Subscribe to Updates
Get the latest creative news from FooBar about art, design and business.
- ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ
- ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ
- ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
- ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ
- ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
- ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
- ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
Author: admin
ಬೆಂಗಳೂರು: ಬೆಂಗಳೂರಿನ ವಿವಿಧೆಡೆಯಿಂದ ಸಂಗ್ರಹಿಸಲಾದ ಇಡ್ಲಿ ಮಾದರಿಗಳಲ್ಲಿ ಸುಮಾರು 51 ರಷ್ಟು ಅಸುರಕ್ಷಿತ ಎಂಬುದು ಆಹಾರ ಇಲಾಖೆಯ ಪ್ರಯೋಗಾಲಯದಲ್ಲಿ ದೃಢಪಟ್ಟ ಬೆನ್ನಲ್ಲೇ ಕರ್ನಾಟಕ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ರಾಜ್ಯದ ಹೋಟೆಲ್, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ. ಇಡ್ಲಿ ತಯಾರಿಸಲು ಬಟ್ಟೆಯ ಬದಲು ಪ್ಲಾಸ್ಟಿಕ್ ಕವರ್ ಬಳಕೆ ಮಾಡಲಾಗುತ್ತಿದೆ. ಇದು ಕ್ಯಾನ್ಸರ್ ಕಾರಕವಾಗಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿದ್ದ ಆರೋಗ್ಯ ಇಲಾಖೆ ಅನೇಕ ಕಡೆಗಳಿಂದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಿತ್ತು. ಆ ಪೈಕಿ ಸುಮಾರು 50 ರಷ್ಟು ಸ್ಯಾಂಪಲ್ಸ್ ವರದಿ ಬಂದಿದ್ದು, ಕಾರ್ಸಿನೋಜೆನಿಕ್ ಅಂಶ ಪತ್ತೆಯಾಗಿದೆ. ಉಳಿದ ಸ್ಯಾಂಪಲ್ಸ್ ವರದಿಗಾಗಿ ಕಾಯಲಾಗುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಪ್ರಯಾಗ್ ರಾಜ್: ಮಹಾಕುಂಭ ಮೇಳವು ‘ಏಕತೆಯ ಮಹಾಯಜ್ಞ’ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದು, ದೇಶದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಶಕ್ತಿಯ ಪ್ರತಿಬಿಂಬವಾಗಿ ಮಹಾಕುಂಭವನ್ನು ಪರಿಗಣಿಸಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. 