Subscribe to Updates
Get the latest creative news from FooBar about art, design and business.
- ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ
- ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ
- ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
- ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ
- ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
- ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
- ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
Author: admin
ಕೊರಟಗೆರೆ: ಹೀರೆಬೆಟ್ಟ ರಕ್ಷಿತ ಅರಣ್ಯದ ಗಡಿಯನ್ನೇ ಮುಚ್ಚಿ ಗಣಿಗಾರಿಕೆಗೆ ಮಾಡಿದ ದಾರಿಯನ್ನೂ ಮುಲಾಜಿಲ್ಲದೇ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ತೆರವುಗೊಳಿಸಿ ಕಲ್ಲು ಕ್ವಾರೇ ಮತ್ತು ಕ್ರಷರ್ ಘಟಕಕ್ಕೆ ಹೋಗುವ ದಾರಿಯ ಸಂಪರ್ಕದ ಮಾರ್ಗವನ್ನು ಕಡಿತಗೊಳಿಸಿದ್ದಾರೆ. ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಬೂದಗವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೌರಿಕಲ್ಲು ಗ್ರಾಮದ ಸರ್ವೆ ನಂ.36ರಲ್ಲಿ ಪ್ರಾರಂಭ ಆಗಿರುವ ಕಲ್ಲು ಕ್ವಾರೆ ಮತ್ತು ಕ್ರಷರ್ ಪ್ರಾರಂಭಕ್ಕೆ ಅರಣ್ಯ ಇಲಾಖೆಯ ಗಡಿಯನ್ನು ಮುಚ್ಚಿ ರಸ್ತೆಯನ್ನು ಮಾಡಲಾಗಿತ್ತು. ಅರಣ್ಯ ಇಲಾಖೆಯ ಗಡಿಯನ್ನು ಮುಚ್ಚಿ ರಸ್ತೆ ಮಾಡಿರುವ ಸುದ್ದಿಯನ್ನು ನಮ್ಮ ತುಮಕೂರು ವಾಹಿನಿಯಲ್ಲಿ ಸುದ್ದಿ ಬಿತ್ತಾರವಾಗಿತ್ತು. ಸುದ್ದಿ ತಿಳಿದ ತಕ್ಷಣವೇ ಅಧಿಕಾರಿಗಳ ತಂಡ ಸ್ಥಳಕ್ಕೆ ಹೋಗಿ ಜೆಸಿಬಿ ಮೂಲಕ ಟ್ರಾಂಚ್ ತಗೆದು ರಸ್ತೆಯ ಸಂಪರ್ಕ ಕಡಿತಗೊಳಿಸಿದ್ದಾರೆ. ಕೊರಟಗೆರೆ ತಹಶೀಲ್ದಾರ್ ಮಂಜುನಾಥ್ ಗೆ ಪಾರಂಪರಿಕ ಕಲ್ಲು ಬಂಡೆ ಕಾರ್ಮಿಕರ ದೂರು: ಗೌರಿಕಲ್ಲು, ದೊಗ್ಗನಹಳ್ಳಿ, ಮಲ್ಲೇಕಾವು ಮತ್ತು ಗೊಲ್ಲರಹಟ್ಟಿಯ ನೂರಾರುಜನ ಬಂಡೇ ಕಾರ್ಮಿಕರು ಗೌರಿಕಲ್ಲಿನಲ್ಲಿ ಪ್ರಾರಂಭ ಆಗಿರುವ ಕಲ್ಲುಗಣಿಗಾರಿಕೆ ವಿರೋಧಿಸಿ ತಹಶೀಲ್ದಾರ್ ಮಂಜುನಾಥ…
