Subscribe to Updates
Get the latest creative news from FooBar about art, design and business.
- ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡಗೆ ಬಿಗ್ ಶಾಕ್; ಪ್ರದೋಷ್ ಮಾಫಿ ಸಾಕ್ಷಿಯಾಗಲು ಕೋರ್ಟ್ ಅಸ್ತು!
- ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್
- RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ
- ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ
- ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ
- ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
- ಐಷಾರಾಮಿ ರೆಸ್ಟೋರೆಂಟ್ ಮೇಲೆ ದಾಳಿ: ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
- ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
Author: admin
ಕೆ.ಆರ್.ಪೇಟೆ: ತಾಲ್ಲೂಕು ಹೊಸಹೊಳಲು ಗ್ರಾಮದ ಪ್ರಾಚೀನ ಹೊಯ್ಸಳ ಶಿಲ್ಪ ಕಲೆ ವಿಶಿಷ್ಠವಾದ ಸುಂದರ ದೇವಾಲಯದಲ್ಲಿ ಪ್ರತಿಷ್ಟಾಪಿಸ್ಪಟ್ಟಿರುವ ಶ್ರೀ ಲಕ್ಷ್ಮೀ ನಾರಾಯಣ ಸ್ವಾಮಿ ಬ್ರಹ್ಮ ರಥೋತ್ಸವವು ಅದ್ದೂರಿಯಾಗಿ ಸಡಗರ ಸಂಭ್ರಮದಿಂದ ವಿಜೃಂಭಣೆಯಿಂದ ಆಚರಿಸಲಾಯಿತು. ಮಧ್ಯಾಹ್ನ 12:45 ಸಮಯದಲ್ಲಿ ಶ್ರೀ ಲಕ್ಷ್ಮೀ ನಾರಾಯಣ ಸ್ವಾಮಿ ದೇವಾಲಯದ ಆವರಣದಲ್ಲಿ ರಥೋತ್ಸವ ಅಂಗವಾಗಿ ರಥೋತ್ಸವದಲ್ಲಿ ಲಕ್ಷ್ಮೀ ನಾರಾಯಣ ಸ್ವಾಮಿಯ ವಿಗ್ರಹವನ್ನು ಕುಳ್ಳಿರಿಸಿ ವಿವಿಧ ಬಗೆಯ ಹೂಗಳಿಂದ ಅಲಂಕರಿಸಿ ಸಿಂಗರಿಸಿ ತಾಲ್ಲೂಕಿನ ದಂಡಾಧಿಕಾರಿಗಳಾದ ಅಶೋಕ್ ಅವರು ವಿಶೇಷವಾಗಿ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಿದರು. ರಥೋತ್ಸವದ ಸಂದರ್ಭದಲ್ಲಿ ಸಮಾಜ ಸೇವಕ ಆರ್ ಟಿ ಒ ರಾಜ್ಯಾದ್ಯಕ್ಷ ಮಲ್ಲಿಕಾರ್ಜುನ್, ಹೊಸಹೊಳಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅಶೋಕ್, ಪುರಸಭಾ ಅಧ್ಯಕ್ಷೆ ಪಂಕಜಾ ಪ್ರಕಾಶ್, ಉಪಾಧ್ಯಕ್ಷೆ ಸೌಭಾಗ್ಯ ಉಮೇಶ್, ಸದಸ್ಯರಾದ ಹೆಚ್.ಡಿ.ಅಶೋಕ್, ಪ್ರವೀಣ್, ಗಿರೀಶ್, ಸೊಸೈಟಿ ನಿರ್ದೇಶಕ ಪ್ರಕಾಶ್, ಇಂದ್ರಾಣಿ ವಿಶ್ವನಾಥ್, ಮಾಜಿ ಸದಸ್ಯ ಕೆ.ಆರ್. ಹೇಮಂತ್ ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ರವೀಂದ್ರ ಬಾಬು ಸೇರಿದಂತೆ ಅನೇಕ…
ತುಮಕೂರು: ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿಯ ಉಪನೋಂದಣಿ ಕಚೇರಿಯಲ್ಲಿ ಲಂಚ ಪಡೆಯಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರಿಂದ ಅಧಿಕಾರಿಯ ಟೇಬಲ್ ಮೇಲೆ ಚಿಲ್ಲರೆ ಹಣ ಸುರಿದು ಆಕ್ರೋಶ ವ್ಯಕ್ತಪಡಿಸಿರೋ ಘಟನೆ ನಡೆದಿದೆ. ಅಲ್ಲದೆ ಲಂಚಕ್ಕೆ ಬೇಡಿಕೆ ಇರಿಸಿರೋ ಅಧಿಕಾರಿಗೆ ಸನ್ಮಾನಿಸಿ ಪ್ರತಿಭಟನೆ ಯತ್ನ ನಡೆಸಲಾಯಿತು. ಕೆ.ಆರ್.ಎಸ್ ಪಕ್ಷದ ಕಾರ್ಯಕರ್ತರಿಂದ ವಿಭಿನ್ನವಾಗಿ ಪ್ರತಿಭಟನೆ ನಡೆಸಲಾಯಿತು. ಜನರಿಂದ ಭಿಕ್ಷೆ ಬೇಡಿ ಹಣ ಸಂಗ್ರಹಿಸಿದ್ದ ಕೆ.ಆರ್.ಎಸ್. ಕಾರ್ಯಕರ್ತರು, ಉಪನೋಂದಣಾಧಿಕಾರಿ ರಾಘವೇಂದ್ರ ಒಡಯರ್ ಟೇಬಲ್ ಮೇಲೆ ಚಿಲ್ಲರೆ ಸುರಿದರು. ಅಲ್ಲದೆ ರಾಘವೇಂದ್ರ ಒಡೆಯರ್ ಅವರಿಗೆ ಮೈಸೂರು ಪೇಟೆ ತೊಡಿಸಿ ಸನ್ಮಾನಿಸಲು ಯತ್ನಿಸಿದರು. ಸನ್ಮಾನದಿಂದ ತಪ್ಪಿಸಿಕೊಂಡ ಹೊರ ಹೋಗಲು ಯತ್ನಿಸಿದರು, ಅಲ್ಲದೆ ಕುರ್ಚಿಗೆ ಹಾರ ಹಾಕಿ ಪೇಟ ತೊಡಿಸಿದ ಕಾರ್ಯಕರ್ತರು ಆಕ್ರೋಶ ಹೊರಹಾಕಿದರು. ಕೆ.ಆರ್.ಎಸ್. ಪಕ್ಷದ ಕಾರ್ಯಕರ್ತರ ಪ್ರತಿಭಟನೆಯಿಂದ ರಾಘವೇಂದ್ರ ಒಡೆಯರ್ ತೀವ್ರ ಮುಜುಗರಕ್ಕೊಳಗಾದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ತುಮಕೂರು: ಅಕ್ರಮ ಆಸ್ತಿಗಳಿಕೆ ಆರೋಪದ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆ ವೈದ್ಯರೊಬ್ಬರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ತಾವರೆಕೆರೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯರಾಗಿ ಕೆಲಸ ಮಾಡುತ್ತಿರುವ ಡಾ ಜಗದೀಶ್ ಮನೆ ಲೋಕಾಯುಕ್ತರು ದಾಳಿ ಮಾಡಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ತುಮಕೂರು ನಗರದ ಬಟವಾಡಿ ಬಳಿಯಿರುವ ಮನೆ, ಮಂಜುನಾಥ್ ನಗರದಲ್ಲಿರುವ ಕಾಂಪ್ಲೆಕ್ಸ್, ಶಿರಾ ತಾಲೂಕಿನ ಯಲ್ಪೆನಹಳ್ಳಿರುವ ಮನೆ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಸಹೋದರ ಕಾಂತರಾಜ್ ಹಾಗೂ ಡಾ.