Subscribe to Updates
Get the latest creative news from FooBar about art, design and business.
- “ಹೌದು ನಾನು ಏಜೆಂಟ್, ಆದರೆ ಮಾಫಿಯಾ ಕಮಿಷನ್ ಏಜೆಂಟ್ ಅಲ್ಲ”: ಸಿಎಂ ಡಿಕೆಶಿಗೆ ಆರ್. ಅಶೋಕ್ ತಿರುಗೇಟು
- 26 ವರ್ಷಗಳ ಹಿಂದೆ ಸರ್ಕಸ್ ಕಂಪನಿ ಜೊತೆ ಓಡಿಹೋಗಿದ್ದ ಸತೀಶ್ ‘ಸಲೀಂ’ ಆಗಿ ಮನೆಗೆ ವಾಪಸ್!
- ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಪ್ರಿಯಕರನ ಬಂಧನ!
- ರೈತರ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: KRS ಅಧ್ಯಕ್ಷ ರವಿ ಕೃಷ್ಣಾ ರೆಡ್ಡಿ ವಿರುದ್ಧ ಕೇಸು ದಾಖಲು
- ಸಿರಾ: ಟಿ.ಬಿ.ಜಯಚಂದ್ರ ಅವರಿಗೆ ಸಚಿವ ಸ್ಥಾನ ನೀಡಲು ಬ್ಲಾಕ್ ಕಾಂಗ್ರೆಸ್ ಒತ್ತಾಯ
- ತುಮಕೂರು ವಿಶ್ವವಿದ್ಯಾನಿಲಯ: ವಿವಿಧ ಪದವಿಗಳ ಉಳಿಕೆ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
- ದೆಹಲಿಯಲ್ಲಿ ತಿಪಟೂರು ಕಾಂಗ್ರೆಸ್ ಶಾಸಕ ಷಡಕ್ಷರಿ ದಿಢೀರ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು
- ರಾಜ್ಯ ಮಟ್ಟದ ಚರ್ಮ ಪಾದರಕ್ಷೆ ತಯಾರಿಕಾ ಸ್ಪರ್ಧೆ: ಜುಲೈ 6 ರಂದು ಬೆಂಗಳೂರಿನಲ್ಲಿ ಆಯೋಜನೆ
Author: admin
ತುಮಕೂರು: ಜಿಲ್ಲೆಯಲ್ಲಿ ಆರಂಭವಾಗಿರುವ ಜನಗಣತಿ (ಮನೆ ಗಣತಿ) ಕಾರ್ಯಕ್ಕೆ ಆರಂಭದಲ್ಲೇ ತಾಂತ್ರಿಕ ವಿಘ್ನ ಎದುರಾಗಿದೆ. ಗಣತಿಗಾಗಿ ಬಳಸಬೇಕಾದ ‘ಹೌಸ್ ಲಿಸ್ಟಿಂಗ್ ಆಪರೇಟಿಂಗ್ ಆ್ಯಪ್’ (HLO) ಸರಿಯಾಗಿ ಕೆಲಸ ಮಾಡದ ಕಾರಣ ಗಣತಿದಾರರಾಗಿ ನೇಮಕಗೊಂಡಿರುವ ಶಿಕ್ಷಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಗಣತಿ ಕಾರ್ಯಕ್ಕೆ ಕನಿಷ್ಠ ಆಂಡ್ರಾಯ್ಡ್ 10 ಆವೃತ್ತಿಯ ಮೊಬೈಲ್ ಅಗತ್ಯವಿದೆ. ಆದರೆ, ಅನೇಕ ಶಿಕ್ಷಕರು ಹಳೆಯ ಮಾದರಿಯ ಮೊಬೈಲ್ ಹೊಂದಿದ್ದು, ಅವುಗಳಲ್ಲಿ ಆ್ಯಪ್ ಇನ್ ಸ್ಟಾಲ್ ಆಗುತ್ತಿಲ್ಲ. ಆ್ಯಪ್ ಕೆಲಸ ಮಾಡದ ಕಾರಣ ಅನಿವಾರ್ಯವಾಗಿ ಶಿಕ್ಷಕರು ₹15,000 ದಿಂದ ₹20,000 ಖರ್ಚು ಮಾಡಿ ಹೊಸ ಮೊಬೈಲ್ ಖರೀದಿಸುತ್ತಿದ್ದಾರೆ. ಗಣತಿ ಕಾರ್ಯ ಮುಗಿಸಿದರೆ ಅವರಿಗೆ ಸಿಗುವ ಗೌರವಧನ ಕೇವಲ ₹25,000, ಆದರೆ ಅದಕ್ಕೂ ಮೊದಲೇ ಮೊಬೈಲ್ ಗಾಗಿ ದೊಡ್ಡ ಮೊತ್ತ ವ್ಯಯಿಸಬೇಕಾದ ಪರಿಸ್ಥಿತಿ ಬಂದೊದಗಿದೆ. ಒಂದು ವೇಳೆ ಆ್ಯಪ್ ಇನ್ ಸ್ಟಾಲ್ ಆದರೂ, ಲಾಗಿನ್ ಆಗುವಾಗ ಸರ್ವರ್ ಸಮಸ್ಯೆ ಕಾಡುತ್ತಿದೆ. ಗಂಟೆಗಟ್ಟಲೆ ಕಾಯಬೇಕಾದ ಸ್ಥಿತಿ ಇದ್ದು, ಲಾಗಿನ್ ಆದ ನಂತರ ಮೊಬೈಲ್ ಗೆ…
ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತುಮಕೂರು ಮಹಾನಗರ ಪಾಲಿಕೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಸಮಸ್ತ ವೀರಶೈವ-ಲಿಂಗಾಯಿತ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 20ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಅಮಾನಿಕೆರೆ ರಸ್ತೆಯಲ್ಲಿರುವ ಕನ್ನಡಭವನದಲ್ಲಿ ‘ಶ್ರೀ ಜಗಜ್ಯೋತಿ ಬಸವೇಶ್ವರರ ಜಯಂತಿ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಘನ ಉಪಸ್ಥಿತಿಯಲ್ಲಿ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ನಗರ ಶಾಸಕ ಜಿ.ಬಿ. ಜ್ಯೋತಿಗಣೇಶ್ ಅಧ್ಯಕ್ಷತೆವಹಿಸುವರು. ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಜನಪ್ರತಿನಿಧಿಗಳು, ಅಧಿಕಾರಿಗಳು, ಗಣ್ಯರು ಆಗಮಿಸುವರು. ಕಾರ್ಯಕ್ರಮದಲ್ಲಿ ಶರಣೆ ಧ್ಯಾನಶಿವಬಸಪ್ಪ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಜಿಲ್ಲಾ/ತಾಲ್ಲೂಕು ಮಟ್ಟದ ಅಧಿಕಾರಿಗಳು, ಜನಪ್ರತಿನಿಧಿಗಳು, ವಿವಿಧ ಸಮುದಾಯದ ಮುಖಂಡರು, ಕಲಾವಿದರು, ಜಿಲ್ಲೆಯ ವೀರಶೈವ ಲಿಂಗಾಯಿತ ಸಮುದಾಯದ ಸಂಘ ಸಂಸ್ಥೆಗಳ ಅಧ್ಯಕ್ಷರು, ಮುಖಂಡರು ಹಾಗೂ ಗಣ್ಯರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ…
