Author: admin

ತುಮಕೂರು: ಜಿಲ್ಲಾ ಪಂಚಾಯಿತಿ ವತಿಯಿಂದ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಫೆಬ್ರವರಿ 28ರಂದು ಬೆಳಿಗ್ಗೆ 10:30 ಗಂಟೆಗೆ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ನಗರದ ಜಿಲ್ಲಾ ಮಹಾತ್ಮಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ತರಬೇತಿ ಕಾರ್ಯಕ್ರಮ ನಡೆಯಲಿದ್ದು, ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ 2017 ಅಕ್ಟೋಬರ್ 31ರ ಪೂರ್ವದಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಮಂಜೂರಾದ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ, ವಿದ್ಯಾರ್ಹತೆ ಹೊಂದಿಲ್ಲದ/ಹೊಂದಿರುವ ಹಾಗೂ ಅನುಕಂಪದ ಆಧಾರದ ಮೇಲೆ ನೇಮಕಗೊಂಡು, ಜಿಲ್ಲಾ ಪಂಚಾಯಿತಿಯಿಂದ ಅನುಮೋದನೆಯಾಗದೇ ಸೇವೆ ಸಲ್ಲಿಸುತ್ತಿರುವ ಸುಮಾರು 766 ಸಿಬ್ಬಂದಿಗಳಿಗೆ ಅನುಮೋದನಾ ಪತ್ರ ವಿತರಣೆ ಮಾಡಲಾಗುವುದು ಎಂದು ಜಿಲ್ಲಾ ಪಂಚಾಯತಿ ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು: ಜಲಾನಯನ ಅಭಿವೃದ್ಧಿ ಇಲಾಖೆ, ಬೆಂಗಳೂರಿನ ರೈತ ಉತ್ಪಾದಕ ಸಂಸ್ಥೆಗಳ ಉತ್ಕೃಷ್ಟ ಕೇಂದ್ರ ಹಾಗೂ ಸಣ್ಣ ರೈತರ ಕೃಷಿ ವ್ಯಾಪಾರ ಒಕ್ಕೂಟದ ಸಹಯೋಗದಲ್ಲಿ ಫೆಬ್ರವರಿ 28 ರಿಂದ ಮಾರ್ಚ್ 2ರವರೆಗೆ ಬೆಂಗಳೂರಿನ ತೋಟಗಾರಿಕೆ ಮಹಾವಿದ್ಯಾಲಯದಲ್ಲಿ ರೈತ ಉತ್ಪಾದಕ ಸಂಸ್ಥೆ(ಎಫ್.ಪಿ.ಓ.)ಗಳ ಮೇಳವನ್ನು ಆಯೋಜಿಸಲಾಗಿದೆ. ಮೇಳವನ್ನು ಅಂದು ಬೆಳಿಗ್ಗೆ 10:30 ಗಂಟೆಗೆ ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ ಉದ್ಘಾಟಿಸಲಿದ್ದು, ಕಂದಾಯ ಸಚಿವ ಕೃಷ್ಣ ಬೈರೇಗೌಡ ಅಧ್ಯಕ್ಷತೆವಹಿಸಲಿದ್ದಾರೆ. ರೈತರನ್ನು ಒಟ್ಟುಗೂಡಿಸಿ ಅವರ ಉತ್ಪಾದನೆ ಹಾಗೂ ಮಾರುಕಟ್ಟೆ ಸಾಮರ್ಥ್ಯವನ್ನು ವೃದ್ಧಿಸಲು ರೈತ ಉತ್ಪಾದಕರ ಸಂಸ್ಥೆಗಳನ್ನು ರಚಿಸುವುದು ಸೂಕ್ತವೆಂದು ಪರಿಗಣಿಸಿ ಮೇಳವನ್ನು ಆಯೋಜಿಸಲಾಗಿದೆ. ಮೇಳದಲ್ಲಿ ಭಾರತ ಸರ್ಕಾರವು 2013ರಲ್ಲಿ 1956ರ ಕಂಪನಿ ಕಾಯ್ದೆಗೆ ತಿದ್ದುಪಡಿ ತಂದು ಕಂಪನಿ ಕಾಯ್ದೆಯಡಿ ರೈತ ಉತ್ಪಾದಕರ ಸಂಸ್ಥೆಗಳನ್ನು ನೋಂದಾಯಿಸಲು ಅವಕಾಶ ನೀಡಲಾಗಿದೆ. ರೈತ ಉತ್ಪಾದಕರ ಸಂಸ್ಥೆಯು ಪ್ರಾಥಮಿಕ ಸಂಸ್ಥೆಯಾಗಿದ್ದು, ಕೃಷಿಗೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಪಾಲ್ಗೊಂಡ ಸದಸ್ಯ ರೈತರಿಗೆ ತಾಂತ್ರಿಕ ಸಲಹೆ, ಸಾಮರ್ಥ್ಯ ಬಲವರ್ಧನೆ, ಉತ್ತಮ ಗುಣಮಟ್ಟದ ಪರಿಕರಗಳನ್ನು ಪೂರೈಸುವುದು, ಬೆಳೆದ ಉತ್ಪನ್ನಗಳಿಗೆ ಮೌಲ್ಯವರ್ಧನೆ ಮುಖಾಂತರ…

