Author: admin

ತುಮಕೂರು: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಮಹಾ ಶಿವರಾತ್ರಿ ಹಬ್ಬದ ಪ್ರಯುಕ್ತ ಫೆಬ್ರವರಿ 25ರ ಸಂಜೆ 5 ರಿಂದ 26ರ ಮಧ್ಯರಾತ್ರಿ 12 ಗಂಟೆಯವರೆಗೆ ಮಾಂಸ ಮಾರಾಟ ನಿಷೇಧಿತ ದಿನವೆಂದು ಘೋಷಿಸಲಾಗುವುದು. ಈ ಅವಧಿಯಲ್ಲಿ ಮಾಂಸ ಮಾರಾಟ ಮಾಡುವುದು, ಸಂಗ್ರಹಣೆ ಮಾಡುವುದನ್ನು ನಿಷೇಧಿಸಲಾಗಿದ್ದು, ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆ ಹಾಗೂ ಎಲ್ಲಾ ರೀತಿಯ ಮಾಂಸ ಮಾರಾಟ ಮಳಿಗೆಗಳನ್ನು ಮುಚ್ಚತಕ್ಕದ್ದು ಎಂದು ಪಾಲಿಕೆ ಆರೋಗ್ಯಾಧಿಕಾರಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು: ಬೇಸಿಗೆ ಸಮೀಪಿಸುತ್ತಿರುವುದರಿಂದ ಜನ–ಜಾನುವಾರುಗಳಿಗೆ ಕುಡಿಯಲು ನೀರಿನ ಸಮಸ್ಯೆ ಬಾರದಂತೆ ಅಧಿಕಾರಿಗಳು ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲೆಯ ಪಾವಗಡ ತಾಲ್ಲೂಕು ನಾಗೇನಹಳ್ಳಿಗೆ ಬುಧವಾರ ಸಂಜೆ ಭೇಟಿ ನೀಡಿ ಶುದ್ಧ ಕುಡಿಯುವ ನೀರಿನ ಘಟಕದ ನಿರ್ವಹಣೆಯನ್ನು ಪರಿಶೀಲಿಸಿ ಮಾತನಾಡಿದ ಅವರು, ಜನರಿಗೆ ನೀರು ಒದಗಿಸುವಲ್ಲಿ ನಿರ್ಲಕ್ಷತೆ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು. ಜನರಿಂದ ದೂರು ಬಾರದಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ನಿರ್ದೇಶಿಸಿದರು. ಗ್ರಾಮಸ್ಥರಿಂದ ಬೇಡಿಕೆ:- ನಾಗೇನಹಳ್ಳಿ ಗ್ರಾಮದಲ್ಲಿರುವ ಶುದ್ಧ ನೀರಿನ ಘಟಕಕ್ಕೆ ಕಾಯಿನ್ ಪದ್ಧತಿಯನ್ನು ಅಳವಡಿಸಬೇಕೆಂದು ಗ್ರಾಮಸ್ಥರ ಮನವಿಯನ್ನು ಆಲಿಸಿದ ಜಿಲ್ಲಾಧಿಕಾರಿಗಳು ಸ್ಥಳದಲ್ಲಿದ್ದ ಗ್ರಾಮೀಣ ನೀರು ಸರಬರಾಜು ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಬಸವಲಿಂಗಪ್ಪ ಅವರಿಗೆ ಕೂಡಲೇ ಕಾಯಿನ್ ಪದ್ಧತಿ ಅಳವಡಿಸಲು ಸೂಚನೆ ನೀಡಿದರು. ಗ್ರಾಮಗಳಿಗೆ ಪ್ರತೀ ದಿನ ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದು ಸೂಚಿಸಿದರಲ್ಲದೆ ರಸ್ತೆ ಬದಿಯಲ್ಲಿ ತಿಪ್ಪೆ, ಕಸದ ರಾಶಿಯನ್ನು ಕಂಡ ಅವರು ಗ್ರಾಮದಲ್ಲಿ ಕಸ ವಿಲೇವಾರಿ ಸಮರ್ಪಕವಾಗಿರಬೇಕು. ನೈರ್ಮಲ್ಯತೆ…

Read More

ತುಮಕೂರು: ಬೆವಿಕಂ ಪಾವಗಡ ಉಪವಿಭಾಗ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ಕೈಗೊಂಡಿರುವ ಹಿನ್ನೆಲೆಯಲ್ಲಿ ಫೆಬ್ರವರಿ 22ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆಯಾಗಲಿದೆ. ಪಾವಗಡ, ವೆಂಕಟಾಪುರ, ಶೈಲಾಪುರ, ನಾಗಲಮಡಿಕೆ, ಮಂಗಳವಾಡ, ಕಿಲ್ಲಾರ್ಲಹಳ್ಳಿ, ಲಿಂಗದಹಳ್ಳಿ, ವೈ.ಎನ್.ಹೊಸಕೋಟೆ ಉಪಸ್ಥಾವರಗಳಿಂದ ಸರಬರಾಜಾಗುವ ಎಲ್ಲಾ 11 ಕೆವಿ ಫೀಡರ್ ಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು: ಜಿಲ್ಲೆಯಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯು ಮಾರ್ಚ್ 1ರಿಂದ 20ರವರೆಗೆ 35 ಪರೀಕ್ಷಾ ಕೇಂದ್ರದಲ್ಲಿ ನಡೆಯಲಿದ್ದು, ಮೊಬೈಲ್ ಫೋನ್, ರಿಸ್ಟ್ ವಾಚ್, ಬ್ಲೂಟೂತ್ ಸೇರಿದಂತೆ ವಿದ್ಯುನ್ಮಾನ ಸಾಧನಗಳನ್ನು ಪರೀಕ್ಷಾ ಕೊಠಡಿಗೆ ತರುವುದನ್ನು ನಿರ್ಬಂಧಿಸಬೇಕು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ದ್ವಿತೀಯ ಪಿಯುಸಿ ಪರೀಕ್ಷೆಯ ಮುಂಜಾಗ್ರತಾ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಭಾಗವಹಿಸಿದ ನಂತರ ಮಾತನಾಡಿದ ಜಿಲ್ಲಾಧಿಕಾರಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗುವುದು ಎಂದು ತಿಳಿಸಿದರು. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಕಣ್ಗಾವಲು ವ್ಯವಸ್ಥೆಯಿರುವ ಬಗ್ಗೆ ದೃಢಪಡಿಸಿಕೊಳ್ಳಬೇಕು. ಪ್ರತಿ ಕೇಂದ್ರದ ಚಟುವಟಿಕೆಗಳನ್ನು ಜಿಲ್ಲಾಡಳಿತದ ಕಚೇರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಚೇರಿಯಲ್ಲಿ ವೆಬ್ಕಾಸ್ಟಿಂಗ್ ಮೂಲಕ ನಿಗಾವಹಿಸಲಾಗುವುದು ಎಂದು ತಿಳಿಸಿದರು. ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಮೂಲಕ ಯಾವುದೇ ಲೋಪದೋಷಗಳಿಲ್ಲದಂತೆ ಶಾಂತಿಯುತವಾಗಿ ಪರೀಕ್ಷೆ ನಡೆಸಲು ಅಧಿಕಾರಿಗಳಿಗೆ ನಿರ್ದೇಶಿಸಿದರು.…