ತುಮಕೂರು: ಕುಂಭಮೇಳದ ಒಂದು ನಗ್ನ ಸತ್ಯ ಏನು ಅಂದ್ರೆ, ಬೆಳಗಾವಿಯಿಂದ ಹೋಗಿದ್ದಂತಹ 60 ಜನರಲ್ಲಿ 4 ಜನ ಪ್ರಾಣ ತೆತ್ತರು. ಕಾಲ್ತುಳಿತದಿಂದ ಪ್ರಾಣಬಿಟ್ರು. ಅವರ ಬಾಡಿಗಳನ್ನ ಊರಿಗೆ ಕಳುಹಿಸಬೇಕು ಅಂತೇಳಿ, ಡೆಲ್ಲಿಯಲ್ಲಿದ್ದ ನಾನು ಪ್ರಯಾಗರಾಜ್ ಗೆ ಹೋಗಿದ್ದೆ. ಅವಾಗ ಬಾಡಿಗಳನ್ನ ಕಸದ ಹಾಕೋ ಪ್ಲಾಸ್ಟಿಕ್ ಚೀಲದಲ್ಲಿ ತುಂಬಿದ್ರು ಎಂದು ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದ್ದಾರೆ. ತುಮಕೂರಿನ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮೃತದೇಹಗಳನ್ನು ಶಾಸ್ತ್ರೋಕ್ತವಾಗಿ ಬೆಳಗಾವಿಯ ಅವರ ಸಂಬಂಧಿಕರಿಗೆ ತಲುಪಿಸುವ ಕೆಲಸ ಮಾಡಿದ್ವಿ. ಇಂತಹ ಪ್ರಯಾಗರಾಜ್ ನಲ್ಲಿ ಕುಂಭಮೇಳ ಮಾಡಬೇಕು ಅಂದ್ರೆ, ಲಾ ಅಂಡ್ ಆರ್ಡರ್ ನಿರ್ವಹಣೆ ಆಯಾ ರಾಜ್ಯಕ್ಕೆ ಸೇರಿದ್ದು, ಕಾಲ್ತುಣಿತಕ್ಕೆ ಹೊಣೆಗಾರರು ಯಾರು ಅಂದ್ರೆ ಅಲ್ಲಿನ ಸರ್ಕಾರ ಎಂದರು. ಆ ಜವಾಬ್ದಾರಿಯನ್ನ ಅಲ್ಲಿನ ಸರ್ಕಾರನೇ ಹೊರಬೇಕು. ಆದರೆ ಹೊರ್ತಿರಲಿಲ್ಲ. ಸಂವಿಧಾನಬದ್ದವಾಗಿ ಆ ರಾಜ್ಯದಲ್ಲಿ ಕೆಲಸ ಆಗ್ತಿಲ್ಲ ಅನ್ನೊ ಭಾವನೆ ಬರುತ್ತೆ. ಇವತ್ತು ಎಲ್ಲೋ ಒಂದು ಕಡೆಗೆ ಗಂಗಾ ನದಿಯಲ್ಲಿ ಸ್ನಾನ ಮಾಡಿದ್ರೆ ಪಾಪಗಳು ಕಳೆದೊಗ್ತದೆ ಅನ್ನೋ ಭಾವನೆ ಇರುತ್ತೆ.…
ಬೆಂಗಳೂರು: ಅತ್ತೆಯನ್ನು ಕೊಲೆ ಮಾಡಲು ಸೊಸೆಯೊಬ್ಬಳು ವೈದ್ಯರ ಬಳಿ ಮಾತ್ರೆಗೆ ಬೇಡಿಕೆಯಿಟ್ಟ ಘಟನೆ ನಡೆದಿದ್ದು, ತಕ್ಷಣವೇ ವೈದ್ಯರು ಸಂಜಯ ನಗರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಡಾಕ್ಟರ್ ಸುನೀಲ್ ಕುಮಾರ್ ಎನ್ನುವವರಿಗೆ ಮಹಿಳೆಯೊಬ್ಬರು ವಾಟ್ಸಾಪ್ ನಲ್ಲಿ ಮೆಸೆಜ್ ಮಾಡಿದ್ದು, ನಮ್ಮ ಅತ್ತೆ ತುಂಬಾ ಹಿಂಸೆ ಕೊಡುತ್ತಿದ್ದಾರೆ. ಅವರಿಗೆ ವಯಸ್ಸಾಗಿದೆ. ಅವರನ್ನು ಹೇಗೆ ಸಾಯಿಸೋದು? ಒಂದೆರೆಡು ಮಾತ್ರೆ ತೆಗೆದುಕೊಂಡರೆ ಸಾಯುತ್ತಾರಲ್ಲ, ಅದನ್ನು ಹೇಳಿ ಎಂದು ಮೆಸೇಜ್ ಮೂಲಕ ಕೇಳಿದ್ದಾರೆ. ಈ ವೇಳೆ ವೈದ್ಯರು ಕೊಲ್ಲುವುದು ನಮ್ಮ ಕೆಲಸ ಅಲ್ಲ ಎಂದು ಬುದ್ಧಿವಾದ ಹೇಳಲು ಮುಂದಾಗುತ್ತಿದ್ದಂತೆಯೇ, ಮಹಿಳೆ ತನ್ನ ಮೆಸೆಜ್ ಡಿಲೀಟ್ ಮಾಡಿದ್ದು, ವೈದ್ಯರ ನಂಬರ್ ನ್ನು ಬ್ಲಾಕ್ ಮಾಡಿದ್ದಾಳೆ. ಆದರೆ ವೈದ್ಯರು ಮೊದಲೇ ಮಹಿಳೆಯ ವಾಟ್ಸಾಪ್ ಸಂದೇಶವನ್ನು ಮೊಬೈಲ್ ನಲ್ಲಿ ಸ್ಕ್ರೀನ್ ಶಾಟ್ ತೆಗೆದುಕೊಂಡಿದ್ದರು. ಬಳಿಕ ಸಂಜಯ್ ನಗರ ಪೊಲೀಸರಿಗೆ ಮಾಹಿತಿ ನೀಡಿ , ಈ ಬಗ್ಗೆ ತನಿಖೆ ನಡೆಸುವಂತೆ ದೂರು ನೀಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಹೊಸ ಮಹೀಂದ್ರ ಕಾರ್ ಸೇಲ್ಸ್ ಮತ್ತು ಸರ್ವೀಸ್, ಐ.ಐ.ಎಫ್.ಎಲ್ ಸಮಸ್ತ ಫಿನಾನ್ಸ್ ಸಂಸ್ಥೆಯ ಸಹಭಾಗಿತ್ವದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸಂಬಂಧ ಫೆಬ್ರವರಿ 21ರಂದು ನೇರ ಸಂದರ್ಶನ ಏರ್ಪಡಿಸಲಾಗಿದೆ. ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಯಾವುದೇ ಪದವಿ, ಐ.ಟಿ.ಐ., ಡಿಪ್ಲೊಮಾ, ಹಾಗೂ ಬಿ.ಇ. (ಮೆಕ್ಯಾನಿಕಲ್) ಪಾಸಾದ ಪುರುಷ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳು ತಮ್ಮ ಬಯೋಡೇಟಾದೊಂದಿಗೆ ಅಂದು ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಡಿ.ಡಿ.ಪಿ.ಐ ಬಸ್ ನಿಲ್ದಾಣ, ವಾಸನ್ ಕಣ್ಣಿನ ಆಸ್ಪತ್ರೆ ಬಳಿ, ಮೂಲೆಮನೆ ಹೋಟೆಲ್ ಪಕ್ಕ, ಸೋಮೇಶ್ವರಪುರಂ, 14ನೇ ಕ್ರಾಸ್, ತುಮಕೂರು–572102, ಇಲ್ಲಿ ಸಂದರ್ಶನಕ್ಕೆ ಹಾಜರಾಗಲು ಉದ್ಯೋಗಾಧಿಕಾರಿ ಕಿಶೋರ್ ಕುಮಾರ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0816–2278488, ಮೊ.ಸಂ. 9071021143, 9513136642ನ್ನು ಸಂಪರ್ಕಿಸಬಹುದಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4…
