Subscribe to Updates
Get the latest creative news from FooBar about art, design and business.
- ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ
- ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ
- ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
- ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ
- ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
- ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
- ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
Author: admin
ತುಮಕೂರು: ನೆನ್ನೆ ಜಿಲ್ಲೆಯ ಕುಣಿಗಲ್ ನ ದೊಡ್ಡಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದ್ದ ಯುವತಿಯ ಶವ ಇಂದು ಪತ್ತೆ ಆಗಿದೆ. ಸೊಬಗಾನಹಳ್ಳಿ ಗ್ರಾಮದ ಇಂಜಿನಿಯರಿಂಗ್ ಉದ್ಯೋಗಿಯಾಗಿದ್ದ ಯುವತಿಯ ದೇಹ ಇಂದು ಶವವಾಗಿ ಪತ್ತೆಯಾಗಿದ್ದು ಸ್ಕೂಬಾ ಡೈ ಮೂಲಕ ಈಶ್ವರ್ ಮಲ್ಪೆ ಪತ್ತೆ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಮುಳ್ಳು ತಂತಿಗೆ ಸಿಲುಕಿ ಕರಡಿ ಒದ್ದಾಡಿರೋ ಘಟನೆ ತುಮಕೂರು ಗ್ರಾಮಾಂತರದ ಮೈದಾಳದಲ್ಲಿ ನಡೆದಿದೆ. ರಾತ್ರಿ ಆಹಾರ ಹರಸಿ ತೋಟಕ್ಕೆ ಬಂದಿದ್ದ ಕರಡಿ, ಮುಳ್ಳು ತಂತಿ ಬೇಲಿಗೆ ಸಿಲುಕಿ ಒದ್ದಾದಿದೆ. ಈ ವೇಳೆ ಕರಡಿ ಅರಚಾಟ ಕೇಳಿ ಬೆಚ್ಚಿದ ಗ್ರಾಮಸ್ಥರು ಅರಣ್ಯಾ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ತುಮಕೂರು ವಲಯ ಅರಣ್ಯಾಧಿಕಾರಿಗಳು ಭೇಟಿ ನೀಡಿ ಕರಡಿ ರಕ್ಷಣೆ ಕಾರ್ಯಾಚರಣೆ ನಡೆಸಿದ್ದು, ಕರಡಿ ಅಪಾತದಿಂದ ಪಾರಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2024–25ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಸ್ನಾತಕ/ಸ್ನಾತಕೋತ್ತರ ಕೋರ್ಸುಗಳಾದ ಬಿ.ಎ., ಬಿ.ಕಾಂ., ಬಿ.ಬಿ.ಎ., ಬಿ.ಸಿ.ಎ., ಬಿ.ಎಲ್.ಐ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಬಿ.ಎಸ್ಸಿ(General & I.T) ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಸಿ.ಎ., ಎಂ.ಎಸ್. ಡಬ್ಲ್ಯೂ., ಎಂ.ಎಲ್.ಐ.ಎಸ್ಸಿ., ಎಂ.ಎಸ್ಸಿ. ಎಂ.ಬಿ.ಎ., ಪಿ.ಜಿ. ಸರ್ಟಿಫಿಕೇಟ್, ಡಿಪ್ಲೋಮಾ, ಸರ್ಟಿಫಿಕೇಟ್ ಪ್ರೋಗ್ರಾಮ್ಸ್ ಗಳಿಗೆ ಪ್ರವೇಶ ಪಡೆಯಲು ಮಾರ್ಚ್ 31 ಕಡೆಯ ದಿನವಾಗಿದೆ. ಪ್ರಥಮ ವರ್ಷದ ಪ್ರವೇಶಾತಿಗಾಗಿ ಬಿ.ಎ. ತರಗತಿಗೆ 8400 ರೂ., ಬಿ.ಕಾಂ.–8900 ರೂ., ಬಿ.ಸಿ.ಎ/ಬಿ.ಎಸ್ಸಿ.–23900 ರೂ., ಬಿ.ಬಿ.ಎ./ಬಿ.ಎಲ್.ಐ.ಎಸ್ಸಿ/ಎಂ.ಕಾಂ.–12400 ರೂ., ಬಿ.ಎಸ್. ಡಬ್ಲ್ಯೂ.–12900 ರೂ., ಎಂ.ಎ.–10600 ರೂ., ಎಂ.ಸಿ.ಜೆ.–16200,. ಎಂ.ಬಿ.ಎ.–29900, ಎಂ.ಎಸ್ಸಿ./ಎಂ.ಸಿ.ಎ.-29700, ಎಂ.ಎಸ್. ಡಬ್ಲ್ಯೂ-.-21300, ಎಂ.ಎಲ್.ಐ.ಎಸ್ಸಿ.–18150 ರೂ.ಗಳ ಶುಲ್ಕ ನಿಗದಿಪಡಿಸಲಾಗಿದೆ. ಪದವಿಪೂರ್ವ ಹಾಗೂ ಸ್ನಾತಕ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಮನವಿ ಮಾಡಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಪ್ರಾದೇಶಿಕ ನಿರ್ದೇಶಕರು, ಕರಾಮುವಿ ಪ್ರಾದೇಶಿಕ ಕೇಂದ್ರ ತುಮಕೂರು, ಟೂಡಾ…
ತುಮಕೂರು: ಬೆವಿಕಂ ವಾಣಿಜ್ಯ, ಕಾರ್ಯ ಮತ್ತು ಪಾಲನಾ ವಿಭಾಗ ವ್ಯಾಪ್ತಿಯಲ್ಲಿ ಗೋಪುರ ನಿರ್ಮಾಣ ಕಾರ್ಯ ಕೈಗೊಂಡಿರುವ ಹಿನ್ನೆಲೆಯಲ್ಲಿ ಮಾರ್ಚ್ 2 ಹಾಗೂ 9ರಂದು ವಿದ್ಯುತ್ ವ್ಯತ್ಯಯವಾಗಲಿದೆ. ಮೆಳೇಕೋಟೆ, ಬೆಳ್ಳಾವಿ, ಹೆಗ್ಗೆರೆ, ಮಲ್ಲಸಂದ್ರ, ಬಡ್ಡಿಹಳ್ಳಿ, ದೊಡ್ಡ ಸಾರಂಗಿ ಉಪಸ್ಥಾವರಗಳಿಗೆ ಒಳಪಡುವ ಗ್ರಾಮ/ನಗರ/ಕೈಗಾರಿಕಾ ಪ್ರದೇಶಗಳಲ್ಲಿ ಬೆಳಿಗ್ಗೆ 6 ರಿಂದ 8 ಗಂಟೆ ಹಾಗೂ ಸಂಜೆ 4 ರಿಂದ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಶಾಂತ್ ಕೂಡ್ಲಿಗಿ ಮನವಿ ಮಾಡಿದ್ದಾರೆ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ರೈತರು ಕೃಷಿ ಬಳಕೆಗಾಗಿ ಕೊರೆಸಿರುವ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ವಿಳಂಬ ಮಾಡಬಾರದೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಅಂತರ್ಜಲ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಬೇಸಿಗೆ ಕಾಲವಾಗಿರುವ ಹಿನ್ನೆಲೆಯಲ್ಲಿ ರೈತರ ಬೆಳೆಗಳಿಗೆ ನೀರಿನ ಅಭಾವದ ಕಾರಣ ತುರ್ತಾಗಿ ವಿದ್ಯುಚ್ಛಕ್ತಿಯನ್ನು ಪಡೆಯಲು ಅನುಕೂಲವಾಗುವ ದೃಷ್ಟಿಯಿಂದ, ನೋಂದಣಿ ಪ್ರಮಾಣ ಪತ್ರವನ್ನು ನೀಡುವ ವಿಧಾನವನ್ನು ಸರಳೀಕರಿಸಬೇಕು. ಜಿಲ್ಲಾ ಅಂತರ್ಜಲ ಕಚೇರಿಯಲ್ಲಿ ಅರ್ಜಿ ಶುಲ್ಕ ಮತ್ತು ದಂಡ ಪಾವತಿಸಿ ಸ್ವೀಕೃತಿ ಪತ್ರ ಪಡೆದು ಬೆಸ್ಕಾಂ ಕಚೇರಿಗೆ ಸಲ್ಲಿಸಿ ವಿದ್ಯುಚ್ಛಕ್ತಿ ಪಡೆಯಲು ಹಾಗೂ ತದನಂತರ ನೋಂದಣಿ ಪ್ರಮಾಣ ಪತ್ರ ಪಡೆದುಕೊಳ್ಳಲು ರೈತರಿಗೆ ಅನುವು ಮಾಡಿಕೊಡಬೇಕು ಎಂದು ತಾಕೀತು ಮಾಡಿದರು. ಜಿಲ್ಲೆಯಲ್ಲಿ ಕರ್ನಾಟಕ ಅಂತರ್ಜಲ (ಅಭಿವೃದ್ಧಿ ಮತ್ತು ನಿರ್ವಹಣೆ ವಿನಿಯಮನ) ಅಧಿನಿಯಮ–2012 ಮತ್ತು ನಿಯಮಾವಳಿ–2012ನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಅಂತರ್ಜಲ ಅತಿಬಳಕೆ ತಾಲ್ಲೂಕುಗಳೆಂದು ಅಧಿಸೂಚಿಸಲಾಗಿರುವ ಜಿಲ್ಲೆಯ ಚಿಕ್ಕನಾಯಕನಹಳ್ಳಿ, ತಿಪಟೂರು, ಕೊರಟಗೆರೆ, ಮಧುಗಿರಿ ಹಾಗೂ ತುಮಕೂರು ಸೇರಿದಂತೆ…
ತುಮಕೂರು: ಕೃಷಿ ಇಲಾಖೆ, ಕೃಷಿ ಪದವೀದರ ಅಧಿಕಾರಿಗಳ ಸಂಘದ ಸಹಯೋಗದಲ್ಲಿ ಮಂಗಳವಾರ ಶ್ರೀ ಸಿದ್ದಗಂಗಾ ಮಠದ ಕೃಷಿ ಮತ್ತು ಕೈಗಾರಿಕೆ ವಸ್ತು ಪ್ರದರ್ಶನ ಆವರಣದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಜಂಟಿ ಕೃಷಿ ನಿರ್ದೇಶಕರ ಕಚೇರಿ, ತುಮಕೂರು ಹಾಗೂ ಮಧುಗಿರಿಯ ಉಪ ಕೃಷಿ ನಿರ್ದೇಶಕರ ಕಚೇರಿ ಹಾಗೂ ಜಿಲ್ಲೆಯ ಎಲ್ಲ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ರೈತ ಸಂಪರ್ಕ ಕೇಂದ್ರಗಳ ಅಧಿಕಾರಿ ಮತ್ತು ಸಿಬ್ಬಂದಿ ಸೇರಿದಂತೆ ಕೃಷಿ ಪರಿಕರ ಸರಬರಾಜುದಾರರು ಹಾಗೂ ವಿತರಕರು ಈ ಶಿಬಿರದಲ್ಲಿ ಉತ್ಸಾಹದಿಂದ ಭಾಗವಹಿಸಿ ರಕ್ತದಾನ ಮಾಡಿದರು. ಶಿಬಿರದಲ್ಲಿ ರಕ್ತ ಸಂಗ್ರಹಣೆ ಮತ್ತು ವಿತರಣಾ ವಾಹನದ ಮೂಲಕ ಅಗತ್ಯ ಮಂದಿಗೆ ಪೂರೈಸಲು ರಕ್ತ ಸಂಗ್ರಹಿಸಲಾಯಿತು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆರೋಗ್ಯ ತಪಾಸಣೆ ನಡೆಸಲಾಯಿತು. ಕೃಷಿ ಇಲಾಖೆಯ ಸಾಮಾಜಿಕ ಜವಾಬ್ದಾರಿಯನ್ನು ಪರಿಗಣಿಸಿ, ಜಿಲ್ಲಾ ಆಸ್ಪತ್ರೆಯ ವತಿಯಿಂದ ಕೃಷಿ ಇಲಾಖೆಗೆ ಪ್ರಶಂಸನಾ ಪತ್ರವನ್ನು ವಿತರಿಸಲಾಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ತುಮಕೂರು : ಬೆಳಗಾವಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಖಂಡಿಸಿ ತುಮಕೂರಿನಲ್ಲಿ ಕೆ ಎಸ್ ಆರ್ ಟಿ ಸಿ ನಿವೃತ್ತ ಕ್ಷೇಮಾಭಿವೃದ್ಧಿ ಟ್ರಸ್ಟ್ ಹಾಗೂ ಕನ್ನಡಪರ, ದಲಿತ, ರೈತ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು. ತುಮಕೂರಿನ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣದಿಂದ ಜಿಲ್ಲಾಧಿಕಾರಿ ಕಚೇರಿಗೆ ಮೆರವಣಿಗೆ ನಡೆಸಲಾಯಿತು. ಎಂಇಎಸ್ ಸಂಘಟನೆ ನಿಷೇಧಿಸಬೇಕು ಎಂದು ಒತ್ತಾಯಿಸಲಾಯಿತು. ಎಂಇಎಸ್ ಪುಂಡರನ್ನ ಗಡಿಪಾರು ಮಾಡುವಂತೆ ಪ್ರತಿಭಟನಾಕಾರರು ಒತ್ತಾಯ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ವಿವಿಧ ಸಂಘಟನೆಗಳಿಂದ ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಎಂಜಿನಿಯರಿಂಗ್ ಉದ್ಯೋಗಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ದೊಡ್ಡಕೆರೆಯಲ್ಲಿ ನಡೆದಿದ್ದು, ಶೋಧ ಕಾರ್ಯಕ್ಕೆ ಕುಣಿಗಲ್ ಕಾಂಗ್ರೆಸ್ ಶಾಸಕ ಡಾ.ರಂಗನಾಥ್ ಸಹ ಅಗ್ನಿಶಾಮಕ ಸಿಬ್ಬಂದಿಗೆ ಸಾಥ್ ನೀಡಿದರು. ಖುದ್ದು ಅಗ್ನಿಶಾಮಕ ದಳದೊಂದಿಗೆ ಕೆರೆಗೆ ಇಳಿದ ಶಾಸಕ ರಂಗನಾಥ್ ಲೈಫ್ ಜಾಕೆಟ್ ಧರಿಸಿ ಯುವತಿಯ ಶವಕ್ಕಾಗಿ ಶೋಧ ನಡೆಸಿದರು. ಸುಮಾ, ಕಣ್ಮರೆಯಾಗಿರುವ ಎಂಜಿನಿಯರ ಆಗಿದ್ದಾರೆ. ಕುಣಿಗಲ್ ತಾಲ್ಲೂಕು ಸೊಬಗಾನಹಳ್ಳಿ ಗ್ರಾಮದ ನಿವಾಸಿ ಆಗಿದ್ದು ಬೆಂಗಳೂರಿನಲ್ಲಿ ಸಾಫ್ಟವೇರ್ ಕಂಪನಿಯಲ್ಲಿ ಕೆಲಸ ಮಾಡ್ತಿದ್ದರು. ನಿನ್ನೆ ಬೆಂಗಳೂರಿನಿಂದ ಗ್ರಾಮಕ್ಕೆ ವಾಪಸ್ ಬಂದಿರುವ ಸುಮ, ಕುಣಿಗಲ್ ದೊಡ್ಡಕೆರೆ ಬಳಿ ಸುಮಾಳ ಬ್ಯಾಗ್, ಮೊಬೈಲ್ ಬಸ್ ನಲ್ಲಿ ಪ್ರಯಾಣಿಸಿದ ಟಿಕೆಟ್ ಚಪ್ಪಲಿ ಪತ್ತೆಯಾಗಿತ್ತು. ಕುಣಿಗಲ್ ದೊಡ್ಡ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…
ತುಮಕೂರು: ಇತಿಹಾಸ ಪ್ರಸಿದ್ಧ ದೇವರಾಯನ ದುರ್ಗ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಬ್ರಹ್ಮರಥೋತ್ಸವವು ಮಾರ್ಚ್ 13ರಂದು ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಲಿದೆ. ಕರಿಗಿರಿ ಕ್ಷೇತ್ರವೆಂದೇ ಪ್ರಸಿದ್ಧಿ ಪಡೆದಿರುವ ದೇವರಾಯನದುರ್ಗದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ಜಾತ್ರೆಯು ಮಾರ್ಚ್ 6 ರಿಂದ ಮಾರ್ಚ್ 18ರವರೆಗೆ ನಡೆಯಲಿದ್ದು, ಜಾತ್ರೆ ಪ್ರಯುಕ್ತ ವಿಶೇಷ ಪೂಜಾ ಕಾರ್ಯಕ್ರಮಗಳು ಜರುಗಲಿವೆ. ಜಾತ್ರೆ ಅಂಗವಾಗಿ ಮಾ. 6ರಂದು ಸಂಜೆ 7 ಗಂಟೆಗೆ ಅಂಕುರಾರ್ಪಣ, ಮಾ. 7ರಂದು ಸಂಜೆ 7.30ಕ್ಕೆ ಧ್ವಜಾರೋಹಣ, ಮಾ. 8ರಂದು ಸಂಜೆ 7ಕ್ಕೆ ಶೇಷವಾಹನೋತ್ಸವ, ಮಾ.9ರಂದು ಸಂಜೆ 7ಕ್ಕೆ ಸಿಂಹಾರೋಹಣ, ಮಾ.10ರಂದು ಬೆಳಿಗ್ಗೆ 7 ಗಂಟೆಗೆ ಪುಷ್ಪರಥ ಪೂಜಾ ಕಾರ್ಯಕ್ರಮಗಳು ನಡೆಯಲಿವೆ. ರಥೋತ್ಸವದ ಅಂಗವಾಗಿ ಮಾ.11ರಂದು ಸಂಜೆ 6ಕ್ಕೆ ಪ್ರಹ್ಲಾದೋತ್ಸವ, ರಾತ್ರಿ 12ಗಂಟೆಗೆ ರಾಮಾನುಜಕೂಟ ಸೇವೆ ಹಾಗೂ 12.30ಕ್ಕೆ ಕಲ್ಯಾಣೋತ್ಸವ; ಮಾ.12ರಂದು ಮಧ್ಯಾಹ್ನ 12ಕ್ಕೆ ದೊಡ್ಡಗರುಡವಾಹನ, ಸಂಜೆ 5ಕ್ಕೆ ಗಜೇಂದ್ರ ಮೋಕ್ಷ, ಸಂಜೆ 6ಕ್ಕೆ ನವಿಲು ವಾಹನೋತ್ಸವ ಹಾಗೂ ಸಂಜೆ 7ಕ್ಕೆ ಮುತ್ತಿನ ಪಲ್ಲಕ್ಕಿ ಉತ್ಸವ; ಮಾ. 13ರಂದು ಬೆಳಿಗ್ಗೆ 8…
ಹೂವಿನ ಹಡಗಲಿ: ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟ ಮತ್ತು ಶ್ರೀ ಜ್ವಾಲಮಾಲಿನಿ ಮಹಿಳಾ ಸಮಾಜ ಹೂವಿನಡಗಲಿ ಇವರ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ತುಂಗಭದ್ರ ಪ್ರೌಢಶಾಲೆಯಲ್ಲಿ ಎಸ್.ಎಸ್. ಎಲ್. ಸಿ. ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿ ,ಪರೀಕ್ಷೆ ಹೇಗೆ ಬರೆಯಬೇಕು, ಹೇಗೆ ಎದುರಿಸಬೇಕು ಎಂಬ ಬಗ್ಗೆ ಸಲಹೆ ಹಾಗೂ ಮಾರ್ಗದರ್ಶನ ನೀಡಲಾಯಿತು. ಪರೀಕ್ಷೆಯಲ್ಲಿ ಫೇಲಾದರೂ ವಿದ್ಯಾರ್ಥಿಗಳಲ್ಲಿರುವ ಸದಾವಕಾಶಗಳು, ಇನ್ನಿತರ ವಿಚಾರಗಳನ್ನು ಹಾಗೂ ಯಾವುದೇ ಅನಾಹುತಗಳಿಗೆ ಎಡೆ ಮಾಡಿಕೊಡದಂತೆ ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಜ್ವಾಲಾಮಾಲಿನಿ ಮಹಿಳಾ ಸಮಾಜದ ಅಧ್ಯಕ್ಷ ಎಂ.ಡಿ.ಪದ್ಮಾವತಿ, ಉಪಾಧ್ಯಕ್ಷ ರಾದ ಜಯಶ್ರೀ ಮಂಜುನಾಥ್ ಜೈನ,ಅಖಿಲ ಕರ್ನಾಟಕ ಜೈನ ಮಹಿಳಾ ಒಕ್ಕೂಟದ ಕಾರ್ಯಕಾರಿ ಸಮಿತಿಯ ಸೀಮಾ ಪ್ರಶಾಂತ್ ಹೊಳಲು ಕಾರ್ಯದರ್ಶಿ ಚಂಪಾರಾಯಪ್ಪ ಹೊಳಲು, ಖಜಾಂಚಿ ಮೇಘ ಬಾಗೇಶ ಜೈನರ್, ಸದಸ್ಯರಾದ ಪದ್ಮ ಅಜಿತ್ ಹೊಳಲು, ವೈಶಾಲಿ ಅಮಿತ್ ಹೊಳಲು, ಭಾಗವಹಿಸಿದ್ದರು ಇದೇ ಸಂದರ್ಭದಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಗಳಿಗೆ ಪೆನ್ಸಿಲ್ ಗಳನ್ನು ವಿತರಿಸಲಾಯಿತು. ವರದಿ: ಜೆ ರಂಗನಾಥ, ತುಮಕೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…