Subscribe to Updates
Get the latest creative news from FooBar about art, design and business.
- ಕೆಪಿಎಸ್ ಶಾಲೆಗೆ ಕುಂಕಮನಹಳ್ಳಿ ಶಾಲೆಯನ್ನು ವಿಲೀನಗೊಳಿಸದಂತೆ ಆಗ್ರಹ
- ಜೂನ್ 19ರಂದು ತುಮಕೂರಿನಲ್ಲಿ ಪ್ರಧಾನ ಮಂತ್ರಿ ವಿಕಸಿತ ಭಾರತ ಉದ್ಯೋಗ ಯೋಜನೆ ಫಲಾನುಭವಿಗಳಿಗೆ ಪ್ರೋತ್ಸಾಹಧನ ವಿತರಣೆ
- ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
- ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
- ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
- ಗ್ರಾಮೀಣ ಕುಡಿಯುವ ನೀರು ಪೂರೈಕೆ ವ್ಯತ್ಯಯವಾಗದಂತೆ ಕ್ರಮ: ಸಚಿವ ಈಶ್ವರ ಖಂಡ್ರೆ
- ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ
Author: admin
ಬೆಂಗಳೂರು: ದೆಹಲಿಯ ಗೆಲುವು ನಮಗೆ ಮಾದರಿಯಾಗಬೇಕು, ಕರ್ನಾಟಕ ಬಿಜೆಪಿಯ ಒಳಜಗಳ ಮುಗಿದು, ಕಾರ್ಯಪದ್ಧತಿಯಲ್ಲಿ ಸ್ಪಷ್ಟತೆ ಮತ್ತು ಶಿಸ್ತು ಇರಬೇಕು ಎಂದು ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ. ಮಾಧ್ಯಮ ಹೇಳಿಕೆಯಲ್ಲಿ ರಾಜ್ಯ ಬಿಜೆಪಿ ನಾಯಕರಿಗೆ ಸಲಹೆ ನೀಡಿದ ಅವರು, ದೆಹಲಿಯಲ್ಲಿ ಭಾರತೀಯ ಜನತಾ ಪಾರ್ಟಿ ಭರ್ಜರಿ ಗೆಲುವು ಸಾಧಿಸಿರುವುದು ಪಕ್ಷದ ಪರಿಶ್ರಮದಿಂದ ಎಂದ ಅವರು,, ಸಂಘಟನೆ ಮತ್ತು ಜನಪರ ರಾಜಕೀಯದ ಫಲ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೃಢ ನಿಶ್ಚಯ, ಅಭಿವೃದ್ಧಿ ಪರ ಅಜೆಂಡಾ ಮತ್ತು ಕೇಂದ್ರ ಸರ್ಕಾರದ ಸಮರ್ಥ ಕಾರ್ಯ ಪದ್ಧತಿ ಜನತೆಯ ವಿಶ್ವಾಸವನ್ನು ಮತ್ತೆ ಗಳಿಸಿತು ಎಂದರು. ಪಕ್ಷದ ಬೂತ್ ಮಟ್ಟದ ಬಲವಾದ ತಂತ್ರ, ಸುಸಂಘಟಿತ ಪ್ರಚಾರ ತಂತ್ರ ಮತ್ತು ಜನಸಾಮಾನ್ಯರ ಸಮಸ್ಯೆಗಳನ್ನು ನಿರ್ಧಾರಾತಕವಾಗಿ ಪರಿಹರಿಸುವ ನೇತೃತ್ವದ ಫಲವಾಗಿ ದೆಹಲಿಯಲ್ಲಿ ಈ ಜಯ ಸಾಧ್ಯವಾಯಿತು. ಈ ಗೆಲುವು ಜನತೆಯ ಆಶೀರ್ವಾದ ಹಾಗೂ ನಾವೇ ಅನುಸರಿಸಬೇಕಾದ ಮಾರ್ಗದರ್ಶನವನ್ನು ಒದಗಿಸುತ್ತಿದೆ ಅವರು ತಿಳಿಸಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಇನ್ನೂ ಆಂತರಿಕ ಕಲಹ ಮತ್ತು…
