Subscribe to Updates
Get the latest creative news from FooBar about art, design and business.
- ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ
- ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ
- ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
- ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ
- ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
- ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
- ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
Author: admin
ತುಮಕೂರು: ಬಳ್ಳಾರಿ ಜಿಲ್ಲೆ ಮೀನಹಳ್ಳಿ ಪ್ರಾದೇಶಿಕ ತರಬೇತಿ ಕೇಂದ್ರದಲ್ಲಿ ಫೆಬ್ರವರಿ 3 ರಿಂದ 14ರವರೆಗೆ ಏರ್ಪಡಿಸಿದ್ದ ಪುನರ್ಮನನ ತರಬೇತಿಯಲ್ಲಿ ಜಿಲ್ಲೆಯ ಗುಬ್ಬಿ ತಾಲ್ಲೂಕು ಘಟಕಾಧಿಕಾರಿ(ಪ್ರಭಾರ) ಮಲ್ಲಿಕಾರ್ಜುನಯ್ಯ ಅವರು ಪ್ರಥಮ ಸ್ಥಾನ ಪಡೆದು ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. ಮಲ್ಲಿಕಾರ್ಜುನಯ್ಯ ಅವರಿಗೆ ಚಿನ್ನದ ಪದಕ ಲಭಿಸಿರುವುದು ಇತರೆ ಗೃಹರಕ್ಷಕರಿಗೆ ಪ್ರೇರಣೆಯಾಗಿದ್ದು, ಜಿಲ್ಲೆಗೆ ಹೆಮ್ಮೆ ತರುವ ಸಂಗತಿಯಾಗಿದೆ ಎಂದು ಗೃಹರಕ್ಷಕ ದಳ ಘಟಕ ಕಚೇರಿಯ ಅಧಿಕಾರಿ/ಸಿಬ್ಬಂದಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಪದಕ ಗಳಿಸಿದ ಮಲ್ಲಿಕಾರ್ಜುನಯ್ಯ ಅವರನ್ನು ಹೆಚ್ಚುವರಿ ಪೊಲೀಸ್ ಅಧೀಕ್ಷಕ ವಿ.ಮರಿಯಪ್ಪ, ಉಪ ಸಮಾದೇಷ್ಟ ಆರ್. ರಾಜೇಂದ್ರನ್, ಬೋಧಕರಾದ ಶಿವಪ್ರಸಾದ್, ಸಹಾಯಕ ಬೋಧಕ ಶ್ರೀನಿವಾಸ್, ಸೇರಿದಂತೆ ಮತ್ತಿತರರು ಅಭಿನಂದಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಹಾಗೂ ತಾಲ್ಲೂಕು ಘಟಕದ ವತಿಯಿಂದ ತುಮಕೂರು ತಾಲ್ಲೂಕು ಕೋರಾ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಫೆಬ್ರವರಿ 28ರಂದು “ತುಮಕೂರು ತಾಲ್ಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನ”ವನ್ನು ಏರ್ಪಡಿಸಲಾಗಿದೆ. ಸಮ್ಮೇಳನದ ಅಂಗವಾಗಿ ಅಂದು ಬೆಳಿಗ್ಗೆ 7:30 ಗಂಟೆಗೆ ಧ್ವಜಾರೋಹಣ, 8:30 ಗಂಟೆಗೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ, 10 ಗಂಟೆಗೆ ವೇದಿಕೆ ಕಾರ್ಯಕ್ರಮ ಉದ್ಘಾಟನೆ ಕಾರ್ಯಕ್ರಮ ನಡೆಯಲಿವೆ. ಸಮ್ಮೇಳನದ ಪ್ರಯುಕ್ತ ಫೆಬ್ರವರಿ 28ರ ಮಧ್ಯಾಹ್ನ 12 ಗಂಟೆಗೆ ಸಮ್ಮೇಳನಾಧ್ಯಕ್ಷ ಎಂ.ನಂಜಯ್ಯ ಅವರ ಸಾಹಿತ್ಯಾವಲೋಕನ; 12:45 ಗಂಟೆಗೆ ಕೋರಾ–ಸ್ಥಳೀಯ ಸಾಂಸ್ಕೃತಿಕತೆ, ಶೈಕ್ಷಣಿಕ ನಗರಿಯಿಂದ–ಕೈಗಾರಿಕಾ ನಗರಿಯತ್ತ ತುಮಕೂರು, ಜಾನಪದ ಕಲೆ ಮತ್ತು ಸಾಹಿತ್ಯದ ಮೇಲೆ ನಗರೀಕರಣದ ಪ್ರಭಾವ; 2:30 ಗಂಟೆಗೆ ರಂಗಭೂಮಿ ಮತ್ತು ಸಂಗೀತ, 3:30 ಗಂಟೆಗೆ ಕವಿ ಸಮಯ ಗೋಷ್ಠಿಗಳು ನಡೆಯಲಿವೆ. ಸಂಜೆ 4:45 ಗಂಟೆಗೆ ಆಜೀವ ಸದಸ್ಯರ ಬಹಿರಂಗ ಅಧಿವೇಶನ, 5 ಗಂಟೆಗೆ ಸನ್ಮಾನ ಮತ್ತು ಸಮಾರೋಪ ಸಮಾರಂಭ ನಡೆಯಲಿದೆ ಎಂದು ಪರಿಷತ್ತಿನ ತಾಲ್ಲೂಕು ಅಧ್ಯಕ್ಷ ಚಿಕ್ಕಬೆಳ್ಳಾವಿ…
ತುಮಕೂರು: ಜಿಲ್ಲೆಯಲ್ಲಿ ಬಿಎಸ್’ಎನ್’ಎಲ್ ವ್ಯಾಪ್ತಿಗೊಳಪಡುವ ಖಾಲಿ ಜಾಗಗಳನ್ನು ಬಾಡಿಗೆ ನೀಡಲು ಉದ್ದೇಶಿಸಿದೆ. ಕೇಂದ್ರ/ ರಾಜ್ಯ ಸರ್ಕಾರ, ಖಾಸಗಿ ವಲಯದ ಉದ್ಯಮ, ಬ್ಯಾಂಕುಗಳಿಗೆ ಆದ್ಯತೆ ನೀಡಲಾಗುವುದು. ಬಾಡಿಗೆ ಆಧಾರದ ಮೇಲೆ ಖಾಲಿ ಜಾಗದ ಅವಶ್ಯಕತೆ ಇರುವವರು ಹೆಚ್ಚಿನ ಮಾಹಿತಿಗಾಗಿ ಮೊ.ಸಂ. 9422041190/ 9486101729ನ್ನು ಸಂಪರ್ಕಿಸಬೇಕೆಂದು ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಶಿರಾ: ಅನ್ನದಾತನ ಸಮಸ್ಯೆಗಳಿಗೆ ಸ್ಪಂದಿಸಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಜನಸ್ನೇಹಿ ಆಡಳಿತ ನೀಡುವುದೇ ನನ್ನ ಆದ್ಯತೆ, ಕೃಷಿ ಚಟುವಟಿಕೆಗಳಿಗೆ ಪೂರಕವಾಗುವ ರೀತಿ ಸಾಲ ಸೌಲಭ್ಯ ನೀಡಿ ರೈತರನ್ನು ಆರ್ಥಿಕ ಸದೃಢರನ್ನಾಗಿ ಮಾಡುವುದೇನೆ ನನ್ನ ಗುರಿ ಎಂದು ಕಾಮಗೊಂಡನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರದ ಸಂಘದ ನೂತನ ಕೆ.