Subscribe to Updates
Get the latest creative news from FooBar about art, design and business.
- ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ
- ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ
- ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
- ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ
- ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
- ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
- ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
Author: admin
ಮಡಿಕೇರಿ: ಎರಡು ಜೀವಗಳನ್ನು ಬಲಿ ಪಡೆದಿದ್ದ ಪುಂಡಾನೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ. ಕಳೆದ ಕೆಲವು ವರ್ಷಗಳ ಹಿಂದೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ ಚೆನ್ನಂಗೊಲ್ಲಿ, ಭದ್ರಗೊಳ, ದೇವರಪುರ ವ್ಯಾಪ್ತಿಯಲ್ಲಿ ಸುಮಾರು 40 ವರ್ಷದ ಒಂಟಿ ಸಲಗ ಜನರ ಮೇಲೆ ದಾಳಿ ಮಾಡುತ್ತಾ ಜನರಿಗೆ ತೊಂದರೆಯನ್ನುಂಟು ಮಾಡುತ್ತಿತ್ತು. ಕೆಲವೇ ತಿಂಗಳುಗಳ ಹಿಂದೆ ಭದ್ರಗೊಳ ಗ್ರಾಮದಲ್ಲಿ ಗೌರಿ ಎಂಬ ಮಹಿಳೆಯ ಮೇಲೆ ದಾಳಿ ಮಾಡಿ ಬಲಿಪಡೆದಿತ್ತು. ಎರಡು ದಿನಗಳ ಹಿಂದೆ ಚೆನ್ನಂಗೊಲ್ಲಿ ಗ್ರಾಮದ ಪಾರ್ವತಿ ಎಂಬವರನ್ನೂ ಬಲಿ ಪಡೆದಿತ್ತು. ಈ ಘಟನೆಯಿಂದ ಸುತ್ತಮುತ್ತಲಿನ ಜನರು ಭಯಭೀತರಾಗಿದ್ದರು. ಕಾಡಾನೆಯನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ವನ್ಯ ಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ, ಶಾಸಕ ಎ.ಎಸ್.ಪೊನ್ನಣ್ಣ ಮೂಲಕ ಸಚಿವರಿಗೆ ಒತ್ತಡ ಹೇರಿದ್ದರು. ಈ ಹಿನ್ನೆಲೆಯಲ್ಲಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಕಾಡಾನೆ ಸೆರೆಗೆ ಅನುಮತಿ ನೀಡಿದ್ದರು. ದುಬಾರೆ, ಮತ್ತಿಗೋಡು ಮತ್ತು ಹಾರಂಗಿ ಸಾಕಾನೆ ಶಿಬಿರದ 7 ಸಾಕಾನೆಗಳು, 90ಕ್ಕೂ ಅಧಿಕ…
ತುಮಕೂರು: ಕೆ.ಎನ್.ರಾಜಣ್ಣ ನಮ್ಮ ಪಕ್ಷದವರಲ್ಲ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿಕೆ ನೀಡಿದರು. ಬೆಳ್ಳಾವಿ ಕಾರದ ಮಠದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಯತ್ನಾಳ್ ಗೆ ನೋಟಿಸ್ ಕೊಡೋಕೆ ವಿಜಯೇಂದ್ರಗೆ ತಾಕತ್ ಇಲ್ಲ ಎಂಬ ಸಚಿವ ಕೆ.ಎನ್. ರಾಜಣ್ಣ ಹೇಳಿಕೆ ಸಂಬಂಧ ಈ ಪ್ರತಿಕ್ರಿಯೆ ನೀಡಿದರು. ಈಗಾಗಲೇ ಕೇಂದ್ರದ ಶಿಸ್ತು ಸಮಿತಿ ನೋಟಿಸ್ ಕೊಟ್ಟಿದೆ. 72 ಗಂಟೆಗಳ ಗಡುವು ಕೂಡ ಇತ್ತು. ನಮ್ಮ ವರಿಷ್ಠರು ಎಲ್ಲವನ್ನೂ ಗಮನಿಸುತ್ತಿದ್ದಾರೆ ಎಂದ ವಿಜಯೇಂದ್ರ ನಕ್ಕು ಸುಮ್ಮನಾದರು. 20ನೇ ತಾರಿಕಿನೊಳಗೆ ಉತ್ತರ ಸಿಗುತ್ತೆ ಅಂತ ಅಂದೇ ಹೇಳಿದ್ದೇನೆ. ಜಿಲ್ಲಾಧ್ಯಕ್ಷರ ನೇಮಕ ಬಳಿಕ ದೆಹಲಿಯಲ್ಲಿ ಪ್ರಕ್ರಿಯೆ ನಡೆಯುತ್ತಿದೆ. ಸದ್ಯದಲ್ಲೇ ಯಾವಾಗ ಬೇಕಾದ್ರೂ ಕೇಂದ್ರದ ವರಿಷ್ಠರು ರಾಜ್ಯಕ್ಕೆ ಬರಲಿದ್ದಾರೆ. ಎಲ್ಲಾ ಶಾಸಕರ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಮಾಡುತ್ತಾರೆ ಎಂದರು. ಇನ್ನೂ ಒಂಬತ್ತು ವಿವಿಗಳ ಮುಚ್ಚುವ ನಿರ್ಧಾರ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಇದೊಂದು ಬಹಳ ದುರದೃಷ್ಟಕರ ವಿಚಾರ. ಬಿಜೆಪಿ ಸರ್ಕಾರದಲ್ಲಿ ಹೊಸ…
ಕಲಬುರಗಿ: ಮೈಸೂರಿನ ಉದಯಗಿರಿ ಗಲಾಟೆ ಬಿಜೆಪಿ ಮತ್ತು ಆರ್ ಎಸ್ ಎಸ್ ಕೃಪಾಪೋಷಿತ ಕೃತ್ಯವಾಗಿದೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಬಿ.ಕೆ ಹರಿಪ್ರಸಾದ್ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕವನ್ನು ಸರ್ವ ಜನಾಂಗದ ಶಾಂತಿಯ ತೋಟ ಎನ್ನಲಾಗುತ್ತದೆ. ಬಿಜೆಪಿ ಹಾಗೂ ಆರ್ಎಸ್ಎಸ್ ಶಾಂತಿ ಕದಡಲು ಬಹಳ ಪ್ರಯತ್ನ ಮಾಡುತ್ತಿವೆ ಎಂದು ಆರೋಪಿಸಿದರು. ಇನ್ನೂ ರಾಜ್ಯದಲ್ಲಿ ಮುಖ್ಯಮಂತ್ರಿ ಹಾಗೂ ಮಂತ್ರಿಗಳ ಬದಲಾವಣೆ ಕುರಿತು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಬೇಕು ಎಂದರು. ಹೈಕಮಾಂಡ್ ಇಲ್ಲಿಯವರೇ ಆಗಿರುವುದರಿಂದ ಎಲ್ಲವೂ ಅವರಿಗೆ ಮಾತ್ರ ಗೊತ್ತು. ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಈ ರೀತಿಯ ಚರ್ಚೆಗಳು ನಡೆಯುತ್ತಲೇ ಇವೆ. ರಾಜಕೀಯದಲ್ಲಿ ಇವೆಲ್ಲಾ ಮಾಮೂಲು ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಳಗಾವಿ: ಕೇಂದ್ರದಲ್ಲಿ ಬಿಜೆಪಿಗೆ ಬಹುಮತ ಇಲ್ಲ, ಪ್ರಧಾನಿ ಮೋದಿ ವಿರುದ್ಧ ಬಿಜೆಪಿ ಸಚಿವರು ಅಸಮಾಧಾನಗೊಂಡಿದ್ದಾರೆ ಪ್ರಧಾನಿ ಸ್ಥಾನ ಬದಲಾವಣೆ ಸಾಧ್ಯತೆ ಇರುವುದಾಗಿ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಧಾನಿ ಸ್ಥಾನಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಬದಲಿಸಬಹುದು ಎಂದರು. ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದಲ್ಲಿ ಸಂಕಟ ಇದೆ. ಬಿಜೆಪಿ ನಾಯಕರು ಮೋದಿ ಸಾಧನೆ ಬಗ್ಗೆ ಮಾತ್ರ ಮಾತನಾಡುತ್ತಾರೆ. ಆದರೆ, ಯಾರೂ ಉಳಿದ ನಾಯಕರ ಸಾಧನೆ ಬಗ್ಗೆ ಮಾತನಾಡುತ್ತಿಲ್ಲ. ಕೇಂದ್ರದಲ್ಲಿ ಬಿಜೆಪಿಗೆ ಬಹುಮತ ಇಲ್ಲ. ಹಾಗಾಗಿ ಪ್ರಧಾನಿ ಮೋದಿ ಬದಲಾವಣೆ ಆಗಬಹುದು ಎಂಬ ಚರ್ಚೆ ಇದೆ. ಈ ಬಗ್ಗೆಯೂ ನೀವು ಕೇಳಬೇಕು ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬಳ್ಳಾರಿ: ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿಯ ಸಾವಾಗಿದ್ದು, 15 ದಿನಗಳ ಅಂತರದಲ್ಲಿ 3 ಬಾಣಂತಿಯರು ಬಿಮ್ಸ್ ನಲ್ಲಿ ಮೃತಪಟ್ಟಿದ್ದಾರೆ. ಬಳ್ಳಾರಿ ತಾಲ್ಲೂಕಿನ ಕಕ್ಕಬೇವನಳ್ಳಿ ಗ್ರಾಮದ 25 ವರ್ಷದ ಗಂಗಮ್ಮ ಫೆಬ್ರವರಿ 14 ರಂದು ನಿಧನರಾಗಿದ್ದು, ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಗಂಗಮ್ಮ ಸಾವಾಗಿದೆ ಎಂಬ ಆರೋಪ ಕೇಳಿಬಂದಿದೆ. ಗಂಗಮ್ಮ ಜನವರಿ 6 ರಂದು ಗಂಡು ಮಗುವಿಗೆ ಜನ್ಮ ನೀಡಿದ್ದರು. ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು ಕಂಡುಬಂದಿದೆ. ಬಳಿಕ ಅವರನ್ನು ಬಳ್ಳಾರಿ ವೈದ್ಯಕೀಯ ವಿಜ್ಞಾನ ಸಂಸ್ಥೆ (ಬಿಐಎಂಎಸ್) ಗೆ ದಾಖಲಿಸಲಾಗಿದೆ. ಸ್ವಲ್ಪ ಚೇತರಿಸಿಕೊಂಡ ನಂತರ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಬಳಿಕ ಫೆಬ್ರವರಿ 14 ರಂದು ನಿಧನರಾಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ಸಿಎಂ ಕಚೇರಿಯ ಟಿಪ್ಪಣಿ ನಕಲು ಮಾಡಿ ವಂಚಿಸಿದ್ದ ಆರೋಪಿಯನ್ನು ವಿಧಾನಸೌಧ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಹಾವೇರಿ ಜಿಲ್ಲೆ ರಾಣೆಬೆನ್ನೂರು ಮೂಲದ ರಾಘವೇಂದ್ರ ಎಂದು ಗುರುತಿಸಲಾಗಿದೆ. ಕೆಎಎಸ್ ಅಧಿಕಾರಿಯೊಬ್ಬರಿಗೆ ಪೋಸ್ಟಿಂಗ್ ನೀಡುವಂತೆ ಆರೋಪಿ ರಾಘವೇಂದ್ರ, ಮುಖ್ಯಮಂತ್ರಿಗಳ ಕಚೇರಿ ಹೆಸರಿನಲ್ಲಿ ನಕಲಿ ಟಿಪ್ಪಣಿ ಸೃಷ್ಟಿಸಿದ್ದನು. ಈ ಬಗ್ಗೆ ವಿಧಾನಸೌಧದ ಸಚಿವಾಲಯ ದೂರು ನೀಡಿತ್ತು. ಈತ ಈ ಹಿಂದೆ ಶಾಸಕರ ಖಾಸಗಿ ಸಹಾಯಕರ ಬಳಿ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು. ನಕಲಿ ಸಿಎಂ ಕಚೇರಿ ಪತ್ರ ಮತ್ತು ಸಹಿಯನ್ನು ಬಳಸಿದ್ದರ ವಿರುದ್ಧ ವಿಧಾನಸೌಧದ ಕಾರ್ಯದರ್ಶಿ ದೂರು ದಾಖಲಿಸಿದ ನಂತರ ಆತನನ್ನು ಇತ್ತೀಚೆಗೆ ಬಂಧಿಸಲಾಗಿದೆ. ಪೋಸ್ಟಿಂಗ್ ಕೊಡಿಸುವುದಾಗಿ ಆರೋಪಿ ರಾಘವೇಂದ್ರ ಅಧಿಕಾರಿಯ ಬಳಿ ಹಣ ಪಡೆದು ವಂಚಿಸಿದ್ದ. ಅಲ್ಲದೆ ರಾಜಕಾರಣಿಗಳ ಬಳಿ ಕೆಲಸ ಮಾಡಿಸಿಕೊಳ್ಳಲು ಬರುತ್ತಿದ್ದವರಿಗೂ ವಂಚಿಸಿದ್ದ ಎನ್ನಲಾಗಿದೆ. ಸದ್ಯ ಪೊಲೀಸರು ಆರೋಪಿ ರಾಘವೇಂದ್ರನನ್ನು ವಿಚಾರಣೆ ನಡೆಸುತ್ತಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಸೇರಿದಂತೆ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧರಾಗುವಂತೆ ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಗೆ ಕರೆ ನೀಡಿದರು. ಕೆಪಿಸಿಸಿ ಕಚೇರಿಯಲ್ಲಿಂದು ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಎಲ್.ಆರ್ ಶಿವರಾಮೇಗೌಡ ಮತ್ತು ಬ್ರಿಜೇಶ್ ಕಾಳಪ್ಪ, ಎಲ್.ಎಸ್. ಚೇತನ್ ಗೌಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡರು. ಇದೇ ವೇಳೆ ಮಾತನಾಡಿದ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವವರ ಪಟ್ಟಿ ದೊಡ್ಡದಿದೆ. 