Subscribe to Updates
Get the latest creative news from FooBar about art, design and business.
- ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ
- ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!
- ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
- ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ
- ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ
- ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’
- ಬೆಳಕುಣಿ (ಚೌದ್ರಿ)–ಮುಂಗನಾಳ ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಚಕಾರ: ತಕ್ಷಣ ದುರಸ್ತಿಗೆ ಜೀವನ್ ಮಾಳೆಗೆ ಆಗ್ರಹ
- ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: FIR ದಾಖಲು
Author: admin
ಛತ್ತೀಸ್ ಗಢ: ಛತ್ತೀಸ್ ಗಢದ ಬಿಜಾಪುರ ಹಾಗೂ ಕಾಂಕೇರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎರಡು ಪ್ರತ್ಯೇಕ ಎನ್ ಕೌಂಟರ್ ನಲ್ಲಿ 22 ನಕ್ಸಲರನ್ನು ಹತ್ಯೆ ಮಾಡಲಾಗಿದೆ. ಬೆಳಗ್ಗೆ 7 ಗಂಟೆಯಿಂದ ನಕ್ಸಲರು ಮತ್ತು ಭದ್ರತಾ ಪಡೆಗಳ ನಡುವೆ ನಿರಂತರ ಗುಂಡಿನ ಚಕಮಕಿ ನಡೆಯುತ್ತಿದೆ. ಎನ್ ಕೌಂಟರ್ ಸ್ಥಳದಿಂದ 22 ನಕ್ಸಲರ ಮೃತದೇಹಗಳು ಮತ್ತು ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಿಜಾಪುರ ಡಿಆರ್ಜಿಯ ಒಬ್ಬ ಸೈನಿಕ ಕೂಡ ಈ ಎನ್ ಕೌಂಟ ರ್ನಲ್ಲಿ ಹುತಾತ್ಮರಾಗಿದ್ದಾರೆ. ಎನ್ಕೌಂಟರ್ ಸ್ಥಳದಿಂದ ಎಕೆ 47, ಎಸ್ಎಲ್ಆರ್ನಂತಹ ದೊಡ್ಡ ಸ್ವಯಂಚಾಲಿತ ರೈಫಲ್ ಗಳನ್ನು ವಶಪಡಿಸಿಕೊಳ್ಳಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಈ ನಾಡಿನ ಜನತೆಗೆ ಕೊಟ್ಟ ಏಕೈಕ ಗ್ಯಾರಂಟಿ ಎಂದರೆ ಅದು ಬೆಲೆ ಏರಿಕೆ ಎಂದು ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಲೆ ಏರಿಕೆಯ ಗ್ಯಾರಂಟಿಯನ್ನು ಈ ರಾಜ್ಯ ಸರಕಾರ ಸರಿಯಾಗಿ ಅನುಷ್ಠಾನಕ್ಕೆ ತರುತ್ತಿದೆ ಎಂದು ಟೀಕಿಸಿದರು. ಕಾಂಗ್ರೆಸ್ ಸರಕಾರದ ಗ್ಯಾರಂಟಿಗಳು ವಿಫಲವಾಗಿದೆ. ಬೆಲೆ ಏರಿಕೆಯಿಂದ ನಾಡಿನ ಸಾಮಾನ್ಯ ಜನರು, ಬಡವರು, ರೈತರು ಸೇರಿ ಎಲ್ಲರೂ ತತ್ತರಿಸಿ ಹೋಗಿದ್ದಾರೆ ಎಂದು ತಿಳಿಸಿದರು. ಮುಸಲ್ಮಾನರಿಗೆ ಸರಕಾರಿ ಗುತ್ತಿಗೆಗಳು, ಕಾಮಗಾರಿಗಳಲ್ಲಿ ಮೀಸಲಾತಿ ನೀಡುವ ಮಸೂದೆ ಸದನದಲ್ಲಿ ತರುತ್ತಿದ್ದಾರೆ. ಬಿಜೆಪಿ ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಪುನರುಚ್ಚರಿಸಿದರು. ಇದು ಕಾಂಗ್ರೆಸ್ ಸರಕಾರವೇ? ಸಿದ್ದರಾಮಯ್ಯರ ಸರಕಾರವೇ ಅಥವಾ ನಿಜಾಮರ ಆಡಳಿತವೇ ಎಂಬ ಭಾವನೆ ಜನರಲ್ಲಿ ಮೂಡುತ್ತಿದೆ ಎಂದು ಟೀಕಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…
ಅಮೆರಿಕ: ಹಮಾಸ್ ಪರ ಪ್ರಚಾರವನ್ನು ಮಾಡುತ್ತಿರುವ ಆರೋಪದಲ್ಲಿ ಜಾರ್ಜ್ಟೌನ್ ವಿಶ್ವವಿದ್ಯಾಲಯದಲ್ಲಿ ಓದುತ್ತಿರುವ ಭಾರತೀಯ ಸಂಶೋಧಕರೊಬ್ಬರನ್ನು ವಲಸೆ ಅಧಿಕಾರಿಗಳು ಬಂಧಿಸಿದ್ದಾರೆ ಮತ್ತು ಗಡೀಪಾರು ಮಾಡುವ ನಿರೀಕ್ಷೆಯಿದೆ ಎಂದು ಅವರ ವಕೀಲರು ತಿಳಿಸಿದ್ದಾರೆ. ಪೋಸ್ಟ್-ಡಾಕ್ಟರಲ್ ಫೆಲೋ ಆಗಿರುವ ಬದರ್ ಖಾನ್ ಸೂರಿ ಅವರನ್ನು ಸೋಮವಾರ ರಾತ್ರಿ ವರ್ಜೀನಿಯಾದ ಅವರ ಮನೆಯ ಹೊರಗೆ ಬಂಧಿಸಿದ್ದಾರೆ. ಸೂರಿ ಅವರ ಮೇಲೆ “ಹಮಾಸ್ ಪರ ಪ್ರಚಾರವನ್ನು ಮಾಡುತ್ತಿದ್ದಾರೆ” ಎಂದು ಆರೋಪಿಸಲಾಗಿದೆ. ಅವರು “ತಿಳಿದಿರುವ ಅಥವಾ ಶಂಕಿತ ಭಯೋತ್ಪಾದಕರೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆ” ಎಂದು ವರದಿಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಹಾಸನ: ದಿನದಿಂದ ದಿನಕ್ಕೆ ರಂಗೇರುತ್ತಿರುವ ರಣ ಬಿಸಿಲು, ಕಾಡಿನಲ್ಲಿ ಸಿಗದ ಆಹಾರ-ನೀರು. ಇದರಿಂದ ಕಂಗೆಟ್ಟ ಕಾಡು ಪ್ರಾಣಿಗಳು ನಾಡಿನತ್ತ ಬರುತ್ತಿದ್ದು, ಕಳೆದ ಕೆಲವು ದಿನಗಳಿಂದ ಬೇಲೂರಿನ ಸುತ್ತಮತ್ತ ಬೀಡುಬಿಟ್ಟಿರುವ ಕಾಡಾನೆ ಭೀಮನಿಗೆ ಕುಡಿಯಲು ನೀರು ಸಿಗದೆ ಮನೆಯೊಂದರ ಬಳಿ ಪರದಾಡುತ್ತಿದ್ದ ದೃಶ್ಯ ಕಂಡು ಬಂದಿದೆ. ಬೇಲೂರು ತಾಲೂಕಿನ ಕ್ಯಾನಳ್ಳಿ ಗ್ರಾಮದ ಮನೆಯೊಂದರ ಮುಂದೆ ಭೀಮ ಬಾಯಾರಿಕೆಯಿಂದ ಡ್ರಮ್ ನಲ್ಲಿದ್ದ ನೀರನ್ನು ಕುಡಿಯಲು ಪರದಾಡುತ್ತಿದ್ದ ದೃಶ್ಯ ಸೆರೆಯಾಗಿದ್ದು, ಸೊಂಡಲಿನಿಂದ ಡ್ರಮ್ನ ಮುಚ್ಚಳ ತೆಗೆಯಲು ಹರಸಾಹಸ ಪಟ್ಟಿದ್ದು, ಕೊನೆಗೂ ಕ್ಯಾಪ್ ತೆಗೆಯಲು ಸಾಧ್ಯವಾಗದಿದ್ದಾಗ ನೆಲಕ್ಕೆ ಉರಳಿಸಿಬಿಟ್ಟಿದೆ. ಡ್ರಮ್ ಕೆಳಗೆ ಬೀಳುತ್ತಿದ್ದಂತೆ ಕ್ಯಾಪ್ ಓಪನ್ ಆಗಿದ್ದು, ನೀರನ್ನು ಹೊಟ್ಟೆ ತುಂಬಾ ಕುಡಿದು ತೆರಳಿದೆ. ನೀರನ್ನು ಮಾತ್ರ ಭೀಮ ಕುಡಿದಿದ್ದು, ಯಾವುದೆ ತೊಂದರೆ ಮಾಡದೆ ಸ್ಥಳದಿಂದ ತೆರಳಿದ್ದಾನೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಚಿಕ್ಕಮಗಳೂರು: ಕಾಡಾನೆಯನ್ನು ಕಾರ್ಮಿಕರು ಪ್ರಾಣ ಭಯದಿಂದ ಮಕ್ಕಳನ್ನು ಎತ್ತಿಕೊಂಡು ಓಡಿದ ಘಟನೆ ಮೂಡಿಗೆರೆ–ಬೇಲೂರು ಗಡಿ ಮಲಸಾವರ ಬಳಿಯ ಬಕ್ರವಳ್ಳಿಯಲ್ಲಿ ನಡೆದಿದೆ. ರಸ್ತೆಯಲ್ಲಿ ಹೋಗುತ್ತಿದ್ದ ಕಾರ್ಮಿಕರತ್ತ ಒಂಟಿ ಸಲಗ ನುಗ್ಗಿದೆ. ಕಾರ್ಮಿಕರ ಜೊತೆಗೆ ಪುಟ್ಟ ಮಕ್ಕಳು ಕೂಡ ಇದ್ದರು. ಈ ವೇಳೆ ಏನು ಮಾಡಬೇಕು ಎಂದು ತೋಚದೇ ಮಕ್ಕಳನ್ನು ಹೆಗಲ ಮೇಲೆ ಕೂರಿಸಿಕೊಂಡು ಪ್ರಾಣ ಉಳಿಸಿಕೊಳ್ಳಲು ಕಾರ್ಮಿಕರು ಓಡಿದ್ದಾರೆ. ಕಾಫಿತೋಟದ ಕಾರ್ಮಿಕರತ್ತ ಕಾಡಾನೆ ನುಗ್ಗಿದ್ದು, ಕಾರ್ಮಿಕರು ಓಡಿದಂತೆ ಹಿಂದೆಯೇ ಒಂಟಿ ಸಲಗ ಅಟ್ಟಾಡಿಸಿಕೊಂಡು ಬಂದಿದೆ. ಸ್ವಲ್ಪದರಲ್ಲೇ ಕಾರ್ಮಿಕರು ಕಾಡಾನೆ ದಾಳಿಯಿಂದ ಪಾರಾಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ರಾಯಚೂರು: ನಕಲಿ ನೋಟು ಚಲಾವಣೆ ಮಾಡಿದ ಆರೋಪದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಮುಂದಾಗಿದ್ದ ಮಂಜುನಾಥ ಹಾಗೂ ರಮೇಶ್ ಬಂಧಿತ ಆರೋಪಿಗಳು. ಹೋಟೆಲ್ ನಲ್ಲಿ ಬಿರಿಯಾನಿ ತಿಂದಿದ್ದ ಈ ಇಬ್ಬರು ನಕಲಿ 500 ರೂ. ನೋಟು ಚಲಾವಣೆ ಮಾಡಿದ್ದರು ಎನ್ನಲಾಗಿದೆ. ರಾಯಚೂರು ನಗರದ ಹೊಟೇಲ್ ನಲ್ಲಿ ಈ ಘಟನೆ ನಡೆದಿದೆ. ಚಿಕನ್ ಬಿರಿಯಾನಿ ತಿಂದು 500 ರೂ. ಬಿಲ್ ಪಾವತಿಸಿದ್ದರು. ಸ್ವಲ್ಪ ಹೊತ್ತಿನ ಬಳಿಕ ಅನುಮಾನ ಬಂದು ಹೋಟೆಲ್ ಮಾಲೀಕ ನೋಟು ಪರಿಶೀಲಿಸಿದಾಗ ನಕಲಿ ನೋಟು ಎನ್ನುವುದು ಬಯಲಾಗಿದೆ. ಮನೋರಂಜನೆಗಾಗಿ ಬಳಸುವ ಚಿಲ್ಡ್ರನ್ ಬ್ಯಾಂಕ್ ಆಫ್ ಇಂಡಿಯಾ ಎಂದು ನಮೂದಿಸಿದ್ದ ನಕಲಿ ನೋಟನ್ನ ಆರೋಪಿಗಳು ಬಿಲ್ ಪಾವತಿಗೆ ಬಳಸಿದ್ದರು. ಬಳಿಕ ಹೋಟೆಲ್ ಮಾಲೀಕ ಮಾರ್ಕೆಟ್ ಯಾರ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇಬ್ಬರು ಆರೋಪಿಗಳನ್ನ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಉಡುಪಿ: ಮೀನು ಕದ್ದ ಆರೋಪ ಹೊರಿಸಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿರುವ ಅಮಾನವೀಯ ಘಟನೆ ಉಡುಪಿ ಜಿಲ್ಲೆಯ ಮಲ್ಪೆ ಬಂದರ್ ನಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವಿಜಯನಗರ ಮೂಲದ ದಲಿತ ಮಹಿಳೆ ಹಲ್ಲೆಗೊಳಗಾದ ಮಹಿಳೆಯಾಗಿದ್ದಾರೆ. ಮಾ. 