Read More

ಬೀದರ್ : ಕಾಶಿ ಬಳಿ ಲಾರಿ ಮತ್ತು ಕ್ರೊಸರ್ ನಡುವೆ ಭೀಕರ ರಸ್ತೆ ಅಪಘಾತವಾಗಿ ಕುಂಭಮೇಳಕ್ಕೆ ಹೋಗಿದ್ದ ಬೀದರ್ ಮೂಲದ ಐದು ಜನ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ರಾಷ್ಟ್ರೀಯ ಹೆದ್ದಾರಿ ಮಿರಾಜಾಪೂರ್ ಜಿಲ್ಲೆಯ ರೂಪಾಪೂರ ಬಳಿ ನಡೆದಿದೆ. ಬೀದರ್ ನಗರದ ಲಾಡಗೇರಿ ಬಡಾವಣೆಯ ನಿವಾಸಿಗಳು ದುರ್ಮರಣವಾಗಿದ್ದು ಒಂದೇ ಕುಟುಂಬದ ಮೂರು ಜನ ಸೇರಿದಂತೆ ಐದು ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾಶಿಯಿಂದ 20 ಕಿಲೋ ಮೀಟರ ದೂರದಲ್ಲಿ ಲಾರಿಗೆ ಹಿಂಬದಿಯಿಂದ ರಭಸವಾಗಿ ಕ್ರೂಸರ್ ಡಿಕ್ಕಿಯಾಗಿ ಐದು ಜನ ಸಾವನ್ನಪ್ಪಿದ್ದು ಉಳಿದ 7 ಜನರ ಸ್ಥಿತಿ ಗಂಭೀರವಾಗಿದೆ. 57 ವರ್ಷದ ಲಕ್ಷ್ಮಿ, 62 ವರ್ಷದ ನೀಲ್ಲಮ್ಮ, 45 ವರ್ಷದ ಸಂತೋಷ, 40 ವರ್ಷದ ಸುನೀತಾ, ಕಲಾವತಿ ಸೇರಿದಂತೆ ಐದು ಜನ ಸಾವನ್ನಪ್ಪಿದ ದುರ್ದೈವಿಗಳಾಗಿದ್ದು, ಪ್ರಯಾಗ್ ರಾಜ್ ನಿಂದ ಕಾಶಿ ಕಡೆ ಹೋಗುವಾಗ ಭೀಕರ ರಸ್ತೆ ಅಪಘಾತವಾಗಿ ಸಾವನ್ನಪ್ಪಿದ್ದಾರೆ. ಎರಡು ದಿನಗಳ ಹಿಂದೇ ಒಂದೇ ಗಾಡಿಯಲ್ಲಿ ಕುಂಭ ಮೇಳಕ್ಕೆ ತೆರಳಿದ್ದ 13 ಜನರಲ್ಲಿ…

Read More

ತುಮಕೂರು:  ಮಹಾನಗರಪಾಲಿಕೆ ವ್ಯಾಪ್ತಿಯ ಅನಧಿಕೃತ ಆಸ್ತಿಗಳನ್ನು ಬಿ–ಖಾತಾ ರಿಜಿಸ್ಟರ್‌ ನಲ್ಲಿ ದಾಖಲಿಸಲು ನಗರದಾದ್ಯಂತ ಹಮ್ಮಿಕೊಂಡಿರುವ ಬಿ–ಖಾತಾ ಆಂದೋಲನಕ್ಕೆ ಶಾಸಕ ಜಿ.ಬಿ.ಜ್ಯೋತಿಗಣೇಶ್ ಗುರುವಾರ ಚಾಲನೆ ನೀಡಿದರು. ನಗರದ ಸಿರಾಗೇಟ್ ಐ.ಡಿ.ಎಸ್.ಎಂ.ಟಿ. ಕಾಂಪ್ಲೆಕ್ಸ್ ನಲ್ಲಿಂದು ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಆಂದೋಲನದಲ್ಲಿ ಇ–ಆಸ್ತಿ ತಂತ್ರಾಂಶದಲ್ಲಿ ಆಸ್ತಿಗಳನ್ನು ಬಿ–ಖಾತಾ ರಿಜಿಸ್ಟರ್‌ ನಲ್ಲಿ ದಾಖಲಿಸಲು ಮಾಲೀಕರಿಗೆ ನಿಗದಿತ ಅರ್ಜಿಯನ್ನು ವಿತರಿಸಲಾಗುವುದು. ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸ್ವೀಕರಿಸಲು ವಾರ್ಡ್ ವಾರು ಸ್ಥಳಗಳನ್ನು ನಿಗದಿಪಡಿಸಲಾಗಿದೆ. ಸಾರ್ವಜನಿಕರು ಸೀಮಿತ ಕಾಲಾವಧಿಯೊಳಗೆ ಅರ್ಜಿ ಸಲ್ಲಿಸಿ ತಮ್ಮ ಆಸ್ತಿಯನ್ನು ಬಿ–ಖಾತಾ ರಿಜಿಸ್ಟರ್‌ ನಲ್ಲಿ ದಾಖಲಿಸಬಹುದಾಗಿದೆ ಎಂದು ತಿಳಿಸಿದರು. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಮಹಾನಗರ ಪಾಲಿಕೆ ವ್ಯಾಪ್ತಿಯ 11 ಸ್ಥಳಗಳಲ್ಲಿ ಬಿ–ಖಾತಾ ರಿಜಿಸ್ಟರ್ ದಾಖಲಾತಿ ಆಂದೋಲನ ನಡೆಯಲಿದ್ದು, ಇದರ ಪ್ರಯೋಜನವನ್ನು ಸಾರ್ವಜನಿಕರು ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಸಾರ್ವಜನಿಕರು ಸಕಾಲದಲ್ಲಿ ತೆರಿಗೆ ಹಣವನ್ನು ಪಾವತಿಸಬೇಕು. ಇದರಿಂದ ನಗರವನ್ನು ಮತ್ತಷ್ಟು ಅಭಿವೃದ್ಧಿಪಡಿಸಲು ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸಲು ನೆರವಾಗುತ್ತದೆ ಎಂದು ತಿಳಿಸಿದರು. ಸಾರ್ವಜನಿಕರು ತಮ್ಮ ಆಸ್ತಿಗೆ…

