Subscribe to Updates
Get the latest creative news from FooBar about art, design and business.
- ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್, ಲೇಖನಿ ಸಾಮಗ್ರಿ ವಿತರಣೆ
- ರದ್ದಾದ ಪತ್ರಿಕೆಗಳ ಶೀರ್ಷಿಕೆಗಳ ಮರುಸ್ಥಾಪನೆಗೆ ದಂಡ ಪಾವತಿಸಲು ಜೂನ್ 30 ಕೊನೆಯ ದಿನ
- ಕುರುಗೋಡಿನಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ: ಜಾಗೃತಿ ಜಾಥಾ, ಉದ್ದಿಮೆಗಳ ಮೇಲೆ ದಾಳಿ: ಬಾಲಕನ ರಕ್ಷಣೆ
- ಬಳ್ಳಾರಿಯಲ್ಲಿ ಜೂನ್ 19ರಂದು ಪಿಎಂ: ವಿಬಿಆರ್ ವೈ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮ
- ವಿವಿಧೆಡೆ ಕಳ್ಳರ ಅಟ್ಟಹಾಸ: 25 ಲಕ್ಷದ ಚಿನ್ನ ಮತ್ತು ನಗದು ಕಳ್ಳತನ
- ತೋಟದಿಂದ ಮನೆಗೆ ಬರುತ್ತಿದ್ದ ವೃದ್ದೆಯ ಬರ್ಬರ ಹತ್ಯೆ: ಚಿನ್ನಕ್ಕಾಗಿ ವೃದ್ದೆಯ ಕೊಲೆ ಶಂಕೆ
- ಕೊರಟಗೆರೆ: ಕುಬೇರ ಗಣಪತಿ ಭವನಕ್ಕೆ 5 ಲಕ್ಷ ಧನ ಸಹಾಯ
- ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ
Author: admin
ತುಮಕೂರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ತುಮಕೂರು ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ತೆರೆದಿರುವ ರಾಗಿ ಖರೀದಿ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು. ನಂತರ ಮಾತನಾಡಿದ ಅವರು, ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಗಾಗಿ ಪ್ರಾರಂಭಿಸಿರುವ ನೋಂದಣಿ ಕೇಂದ್ರದಲ್ಲಿ ನೋಂದಣಿಗಾಗಿ ಬಿಸಿಲಿನಲ್ಲಿಯೇ ಸಾಲುಗಟ್ಟಿ ನಿಂತಿದ್ದ ರೈತರಿಗೆ ಕೂಡಲೇ ನೆರಳಿನ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಬೇಕೆಂದು ಸ್ಥಳದಲ್ಲಿಯೇ ಕೃಷಿ ಉತ್ಪನ್ನ ಮಾರುಕಟ್ಟೆ ಉಪನಿರ್ದೇಶಕ ರಾಜಣ್ಣ ಹಾಗೂ ಖರೀದಿ ಅಧಿಕಾರಿ ರುದ್ರಪ್ಪ ಅವರಿಗೆ ಸೂಚನೆ ನೀಡಿದರು. ರಾಗಿ ಖರೀದಿಗಾಗಿ ತೆರೆದಿರುವ ನೋಂದಣಿ ಕೇಂದ್ರದಲ್ಲಿ ನೋಂದಣಿಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಆಗಮಿಸುತ್ತಿರುವುದರಿಂದ ಖರೀದಿ ಪ್ರಕ್ರಿಯೆಯನ್ನು ವ್ಯವಸ್ಥಿತವಾಗಿ ನಿರ್ವಹಿಸುವ ನಿಟ್ಟಿನಲ್ಲಿ ಹೆಚ್ಚುವರಿ ಅಧಿಕಾರಿಗಳನ್ನು ನಿಯೋಜಿಸಬೇಕು. ರೈತರನ್ನು ಕಾಯಿಸದೆ ನೋಂದಣಿ ಕಾರ್ಯವನ್ನು ಚುರುಕುಗೊಳಿಸಬೇಕು. ಸರ್ಕಾರ ನಿಗಧಿಪಡಿಸಿದ ಮಾನದಂಡಗಳನ್ವಯ ರಾಗಿಯನ್ನು ಖರೀದಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಂಟೇಸ್ವಾಮಿ ಮಾತನಾಡಿ, ಸರ್ಕಾರವು ಕನಿಷ್ಠ ಬೆಂಬಲಬೆಲೆ ಯೋಜನೆಯಡಿ ಪ್ರತಿ…