Read More

ಬೀದರ್: ಬೀದರ್ ಜಿಲ್ಲಾ ಕಮಲನಗರ ತಾಲ್ಲೂಕಿನ ಹೊಕ್ರಣಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ತಡೆಯುವ ನಿಟ್ಟಿನಲ್ಲಿ ಭಂಡಾರಕುಮಠಾ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಬ್ಯಾರಿಕೇಡ್ ಗಳನ್ನು ಅಳವಡಿಸಲಾಯಿತು. ಹೊಕ್ರಣಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸ್ಥಳವೆಂದು ಗುರುತಿಸಲಾದ ಡೊಂಗರಗಾಂವ ಕ್ರಾಸ್ ಮೂಲಕ ವಾಹನಗಳು ಅತೀ ವೇಗವಾಗಿ ಚಲಿಸುತ್ತಿರುವದನ್ನು ಗಮನಿಸಿದ ಹೊಕ್ರಣಾ ಪೊಲೀಸ್ ಠಾಣೆಯ ಪಿ.ಎಸ್.ಐ ಶೇಕಶಾಹ ಪಟೇಲ್ ರವರು, ಭಂಡಾರಕುಮಠಾ ಗ್ರಾಮ ಪಂಚಾಯತ್ ನ್ನು ಸಂಪರ್ಕಿಸಿ ಪಂಚಾಯತ್ ನ ಸಹಯೋಗದೊಂದಿಗೆ 6 ಬ್ಯಾರಿಕೆಡ್ ಗಳನ್ನು ಪಡೆದು ವಾಹನಗಳ ವೇಗ ಕಡಿಮೆ ಆಗುವಂತೆ ಅಳವಡಿಸಿದ್ದಾರೆ. ಅಮಾಯಕರ ಪ್ರಾಣ ರಕ್ಷಣೆ, ಅಪಘಾತ ತಡೆಯಲು ಮುಂಜಾಗೃತ ಕ್ರಮವಾಗಿ ಕಾರ್ಯ ಪ್ರವರ್ತರಾದ ಹೊಕ್ರಣಾ ಪೊಲೀಸ್ ಠಾಣೆಯ ಅಧಿಕಾರಿ, ಸಿಬ್ಬಂದಿರವರ ಕಾರ್ಯಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ್ ಗುಂಟಿ ಶ್ಲಾಘಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