ಬೀದರ್: ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರ ನಿರ್ದೇಶನದಂತೆ ಕುಶನೂರ ಪೊಲೀಸ್ ಠಾಣೆಯ ಪಿ.ಎಸ್.ಐ. ಸುಖಾನಂದ ತಮ್ಮ ಅಧಿಕಾರಿ ಸಿಬ್ಬಂದಿಯೊಂದಿಗೆ ಸಾರ್ವಜನಿಕರಿಗೆ ರಸ್ತೆ ಸುರಕ್ಷತೆ ಜಾಗೃತಿ ಮೂಡಿಸಿದರು. ಹೆಲ್ಮೆಟ್ ಧರಿಸದೇ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುತ್ತಿರುವ ಸವಾರರನ್ನು ತಡೆದು, ದಂಡ ಪಾವತಿಸುವ ಬದಲು ಹೆಲ್ಮೆಟ್ ಹಾಗೂ ಗುಲಾಬಿ ಹೂವು ನೀಡಿ ರಸ್ತೆ ಸುರಕ್ಷತೆಯ ಬಗ್ಗೆ, ಹೆಲ್ಮೆಟ್ ಧರಿಸುವಿಕೆಯ ಮಹತ್ವದ ಬಗ್ಗೆ ತಿಳಿ ಹೇಳಲಾಯಿತು. ತಮ್ಮ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಪ್ರಮಾಣ ಇಳಿಸಲು, ಪ್ರಾಣ ಹಾನಿ ತಪ್ಪಿಸುವ ನಿಟ್ಟಿನಲ್ಲಿ ಕುಶನೂರು ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳ ಈ ಕಾರ್ಯಕ್ರಮ ಸಾರ್ವಜನಿಕರು ಮೆಚ್ಚುಗೆಗೆ ಪಾತ್ರವಾಯಿತು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತಿಪಟೂರು: ಕಲ್ಪತರು ಕ್ರೀಡಾಂಗಣದಲ್ಲಿ ಜನಸ್ಪಂದನ ಹಾಗೂ ಕ್ರೀಡಾ ಸಂಘದ ನೇತೃತ್ವದಲ್ಲಿ ಫೆಬ್ರುವರಿ 13 ರಿಂದ 4 ದಿನಗಳ ಕಾಲ ನಡೆಯುವ ಪುರುಷರು ಹಾಗೂ ಮಹಿಳೆಯರ ಒನಲುಬೆಳಕಿನ ಅಂತರಾಷ್ಟ್ರೀಯ ವಾಲಿಬಾಲ್ ಪಂದ್ಯಾವಳಿಗೆ ಸಂಪೂರ್ಣವಾಗಿ ಅಲಂಕಾರಗೊಂಡಿದೆ ಎಂದು ಕ್ರೀಡಾ ಹಾಗೂ ಸಾಂಸ್ಕೃತಿಕ ಸಂಘದ ಅಧ್ಯಕ್ಷ ನವೀನ್ ತಿಳಿಸಿದರು. ಈ ಕ್ರೀಡಾಕೂಟಕ್ಕೆ ಅಂತರರಾಷ್ಟ್ರೀಯ ವಾಲಿಬಾಲ್ ತಂಡಗಳಾದ ಕೇರಳ ಪೊಲೀಸ್, ವಾಯು ಸೇನೆ, ಹಾಗೂ ಭಾರತೀಯ ಭೂಸೇನೆ, ಹಾಗೂ ಅನೇಕ ಕ್ರೀಡಾ ತಂಡಗಳು ಭಾಗವಹಿಸಲಿದ್ದು, 13ರಂದು ಸಂಜೆ 6 ಗಂಟೆಗೆ ಶಾಸಕ ಕೆ., ಷಡಕ್ಷರಿ ಉದ್ಘಾಟನೆ ಮಾಡಲಿದ್ದಾರೆ. ಮಾಜಿ ಸಚಿವ ಮಾಧುಸ್ವಾಮಿ ಕ್ರೀಡಾ ಜ್ಯೋತಿ ಸ್ವೀಕರಿಸಲಿದ್ದಾರೆ. ಈ ಸಂದರ್ಭದಲ್ಲಿ ವಾಲಿಬಾಲ್ ಆಟಗಾರರಿಗೆ ಸನ್ಮಾನ, ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಇದೇ ಎರಡನೇ ದಿನ ಇಂಡಿಯನ್ ಕೋಕೋ ಫೆಡರೇಶನ್ ಉಪಾಧ್ಯಕ್ಷರು ಹಾಗೂ ರಾಜ್ಯ ಕೋಕೋ ಫೆಡರೇಶನ್ ಅಧ್ಯಕ್ಷ ಲೋಕೇಶ್ವರ್ ಉದ್ಘಾಟಿಸಲಿದ್ದಾರೆ, ಜನಸ್ಪಂದನ ಸಂಸ್ಥೆಯ ಅಧ್ಯಕ್ಷ ಸಿ.ಬಿ.ಶಶಿಧರ್ ರವರು ಆಟಗಾರರನ್ನು ಸನ್ಮಾನಿಸಲಿದ್ದು, 16ನೇ ತಾರೀಕು ಕಡೆಯ ದಿನ ರಾಜ್ಯ ರೈಲ್ವೆ…
ಹಾವೇರಿ: ಬೈಕ್ ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಗುಡಗೂರು ಕ್ರಾಸ್ ಬಳಿ ಕಳೆದ ರಾತ್ರಿ ನಡೆದಿದೆ. ಶಶಿಕುಮಾರ್ ಉಪ್ಪಾರ (25), ಆಕಾಶ್ ಬಿರಾದಾರ (23) ಮತ್ತು ದರ್ಶನ್ (23) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಈ ಮೂವರು ಕಳೆದ ರಾತ್ರಿ ಹನುಮನಮಟ್ಟಿಯಿಂದ ಮೈಲಾರ ಜಾತ್ರೆಗೆ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಕತ್ತಲಲ್ಲಿ ಎತ್ತಿನಗಾಡಿ ಕಾಣದ ಹಿನ್ನೆಲೆ ಈ ಅಪಘಾತ ಸಂಭವಿಸಿದೆ. ಅಪಘಾತದ ವೇಳೆ ರಸ್ತೆಗೆ ಬಿದ್ದ ಪರಿಣಾಮ ಮೂವರು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ರಾಣೇಬೆನ್ನೂರು ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಮೈಸೂರು: ಉದಯಗಿರಿ ಗಲಭೆಯಲ್ಲಿ ಪೊಲೀಸರ ತಪ್ಪಿಲ್ಲ, ಪೊಲೀಸರು ಸರಿಯಾಗಿ ಕೆಲಸ ಮಾಡಿ ಪರಿಸ್ಥಿತಿ ನಿಭಾಯಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಉದಯಗಿರಿ ಗಲಭೆಗೆ ಪೊಲೀಸರ ಕರ್ತವ್ಯಲೋಪ ಕಾರಣ ಎಂಬ ಸಚಿವ ಕೆ.ಎನ್. ರಾಜಣ್ಣ ಹೇಳಿಕೆ ಬಗ್ಗೆ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಪೊಲೀಸರು ಸರಿಯಾಗಿ ಕೆಲಸ ಮಾಡಿ ಪರಿಸ್ಥಿತಿ ನಿಭಾಯಿಸಿದ್ದಾರೆ. ಪೊಲೀಸರು ಗಾಯಗೊಂಡರೂ ಸಮಯ ಪ್ರಜ್ಞೆಯಿಂದ ಕೆಲಸ ಮಾಡಿದ್ದಾರೆ. ನಾನು ನಮ್ಮ ಪೊಲೀಸರ ಪರವಾಗಿಯೇ ಇದ್ದೇನೆ ಎಂದು ಅವರು ಹೇಳಿದರು. ರಾಜಣ್ಣ ಅವರ ಹೇಳಿಕೆಗೆ ಸಿಎಂ 