Subscribe to Updates
Get the latest creative news from FooBar about art, design and business.
- ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ
- ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!
- ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
- ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ
- ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ
- ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’
- ಬೆಳಕುಣಿ (ಚೌದ್ರಿ)–ಮುಂಗನಾಳ ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಚಕಾರ: ತಕ್ಷಣ ದುರಸ್ತಿಗೆ ಜೀವನ್ ಮಾಳೆಗೆ ಆಗ್ರಹ
- ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: FIR ದಾಖಲು
Author: admin
ತುಮಕೂರು: ಪ್ರತಿಯೊಬ್ಬ ಗ್ರಾಹಕನು ತಾನು ಖರೀದಿಸಿದ ವಸ್ತು ಹಾಗೂ ಪಡೆದ ಸೇವೆಯಲ್ಲಿ ನ್ಯೂನ್ಯತೆ/ಕೊರತೆಗಳು ಕಂಡು ಬಂದರೆ ಪ್ರಶ್ನಿಸುವ ಹಕ್ಕನ್ನು ಬೆಳೆಸಿಕೊಳ್ಳಬೇಕೆಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಜಿ.ಟಿ.ವಿಜಯಲಕ್ಷ್ಮೀ ಕರೆ ನೀಡಿದರು. ಜಿಲ್ಲಾಡಳಿತ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಹಾಗೂ ವಿದ್ಯೋದಯ ಕಾನೂನು ಕಾಲೇಜಿನ ಸಹಯೋಗದಲ್ಲಿ ಮಂಗಳವಾರ ಆಯೋಜಿಸಿದ್ದ ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಹಕರು ಯಾವುದೇ ಸಾಮಗ್ರಿ ಖರೀದಿಸಿದಲ್ಲಿ ಕಡ್ಡಾಯವಾಗಿ ವ್ಯಾಪಾರಸ್ಥರಿಂದ ರಸೀದಿ ಪಡೆಯಬೇಕು. ಸಾಮಗ್ರಿ ಕೊಳ್ಳುವ ಮುನ್ನ ನಿವ್ವಳ ತೂಕ, ಅಳತೆ, ತಯಾರಾದ ತಿಂಗಳು ಮತ್ತು ವರ್ಷ, ಗರಿಷ್ಠ ಮಾರಾಟ ಬೆಲೆ(ಎಂಆರ್ ಪಿ), ತಯಾರಕರ ಹೆಸರು, ಮತ್ತಿತರ ಮಾಹಿತಿಯನ್ನು ಗ್ರಾಹಕ ಹೊಂದಿರಬೇಕು. ಎಂಆರ್ಪಿ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ವ್ಯಾಪಾರಸ್ಥರನ್ನು ಪ್ರಶ್ನಿಸುವ ಹಕ್ಕು ಗ್ರಾಹನಿಗಿರುತ್ತದೆ ಎಂದು ತಿಳಿಸಿದರು. ಗ್ರಾಹಕ ಕಾಯ್ದೆಯನ್ವಯ ಯಾವುದೇ ವ್ಯಾಪಾರ/ವ್ಯವಹಾರಗಳನ್ನು ಪ್ರಮಾಣಬದ್ದ…
ಬೀದರ್: ಬೈಕ್ ಗೆ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಭಾಲ್ಕಿ ತಾಲೂಕಿನ ದಾಡಗಿ ಕ್ರಾಸ್ ಬಳಿ ಮಂಗಳವಾರ ನಡೆದಿದೆ. ಔರಾದ್ ತಾಲ್ಲೂಕಿನ ಬೆಳಕೋಣಿ (ಚೌಧರಿ) ಗ್ರಾಮದ ಆಕಾಶ ದಿಲೀಪ (28) ಮೃತ ಯುವಕ ಎಂದು ಗುರುತಿಸಲಾಗಿದೆ. ಮೃತರಿಗೆ ತಂದೆ, ತಾಯಿ ಹಾಗೂ ಇಬ್ಬರು ಸಹೋದರಿಯರು ಇದ್ದಾರೆ. ಹುಮನಾಬಾದ್ ಕಡೆಯಿಂದ ಭಾಲ್ಕಿಗೆ ತೆರಳುತ್ತಿದ್ದ ಬಸ್, ಬೈಕ್ ಡಿಕ್ಕಿ ಹೊಡೆದಿದೆ. ಬೈಕ್ ಮೇಲಿಂದ ಕೆಳಗೆ ಬಿದ್ದ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಖಟಕಚಿಂಚೋಳಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಕರ್ನಾಟಕದ ತುಮಕೂರು ನಗರದ ಪ್ರಮುಖ ಸ್ಥಳದಲ್ಲಿ ಒಂದು ಎಕರೆ ಜಾಗದಲ್ಲಿ ಮಂದಿರವನ್ನು ಕೆಡವಿ, ಬಿಜೆಪಿ ಸರಕಾರ ಅಸ್ತಿತ್ವದಲ್ಲಿದ್ದ ಸಂದರ್ಭದಲ್ಲಿ ಇಸ್ಲಾಮಿಕ್ ಎಜುಕೇಷನ್ ಟ್ರಸ್ಟ್ ಗೆ 30 ವಷಗಳ ಕಾಲಕ್ಕೆ ಭೋಗ್ಯಕ್ಕೆ ನೀಡಿತ್ತು. ಇದರ ವಿರುದ್ದ ಆಂದೋಲನ ರೂಪಿಸಿದ್ದೇವೆ ಎಂದು ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ ಅವರು, ತುಮಕೂರು ಬಿಜೆಪಿ ಶಾಸಕರೊಬ್ಬರು ಇದಕ್ಕೆ ಸಹಕರಿಸಿದ್ದು ಇದರ ವಿರುದ್ದ ಹಿಂದೂ ಪರ ಸಂಘಟನೆಗಳು ಆಂದೋಲನ ಆರಂಭಿಸಿದ್ದೇವೆ. ನ್ಯಾಯಾಲಯದಲ್ಲಿಯೂ ದಾವೆ ಹೂಡಿದ್ದೇವೆ. ರಾಜ್ಯದಲ್ಲಿ ಸರಕಾರಿ ಜಾಗ ವಶಕ್ಕೆ ಪಡೆಯಲು ಯತ್ನಿಸಲಾಗುತ್ತಿದ್ದು ತುಮಕೂರಿನಿಂದ ಆಂದೋಲನ ಆರಂಭಿಸಿದ್ದೇವೆ ಎಂದರು. ತುಮಕೂರು ನಗರ ಬಿಜೆಪಿ ಶಾಸಕರು 1 ಎಕರೆ ಜಾಗವನ್ನು ಕಮಿಷನ್ ಪಡೆದು ಹಸ್ತಾಂತರಕ್ಕೆ ಸಹಕರಿಸಿರಬಹುದು. ಅದನ್ನು ಅವರು ಸ್ಪಷ್ಟಪಡಿಸಬೇಕು. ಸಮಾಜದ ಮುಂದೆ ಹೇಳಿಕೆ ನೀಡಬೇಕು, ಹಣ್ಣು ವ್ಯಾಪಾರಿಗಳನ್ನು ಇಲ್ಲಿಂದ ಓಡಿಸಿ ಮಂದಿರ ಕೆಡವಿದ್ದಾರೆ. ಒಂದು ಇಂಚು ಜಾಗವನ್ನು ಸಹ ಕೊಡುವುದಿಲ್ಲ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ತಿಪಟೂರು: ಮಾ.20ರಂದು ತುಮಕೂರಿನಲ್ಲಿ ನಡೆಯಲಿರುವ ಭಾರತದ ಅಸ್ಪಶ್ಯರ ಮೊದಲ ಪ್ರತಿರೋಧ ಚಳವಳಿ, ಮಹಾಡ್ ಸತ್ಯಾಗ್ರಹದ ನೆನಪು ಕಾರ್ಯಕ್ರಮವನ್ನ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಆಯೋಜನೆ ಮಾಡಿದ್ದು, ದಲಿತ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ತಿಪಟೂರು ತಾಲೂಕು ಸಂಚಾಲಕ ಗಡಬನಹಳ್ಳಿ ಚಂದ್ರಶೇಖರಯ್ಯ ತಿಳಿಸಿದರು. ನಗರದ ಕೌಸ್ತುಭ ಹೋಟೆಲ್ ಸಭಾಂಗಣದಲ್ಲಿ ಆಯೋಜಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು , ತುಮಕೂರಿನ ಜಿಲ್ಲಾ ಆಸ್ಪತ್ರೆಯ ಸಭಾಂಗಣದಲ್ಲಿ ಮಾ.20ರಂದು ನಡೆಯುತ್ತಿರುವ ಭಾರತದ ಅಸ್ಪೃಶ್ಯರ ಮೊದಲ ಪ್ರತಿರೋಧ ಚಳವಳಿಯ ನೆನಪು ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ತಿಳಿಸಿದರು. ತಿಪಟೂರು ತಾಲೂಕಿನಾದ್ಯಂತ ದಲಿತ ಸಂಘಟನೆಗಳ ಮುಖಂಡರು, ಹಿರಿಯ ಮಹಿಳೆಯರು ಸೇರಿದಂತೆ ನೂರಾರು ಜನ ಭೀಮ ಬಂಧುಗಳುಈ ಮಹಾಡ್ ಸತ್ಯಾಗ್ರಹ ನೆನಪು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ಮಹಾಡ್ ಸತ್ಯಾಗ್ರಹ ಆಧುನಿಕ ಭಾರತದ ಇತಿಹಾಸದಲ್ಲೇ ಅತ್ಯಂತ ಮಹತ್ವವಾಗಿದ್ದು ಭಾರತದ ಮಟ್ಟದಲ್ಲಿ ದಲಿತ ಚಳವಳಿಗೆ ಅಡಿಪಾಯ ಹಾಕಿದ ಘಟನೆ ಎಂದು ಕರೆಯಲಾಗುತ್ತದೆ ಎಂದರು. ಬಾಬಾ ಸಾಹೇಬರು ಈ ಮೂಲಕ ಮಾನವ ಹಕ್ಕುಗಳನ್ನು ಎತ್ತಿ…
