Author: admin

ತುಮಕೂರು:  ತಾಲೂಕು ವ್ಯಾಪ್ತಿಯಲ್ಲಿರುವ  ಮೀಸಲು ಅರಣ್ಯ ಪ್ರದೇಶ ನಾಮದಚಿಲುಮೆಯಲ್ಲಿ ಪೂರ್ವನುಮಾತಿಯಿಲ್ಲದೇ  ಚಿತ್ರೀಕರಣ ನಡೆಸಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು, ನಟಿ ರಕ್ಷಿತಾ ಪ್ರೇಮ್ ಅವರ ಸಹೋದರನ ಸಿನಿಮಾದ ಶೂಟಿಂಗ್ ಸ್ಥಗಿತಗೊಳಿಸಿದ್ದಾರೆ. ಇನ್ನೂ ಹೆಸರಿಡದ ಸಿನಿಮಾದ ಶೂಟಿಂಗ್ ಕಳೆದ ಐದು ದಿನಗಳಿಂದ ನಾಮದಚಿಲುಮೆಯಲ್ಲಿ ಸಾಗಿತ್ತು. ನಟಿ ರಕ್ಷಿತಾ ಪ್ರೇಮ್ ಸಹೋದರ ರಾಣಾ ಅವರು ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಹೊಸ ಸಿನಿಮಾದ ಚಿತ್ರೀಕರಣ ಅನುಮತಿ ಇಲ್ಲದೆ ನಾಮದಚಿಲುಮೆಯಲ್ಲಿ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಅರಣ್ಯ ಅಧಿಕಾರಿಗಳು ಶೂಟಿಂಗ್ ನಿಲ್ಲಿಸುವ ಕ್ರಮ ತೆಗೆದುಕೊಂಡಿದ್ದಾರೆ. ಚಿತ್ರೀಕರಣ ನಡೆಯುತ್ತಿರೋ  ಮಾಹಿತಿ ಪಡೆದ ಅರಣ್ಯ ಇಲಾಖೆ ಎಸಿಎಫ್​ ಪವಿತ್ರಾ ನೇತೃತ್ವದ ಸಿಬ್ಬಂದಿ ಚಿತ್ರೀಕರಣ ನಡೆಯುತ್ತಿದ್ದ ಸ್ಥಳಕ್ಕೆ ತೆರಳಿ ಬಂದ್ ಮಾಡಿಸಿ, ಶೂಟಿಂಗ್‌ ಗೆ ಬಳಸಿದ್ದ ಕೆಲ ವಸ್ತುಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಕಳೆದ 5 ದಿನದಿಂದ ನಾಮದಚಿಲುಮೆಯಲ್ಲಿ ಶೂಟಿಂಗ್ ನಡೆಯುತ್ತಿತ್ತು. ನಟಿ ರಕ್ಷಿತಾ ಸಹೋದರ ರಾಣಾ, ಪ್ರಿಯಾಂಕಾ ಈ ಸಿನಿಮಾದಲ್ಲಿ ನಟಿಸುತ್ತಿದ್ದರು. ಸುಮಾರು 70–100 ಜನ ಈ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಅರಣ್ಯ ಇಲಾಖೆ ದಾಳಿ…

Read More

ತುಮಕೂರು:  ಜಿಲ್ಲೆಯಲ್ಲಿ ಇಂದು ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ–1ರ ರಾಜ್ಯಶಾಸ್ತ್ರ ವಿಷಯದಲ್ಲಿ 630 ಹಾಗೂ ಸಂಖ್ಯಾಶಾಸ್ತ್ರ ವಿಷಯದಲ್ಲಿ 14 ವಿದ್ಯಾರ್ಥಿಗಳು ಸೇರಿ ಒಟ್ಟು 644 ವಿದ್ಯಾರ್ಥಿಗಳು ಗೈರು ಹಾಜರಿದ್ದಾರೆ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕ ಬಾಲಗುರುಮೂರ್ತಿ ತಿಳಿಸಿದ್ದಾರೆ. ರಾಜ್ಯ ಶಾಸ್ತ್ರ ವಿಷಯಕ್ಕೆ ಒಟ್ಟು 5,465 