ಔರಾದ: ಪಟ್ಟಣದ ಆರಾಧ್ಯ ದೈವ ಶ್ರೀ ಅಮರೇಶ್ವರರ ಜಾತ್ರೆ ನಿಮಿತ್ತ ಕಾಂಗ್ರೆಸ್ ಮುಖಂಡ ಡಾ.ಭೀಮಸೇನರಾವ್ ಸಿಂಧೆ ಅಮರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅರ್ಚನೆ, ನೆರವೇರಿಸಿ ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಸುನಿಲ ಕುಮಾರ ದೇಶಮುಖ, ಅಭಂಗರಾವ್ ಗಡದೆ, ಡಾ.ಮಹೇಶ್ ಫುಲಾರಿ, ಪಿ.ಎಸ್.ಐ.ವಾಸಿಮ್ ಪಟೇಲ್, ಸೇರಿದಂತೆ ಹಲವರು ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಕೆ.ಆರ್.ಪೇಟೆ: ಆಕಸ್ಮಿಕ ಬೆಂಕಿ ಬಿದ್ದ ಪರಿಣಾಮವಾಗಿ ಮನೆಯೊಂದು ಆಹುತಿಯಾಗಿರುವ ಸ್ಥಳಕ್ಕೆ ಮನ್ಮುಲ್ ನಿರ್ದೇಶಕರಾದ ಡಾಲು ರವಿ ಅವರು ಗ್ರಾಮಕ್ಕೆ ಭೇಟಿ ಕೊಟ್ಟ ಸಾಂತ್ವನ ಹೇಳಿ ಧನಸಹಾಯ ನೀಡಿದರು. ತಾಲ್ಲೂಕು ಸಂತೆಬಾಚಹಳ್ಳಿ ಹೋಬಳಿ ಹರಿಯಾಲದಮ್ಮ ದೇವಸ್ಥಾನ ಮಾರೇನಹಳ್ಳಿ ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಇಡೀ ಮನೆಯು ಸುಟ್ಟು ಕರಕಲಾಗಿರುವ ಘಟನೆ ಸಂಭವಿಸಿದೆ. ಮನೆಯ ಬೀರುವಿನಲ್ಲಿದ್ದ 1ಲಕ್ಷದ 80 ಸಾವಿರ ನಗದು ಹಣ, 90 ಗ್ರಾಂ ಚಿನ್ನ,50ಗ್ರಾಂ ಬೆಳ್ಳಿ ಹಾಗೂ ಬಟ್ಟೆಬರೆಗಳು,ಜಮೀನು ಸಂಬಂಧಿಸಿದ ರೆಕಾರ್ಡ್ಸ್‌ಗಳು,ಅಂಗವಿಕಲರ ಪ್ರಮಾಣ ಪತ್ರಗಳು ಸೇರಿದಂತೆ ಮನೆಯಲ್ಲಿದ್ದ ಪಾತ್ರೆಗಳು ಸಂಪೂರ್ಣವಾಗಿ ಭಸ್ಮವಾಗಿವೆ ಎಂದು ಕುಟುಂಬದ ಸದಸ್ಯರು ತಮ್ಮ ಅಳಲನ್ನು ತೋಡಿಕೊಂಡರು. ಯಲಾದಹಳ್ಳಿ ಗ್ರಾಮದ ಮೂರ್ತಿ ಶಾರದಮ್ಮ ಅವರು ಮಾರೇನಹಳ್ಳಿ ಗ್ರಾಮದಲ್ಲಿ ವಾಸವಾಗಿದ್ದರು. ದಂಪತಿಗಳಿಬ್ಬರು ಧರ್ಮಸ್ಥಳಕ್ಕೆ ಪಾದಯಾತ್ರೆ ಮೂಲಕ ಪಯಣ ಬೆಳೆಸಿದ್ದ ಸಂದರ್ಭದಲ್ಲಿ ಈ ಘಟನೆಯು ಸಂಭವಿಸಿದೆ. ಘಟನೆಯ ಸ್ಥಳಕ್ಕೆ ವಿಷಯ ತಿಳಿದ ಮನ್ಮುಲ್ ನಿರ್ದೇಶಕರಾದ ಡಾಲು ರವಿ ಆಗಮಿಸಿ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿ ಧನ ಸಹಾಯ ಮಾಡುವ…

