Author: admin

ಬೆಂಗಳೂರು: ಡಿ.ಕೆ.ಶಿವಕುಮಾರ್ ಅವರು ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ ಎಂಬ ವರದಿಗಳಿಗೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,  ನಾನು ಸ್ಪಷ್ಟವಾಗಿ ಹೇಳುತ್ತಿದ್ದೇನೆ. ಶಿವಕುಮಾರ್ ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ ಎಂಬ ವರದಿಗಳನ್ನು ನೋಡಿ ನನ್ನ ಕೆಲವು ಸ್ನೇಹಿತರು ಕರೆ ಮಾಡುತ್ತಿದ್ದಾರೆ ಎಂದು ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ನಾನು ನೋಡುತ್ತಿದ್ದೇನೆ. ಹುಟ್ಟಿನಿಂದಲೇ ನಾನು ಕಾಂಗ್ರೆಸ್ಸಿಗ, ನನ್ನ ನಿಲುವು ನಾನು ಹಿಂದೂ, ಮತ್ತು ಸಮಾಜದ ಪ್ರತಿಯೊಂದು ಸಂಸ್ಕೃತಿಯನ್ನು ನಾನು ನಂಬುತ್ತೇನೆ. ನನ್ನ ವೈಯಕ್ತಿಕ ನಂಬಿಕೆಯ ಜೊತೆಗೆ, ಎಲ್ಲರನ್ನೂ ಒಟ್ಟಿಗೆ ಕೊಂಡೊಯ್ಯುವುದು ಕಾಂಗ್ರೆಸ್ ಸಿದ್ಧಾಂತವಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಜನರು ಕಥೆಗಳನ್ನು ಹೆಣೆಯುತ್ತಿದ್ದಾರೆ. ಈಶಾ ಫೌಂಡೇಶನ್‌ ನ ಸದ್ಗುರುಗಳು ನನ್ನ ನಿವಾಸಕ್ಕೆ ಬಂದು ನನ್ನನ್ನು ಶಿವರಾತ್ರಿಗೆ ಆಹ್ವಾನಿಸಿದರು. ಅವರು ಮೈಸೂರಿನವರು ಮತ್ತು ಅವರ ಜ್ಞಾನಕ್ಕಾಗಿ ನಾನು ಅವರನ್ನು ಮೆಚ್ಚುತ್ತೇನೆ. ನಾನು ಬಿಜೆಪಿಗೆ ಹತ್ತಿರವಾಗುತ್ತಿದ್ದೇನೆ ಎಂದು ಸಾಮಾಜಿಕ ಮಾಧ್ಯಮಗಳು ವಿಶ್ಲೇಷಿಸುತ್ತಿವೆ. ನಾನು ಇನ್ನೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿಲ್ಲ ಎಂದು ಅವರು…