ಎನ್. ಮಂಜುನಾಥ್ ಹೇಳಿದರು. ಶಿರಾ ತಾಲೂಕಿನ ಕಾಮಗೊಂಡನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಪರಸ್ಪರ ಸಹಕಾರ , ಸೇವಾ ಮನೋಭಾವ ದೊಂದಿಗೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಮುನ್ನಡೆಸಿದಾಗ ಸಂಘ ಆರ್ಥಿಕ ಅಭಿವೃದ್ಧಿ ಕಾಣಲು ಸಾಧ್ಯ. ಸಂಘಕ್ಕೆ ಆಗಮಿಸುವ ರೈತರಿಗೆ ಅತ್ಯಂತ ಗೌರವಪೂರ್ವಕವಾಗಿ ಮಾತನಾಡಿಸುವ ಮೂಲಕ ಉತ್ತಮ ಆಡಳಿತ ನೀಡುವಂತಹ ಪ್ರವೃತ್ತಿಯನ್ನು ಸಿಬ್ಬಂದಿಗಳು ಬೆಳೆಸಿಕೊಳ್ಳಬೇಕು, ಮುಂಗಾರು ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವ ರೀತಿ ರಸಗೊಬ್ಬರ ವಿತರಣೆ ಮಾಡಿ ರೈತರಿಗೆ ಅನುಕೂಲ ಕಲ್ಪಿಸಬೇಕು ಎಂದು…
ಶಿರಾ: ತಾಲೂಕಿನ ದ್ವಾರನ ಕುಂಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಸಿ. ತಿಮ್ಮಯ್ಯ, ಉಪಾಧ್ಯಕ್ಷರಾಗಿ ದಯಾವತಿ ಅವಿರೋಧ ಆಯ್ಕೆಯಾದರು. ನೂತನ ನಿರ್ದೇಶಕ ಶ್ರೀನಿವಾಸ್ ಬಾಬು, ಕಾಡುಗೊಲ್ಲ ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷ ಚಂಗಾವರ ಮಾರಣ್ಣ, ಎಪಿಎಂಸಿ ಮಾಜಿ ಅಧ್ಯಕ್ಷ ನರಸಿಂಹೇಗೌಡ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ತಿಪ್ಪೇಶ್ ಗೌಡ, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ್, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ನಿರ್ದೇಶಕರಾದ ಸೋಮಶೇಖರ ಕೆ.ಸಿ. ಕೃಷ್ಣೇಗೌಡ, ದೊಡ್ಡಿರಪ್ಪ, ಕೆ.ಸಿ .ದೊಡ್ಡ ತಿಮ್ಮಯ್ಯ, ಮಹಾಂತೇಶ ,ನಾಗಮ್ಮ, ಕೆ.ಎನ್. ನರಸಿಂಹಯ್ಯ , ಶ್ರೀನಿವಾಸ್, ಡಿ.ಎಸ್. ರಂಗನಾಥ್, ಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ವಿಠಲ್, ಕಾರ್ಯದರ್ಶಿ ಜಗದೀಶ್, ಮುಖಂಡ ಶ್ರೀರಾಮಯ್ಯ, ಮಾಜಿ ಅಧ್ಯಕ್ಷ ಹನುಮೇಗೌಡ, ಬಾಲೆಗೌಡ, ದ್ವಾರಕೀಶ್ ಗೌಡ, ರಾಕೇಶ್ ಬಾಬು, ಉಮೇಶ್, ಶಾಸಮರು ಶ್ರೀಧರ, ರಂಗಸ್ವಾಮಿಗೌಡ ಸೇರಿದಂತೆ ಹಲವಾರು ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ಬೀದರ್: ಜಿಲ್ಲಾ ಕಮಲನಗರ ತಾಲ್ಲೂಕಿನ ದಾಬಾಕಾದಲ್ಲಿ ಏಕತಾ ಫೌಂಡೇಶನ್ ಅಧ್ಯಕ್ಷರಾದ ರವಿಸ್ವಾಮಿ ಅವರ ಹುಟ್ಟು ಹಬ್ಬದ ನಿಮಿತ್ತ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಯುವ ಮುಖಂಡರಾದ ಧನಾಜಿ ಕಾಂಬಳೆ ಅವರ ನೇತೃತ್ವದಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಂತೋಷ ಜಾಧವ್, ಅಮೂಲ್ ಬಿರಾದಾರ, ಪ್ರಶಾಂತ, ನಿಖಿಲ್ ಜಾಧವ್, ಪ್ರಸುರಾಮ ಲಕ್ಷ್ಮಣ ಜಾಧವ್, ವಿಶ್ವಭರ ರೆಡ್ಡಿ ಮುಂತಾದವರು ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ಗ್ಯಾರಂಟಿ ಯೋಜನೆಗಳು ಹೊರೆಯಾಗಿವೆ ಎಂಬುದರಲ್ಲಿ ಎರಡು ಮಾತಿಲ್ಲ, ಆದರೆ, ಅದನ್ನು ನಾವು ಗೊತ್ತಿದ್ದೇ ಜಾರಿಗೆ ತಂದಿದ್ದೇವೆ. ಬಡವರಿಗಾಗಿ ಆಗುವ ಹೊರೆಯನ್ನು ನಾವು ಸಹಿಸಿಕೊಳ್ಳಬೇಕು ಅಷ್ಟೆ ಎಂದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬಿಜೆಪಿಯವರಿಗೆ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗುವುದು ಬೇಕಿಲ್ಲ. ಹೇಗಾದರು ಮಾಡಿ ಗ್ಯಾರಂಟಿ ಯೋಜನೆಗಳನ್ನು ಹತ್ತಿಕ್ಕಬೇಕು ಎನ್ನುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು. ಬಡವರಿಗೋಸ್ಕರ ಗ್ಯಾರಂಟಿ ಯೋಜನೆಗಳನ್ನು ಕೊಡುತ್ತಿದ್ದೇವೆ. ಬಡವರಿಗೆ ಹಣ ಕೊಡುವುದು ಬಿಜೆಪಿಯವರಿಗೆ ಮನಸ್ಸಿಲ್ಲ ಎಂದರೆ ಬಿಜೆಪಿಯವರ ಸಿದ್ಧಾಂತ ಏನಿದೆ ಎಂಬುದು ಅರ್ಥವಾಗುತ್ತದೆ ಎಂದು ಅವರು ಹೇಳಿದರು. ಬಿಜೆಪಿಯವರು ಬಡವರ ಪರ ಇಲ್ಲ. ಪ್ರತಿಭಟನೆ ಮೂಲಕ ಸಾರ್ವಜನಿಕವಾಗಿ ಅದನ್ನು ಹೇಳಲು ಹೊರಟಿದ್ದಾರೆ. ಇದೆಲ್ಲವನ್ನು ಜನ ಗಮನಿಸುತ್ತಾರೆ ಎಂದು ಟೀಕಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಶಿಶು ಮಾರಾಟ ಆರೋಪದ ಹಿನ್ನೆಲೆಯಲ್ಲಿ ಮಗುವಿನ ತಂದೆ– ತಾಯಿ ಸೇರಿ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಜಿಲ್ಲೆಯ ಕುಣಿಗಲ್ ನಗರದಲ್ಲಿ ನಡೆದಿದೆ. ಮಗುವಿನ ತಾಯಿ ಮೊನಿಷಾ (21), ತಂದೆ ಶ್ರೀನಂದ (24), ಅಂಗನವಾಡಿ ಕಾರ್ಯಕರ್ತೆ ಜ್ಯೋತಿ (45), ಮಗುವನ್ನ ಖರೀದಿಸಿದ್ದ ಮುಬಾರಕ್ ಪಾಷ (36) ಹಾಗೂ ಮಗುವಿನ ತಂದೆಯ ಸ್ನೇಹಿತೆ ಜ್ಯೋತಿ (32) ಬಂಧಿತ ಆರೋಪಿಗಳು ಆಗಿದ್ದಾರೆ. ರಾಮನಗರ ಜಿಲ್ಲೆ ಮಾಗಡಿ ಮೂಲದ ಶ್ರೀನಂದ ಮತ್ತು ಮೊನಿಷಾ ಇಬ್ಬರು ಅವಿವಾಹಿತರಾಗಿದ್ದರು. ಫೆಬ್ರವರಿ 20 ರಂದು ಮೊನಿಷಾಗೆ ಕುಣಿಗಲ್ ತಾಲ್ಲೂಕು ಆಸ್ಪತ್ರೆಯಲ್ಲಿ ಹೆರಿಗೆಯಾಗಿತ್ತು. ಇನ್ನು ಮದುವೆಯಾಗದ ಕಾರಣ ಮಗುವನ್ನ ಮನೆಗೆ ಕರೆದೊಯ್ಯಲು ನಿರಾಕರಿಸಿದ ಹಿನ್ನೆಲೆಯಲ್ಲಿ ಮಗುವನ್ನ ಮಾರಾಟ ಮಾಡಿದ್ದರು. ಅಂಗನವಾಡಿ ಆಶಾ ಕಾರ್ಯಕರ್ತೆ ಜ್ಯೋತಿ ಮೂಲಕ ಮಗು ಮಾರಾಟ ಮಾಡಿದ್ದರು. ಕುಣಿಗಲ್ ತಾಲ್ಲೂಕಿನ ಕೊತ್ತಗೆರೆ ಗ್ರಾಮದ ಅಂಗನವಾಡಿ ಕಾರ್ಯಕರ್ತೆಯಾಗಿದ್ದ ಜ್ಯೋತಿ ಮೂಲಕ ಮಗುಗವನ್ನು ಕೊತ್ತಗೆರೆ ಗ್ರಾಮದ ಮುಬಾರಕ್ ಪಾಷ ಎಂಬುವರಿಗೆ 60 ಸಾವಿರಕ್ಕೆ ಮಗು ಮಾರಾಟ ಮಾಡಲಾಗಿತ್ತು. ಘಟನೆ ಸಂಬಂಧ ಮಹಿಳಾ…
ಕರ್ನಾಟಕ ಕಾರ್ಯನಿರತ ಪತ್ರಕರ್ತರ, ಸಂಪಾದಕರ ಹಾಗೂ ವರದಿಗಾರರ ಸಂಘದ ರಾಜ್ಯಾಧ್ಯಕ್ಷರಾದ ಶಶಿಕಾಂತ್ ಅವರು ಇಂದು ರಾಜ್ಯ ಸಂಘಟನಾ ಸಂಚಾಲಕರನ್ನಾಗಿ ಯಶಸ್ವಿನಿ ಬಿ. ಅವರನ್ನು ಆಯ್ಕೆ ಮಾಡಿದ್ದಾರೆ. ಈ ಮಹತ್ವಪೂರ್ಣ ನೇಮಕಾತಿ ಸಂಘದ ಕಾರ್ಯಚಟುವಟಿಕೆಗಳಿಗೆ ಹೊಸ ಚೈತನ್ಯವನ್ನು ನೀಡಲಿದೆ ಎನ್ನುವುದು ಸದಸ್ಯರ ನಿರೀಕ್ಷೆ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ಸಲಹಾ ಸಮಿತಿಯ ಅಧ್ಯಕ್ಷರಾದ ಸಂಜಯ್ ಹಾಗೂ ಬೆಂಗಳೂರು ವಿಭಾಗದ ಅಧ್ಯಕ್ಷರಾದ ವಿಜಯ್ ಮುನಿಯಪ್ಪ ಉಪಸ್ಥಿತರಿದ್ದು, ಯಶಸ್ವಿನಿ ಬಿ ಅವರಿಗೆ ಅಭಿನಂದನೆ ಸಲ್ಲಿಸಿದರು. ಸಂಘದ ಹಲವು ಗಣ್ಯರು ಈ ಸಂದರ್ಭದಲ್ಲಿ ಹಾಜರಿದ್ದರು ಮತ್ತು ಹೊಸ ನೇಮಕಾತಿಯ ಬಗ್ಗೆ ಸಂತೋಷ ವ್ಯಕ್ತಪಡಿಸಿದರು. ಯಶಸ್ವಿನಿ ಬಿ. ಅವರು ತಮ್ಮ ನೇಮಕಾತಿಗೆ ಧನ್ಯವಾದ ಸಲ್ಲಿಸಿ, ಸಂಘದ ಅಭಿವೃದ್ಧಿಗೆ ತಮ್ಮ ಶ್ರಮವನ್ನು ಅರ್ಪಿಸುವ ನಿರ್ಧಾರವನ್ನು ಪ್ರಕಟಿಸಿದರು. “ನಮ್ಮ ಸಂಘದ ಉದ್ದೇಶಗಳ ಸಾಧನೆಗಾಗಿ ಜವಾಬ್ದಾರಿಯಿಂದ ಕೆಲಸ ಮಾಡುತ್ತೇನೆ” ಎಂದು ಅವರು ಹೇಳಿದರು. ತುಮಕೂರು ಜಿಲ್ಲಾ ಘಟಕ – ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಪಾದಕರ ಹಾಗೂ ವರದಿಗಾರರ ಸಂಘ (ರಿ) ಪದಾಧಿಕಾರಿಗಳು:…
ಹಾವೇರಿ: ಎರಡು ಪ್ರತ್ಯೇಕ ಘಟನೆಗಳಲ್ಲಿ ನಾಲ್ವರು ಬಾಲಕರು ಮುಳುಗಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಹಂಗಲ್ ತಾಲ್ಲೂಕಿನ ಕೊಪ್ಪರಸಿಕೊಪ್ಪದಲ್ಲಿ ಇಬ್ಬರು ಬಾಲಕರು ಗ್ರಾಮದ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಧನುಷ್ ಚೋಳಪ್ಪನವರ್ (13) ಮತ್ತು ನಿಖಿಲ್ ಜಗದೀಶ್ ನಾಗೋಜಿ (11) ಮೃತಪಟ್ಟವರಾಗಿದ್ದಾರೆ. ಧನುಷ್ ಮುಂಡ್ಗೋಡ್ ಖಾಸಗಿ ಪ್ರೌಢಶಾಲೆಯಲ್ಲಿ ಓದುತ್ತಿದ್ದ ಮತ್ತು ನಿಖಿಲ್ ಕೊಪ್ಪರಸಿಕೊಪ್ಪ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಯಾಗಿದ್ದ. ಇವರಿಬ್ಬರು ಈಜಲು ಹೋಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಇನ್ನೂ ಶಿಗ್ಗಾಂವ್ ತಾಲ್ಲೂಕಿನ ಅತ್ತಿಗೇರಿ ಗ್ರಾಮದಲ್ಲಿ ಮತ್ತೊಂದು ದುರಂತ ನಡೆದಿದೆ. ಗೌಡರ ಕೆರೆಯಲ್ಲಿ ಈಜಲು ತೆರಳಿದ್ದ ವೇಳೆ ಪ್ರಜ್ವಲ್ ದೇವರಮಣಿ (14) ಮತ್ತು ಸನತ್ ಭೂಸರೆಡ್ಡಿ (14) ಎಂಬ ಇಬ್ಬರು ಬಾಲಕರು ನೀರು ಪಾಲಾಗಿದ್ದಾರೆ. ಬೇಸಿಗೆ ಕಾಲದಲ್ಲಿ ಈಜಲು ತೆರಳುವ ವೇಳೆ ಅವಘಡಗಳು ಪ್ರತಿ ವರ್ಷವೂ ನಡೆಯುತ್ತಿದೆ. ಕೆರೆಯ ಆಳದ ಅರಿವು ಇಲ್ಲದೇ ನೀರಿಗಿಳಿಯುತ್ತಿರುವ ಮಕ್ಕಳು ಬಲಿಯಾಗುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…