Read More

ಬೆಂಗಳೂರು: ಮೂಡಾ ಹಗರಣವನ್ನು ಸಿಬಿಐಗೆ ವಹಿಸಿ ತನಿಖೆ ಎದುರಿಸಿ. ತಾವು ಸತ್ಯವಂತರಾಗಿದ್ದರೆ ಸಿಬಿಐ ತನಿಖೆ ಬಗ್ಗೆ ಭಯವೇಕೆ? ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ವಿಪಕ್ಷ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ. ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಮೂಡಾ ಹಗರಣದಲ್ಲಿ ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಿ ಕ್ಲೀನ್ ಚಿಟ್ ನೀಡಿದ್ದಾರೆ ಎಂದು ಬೀಗುತ್ತಿರುವ ಸಿಎಂ ಸಿದ್ದರಾಮಯ್ಯ ನವರೇ, ಲೋಕಾಯುಕ್ತ ತನಿಖೆ ಬಗ್ಗೆ ನಿಮ್ಮ ಪರಮಾಪ್ತ ಸಚಿವ ಕೆ.ಎನ್.ರಾಜಣ್ಣ ಅವರು ಏನು ಹೇಳಿದ್ದಾರೆ ನೋಡಿ ಎಂದು ವ್ಯಂಗ್ಯವಾಡಿದ್ದಾರೆ. ಯಾವುದೇ ಪ್ರಕರಣವನ್ನ ಲೋಕಾಯುಕ್ತ ತನಿಖೆಗೆ ಕೊಡುವುದೂ ಒಂದೇ, ಸ್ಮಶಾನಕ್ಕೆ ಹೋಗುವುದೂ ಒಂದೇ ಎಂದು ಸರ್ಟಿಫಿಕೇಟ್ ಕೊಡುವ ಮೂಲಕ ಮೂಡಾ ಹಗರಣವನ್ನು ತಾವು ಹೇಗೆ ಮುಚ್ಚಿಹಾಕಿ ಸತ್ಯವನ್ನು ಸಮಾಧಿ ಮಾಡಲು ಹೊರಟಿದ್ದೀರಿ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. ಗ್ಯಾರಂಟಿಗಳಿಗೆ ಮುಂದುವರೆಯುವ ಗ್ಯಾರಂಟಿ ಇಲ್ಲ!! ಅಧಿಕಾರಕ್ಕೇರಲು ಅವಾಸ್ತವಿಕ ಗ್ಯಾರಂಟಿಗಳನ್ನು ಘೋಷಿಸಿದ್ದ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸಾಧ್ಯವಾಗದೆ ಗ್ಯಾರಂಟಿಗಳನ್ನು ಬಂದ್ ಮಾಡಲು ಹೊರಟಿದೆ ಎಂದು ಟೀಕಿಸಿದ್ದಾರೆ. ನಮ್ಮತುಮಕೂರಿನ…