ಬೆಂಗಳೂರು: ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಮನಗರದ ಬಿಡದಿಯಲ್ಲಿ ಮಾಡಿಕೊಂಡಿರುವ ಒತ್ತುವರಿಯನ್ನು ಕೋರ್ಟ್ ಆದೇಶದಂತೆ ಕಂದಾಯ ಇಲಾಖೆ ಒತ್ತುವರಿ ತೆರವು ಮಾಡಲು ಮುಂದಾಗಿದೆ. ಪ್ರಭಾವಿ ರಾಜಕಾರಣಿಯೊಬ್ಬರ, ಅದರಲ್ಲೂ ಕೇಂದ್ರ ಸಚಿವರೊಬ್ಬರ ವಿರುದ್ಧ ಒತ್ತುವರಿ ಕೆಲವು ಕಾರ್ಯಾಚರಣೆಗೆ ರಾಜ್ಯ ಸರ್ಕಾರ ಮುಂದಾಗಿರುವ ಅಪರೂಪದ ಪ್ರಕರಣ ಇದಾಗಿದೆ. ಪ್ರಕರಣ ಸಂಬಂಧ ಕಂದಾಯ ಇಲಾಖೆ ಎಸ್ ಐಟಿ ರಚನೆ ಮಾಡಿಕೊಂಡಿತ್ತು ಬಿಡದಿಯ ಕೇತಗಾನಹಳ್ಳಿಯ ಸರ್ವೆ ನಂಬರ್ 7,8,9,10,16,17 ಮತ್ತು 79ರಲ್ಲಿ ಭೂ ಒತ್ತುವರಿಯಾಗಿದೆ ಎಂದು ಆರೋಪ ಕೇಳಿ ಬಂದಿತ್ತು. 14 ಎಕರೆ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಳ್ಳಲಾಗಿದೆ ಎಂಬ ಆರೋಪದ ವಿಚಾರದಲ್ಲಿ ತೆರವು ಕಾರ್ಯಾಚರಣೆ ಮಾಡಲು ಹೈಕೋರ್ಟ್ ಆದೇಶ ನೀಡಿತ್ತು. ಈ ಹಿನ್ನೆಲೆ ಕಂದಾಯ ಇಲಾಖೆ ಹಾಗೂ ಸರ್ವೆ ಇಲಾಖೆಯಿಂದ ಜಂಟಿ ಸರ್ವೇ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿ ಇಂದು ಒತ್ತುವರಿ ಭೂಮಿಯ ತೆರವು ಕಾರ್ಯಾಚರಣೆಗೆ ಕಂದಾಯ ಇಲಾಖೆ ಮುಂದಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ತುಮಕೂರು: ತುಮಕೂರು ವಿವಿಯಲ್ಲಿ ದೇಹಕ್ಕೆ ಹಾಗೂ ಮೆದುಳಿಗೆ ಎರಡಕ್ಕೂ ಪ್ರಸಾದದ ರೂಪದಲ್ಲಿ ಆಹಾರ ಹಾಗೂ ಶಿಕ್ಷಣವನ್ನು ನೀಡುತ್ತಿರುವುದು ಶ್ಲಾಘನೀಯ ಎಂದು ಪಾವಗಡ ಶ್ರೀ ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷರಾದ ಸ್ವಾಮೀ ಜಪಾನಂದ ಜೀ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯದ ಅನ್ನಪೂರ್ಣೇಶ್ವರಿ ಮಧ್ಯಾಹ್ನದ ಭೋಜನ ಯೋಜನೆ ಮೂರನೇ ವರ್ಷಕ್ಕೆ ಕಾಲಿಟ್ಟ ಸಂದರ್ಭದಲ್ಲಿ ಮಾತನಾಡಿ, ಇನ್ನು ಮುಂದೆ ವಾರದಲ್ಲೊಂದು ದಿನ ಸಿಹಿತಿನಿಸು ಹಾಗೂ ಮಜ್ಜಿಗೆ ವಿತರಿಸಲಾಗುವುದು ಎಂದು ಮಾಹಿತಿ ನೀಡಿದರು. ವಿವಿಯ ಕುಲಸಚಿವೆ ನಾಹಿದಾ ಜಮ್ ಜಮ್ ಮಾತನಾಡಿ, ಈ ಯೋಜನೆಯಿಂದ ನಮ್ಮ ವಿದ್ಯಾರ್ಥಿಗಳಲ್ಲಿ ಆರೋಗ್ಯ ಸುಧಾರಿಸಿದೆ. ಸುಸಂಸ್ಕೃತ ಪ್ರಜೆಯನ್ನು ರೂಪಿಸುವಲ್ಲಿ ನಮ್ಮ ಈ ಯೋಜನೆಯು ಮುಖ್ಯ ಪಾತ್ರ ವಹಿಸಿದೆ. ಇದರಿಂದಾಗಿ ಪ್ರವೇಶಾತಿ ಕೂಡ ಗಣನೀಯವಾಗಿ ಏರಿಕೆಯಾಗಿದೆ ಎಂದರು. ವಿವಿಯ ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಮಾತನಾಡಿ, ಅನ್ನಪೂರ್ಣೇಶ್ವರಿ ಯೋಜನೆಯು ಮೂರನೆಯ ವರ್ಷಕ್ಕೆ ಕಾಲಿಟ್ಟಿರುವುದು ಸಂತೋಷ ತಂದಿದೆ. ಮುಂದಿನ ದಿನಗಳಲ್ಲಿ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಯೋಜನೆಯನ್ನು ಜಾರಿಗೊಳಿಸುವ ಆಲೋಚನೆಯಿದೆ. ಈ ವರ್ಷ ಒಟ್ಟು 3,000 ವಿದ್ಯಾರ್ಥಿಗಳನ್ನು ತಲುಪುವ ಗುರಿಯನ್ನು ಹೊಂದಿದ್ದೇವೆ…
ತುಮಕೂರು: ಸ್ಪರ್ಧಾತ್ಮಕ ಜಗತ್ತಿಗೆ ಕಂಪ್ಯೂಟರ್ ಜ್ಞಾನ ಮತ್ತು ಅದರ ಬಳಕೆ ಅನಿವಾರ್ಯ. ವಿದ್ಯಾಭ್ಯಾಸದ ಸಮಯದಿಂದಲೇ ವಿದ್ಯಾರ್ಥಿಗಳು ಕಂಪ್ಯೂಟರ್ ಜ್ಞಾನ ಪಡೆದುಕೊಂಡರೆ ಭವಿಷ್ಯ ಉಜ್ವಲವಾಗುವುದು ಎಂದು ತುಮಕೂರು ವಿಶ್ವವಿದ್ಯಾನಿಲಯದ ಪರೀಕ್ಷಾಂಗ ಕುಲಸಚಿವ ಪ್ರೊ. ಪ್ರಸನ್ನ ಕುಮಾರ್ ಕೆ. ಹೇಳಿದರು. ವಿಶ್ವವಿದ್ಯಾನಿಲಯದ ವಿಜ್ಞಾನ ಕಾಲೇಜಿನ ಕಂಪ್ಯೂಟರ್ ವಿಜ್ಞಾನ ವಿಭಾಗವು ಸೋಮವಾರ ಆಯೋಜಿಸಿದ್ದ ಕೃತಕ ಬುದ್ಧಿಮತ್ತೆ ಕುರಿತ ಒಂದು ದಿನದ ರಾಷ್ಟ್ರೀಯ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಪ್ರತಿಯೊಂದು ವಿಭಾಗಗಳಲ್ಲಿಯೂ ತಂತ್ರಜ್ಞಾನ ಬಳಕೆ ಅವಶ್ಯಕವಾಗಿದೆ. ಎಲ್ಲಾ ಕಚೇರಿಗಳಲ್ಲಿಯೂ ಕಂಪ್ಯೂಟರ್, ಲ್ಯಾಪ್ಟಾಪ್ ನೋಡುತ್ತಿರುತ್ತೇವೆ. ಇಂತಹ ಯುಗಕ್ಕೆ ತಂತ್ರಜ್ಞಾನದ ಅರಿವು ಮುಂಚೂಣಿಯಲ್ಲಿರಬೇಕು ಎಂದರು. ಸಂಪನ್ಮೂಲ ವ್ಯಕ್ತಿಗಳಾದ ಡಾ.