ತುಮಕೂರು: ಬರಪೀಡಿತ ಬಯಲು ಸೀಮೆಯ ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಇನ್ನಿತರ ಜಿಲ್ಲೆಗಳಿಗೆ ಕುಡಿಯುವ ನೀರು ಮತ್ತು ಅಂತರ್ಜಲ ವೃದ್ಧಿಗಾಗಿ ರೂಪಿಸಿರುವ ಎತ್ತಿನಹೊಳೆ ಯೋಜನೆಗೆ ಅಡ್ಡಿಯಾಗಿದ್ದ ಅರಣ್ಯ ಇಲಾಖೆಯ ಕ್ಲಿಯರೆನ್ಸ್ ಏ.1.2026ರಂದು ಸಿಕ್ಕಿದ್ದು, ಬಾಕಿ ಇರುವ 6 ಕಿ.ಮೀ. ಟನಲ್ ಕಾಮಗಾರಿ ಮುಗಿಸಿ, 2026ರ ಅಕ್ಟೋಬರ್ ಒಳಗೆ ತುಮಕೂರು ಜಿಲ್ಲೆಗೆ ನೀರು ಹರಿಸಲು ಪ್ರಯತ್ನ ನಡೆಸುತ್ತಿರುವುದಾಗಿ ವಿಶ್ವೇಶ್ವರಯ್ಯ ಜಲ ಅಭಿವೃದ್ಧಿ ನಿಗಮದ ಅಧಿಕಾರಿ ಚೀಫ್ ಇಂಜಿನಿಯರ್ ಆನಂದ್ ಹೆಚ್.ಎಸ್. ತಿಳಿಸಿದ್ದಾರೆ. ನಗರದ ವಿಶ್ವೇಶ್ವರಯ್ಯ ಜಲ ಅಭಿವೃದ್ಧಿ ನಿಗಮದ ಎತ್ತಿನಹೊಳೆ ಯೋಜನಾ ಕಚೇರಿಯಲ್ಲಿ ಹಾಲಪ್ಪ ಪ್ರತಿಷ್ಠಾನದ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪರಿಸರ ಕ್ಲಿಯರೆನ್ಸ್ ಪಡೆಯಲು ಸಹಕರಿಸಿದ ಅಧಿಕಾರಿಗಳಿಗೆ ಅಭಿನಂದನೆ ಹಾಗೂ ಯೋಜನೆಗೆ ಸಂಬಂಧಿಸಿದ ಮಾಹಿತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, 262 ಕಿ.ಮೀ. ನಾಲಾ ಕಾಮಗಾರಿಯಲ್ಲಿ 221 ಕಿ.ಮೀ. ಮುಕ್ತಾಯಗೊಂಡಿದೆ. 20 ಕಿ.ಮೀ. ಕಾಮಗಾರಿ ಪ್ರಗತಿಯಲ್ಲಿದೆ. ಹತ್ತು ಕಿ.ಮೀ. ಅರಣ್ಯ ಕಾಮಗಾರಿಯಲ್ಲಿ 6 ಕಿ.ಮೀ. ಬಾಕಿ ಇದ್ದು, ಈ ಕಾಮಗಾರಿ ಮುಗಿದರೆ ತುಮಕೂರು ಜಿಲ್ಲೆಗೆ…
ತುಮಕೂರು: ಆಧುನಿಕತೆಯ ಸಂದರ್ಭದಲ್ಲಿ ಜಾತಿಯ ಉತ್ತುಂಗ ಮತ್ತು ಒಳಸುಳಿವು ಹೆಚ್ಚಿದೆ. ಮನುಷ್ಯನ ಅಂತರ್ಯದೊಳಗೆ ಜಾತಿಯ ಪರಾಕಾಷ್ಠೆ ಹೆಚ್ಚುತ್ತಿರುವುದರಿಂದಲೇ ಸಮಾಜದಲ್ಲಿ ವಿಘಟನೆಗಳು ಹೆಚ್ಚುತ್ತಿವೆ ಎಂದು ಲೇಖಕಿ ಎಂ.ಸಿ.ಲಲಿತ ವಿಷಾದಿಸಿದರು. ತುಮಕೂರು ನಗರ ವರದಕ್ಷಿಣೆ ವಿರೋಧಿ ವೇದಿಕೆ–ಸಾಂತ್ವನ ಕೇಂದ್ರದ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ಅಂಬೇಡ್ಕರ್ ಚಿಂತನೆ ಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಒಬ್ಬ ವ್ಯಕ್ತಿ ಹೆಚ್ಚು ಹೆಚ್ಚು ತಿಳಿದುಕೊಂಡಂತೆಲ್ಲಾ, ಜಾತಿಯ ಸ್ವಾಭಿಮಾನಿಯಾಗುತ್ತಿದ್ದಾನೆ. ಕಲಿತವರು, ಉದ್ಯೋಗಿಗಳು ತಮ್ಮ ತಮ್ಮ ಜಾತಿಗೆ ಸೀಮಿತರಾಗುತ್ತಿದ್ದಾರೆ. ಹೀಗಾಗಿ ಜಾತಿ ಸಂಘಟನೆಗಳು ಸದೃಢವಾಗಿ ಬೆಳೆಯುತ್ತಿದ್ದು, ಭಾರತದಲ್ಲಿ ಇರುವಷ್ಟು ಜಾತಿಯ ಪ್ರಜ್ಞೆ ಬೇರೆಲ್ಲೂ ಕಾಣಲು ಸಾಧ್ಯವಿಲ್ಲ ಎಂದರು. ಡಾ.ಬಿ.ಆರ್.ಅಂಬೇಡ್ಕರ್ ಅವರು ಯಾವುದೇ ಒಂದು ಜಾತಿಗೆ ಸೀಮಿತವಾಗಿ ಕೆಲಸ ಮಾಡಿದವರಲ್ಲ. ಅವರ ಸಂವಿಧಾನವನ್ನು ಎಲ್ಲರೂ ಅನುಭವಿಸುತ್ತಿದ್ದಾರೆ. ಮಹಿಳೆಯರಿಗೆ ಅವಕಾಶಗಳನ್ನು ಕಲ್ಪಿಸಿದ್ದೇ ಅಂಬೇಡ್ಕರ್ ಅವರು. ತಮ್ಮ ಸಂವಿಧಾನ ರಚನಾ ಸಮಿತಿಯಲ್ಲಿ ಮಹಿಳೆಯರನ್ನು ಸೇರಿಸಿಕೊಂಡು ಮುಂದಿನ ಭವಿಷ್ಯದ ಚಿಂತನೆಗಳನ್ನು ಅವರು ಆಗಲೇ ಕಾರ್ಯರೂಪಕ್ಕೆ ತಂದಿದ್ದರು. ಇದರ ಪರಿಣಾಮವಾಗಿ ಅವರ ಸಂವಿಧಾನದ ಫಲವನ್ನು ನಾವು ಅನುಭವಿಸುತ್ತಿದ್ದೇವೆ. ಇಂತಹ ಧೀಮಂತ ನಾಯಕನನ್ನು…
ತಿಪಟೂರು: ಇಲ್ಲಿನ ಕೈಗಾರಿಕಾ ಪ್ರದೇಶದಲ್ಲಿರುವ ಬೆಡ್ ಶೀಟ್ ತಯಾರಿಕಾ ಕಾರ್ಖಾನೆಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಅಲ್ಪ ಅವಧಿಯಲ್ಲೇ ಬೆಂಕಿ ಕೆನ್ನಾಲಿಗೆ ಪಕ್ಕದ ಕಟ್ಟಡಕ್ಕೂ ವ್ಯಾಪಿಸಿದ ಘಟನೆ ನಡೆದಿದೆ. ತಿಪಟೂರು ನಗರದ ಸಮೀಪವಿರುವ ಬೆಡ್ ಶೀಟ್ ಕಾರ್ಖಾನೆಯಲ್ಲಿ ಶನಿವಾರ ಈ ಅವಘಡ ಸಂಭವಿಸಿದೆ. ಬೆಡ್ಶೀಟ್ ತಯಾರಿಕೆಗೆ ಬಳಸುವ ಕಚ್ಚಾ ವಸ್ತುಗಳು ಮತ್ತು ಸಿದ್ಧಪಡಿಸಿದ ಉತ್ಪನ್ನಗಳು ಬೆಂಕಿಗೆ ಆಹುತಿಯಾಗಿವೆ. ಗಾಳಿಯ ತೀವ್ರತೆಗೆ ಬೆಂಕಿ ವೇಗವಾಗಿ ಹರಡಿ, ಪಕ್ಕದಲ್ಲೇ ಇದ್ದ ಪೊರಕೆ ತಯಾರಿಸುವ ಕಟ್ಟಡಕ್ಕೂ ವ್ಯಾಪಿಸಿತು. ಇದರಿಂದಾಗಿ ಎರಡೂ ಘಟಕಗಳಲ್ಲಿನ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ ಎಂದು ಅಂದಾಜಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಬೆಂಕಿ ಮತ್ತಷ್ಟು ಹರಡದಂತೆ ತಡೆಯಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಯಿತು. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಸ್ಥಳೀಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗ್ನಿ ಅವಘಡಕ್ಕೆ ನಿಖರವಾದ ಕಾರಣವಿನ್ನೂ ತಿಳಿದುಬಂದಿಲ್ಲ. ಶಾರ್ಟ್…
ತಿಪಟೂರು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ತಾಲ್ಲೂಕಿನ ಕಿಬ್ಬನಹಳ್ಳಿ ಹೋಬಳಿಯ ಜಯಂತಿ ಗ್ರಾಮದ ಬಳಿ ನಿರ್ಮಿಸಿರುವ ಅಂಡರ್ಪಾಸ್ ಅವೈಜ್ಞಾನಿಕವಾಗಿದೆ ಎಂದು ಆರೋಪಿಸಿ, ಕೂಡಲೇ ಸರ್ವಿಸ್ ರಸ್ತೆ ನಿರ್ಮಿಸಿಕೊಡುವಂತೆ ಆಗ್ರಹಿಸಿ ಗ್ರಾಮಸ್ಥರು ತಾಲ್ಲೂಕು ಆಡಳಿತ ಸೌಧದ ಮುಂಭಾಗ ಬೃಹತ್ ಧರಣಿ ನಡೆಸಿದರು. ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ಅಂಗವಾಗಿ ನಿರ್ಮಿಸಲಾದ ಅಂಡರ್ಪಾಸ್ ಅತ್ಯಂತ ಕಳಪೆಯಾಗಿದ್ದು, ಮಳೆಗಾಲದಲ್ಲಿ ತಿಂಗಳುಗಟ್ಟಲೆ ನೀರು ನಿಲ್ಲುತ್ತಿದೆ. ಇದರಿಂದ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿದೆ ಎಂದು ಗ್ರಾಮಸ್ಥರು ದೂರಿದ್ದಾರೆ. ಜಯಂತಿ ಗ್ರಾಮದಲ್ಲಿ 100ಕ್ಕೂ ಹೆಚ್ಚು ಕಾಡುಗೊಲ್ಲ ಸಮುದಾಯದ ಕುಟುಂಬಗಳಿದ್ದು, ಕುರಿ ಮತ್ತು ದನಕರುಗಳ ಸಾಕಾಣಿಕೆಯೇ ಇವರ ಮುಖ್ಯ ಕಸುಬಾಗಿದೆ. ಸರ್ವಿಸ್ ರಸ್ತೆ ಇಲ್ಲದ ಕಾರಣ ಜಾನುವಾರುಗಳನ್ನು ರಸ್ತೆ ದಾಟಿಸುವಾಗ ಪದೇ ಪದೇ ಅಪಘಾತಗಳು ಸಂಭವಿಸುತ್ತಿವೆ. ಗ್ರಾಮದ ಬಳಿ ಸೂಕ್ತ ಬಸ್ ತಂಗುದಾಣದ ವ್ಯವಸ್ಥೆಯೂ ಇಲ್ಲದ ಕಾರಣ ರೈತರು ಮತ್ತು ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಕೂಡಲೇ ಸುಸಜ್ಜಿತ ತಂಗುದಾಣ ನಿರ್ಮಿಸಬೇಕೆಂದು ಕರಡಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಗಂಗಮ್ಮ ಒತ್ತಾಯಿಸಿದರು. ತಾಲ್ಲೂಕು ಕಾಡುಗೊಲ್ಲರ ಸಂಘದ ಅಧ್ಯಕ್ಷ…
ಹುಳಿಯಾರು: ತಾಲ್ಲೂಕಿನ ಹುಳಿಯಾರು ಹೋಬಳಿಯ ಸಿಂಗಾಪುರ ಗ್ರಾಮಕ್ಕೆ ಸಮರ್ಪಕವಾಗಿ ಸರ್ಕಾರಿ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿ ಗ್ರಾಮದ ಮಹಿಳೆಯರು ಶುಕ್ರವಾರ ತುಮಕೂರು ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಗ್ರಾಮದ ಮಾರುತಿ, ಆಂಜನೇಯ ಹಾಗೂ ವಿಘ್ನೇಶ್ವರ ಸ್ವಸಹಾಯ ಮಹಿಳಾ ಸಂಘಗಳ ಸದಸ್ಯರಾದ ಚಂದ್ರಮ್ಮ, ಪಾರ್ವತಮ್ಮ, ವಿಜಯಮ್ಮ, ಗಂಗಮ್ಮ ಮತ್ತು ವಿಮಲಾಕ್ಷಿ ಅವರು ಸಾಮಾಜಿಕ ಹೋರಾಟಗಾರರಾದ ಶ್ರೀನಿವಾಸ್ ಮತ್ತು ಲೋಕೇಶ್ ಅವರ ನೇತೃತ್ವದಲ್ಲಿ ಅಧಿಕಾರಿಗಳನ್ನು ಭೇಟಿ ಮಾಡಿ ತಮ್ಮ ಸಮಸ್ಯೆಗಳನ್ನು ವಿವರಿಸಿದರು. ಸಿಂಗಾಪುರ ಗ್ರಾಮವು ಜಿಲ್ಲೆಯ ಗಡಿಭಾಗದಲ್ಲಿದ್ದು, ಇಲ್ಲಿಗೆ ಸರಿಯಾದ ಸಾರಿಗೆ ಸಂಪರ್ಕವಿಲ್ಲದೆ ಜನರು ಪರದಾಡುವಂತಾಗಿದೆ. ಶಾಲಾ–ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ತಲುಪಲು ಸಾಧ್ಯವಾಗುತ್ತಿಲ್ಲ. ದಿನನಿತ್ಯ ಪಟ್ಟಣಕ್ಕೆ ಹೋಗುವ ಕೂಲಿ ಕಾರ್ಮಿಕರು ಹಾಗೂ ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗೆ ತೆರಳುವ ರೋಗಿಗಳು ಖಾಸಗಿ ವಾಹನಗಳನ್ನು ಅವಲಂಬಿಸಬೇಕಾದ ಅನಿವಾರ್ಯತೆ ಇದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಸಾರಿಗೆ ಸೌಲಭ್ಯವಿಲ್ಲದ ಕಾರಣ ಮಹಿಳೆಯರು ಮತ್ತು ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದು, ಕೂಡಲೇ ಈ ಭಾಗಕ್ಕೆ ಹೆಚ್ಚುವರಿ…