ಬೀದರ್: ಮಹಾರಾಷ್ಟ್ರದ ಉದಗಿರ್ ನಲ್ಲಿ ಹಕ್ಕಿ ಜ್ವರ ಹೆಚ್ಚಳವಾಗಿರುವ ಹಿನ್ನೆಲೆ ಬೀದರ್ ನಲ್ಲಿ ಕೋಳಿ, ಉತ್ಪನ್ನಗಳ ಸಾಗಾಟಕ್ಕೆ ನಿಷೇಧ ಮಾಡಲಾಗಿದೆ. ಬೀದರ್ ಜಿಲ್ಲೆಯ ಗಡಿ ತಾಲೂಕು ಕಮಲನಗರ, ಭಾಲ್ಕಿ, ಬಸವಕಲ್ಯಾಣ ತಾಲೂಕುಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಮಹಾರಾಷ್ಟ್ರದ ಉದಗಿರನಲ್ಲಿ ಕಾಗೆಗಳಲ್ಲಿ ಹಕ್ಕಿ ಜ್ವರ ಧೃಡಪಟ್ಟಿರುವ ಹಿನ್ನೆಲೆಯಲ್ಲಿ ಉದಗಿರನಿಂದ ಗಡಿ ಜಿಲ್ಲೆ ಬೀದರ್ ನಲ್ಲಿ ಕೋಳಿ ಮತ್ತು ಅದರ ಉತ್ಪನ್ನಗಳ ಸಾಗಾಟಕ್ಕೆ ನಿಷೇಧಿಸಿ ಜಿಲ್ಲಾ ಮಟ್ಟದ ಪ್ರಾಣಿ ಜನ್ಯರೋಗಗಳ ತುರ್ತು ನಿರ್ವಹಣಾ ಸಮಿತಿ ಅಧ್ಯಕ್ಷರಾದ ಜಿಲ್ಲಾ ದಂಡಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಉದಗಿರ ತಾಲೂಕಿನಲ್ಲಿ ಹಕ್ಕಿ ಜ್ವರ ದೃಢಪಟ್ಟಿರುವ ಕಾರಣ, ರೋಗವು ಇನ್ನಿತರ ಸ್ಥಳಗಳಿಗೆ ಹರಡದಂತೆ ಮುಂಜಾಗೃತಾ ಕ್ರಮವಾಗಿ, ಸರ್ಕಾರದ ಅಧಿನಿಯಮದಡಿ ಉದಗಿರದಿಂದ ಕೋಳಿ, ಕೋಳಿಮಾಂಸ, ಮೊಟ್ಟೆ, ಕೋಳಿ ಗೊಬ್ಬರ ಇವುಗಳ ಸಾಗಾಣಿಕೆಯನ್ನು ತಡೆಗಟ್ಟಲು ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲು ತಕ್ಷಣದಿಂದ ಜಾರಿಗೆ ಬರುವಂತೆ 15 ದಿನಗಳ ವರೆಗೆ ಇಲ್ಲವೇ ಮುಂದಿನ ಆದೇಶದವರೆಗೆ ಜಾರಿಗೊಳಿಸಲಾಗಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್…
ಎಚ್.ಡಿ.ಕೋಟೆ: ಪಟ್ಟಣದ ಪುರಸಭೆ ಅಧ್ಯಕ್ಷರಾಗಿ ಜಾದಳ ಪಕ್ಷದ ಶಿವಮ್ಮ ಚಾಕಳ್ಳಿ ಕೃಷ್ಣ ಉಪಾಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಆಸಿಫ್ ಚುನಾಯಿತರಾಗಿದ್ದಾರೆ. ಪಟ್ಟಣದ ಪುರಸಭೆಯ ಕಚೇರಿಯಲ್ಲಿ ನಡೆದ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ಪ್ರಕ್ರಿಯೆಯಲ್ಲಿ ಪರಿಶಿಷ್ಟ ಪಂಗಡಕ್ಕೆ ಮಹಿಳೆಗೆ ಮೀಸಲಾಗಿದ್ದ ಅಧ್ಯಕ್ಷರ ಸ್ಥಾನಕ್ಕೆ ಚಾಕಳ್ಳಿ ವಾರ್ಡಿನ ಸದಸ್ಯರಾದ ಶಿವಮ್ಮ ಚಾಕಹಳ್ಳಿ ಕೃಷ್ಣ ಮಾತ್ರ ನಾಮಪತ್ರ ಸಲ್ಲಿಸಿದರು. ಸಾಮಾನ್ಯ ವರ್ಗಕ್ಕೆ ಮೀಸಲಾಗಿದ್ದ ಉಪಾಧ್ಯಕ್ಷರ ಸ್ಥಾನಕ್ಕೆ ಒಂದನೇ ವಾರ್ಡಿನ ಕಾಂಗ್ರೆಸ್ ಸದಸ್ಯ ಆಸಿಫ್, ವಡ್ಡರಗುಡಿಯ ವಾರ್ಡಿನ ಕಾಂಗ್ರೆಸ್ ಸದಸ್ಯ ಸೋಮಶೇಖರ್ ಯರೆಹಳ್ಳಿ, ಹ್ಯಾಂಡ್ ಪೋಸ್ಟಿನ ವಾರ್ಡಿನ ಜಾದಳ ಪಕ್ಷದ ಸದಸ್ಯ ಹರೀಶ್ ಗೌಡ ನಾಮಪತ್ರ ಸಲ್ಲಿಸಿದ್ದರು. ಕೊನೆ ಗಳಿಗೆಯಲ್ಲಿ ಸೋಮಶೇಖರ್ ನಾಮಪತ್ರ ವಾಪಸ್ ತೆಗೆದುಕೊಂಡ ಹಿನ್ನೆಲೆಯಲ್ಲಿ ಆಸಿಫ್ ಮತ್ತು ಹರೀಶ್ ಗೌಡ ನಡುವೆ ಪೈಪೋಟಿ ಉಂಟಾಗಿತ್ತು. ಕಾಂಗ್ರೆಸ್ ಪಕ್ಷದ 13 ಜನ ಸದಸ್ಯರುಗಳು ಕೈ ಎತ್ತುವ ಮೂಲಕ ಮತ ಚಲಾಯಿಸುವುದಾಗಿ ಪಟ್ಟು ಹಿಡಿದರೂ ಜಾದಳ ಪಕ್ಷದ ಹತ್ತು ಜನ ಸದಸ್ಯರು ಗುಪ್ತ ಮತದಾನದ ಆಗಬೇಕೆಂದು ತಿಳಿಸಿ ಸಭೆಯಲ್ಲಿ ಗದ್ದಲ…
ಬೀದರ್: ಜಿಲ್ಲಾ ಔರಾದ ತಾಲೂಕಿನ ಬೆಳಕುಣಿ (ಚೌಧರಿ) ಗ್ರಾಮದ ಸರಕಾರಿ ಪ್ರೌಢ ಶಾಲೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ 395 ನೇ ಜಯಂತಿ ಆಚರಿಸಲಾಯಿತು. ಶಿಕ್ಷಕರಾದ ಸಂಜೀವಕುಮಾರ ಬಿರಾದಾರ ಮಾತನಾಡಿ, ಶೌರ್ಯ ಸಾಹಸ ಮತ್ತು ಸ್ವಾಭಿಮಾನದ ಕೆಚ್ಚಿಗೆ ಇನ್ನೊಂದು ಹೆಸರಾಗಿದ್ದ ಭಾರತೀಯರ ಹೃದಯ ಸಾಮ್ರಾಟ ಅಪ್ರತಿಮ ಛಲದ ದೇಶ ಕಂಡ ಅಪ್ರತಿಮ ಶೂರ ಮಹಾಕ್ಷತ್ರಿಯ ಚತುರಮತಿ ಆಡಳಿತಗಾರ, ಹೆಸರುವಾಸಿಯಾದ ಛತ್ರಪತಿ ಶಿವಾಜಿ ಮಹಾರಾಜರು, ಯುದ್ಧ ಚಾಕಚಕ್ಯತೆ ಆಡಳಿತಾತ್ಮಕ ಕೌಶಲ್ಯಕ್ಕೆ ಸ್ವಾಭಿಮಾನಿ ಕನಸು ಕಂಡ ಶ್ರೇಷ್ಠ ಆಡಳಿತಗಾರರಾದ ಹೆಸರಾದವರು ತಿಳಿಸಿದರು. ಈ ಸಮಯದಲ್ಲಿ ಪ್ರಾಂಶುಪಾಲರಾದ ಉಮಾಕಾಂತ ಚೋಪಡೇ, ಶಿಕ್ಷಕರಾದ ಆಶೋಕ್ ಜಾಧವ, ರಂಜನ ಗಾಯಕ್ವಾಡ್, ಮುತ್ತಮ್ಮ ಹಾಗೂ ಶಾಲೆಯ ಎಸ್.ಡಿ ಎಮ್ ಸಿ. ಅಧ್ಯಕ್ಷರಾದ ಎಮ್.ಡಿ.ನಯೂಮ್ ಉಪಸ್ಥಿತರಿದ್ದರು . ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ವರದಿ: ಮಲಾರ ಮಹದೇವಸ್ವಾಮಿ ಹೆಚ್.ಡಿ.ಕೋಟೆ: ತಾಲೂಕಿನ ಕುಡಾಂಚಿನ ಹಾಡಿಯಾದ ಮಾಳದ ಹಾಡಿ ಶಾಲಾ ಮಕ್ಕಳಿಗೆ ಇಂದು ಅಗತ್ಯ ವಸ್ತುಗಳನ್ನು ನೀಡಿ ಮಾಹಿತಿ ತಂತ್ರ ಜ್ಞಾನ ಉದ್ಯೋಗಿ ಪ್ರದೋಶ್ ಮಾನವೀಯತೆ ಮೆರೆದರು. ಪ್ರದೋಶ್ ಬೆಂಗಳೂರಿಂದ ಒಮ್ಮೆ ಕೋಟೆಯ ವನಸಿರಿಯನ್ನು ಮತ್ತು ಇಲ್ಲಿನ ಕಾಡು ಪ್ರಾಣಿಗಳನ್ನು ನೋಡುವ ಕುತೂಹಲದಿಂದ ಸಾಫರಿಗೆ ಬಂದಿದ್ದರು. ಸಾಫರಿಗೆ ಬಂದಂತ ಸಂದರ್ಭದಲ್ಲಿ ಕಾಡನ್ನು ವೀಕ್ಷಣೆ ಮಾಡುತ್ತ ದೂರದಲ್ಲಿ ಕಂಡ ಹಾಡಿಯ ಬಗ್ಗೆ ಜೊತೆಗಿದ್ದ ತನ್ನ ಪರಿಚಯಸ್ಥ N ಬೆಳತ್ತೂರು ಗ್ರಾಮ ಪಂಚಾಯತ್ ಅಧ್ಯಕ್ಷ ಮಾಲಿಂಗಯ್ಯ ಆಲಿಯಾಸ್ ಇಂದ್ರೇಶ್ ರವರನ್ನು ಕೇಳಿ ತಿಳಿದುಕೊಂಡು ಹಾಡಿಗೆ ಭೇಟಿ ನೀಡಿದರು. ಅಲ್ಲಿ ಇವರ ಕಣ್ಣಿಗೆ ಒಂದು ಪುಟ್ಟದಾದ ಶಾಲೆಯೊಂದು ಕಣ್ಣಿಗೆ ಬೀಳುತ್ತದೆ. ಅಲ್ಲಿ ಮಕ್ಕಳಲ್ಲಿ ಮಕ್ಕಳಾಗಿ ತಾಯಂತೆ ಮಕ್ಕಳಿಗೆ ಆಟೋಟ ಗಳನ್ನು ಹೇಳಿಕೊಡುತ್ತ ಕುಳಿತಿದ್ದ ಶಾಲೆಯ ಮುಖ್ಯಶಿಕ್ಷಕಿ ಮಮತಾಳನ್ನು ಮಾಲಿಂಗಯ್ಯ ಜೊತೆಗೂಡಿ ಭೇಟಿಯಾಗಿ ಶಾಲೆಯ ಬಗ್ಗೆ ವಿಚಾರಿಸಿ, ಕೆಲವು ಮೂಲಭೂತ ಸೌಕರ್ಯದ ಕೊರತೆಯ ಬಗ್ಗೆ ತಿಳಿದುಕೊಂಡು ನಾನು ಹಂತ ಹಂತವಾಗಿ ಮಕ್ಕಳಿಗೆ ಉಪಯುಕ್ತ ವಸ್ತುಗಳನ್ನು…
ನವದೆಹಲಿ: ರಾಜ್ಯದಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸವಾಗುತ್ತಿಲ್ಲ, ಸಿದ್ದರಾಮಯ್ಯ ಕೇಂದ್ರದತ್ತ ಬೊಟ್ಟು ಮಾಡುವುದನ್ನು ಬಿಟ್ಟು, ನೆಟ್ಟಗೆ ಆಡಳಿತ ಮಾಡಿ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ದೆಹಲಿಯಲ್ಲಿಂದು ಮಾತನಾಡಿದ ಅವರು, ಸಿದ್ದರಾಮಯ್ಯ ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ, ಅವರದ್ದು ಬ್ರಿಟೀಷ್ ರ ಮೆಂಟಾಲಿಟಿ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ನೆಟ್ಟಗೆ ಆಡಳಿತ ಮಾಡಿ ಇಲ್ಲವೇ ರಾಜೀನಾಮೆ ಕೊಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪ್ರತಿನಿತ್ಯ ಒಂದಲ್ಲ ಒಂದು ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಿರುವುದೇ ಗ್ಯಾರಂಟಿಗಳಿಂದ, ಆದ್ರೆ ಗ್ಯಾರಂಟಿಗಳು ಜನರಿಗೆ ತಲುಪುತ್ತಿಲ್ಲ. ಗೃಹಲಕ್ಷ್ಮಿ ಯೋಜನೆ ಮಹಿಳೆಯರಿಗೆ ತಲುಪುತ್ತಿಲ್ಲ, ಬಸ್ ಫ್ರೀ ಅಂತಾ ಹೇಳಿದ್ರು ಬಸ್ ನಿಲ್ಲಿಸಿದ್ರು, ಡಿಪೋದಿಂದ ಬಸ್ ಬಿಡುತ್ತಿಲ್ಲ. ಸಿದ್ದರಾಮಯ್ಯ ಯೋಜನೆಗಳು ನಿಂತಿದೆಯಾ ಎಂದು ಕೇಳಿದ್ದಾರೆ. ಹಣಕಾಸು ಇಲಾಖೆ ಇಟ್ಟುಕೊಂಡು ಸಿದ್ದರಾಮಯ್ಯ ಅವರಿಗೇ ಗೊತ್ತಿಲ್ಲ ಅಂದ್ರೆ ಹೇಗೆ? ಅಂತ ಪ್ರಶ್ನಿಸಿದರು. ಮುಂದುವರೆದು, 10 ಕೆಜಿ ಕೊಡ್ತಿವಿ ಅಂದಿದ್ರು ಈಗ ಅಕ್ಕಿ ಕೊಡ್ತಿಲ್ಲ. ಕೇಂದ್ರ ಸರ್ಕಾರ ಅಕ್ಕಿಕೊಡಲು ರೆಡಿ ಇದ್ದರೂ…
ಬೆಂಗಳೂರು: ಗ್ಯಾರಂಟಿ ಯೋಜನೆಯಾದ ಅನ್ನಭಾಗ್ಯದಡಿ ಫಲಾನುಭವಿಗಳಿಗೆ ನೀಡುತ್ತಿದ್ದ ಹಣದ ಬದಲಿಗೆ ಅಕ್ಕಿಯನ್ನೇ ಕೊಡಲು ಸರ್ಕಾರ ತೀರ್ಮಾನಿಸಿದೆ ಎಂದು ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ಅಕ್ಕಿ ಲಭ್ಯವಿರುವ ಹಿನ್ನೆಲೆ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿಯನ್ನು ಒಎಂಎಸ್ಎಸ್ ಯೋಜನೆ ಅಡಿಯಲ್ಲಿ ಖರೀದಿಸಿ ಈ ತಿಂಗಳಿನಿಂದಲೇ ಅಕ್ಕಿ ವಿತರಿಸಲು ತೀರ್ಮಾನಿಸಿದ ಎಂದು ಹೇಳಿದ್ದಾರೆ. ಅನ್ನಭಾಗ್ಯ ಯೋಜನೆ ಅಡಿ ಬಿಪಿಎಲ್ ಕಾರ್ಡ್ ಫಲಾನುಭವಿಗಳಿಗೆ 10 ಕೆ.ಜಿ. ಅಕ್ಕಿ ಕೊಡುವುದಾಗಿ ಕಾಂಗ್ರೆಸ್ ಚುನಾವಣಾ ಸಂದರ್ಭದಲ್ಲಿ ಘೋಷಣೆ ಮಾಡಿತ್ತು. ನಂತರದ ದಿನಗಳಲ್ಲಿ ಅಗತ್ಯ ಪ್ರಮಾಣದಲ್ಲಿ ಅಕ್ಕಿ ಲಭ್ಯವಾಗದ ಕಾರಣ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ಕೊಟ್ಟು, ಉಳಿದ 5 ಕೆಜಿ ಅಕ್ಕಿ ಬದಲಿಗೆ 170 ರೂ. ನೀಡಲಾಗುತ್ತಿತ್ತು ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4