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ 4,835 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅದೇ ರೀತಿ ಸಂಖ್ಯಾಶಾಸ್ತ್ರ ವಿಷಯಕ್ಕೆ ಒಟ್ಟು 926 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ 912 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೀದರ್: ಭಾಡಸಾಂಗವಿ ಗ್ರಾಮದ ಸಂಗಮ–ಶಿವಣಿ ರಸ್ತೆಯ  ಬಳಿ ಅನಧಿಕೃತವಾಗಿ ಸಾರಾಯಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಭಾಲ್ಕಿ ಗ್ರಾಮೀಣ ವೃತ್ತ ಪೊಲೀಸರು ದಾಳಿ ಮಾಡಿ 6,885 ರೂ. ಬೆಲೆ ಬಾಳುವ ಅಕ್ರಮ ಮದ್ಯವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ್ ಗುಂಟಿ ಅವರ ನಿರ್ದೇಶನದಂತೆ ಭಾಲ್ಕಿ ಗ್ರಾಮೀಣ ವೃತ್ತದ ಸಿ.ಪಿ.ಐ  ಹಣಮರಡ್ಡಿ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ 6,885 ರೂಪಾಯಿ ಬೆಲೆ ಬಾಳುವ ವಿಸ್ಕಿ ಬಾಟಲ್/ಪೌಚ್ ಗಳನ್ನು ಜಪ್ತಿ ಮಾಡಿಕೊಂಡು ಆರೋಪಿತರ ವಿರುದ್ಧ ಕಾನೂನಿನ ರೀತಿಯ ಕ್ರಮಕೈಕೊಳ್ಳಲಾಗಿದೆ. ಅಕ್ರಮ ಸರಾಯಿ ಮಾರಾಟದ ಮೇಲೆ ದಾಳಿಯಲ್ಲಿ ಶ್ರಮಿಸಿದ ಭಾಲ್ಕಿ ಗ್ರಾಮೀಣ ವೃತ್ತದ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯಕ್ಕೆ ಪ್ರದೀಪ್ ಗುಂಟಿ ಅವರು  ಶ್ಲಾಘಿಸಿದ್ದಾರೆ. ವರದಿ:  ಅರವಿಂದ ಮಲ್ಲಿಗೆ,  ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಔರಾದ್:  ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ಬೀದರ್ ಜಿಲ್ಲೆಯ ಔರಾದ ಪಟ್ಟಣದ ಅಲೆಮಾರಿ ಬುಡಕಟ್ಟು ಜನಾಂಗದ ಕಾಲೋನಿಗೆ ಭೇಟಿ ನೀಡಿದರು. ಜನರ ಕುಂದುಕೊರತೆ ಆಲಿಸಿದ ಅವರು, ಇದೇ ವೇಳೆ  ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಗೈರಾಗಿರುವುದನ್ನು ಕಂಡು, ಅಧಿಕಾರಿಗಳ ವಿರುದ್ಧ ಗರಂ ಆದರು. “ಅಲೆಮಾರಿ ಬುಡಕಟ್ಟು ಜನಾಂಗದ ಕುಟುಂಬಗಳಿಗೆ ಸೈಟ್ ಮತ್ತು ಮನೆ ನೀಡಲಿಕ್ಕೆ ಇನ್ನೆಷ್ಟು ದಿನಗಳು ಬೇಕು?” ಅಂತಾ ಅಧಿಕಾರಿಗಳನ್ನು ತರಾಟೆಗೆತ್ತಿಕೊಂಡರು. ವರದಿ:  ಅರವಿಂದ ಮಲ್ಲಿಗೆ,  ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಚೆನ್ನೈ: ಇಂಡಿಯಾವನ್ನು ‘ಹಿಂದಿಯಾ’ವನ್ನಾಗಿ ಮಾಡಲು ನಾವು ಅವಕಾಶ ನೀಡುವುದಿಲ್ಲ ಎಂದು ನಟ ಹಾಗೂ ಮಕ್ಕಳ್ ನೀಧಿ ಮೈಯಂ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಕಮಲ್ ಹಾಸನ್ ಹೇಳಿದ್ದಾರೆ. ತ್ರಿಭಾಷಾ ಸೂತ್ರ ವಿವಾದ ಮತ್ತು ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ವಿಚಾರವಾಗಿ, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಕರೆದಿದ್ದ ಸರ್ವಪಕ್ಷಗಳ ಸಭೆಯಲ್ಲಿ ಕಮಲ್ ಭಾಗವಹಿಸಿದ ಬಳಿಕ ಮಾತನಾಡಿದ ಅವರು, ಕೇಂದ್ರವು ಎಲ್ಲಾ ರಾಜ್ಯಗಳು ಹಿಂದಿ ಮಾತನಾಡುವಂತೆ ಒತ್ತಾಯಿಸುತ್ತಿದೆ. ಅಲ್ಲದೇ ತನ್ನಿಷ್ಟದ ಪ್ರಕಾರದ ಬಹುಮತದೊಂದಿಗೆ ಚುನಾವಣೆಗಳನ್ನು ಗೆಲ್ಲಲು ಪ್ರಯತ್ನಿಸುತ್ತಿದೆ ಎಂದು ಅವರು ಹೇಳಿದರು. ನಮ್ಮ ಕನಸು ಭಾರತವಾಗಿದ್ದರೆ, ಅವರದ್ದು ‘ಹಿಂದಿಯಾ’ ಆಗಿದೆ. ಕೇಂದ್ರ ಸರ್ಕಾರ ಇಂಡಿಯಾವನ್ನು ‘ಹಿಂದಿಯಾ’ವನ್ನಾಗಿ ಪರಿವರ್ತಿಸಲು ಬಯಸಿದೆ ಎಂದು ಆರೋಪಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಯಾದಗಿರಿ: ಡಿ.ಕೆ.ಶಿವಕುಮಾರ್ಗೆ ಮುಖ್ಯಮಂತ್ರಿ ಆಗುವ ಯೋಗವಿದೆ ಎಂದು ನೊಣವಿನಕೆರೆ ಅಜ್ಜಯ್ಯ ಸ್ವಾಮೀಜಿ ಹೇಳಿಕೆ ನೀಡಿದ್ದು, ಶ್ರೀಮಠದ ಆಶೀರ್ವಾದದಿಂದ ಡಿಕೆಶಿ ಸಿಎಂ ಆಗ್ತಾರೆ ಎಂದಿದ್ದಾರೆ. ಅಬ್ಬೆತುಮಕೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಇದು ರೈತರ, ವರ್ತಕರ ಹಾಗೂ ಮಠದ ಭಕ್ತರ ಆಸೆ. ಎಲ್ಲಾ ಜನರ ಸಂಕಲ್ಪದಿಂದ ಒಂದು ದಿನ ಸಿಎಂ ಆಗೇ ಆಗ್ತಾರೆ. ಯಾವ ದಿನ ಮುಖ್ಯಮಂತ್ರಿ ಆಗುತ್ತಾರೆ ಎಂಬುವುದನ್ನು ಹೇಳೋಕೆ ಆಗಲ್ಲ ಎಂದರು. ಅಬ್ಬೆತುಮಕೂರು ವಿಶ್ವಾರಾಧ್ಯರ ಗದ್ದುಗೆಗೂ ಬಂದಿದ್ದೇನೆ. ಅವರ ಆಶೀರ್ವಾದವೂ ಡಿಕೆಶಿಗೆ ಸಿಗಲಿ. ಆ ಪರಮಾತ್ಮನ ಆಶೀರ್ವಾದವೂ ಡಿಕೆಶಿಗೆ ಸಿಗಲಿ ಎಂದು ಸ್ವಾಮೀಜಿ ಪ್ರಾರ್ಥನೆ ಮಾಡಿದ್ದಾರೆ. ರಾಜ ಪ್ರತ್ಯಕ್ಷ್ಯ ದೇವರಾಗಲಿ ಎಂದು ಹಾರೈಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೆಂಗಳೂರು: ದಲಿತರ ಹಣ ದುರ್ಬಳಕೆ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಜನಾಂದೋಲನ ರೂಪಿಸಿದೆ. ಅದಕ್ಕೆ ಬಿಜೆಪಿಯ ದಲಿತಪರ ಚಿಂತನೆ, ಅವರ ಪರವಾದ ಯೋಜನೆಗಳೇ ಕಾರಣ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದ ಅಧ್ಯಕ್ಷ ವಿಜಯೇಂದ್ರ ಅವರು ಈ ವಿಷಯವನ್ನು ತೀಕ್ಷ್ಣವಾಗಿ ಪರಿಗಣಿಸಿದ್ದಾರೆ. ಇದರಿಂದ ಕಾಂಗ್ರೆಸ್ ಪಕ್ಷ ತಲೆ ಎತ್ತಿ ತಿರುಗಲಾರದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ವಿವರಿಸಿದರು. ಕೌನ್ಸಿಲರ್ ಚುನಾವಣೆ ಹತ್ತಿರದಲ್ಲಿರುವಂತೆ ಕಾಣುತ್ತಿದೆ. ಕೋರ್ಟಿನ ಆದೇಶದ ಕಾರಣ ಚುನಾವಣೆ ನಡೆಯುವ ಸಾಧ್ಯತೆ ಇದೆ. ನಾವು ಜನರನ್ನು ಭೇಟಿ ಮಾಡಿ ಮನೆಮನೆಗೆ ಹೋಗಿ ಅವರನ್ನು ಪ್ರೇರೇಪಿಸಬೇಕು. ಬಿಜೆಪಿ ಕಾರ್ಯಕರ್ತರನ್ನು ನಾವು ಉತ್ತೇಜಿಸಬೇಕು ಎಂದು ಮನವಿ ಮಾಡಿದರು. ಈ ಹೋರಾಟಕ್ಕೆ ಜಯ ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೆಂಗಳೂರು: ಬೊಕ್ಕಸ ಖಾಲಿಯಾದ ಕಾರಣ ದಲಿತರ ಉದ್ಧಾರಕ್ಕೆ ಮೀಸಲಾಗಿಟ್ಟಿದ್ದ ಹಣವನ್ನು ಗ್ಯಾರಂಟಿಗಳಿಗೆ ಬಳಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯವನ್ನು ಭಿಕ್ಷೆ ಬೇಡುವ ಸ್ಥಿತಿಗೆ ಸಿದ್ದರಾಮಯ್ಯನವರು ತಂದು ನಿಲ್ಲಿಸಿದ್ದಾರೆ ಎಂದು ಆರೋಪಿಸಿದರು. ಸಿದ್ದರಾಮಯ್ಯನವರು ಸಾಲದ ವಿಚಾರದಲ್ಲೂ ಚಾಂಪಿಯನ್ , ಎಲ್ಲ ನಿಗಮ, ತಾಂಡಾ ಅಭಿವೃದ್ಧಿ ನಿಗಮಗಳಿಗೆ ಕನಿಷ್ಠ ಮೊತ್ತವನ್ನು ಈ ಮನೆಹಾಳ ಕಾಂಗ್ರೆಸ್ ಸರಕಾರ ನೀಡಿದೆ ಎಂದು ಆರೋಪಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ರಾಯಚೂರು: ಎರಡು ಕುಟುಂಬಗಳ ಮಧ್ಯೆ ನಡೆದಿದ್ದ ಮಾರಾಮಾರಿಯನ್ನು ಬಿಡಿಸಲು ಹೋಗಿದ್ದ ವ್ಯಕ್ತಿಯನ್ನೇ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಮಾನ್ವಿ ತಾಲ್ಲೂಕಿನ ಮಲ್ಲಿಗೆ ಮಡುವು ಗ್ರಾಮದಲ್ಲಿ ನಡೆದಿದೆ. ಮಡುವು ಗ್ರಾಮದಲ್ಲಿ ಮಾರ್ಚ್​​ 3ರ ರಾತ್ರಿ ನಡೆದಿದ್ದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.  