15 ದಿನ ಅಥವಾ ತಿಂಗಳಿಗೊಮ್ಮೆ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತೇವೆಂದು ಹೇಳಿದರು. ಬಿಜೆಪಿ-ಜೆಡಿಎಸ್ ಪಕ್ಷದ ಹಾಲಿ ಶಾಸಕರೂ ಸೇರ್ಪಡೆಯಾಗುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ಶಾಸಕರ ಸೇರ್ಪಡೆ ಬಗ್ಗೆ ಬಹಿರಂಗ ಹೇಳಿಕೆ ನೀಡಲಾಗದು. ನಿಮ್ಮನ್ನು ಬಿಟ್ಟು ಏನೂ ಮಾಡುವುದಿಲ್ಲ ಎಂದು ತಿಳಿಸಿದರು. ಜಿಲ್ಲಾ ಪಂಚಾಯತ್ ಗಳು, ತಾಲ್ಲೂಕು ಪಂಚಾಯತ್ಗಳು ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೇರಿದಂತೆ ಮುಂಬರುವ ಚುನಾವಣೆಗಳಿಗೆ ಪಕ್ಷವು ಸಂಪೂರ್ಣವಾಗಿ ಸಿದ್ಧವಾಗಬೇಕು…
ತುಮಕೂರು : ತುಮಕೂರಿನಿಂದ ತ್ರಿವಿಧ ದಾಸೋಹದ ಮಹಿಮೆಯನ್ನು ಜಗತ್ತಿಗೆ ತಿಳಿಸಿದವರು ಶಿವಕುಮಾರ ಸ್ವಾಮೀಜಿಗಳು, ಯುವಕರಲ್ಲಿ ಮನವಿ ಮಾಡ್ತೀನಿ ಮಠ ಮಾನ್ಯಗಳ ಪರಂಪರೆಯನ್ನು ಉಳಿಸಿಕೊಂಡು ಹೋಗಬೇಕಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು. ಬೆಳ್ಳಾವಿ ಕಾರದ ಮಠದಲ್ಲಿ ಮಾತನಾಡಿದ ಅವರು, ಕಂಪ್ಯೂಟರ್ ಮೊಬೈಲ್ ಭರಾಟೆಯಲ್ಲಿ ನಮ್ಮ ಪರಂಪರೆ ಸಂಸ್ಕೃತಿಯನ್ನು ಮರೆತಿದ್ದೇವೆ. ಆಧುನಿಕ ತಂತ್ರಜ್ಞಾನದ ಭರಾಟೆಯಲ್ಲಿ ಗುರುಪರಂಪರೆ, ಆಚಾರ ವಿಚಾರ ಸಂಸ್ಕಾರ ಸಂಸ್ಕೃತಿಯನ್ನ ಮರೆತಿದ್ದೇವೆ. ಹೆತ್ತ ತಂದೆತಾಯಿಗಳನ್ನ ನಿರ್ಲಕ್ಷ್ಯ ಮಾಡುತ್ತಿದ್ದೇವೆ. ಇಂದಿನ ಯುವ ಪೀಳಿಗೆ ಅಂತಹ ಸಂಸ್ಕೃತಿಗೆ ಮಾರು ಹೋಗಿರುವುದು ದುರಂತ ಎಂದರು. ನಮ್ಮ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಟ್ಟಿದ್ದೇವೆ, ಆದರೆ ಸಂಸ್ಕಾರ ಕೊಡುವುದರಲ್ಲಿ ಎಡವಿದ್ದೇವೆ. ಈಗಲೂ ಕಾಲಮಿಂಚಿಲ್ಲ ಮಕ್ಕಳಿಗೆ ಒಳ್ಳೆಯ ಸಂಸ್ಕಾರ ನೀಡಲು, ತಂದೆ ತಾಯಿಯಂದಿರು ಗಮನ ಹರಿಸಬೇಕು ಬೇಕು ಎಂದು ಅವರು ಕರೆ ನೀಡಿದರು. ನರೇಂದ್ರ ಮೋದಿಜಿಯವರು ದೇಶದ ಅಭಿವೃದ್ಧಿ ಕನಸು ಕಾಣುತ್ತ, ನಮ್ಮ ದೇಶದ ಯುವಜನತೆ ಮೇಲೆ ವಿಶ್ವಾಸ ವಿಟ್ಟಿದ್ದಾರೆ. ಅದಕ್ಕಾಗಿ ಅವ್ರುಗಳು ರಾತ್ರಿ ಹಗಲು ಶ್ರಮಿಸುತ್ತಿದ್ದಾರೆ. ನಮ್ಮದೇಶಕ್ಕೆ ಹಿಂದೆ…
ಪಾವಗಡ: ಹೇಳಿ ಕೇಳಿ ತುಮಕೂರು ಜಿಲ್ಲೆಯ ಪಾವಗಡ ತಾಲೂಕು ಬರದ ನಾಡು ಮತ್ತು ನೀರಿನ ಕೊರತೆಯನ್ನು ಎದುರಿಸುತ್ತಿರುವ ಪ್ರದೇಶವಾಗಿದೆ. ಇದು ಹೀಗಿದ್ದರೆ ತಾಲೂಕಿನ ನಾಗಲಮಡಿಕೆ ಹೋಬಳಿಯ ರ್ಯಾಪ್ಟೆ ಗ್ರಾಪಂ ವ್ಯಾಪ್ತಿಯ ನಾಗೇನಹಳ್ಳಿಯ ಗ್ರಾಮದಲ್ಲಿ ಕಳೆದ ಎರಡು ವಾರಗಳಿಂದ ನೀರಿಗೆ ಹಾಹಾಕಾರ ಉಂಟಾಗಿದೆ. ಈ ಗ್ರಾಮದಲ್ಲಿ ಎರಡು ಬೋರ್ ಗಳಿಂದ ಗ್ರಾಮದ ಜನರಿಗೆ ನೀರನ್ನು ಸರಬರಾಜು ಮಾಡಲಾಗುತ್ತಿತ್ತು. ಆದ್ರೆ ಕಳೆದ ಐದು ದಿನಗಳ ಹಿಂದೆ ಕುಡಿಯುವ ನೀರಿನ ಕೊಳವೆ ಬಾವಿಯ ಮೋಟಾರ್ ಕೆಟ್ಟು ಹೋಗಿದ್ದು, ಮೋಟರನ್ನು ರಿಪೇರಿ ಮಾಡಲು ತೆಗೆದುಕೊಂಡು ಹೋಗಿದ್ದ ಮೆಕಾನಿಕ್ ರಿಪೇರಿ ಮಾಡದೆ ಮೋಟರನ್ನು ತಮ್ಮ ಮನೆಯಲ್ಲಿಟ್ಟುಕೊಂಡಿದ್ದಾನೆ . ಈ ಬಗ್ಗೆ ಗ್ರಾಮಸ್ಥರು ಕೇಳಿದರೆ ನನಗೆ ಗ್ರಾಮ ಪಂಚಾಯಿತಿಯಿಂದ ಈ ಹಿಂದೆ ಮೋಟಾರ್ ಗಳನ್ನ ರಿಪೇರಿ ಮಾಡಿದ ಸಾಕಷ್ಟು ಹಣ ಬರಬೇಕಿದೆ, ಆ ಹಣ ಬರುವವರೆಗೂ ನಾನು ಇದನ್ನು ರಿಪೇರಿ ಮಾಡುವುದಿಲ್ಲ, ಅವರಿಗೆ ಕೊಡುವುದಿಲ್ಲ ಎಂಬ ಉತ್ತರವನ್ನು ಹೇಳಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದು, ಸಂಬಂಧ ಪಟ್ಟ ಗ್ರಾಮ ಪಂಚಾಯಿತಿ ಪಿಡಿಒ…
ತುಮಕೂರು: ನಮಗೆ ವಿಶ್ವವಿದ್ಯಾಲಯಗಳ ಪದವಿಗಳು ಬೇಕಿಲ್ಲ, ಗುರುಪರಂಪರೆಗಳು ಬೇಕು, ನಮಗೆ ಬೇಕಿರುವುದು ಡಿಗ್ರಿಗಳಲ್ಲ, ಜನ ಸಮುದಾಯದ ಮನಸ್ಸು ಶಾಂತಿ, ನೆಮ್ಮದಿ ಸಮಾನತೆ ಸಹಬಾಳ್ವೆಯಿಂದ ಬಾಳುವಂತ ಮನಸ್ಸು ಬದಲಾಗಬೇಕಾದದ್ದು ಅನಿವಾರ್ಯ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಬೆಳ್ಳಾವಿ ಕಾರದ ಮಠದ ಕರ್ತೃ ಗದ್ದುಗೆ ಲೋಕಾರ್ಪಣೆ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗುರು ಪರಂಪರೆ ನಮ್ಮದು, ಆ ಗುರುಗಳ ಮಾತು ನಾವೆಲ್ಲ ಕೇಳಬೇಕು, ಅದರಂತೆ ನಾವು ನಡೆದು ಕೊಳ್ಳ ಬೇಕು ಎಂದರು. ಭಗವಾನ್ ಬುದ್ಧ, ಬಾಬಾ ಸಾಹೇಬ್ ಅಂಬೇಡ್ಕರ್ ಹಾಗೂ ವಿಶ್ವ ಗುರು ಬಸವಣ್ಣರನ್ನು ಸ್ಮರಿಸಿದ ಪರಮೇಶ್ವರ, ಸುಮಾರು 2,500 ವರ್ಷಗಳ ಹಿಂದೆ ಈ ದೇಶದಲ್ಲಿ ಭಗವಾನ್ ಬುದ್ಧ ಹುಟ್ಟುತ್ತಾನೆ. ಸಮಾಜವನ್ನು ಉದ್ದಾರಮಾಡಲು ಜನಿಸಿದವರು ಬುದ್ಧ. ರಾಜನಾಗಿದ್ರು ಹೆಂಡತಿ, ಮಗು, ಆಸ್ತಿ ಎಲ್ಲವನ್ನು ತ್ಯಜಿಸಿ ಸಿದ್ದಾರ್ಥ ಬುದ್ಧನಾದ. ಆಸೆಯೇ ದುಃಖಕ್ಕೆ ಮೂಲ ಎಂದು ಜಗತ್ತಿಗೆ ಸಾರಿದವನು ಬುದ್ಧ. ಇನ್ನು 850 ವರ್ಷಗಳ ಹಿಂದೆ ಹುಟ್ಟಿದ ಬಸವಣ್ಣ ಬ್ರಾಹ್ಮಣತ್ವವನ್ನು ತ್ಯಜಿಸಿ ತನ್ನದೇ ತತ್ವಗಳನ್ನು ಸಮಾಜಕ್ಕೆ…