ತುಮಕೂರು : ಜಿಲ್ಲೆಯಲ್ಲಿ ಏಪ್ರಿಲ್ 7, 8ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ನಡೆಯಲಿದ್ದು, ಕ್ರೀಡಾಕೂಟ ನಡೆಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ ನೀಡಿದರು. ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲ ನೌಕರರು ಕ್ರೀಡಾಕೂಟದಲ್ಲಿ ತಪ್ಪದೆ ಭಾಗವಹಿಸಬೇಕು. ಕ್ರೀಡಾಕೂಟ ಜರುಗಲಿರುವ 2 ದಿನಗಳಂದು ನೌಕರರಿಗೆ ವಸತಿ, ಊಟದ ವ್ಯವಸ್ಥೆ ಮಾಡಬೇಕು ಎಂದು ನಿರ್ದೇಶನ ನೀಡಿದರು. ಮುನ್ನೆಚ್ಚರಿಕಾ ಕ್ರಮವಾಗಿ ತುರ್ತು ಚಿಕಿತ್ಸಾ ವಾಹನ, ಪ್ರಥಮ ಚಿಕಿತ್ಸಾ ಘಟಕ, ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಸೂಚನೆ ನೀಡಿದರು. ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎನ್. ನರಸಿಂಹರಾಜು ಮಾತನಾಡಿ, ಕ್ರೀಡಾಕೂಟದಲ್ಲಿ ಭಾಗವಹಿಸಲಿಚ್ಛಿಸುವವರು ತಮ್ಮ ಹೆಸರನ್ನು ಆನ್ ಲೈನ್ ಮುಖಾಂತರ ನೋಂದಣಿ ಮಾಡಿಕೊಳ್ಳಬೇಕು. ಕ್ರೀಡಾಕೂಟಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲು ಕ್ರಮವಹಿಸಲಾಗುತ್ತಿದೆ ಎಂದು ತಿಳಿಸಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಡಾ.ರಮೇಶ್, ಜಿಲ್ಲಾ ಆರೋಗ್ಯ…
ತುಮಕೂರು : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿ ಸೇರಿದಂತೆ 2023–24ನೇ ಸಾಲಿನ ಮೆಟ್ರಿಕ್ ನಂತರದ ಕೆಲವು ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ–1ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಸೌಲಭ್ಯ ಕಲ್ಪಿಸಲು ಅರ್ಹರಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆಸಕ್ತ ವಿದ್ಯಾರ್ಥಿಗಳು ಆನ್ ಲೈನ್ https://ssp.postmatric.karnataka.gov.in ಮೂಲಕ ಮಾರ್ಚ್ 15ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ https://bcwd.karnataka.gov.in ಅಥವಾ ಸಹಾಯವಾಣಿ ಸಂಖ್ಯೆ: 8050770005, ದೂ.