18ರಂದು ಈ ಘಟನೆ ನಡೆದಿದ್ದು, ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಘಟನೆ ಸಂಬಂಧ ಹಲ್ಲೆಗೊಳಗಾಗಿದ್ದ ಮಹಿಳೆ ಮಲ್ಪೆ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನನ್ವಯ ಆರೋಪಿಗಳಾದ ಲಕ್ಷ್ಮೀಬಾಯಿ, ಸುಂದರ್, ಶಿಲ್ಪಾ ಹಾಗೂ ಮತ್ತೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ವಿಡಿಯೋವನ್ನು ಪರಿಶೀಲಿಸಿ ಮಹಿಳೆಗೆ ಹಲ್ಲೆ ನಡೆಸಿರುವವರನ್ನು ಬಂಧಿಸಲಾಗಿದೆ. ಉಳಿದವರ ಬಗ್ಗೆ ವಿಡಿಯೋದಲ್ಲಿ ಪರಿಶೀಲನೆ ನಡೆಸಿ ಕಾನೂನು ಕ್ರಮಕೈಗೊಳ್ಳಲು ಪೊಲೀಸರು ಮುಂದಾಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ರಾಮನಗರ: ಬಿಡದಿಯಲ್ಲಿರುವ ಪ್ರತಿಷ್ಠಿತ ಕಂಪನಿಯ ಕಾರ್ಖಾನೆಯ ಶೌಚಾಲಯದಲ್ಲಿ ಪಾಕಿಸ್ತಾನ ಪರ ಬರಹ ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಿಡದಿ ಪೊಲೀಸರು ಬಂಧಿಸಿದ್ದಾರೆ. ಉತ್ತರ ಕರ್ನಾಟಕದ ಹೈಮದ್ ಹುಸೇನ್ (24) ಮತ್ತು ಸಾದಿಕ್ (20) ಬಂಧಿತರು ಎಂದು ಗುರುತಿಸಲಾಗಿದೆ. ಟೊಯೋಟಾ ಕಾರ್ಖಾನೆಯಲ್ಲಿ ಗುತ್ತಿಗೆ ಆಧಾರದಲ್ಲಿ ಇವರಿಬ್ಬರು ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಆರೋಪಿಗಳು ಕಾರ್ಖಾನೆಯ ಶೌಚಾಲಯದ ಗೋಡೆ ಮೇಲೆ ಪಾಕಿಸ್ತಾನ ಕೀ ಜೈ, ಪಾಕಿಸ್ತಾನಕ್ಕೆ ಜಯವಾಗಲಿ ಎಂದು ಬರೆದಿದ್ದರು. ಜೊತೆಗೆ ಕನ್ನಡಿಗರನ್ನು ಅವಹೇಳನಕಾರಿ ಭಾಷೆಯಲ್ಲಿ ನಿಂದಿಸಿದ್ದರು ಎಂದು ಆರೋಪಿಸಲಾಗಿದೆ. ಈ ವಿಷಯ ಬೆಳಕಿಗೆ ಬರುತ್ತಿದ್ದಂತೆ ಕನ್ನಡಪರ ಸಂಘಟನೆಗಳು ಕಾರ್ಖಾನೆ ಬಳಿ ಜಮಾಯಿಸಿದ್ದರು. ಪ್ರತಿಭಟನೆ ನಡೆಸಿ ಕಂಪನಿಯ ಆಡಳಿತ ಮಂಡಳಿ ವಿರುದ್ದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದರು. ದೇಶದ್ರೋಹಿ ಪದ ಬಳಸಿದ ಹಾಗೂ ಕನ್ನಡಿಗರನ್ನು ನಿಂದಿಸಿರುವ ಕಿಡಿಗೇಡಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಆಗ್ರಹಿಸಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಬೈಲಪ್ಪನಮಠದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಅನುದಾನಿತ ಪ್ರೌಢಶಾಲೆಯನ್ನು ಮುಚ್ಚಲು ಬಿಇಓ ವಿದ್ಯಾರ್ಥಿಗಳು, ಶಿಕ್ಷಕರ ಮೇಲೆ ಒತ್ತಡ ಹಾಕುತ್ತಿರುವ ಗಂಭೀರ ಆರೋಪ ಕೇಳಿ ಬಂದಿದೆ. 