Read More

ಗುವಾಹಟಿ: ಅಸ್ಸಾಂನ ಮೊರಿಗಾಂವ್ ಜಿಲ್ಲೆಯಲ್ಲಿ 5.0 ತೀವ್ರತೆಯ ಭೂಕಂಪ ಗುರುವಾರ ಮುಂಜಾನೆ ಸಂಭವಿಸಿದ್ದು, ಭೂಕಂಪನಕ್ಕೆ ಇಲ್ಲಿನ ನಾಗರಿಕರು ಬೆಚ್ಚಿಬಿದ್ದಿದ್ದಾರೆ. ಅಸ್ಸಾಂನ ಕೇಂದ್ರ ಭಾಗ ಹಾಗೂ  ಗುವಾಹಟಿ ಮತ್ತು ರಾಜ್ಯದ ಇತರ ಭಾಗಗಳಲ್ಲಿಯೂ ಭೂಕಂಪನಗಳು ಸಂಭವಿಸಿವೆ. ಭೂಕಂಪದಿಂದ ಯಾರಿಗೂ ಯಾವುದೇ ಗಾಯ ಅಥವಾ ಯಾವುದೇ ಆಸ್ತಿಗಳಿಗೆ ಹಾನಿಯಾದ ವರದಿಯಾಗಿಲ್ಲ ಎಂದು ತಿಳಿದು ಬಂದಿದೆ. ಭೂಕಂಪವು ಭೂಮಿಯ 16 ಕಿಲೋಮೀಟರ್ ಆಳದಲ್ಲಿ ಆಗಿದ್ದು, ತಡರಾತ್ರಿ ಸುಮಾರು 2:25 ಗಂಟೆಗೆ ಈ ಕಂಪನ ಸಂಭವಿಸಿದೆ ಎಂದು ಭೂಕಂಪನದ ರಾಷ್ಟ್ರೀಯ ಕೇಂದ್ರವು ತಿಳಿಸಿದೆ. ಭೂಕಂಪದ ಕೇಂದ್ರಬಿಂದುವು ಗುವಾಹಟಿಯಿಂದ ಪೂರ್ವಕ್ಕೆ 52 ಕಿ.ಮೀ ದೂರದಲ್ಲಿ ದಾಖಲಾಗಿದೆ. ನೆರೆಯ ಕಾಮ್ರೂಪ್ ಮೆಟ್ರೋಪಾಲಿಟನ್, ನಾಗಾಂವ್, ಪೂರ್ವ ಕರ್ಬಿ ಆಂಗ್ಲಾಂಗ್, ಪಶ್ಚಿಮ ಕರ್ಬಿ ಆಂಗ್ಲಾಂಗ್, ಹೊಜೈ, ದಿಮಾ ಹಸಾವೊ, ಗೋಲಾಘಾಟ್, ಜೋರ್ಹತ್, ಶಿವಸಾಗರ್, ಕ್ಯಾಚಾರ್, ಕರೀಮ್‌ಗಂಜ್, ಹೈಲಕಂಡಿ, ಧುಬ್ರಿ, ದಕ್ಷಿಣ ಸಲ್ಮಾರಾ-ಮಂಕಚಾರ್ ಮತ್ತು ಗೋಲ್ಪಾರಾ ಜಿಲ್ಲೆಗಳ ಜನರಿಗೂ ಕಂಪನದ ಅನುಭವವಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್…

Read More

ತುಮಕೂರು:  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ 10+2 (ಪದವಿ ಪೂರ್ವ) ಮತ್ತು 10+2+3 (ಸ್ನಾತಕ ಪದವಿ) ವಿದ್ಯಾರ್ಹತೆ ಹೊಂದಿರುವ ಎಲ್ಲಾ ವಯೋಮಾನದ ವಿದ್ಯಾರ್ಥಿಗಳು ಯುಜಿಸಿ ಅನುಮೋದಿತ ಸ್ನಾತಕ(ಯು‌.ಜಿ)/ಸ್ನಾತಕೋತ್ತರ(ಪಿ.ಜಿ) ಕೋರ್ಸ್ ಗಳಿಗೆ ಪ್ರವೇಶಾತಿ‌ ಪಡೆಯಬಹುದಾಗಿದ್ದು, ಮೈಸೂರಿನ ಕರಾಮುವಿಯ ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ  2024–25ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಯ ಯುಜಿಸಿ ಅನುಮೋದಿತ ಕೋರ್ಸ್ ಗಳ ಪ್ರವೇಶಾತಿಗೆ ಆನ್ ಲೈನ್  ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಸ್ನಾತಕ/ ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಲಿಬ್.ಐ.ಎಸ್ಸಿ., ಬಿ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಎಸ್ಸಿ., ಎಂ.ಲಿಬ್‌.ಐ.ಎಸ್ಸಿ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ ಮತ್ತು ಪಿ.ಜಿ ಸರ್ಟಿಫಿಕೇಟ್., ಡಿಪ್ಲೊಮಾ., ಸರ್ಟಿಫಿಕೇಟ್ ಕೋರ್ಸ್ ಗಳಿಗೆ  ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ. ಮೇಲ್ಕಂಡ ಪದವಿಗಳಿಗೆ ಆನ್ ಲೈನ್ ನಲ್ಲಿ ಅರ್ಜಿ ಭರ್ತಿಮಾಡಿ ನಂತರ ತುಮಕೂರಿನ ಕರಾಮುವಿ ಪ್ರಾದೇಶಿಕ ಕೇಂದ್ರಕ್ಕೆ ಖುದ್ದಾಗಿ ಭೇಟಿ ನೀಡಿ ಆನ್ ಲೈನ್ ಮುಖಾಂತರ ಪ್ರವೇಶಾತಿ ಶುಲ್ಕ ಪಾವತಿಸಿ ಪ್ರವೇಶಾತಿ ಪಡೆಯಬಹುದು. ಪ್ರಥಮ ವರ್ಷದ ಪ್ರವೇಶಾತಿಗೆ 2025ರ ಮಾರ್ಚ್…