ಹುಳಿಯಾರು: ಪಟ್ಟಣದಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಪ್ರತಿ ಗುರುವಾರ ನಡೆಯುವ ತರಕಾರಿ ಸಂತೆಯನ್ನು ಏ.23ರಿಂದ ಹುಳಿಯಾರಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಆಡಳಿತ ಕಚೇರಿಯ ಹಿಂಭಾಗದ ಖಾಲಿ ಜಾಗಕ್ಕೆ ಸ್ಥಳಾಂತರಿಸಲಾಗುತ್ತಿದೆ ಎಂದು ಸಮಿತಿಯ ಕಾರ್ಯದರ್ಶಿ ಎಂ.ನಾಗೇಂದ್ರ ಕುಮಾರ್ ತಿಳಿಸಿದ್ದಾರೆ. ಗುರುವಾರ ಸಂತೆ ಮೈದಾನಕ್ಕೆ ಭೇಟಿ ನೀಡಿ ಪ್ರಚಾರ ನಡೆಸಿ ಮಾತನಾಡಿದ ಅವರು, ಸ್ಥಳಾಂತರದ ಕುರಿತು ಸಾರ್ವಜನಿಕರು ಹಾಗೂ ರೈತ ಬಾಂಧವರು ಸಹಕರಿಸಬೇಕೆಂದು ಮನವಿ ಮಾಡಿದರು. ಪ್ರಥಮ ಹಂತದಲ್ಲಿ 32 ಜನ ತರಕಾರಿ ವ್ಯಾಪಾರಸ್ಥರನ್ನು ಗುರುತಿಸಲಾಗಿದ್ದು, ಅವರಿಗೆ ಎಪಿಎಂಸಿ ಆವರಣದಲ್ಲಿ ಬಾಕ್ಸ್ ಶೈಲಿಯಲ್ಲಿ ಜಾಗವನ್ನು ಗುರುತು ಮಾಡಿ ಅವಕಾಶ ಕಲ್ಪಿಸಲಾಗುವುದು. ಹೆಚ್ಚಿನ ಸಂಖ್ಯೆಯಲ್ಲಿ ವ್ಯಾಪಾರಸ್ಥರು ಬಂದಲ್ಲಿ ಮುಂದಿನ ದಿನಗಳಲ್ಲಿ ಅವರಿಗೂ ವ್ಯವಸ್ಥೆ ಮಾಡಲಾಗುವುದು ಎಂದರು. ಸಂತೆ ವ್ಯಾಪಾರಸ್ಥರಿಗೆ ಪ್ರತಿ ತಿಂಗಳು ನಿಗದಿತ ನೆಲ ಬಾಡಿಗೆ ಹಾಗೂ ಶೇಕಡಾ 0.60 ಪೈಸೆಯಂತೆ ಬಳಕೆದಾರರ ಶುಲ್ಕವನ್ನು ಕಡ್ಡಾಯವಾಗಿ ವಿಧಿಸಲಾಗುತ್ತದೆ ಎಂದರು. ಸದ್ಯಕ್ಕೆ ಕೇವಲ ತರಕಾರಿ ಮಾರಾಟಕ್ಕೆ ಮಾತ್ರ ಅವಕಾಶ ನೀಡಲಾಗಿದ್ದು, ತರಕಾರಿ ಹೊರತುಪಡಿಸಿ ಇತರ ಯಾವುದೇ…
ತುಮಕೂರು: ಜಿಲ್ಲೆಯ ವಿವಿಧ ರಸ್ತೆಗಳಲ್ಲಿ ಪದೇ ಪದೇ ಅಪಘಾತ ನಡೆಯುವ ಸ್ಥಳಗಳನ್ನು ಶೀಘ್ರ ಗುರುತಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಅವರಿಗೆ ಸೂಚಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ತಮ್ಮ ಅಧ್ಯಕ್ಷತೆಯಲ್ಲಿ ರಸ್ತೆ ಸುರಕ್ಷಾ ಸಲಹಾ ಸಮಿತಿ ಸಭೆ ನಡೆಸಿದ ಅವರು, ರಸ್ತೆ ಸುರಕ್ಷಾ ದೃಷ್ಟಿಯಿಂದ ಪದೇ ಪದೇ ಅಪಘಾತ ಸಂಭವಿಸುವ ಜಾಗಗಳನ್ನು ಗುರುತಿಸುವಂತೆ ಈ ಹಿಂದಿನ ಸಭೆಯಲ್ಲಿ ತಿಳಿಸಲಾಗಿತ್ತು. ಈ ಕಾರ್ಯ ಇನ್ನೂ ಪೂರ್ಣವಾಗಿಲ್ಲ. ತಕ್ಷಣ ಪೂರ್ಣಗೊಳಿಸಿ ರಸ್ತೆ ಅಪಘಾತಗಳನ್ನು ನಿಯಂತ್ರಿಸಲು ಕ್ರಮ ವಹಿಸಬೇಕು ಎಂದು ಸೂಚಿಸಿದರು. ತುಮಕೂರು ಜಿಲ್ಲೆಯಲ್ಲಿ ಅಪಘಾತಗಳಿಗೆ ಕಾರಣವಾಗಿರುವ ಬ್ಲ್ಯಾಕ್ ಸ್ಪಾಟ್ ಗಳನ್ನು ಗುರುತಿಸುವ ಕುರಿತು ಈಗಾಗಲೇ ಸೂಚನೆ ನೀಡಲಾಗಿದ್ದರೂ, ಕೆಲವು ಸ್ಥಳಗಳಲ್ಲಿ ಇನ್ನೂ ಗುರುತಿಸುವ ಕಾರ್ಯ ಪೂರ್ಣಗೊಂಡಿಲ್ಲ. ಇದರಿಂದ ಇನ್ನೂ ಎಷ್ಟು ಜನ ಪ್ರಾಣ ಕಳೆದುಕೊಳ್ಳಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರರು ತಕ್ಷಣವೇ ಎಲ್ಲಾ ಅಪಘಾತ ಪ್ರದೇಶಗಳನ್ನು ಗುರುತಿಸಿ ವರದಿ ಸಲ್ಲಿಸುವಂತೆ ಅವರು ಸೂಚನೆ ನೀಡಿದರು. ರಸ್ತೆ…
ಬೆಂಗಳೂರು: ನಗರದ ಮಹದೇವಪುರದಲ್ಲಿ ಮಹೀಂದ್ರಾ ಶೋರೂಂನ ಟೆಸ್ಟ್ ಡ್ರೈವ್ ಕಾರೊಂದು ಭೀಕರ ಸರಣಿ ಅಪಘಾತ ಎಸಗಿದ್ದು, ಘಟನೆಯಲ್ಲಿ ಓರ್ವ ಪಾದಚಾರಿಯ ಕಾಲು ಮುರಿದು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹದೇವಪುರದ ಮುಖ್ಯರಸ್ತೆಯಲ್ಲಿರುವ ಮಹೀಂದ್ರಾ ಶೋರೂಂನಿಂದ ವ್ಯಕ್ತಿಯೊಬ್ಬರು ಟೆಸ್ಟ್ ಡ್ರೈವ್ ಗಾಗಿ ಕಾರನ್ನು ಹೊರತಂದಿದ್ದರು. ಈ ವೇಳೆ ಕಾರು ಚಲಾಯಿಸುತ್ತಿದ್ದ ಗ್ರಾಹಕ ಕುಡಿದ ಅಮಲಿನಲ್ಲಿದ್ದ ಎನ್ನಲಾಗಿದ್ದು, ವಾಹನದ ಮೇಲಿನ ನಿಯಂತ್ರಣ ತಪ್ಪಿ ರಸ್ತೆಯಲ್ಲಿದ್ದ ನಾಲ್ಕು ವಾಹನಗಳಿಗೆ ಸರಣಿ ಡಿಕ್ಕಿ ಹೊಡೆದಿದ್ದಾನೆ. ಅಪಘಾತದ ರಭಸಕ್ಕೆ ನಾಲ್ಕು ವಾಹನಗಳು ಜಖಂಗೊಂಡಿವೆ. ಇದೇ ಸಮಯದಲ್ಲಿ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಪಾದಚಾರಿಯೊಬ್ಬರಿಗೆ ಕಾರು ಡಿಕ್ಕಿ ಹೊಡೆದಿದ್ದು, ಅವರ ಕಾಲು ಮುರಿದಿದೆ. ಗಾಯಾಳುವನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕುಡಿದ ಅಮಲಿನಲ್ಲಿದ್ದ ವ್ಯಕ್ತಿಗೆ ಚಾಲನೆ ಮಾಡಲು ಕಾರು ನೀಡಿದ ಶೋರೂಂ ಸಿಬ್ಬಂದಿಯ ಬೇಜವಾಬ್ದಾರಿತನದ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟೆಸ್ಟ್ ಡ್ರೈವ್ ನೀಡುವ ಮುನ್ನ ಚಾಲಕನ ಸ್ಥಿತಿಯನ್ನು ಪರಿಶೀಲಿಸದೆ ವಾಹನ ನೀಡಿದ್ದೇ ಈ ಅನಾಹುತಕ್ಕೆ ಕಾರಣ ಎಂದು ಜನರು…