Read More

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಕ್ಯಾಲೆಂಡರ್ ನ್ನು ಮುಂದಿನ ಬಜೆಟ್ ಅಧಿವೇಶನದಲ್ಲಿ ಬಿಡುಗಡೆ ಮಾಡಿ, ಹಣ ಜಮಾ ಮಾಡುವ ದಿನಾಂಕ ನಿಗದಿ ಮಾಡಿ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಸಮಯಕ್ಕೆ ಸರಿಯಾಗಿ ಫಲಾನುಭವಿಗಳಿಗೆ ಡಿಬಿಟಿ ವರ್ಗಾವಣೆಯನ್ನು ಖಚಿತಪಡಿಸಬೇಕೆಂದು ಒತ್ತಾಯಿಸಿರುವ ಅವರು, ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ಗ್ಯಾರಂಟಿ ಯೋಜನೆಯ ಹಣ ಬಿಡುಗಡೆ ವಿಳಂಬ ಸಾಕು, ಕಾರಣ ಬೇಡ, ಕಟಾ ಕಟ್ ಹಣ ವರ್ಗಾಯಿಸಿ ಎಂದು ಆಗ್ರಹಿಸಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಗೃಹಲಕ್ಷ್ಮಿ ಮತ್ತು ಯುವ ನಿಧಿ ಸೇರಿದಂತೆ 5 ಗ್ಯಾರಂಟಿ ಯೋಜನೆಗಳ ಭರವಸೆಯೊಂದಿಗೆ ಅಧಿಕಾರಕ್ಕೆ ಏರಿತ್ತು. ಪ್ರತಿ ತಿಂಗಳು ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡುವುದಾಗಿ ಹೇಳಿತ್ತು ಎಂದಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯನವರು 4 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ರೂಪಿಸುವಲ್ಲಿ ನಿರತರಾಗಿದ್ದಾರೆ. ವಿಪರ್ಯಾಸವೆಂದರೆ, ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಹಣಕ್ಕಾಗಿ 3-4 ತಿಂಗಳು ಕಾಯಬೇಕಾಗಿದೆ. ಯಾವುದಾದರೂ ಚುನಾವಣೆಗಳು ಸಮೀಪಿಸಿದಾಗ…

Read More

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಕ್ಯಾಲೆಂಡರ್ ನ್ನು ಮುಂದಿನ ಬಜೆಟ್ ಅಧಿವೇಶನದಲ್ಲಿ ಬಿಡುಗಡೆ ಮಾಡಿ, ಹಣ ಜಮಾ ಮಾಡುವ ದಿನಾಂಕ ನಿಗದಿ ಮಾಡಿ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಸಮಯಕ್ಕೆ ಸರಿಯಾಗಿ ಫಲಾನುಭವಿಗಳಿಗೆ ಡಿಬಿಟಿ ವರ್ಗಾವಣೆಯನ್ನು ಖಚಿತಪಡಿಸಬೇಕೆಂದು ಒತ್ತಾಯಿಸಿರುವ ಅವರು, ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿಕೊಂಡಿದ್ದಾರೆ. ಗ್ಯಾರಂಟಿ ಯೋಜನೆಯ ಹಣ ಬಿಡುಗಡೆ ವಿಳಂಬ ಸಾಕು, ಕಾರಣ ಬೇಡ, ಕಟಾ ಕಟ್ ಹಣ ವರ್ಗಾಯಿಸಿ ಎಂದು ಆಗ್ರಹಿಸಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಗೃಹಲಕ್ಷ್ಮಿ ಮತ್ತು ಯುವ ನಿಧಿ ಸೇರಿದಂತೆ 5 ಗ್ಯಾರಂಟಿ ಯೋಜನೆಗಳ ಭರವಸೆಯೊಂದಿಗೆ ಅಧಿಕಾರಕ್ಕೆ ಏರಿತ್ತು. ಪ್ರತಿ ತಿಂಗಳು ಹಣವನ್ನು ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡುವುದಾಗಿ ಹೇಳಿತ್ತು ಎಂದಿದ್ದಾರೆ. ಮುಖ್ಯಮಂತ್ರಿಗಳು ಹಾಗೂ ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯನವರು 4 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ರೂಪಿಸುವಲ್ಲಿ ನಿರತರಾಗಿದ್ದಾರೆ. ವಿಪರ್ಯಾಸವೆಂದರೆ, ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಹಣಕ್ಕಾಗಿ 3-4 ತಿಂಗಳು ಕಾಯಬೇಕಾಗಿದೆ. ಯಾವುದಾದರೂ ಚುನಾವಣೆಗಳು ಸಮೀಪಿಸಿದಾಗ…