ಜಗದೀಶ್ ಪತ್ನಿ ರೂಪ ಹೆಸರಿನಲ್ಲಿರುವ ಮನೆ ಜಮೀನಿನ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ. ಜೊತೆಗೆ ಶಿರಾ ತಾಲೂಕಿನ ಬರಗೂರಿನಲ್ಲಿ ವೈದ್ಯರ ತಾಯಿ ಹೆಸರಿನಲ್ಲಿ ಆಸ್ತಿ ದಾಖಲೆ ಹಾಗೂ ಬರಗೂರಿನಲ್ಲಿ ಮೂರು ಕಡೆ ತುಮಕೂರು ಸೇರಿದಂತೆ ಒಟ್ಟು ಆರು ಕಡೆ ಲೋಕಾಯುಕ್ತ ದಾಳಿ ಮಾಡಿದ್ದಾರೆ. ಲೋಕಾಯುಕ್ತ ಪೊಲೀಸರಿಂದ ಮುಂದುವರೆದ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಬೆಂಗಳೂರು: ನಂದಿನಿ ಹಾಲಿನ ಬೆಲೆಯನ್ನು ಹೆಚ್ಚಿಸುವ ನಿರ್ಧಾರವನ್ನು ಕರ್ನಾಟಕ ಸರ್ಕಾರ ಪ್ರಕಟಿಸಿದೆ. ಸಿಎಂ ಸಿದ್ದರಾಮಯ್ಯನವರ ಜೊತೆಗೆ ಚರ್ಚಿಸಿದ ನಂತರ ದರ ಹೆಚ್ಚಳ ನಿರ್ಧಾರವಾಗಲಿದೆ. ವಿಧಾನ ಪರಿಷತ್ತಿನಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಈ ನಿರ್ಧಾರವನ್ನು ದೃಢಪಡಿಸಿದರು. ಕಾಂಗ್ರೆಸ್ ಎಂಎಲ್ಸಿ ಮತ್ತು ಮಾಜಿ ಸಚಿವೆ ಬಿ. ಉಮಾಶ್ರೀ ಮತ್ತು ಬಿಜೆಪಿ ಎಂಎಲ್ಸಿ ಎಂ.ಜಿ. ಮುಳೆ ಅವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಸರ್ಕಾರ ರೈತರ ಬೇಡಿಕೆಗಳನ್ನು ಪರಿಗಣಿಸುತ್ತಿದ್ದು, ಶೀಘ್ರದಲ್ಲೇ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದರು. ನಾವು ಖಂಡಿತವಾಗಿಯೂ ಹಾಲಿನ ಬೆಲೆಯನ್ನು ಹೆಚ್ಚಿಸುತ್ತೇವೆ. ಹೆಚ್ಚಳದ ಪ್ರಮಾಣವನ್ನು ಮುಖ್ಯಮಂತ್ರಿಯೊಂದಿಗೆ ಸಮಾಲೋಚಿಸಿ ನಿರ್ಧರಿಸಲಾಗುವುದು ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ಕಾಂಗ್ರೆಸ್ ಸರಕಾರ ಇಡುವ ಒಂದೊಂದು ಹೆಜ್ಜೆಯೂ ಬಡವರಿಗೆ ಮಾರಕವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಡವರು ಕಣ್ಣೀರು ಹಾಕುತ್ತಿದ್ದಾರೆ. ಈ ಸರಕಾರದ ಕ್ರಮಗಳು ರೈತರಿಗೆ ಶಾಪವಾಗಿ ಪರಿಣಮಿಸಿದೆ ಎಂದು ಟೀಕಿಸಿದರು. ಗ್ಯಾರಂಟಿಗೆ ಹಣ ಕ್ರೋಡೀಕರಿಸಲು ಜನರ ಮೇಲೆ ಬರೆ ಎಳೆಯುತ್ತಿದ್ದಾರೆ, ಎರಡನೇ ಬಾರಿಗೆ ಇದೀಗ ಹಾಲಿನ ದರ ಏರಿಸುತ್ತಿದ್ದಾರೆ. ಹಿಂದಿನ ಬಿಜೆಪಿ ಸರಕಾರವು ಹೈನುಗಾರರಿಗೆ ಪ್ರೋತ್ಸಾಹಧನ ನೀಡುತ್ತಿತ್ತು. ಆದರೆ, ಕಾಂಗ್ರೆಸ್ ಸರಕಾರವು ಹೈನುಗಾರರ ಪ್ರೋತ್ಸಾಹಧನ 700– 800 ಕೋಟಿ ಬಾಕಿ ಉಳಿಸಿಕೊಂಡಿದೆ ಎಂದರು. ಸರಕಾರವು ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿಯ ಪುತ್ರಿ ಮತ್ತು ನಟಿ ರನ್ಯಾ ರಾವ್ ಅವರನ್ನು ಬಂಧಿಸಲಾಗಿದ್ದು, ಗೃಹ ಸಚಿವ ಜಿ. ಪರಮೇಶ್ವರ ಅವರು ಬುಧವಾರ ಈ ಕುರಿತು ಪೊಲೀಸ್ ಇಲಾಖೆಯಿಂದ ಆಂತರಿಕ ವರದಿ ಕೇಳಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ, ಪ್ರಕರಣದ ತನಿಖೆ ನಡೆಯುತ್ತಿದೆ. ಕಂದಾಯ ಗುಪ್ತಚರ ನಿರ್ದೇಶನಾಲಯ(DRI) ಪ್ರಕರಣದ ತನಿಖೆ ನಡೆಸುತ್ತಿದೆ. ಅವರು ಖಚಿತ ಮಾಹಿತಿ ನೀಡುವವರೆಗೆ, ನಾನು ಘಟನೆಯ ಬಗ್ಗೆ ಪ್ರತಿಕ್ರಿಯಿಸಲು ಸಾಧ್ಯವಿಲ್ಲ ಎಂದರು. ನಾನು ಈ ವಿಷಯವನ್ನು ಪೊಲೀಸ್ ಮುಖ್ಯಸ್ಥರೊಂದಿಗೆ ಚರ್ಚಿಸಿದ್ದೇನೆ. ಇಲಾಖೆಯು ಪರಿಶೀಲಿಸುವಂತೆ ಸೂಚಿಸಿದೆ. ಅವರು ಖಂಡಿತವಾಗಿಯೂ ಕೆಲವು ಮಾಹಿತಿಯನ್ನು ಪಡೆಯುತ್ತಾರೆ ಎಂದರು. ಪೊಲೀಸ್ ಇಲಾಖೆಯಲ್ಲಿ ಡಿಜಿಪಿಯಾಗಿ ಕೆಲಸ ಮಾಡುತ್ತಿರುವ ರಾಮಚಂದ್ರರಾವ್ ಅವರ ಮಗಳು ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ನಲ್ಲಿ ಭಾಗಿಯಾಗಿರುವ ಬಗ್ಗೆ ತಮ್ಮ ಇಲಾಖೆಗೆ ಮಾಹಿತಿ ಲಭ್ಯವಾಗಿದೆ. ಡಿಅರ್ಐ ನವರೇ ತನಿಖೆಯನ್ನು ಮಾಡುತ್ತಿರುವುದರಿಂದ ತಮ್ಮ ಇಲಾಖೆಯೊಂದಿಗೆ ಮಾಹಿತಿ ಹಂಚಿಕೊಂಡಿಲ್ಲ. ಪ್ರಕರಣ ತನಿಖಾ ಹಂತದಲ್ಲಿದೆ, ಹಾಗಾಗಿ ಏನನ್ನೂ ಹೇಳಲಾಗದು ಎಂದರು. ನಮ್ಮತುಮಕೂರಿನ…
ಲಕ್ನೋ: ಪ್ರಯಾಗ್ ರಾಜ್ ನ ನಾವಿಕ ಕುಟುಂಬವೊಂದು 45 ಗಳ ಕಾಲ ಸುಮಾರು 130 ದೋಣಿಗಳ ಮೂಲಕ 30 ಕೋಟಿ ರೂ. ಆದಾಯ ಬಂದಿದೆ. ಪ್ರತಿನಿತ್ಯ ದೋಣಿಯಿಂದ 50,000–52,000 ರೂಪಾಯಿ ಆದಾಯಗಳಿಸಿದೆ. ಈ ದೋಣಿಯು 45 ದಿನದಲ್ಲಿ 23 ಲಕ್ಷ ರೂಪಾಯಿಯಷ್ಟು ಗಳಿಕೆ ಮಾಡಿದೆ. ಅಂದ್ರೆ ಪ್ರತಿನಿತ್ಯ ಒಂದು ದೋಣಿಯಿಂದ 50,000–52,000 ರೂಪಾಯಿ ಆದಾಯ ಬಂದಿದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ. ಪ್ರಯಾಗ್ ರಾಜ್ ನ ಅರೈಲ್ ಪ್ರದೇಶದ ದೋಣಿ ಚಾಲಕ ಪಿಂಟು ಮಹಾರ, ಮಹಾಕುಂಭದ ಸಮಯದಲ್ಲಿ ವಿವಿಐಪಿಗಳನ್ನು ಮತ್ತು ಸಾಮಾನ್ಯ ಭಕ್ತರನ್ನು ಸ್ನಾನದ ಘಾಟ್ ಗಳಿಗೆ ಕರೆದೊಯ್ಯುವ ಮೂಲಕ 30 ಕೋಟಿ ರೂ.ಗಳನ್ನು ಗಳಿಸಿದರು. ಇದು ದೈವಿಕ ಅನುಗ್ರಹ ಮತ್ತು ಆಶೀರ್ವಾದ. ನನಗೆ 100 ಕ್ಕೂ ಹೆಚ್ಚು ಸದಸ್ಯರನ್ನು ಹೊಂದಿರುವ ದೊಡ್ಡ ಕುಟುಂಬವಿದೆ. ಭಕ್ತರ ಬೃಹತ್ ಆಗಮನವನ್ನು ನಿರೀಕ್ಷಿಸಿ, ಮಹಾಕುಂಭಕ್ಕೆ ಮುಂಚಿತವಾಗಿ ಒಟ್ಟು 130 ದೋಣಿಗಳನ್ನು ತೆಗೆದುಕೊಂಡೆ, ಅಲ್ಲಿಯವರೆಗೆ ನನ್ನ ಬಳಿ 60 ದೋಣಿಗಳಿದ್ದವು ಎಂದು ಪಿಂಟು ಹೇಳುತ್ತಾರೆ.…
ಬೆಂಗಳೂರು: ಗುತ್ತಿಗೆದಾರರ ಬಾಕಿ ಹಣವನ್ನು ಹಂತ ಹಂತವಾಗಿ ಬಿಡುಗಡೆ ಮಾಡಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು. ಜೆಡಿಎಸ್ ಎಂಎಲ್ಸಿ ಟಿಎ ಶರವಣ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಹಣ ಬಿಡುಗಡೆ ಮಾಡುವ ಬಗ್ಗೆ ಚರ್ಚಿಸಿ ಗುತ್ತಿಗೆದಾರರಿಗೆ ಸುಮಾರು 9,000 ಕೋಟಿ ರೂ.ಗಳನ್ನು ಪಾವತಿಸುವುದಾಗಿ ತಿಳಿಸಿದರು. ಲೋಕೋಪಯೋಗಿ ಇಲಾಖೆಗೆ 10,023 ಕೋಟಿ ರೂ.ಗಳ ಬಜೆಟ್ ಹಂಚಿಕೆ ಇದ್ದು, 8,392 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಸಚಿವರು ಹೇಳಿದರು. ಉಳಿದ ಸುಮಾರು 1400 ಕೋಟಿ ರೂ.ಗಳನ್ನು ಮಾರ್ಚ್ ಅಂತ್ಯದ ವೇಳೆಗೆ ಬಿಡುಗಡೆ ಮಾಡಲಾಗುವುದು. ಆದಾಗ್ಯೂ, 2021 ಮತ್ತು 2022 ವರ್ಷಗಳಿಗೆ 8,925 ಕೋಟಿ ರೂ.ಗಳ ಬಿಲ್ಗಳು ಬಾಕಿ ಉಳಿದಿವೆ ಮತ್ತು ಈ ಕಾಮಗಾರಿಗಳಿಗೆ ಯಾವುದೇ ಬಜೆಟ್ ಹಂಚಿಕೆಯಾಗಿಲ್ಲ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ ಗುರುವಾರ ಬೆಳಗ್ಗೆ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿದ್ದಾರೆ. ಬೆಂಗಳೂರು, ಕೋಲಾರ, ಕಲಬುರಗಿ, ದಾವಣಗೆರೆ, ತುಮಕೂರು, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. 8 ಮಂದಿ ಭ್ರಷ್ಟ ಅಧಿಕಾರಿಗಳ ನಿವಾಸ, ಕಚೇರಿಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರಿನ ಡಿಪಿಎಆರ್ ಚೀಫ್ ಇಂಜಿನಿಯರ್ ಟಿ.ಡಿ.ನಂಜುಡಪ್ಪ, ಬಿಬಿಎಂಪಿಯ ಎಕ್ಸಿಕ್ಯೂಟಿವ್ ಇಂಜಿನಿಯರ್ ಹೆಚ್.ಬಿ.ಕಲ್ಲೇಶಪ್ಪ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಶ್ರವಣಬೆಳಗೊಳ: ಶ್ರೀಕ್ಷೇತ್ರದ ಪರಮಪೂಜ್ಯ ಜಗದ್ಗುರು ಅಭಿನವ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಗಳು ಪಟ್ಟಾಭಿಷಕ್ತರಾಗಿ ಎರಡು ವಸಂತ ಸಂದಿದೆ. ಇದೇ ಮೊದಲ ಬಾರಿಗೆ ರಾಷ್ಟ್ರ ರಾಜಧಾನಿ ನವದೆಹಲಿ ಪುರಪ್ರವೇಶ ಮಾಡಿದರು. ಶ್ರೀಗಳ ಆಗಮನ ಹಿನ್ನೆಲೆಯಲ್ಲಿಅವರನ್ನು ಭವ್ಯ ಹಾಗೂ ಭಕ್ತಿಪೂರ್ವಕ ಮೆರವಣಿಗೆಯೊಂದಿಗೆ ಸ್ವಾಗತಿಸಲಾಯಿತು. ತರುವಾಯ ದೇಶದ ಅತಿದೊಡ್ಡ ಬ್ರಹ್ಮಕಮಲ ಆಡಿಟೋರಿಯಂನ ಯಶೋಭೂಮಿ ಕನ್ವೆಷನ್ಹಾಲ್ ನಲ್ಲಿ ಮಹಾಸ್ವಾಮೀಜಿ ಅವರ ಅದ್ಧೂರಿ ಹಾಗೂ ಭಕ್ತಿಪೂರ್ವಕ ಸ್ವಾಗತ ಸಮಾರಂಭವನ್ನು ಆಯೋಜಿಸಿ ಅಪಾರ ಮಂದಿ ಸೇರಿ ಅಭಿನಂದಿಸಿ ಸತ್ಕರಿಸಿದರು. ಸ್ವಾಮೀಜಿ ಅವರು ಪ್ರಪ್ರಥಮವಾಗಿ ದೆಹಲಿಗೆ ಪದಾರ್ಪಣೆ ಮಾಡಿದ ಹಿನ್ನೆಲೆಯಲ್ಲಿ ದೆಹಲಿಯ ನೂತನ ಮುಖ್ಯಮಂತ್ರಿ ರೇಖಾಗುಪ್ತಾ ಅವರು, ಲೋಕಸಭಾಧ್ಯಕ್ಷರಾದ ಓಂ ಬಿರ್ಲಾ ಮೊದಲಾದವರು ಸೇರಿ ಪೂಜ್ಯಶ್ರೀ ಸ್ವಾಮೀಜಿ ಅವರನ್ನು ವಿನಮ್ರವಾಗಿ ಸ್ವಾಗತಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ದೆಹಲಿಯ ಮೂವರು ಸಂಸದರು, ಶಾಸಕರು, ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಹಾಗೆಯೇ ದೆಹಲಿಯ ಅನೇಕ ಸಮಾಜ, ಸಮುದಾಯಗಳ ಪ್ರಮುಖರು, ಉದ್ಯಮಿಗಳು, ಅಧಿಕಾರಿಗಳು ಹಾಗೂ ದೆಹಲಿಯಲ್ಲಿ ನೆಲೆಸಿರುವ ಮೂರು ಸಾವಿರಕ್ಕೂ ಹೆಚ್ಚು ಶ್ರವಣಬೆಳಗೊಳದ ಭಕ್ತ ಜನರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು,…