Subscribe to Updates
Get the latest creative news from FooBar about art, design and business.
- ಇ–ಪೌತಿ ಖಾತಾ ಆಂದೋಲನ–2 : ರೈತರಿಂದ ಅರ್ಜಿಗಳ ಸ್ವೀಕಾರ — ಬಾಕಿ ಆರ್ ಆರ್ ಟಿ ಅರ್ಜಿಗಳ ಶೀಘ್ರ ವಿಲೇವಾರಿಗೆ ಸೂಚನೆ
- ನೀಟ್ ಮರು ಪರೀಕ್ಷೆ ; ಕಟ್ಟುನಿಟ್ಟಿನ ಸಿದ್ಧತೆಗೆ ಎಡಿಸಿ ಸೂಚನೆ
- ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
- ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ
- ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
- ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
- ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
Author: admin
ತುಮಕೂರು: ಅಡಗೂರು ಗ್ರಾಮದ ಜಯಲಕ್ಷ್ಮೀ ಅವರುವ ಮೂಲಸೌಕರ್ಯ ವಂಚಿತ ಮಹಿಳೆಯಾಗಿದ್ದು, ಅವರನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಸಂಘ ಗುರುತಿಸಿ ಮನೆ ಕಟ್ಟಿಕೊಟ್ಟಿದೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಅಡಗೂರುನಲ್ಲಿ ಈ ಘಟನೆ ನಡೆದಿದೆ. ಜ್ಞಾನ ವಿಕಾಸ ಕಾರ್ಯಕ್ರಮದಡಿ ಮನೆ ನಿರ್ಮಾಣ ಮಾಡಿ ಕೊಡಲಾಗಿದ್ದು, ವೀರೇಂದ್ರ ಹೆಗ್ಗಡೆ ಹಾಗೂ ಅವರ ಧರ್ಮಪತ್ನಿ ಹೇಮಾವತಿ ಅವರ ಆಶಯದಂತೆ ಮನೆ ನಿರ್ಮಾಣ ಮಾಡಿಕೊಡಲಾಯಿತು. ಜಿಲ್ಲಾ ನಿರ್ದೇಶಕ ಸತೀಶ್ ಸುವರ್ಣ ಹಾಗೂ ತಾಲೂಕಿನ ಜಯಲಕ್ಷ್ಮಿ, ಪಿಓ ರಾಜೇಶ್ ದೀಪ ಬೆಳಗುವ ಮೂಲಕ ಮನೆ ಉದ್ಘಾಟಿಸಿದ್ರು. ಬಳಿಕ ಸಂಸ್ಥೆಯಿಂದ ಗ್ರಾಮದ ಜಯಲಕ್ಷ್ಮಿ ಅವರಿಗೆ ಮನೆ ಹಸ್ತಾಂತರಿಸಲಾಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಕೊರಟಗೆರೆ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ನೊಂದ ಬಡರೈತ ಮತ್ತು ನೊಂದ ಮಹಿಳೆಗೆ ಕೊರಟಗೆರೆಯ ಸಮಾಜ ಸೇವಕ ಎಂ ಎನ್ ಜೆ ಮಂಜುನಾಥ್ ಸಾಂತ್ವನ ಹೇಳಿ ಧೈರ್ಯತುಂಬಿ ಸಹಾಯಹಸ್ತ ನೀಡಿದರು. ಕೊರಟಗೆರೆ ತಾಲೂಕು ಕಸಬಾ ಹೋಬಳಿಯ ದೀನ್ನೆಪಾಳ್ಯದ ರೈತ ತಿಮ್ಮಯ್ಯ ಮತ್ತು ಬಿ.ಡಿ.ಪುರದ ಮಹಿಳೆ ಶಿಲ್ಪಾ ಮನೆಗೆ ಭೇಟಿ ನೀಡಿ ತಲಾ 30 ಸಾವಿರ ಆರ್ಥಿಕ ನೆರವನ್ನು ಮಂಜುನಾಥ್ ನೀಡಿದರು. ದೀನ್ನೆಪಾಳ್ಯದ ರೈತ ತಿಮ್ಮಯ್ಯನ ಮನೆಗೆ ಭೇಟಿ ನೀಡಿದ ಅವರು ಕುಟುಂಬಕ್ಕೆ ಧೈರ್ಯ ತುಂಬಿ ಆರ್ಥಿಕ ಸಹಾಯ ಮಾಡಿದರು. ನಂತರ ಬಿ.ಡಿ.ಪುರ ಗ್ರಾ.ಪಂ.ಯ ಸಿ.