Read More

ಪಾವಗಡ: ಟ್ರ್ಯಾಕ್ಟರ್ ಹರಿದು ಪೌರಕಾರ್ಮಿಕ ಸಾವನ್ನಪ್ಪಿರುವಂತಹ ಘಟನೆ ಪಾವಗಡ ಪಟ್ಟಣದ ಶನಿಮಹಾತ್ಮ ವೃತ್ತದಲ್ಲಿ ಗುರುವಾರ ಮಧ್ಯಾಹ್ನ 12 ಗಂಟೆಯಲ್ಲಿ ಜರುಗಿದೆ. ಪಾವಗಡ ಪೊಲೀಸರು ಕಳ್ಳತನಗಳನ್ನು ನಿಯಂತ್ರಿಸಲು ಪಟ್ಟಣದ ನಾಲ್ಕು ಭಾಗಗಳಲ್ಲಿ ಚೆಕ್ ಪೋಸ್ಟ್ ಗಳನ್ನು ನಿರ್ಮಿಸುತ್ತಿದ್ದಾರೆ, ಪಟ್ಟಣದ ವಿವಿಧಡೆ ಇರುವಂತಹ ಬ್ಯಾರಿಕೆಡ್ ಗಳನ್ನು ಖಾಸಗಿ ಟ್ರ್ಯಾಕ್ಟರ್ ನಲ್ಲಿ ಸಾಗಿಸಲಾಗುತ್ತಿತ್ತು. ಈ ಸಂದರ್ಭದಲ್ಲಿ ಪೊಲೀಸರು ಪುರಸಭೆಯಲ್ಲಿ ಪೌರಕಾರ್ಮಿಕನಾಗಿ ಕರ್ತವ್ಯ ನಿರ್ವಹಿಸುತ್ತಿರುವ ಮಂಜು ಎನ್ನುವವರನ್ನು ಕರೆದುಕೊಂಡು ಬ್ಯಾರಿಕೇಡ್ ಗಳನ್ನು ಸಾಗಿಸುತ್ತಿದ್ದರು. ಎಂಎಜಿ ಸರ್ಕಲ್ ನಲ್ಲಿರುವಂತಹ ಬ್ಯಾರಿಕೆಡ್ ಗಳನ್ನು ಚಳ್ಳಕೆರೆ ಕ್ರಾಸ್ ಕಡೆ ಸಾಗಿಸುವ ಮಾರ್ಗ ಮಧ್ಯೆ ಪಟ್ಟಣದ ಶನಿ ಮಹಾತ್ಮ ವೃತ್ತದಲ್ಲಿ ಇದ್ದಕ್ಕಿದ್ದಂತೆ ಮಂಜುನಾಥ ಕೆಳಗೆ ಬಿದ್ದಿದ್ದು, ಆತನ ತಲೆಯ ಮೇಲೆ ಟ್ರ್ಯಾಕ್ಟರ್ ಹರಿದಿದೆ. ಕೂಡಲೇ ಸ್ಥಳೀಯರ ನೆರವಿನಿಂದ ಆತನನ್ನು ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗಿದೆ ಸಂಜೆ ಐದು ಗಂಟೆಯಲ್ಲಿ ಪುರಸಭೆಯ ಕಾಯಂ ನೌಕರ ಮಂಜುನಾಥ್ ಮೃತಪಟ್ಟಿದ್ದಾನೆ. ಆಸ್ಪತ್ರೆ…