45 ದಿನಗಳ ಕಾಲ ನಡೆಯುವ ಈ ಮಹಾಕುಂಭವು, ಭಾರತದಲ್ಲಿ ಸಮಾಜದ ಪ್ರತಿಯೊಬ್ಬ ವರ್ಗದ ಜನರು ನಂಬಿಕೆ ಎಂದು ಅವರು ಹೇಳಿದರು. ಮಹಾಕುಂಭವು ‘ಏಕ ಭಾರತ, ಶ್ರೇಷ್ಠ ಭಾರತ’ ಪರಿಕಲ್ಪನೆಯನ್ನು ಸಾಕಾರಗೊಳಿಸುವಲ್ಲಿ ಸಹಾಯವಾಗಿದೆ ಎಂದು ಮೋದಿ ಅಭಿಪ್ರಾಯಪಟ್ಟರು. ಈ ಅವಿಸ್ಮರಣೀಯ ಏಕತೆಯ ದೃಶ್ಯವು ಕೋಟಿ ಕೋಟಿ ಭಾರತೀಯರ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ ಎಂದು ಪ್ರಧಾನಿ ಮೋದಿ ಅಭಿಪ್ರಾಯ ವ್ಯಕ್ತಪಡಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ಪುಸ್ತಕ ಮತ್ತು ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ವಿಧಾನಸೌಧದಲ್ಲಿ ಪ್ರಪ್ರಥಮ ಬಾರಿಗೆ ಆಯೋಜಿಸಲಾಗಿರುವ ಪುಸ್ತಕ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು, ಇನ್ನು ಮುಂದೆ ಪ್ರತೀ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ ನಡೆಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಘೋಷಿಸಿದರು. ಸಾಹಿತ್ಯದ ಓದು ಮನುಷ್ಯನನ್ನು ಹೆಚ್ಚೆಚ್ಚು ಮಾನವೀಯಗೊಳಿಸುತ್ತದೆ. ಪುಸ್ತಕಗಳನ್ನು ಖರೀದಿಸಿ, ಮನೆ ಮನೆಯಲ್ಲಿ ಗ್ರಂಥಾಲಯ ಮಾಡಿಕೊಳ್ಳಿ. ಮಕ್ಕಳು ಮೊಬೈಲ್ ಮತ್ತು ಡಿಜಿಟಲ್ ಚಟದಿಂದ ಹೊರಗೆ ಬಂದು ಪುಸ್ತಕಗಳನ್ನು ಓದುವ ಹವ್ಯಾಸ, ಅಭ್ಯಾಸ ಬೆಳೆಸಿಕೊಳ್ಳಬೇಕು ಎಂದು ಇದೇ ಸಂದರ್ಭದಲ್ಲಿ ಕರೆ ನೀಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ಈ ಬಾರಿಯ ಬಜೆಟ್ ನಲ್ಲಿ ದಲಿತರಿಗೆ ಮೀಸಲಾಗಿಡುವ ಎಸ್.ಸಿ.ಪಿ., ಟಿ.ಎಸ್.ಪಿ.ಗೆ ಸೇರಿದ ಒಂದು ರೂಪಾಯಿ ಹಣವನ್ನು ಕೂಡ ಗ್ಯಾರಂಟಿಗಳಿಗೆ ಬಳಸಬಾರದು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತರಿಗೆ ಮೀಸಲಿಟ್ಟ ಎಸ್.ಸಿ.ಪಿ., ಟಿ.ಎಸ್.ಪಿ. ಹಣದಲ್ಲಿ ಮೊದಲು ಅಂಬೇಡ್ಕರ್ ನಿಗಮ, ಆದಿ ಜಾಂಬವ ನಿಗಮ, ಬೋವಿ, ವಾಲ್ಮೀಕಿ ನಿಗಮ ಸೇರಿ ವಿವಿಧ ನಿಗಮಗಳ ಮೂಲಕ ಜಮೀನು ಇಲ್ಲದವರಿಗೆ ಜಮೀನುಗಳನ್ನು ಕೊಡಲಾಗುತ್ತಿತ್ತು. ಆದರೆ, ಭೂಮಿ ಕೊಟ್ಟಿಲ್ಲ; 39 ಸಾವಿರ ಕೋಟಿ ಮೀಸಲಿಟ್ಟರೂ ಎಲ್ಲ ನಿಗಮಗಳಿಗೆ ಸೇರಿ 500 ಕೋಟಿ ಕೊಡಲು ಇವರಿಗೆ ಸಾಧ್ಯವಾಗಿಲ್ಲ ಎಂದು