ವಾ.ಸಂ.1902ನ್ನು ಸಂಪರ್ಕಿಸಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಸೋನಿಯಾ ವರ್ಣೇಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು : ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪರವಾನಗಿ ಪಡೆದು ಕಟ್ಟಡ ನಿರ್ಮಿಸುತ್ತಿರುವ ಸಾರ್ವಜನಿಕರು ಮಳೆ ನೀರು ಕೊಯ್ಲ(Rain water harvesting structure)ನ್ನು ನಿರ್ಮಿಸಿಕೊಳ್ಳಲು ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ಸೂಚಿಸಿದ್ದಾರೆ. ಎಲ್ಲಾ ವಸತಿ, ವಾಣಿಜ್ಯ ಹಾಗೂ ಇತರೆ ಕಟ್ಟಡಗಳಿಗೆ ಸಂಬಂಧಿಸಿದಂತೆ 100 ಚದರ ಮೀಟರ್ ಅಥವಾ ಹೆಚ್ಚು ಇರುವ ವಿಸ್ತೀರ್ಣದ ಕಟ್ಟಡಗಳಿಗೆ ಮಳೆ ನೀರು ಕೊಯ್ಲನ್ನು ನಿರ್ಮಿಸಿಕೊಳ್ಳಬೇಕು. ಈ ಕುರಿತು ಪಾಲಿಕೆ ವತಿಯಿಂದ ಸಂಬಂಧಪಟ್ಟ ಅಧಿಕಾರಿ/ಸಿಬ್ಬಂದಿಗಳು ಸ್ಥಳ ಪರಿಶೀಲನೆ ಮಾಡಲಿದ್ದು, ತಪ್ಪಿದಲ್ಲಿ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಪ್ರತಿ ದಿನ ವಿವಿಧ ಕೆಲಸಗಳ ನಿಮಿತ್ತ ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡುವ ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಂತೆ ಅಧಿಕಾರಿ/ಸಿಬ್ಬಂದಿಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯ ವಿವಿಧ ಶಾಖೆಗಳಿಗೆ ಕಚೇರಿ ವೇಳೆಯಲ್ಲಿ ಸೋಮವಾರ ಬೆಳಿಗ್ಗೆ ಭೇಟಿ ನೀಡಿ ಅಧಿಕಾರಿ/ಸಿಬ್ಬಂದಿಗಳ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿದ ಅವರು, ಸಮಸ್ಯೆಗಳನ್ನು ಹೊತ್ತು ಬರುವ ಸಾರ್ವಜನಿಕರನ್ನು ಸಮಾಧಾನದಿಂದ ಮಾತನಾಡಿಸಿ ಸ್ಪಂದಿಸಬೇಕು. ತಕ್ಷಣವೇ ಪರಿಹಾರ ಕೊಡಿಸಲು ಸಾಧ್ಯವಾಗದಿದ್ದ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ಕ್ರಮವಹಿಸಬೇಕೆಂದು ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನೌಕರಿ ಮಾಡುವ ಅವಕಾಶ ಎಲ್ಲರಿಗೂ ದೊರೆಯುವುದಿಲ್ಲ. ಜನರ ಸೇವೆ ಮಾಡುವ ಅವಕಾಶವನ್ನು ಪ್ರಾಮಾಣಿಕವಾಗಿ ನಿರ್ವಹಿಸಬೇಕು. ಸಿಬ್ಬಂದಿಗಳು ಸಕಾಲದಲ್ಲಿ ಸಾರ್ವಜನಿಕರ ಕೆಲಸ ಮಾಡಿಕೊಡದೇ ಹೋದರೆ ಅದರ ಪರಿಣಾಮ ಜಿಲ್ಲಾಡಳಿತದ ಮೇಲೆ ಬೀರುತ್ತದೆ. ಈ ನಿಟ್ಟಿನಲ್ಲಿ ದೂರದ ಊರಿನಿಂದ ಬರುವ ರೈತರು/ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣವೇ ಸ್ಪಂದಿಸುವ ಗುಣ ಬೆಳೆಸಿಕೊಳ್ಳಬೇಕೆಂದು ಸಿಬ್ಬಂದಿಗಳಿಗೆ ನಿರ್ದೇಶಿಸಿದರು. ಹಳೆಯ ಕಡತಗಳನ್ನು ಅಭಿಲೇಖಾಲಯಕ್ಕೆ ನೀಡಲು ಸೂಚನೆ : ನಂತರ ಮಾತನಾಡಿದ ಅವರು, ಕಳೆದ ವಾರ ಕಚೇರಿಯ ವಿವಿಧ ಶಾಖೆಗಳಿಗೆ ಭೇಟಿ…
ತುಮಕೂರು: ಗೃಹ ಸಚಿವ ಪರಮೇಶ್ವರ್ ಅವರು ಪ್ರತಿನಿಧಿಸುವ ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಕೊರಟಗೆರೆ ಪಟ್ಟಣದಲ್ಲಿ ಕನ್ನಡ ಧ್ವಜ ಸ್ತಂಭ ತೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕರೆವೇ ಅಧ್ಯಕ್ಷ ನಾರಾಯಣಗೌಡ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಕೊರಟಗೆರೆ ಪಟ್ಟಣದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆ ವೇಳೆ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಭದ್ರತೆ ವ್ಯವಸ್ಥೆ ಮಾಡಲಾಗಿತ್ತು. ಓರ್ವ ಎಎಸ್ ಪಿ, ಇಬ್ಬರು ಡಿವೈಎಸ್ ಪಿ ನೇತೃತ್ವದಲ್ಲಿ ಪೊಲೀಸ್ ಭದ್ರತೆ ಮಾಡಲಾಗಿತ್ತು. 2022 ನವೆಂಬರ್ 2 ರಂದು ಕನ್ನಡ ಧ್ವಜ ಸ್ತಂಭವನ್ನ ನಿರ್ಮಿಸಲಾಗಿತ್ತು. ಕೊರಟಗೆರೆ ಪಟ್ಟಣ ಪಂಚಾಯ್ತಿಯಿಂದ ಅನುಮತಿ ಪಡೆಯದೇ ಕನ್ನಡ ಧ್ವಜ ನಿರ್ಮಾಣ ಮಾಡಲಾಗಿತ್ತು. ವಾಹನ ಸಂಚಾರಕ್ಕೆ ಅಡಚಣೆ ಆಗುತ್ತೆ ಎಂದು ಕನ್ನಡ ಧ್ವಜ ಸ್ತಂಭವನ್ನು ಫೆಬ್ರವರಿ 23 ರಂದು ತಡರಾತ್ರಿ ಕೊರಟಗೆರೆ ತಹಶೀಲ್ದಾರ್ ನೇತೃತ್ವದಲ್ಲಿ ಕಾರ್ಯಾರ್ಯಚರಣೆ ನಡೆಸಿ ತೆರವುಗೊಳಿಸಲಾಗಿತ್ತು. ತುಮಕೂರಿನಲ್ಲಿ ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಮಾತನಾಡಿ, ಕೊರಟಗೆರೆಯಲ್ಲಿ ಧ್ವಜಸ್ತಂಭ ತೆರವುಗೊಳಿಸಿ ಕನ್ನಡದ ಕುಲಕೋಟಿಗೆ…
ತುಮಕೂರು: 1965ರಿಂದ ಉಳುಮೆ ಮಾಡಿಕೊಂಡು ಬಂದಿದ್ದೇವೆ ಸ್ವಾಮಿ? ನಮ್ಮನ್ನು ಒಕ್ಕಲೆಬ್ಬಿಸುವ ಕೆಲಸ ಮಾಡುತ್ತಿದ್ದಾರೆ. ಅದರ ಬದಲು ಒಂದು ತೊಟ್ಟು ವಿಷ ಕೊಟ್ಟುಬಿಡಿ ನೆಮ್ಮದಿಯಿಂದ ಪ್ರಾಣ ಬಿಡುತ್ತೇವೆ ಎಂದು ಚಿಕ್ಕನಾಯಕನಹಳ್ಳಿ ತಾಲೂಕು ಹುಳಿಯಾರು ಹೋಬಳಿ ಹೊಯ್ಸಳಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಬಾರ ಪುರ ಗ್ರಾಮದ ಸುಮಾರು ನೂರಕ್ಕೂ ಹೆಚ್ಚು ದಲಿತ ಕುಟುಂಬಗಳು ಅಳಲು ತೋಡಿಕೊಂಡಿದ್ದಾರೆ. ನಮ್ಮ ತಾತ ಮುತ್ತಾತರ ಕಾಲದಿಂದಲೂ ನಾವು ಈ ಜಮೀನಿನಲ್ಲಿ ಉಳುಮೆ ಮಾಡಿಕೊಂಡು ಬಂದಿದ್ದೇವೆ. ಈ ಜಮೀನಿನಲ್ಲಿ ಸುಮಾರು 73 ಜನರಿಗೆ ಜಮೀನು ಮಂಜೂರು ಮಾಡಿ ಕೊಟ್ಟಿರುತ್ತಾರೆ. ಇಲ್ಲಿ ನಾವು ತೆಂಗು, ಅಡಿಕೆ, ರಾಗಿ ಮುಂತಾದ ಬೆಳೆಗಳನ್ನು ಮೊದಲಿನಿಂದಲೂ ಬೆಳೆದುಕೊಂಡು ಬಂದಿದ್ದೇವೆ, ಇದರ ಬಗ್ಗೆ ಸುಮಾರು 50 ವರ್ಷದಿಂದ ಆಡಳಿತ ನಡೆಸುತ್ತಿರುವ ಶಾಸಕರುಗಳಿಗೆ ಗಮನಕ್ಕೆ ತಂದರು, ಯಾವ ಪಕ್ಷದ ಶಾಸಕರೂ ನಮ್ಮ ಅಳಲನ್ನು ಕೇಳುತ್ತಾ ಇಲ್ಲ, ವೋಟು ಕೇಳೋದಕ್ಕೆ ಮಾತ್ರ ಬರ್ತಾರೆ, ಆದರೆ ನಮ್ಮ ಸಮಸ್ಯೆ ಬಗೆಹರಿಸುವ ಕೆಲಸ ಯಾವ ಪಕ್ಷದ ಜನಪ್ರತಿನಿಧಿಯೂ ಮಾಡುತ್ತಾ ಇಲ್ಲ ಎಂದು ಆಕ್ರೋಶ…
ಆಳಪ್ಪುಳ: ಗಂಟಲಲ್ಲಿ ಜೀವಂತ ಮೀನು ಸಿಲುಕಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದ್ದು, ಮೀನು ಹಿಡಿಯುತ್ತಿದ್ದ ವೇಳೆ ಈ ಘಟನೆ ಆಕಸ್ಮಿಕವಾಗಿ ನಡೆದಿದೆ ಎಂದು ತಿಳಿದು ಬಂದಿದೆ. ಪುತ್ತುಪ್ಪಳ್ಳಿ ನಿವಾಸಿ ಆದರ್ಶ್ ಅಲಿಯಾಸ್ ಉನ್ನಿ(25) ಮೃತಪಟ್ಟ ಯುವಕನಾಗಿದ್ದಾನೆ. ಭಾನುವಾರ ಸಂಜೆ ಸುಮಾರು 4:30ರ ವೇಳೆ ಈ ಘಟನೆ ನಡೆದಿದೆ. ಸ್ನೇಹಿತರೊಂದಿಗೆ ಭತ್ತದ ಗದ್ದೆಯಲ್ಲಿ ಮೀನು ಹಿಡಿಯಲು ಉನ್ನಿ ತೆರಳಿದ್ದು, ಈ ವೇಳೆ ಒಂದು ಮೀನನ್ನು ಹಿಡಿದು, ಬಾಯಲ್ಲಿ ಹಿಡಿದುಕೊಂಡು ಇನ್ನೊಂದು ಮೀನನ್ನು ಹಿಡಿಯಲು ಆತ ಯತ್ನಿಸಿದ್ದಾನೆ. ಈ ವೇಳೆ ಏಕಾಏಕಿ ಮೀನು ಗಂಟಲೊಳಗೆ ನುಗ್ಗಿದೆ. ಸ್ನೇಹಿತರು ಮೀನನ್ನು ಹೊರ ತೆಗೆಯಲು ಸಾಕಷ್ಟು ಪ್ರಯತ್ನ ಮಾಡಿದರೂ ಸಾಧ್ಯವಾಗಲಿಲ್ಲ, ಬಳಿಕ ತಕ್ಷಣವೇ ಓಚಿರಾದ ಖಾಸಗಿ ಆಸ್ಪತ್ರೆಗೆ ಆತನನ್ನು ಕರೆದೊಯ್ಯಲಾಯಿತು. ಆದರೆ, ಆದರ್ಶ್ ನನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಘಟನೆ ಸಂಬಂಧ ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ ಸೆಕ್ಷನ್ 194ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು…