Read More

ಕೊರಟಗೆರೆ : ತಾಲೂಕಿನ ನೀಲಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಕೋಟೆ ಗ್ರಾಮದಲ್ಲಿ ಶಾಲಾ ಮಕ್ಕಳಿಂದ ‘ನಮ್ಮ ಸಂಸ್ಕೃತಿ ನಮ್ಮ ವೈಭವ’ ಎಂಬ ಕಾರ್ಯಕ್ರಮವನ್ನು ಹಾಗೂ ಶಾಲಾ ವಾರ್ಷಿಕೋತ್ಸವವನ್ನು ವಿಶೇಷವಾಗಿ ವಿಜೃಂಭಣೆಯಿಂದ ಮಾಡಲಾಗಿತ್ತು. ಈ ಕಾರ್ಯಕ್ರಮಕ್ಕೆ ದಿವ್ಯಸಾಹಿತ್ಯವನ್ನು ಎಲೆರಾಂಪುರ ಕುಂಚಿಟಿಗ ಮಹಾ ಸಂಸ್ಥಾನ ಮಠದ ಪರಪೂಜ್ಯ ಶ್ರೀ ಹನುಮಂತನಾಥ ಸ್ವಾಮೀಜಿ ಹಾಗೂ ಶ್ರೀ ಶಿವಕುಮಾರ ಸ್ವಾಮಿ ಚಿಕ್ಕಣ್ಣ ಸ್ವಾಮಿ ಸುಕ್ಷೇತ್ರ ಹೆಟ್ಟೂರು ದೀಪ ಬೆಳಗುವುದರ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗೃಹ ಸಚಿವರ ವಿಶೇಷ ಅಧಿಕಾರಿ ಡಾ.ಕೆ.ನಾಗಣ್ಣ ಮಾತನಾಡಿ, ಹೊಸಕೋಟೆ ಗ್ರಾಮವು ತಾಲೂಕಿನ ವಿಶೇಷತೆ ಕೂಡ ಆಗಿದ್ದು, ಇದೇ ಗ್ರಾಮದಲ್ಲಿ ಓದಿ ಜಿಲ್ಲೆಯಾದ್ಯಂತ ಹೆಸರು ಮಾಡಿರುವ ಹಾಗೂ ಊರಿಗೆ ಕೀರ್ತಿ ತಂದಿರುವ ಮಾಜಿ ಜಿಲ್ಲಾ ಪಂಚಾ ಯಿತಿ ಅಧ್ಯಕ್ಷ ಪ್ರೇಮ ಮಾಲಿಂಗಪ್ಪನವರು ಹಾಗೂ ಅನೇಕ ಮಹನೀಯರು ಇದೇ ಊರಿನವರು. ಹೊಸಕೋಟೆ ಗ್ರಾಮವನ್ನು ತಿರುಗಿ ನೋಡುವಂತೆ ಮಾಡಿದ್ದಾರೆ. ಮಕ್ಕಳ ಜಾನಪದ ವೇಷಭೂಷಣ ನೋಡಿದರೆ, ಹಿಂದಿನ ಕಾಲದ ಹಳೆಯ ಹಳ್ಳಿಯ ಸೊಬಗು ನಮ್ಮ ಮುಂದೆ…