ಆನಂದಕುಮಾರ್ ಸುಬ್ರಮಣಿ ನಾಥನ್ ಮಾತನಾಡಿ, ತಂತ್ರಜ್ಞಾನ ಕ್ಷೇತ್ರ ಕಿರಿದಾದುದಲ್ಲ. ಅದರಲ್ಲಿ ನೀವು ಕಲಿಯಬೇಕಾದ ಕ್ಷೇತ್ರವನ್ನು ಮೊದಲು ಆಯ್ಕೆ ಮಾಡಿಕೊಳ್ಳಿ. ಆಸಕ್ತಿ ಇಟ್ಟು ಕಲಿತರೆ ಯಾವುದೂ ಕಷ್ಟವಾಗುವುದಿಲ್ಲ. ಯಾವುದೇ ಕಲಿಕೆಯಾದರೂ ಜೀವನವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ಸಾಧನವೆಂಬುದನ್ನು ನೆನಪಿಟ್ಟುಕೊಳ್ಳಿ ಇಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಎಸ್.ಎಸ್.ಐ.ಟಿ ಕಾಲೇಜಿನ ಕಂಪ್ಯೂಟರ್ ವಿಭಾಗದ ಮುಖ್ಯಸ್ಥೆ ಡಾ.ರೇಣುಕಲತಾ ಎಸ್.…
ತುಮಕೂರು: ದಿನೇ ದಿನೇ ಬಿಸಿಲಿನ ಝಳ ಹೆಚ್ಚಾಗುತ್ತಿರುವುದರಿಂದ ಪಡಿತರ ಧಾನ್ಯ ವಿತರಿಸಲು ನ್ಯಾಯಬೆಲೆ ಅಂಗಡಿಗಳು ಬೆಳಿಗ್ಗೆ 6 ಗಂಟೆಯಿಂದಲೇ ಕಾರ್ಯನಿರ್ವಹಿಸುವಂತೆ ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಜಂಟಿ ನಿರ್ದೇಶಕ ಮಂಟೇಸ್ವಾಮಿ ಅವರಿಗೆ ಸೂಚನೆ ನೀಡಿದರು. ಪಾವಗಡ ಪಟ್ಟಣದ ಶ್ರೀರಾಮಕೃಷ್ಣ ನ್ಯಾಯಬೆಲೆ ಅಂಗಡಿಗೆ ಭಾನುವಾರ ಬೆಳಿಗ್ಗೆ ಭೇಟಿ ನೀಡಿ ಕುಟುಂಬದ ಪ್ರತಿ ಸದಸ್ಯರಿಗೆ 15 ಕೆ.ಜಿ. ಅಕ್ಕಿ ಸಮರ್ಪಕ ವಿತರಣೆ ಬಗ್ಗೆ ಪರಿಶೀಲಿಸಿ ಮಾತನಾಡಿದ ಅವರು, ಗಂಟೆಗಟ್ಟಲೆ ಬಿಸಿಲಿನಲ್ಲಿ ಕಾಯದೆ ಫಲಾನುಭವಿಗಳಿಗೆ ಅನುಕೂಲವಾಗುವಂತೆ ಎಲ್ಲಾ ನ್ಯಾಯಬೆಲೆ ಅಂಗಡಿಗಳನ್ನು ನಿಗದಿತ ಸಮಯಕ್ಕಿಂತ ಒಂದು ಗಂಟೆ ಮುಂಚಿತವಾಗಿ ತೆರೆಯುವ ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರಲ್ಲದೆ, ಪಡಿತರ ಧಾನ್ಯ ಪಡೆಯಲು ನ್ಯಾಯಬೆಲೆ ಅಂಗಡಿ ಮುಂದೆ ಸಾಲು ಗಟ್ಟಿ ನಿಂತಿದ್ದ ಪಡಿತರ ಧಾನ್ಯದ ಗುಣಮಟ್ಟ ಹಾಗೂ ಕ್ರಮವಾಗಿ ವಿತರಿಸುತ್ತಿರುವ ಬಗ್ಗೆ ಫಲಾನುಭವಿಗಳಿಂದ ಮಾಹಿತಿ ಪಡೆದರು. ನಂತರ ನಾಗಲಮಡಿಕೆ ಕ್ರಾಸ್ ಬಳಿ ಭೇಟಿ ನೀಡಿ ತುಂಗಭದ್ರಾ ಕುಡಿಯುವ ನೀರಿನ…