ಆರೋಪಿಸಿದರು. ದಲಿತರಿಗೆ ಇಟ್ಟ ಹಣವನ್ನು ಅವರಿಗಲ್ಲದೇ ಇನ್ನೊಬ್ಬರಿಗೆ ಖರ್ಚು ಮಾಡುವುದಿಲ್ಲ ಎನ್ನುತ್ತಾರೆ. ಆದರೆ, ಗ್ಯಾರಂಟಿಗಳಿಗೆ ಬಳಸುವುದು ತಪ್ಪು. ಸಾರ್ವಜನಿಕವಾಗಿ ಕೊಡುವ ಗ್ಯಾರಂಟಿಗೆ ದಲಿತರಿಗೆ ಮೀಸಲಿಟ್ಟ ಹಣ ಬಳಸುವುದು ತಪ್ಪು ಎಂದು ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ಶಿರಾ: ಭಾರತೀಯ ಜನತಾ ಪಾರ್ಟಿ, ಶಿರಾ ನಗರ ಮಂಡಲ ಹಾಗೂ ಗ್ರಾಮಾಂತರ ಮಂಡಲ ವತಿಯಿಂದ ಇಂದು ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರ ಜನ್ಮದಿನವನ್ನು ವಿಧಾನ ಪರಿಷತ್ ಶಾಸಕರಾದ ಚಿದಾನಂದ್ ಎಂ. ಗೌಡ ರವರ ನೇತೃತ್ವದಲ್ಲಿ ಆಚರಿಸಲಾಯಿತು. ಅವರ ಗೃಹ ಕಛೇರಿ ಸೇವಾಸದನದಲ್ಲಿ ಪಕ್ಷದ ಕಾರ್ಯಕರ್ತರ ಹಾಗೂ ಮುಖಂಡರುಗಳ ಸಮ್ಮುಖದಲ್ಲಿ ಕೇಕ್ ಕತ್ತರಿಸಿ, ಸಿಹಿ ಹಂಚುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಧುಗಿರಿ ಸಂಘಟನಾ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಬಿ.ಸಿ.ಹನುಮಂತೇಗೌಡ ಅವರ ಹುಟ್ಟು ಹಬ್ಬವನ್ನು ಹಾಗೂ ಮಹಿಳಾ ಮೋರ್ಚಾ ತಾಲೂಕು ಅಧ್ಯಕ್ಷರಾದ ಲಲಿತಮ್ಮನವರ ಹುಟ್ಟು ಹಬ್ಬವನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ನಗರ ಮಂಡಲ ಅಧ್ಯಕ್ಷರಾದ ಗಿರಿಧರ್, ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಈರಣ್ಣ ಪಟೇಲ್, ನಿಕಟ ಪೂರ್ವ ಅಧ್ಯಕ್ಷರಾದ ಚಿಕ್ಕಣ್ಣ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷರಾದ ಉಮಾ ವಿಜಯರಾಜ್, ಓಬಿಸಿ ಮೋರ್ಚ ಜಿಲ್ಲಾಧ್ಯಕ್ಷರಾದ ಮಾಗೋಡ್ ಪ್ರತಾಪ್, ತಾಲೂಕು ಪ್ರಧಾನ ಕಾರ್ಯದರ್ಶಿಗಳಾದ ನಟರಾಜ್ ಸಂತೆಪೇಟೆ ಹಾಗೂ ಕೊಟ್ಟ ರಂಗನಾಥ್, ಮಾಜಿನಗರ ಮಂಡಲ ಅಧ್ಯಕ್ಷರಾದ ಶ್ರೀಧರ ಮೂರ್ತಿ ಹಾಗೂ…
ತುಮಕೂರು: ಕರ್ನಾಟಕ ಬಂಜಾರ (ಲಂಬಾಣಿ) ಜಾಗೃತಿ ದಳ(ರಿ), ವತಿಯಿಂದ ತುಮಕೂರು ನಗರದಲ್ಲಿ 2025ರ ಮಾರ್ಚ್ 02ನೇ ಭಾನುವಾರ ಬಂಜಾರ ಸಮುದಾಯದ ಆರಾಧ್ಯ ದೈವ ಶ್ರೀಸಂತ ಸೇವಾಲಾಲ್ ಮಹಾರಾಜ್ ಅವರ 286ನೇ ಜನ್ಮಜಯಂತಿ ಹಾಗೂ ಬಿಗ್ ಬಾಸ್ 11ರ ವಿಜೇತ ಹನುಮಂತ ಲಮಾಣಿ ರವರಿಗೆ ಅಭಿನಂದನಾ ಸಮಾರಂಭದ ಅಂಗವಾಗಿ ನಗರದ ಖಾಸಗಿ ಹೊಟೇಲ್ನಲ್ಲಿ ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷರರಾದ ತಿಪ್ಪೇಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಪೂರ್ವಬಾವಿ ಸಭೆ ಆಯೋಜಿಸಲಾಗಿತ್ತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ಬಂಜಾರ(ಲಂಬಾಣಿ ) ಜಾಗೃತಿ ದಳ(ರಿ) ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ತಿಪ್ಪೇಸ್ವಾಮಿ ಸಂತ ಸೇವಾಲಾಲ್ ಮಹಾರಾಜ್ ಅವರ ಜೀವನ, ಸಾಧನೆಯನ್ನು ಸಮುದಾಯದ ಯುವಜನರಿಗೆ ಪರಿಚಯಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಸಮುದಾಯದ ಹಿರಿಯ ಸರಕಾರದೊಂದಿಗೆ ಮಾರ್ಚ್ 02 ನೇ ಭಾನುವಾರ ತುಮಕೂರು ನಗರದ ಮರಳೂರು ದಿಣ್ಣೆಯಲ್ಲಿರುವ ಬಂಜಾರ ಭವನದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸುಮಾರು ಐದು ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ನಿರೀಕ್ಷೆಯಿದೆ. ಇದೇ ಸಂದರ್ಭದಲ್ಲಿ ಬಿಗ್ಬಾಸ್ ಸೀಜನ್ 11 ರ ವಿಜೇತರಾದ ಬಂಜಾರ…
ತುಮಕೂರು: ಜಿಲ್ಲೆಯ ಕುಣಿಗಲ್ ತಾಲೂಕು ಎಡೆಯೂರು ಶ್ರೀ ಸಿದ್ದಲಿಂಗೇಶ್ವರಸ್ವಾಮಿ ಕ್ಷೇತ್ರದಲ್ಲಿ ಏಪ್ರಿಲ್ 5ರಂದು ಜರುಗುವ ಮಹಾರಥೋತ್ಸವಕ್ಕೆ ಸಹಸ್ರಾರು ಭಕ್ತಾದಿಗಳು ಆಗಮಿಸುವುದರಿಂದ ಯಾವುದೇ ರೀತಿ ಬೆಂಕಿ ಅವಘಡ–ಕಾಲ್ತುಳಿತವಾಗದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ತಮ್ಮ ಕಚೇರಿಯಲ್ಲಿ ಗುರುವಾರ ಜರುಗಿದ ಪೂರ್ವಭಾವಿ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು ಬೆಂಕಿ ಅವಘಡಗಳುಂಟಾದಲ್ಲಿ ಪಾರಾಗುವ ಹಾಗೂ ಕಾಲ್ತುಳಿತ, ನೂಕು–ನುಗ್ಗಲುಗಳಾಗದಂತೆ ಸಂಯಮದಿಂದ ನಡೆದುಕೊಳ್ಳುವ ಬಗ್ಗೆ ಎಲ್ಇಡಿ ಪರದೆ ಅಳವಡಿಸಿ ಕಿರು ಚಿತ್ರಗಳನ್ನು ಪ್ರದರ್ಶಿಸುವ ಮೂಲಕ ಜನ ಜಾಗೃತಿ ಮೂಡಿಸಬೇಕು ಎಂದು ಸೂಚಿಸಿದರು. ಭಕ್ತಾದಿಗಳಿಗೆ ವಿತರಿಸುವ ಪ್ರಸಾದ ತಯಾರಿಸಲು ಶುದ್ಧ ಕುಡಿಯುವ ನೀರನ್ನೇ ಬಳಸಬೇಕು. ಸ್ವಾಮಿಯ ದರ್ಶನಕ್ಕೆ ಕುಟುಂಬ ಸಮೇತ ಆಗಮಿಸುವ ಸಾರ್ವಜನಿಕರಿಗೆ ತೊಂದರೆಯಾಗಂತೆ ಮೂಲಭೂತ ಸೌರ್ಯಗಳನ್ನು ಒದಗಿಸಬೇಕು. ಜಾತ್ರಾ ಸಂದರ್ಭದಲ್ಲಿ ಸ್ವಚ್ಛತೆ ಕಾಪಾಡಲು ಸಿಬ್ಬಂದಿಗಳನ್ನು ನಿಯೋಜಿಸಬೇಕು. ಜಾತ್ರಾ ಕೆಲಸ–ಕಾರ್ಯಗಳಿಗೆ ನಿಯೋಜಿಸುವ ಸಿಬ್ಬಂದಿಗೆ ಧರಿಸಲು ದೇವಸ್ಥಾನದ ಚಿಹ್ನೆಯಿರುವ ಒಂದೇ ಬಣ್ಣದ ಮೇಲು ಅಂಗಿಯನ್ನು ನೀಡಬೇಕು. ಇದರಿಂದ ಸಮಸ್ಯೆಗಳುಂಟಾದಾಗ ನೆರವು ಕೋರಲು ಭಕ್ತಾದಿಗಳಿಗೆ ಅನುವಾಗುತ್ತದೆ ಎಂದು…