2023 ಸೆಪ್ಟಂಬರ್ ತಿಂಗಳಿನಲ್ಲಿ ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟದ ಸಭೆಯಲ್ಲಿ ಕರ್ನಾಟಕ ರಾಜ್ಯದ ಎಲ್ಲಾ ಸಾರ್ವಜನಿಕ ವಿಶ್ವವಿದ್ಯಾಲಯಗಳ ಕುಲಪತಿಗಳ ನೇಮಕಾತಿಯನ್ನು ರಾಜ್ಯಪಾಲರ ಬದಲಿ ರಾಜ್ಯ ಸರ್ಕಾರವೇ ಇನ್ನು ಮುಂದೆ ಮಾಡುವ ನಿರ್ಧಾರ ಹಾಗೂ ನಂತರ ನಡೆದ ಸಚಿವ ಸಂಪುಟ ಸಭೆಯಲ್ಲಿ ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಕಾಯ್ದೆಗೆ ತಿದ್ದುಪಡಿಯನ್ನು ತಂದು ಮುಖ್ಯಮಂತ್ರಿಗಳನ್ನು ವಿಶ್ವವಿದ್ಯಾಲಯದ ಚಾನ್ಸಲರ್ ಆಗಿ ಮಾಡಿ, ಕುಲಪತಿಗಳ ನೇಮಕಾತಿಯನ್ನು ಇನ್ನು ಮುಂದೆ ಮುಖ್ಯಮಂತ್ರಿಗಳೇ ಮಾಡುವ ಅಧಿಕಾರ ನೀಡಿರುವ ನಿರ್ಧಾರವು ಅತ್ಯಂತ ಸ್ವಾಗತಾರ್ಹವಾಗಿದ್ದು, ಅನೇಕ ಪ್ರಾಧ್ಯಾಪಕರ, ಬುದ್ಧಿಜೀವಿಗಳ ಹಾಗೂ ಶಿಕ್ಷಣ ತಜ್ಞರ ಪ್ರಸಂಶೆಗೆ ಪಾತ್ರವಾಗಿತ್ತು. ಈ ಹಿಂದೆಯೂ ಸಹ ಕುಲಪತಿಗಳ ನೇಮಕಾತಿಯಲ್ಲಿ ಇರುವ ತೊಂದರೆಗಳನ್ನು ನಿವಾರಿಸಲು ಇಂತಹ ಕ್ರಮಗಳನ್ನು ತೆಗೆದುಕೊಳ್ಳಲು ಹಿಂದಿನ ಕಾಂಗ್ರೆಸ್ ಹಾಗೂ ಬಿಜೆಪಿ ಸರ್ಕಾರಗಳು ಸಹ ಆಲೋಚಿಸಿ, ಅನೇಕ ಬಾರಿ ಪ್ರಯತ್ನಿಸಿರುವುದು ನಮ್ಮಲ್ಲೆರಿಗೂ ತಿಳಿದ ವಿಷಯವಾಗಿರುತ್ತದೆ. ಈಗಿನ ಪದ್ಧತಿಯಾದ ʼಶೋಧನಾ ಸಮಿತಿʼಯಿಂದ ಶಿಪಾರಸ್ಸು ಮಾಡಿದ ಮೂರು ಪ್ರಾಧ್ಯಾಪಕರುಗಳ ಹೆಸರುಗಳನ್ನು ಸರ್ಕಾರದಿಂದ ರಾಜ್ಯಪಾಲರಿಗೆ ಕಳುಹಿಸಿ, ರಾಜ್ಯಪಾಲರು ಕೆಲವು ವಿಶ್ವವಿದ್ಯಾಲಯಗಳಲ್ಲಿ ಸರ್ಕಾರದೊಂದಿಗೆ…
ಸತ್ನಾ: ಮಾಲಿಕನನ್ನು ರಕ್ಷಿಸಲು ಹುಲಿಯೊಂದಿಗೆ ಹೋರಾಡಿದ ಸಾಕು ನಾಯಿಯೊಂದು ತನ್ನ ಪ್ರಾಣವನ್ನೇ ತ್ಯಾಗ ಮಾಡಿದೆ. ಮಧ್ಯಪ್ರದೇಶದ ಸತ್ನಾ ಜಿಲ್ಲೆಯಲ್ಲಿ ಫೆಬ್ರವರಿ 26ರಂದು ಬಾಂಧವಗಢ ಹುಲಿ ಅಭಯಾರಣ್ಯದ ಬಳಿ ಈ ಘಟನೆ ನಡೆದಿದೆ. ಶಿವಂ ಬಡ್ಗೈಯಾ ಎಂಬವರು ತಮ್ಮ ಸಾಕು ನಾಯಿ ಜರ್ಮನ್ ಶೆಫರ್ಡ್ನೊಂದಿಗೆ ಮನೆಯ ಹೊರಗೆ ಇದ್ದಾಗ, ಹತ್ತಿರದ ಕಾಡಿನಿಂದ ಬಂದ ಹುಲಿ ಶಿವಂ ಬಡ್ಗೈಯಾ ಮೇಲೆ ದಾಳಿ ಮಾಡಲು ಯತ್ನಿಸಿದೆ> ಈ ವೇಳೆ ಸಾಕು ನಾಯಿ ಮಾಲಿಕನಿಗೆ ಅಡ್ಡ ನಿಂತು ಹುಲಿ ಜೊತೆಗೆ ಹೋರಾಡಿದೆ. ಹುಲಿ ನಾಯಿಯನ್ನು ಕಚ್ಚಿ ಎಳೆದೊಯ್ದರೂ, ನಾಯಿ ಹುಲಿಯೊಂದಿಗೆ ತೀವ್ರವಾಗಿ ಹೋರಾಡಿದೆ. ಅಂತಿಮವಾಗಿ ನಾಯಿಯನ್ನು ಬಿಟ್ಟು ಹುಲಿ ಕಾಡಿಗೆ ಹೋಗಿತ್ತು. ತಕ್ಷಣವೇ ನಾಯಿಯನ್ನು ಪಶುವೈದ್ಯರ ಬಳಿಗೆ ಕರೆದೊಯ್ಯಲಾಯಿತು, ಆದರೆ ನಾಯಿ ವಿಪರೀತ ರಕ್ತಸ್ರಾವದಿಂದ ಸಾವನ್ನಪ್ಪಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4