Read More

ತುಮಕೂರು:  ಸಿದ್ದಗಂಗಾ ಮಠದಲ್ಲಿ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಇಂದು ಸಿದ್ದಲಿಂಗೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ನಡೆಯುತ್ತಿದೆ. ಸಾವಿರಾರು ಭಕ್ತರ ಸಮ್ಮುಖದಲ್ಲಿ ಬ್ರಹ್ಮರಥೋತ್ಸವಕ್ಕೆ ಚಾಲನೆ ನೀಡಲಾಗಿದೆ.  ಬ್ರಹ್ಮರಥೋತ್ಸವಕ್ಕೆ ವಿಶೇಷ ಪೂಜೆ ಸಲ್ಲಿಸಿ ಚಾಲನೆ ನೀಡಲಾಯಿತು.  ಸಿದ್ದಗಂಗಾ ಮಠದ ಪೀಠಾಧ್ಯಕ್ಷರಾದ ಸಿದ್ದಲಿಂಗ ಶ್ರೀಗಳು ಬ್ರಹ್ಮರಥೋತ್ಸವಕ್ಕೆ ಚಾಲನೆ ನೀಡಿದರು. ವಿವಿಧ ಹೂಗಳಿಂದ‌ ಅಲಂಕಾರಗೊಂಡ ರಥೋತ್ಸವ ನಡೆಯುತ್ತಿದೆ. ಸಿದ್ದಗಂಗಾ ಮಠದ ಕಿರಿಯ ಶ್ರೀಗಳಾದ ಶಿವಸಿದ್ದೇಶ್ವರ ಸ್ವಾಮೀಜಿ ಹಾಗೂ ತುಮಕೂರು ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಲ್ಲಾ ಪಂ ಸಿಇಓ ಪ್ರಭು,  ಎಸ್ ಪಿ ಅಶೋಕ್, ಮಹಾನಗರ ಪಾಲಿಕೆ ಕಮಿಷನರ್ ಬಿ.ವಿ ಅಶ್ವಿಜಾ,  ಶಾಸಕ ಜಿ.ಬಿ ಜ್ಯೋತಿ ಗಣೇಶ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ತುಮಕೂರಿನ ಕ್ಯಾತಸಂದ್ರ ಬಳಿಯಿರುವ ಸಿದ್ದಗಂಗಾ ಮಠದಲ್ಲಿ ನಡೆಯುತ್ತಿರುವ  ಈ ಜಾತ್ರಾ ಮಹೋತ್ಸವಕ್ಕೆ ಜನಸಾಗರವೇ ಹರಿದುಬರುತ್ತಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೀದರ್: ಜಿಲ್ಲೆಯ ಔರಾದ ತಾಲೂಕಿನ ಕೌಠಾ(ಬಿ) ಗ್ರಾಮದ ಮನೆಯೊಂದರಲ್ಲಿ ಯಾರೂ ಇಲ್ಲದ ವೇಳೆ ಇಬ್ಬರು ಮುಸುಕುಧಾರಿಗಳು ಮನೆಗೆ ನುಗ್ಗಿ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ 25 ತೊಲೆ ಚಿನ್ನಾಭರಣ ಹಾಗೂ ನಗದು ಹಣ ದರೋಡೆಯಾಗಿದೆ ಎಂದು ಆರೋಪಿಸಿದ ಪ್ರಕರಣ ಪೊಲೀಸ್ ತನಿಖೆಯಲ್ಲಿ ಸುಳ್ಳು ಎಂದು ಸಾಬೀತಾಗಿದೆ. ಮನೆಯಲ್ಲಿ ನನ್ನ ಪತ್ನಿ ಒಬ್ಬಳೇ ಇದ್ದ ವೇಳೆ ಇಬ್ಬರು ಮುಸುಕುಧಾರಿಗಳು ಹಿಂಬಾಗಿಲಿನಿಂದ ಮನೆಗೆ ನುಗ್ಗಿ ಚಾಕುವಿನಿಂದ ಗಂಭೀರವಾಗಿ ಗಾಯಗೊಳಿಸಿ ಮನೆಯಲ್ಲಿದ್ದ 25 ತೊಲೆ ಚಿನ್ನಾಭರಣ ಹಾಗೂ 1 ಲಕ್ಷ ನಗದು ದರೋಡೆ ಮಾಡಿದ್ದಾರೆ ಎಂದು ಆರೋಪಿಸಿ ಕುಟುಂಬದ ಮುಖ್ಯಸ್ಥ ಓಂಕಾರ ಅಪ್ಪಾರಾವ್ ಗಾದೆಗೆ ಎಂಬುವವರ ಫೆ.21ರಂದು ನೀಡಿದ ದೂರಿನ ಮೇರೆಗೆ ಸಂತಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಘಟನೆ ನಡೆದ ದಿನವೇ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ನೇತೃತ್ವದ ತಂಡ ಭೇಟಿ ನೀಡಿ ಪರಿಶೀಲಿಸಿದರು. ಹಾಡುಹಗಲೇ ನಡೆದ ಈ ಘಟನೆಯಿಂದಾಗಿ ಜಿಲ್ಲೆಯ ಜನರಲ್ಲಿ ಭಾರೀ ಆತಂಕ ಆವರಿಸಿತು. ಈ ಪ್ರಕರಣವನ್ನು…