8—10 ದಿನಗಳಲ್ಲಿ ಪ್ರತಿಕ್ರಿಯೆ ಕೊಡುತ್ತಾರೆ. ಕಲ್ಲು ಎಸೆದಿರುವವರೆಲ್ಲರೂ 14, 15 ವರ್ಷದ ಹುಡುಗರು. ಮುಖಂಡರ ಮಾತನ್ನೂ ಅವರು ಕೇಳಿಲ್ಲ. ಹಿರಿಯರು ಮತ್ತು ಮುಖಂಡರೂ ಸೇರಿ ಗಲಭೆ ಕಂಟ್ರೋಲ್ ಮಾಡಿದ್ದಾರೆ. ಪೊಲೀಸರಿಗಾದರೆ ಪ್ರೊಟೆಕ್ಷನ್ ಇತ್ತು, ಅಲ್ಲಿದ್ದ ಜನರಿಗೆ ಇರಲಿಲ್ಲ. ಪೊಲೀಸರು ಗಲಭೆ ಮಾಡಿದವರ ಪತ್ತೆ ಮಾಡುವ ಕೆಲಸ ಮಾಡುತ್ತಿದ್ದಾರೆ. ಪೊಲೀಸರು ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಂಡು ಅರೆಸ್ಟ್ ಮಾಡುತ್ತಾರೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಪ್ರಕ್ರಿಯೆಯನ್ನು ಆರಂಭಿಸಿದ್ದೇ ರಾಜ್ಯ ಸರ್ಕಾರ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ನಮ್ಮ ಮೆಟ್ರೋ ದರ ಏರಿಕೆಯ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಅವರು ಪ್ರತಿಕ್ರಿಯೆ ನೀಡಿದ್ದು, 2023 ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಪ್ರತಿಯೊಂದು ಇಲಾಖೆಗಳಲ್ಲಿಯೂ ಬೆಲೆ ಏರಿಕೆ ಸಾಮಾನ್ಯವಾಗಿದೆ. ಬಿಎಂಟಿಸಿ ಪ್ರಯಾಣ ದರ, ವಿದ್ಯುತ್ ಬಿಲ್, ಆಸ್ತಿ ತೆರಿಗೆ, ಅಬಕಾರಿ ಸುಂಕ ಹೀಗೆ ಪ್ರತಿಯೊಂದರ ಬೆಲೆ ಏರಿಕೆಯಾಗಿದೆ ಎಂದರು. ಪ್ರಸ್ತುತ ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಕುರಿತು ದರ ನಿಗದಿ ಸಮಿತಿ ರಚಿಸಲು ಮತ್ತು ಇದರ ಸಂಪೂರ್ಣ ಪ್ರಕ್ರಿಯೆಯನ್ನು ಪ್ರಾರಂಭಿಸಲು BMRCL ಗೆ ರಾಜ್ಯ ಸರ್ಕಾರ ಸಲಹೆ ನೀಡಿದ್ದು, ಸಮಿತಿಯಲ್ಲಿನ ರಾಜ್ಯ ಪ್ರತಿನಿಧಿಗಳ ಪ್ರಯಾಣದ ದರ ಏರಿಕೆಯ ಒತ್ತಾಯದ ಮೇರೆಗೆ ಪರಿಷ್ಕೃತ ದರದ ವರದಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ಮೈಸೂರು: ನನ್ನ ಮದುವೆಗೆ ದರ್ಶನ್ ಬಂದರೆ ನನಗೆ ತುಂಬಾ ಸಂತೋಷ, ಈಗಿನ ಪರಿಸ್ಥಿತಿಯಲ್ಲಿ ಅವರನ್ನು ಭೇಟಿಯಾಗಲು ಸಾಧ್ಯವಾಗುತ್ತಿಲ್ಲ ಎಂದು ನಟ ಡಾಲಿ ಧನಂಜಯ್ ಸ್ಪಷ್ಟಪಡಿಸಿದ್ದಾರೆ. ಫೆ.15 ಮತ್ತು 16ರಂದು