ತುಮಕೂರು: ಜನರಿಗೆ ವಿಷಮುಕ್ತ ಆಹಾರ ದೊರಯಬೇಕು. ಭೂಮಿಯ ಮೇಲಿನ ಜೀವ ವೈವಿದ್ಯತೆಯನ್ನುಕಾಪಾಡಬೇಕು ಎಂಬ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವ ದೊಡ್ಡ ಹೊಸೂರಿನ ಗಾಂಧೀ ಸಹಜ ಬೇಸಾಯ ಆಶ್ರಯದಲ್ಲಿ 2025ರ ಮಾರ್ಚ್ 01ರ ಶನಿವಾರ ಬೆಳಗ್ಗೆ 10 ಗಂಟೆಗೆ ಗಾಂಧಿ ರೈತ ವಿಜ್ಞಾನ ಕೇಂದ್ರ–ಜೈವಿಕ ಸಂಪನ್ಮೂಲಕ ಕೇಂದ್ರವನ್ನುಆರಂಭಿಸಲಾಗುತ್ತಿದೆ. ಸಾವಯವ ಕೃಷಿಗೆ ಬೇಕಾದ ಒಳಸುರಿಗಳಾದ ಪಂಚಗವ್ಯ, ಕುನಪಜಲ ಮತ್ತುಇನ್ನಿತರ ಪದಾರ್ಥಗಳನ್ನು ಹೊಂದಿಸಲು ಹಾಗು ಉತ್ಪಾದಿಸಲು ರೈತರಿಗೆ ಕಷ್ಟವಾಗುತ್ತಿದೆ. ಉದಾಹರಣೆಗೆ ಹೇಳುವುದಾದರೆ, ನೀಲಗಿರಿಎಲೆಯ ಸಾರವು ಬಿಳಿ ನೊಣಗಳು ಮತ್ತು ಕಪ್ಪುಹೇನುಗಳಂತಹ ಕ್ರಿಮಿಗಳನ್ನು ಹತೋಟಿಗೊಳಿಸುತ್ತದೆ, ಅಂದರೆ ಮೊಟ್ಟೆ ಇಡುವ ಕ್ರಿಯೆ ತಡೆಯುತ್ತದೆ ಎಂದು ವೈಜ್ಞಾನಿಕ ಸಂಶೋಧನೆಗಳಿಂದ ತಿಳಿದುಬಂದಿದೆ. ಈ ವಿಜ್ಞಾನವನ್ನು ತಿಳಿದ ರೈತರು ನೀಲಿಗಿರಿ ಮರದ ಬಳಿ ಹೋಗಿ, ನಿರ್ದಿಷ್ಟವಾಗಿ ಯಾವ ಎಲೆಯನ್ನು ತರಬೇಕು; ಎಳೆಯ ಚಿಗುರೋ, ಅಥವಾ ಚೆನ್ನಾಗಿ ಬಲಿತದ್ದೋ, ಒಣಗಿದ್ದೊ ಎಂದು ಗೊಂದಲಕ್ಕೆ ಸಿಲುಕುತ್ತಾನೆ. ಅಷ್ಟಲ್ಲದೇ, ಎಲೆಗಳನ್ನು ಗಂಜಲದಲ್ಲಿಎಷ್ಟು ದಿನ ಇಡಬೇಕು.? ಗಾಳಿಯಾಡಿಸಬೇಕೋ ಬೇಡವೋ.? ಗಾಳಿಯಾಡಿಸುವುದಾದರೆ ಎಷ್ಟು ಹೊತ್ತು.? ಮಿಶ್ರಣಕ್ಕೆ ಹುಳ ಬಿದ್ದರೆ ಏನು ಮಾಡಬೇಕು.?…
ಪೆರ್ನಾಜೆ: ಶ್ರೀ ವಿಟ್ಲ ಭಗವತಿ ದೇವಸ್ಥಾನದ ಸಭಾಂಗಣದಲ್ಲಿ ನಾದೋಪಾಸನ ಹಾಗೂ ತ್ಯಾಗರಾಜರ ಆರಾಧನೆ ಶಾಸ್ತ್ರೀಯ ಸಂಗೀತ ಕಾರ್ಯಕ್ರಮವು ಸ್ವರ ಸಿಂಚನ ಸಂಗೀತ ಶಾಲೆ ವಿದ್ಯಾರ್ಥಿಗಳಿಂದ ಫೆ.23ರಂದು ಬೆಳಿಗ್ಗೆಯಿಂದ ದಿನಪೂರ್ತಿ ನಡೆಯಿತು. ಶ್ರೀ ಭಗವತಿ ದೇವಸ್ಥಾನದ ವ್ಯವಸ್ಥಾಪಕರಾದ ಕೇಶವ ಆರ್.ವಿ. ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ ಶಿಕ್ಷಕಿ ಸವಿತಾ ಕೋಡಂದೂರ್ ಮಾರ್ಗದರ್ಶನದಲ್ಲಿ ನಡೆಯಿತು. ಪಕ್ಕ ವಾದ್ಯದಲ್ಲಿ ಮೃದಂಗ ವಾದಕರಾಗಿ ಕ್ಷಿತಿಶ ರಾಮ ಕೆ.