Read More

ತುಮಕೂರು: ಕಾಂಗ್ರೆಸ್ ಶಾಸಕ ಡಾ.ರಂಗನಾಥ್ ಕುಂಭ ಮೇಳದಲ್ಲಿ ಪುಣ್ಯ ಸ್ನಾನ ಮಾಡಿದರು. ತಾಯಿ ಹಾಗೂ ಕುಟುಂಬ ಸಮೇತ ಸಾಗಿ ತ್ರಿವೇಣಿ ಸಂಗಮದಲ್ಲಿ ಡಾ. ರಂಗನಾಥ ಮಿಂದೆದ್ದರು. ಜೊತೆಗೆ 10 ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರನ್ನು ಕರೆದುಕೊಂಡು ಶಾಸಕರು  ಪುಣ್ಯ ಸ್ನಾನ ಮಾಡಿಸಿದರು.  ಡಿಸಿಎಂ ಡಿಕೆಶಿ ಸಂಬಂಧಿಯಾಗಿರುವ ಶಾಸಕ ರಂಗನಾಥ್ ಅವರು ಡಿ.ಕೆ.ಶಿವಕುಮಾರ್ ಅವರು ಕುಂಭಮೇಳದಲ್ಲಿ ಸ್ನಾನ ಮಾಡಿದ ಬೆನ್ನಲ್ಲೇ ತಾವೂ ಸ್ನಾನ ಮಾಡಿದ್ದಾರೆ. ಕುಂಭ ಮೇಳದ ಬಗ್ಗೆ ಕಾಂಗ್ರೆಸ್ ಅಪಸ್ವರ ಎತ್ತಿರುವ ನಡುವೆಯೂ ಕಾಂಗ್ರೆಸ್ ಶಾಸಕ ಡಾ.ರಂಗನಾಥ್ ಪುಣ್ಯ ಸ್ನಾನ ಮಾಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಹಾಸನ: ಮಹಾಶಿವರಾತ್ರಿ ಪ್ರಯುಕ್ತ ಹಾಸನ ಜಿಲ್ಲೆಯ ರಾಮನಾಥಪುರ ಹೋಬಳಿಯ ಶಿರಧನಹಳ್ಳಿ ಗ್ರಾಮದ ಶ್ರೀ ಭೂಮಂಡಲ ಶ್ರೀ ಶನೈಶ್ಚರಸ್ವಾಮಿ ಕ್ಷೇತ್ರದಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಶ್ರೀ ಶನಿದೇವರು ಮತ್ತು ಮಸಣಿಕಮ್ಮ ವಿಗ್ರಹಗಳನ್ನು ಬೆಳ್ಳಿ ರಥದಲ್ಲಿ ಕುರಿಸಿ ರಾಮನಾಥಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮೆರವಣಿಗೆ ಮಾಡಲಾಯಿತು. ಈ ಸಂದರ್ಭದಲ್ಲಿ ವೀರಗಾಸೆ ನೃತ್ಯ ಜೊತೆ ಸಾವಿರಾರು ಭಕ್ತರು ಸೇರಿದ್ದರು. ಹಾಗೂ ಸಾವಿರಾರು ಸೇರಿದ ಭಕ್ತರಿಗೆ ಸನ್ನಿದಾನದಲ್ಲಿ  ಅನ್ನಸಂತಪರ್ಣೆ ಏರ್ಪಡಿಸಲಾಗಿತ್ತು. ಸೇರಿದ ಭಕ್ತರಿಗೆ ಸನ್ನಿದಿಯ ಆವರಣದಲ್ಲಿ ಶಿವರಾತ್ರಿ ಜಾಗರಣೆಂದೆ ಸನ್ನಿದಾನದಲ್ಲಿ ಶನಿಪ್ರಭಾವ ಅಥವಾ ರಾಜ್ ವಿಕ್ರಂ ಎಂಬ ಸುಂದರ ಪೌರಾಣಿಕ ನಾಟಕ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ವರದಿ: ಮಂಜು ಶ್ರವಣೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೀದರ್: ಮದ್ಯ ಸೇವಿಸಿ ಬಂದು ಕಿರುಕುಳ ನೀಡುತ್ತಿದ್ದ ಪತಿಯನ್ನು ತನ್ನ ಪೋಷಕರ ಜೊತೆ ಸೇರಿ ಪತ್ನಿಯೇ ಕೊಲೆ ಮಾಡಿರುವ ಘಟನೆ ಬೀದರ್ ಜಿಲ್ಲೆಯ ಔರಾದ ತಾಲೂಕಿನ ಬಾಚೆಪಳ್ಳಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ. ಶ್ರೀಧರ್ ಶಿವರಾಜ್ (30) ಕೊಲೆಯಾದ ವ್ಯಕ್ತಿ. ಇವರು  ಕಳೆದ ಐದಾರು ವರ್ಷಗಳ ಹಿಂದೆ ಪಕ್ಕದ ಗ್ರಾಮವೊಂದರ ಸವಿತಾ ಎಂಬುವರನ್ನು ಪ್ರೀತಿಸಿ ವಿವಾಹವಾಗಿದ್ದರು. ಮೃತರಿಗೆ ಇಬ್ಬರು ಗಂಡು ಮಕ್ಕಳಿದ್ದಾರೆ ಚಾಲಕ ಕೆಲಸಕ್ಕೆ ಹೋಗುತ್ತಿದ್ದ ಶ್ರೀಧರ್ ಆಗಾಗ ಕುಡಿದ ಅಮಲಿನಲ್ಲಿ ಮನೆಗೆ ಬಂದು ಪತ್ನಿಯೊಂದಿಗೆ ಜಗಳ ಮಾಡುತ್ತಿದ್ದ. ಗಂಡನ ಕಿರುಕುಳ ತಾಳಲಾರದೆ ಕೋಪಗೊಂಡ ಪತ್ನಿ ಸವಿತಾ ಫೆ.25 ರಂದು ತನ್ನ ಪೋಷಕರನ್ನು ಮನೆಗೆ ಕರೆಸಿಕೊಂಡಿದ್ದಾರೆ. ಈ ವೇಳೆ ಗಲಾಟೆ ನಡೆದಿದೆ ಎನ್ನಲಾಗಿದೆ. ಶ್ರೀಧರ್ ನ್ನು ಕೊಲೆ ಮಾಡುವ ಉದ್ದೇಶದಿಂದ ಸವಿತಾ ಹಾಗೂ ಅವರ ತಂದೆ –ತಾಯಿ ಶ್ರೀಧರ್ ಕೈಕಾಲುಗಳನ್ನು ಹಗ್ಗದಿಂದ ಕಟ್ಟಿ ಕಬ್ಬಿಣದ ಸಲಾಕೆಯಿಂದ ಮಾರಣಾಂತಿಕ ಹಲ್ಲೆ ನಡೆಸಿ ಅಲ್ಲಿಂದ ಪರಾರಿಯಾಗಿದ್ದಾರೆ. ತೀವ್ರವಾಗಿ ಹಲ್ಲೆಗೊಳಗಾದ ಶ್ರೀಧರ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು…