ಬಿ. ಪಾಳ್ಯದಲ್ಲಿ ಆಕಸ್ಮಿಕ ಬೆಂಕಿಯಿಂದ ಗುಡಿಸಲು ಸುಟ್ಟು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಆರೋಗ್ಯ ವಿಚಾರಿಸಿ 30ಸಾವಿರ ವೈಯಕ್ತಿಕವಾಗಿ ಸಹಾಯಹಸ್ತ ನೀಡಿದರು. ಬಳಿಕ ಮಾತನಾಡಿದ ಎಂ ಎನ್ ಜೆ ಮಂಜುನಾಥ, ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಸೂಚನೆಯಂತೆ ನೊಂದ ಕುಟುಂಬದ ಮನೆಗೆ ಭೇಟಿನೀಡಿ ಸಹಾಯಹಸ್ತದ ಜೊತೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದೇನೆ. ಸರಕಾರದಿಂದ ಬರುವ ಸಹಾಯ ಧನವನ್ನು ತ್ವರಿತವಾಗಿ …
ತುಮಕೂರು: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಎಲ್& ಟಿ ಫೈನಾನ್ಸ್, ಪೋದಾರ್ ಜಂಬೋ ಕಿಡ್ಸ್, ಯೂತ್ ಫಾರ್ ಜಾಬ್ ಫೌಂಡೇಷನ್(ವಿಕಲಚೇತನರಿಗೆ ಮಾತ್ರ) ಹಾಗೂ ವಾಹಿನಿ ಇರಿಗೇಷನ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸಹಭಾಗಿತ್ವದಲ್ಲಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸಂಬಂಧ ಫೆಬ್ರವರಿ 17ರಂದು ನೇರ ಸಂದರ್ಶನ(ಮಿನಿ ಉದ್ಯೋಗ ಮೇಳ) ನಡೆಯಲಿದೆ. ಎಸ್.ಎಸ್.ಎಲ್.ಸಿ., ಪಿ.ಯು.ಸಿ, ಯಾವುದೇ ಪದವಿ, ಐ.ಟಿ.ಐ., ಡಿಪ್ಲೊಮಾ ಹಾಗೂ ಬಿ.ಇ. (ಯಾವುದೇ ಟ್ರೇಡ್) ಪಾಸಾದ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಅರ್ಹ ಅಭ್ಯರ್ಥಿಗಳು ಅಂದು ಬೆಳಿಗ್ಗೆ 10 ಗಂಟೆಗೆ ತಮ್ಮ ಸ್ವಯಂ ವಿವರದೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಡಿ.ಡಿ.ಪಿ.ಐ ಬಸ್ ನಿಲ್ದಾಣ, ವಾಸನ್ ಕಣ್ಣಿನ ಆಸ್ಪತ್ರೆ ಬಳಿ, ಮೂಲೆಮನೆ ಹೋಟಲ್ ಪಕ್ಕ, ಸೋಮೇಶ್ವರಪುರಂ, 14ನೇ ಕ್ರಾಸ್, ತುಮಕೂರು-572102 ಇಲ್ಲಿ ನಡೆಯಲಿರುವ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ ಎಂದು ಉದ್ಯೋಗಾಧಿಕಾರಿ ಕಿಶೋರ್ ಕುಮಾರ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816–2278488, ಮೊ.ಸಂ.9071021143/ 9513136642ನ್ನು ಸಂಪರ್ಕಿಸಬಹುದಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ತುಮಕೂರು: ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ಹಾಗೂ ಸಂಸದ ವಿ.ಸೋಮಣ್ಣ ನವದೆಹಲಿಯಲ್ಲಿ ಘನವೆತ್ತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, ಪರಮಪೂಜ್ಯ ಲಿಂಗೈಕ್ಯ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಜಿಯವರ 118ನೇ ಜನ್ಮ ದಿನೋತ್ಸವದ ಅಂಗವಾಗಿ ಏಪ್ರಿಲ್ 1ರಂದು ನಡೆಯಲಿರುವ “ಗುರುವಂದನಾ ಸಂಭ್ರಮಾಚರಣೆಗೆ” ಆಗಮಿಸುವಂತೆ ಆಹ್ವಾನ ನೀಡಿದರು. ಶ್ರೀ ಮಠದ ಪರಂಪರೆ ಹಾಗೂ ಪರಮಪೂಜ್ಯ ಡಾ.ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯವರ ಬಗ್ಗೆ ಅಪಾರ ಗೌರವ ತೋರಿದ ಘನತವೆತ್ತ ರಾಷ್ಟ್ರಪತಿಗಳು ಆಹ್ವಾನವನ್ನು ಅತ್ಯಂತ ಭಕ್ತಿಭಾವದಿಂದ ಸ್ವೀಕರಿಸಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸುವ ಕುರಿತಾಗಿ ರಾಷ್ಟ್ರಪತಿ ಕಾರ್ಯಾಲಯದಿಂದ ಸೂಕ್ತ ದಿನಾಂಕವನ್ನು ಶೀಘ್ರವಾಗಿ ತಿಳಿಸಲಿದ್ದಾರೆ ಎಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಜ್ಯೂನಿಯರ್ ಆರ್ಟಿಸ್ಟ್ ಡ್ರಾಯಿಂಗ್ ಕ್ಲಾಸೆಸ್ ಕುಣಿಗಲ್ ಇದರ ವತಿಯಿಂದ 6 ವರ್ಷದಿಂದ 12 ವರ್ಷದವರೆಗಿನ 24 ಜನ ವಿದ್ಯಾರ್ಥಿಗಳ ಸಮೂಹ ಚಿತ್ರಕಲಾ ಪ್ರದರ್ಶನ ಫೆಬ್ರವರಿ 16ರಂದು ಬೆಳಿಗ್ಗೆ 9 ಗಂಟೆಗೆ ತುಮಕೂರಿನ ರವೀಂದ್ರ ಕಲಾ ನಿಕೇತನದ ಹೆಚ್ ಎಂ. ಗಂಗಾಧರಯ್ಯ ಆರ್ಟ್ ಗ್ಯಾಲರಿಯಲ್ಲಿ ನಡೆಯಲಿದೆ. ಬಾಪೂಜಿ ವಿದ್ಯಾಸಂಸ್ಥೆಯ ಸಂಸ್ಥಾಪಕ ಕಾರ್ಯದರ್ಶಿಗಳಾದ ಎಂ. ಬಸವಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದು, ಅತಿಥಿಗಳಾಗಿ ಮನು ಚಕ್ರವರ್ತಿಯವರು ಸದಸ್ಯರು ಕರ್ನಾಟಕ ಲಲಿತ ಅಕಾಡೆಮಿ- ಬೆಂಗಳೂರು ಮತ್ತು ಹರೀಶ್ ಪ್ರಾಂಶುಪಾಲರು ರವೀಂದ್ರ ಕಲಾ ನಿಕೇತನ ಚಿತ್ರಕಲಾ ಮಹಾವಿದ್ಯಾಲಯ ತುಮಕೂರು ಹಾಗೂ ಮುಖ್ಯ ಅತಿಥಿಗಳಾಗಿ ಗ್ರಾಮ್ ಪುರೋಹಿತರು, ನಿವೃತ್ತ ಚಿತ್ರಕಲಾ ಉಪನ್ಯಾಸಕರು, ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ತುಮಕೂರು ಹಾಗೂ ಕರ್ನಾಟಕ ಮೈಸೂರು ಸಾಂಪ್ರದಾಯಿಕ ಶೈಲಿಯ ಚಿತ್ರಕಲಾವಿದರು ಹಾಗೂ ಕರ್ನಾಟಕ ಲಲಿಕಲಾ ಅಕಾಡೆಮಿಯ ಮಾಜಿ ಸದಸ್ಯರಾದ ಎಸ್.ಹೆಚ್.ನಾಗರಾಜ್ ಮತ್ತು ಚಿತ್ರಕಲಾ ಪ್ರದರ್ಶನ ಮಕ್ಕಳು, ಪೋಷಕರು ಚಿತ್ರಕಲೆ ಶಿಕ್ಷಕರಾದ ಉಮಾಪತಿ ಎನ್ . ಸುಗೂರ್, ಸಿದ್ದೇಶ್ ಅವರು ಭಾಗವಹಿಸಲಿದ್ದಾರೆ. ಈ ಚಿತ್ರಕಲಾ ಪ್ರದರ್ಶನವು…
ತುಮಕೂರು: ರಾಜ್ಯದಲ್ಲಿ 7483 ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳನ್ನು ಪತ್ತೆಹಚ್ಚಿ ಅವರಿಗೆ ಗುರುತಿನಚೀಟಿಯನ್ನು ವಿತರಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಕಾರ್ಯದರ್ಶಿ ಚಂದ್ರಕಲಾ ತಿಳಿಸಿದರು. ನಗರದ ಬಾಲ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ನಗರಾಭಿವೃದ್ಧಿ ಕೋಶ, ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಗುರುವಾರ ನಡೆದ “ಗುರುತಿಸಲ್ಪಟ್ಟ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳಿಗೆ ಪುನರ್ವಸತಿ ಕಲ್ಪಿಸುವ ಬಗ್ಗೆ ಮಾಹಿತಿ ಸಂಗ್ರಹಣೆ ಮತ್ತು ಅರಿವು ಮೂಡಿಸುವ ಕಾರ್ಯಕ್ರಮ”ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಫಾಯಿ ಕರ್ಮಚಾರಿಗಳು ಮಲ ಹೊರುವಂತಹ ಅಮಾನವೀಯ ಕೆಲಸವನ್ನು ಬಿಟ್ಟು ಗೌರವಪೂರ್ವಕವಾಗಿ ಬದುಕನ್ನು ಕಟ್ಟಿಕೊಳ್ಳಬೇಕೆಂಬುದು ಸರ್ಕಾರದ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಸಫಾಯಿ ಕರ್ಮಚಾರಿಗಳಿಗೆ ಪೂರ್ಣ ಪ್ರಮಾಣದ ಪುನರ್ವಸತಿ ಕಲ್ಪಿಸಲು ಆಯೋಗ ಬದ್ಧವಾಗಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಕಾರ್ಯದಲ್ಲಿ ತೊಡಗಿಕೊಂಡಿರುವಾಗ 95 ಮಂದಿ ಮೃತಪಟ್ಟ ಬಗ್ಗೆ ವರದಿಯಾಗಿದ್ದು, ಮೃತಪಟ್ಟವರ ಕುಟುಂಬಕ್ಕೆ ಪಿಂಚಣಿ ನೀಡಬೇಕೆಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು. ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ಜಿಲ್ಲೆಯಲ್ಲಿ…
ತಿಪಟೂರು: ನಗರದ ಯುವ ಜನತಾದಳ ಅಧ್ಯಕ್ಷರನ್ನಾಗಿ ಗೊರಗೊಂಡನಹಳ್ಳಿ ಸುದರ್ಶನ್ ಅವರನ್ನು ಆಯ್ಕೆ ಮಾಡಲಾಗಿದೆ. ಬಳಿಕ ಮಾತನಾಡಿದ ಜೆಡಿಎಸ್ ಮುಖಂಡ ಕೆ.ಟಿ.ಶಾಂತಕುಮಾರ್, ಯುವಕರನ್ನ ಒಗ್ಗೂಡಿಸುವಂತಹ ಕೆಲಸವನ್ನು ಮಾಡಬೇಕು, ರೈತರ ಸಾರ್ವಜನಿಕರ ಪಕ್ಷವಾಗಿರುವಂತಹ ಜೆಡಿಎಸ್ ತಳಮಟ್ಟದಿಂದ ಮತ್ತು ಯುವಕರ ಪಡೆಯಲು ಕಟ್ಟಿ ಮುಂದೆ ಉತ್ತಮ ಕೆಲಸ ಕಾರ್ಯಗಳನ್ನು ಸುದರ್ಶನ್ ಅವರು ನೆರವೇರಿಸುತ್ತಾರೆ ಎಂದು ತಿಳಿಸಿದರು. ವರದಿ: ಆನಂದ, ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತಿಪಟೂರು: ತಾಲ್ಲೂಕಿನ ರಂಗಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಹೊಸಳ್ಳಿ ಗ್ರಾಮದ ದೊಡ್ಡಮ್ಮ ದೇವಿ ದೇವಸ್ಥಾನದ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು 1.50 ಲಕ್ಷ ರೂ.ಗಳ ಮೊತ್ತವನ್ನು ಮಂಜೂರುಗೊಳಿಸಿದ್ದಾರೆ. ತಾಲ್ಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಯೋಜನಾಧಿಕಾರಿ ಉದಯ್.ಕೆ ರವರು ಮೊತ್ತದ ಡಿ ಡಿಯನ್ನು ಗ್ರಾಮಸ್ಥರಿಗೆ ವಿತರಿಸಿದರು. ಸಂದರ್ಭದಲ್ಲಿ ದೊಡ್ಡಮ್ಮದೇವಿ ದೇವಸ್ಥಾನ ಸಮಿತಿಯ ಸದಸ್ಯರಾದ ನರಸಿಂಹರಾಜು, ಶಂಕರಲಿಂಗಯ್ಯ, ಗೌರಿಶಂಕರ್, ರಂಗಸ್ವಾಮಿ, ಮೋಹನ್ ಕುಮಾರ್, ವಿಜಯನರಸಿಂಹ, ಸೇವಾಪ್ರತಿನಿಧಿ ರೂಪ ಹಾಗೂ ಹೊಸಹಳ್ಳಿ ಗ್ರಾಮದ ಮುಖಂಡರು ಉಪಸ್ಥಿತರಿದ್ದರು. ವರದಿ: ಆನಂದ, ತಿಪಟೂರು ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಗುರುವಾರ ನವದೆಹಲಿಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿ ಮಾಡಿದರು. ಇದೇ ವೇಳೆ ತುಮಕೂರು ಲೋಕಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳು ಹಾಗೂ ಗುಬ್ಬಿ ಹೆಚ್.ಎ.ಎಲ್. ಕಾರ್ಖಾನೆಯ ಬಗ್ಗೆ ಚರ್ಚಿಸಿದರು. ತುಮಕೂರು ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ರಾಜನಾಥ ಸಿಂಗ್ ಅವರಿಗೆ ಸಚಿವ ಸೋಮಣ್ಣ ಕೃತಜ್ಞತೆ ಸಲ್ಲಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಜಿಲ್ಲೆಯಾದ್ಯಂತ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಡಿ ಕಾರ್ಯನಿರ್ವಹಿಸುತ್ತಿರುವ ವಿವಿಧ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಾತಿಗೆ ಫೆಬ್ರವರಿ 15ರಂದು ಪ್ರವೇಶ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯನ್ನು ಯಾವುದೇ ಲೋಪದೋಷವಿಲ್ಲದಂತೆ ಹಾಗೂ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ನಡೆಸಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀ. ವ್ಯಾಪ್ತಿಯೊಳಗಿನ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಅವರು ಆದೇಶ ಹೊರಡಿಸಿದ್ದಾರೆ. ನಿಷೇಧಾಜ್ಞೆಯು ಫೆಬ್ರವರಿ 15ರ ಮಧ್ಯಾಹ್ನ 2 ರಿಂದ ಸಂಜೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಈ ನಿಷೇಧಾಜ್ಞೆಯನ್ವಯ ಪರೀಕ್ಷೆ ನಡೆಯುವ ದಿನಾಂಕದಂದು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಮತ್ತು ಬೆರಳಚ್ಚು ಕೇಂದ್ರಗಳನ್ನು ಮುಚ್ಚತಕ್ಕದ್ದು. ನಿಷೇಧಾಜ್ಞೆ ಜಾರಿಯಲ್ಲಿರುವ ಅವಧಿಯಲ್ಲಿ ಅನಧಿಕೃತ ವ್ಯಕ್ತಿಗಳು ಯಾರೂ ನಿರ್ಬಂಧಿತ ಪ್ರದೇಶದೊಳಗೆ ಪ್ರವೇಶಿಸುವಂತಿಲ್ಲ ಹಾಗೂ ನಿಷೇಧಾಜ್ಞೆಯನ್ನು ಉಲ್ಲಂಘನೆ ಮಾಡಿದ ವ್ಯಕ್ತಿಗಳನ್ನು ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಲು ಜಿಲ್ಲಾ ಪೊಲೀಸ್ ಇಲಾಖೆಗೆ ಆದೇಶಿಸಲಾಗಿದೆ. ಕೆಲವು ಪ್ರಕರಣಗಳಲ್ಲಿ ದುರುದ್ದೇಶದಿಂದ ನಕಲಿ ಪ್ರಶ್ನೆಪತ್ರಿಕೆಗಳ…