Read More

ಕೊರಟಗೆರೆ : ಹೊರರಾಜ್ಯದಿಂದ ತೋವಿನಕೆರೆಗೆ ಆಗಮಿಸಿ ಅನಧಿಕೃತವಾಗಿ ಪ್ರಾರಂಭ ಮಾಡಿರುವ ಸೆಲೂನ್ ಅಂಗಡಿಯನ್ನು ಮುಚ್ಚಿಸುವಂತೆ ಆಗ್ರಹಿಸಿ ಸವಿತಾ ಸಮಾಜದಿಂದ ತಮ್ಮ 12 ಅಂಗಡಿ ಮಳಿಗೆಗಳನ್ನು ಸ್ವಯಂ ಪ್ರೇರಿತವಾಗಿ ಕಳೆದ 3 ದಿನದಿಂದ ಮುಚ್ಚಿ ಮುಷ್ಕರಕ್ಕೆ ಕರೆ ನೀಡಿರುವ ಘಟನೆ ಇತ್ತೀಚಿಗೆ ಬೆಳಕಿಗೆ ಬಂದಿದೆ. ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ತೋವಿನಕೆರೆ ಗ್ರಾಮದಲ್ಲಿ ಹೊರ ರಾಜ್ಯದಿಂದ ಬಂದಿರುವ ಮುಸ್ಲಿಂ ಕುಟುಂಬವೊಂದು ಕ್ಷೌರದ ಅಂಗಡಿ ತೆರೆದಿದ್ದಾರೆ. ಇದರಿಂದ ಭಜಂತ್ರಿ ಸಮುದಾಯದ ಕುಟುಂಬಗಳಿಗೆ ಆರ್ಥಿಕವಾಗಿ ನಷ್ಟವಾಗಲಿದೆ ಎಂದು ಆರೋಪಿಸಿ, 3 ದಿನದಿಂದ ಸವಿತಾ ಸಮಾಜದ ಅಂಗಡಿ ಮಾಲೀಕರಿಂದ ಮುಷ್ಕರಕ್ಕೆ ಕರೆ ನೀಡಿ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ.  ಸವಿತಾ ಸಮಾಜದ ಆಗ್ರಹ ಏನು? ಗ್ರಾಮ ಪಂಚಾಯಿತಿಯಿಂದ ಪರವಾನಗಿ ಪಡೆಯದೇ  ಅನಧಿಕೃತವಾಗಿ ಮುಸ್ಲಿಂ ಕುಟುಂಬ ಸೆಲೂನ್ ತೆಗೆದಿದ್ದಾರೆರೇ. ಮುಸ್ಲಿಂ ಅಂಗಡಿ ಮಾಲೀಕ ಗ್ರಾಹಕರಿಂದ ಕಡಿಮೆ ಹಣ ಪಡೆದು ಕಟ್ಟಿಂಗ್ ಶೇವಿಂಗ್ ಮಾಡ್ತಾನೇ. ವಾರದಲ್ಲಿ 1 ದಿನವು ರಜೆಯಲ್ಲದೇ ಪ್ರತಿನಿತ್ಯ ಅಂಗಡಿ ತೆರೆಯುತ್ತಾರೆ. ನಾವು ಪೂರ್ವ ಕಾಲದಿಂದಲೂ…

Read More

ಬೀದರ್: ಜಿಲ್ಲಾ ಕಮಲನಗರ ತಾಲೂಕಿನ ಹಂದಿಕೆರಾ ಗ್ರಾಮದ ಹಿರಿಯ ಪ್ರಾಥಮಿಕ ಸರ್ಕಾರಿ ಶಾಲೆಯಲ್ಲಿ  ಉಮಾಕಾಂತ ನಾಗಮಾರಪಳ್ಳಿ ಅವರ ಹುಟ್ಟು ಹಬ್ಬದ ನಿಮಿತ್ತ ಅಮೂಲ ಕೇಶ್ವರಾವ್ ಬಿರಾದಾರ ಅವರ ನೇತೃತ್ವದಲ್ಲಿ  ನೋಟ್ ಬುಕ್ ವಿತರಣೆ ಮಾಡಲಾಯಿತು. ಬೆಂಗಳೂರಿನ ಅಪೆಕ್ಸ್ ಬ್ಯಾಂಕಿನ ನಿರ್ದೇಶಕರು, ಬೀದರ ಜಿಲ್ಲೆಯ ಡಿಸಿಸಿ ಬ್ಯಾಂಕಿನ ನಿರ್ದೇಶಕರು ಹಾಗೂ ಬೀದರ ಜಿಲ್ಲೆಯ ಡಿಸಿಸಿ ಬ್ಯಾಂಕಿನ ಮಾಜಿ ಅಧ್ಯಕ್ಷರಾಗಿರುವ  ಉಮಾಕಾಂತ್ ನಾಗಮಾರಪಳ್ಳಿ  ಅವರ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ  ಅಂಗದ್ ಮಾಲಕಾರಿ, ರಿತೇಶ್ ಬಿರಾದಾರ್, ಮಾರೋತಿ ಬಿರಾದಾರ್, ವಿಠ್ಠಲ್ ಬಿರಾದಾರ್, ಹರಿಓಂ, ಕೃಷ್ಣ, ಗಣೇಶ್ಇತರೆ ಶಿಕ್ಷಕರು  ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲಿಗೆ,  ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More