ತುಮಕೂರು: ಜಿಲ್ಲೆಯಲ್ಲಿ 163 ಸ್ಕ್ಯಾನಿಂಗ್ ಕೇಂದ್ರಗಳಿದ್ದು, ಎಲ್ಲಾ ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ಕಡ್ಡಾಯವಾಗಿ ಸ್ಕ್ಯಾನಿಂಗ್ ದರ ಹಾಗೂ ಸೇವಾ ವಿವರಗಳನ್ನು ಪ್ರದರ್ಶಿಸಿರಬೇಕು ಎಂದು ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಎಂ. ಚಂದ್ರಶೇಖರ್ ಸೂಚನೆ ನೀಡಿದರು. ತಮ್ಮ ಕಚೇರಿಯಲ್ಲಿಂದು ಪಿಸಿ&ಪಿಎನ್ ಡಿಟಿ ಜಿಲ್ಲಾ ಸಲಹಾ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸ್ಕ್ಯಾನಿಂಗ್ ಕೇಂದ್ರಗಳ ಪರಿಶೀಲನಾ ವೇಳೆಯಲ್ಲಿ ಅಧಿಕಾರಿಗಳೊಂದಿಗೆ ರೇಡಿಯಾಲಾಜಿಸ್ಟ್ ಹಾಜರಿರಬೇಕು. ಪ್ರತಿ 3 ತಿಂಗಳಿಗೊಮ್ಮೆ ಸಭೆ ನಡೆಸಿ ಸ್ಕ್ಯಾನಿಂಗ್ ಕೇಂದ್ರಗಳ ಭೇಟಿಯಲ್ಲಿ ಕಂಡುಬಂದ ನ್ಯೂನ್ಯತೆಗಳ ಬಗ್ಗೆ ಸಭೆಗೆ ಮಾಹಿತಿ ನೀಡಬೇಕು ಎಂದು ತಿಳಿಸಿದರು. ಸಭೆಯಲ್ಲಿ ನೋಂದಣಿಗಾಗಿ ಅರ್ಜಿ ಸಲ್ಲಿಸಿರುವ ಸ್ಕ್ಯಾನಿಂಗ್ ಕೇಂದ್ರಗಳಿಗೆ ನೋಂದಣಿ ಪತ್ರ ನೀಡುವ ಹಾಗೂ ಸ್ಕಾö್ಯನಿಂಗ್ ಯಂತ್ರ ಖರೀದಿಸಲು ನಿರಾಕ್ಷೇಪಣಾ ಪತ್ರ ನೀಡುವ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಪ್ರಭ, ಪ್ರಸೂತಿ ಹಾಗೂ ಸ್ತ್ರೀರೋಗ ತಜ್ಞ ಡಾ.ಲೋಕೇಶ್ ರೆಡ್ಡಿ, ಸಮಾಜ ಸೇವಕಿ ಲಲಿತಾ, ಕಾನೂನು ಸಲಹೆಗಾರರು, ವಾರ್ತಾ ಇಲಾಖೆ ಹಾಗೂ ವಿವಿಧ ಅಧಿಕಾರಿ ಸೇರಿದಂತೆ ಮತ್ತಿತರರು ಹಾಜರಿದ್ದರು.…
ತುಮಕೂರು: ದಕ್ಷಿಣ ಶೈಕ್ಷಣಿಕ ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಹಾಗೂ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳ ಕಚೇರಿಗೆ ಅಗತ್ಯವಿರುವ 2kv–UPS with Batteries ಗಳನ್ನು ಖರೀದಿಸಲು ದರಪಟ್ಟಿ ಆಹ್ವಾನಿಸಲಾಗಿದೆ. ಆಸಕ್ತ ಸರಬರಾಜುದಾರರು ಮಾರ್ಚ್ 24ರ ಸಂಜೆ 5:30ರೊಳಗೆ ಮುದ್ದಾಂ ಅಥವಾ ಅಂಚೆ ಮೂಲಕ ದರಪಟ್ಟಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4