Read More

ಅಮೃತಸರ/ಜಮ್ಮು: ಪಂಜಾಬ್ ನ ಪಠಾಣ್ ಕೋಟ್ನ ಅಂತಾರಾಷ್ಟ್ರೀಯ ಗಡಿಯಲ್ಲಿ ಬಿಎಸ್ಎಫ್ ಪಡೆಗಳು ಪಾಕಿಸ್ತಾನಿ ಒಳನುಸುಳುಕೋರನನ್ನು ಗುಂಡಿಕ್ಕಿ ಕೊಂದಿದೆ. ಗಡಿ ಭದ್ರತಾಪಡೆ ಸಿಬ್ಬಂದಿಯೂ ಉದ್ದಕ್ಕೂ ಬಾರ್ಡರ್ ಔಟ್ ಪೋಸ್ಟ್ ತಶ್ವತನ್ ಪ್ರದೇಶದಲ್ಲಿ ಕೆಲವು ಅನುಮಾನಾಸ್ಪದ ಚಲನವಲನವನ್ನು ಗಮನಿಸಿದ್ದರು. ನುಸುಳುಕೋರನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಹತ್ಯೆಗೀಡಾದ ವ್ಯಕ್ತಿಯ ಗುರುತು ಪತ್ತೆ ಮಾಡಲಾಗುತ್ತಿದೆ. ಘಟನೆಯ ಬಗ್ಗೆ ಪಾಕಿಸ್ತಾನ ರೇಂಜರ್ಗಳೊಂದಿಗೆ ತೀವ್ರ ಪ್ರತಿಭಟನೆಯನ್ನು ದಾಖಲಿಸಲಾಗುವುದು ಎಂದು ಬಿಎಸ್ಎಫ್, ಜಮ್ಮು ಗಡಿರೇಖೆಯ ವಕ್ತಾರರು ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ನವದೆಹಲಿ: ಅಮೆರಿಕದಲ್ಲಿ ಕಠಿಣ ವಲಸೆ ನಿಯಮ ಜಾರಿಗೆ ತಂದ ಬೆನ್ನಲ್ಲೇ ಇದೀಗ ಭಾರತವೂ ಕಠಿಣ ವಲಸೆ ನಿಯಮ ಜಾರಿಗೆ ತರಲು ಮುಂದಾಗಿದೆ. ಮಾ.10 ರಂದು ಸಂಸತ್ತಿನ ಬಜೆಟ್ ಅಧಿವೇಶನ ನಡೆಯಲಿದೆ. ಈ ಅಧಿವೇಶನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಲಸೆ ಮತ್ತು ಅಕ್ರಮ ವಿದೇಶಿ ವಲಸಿಗರ ಮಸೂದೆಯನ್ನು ಮಂಡಿಸುವ ಸಾಧ್ಯತೆಯಿದೆ. ಭಾರತದಲ್ಲಿ ಪಾಸ್ ಪೋರ್ಟ್ ಕಾಯ್ದೆ 1920, ವಿದೇಶಿಯರ ನೋಂದಣಿ ಕಾಯ್ದೆ 1939, ವಿದೇಶಿಯರ ಕಾಯ್ದೆ 1946 ಮತ್ತು ವಲಸೆ ಕಾಯ್ದೆ 2000, ಇವು ಪ್ರಸ್ತುತ ಭಾರತದಲ್ಲಿ ವಿದೇಶಿಯರಿಗೆ ಸಂಬಂಧಿಸಿದ ವಿವಿಧ ಅಂಶಗಳನ್ನು ನಿಯಂತ್ರಿಸುತ್ತವೆ. ಪ್ರಸ್ತಾವಿತ ಕಾಯ್ದೆಯು ಅಸ್ತಿತ್ವದಲ್ಲಿರುವ 4 ಕಾನೂನುಗಳನ್ನು ರದ್ದುಗೊಳಿಸಿ, ನೂತನ ಕಾನೂನು ಜಾರಿಗೆ ತರುವ ಸಾಧ್ಯತೆಯಿದೆ ಎನ್ನಲಾಗಿದೆ. ಮಸೂದೆಯು 35 ಷರತ್ತುಗಳು ಮತ್ತು ಹಲವಾರು ಕಾನೂನುಗಳನ್ನು ಒಳಗೊಂಡಿರುವ 6 ಅಧ್ಯಾಯಗಳನ್ನು ಹೊಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More