4 ವಾರಗಳ ಕಾಲ ಯಥಾ ಸ್ಥಿತಿ ಕಳೆದುಕೊಳ್ಳುವಂತೆ ಕೋರ್ಟ್ ಆದೇಶವಿದ್ದರೂ ಕೂಡ, ಬಿಇಓ ಅಕ್ರಮವಾಗಿ ಶಾಲೆ ಮುಚ್ಚಲು ಮುಂದಾಗಿದ್ದಾರೆ ಎಂದು ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಸಿದ್ದಪ್ಪ ಗಂಭೀರ ಆರೋಪ ಮಾಡಿದ್ದಾರೆ. ಹಾಜರಾತಿ ಹಾಗೂ ಎಲ್ಲಾ ದಾಖಲೆಗಳಿದ್ದರೂ ಕನ್ನಡ ಶಾಲೆಗೆ ಬೀಗ ಹಾಕಲು ಮುಂದಾಗಿದ್ದಾರೆ. SC, ST ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಓದುತ್ತಿರುವ ಶಾಲೆಯನ್ನ ಮುಚ್ಚಲು ಅಧಿಕಾರಿಗಳು ಮುಂದಾಗಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಶಿಕ್ಷಣ ಇಲಾಖೆಯ ಅಧಿಕಾರಿಗಳೇ ಕನ್ನಡ ಶಾಲೆಗಳ ಭವಿಷ್ಯ ಅಪಾಯಕ್ಕೆ ದೂಡುತ್ತಿದ್ದಾರೆ ಎಂಬ ಆರೋಪವನ್ನ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಸಿದ್ದಪ್ಪ ಮಾಡಿದ್ದು, ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ತುಮಕೂರು: ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ 2627 ಮತಗಟ್ಟೆಗಳಿದ್ದು, ಪ್ರತಿ ಮತಗಟ್ಟೆಗೂ ಮತಗಟ್ಟೆ ಮಟ್ಟದ ಏಜೆಂಟ್(ಬಿಎಲ್ ಎ)ಗಳನ್ನು ನೇಮಿಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ಚುನಾವಣಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ಬುಧವಾರ ಮತದಾರರ ಪಟ್ಟಿ ತಯಾರಿಕೆ, ಬಿಎಲ್ ಓಗಳ ನೇಮಕಾತಿ ಹಾಗೂ ಇತರೆ ಚುನಾವಣಾ ವಿಷಯಗಳ ಕುರಿತು ನೋಂದಾಯಿತ/ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ತಯಾರಿಕೆ ಪ್ರಕ್ರಿಯೆಯನ್ನು ಸದೃಢಪಡಿಸುವ ಹಾಗೂ ಯಾವುದೇ ಚುನಾವಣೆಗಳನ್ನು ಪಾರದರ್ಶಕವಾಗಿ ನಡೆಸುವ ಸಂಬಂಧ ಈ ಸಭೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ಚುನಾವಣೆಗಳಿಗೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಹಾಗೂ ಇತರೆ ಚುನಾವಣಾ ಮಾಹಿತಿಗಳನ್ನು ಭಾರತ ಚುನಾವಣಾ ಆಯೋಗದ ವೆಬ್ ಸೈಟ್, ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ವೆಬ್ ಸೈಟ್ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳ ವೆಬ್ ಸೈಟ್ ನಲ್ಲಿ ಕಾಲಕಾಲಕ್ಕೆ ಪ್ರಕಟಿಸಲಾಗುತ್ತಿದ್ದು, ರಾಜಕೀಯ ಪಕ್ಷಗಳು…