ಘಟನೆಗೆ ಸಂಬಂಧಿಸಿದಂತೆ ಸದ್ಯ ಮಾನ್ವಿ ಪೊಲೀಸರು ಉರುಕುಂದ, ವೇಂಕಟೇಶ್, ಗೋಕಯ್ಯ, ತಿಮ್ಮಪ್ಪ ಸೇರಿ ಏಳು ಜನರು ಬಂಧಿಸಿದ್ದಾರೆ. ದೂರು, ಪ್ರತಿ ದೂರು ದಾಖಲಾಗಿದೆ. ಗ್ರಾಮದ ಹೊರ ಭಾಗದಲ್ಲಿ ಹಳ್ಳದ ರಸ್ತೆ ಕಾಮಗಾರಿ ನಡೆಯುತ್ತಿದ್ದ ಕಾಮಗಾರಿಯ ಬೋರ್ಡ್​ಗೆ ಆರೋಪಿ ವಿರೇಶ್ ಟ್ರ್ಯಾಕ್ಟರ್​​​ ಗುದ್ದಿಸಿದ್ದ ಈ ವಿಚಾರವಾಗಿ ಕಾಮಗಾರಿ ಮಾಡಿಸುತ್ತಿದ್ದ ವೆಂಕೋಬಾ ಹಾಗೂ ವಿರೇಶ್ ನಡುವೆ  ಗಲಾಟೆ ನಡೆದಿದೆ. ವೆಂಕೋಬಾ ಹಾಗೂ ವಿರೇಶ್ ​ನ ಕುಟುಂಬಗಳ ನಡುವೆ ಈ ವಿಚಾರಕ್ಕೆ ಹೊಡೆದಾಟ ನಡೆದಿತ್ತು. ಈ ವೇಲೆ ಜಗಳ ಬಿಡಿಸಲು ಭೀಮಪ್ಪ ಹೋಗಿದ್ದು, ಈ ವೇಳೆ ಭೀಮಪ್ಪನನ್ನು ದೊಣ್ಣೆ, ರಾಡ್ ಗಳಿಂದ ಹೊಡೆದು ವಿರೇಶ್ ಹಾಗೂ ಆತನ ಕಡೆಯವರು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.…

Read More

ಚಿತ್ರದುರ್ಗ: ರಸ್ತೆ ಬದಿ ನಿಂತಿದ್ದ ಟ್ರಕ್‌ ಗೆ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ತಾಲೂಕಿನ ಸಿಬಾರ ಗ್ರಾಮದ ಬಳಿ ಇಂದು ಬೆಳ್ಳಂಬೆಳಗ್ಗೆ ನಡೆದಿದೆ. ಲಾರಿ ಚಾಲಕ ಶೇಖರ್ ಹಾಗೂ ಟ್ರಕ್‌ನ ಚಾಲಕ ಉತ್ತರ ಪ್ರದೇಶ ಅಲಿಗಡ ಜಲ್ಲೆಯ ಉದಲ ಇಲಿಯಾಸ್‌ ಪುರದ ನಿವಾಸಿ ಜುಬುರುದ್ದೀನ್ (52) ಮತ್ತು ಕ್ಲಿನರ್‌ ಮಹಮ್ಮದ್ ಖೈಫ್ ಮೃತಪಟ್ಟ ದುರ್ದೈವಿಗಳಾಗಿದ್ದಾರೆ. ಇಂದು ಬೆಳಿಗ್ಗೆ 5.30ರ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಟ್ರಕ್ ಬೆಂಗಳೂರಿನಿಂದ ಮುಂಬೈಗೆ ಹೋಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಿಂದಾಗಿ ಎರಡೂ ವಾಹನಗಳೂ ಜಖಂಗೊಂಡಿದ್ದು, ರಸ್ತೆ ಯಲ್ಲಿ ಕಲ್ಲಂಗಡಿ ಹಣ್ಣು ಬಿದ್ದು ಹರಡಿಕೊಂಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More