Read More

ತುಮಕೂರು: ಶಿರಾ–ಅಮರಪುರ ರಸ್ತೆ ಸಂಪೂರ್ಣ ಹಾಳಾಗಿದ್ದು, ರಸ್ತೆ ಗುಂಡಿ ಬಿದ್ದಿರುವ ಕಾರಣ  ಹಲವಾರು ಅಪಘಾತಗಳು ಸಂಭವಿಸಿ, ಕೆಲವರು  ಪ್ರಾಣ ಕಳೆದುಕೊಂಡಿದ್ದಾರೆ. ಇನ್ನು ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಕೈಕಾಲು ಫ್ಯಾಕ್ಚರ್ ಕೂಡ ಆಗಿದೆ. ಹಾಗಾಗಿ ಶಿರಾ ಅಮರಾಪುರ   ಯಮ ಸ್ವರೂಪಿ ರಸ್ತೆ ಶೀಘ್ರ ದುರಸ್ತಿ  ಮಾಡಬೇಕು ಎಂದು  ಒತ್ತಾಯಿಸಿ ಶಿರಾ ತಾಲೂಕಿನ ತೊಗರ ಗುಂಟೆ ಗೇಟ್ ಬಳಿ ಗ್ರಾಮಸ್ಥರು ಬೃಹತ್ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಪಿ ಎಲ್ ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಟಿ.ಡಿ. ಮಲ್ಲೇಶ್, ಮೇಲ್ಕುಂಟೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಟಿ.ಡಿ. ನರಸಿಂಹಮೂರ್ತಿ, ಬಂದ ಕುಂಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ತಿಮ್ಮೇಗೌಡ, ಗ್ರಾಮ ಪಂಚಾಯತಿ ಸದಸ್ಯ ಚಂದ್ರಶೇಖರ, ಚಂದ್ರ ಕುಮಾರ, ಟಿ.ಡಿ.ಕೃಷ್ಣ, ರಾಜು, ರಮೇಶ್, ಅಶೋಕ್ ಚಿಕ್ಕಣ್ಣ , ಆಫ್ರೋಜ್ ಸೇರಿದಂತೆ ನೂರಾರು ಜನ ಪಾಲ್ಗೊಂಡಿದ್ದರು. ಪ್ರತಿಭಟನೆಯ  ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ  ಲೋಕೋಪಯೋಗಿ ಎಇಇ ರಮೇಶ್, ಡಿ ವೈ ಎಸ್ ಪಿ ಶೇಖರ್,…

Read More

ತುಮಕೂರು: ರಾಜ್ಯ ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ಫೆಬ್ರವರಿ 27ರಂದು ಜಿಲ್ಲೆಗೆ ಭೇಟಿ ನೀಡಿ ವಿವಿಧ ಸಭೆ, ಸಮಾರಂಭಗಳಲ್ಲಿ ಪಾಲ್ಗೊಳ್ಳಲಿದ್ದಾರೆ. ಸಚಿವರು ಫೆ.27ರ ಬೆಳಿಗ್ಗೆ 10.30 ಗಂಟೆಗೆ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು, ಬೆಳಿಗ್ಗೆ 11 ಗಂಟೆಗೆ ನಗರದ ಇಂದಿರಾ ಕ್ಯಾಂಟೀನ್ ಮತ್ತು ಘನತ್ಯಾಜ್ಯ ನಿರ್ವಹಣಾ ಘಟಕವನ್ನು ಪರಿಶೀಲಿಸಲಿದ್ದಾರೆ. ನಂತರ ಬೆಳಿಗ್ಗೆ 11.30 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿ ಸಂಬಂಧಿಸಿದಂತೆ ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ. ನಗರದಿಂದ ಮಧ್ಯಾಹ್ನ 2 ಗಂಟೆಗೆ ಹೊರಟು 2.45 ಗಂಟೆಗೆ ಶಿರಾ ಪಟ್ಟಣದ ಇಂದಿರಾ ಕ್ಯಾಂಟೀನ್ಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು. ನಂತರ 3 ಗಂಟೆಗೆ ಶಿರಾ ನಗರಸಭೆಗೆ ಭೇಟಿ ನೀಡಿ 4 ಗಂಟೆಗೆ ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ತೆರಳಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4…

Read More