ಡಾಲಿ ಧನಂಜಯ್ ವಿವಾಹ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದ ವೇಳೆ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದರು. ಮದುವೆಗೆ ಕನ್ನಡ ಚಿತ್ರರಂಗದ ಎಲ್ಲರನ್ನೂ ಕರೆದಿದ್ದೇನೆ. ದರ್ಶನ್ ಅವರನ್ನು ಕರೆಯುವ ಪ್ರಯತ್ನ ಮಾಡುತ್ತಿದ್ದೇನೆ. ಆದರೆ ಅವರು ಸಿಗುತ್ತಿಲ್ಲ, ಅವರು ಮದುವೆಗೆ ಬಂದರೆ ನನಗೆ ಸಂತೋಷ ಎಂದಿದ್ದಾರೆ. ಮಂತ್ರ ಮಾಂಗಲ್ಯ, ವಚನ ಮಾಂಗಲ್ಯ ಅಥವಾ ರಿಜಿಸ್ಟರ್ ಮದುವೆ ಆಗುವ ಆಸೆಯಿತ್ತು. ಆದರೆ ನಮ್ಮ ಕುಟುಂಬದ ಸದಸ್ಯರು, ಚಿತ್ರರಂಗ, ಸ್ನೇಹಿತರು ಎಲ್ಲರಿಗೂ ಊಟ ಹಾಕಿಸಬೇಕು. ಹೀಗಾಗಿ ಒಂದೇ ವೇದಿಕೆಯಲ್ಲಿ ಎಲ್ಲರಿಗೂ ಊಟ ಹಾಕಿ ಆಶೀರ್ವಾದ ಪಡೆಯೋಣ ಎನ್ನುವ ಆಸೆಯಿಂದ ಇಲ್ಲಿ ಮದುವೆ ಆಗುತ್ತಿದ್ದೇವೆ ಎಂದು ಧನಂಜಯ್ ತಿಳಿಸಿದರು. ಅಭಿಮಾನಿಗಳು ಹಾಗೂ ವಿಐಪಿಗಳಿಗೆ ಪ್ರತ್ಯೇಕ ಊಟದ ವ್ಯವಸ್ಥೆ ಮಾಡಲಾಗಿದೆ. ಎಲ್ಲರಿಗೂ ಒಂದೇ ರೀತಿಯ ಊಟದ ವ್ಯವಸ್ಥೆ ಇರುತ್ತದೆ…
ವಿಜಯಪುರ: ಭೀಮಾ ತೀರದ ಕುಖ್ಯಾತ ಹಂತಕ ಚಂದಪ್ಪ ಹರಿಜನ ಸಹಚರ ಹಾಗೂ ಸಹೋದರ ಸಂಬಂಧಿ ಬಾಗಪ್ಪ ಹರಿಜನ್ ನನ್ನು ಮಂಗಳವಾರ ರಾತ್ರಿ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಿದೆ. ಮುಖ, ತಲೆ ಸೇರಿದಂತೆ ವಿವಿಧ ಭಾಗಗಳಿಗೆ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ನಡೆಸಲಾಗಿದೆ. ಈ ಹಿಂದೆ ಕೋರ್ಟ್ ಆವರಣದಲ್ಲಿಯೇ ಬಾಗಪ್ಪ ಹರಿಜನ್ ಮೇಲೆ ಗುಂಡಿನ ದಾಳಿಯಾಗಿತ್ತು. ಆದರೆ ಆಗ ಬಾಗಪ್ಪ ಬಚಾವ್ ಆಗಿದ್ದ. ಆದರೆ ಈ ಬಾರಿ ಹಂತಕರು ಯೋಜಿತ ರೀತಿಯಲ್ಲಿ ದಾಳಿ ನಡೆಸಿ ಬಾಗಪ್ಪನನ್ನು ಕೊಂದು ಹಾಕಿದ್ದಾರೆ. ವಿಜಯಪುರದ ಮದಿನಾ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದ ಬಾಗಪ್ಪ ರಾತ್ರಿ ಸುಮಾರಿಗೆ ಮನೆಯಿಂದ ಹೊರಬರುತ್ತಿದ್ದಂತೆ ದುಷ್ಕರ್ಮಿಗಳು ಮಚ್ಚಿನಿಂದ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ. ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಪಾವಗಡ: ತಾಲೂಕಿನ ಕಾರನಾಗನಹಟ್ಟಿ ಗ್ರಾಮದಲ್ಲಿ ಅಗ್ನಿಅವಘಡವೊಂದು ಸಂಭವಿಸಿದ್ದು, ಗ್ರಾಮದ ಬಡನಾಗಪ್ಪ ಎನ್ನುವವರ ಹುಲ್ಲಿನ ಬಣವೆಗೆ ಬೆಂಕಿ ಬಿದ್ದ ಪರಿಣಾಮ ಹುಲ್ಲಿನ ಬಣವೆ ಸಮೀಪದಲ್ಲಿ ಕಟ್ಟಿ ಹಾಕಿದ್ದ ಐದು ಹಸುಗಳ ಪೈಕಿ ಒಂದು ಹಸು ಸಜೀವ ದಹನವಾಗಿದೆ. ಮತ್ತೊಂದು ಹಸು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದೆ. ಹಸುಗಳನ್ನು ರಕ್ಷಿಸಲು ಬೆಂಕಿಗೆ ನುಗ್ಗಿದಂತಹ ರೈತ ಬಡನಾಗಪ್ಪ ಅವರಿಗೆ ಸುಟ್ಟ ಗಾಯಗಳಾಗಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳದಲ್ಲಿ ರಾಸುಗಳ ಮೇವಿಗಾಗಿ ಸಂಗ್ರಹಿಸಿದ್ದ ಎರಡು ದೊಡ್ಡ ಹುಲ್ಲಿನ ಬಣವೆಗಳು ಸುಟ್ಟು ಹೋಗಿದ್ದು, ಇದರ ಪಕ್ಕದ ತೋಟದ ಮನೆಯಲ್ಲಿ ಶೇಖರಿಸಿದ್ದ ಶೇಂಗಾ, ಭತ್ತ ಹಾಗೂ ಇತರ ದವಸ ಧಾನ್ಯಗಳು ಸಹ ಬೆಂಕಿಯಲ್ಲಿ ಸುಟ್ಟು ಬೂದಿಯಾಗಿವೆ. ಸಮೀಪದ ಬೆಟ್ಟಕ್ಕೆ ಹತ್ತಿಕೊಂಡಿದ್ದ ಬೆಂಕಿ ಏಕಾಏಕಿ ಇವರ ಹುಲ್ಲಿನ ಬಣವೆಗಳಿಗೆ ಆವರಿಸಿದೆ ಇದರಿಂದಾಗಿ ಸುಮಾರು ನಾಲ್ಕೈದು ಲಕ್ಷಕ್ಕೂ ಅಧಿಕ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಪಶು ಸಂಗೋಪನಾ ಇಲಾಖೆಯ ಸಹಾಯಕ ನಿರ್ದೇಶಕ ಹೊರಕೆರಪ್ಪ…
ತುಮಕೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪ್ರಶಸ್ತಿಯನ್ನು ಏಪ್ರಿಲ್ 5ರಂದು ನಡೆಯುವ ಡಾ.ಬಾಬು ಜಗಜೀವನರಾಂ ಹಾಗೂ ಏಪ್ರಿಲ್ 14ರಂದು ನಡೆಯುವ ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆಯಂದು ನೀಡಲಾಗುವುದು. ಆಸಕ್ತರು ಭರ್ತಿ ಮಾಡಿದ ತಮ್ಮ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಫೆಬ್ರವರಿ 27ರೊಳಗಾಗಿ ಕೊರಟಗೆರೆ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಸಹಾಯಕ ನಿರ್ದೇಶಕರು (ಗ್ರೇಡ್-2) ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4