದು ಮೃತನ ತಂದೆ ಲಯಿಕ್ ಅಹ್ಮದ್ ಗೋಳಾಡಿದ್ದಾರೆ. ಮಗನ ಸಾವಿಗೆ ಬಿಸಿಲೇ ಕಾರಣ ಎಂದು ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಸ್ಥಳಕ್ಕೆ…

Read More