ಎಸ್., ವಯಲಿನ್ ನಲ್ಲಿ ಶ್ರೀ ಪ್ರಿಯಾ ಪರಕ್ಕಜೆ ಸಹಕರಿಸಿದರು. ರಮ್ಯಾ ಜೆಡ್ಡು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸ್ವರ ಸಿಂಚನ ಸಂಗೀತ ಶಾಲಾ ವಿದ್ಯಾರ್ಥಿಗಳು ಹಾಗೂ ಪೋಷಕರು ಭಾಗವಹಿಸಿದ್ದರು. ಸುಮಾರು 40 ವಿದ್ಯಾರ್ಥಿಗಳಿಂದ ಏಕವ್ಯಕ್ತಿ ಶಾಸ್ತ್ರೀಯ ಸಂಗೀತ ಪ್ರದರ್ಶನ ನಡೆಯಿತು. ಅವರವರ ಭಾವಕ್ಕೆ ಅವರವರ ಭಕುತಿಗೆ ತಕ್ಕಂತೆ ಸ್ವರ ಮಧುರ ಗಾಯನ ಮೇಳ ರಂಜಿಸಿತು. ಸಂಗೀತದ ಸುಧೆಯ ತುoಬಿ ಮಾಧುರ್ಯ ಮನದಲ್ಲಿ ತುಂಬಿದೆ. ಭಾಗ್ಯಶ್ರೀ, ಕು.ಆದರ್ಶನಿ ,ಕು.ಭುವಿ ಕಾರ್ಯಕ್ರಮವನ್ನು ನಿರೂಪಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ಬೆಂಗಳೂರು: ಬೆಳಗಾವಿ ಸಾರಿಗೆ ಬಸ್ ನಿರ್ವಾಹಕರು ಕನ್ನಡಿಗರ ಮೇಲೆ ಮರಾಠಿ ಭಾಷಾಂಧ ಪುಂಡರು ನಡೆಸಿದ ಕುಕೃತ್ಯವು ಯಾವುದೇ ನಾಗರೀಕ ಸಮಾಜವು ಸಹಿಸಲು ಸಾಧ್ಯವಿಲ್ಲ, ಇಂತಹವರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಎಂದು ಆಮ್ ಆದ್ದಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಒತ್ತಾಯಿಸಿದ್ದಾರೆ. ಅನೇಕ ವರ್ಷಗಳಿಂದ ತಮ್ಮ ರಾಜಕೀಯ ಅಭಿಲಾಷೆಗಾಗಿ ಮಹಾರಾಷ್ಟ್ರ ಹಾಗೂ ಕರ್ನಾಟಕ ರಾಜ್ಯದ ಸಾಮರಸ್ಯ ಸಂಬಂಧಕ್ಕೆ ಧಕ್ಕೆ ತರುವ ಕೃತ್ಯಗಳನ್ನು ಎಸಗಿ ರಾಜ್ಯದ ಕಾನೂನು ಸುವ್ಯವಸ್ಥೆಗೆ ಭಂಗ ತರುತ್ತಿರುವ ಈ ಸಮಾಜದ್ರೋಹಿಗಳನ್ನು ಕೂಡಲೇ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳದಿದ್ದಲ್ಲಿ ಎರಡೂ ರಾಜ್ಯಗಳಲ್ಲಿ ಶಾಂತಿಭಂಗ ವಾಗುವ ಅಪಾಯ ಇದೆ ಎಂದು ಅವರು ಹೇಳಿದರು. ಈ ಕೃತ್ಯಕ್ಕೆ ಸಂಬಂಧಿಸಿದಂತೆ ತಾವು ಕೂಡಲೇ ಮಹಾರಾಷ್ಟ್ರ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಬೇಕು. ಅಲ್ಲದೆ ಭಾಷಾ ಸಾಮರಸ್ಯವನ್ನು ತಮ್ಮ ರಾಜಕೀಯ ಲಾಭಕ್ಕಾಗಿ ಹಾಳು ಮಾಡುತ್ತಿರುವ ತಮ್ಮ ಪಕ್ಷವು ಸೇರಿದಂತೆ ಎಲ್ಲಾ ಪಕ್ಷಗಳ ನಾಯಕರುಗಳಿಗೆ ಕಠಿಣ ಎಚ್ಚರಿಕೆ ನೀಡುವ ಮೂಲಕ ಕನ್ನಡಿಗರೊಂದಿಗೆ ಸರಕಾರ ಇದೆ ಎಂಬ ಎಚ್ಚರಿಕೆಯನ್ನು ರವಾನಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ…