Author: admin

ತಿಪಟೂರು:  ಕೆರೆಯಲ್ಲಿ ಮುಖತೊಳೆಯಲು ಹೋದ ಯುವಕ ಕಾಲು ಜಾರಿ ಬಿದ್ದು ನೀರುಪಾಲಾದ ಘಟನೆ ತಿಪಟೂರು ತಾಲೂಕಿನ ಕಸಬಾಹೋಬಳಿ ಮತ್ತಿಹಳ್ಳಿಯಲ್ಲಿ ನಡೆದಿದೆ. ಯುವಕ ಮುಖ ತೊಳೆಯಲು ಹೋಗಿದ್ದ ವೇಳೆ ಯುವಕ ಕಾಲು ಜಾರಿ ಬಿದ್ದು ನೀರುಪಾಲಾಗಿದ್ದಾನೆ ಎಂದು ಹೇಳಲಾಗಿದೆ. ಮೃತಪಟ್ಟ ಯುವಕನನ್ನು ಗ್ರಾಮದ ದಯಾನಂದ್(19)  ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಹಾಗೂ ಹೊನ್ನವಳ್ಳಿ ಪೊಲೀಸರು ಭೇಟಿ ನೀಡಿದ್ದಾರೆ. ಸದ್ಯ  ಮೃತದೇಹಕ್ಕಾಗಿ ಶೋಧ ನಡೆಸಲಾಗುತ್ತಿದೆ. ಹೊನ್ನವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು:  ರುಡ್‌ ಸೆಟ್ ಸಂಸ್ಥೆಯ ವತಿಯಿಂದ ಸಿಸಿ ಟಿ.ವಿ. ಕ್ಯಾಮೆರಾ, ಸೆಕ್ಯೂರಿಟಿ ಅಲಾರಾಂ ಮತ್ತು ಸ್ಮೋಕ್ ಡಿಟೆಕ್ಟರ್‌ನ ಅಳವಡಿಕೆ ಮತ್ತು ಸೇವೆ ಕುರಿತ 13 ದಿನಗಳ ಉಚಿತ ತರಬೇತಿಗಾಗಿ ಗ್ರಾಮೀಣ ನಿರುದ್ಯೋಗಿ ಯುವಕ–ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿಯನ್ನು ಫೆಬ್ರವರಿ 21 ರಿಂದ ಹಮ್ಮಿಕೊಳ್ಳಲಾಗಿದೆ. ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಹೊಂದಿರಬೇಕು. ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು. ತರಬೇತಿ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9740982585, 9241482541, 9380162042ನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್‌ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.…

Read More

ನವದೆಹಲಿ: ಸಂಸತ್ ಭವನದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರವರನ್ನು ಕೇಂದ್ರ ಸಚಿವ ವಿ.ಸೋಮಣ್ಣ  ಭೇಟಿ ಮಾಡಿದರು. ಈ ಸಂದರ್ಭದಲ್ಲಿ ತುಮಕೂರು, ಚಿತ್ರದುರ್ಗ, ದಾವಣಗೆರೆ ರೈಲ್ವೇ ಲೈನ್ ಗೆ ಸಂಬಂಧಪಟ್ಟ ಭಾಗವಾದ ತಿಮ್ಮರಾಜನಹಳ್ಳಿ ಮತ್ತು ತಾವರೆಕೆರೆ ಮಧ್ಯದ ರೈಲ್ವೇ ಕಾಮಗಾರಿಗೆ ಸಂಬಂಧಪಟ್ಟಂತೆ, ರೈಲ್ವೇ ಬೋರ್ಡ್  ಕೇಂದ್ರ ಗೃಹ ಇಲಾಖೆಗೆ ಕಳುಹಿಸಿದ ಪ್ರಸ್ತಾವನೆಯನ್ನು ಅನುಮೋದಿಸಿ ಕೊಡಬೇಕೆಂದು ಕೇಂದ್ರ ಗೃಹ ಸಚಿವರಲ್ಲಿ ಕೋರಲಾಯಿತು. ಈ ಬಗ್ಗೆ, ಕೇಂದ್ರ ಗೃಹ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ನನಗೆ ಅತೀವ ಸಂತಸ ತಂದಿದೆ. ಕರ್ನಾಟಕ ರಾಜ್ಯದ ಹಾಗೂ ವಿಶೇಷವಾಗಿ ತುಮಕೂರು ಜನತೆಯ ಪರವಾಗಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು:  ಜಿಲ್ಲೆಯ ಶಿರಾ ತಾಲೂಕಿನ ಮಾಗೋಡು ಗೊಲ್ಲರಹಟ್ಟಿಯಲ್ಲಿರುವ ಶ್ರೀ ಕಂಬದ ರಂಗನಾಥ ಸ್ವಾಮಿ ಹೂವಿನ ರಥೋತ್ಸವ ಅದ್ದೂರಿಯಾಗಿ ನೆರವೇರಿತು. ಈ ಪುಣ್ಯ ಕ್ಷೇತ್ರಕ್ಕೆ ರಾಜ್ಯದ ಮೂಲೆಮೂಲೆಯಿಂದಲೂ ಭಕ್ತರು ಆಗಮಿಸುತ್ತಾರೆ. ಮಾಗೋಡು ಶ್ರೀ ಕಂಬದ ರಂಗನಾಥ ಸ್ವಾಮಿ ಎಂದರೆ ಹೂವಿಗೆ ಪ್ರಸಿದ್ದಿಯಾಗಿದೆ. ಇಲ್ಲಿ ತಮ್ಮ ಇಷ್ಟಾರ್ಥ ಪ್ರಾಪ್ತಿಯಾದರೆ ಹೂವಿನ ತುಲಾಭಾರ ಸೇರಿದಂತೆ ಸಾವಿರಾರು ರೂ.ಗಳ ಹೂವನ್ನು ತಂದು ಶ್ರೀ ಕಂಬದ ರಂಗನಾಥಸ್ವಾಮಿ ರಥಕ್ಕೆ ಅರ್ಪಿಸುತ್ತಾರೆ. ರಥೋತ್ಸವದ ವೇಳೆ ರಥದ ತುಂಬೆಲ್ಲಾ ಹೂವಿನಿಂದ ತುಂಬಿರುತ್ತದೆ. ಇಲ್ಲಿ ಶ್ರೀ ರಂಗನಾಥ ಸ್ವಾಮಿಯು ಕಂಬದಲ್ಲಿ ಮೂಡಿರುವ ಕಾರಣಗಳಿಂದ ಕಂಬದರಂಗ ಎಂದು ಕರೆದು ಆರಾಧಿಸುತ್ತಾರೆ. ಇಲ್ಲಿಗೆ ಹೂವೆ ದೇವರಿಗೆ ಪ್ರಿಯವಾದ ವಸ್ತುವಾಗಿದೆ. ಹೂವಿನ ಹಾರವನ್ನು ತೇರಿಗೆ ಹಾಕುವುದು ವಾಡಿಕೆ ಮಾತ್ರವಲ್ಲ. ಭಕ್ತರು ತಮ್ಮ ಇಷ್ಟಾಥಗಳ ಈಡೇರಿಕೆಗೆ ಹರಕೆಯ ರೂಪದಲ್ಲಿ ಹೂವನ್ನು ಅಪಿಸುವುದು ಸಂಪ್ರದಾಯವಾಗಿದೆ. ಕಂಬದ ರೂಪದಲ್ಲಿ ಹೊರಬಂದ ಶ್ರೀಹರಿಯು ವೈಕುಂಠದಿಂದ ಧರೆಗಿಳಿದು ಬಂದು ಭಕ್ತರು ಕಷ್ಟ ಈಡೇರಿಸುತ್ತಾನೆಂದು ಭಕ್ತರು ಭಕ್ತಿಯಿಂದ ಹೂವು ಅರ್ಪಿಸುವುದು ವಾಡಿಕೆಯಾಗಿದೆ. ಪ್ರತಿ ವರ್ಷ ಮಾಘ…

Read More

ಕೊರಟಗೆರೆ:  ಗುಡಿಸಲಿಗೆ ಆಕಸ್ಮಿಕ ಬೆಂಕಿ ಬಿದ್ದ ಪರಿಣಾಮ ಅತ್ತೆ ಸೊಸೆ ಗಾಯಗೊಂಡು,  ಗುಡಿಸಲಿದ್ದ ನಾಲ್ಕು ಮೇಕೆ ಹಾಗೂ ದವಸ ಧಾನ್ಯ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಕೊರಟಗೆರೆ ತಾಲೂಕಿನ ಬಿಡಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಿ ಬಿ ಪಾಳ್ಯ ಗ್ರಾಮದಲ್ಲಿ ನಡೆದಿದೆ. ಕೊರಟಗೆರೆ ತಾಲೂಕಿನ ಬಿಡಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಿ.ಬಿ.ಪಾಳ್ಯ ಗ್ರಾಮದ ನಿವಾಸಿ ಶಿಲ್ಪಾ ಜಯರಾಮ್ ಅವರ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು, ಪರಿಣಾಮವಾಗಿ  ಗುಡಿಸಲಲ್ಲಿದ್ದ ನಾಲ್ಕು ಮೇಕೆಗಳು, ಧವಸ ಧಾನ್ಯ ಸೇರಿದಂತೆ ಎಲ್ಲವೂ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ. ಮೇಕೆಗಳನ್ನು ಕಾಪಾಡಲು ಹೋದ ಅತ್ತೆ ಸೊಸೆ ಇಬ್ಬರಿಗೂ ಬೆಂಕಿ  ತಗುಲಿ  ಕೈ, ಕಾಲು ಕೆನ್ನೆಗೆ  ಗಾಯಗಳಾಗಿವೆ. ಇದನ್ನು ಕಂಡ ಸ್ಥಳೀಯರು ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸುವ ಕೆಲಸ ಮಾಡಿದ್ದಾರೆ. ಇನ್ನು ಬಡ ಕುಟುಂಬದ ಮಹಿಳೆಯರಿಬ್ಬರೂ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ . ಕುಟುಂಬದಲ್ಲಿ ಅತ್ತೆ ಸೊಸೆ ಮಗ ಹಾಗೂ ಇಬ್ಬರು ಶಾಲೆಗೆ ಹೋಗುವ ಮಕ್ಕಳಿದ್ದರು. ಇದೀಗ ಗುಡಿಸಲು ಬೆಂಕಿಗೆ ಆಹುತಿಯಾದ ಪರಿಣಾಮ…

Read More

ಮಧುಗಿರಿ : ಮಧುಗಿರಿ ತಾಲೂಕಿನ ಎಲ್ಲ ಹೋಬಳಿಯ ಗ್ರಾಮ ಆಡಳಿತ ಅಧಿಕಾರಿಗಳಿಂದ ಶಾಂತಿ ಸಹನೆಯಿಂದ ಮುಷ್ಕರ  ನಡೆಯಿತು. ಗ್ರಾಮ ಆಡಳಿತ ತಾಲೂಕು ಅಧ್ಯಕ್ಷರಾದ ಪ್ರಸನ್ನ ಕುಮಾರ್ ಮಾತನಾಡಿ, ಮೂಲಭೂತ ಸೌಲಭ್ಯಗಳು ನೀಡಬೇಕು, ತಾಂತ್ರಿಕ ವೇತನ ನೀಡಬೇಕು ಎಂದು ಮುಷ್ಕರ ಮಾಡುತ್ತಿದ್ದೇವೆ.  ಐದು ನೂರು ಪ್ರಯಾಣ ಭತ್ಯೆ ನೀಡಿರುತ್ತಾರೆ, ಇದನ್ನು ಐದು ಸಾವಿರಕ್ಕೆ ಏರಿಸಬೇಕು ಎಂದು ಒತ್ತಾಯಿಸಿದರು. ಕಂದಾಯ ಇಲಾಖೆ ರೂಲ್ಸ್ ತೆಗೆದಿರುತ್ತಾರೆ, ಇದನ್ನು ಸರಿಪಡಿಸಬೇಕು. 22,  23 ವರ್ಷ ಆದರೂ ಪದನ್ನೊತಿ  ನೀಡುತ್ತಿಲ್ಲ ಎಂದು ಹೇಳಿದರು. ಈ ಸಂದರ್ಭದಲ್ಲಿ ಮದುಗಿರಿ ಶೈಕ್ಷಣಿಕ ಜಿಲ್ಲಾ ಕರ್ನಾಟಕ ಸರ್ಕಾರಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ರವರು  ಜಿಲ್ಲಾ ಸರ್ಕಾರಿ ನೌಕರರ ಸಂಘದ ನಿರ್ದೇಶಕರಾದ ರವಿಕುಮಾರ್ ಹಾಗೂ ಜಿಲ್ಲಾ ಸರ್ಕಾರಿ ನೌಕರರ ಸಂಘದ ನಿರ್ದೇಶಕರಾದ ನಿಂಗಪ್ಪ ರಾಮಗಿರಿ ಇನ್ನು ಮುಂತಾದ ಗ್ರಾಮದ ಆಡಳಿತ ಅಧಿಕಾರಿಗಳು ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು…

Read More

ತುರುವೇಕೆರೆ: ಕರ್ನಾಟಕ ರಾಜ್ಯ ಗ್ರಾಮ ಆಡಳಿತಾಧಿಕಾರಿಗಳ ತುರುವೇಕೆರೆ ಶಾಖೆ, ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಸಮಸ್ಯೆಗಳು ಮತ್ತು ಬೇಡಿಕೆಗಳ ಈಡೇರಿಕೆಗಾಗಿ 2ನೇ ಹಂತದ ಅನಿರ್ಧಿಷ್ಟಾವಧಿ ಮುಷ್ಕರ  ತಾಲ್ಲೂಕು ಕಚೇರಿಯ ಮುಂಭಾಗ ನಡೆಯಿತು. ಪಟ್ಟಣದ ತಾಲ್ಲೂಕು ಕಚೇರಿಯ ಆವರಣದಲ್ಲಿ ಮುಷ್ಕರವನ್ನುದ್ದೇಶಿಸಿ ಮಾತನಾಡಿದ ತಾಲ್ಲೂಕು ಗೌರವಾಧ್ಯಕ್ಷ ಹೇಮತ್ ಕುಮಾರ್,  ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಕಾರ್ಯಕಾರಿ ಸಮಿತಿ ಸಭಾ ನಿರ್ಣಯದಂತೆ  ಹಿಂದೆ ರಾಜ್ಯಾದ್ಯಂತ ಮುಷ್ಕರ ನಡೆಸಿದ ಕಾರಣ, ದಿನಾಂಕ:03—10–2024 ರಂದು ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಕಂದಾಯ ಇಲಾಖೆ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಭರವಸೆ ನೀಡಿದ್ದರು. ಆದರೆ  ಸರ್ಕಾರವು ಈ ವೃಂದದ ನೌಕರರ ಬೇಡಿಕೆಗಳ ವಿಚಾರವಾಗಿ ಯಾವುದೇ ತೃಪ್ತಿಕರ ಕ್ರಮಗಳನ್ನು ಕೈಗೊಂಡಿರುವುದಿಲ್ಲ ಮತ್ತು ಬೇಡಿಕೆಗಳನ್ನು ಈಡೇರಿಸಿರುವುದಿಲ್ಲ. ಬದಲಾಗಿ ಮುಷ್ಕರದ ಪೂರ್ವದ ಅವಧಿಗಿಂತಲೂ ಹೆಚ್ಚಿನ ಕಾರ್ಯದ ಒತ್ತಡ ಉಂಟಾಗಿರುತ್ತದೆ.  ಆದ್ದರಿಂದ ಉಲ್ಲೇಖದ ಸಭೆಯಲ್ಲಿ ಮೇಲ್ದಂಡ ಎಲ್ಲಾ ಕಾರಣಗಳಿಗಾಗಿ ಮುಷ್ಕರದ…

Read More

ಜಬಲ್ಪುರ : ಕುಂಭಮೇಳದಿಂದ ಹಿಂತಿರುಗುತ್ತಿದ್ದ ಮಿನಿ ಬಸ್​ ಹಾಗೂ ಟ್ರಕ್​ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 7 ಜನ ಮೃತಪಟ್ಟಿದ್ದಾರೆ. ಮಧ್ಯಪ್ರದೇಶದ ಜಬಲ್ಪುರ—ಪ್ರಯಾಗ್ ​ರಾಜ್​ ಮಾರ್ಗದಲ್ಲಿ ಈ ದುರ್ಘಟನೆ ನಡೆದಿದೆ.  ಜಬಲ್ಪುರ — ಪ್ರಯಾಗ್​ರಾಜ್​ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುತ್ತಿದ್ದ ಮಿನಿ ಬಸ್,​ ವಿರುದ್ಧ ದಿಕ್ಕಿನಿಂದ ವೇಗವಾಗಿ ಬರುತ್ತಿದ್ದ ಸಿಮೆಂಟ್​ ತುಂಬಿದ್ದ ಟ್ರಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ 7 ಜನ ಪ್ರಾಣ ಕಳೆದುಕೊಂಡಿದ್ದಾರೆ. ಮೃತಪಟ್ಟವರು ಆಂಧ್ರಪ್ರದೇಶದ ನಿವಾಸಿಗಳಾಗಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ರಾಯಚೂರು: ಚಲಿಸುತ್ತಿದ್ದ ಆ್ಯಂಬುಲೆನ್ಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಆ್ಯಂಬುಲೆನ್ಸ್ ನಡು ರಸ್ತೆಯಲ್ಲಿ ಹೊತ್ತಿ ಉರಿದ ಘಟನೆ ರಾಯಚೂರಿನ ಆಶಾಪುರ ರಸ್ತೆಯಲ್ಲಿ ನಡೆದಿದೆ. ಆ್ಯಂಬುಲೆನ್ಸ್ ನ ಇಂಜಿನ್ ನಲ್ಲಿ ಸಮಸ್ಯೆ ಕಂಡು ಬಂದಿದ್ದು, ಪರಿಣಾಮವಾಗಿ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಆ್ಯಂಬುಲೆನ್ಸ್ ನಲ್ಲಿದ್ದ ಮೂವರು ಹಾಗೂ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಯಚೂರಿನಿಂದ ಉಡಮಗಲ್ ಗ್ರಾಮಕ್ಕೆ ಆ್ಯಂಬುಲೆನ್ಸ್ ಹೊರಟಿತ್ತು.  ಬೆಂಕಿ ಹತ್ತಿಕೊಂಡ ಬೆನ್ನಲ್ಲೇ  ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ  ಬೆಂಕಿ ನಂದಿಸಿದೆ. ನಂತರ ಮೃತದೇಹವನ್ನು ಬೇರೊಂದು ವಾಹನದಲ್ಲಿ ಗ್ರಾಮಕ್ಕೆ ಕುಟುಂಬಸ್ಥರು ಸಾಗಿಸಿದ್ದಾರೆ. ಪಶ್ಚಿಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೆಂಗಳೂರು: ಈಜಲು ತೆರಳಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಬನ್ನೇರುಘಟ್ಟ ಸುವರ್ಣಮುಖಿ ಕಲ್ಯಾಣಿಯಲ್ಲಿ ಮುಳುಗಿ ನೀರು ಪಾಲಾದ ಘಟನೆ ನಡೆದಿದೆ. ಬೊಮ್ಮನಹಳ್ಳಿ ಗಾರ್ವೇಬಾವಿ ಪಾಳ್ಯದ ದೀಪು(20), ಯೋಗಿಶ್ವರನ್(20) ಮೃತಪಟ್ಟ ವಿದ್ಯಾರ್ಥಿಗಳಾಗಿದ್ದಾರೆ. ಹೆಬ್ಬಗೋಡಿಯ ಕಾಲೇಜೊಂದರ 5 ಮಂದಿ ವಿದ್ಯಾರ್ಥಿಗಳು ಬನ್ನೇರುಘಟ್ಟ ಸುವರ್ಣಮುಖಿ ಕಲ್ಯಾಣಿಗೆ ಈಜಲು ಬಂದಿದ್ದ ವೇಳೆ ಈ ಘಟನೆ ನಡೆದಿದೆ. ನೀರಿಗೆ ಇಳಿದಿದ್ದ ವಿದ್ಯಾರ್ಥಿಗಳ ಪೈಕಿ ದೀಪು ಹಾಗೂ ಯೋಗೀಶ್ವರನ್ ಈಜಲು ಸಾಧ್ಯವಾಗದೇ ಪರದಾಡಿದ್ದಾರೆ. ಕೆಲ ಕಾಲ ಜೀವ ಉಳಿಸಿಕೊಳ್ಳಲು ಸಾಕಷ್ಟು ಹೋರಾಟ ನಡೆಸಿದ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿದ್ದಾರೆ. ನೀರಲ್ಲಿ ಮುಳುಗುತ್ತಿದ್ದ ಸ್ನೇಹಿತರನ್ನು ರಕ್ಷಿಸಲಾಗದೇ ಉಳಿದ ಸ್ನೇಹಿತರು ಪರದಾಡಿದ್ದಾರೆ. ಈ ಘಟನೆಯ ದೃಶ್ಯ ಸ್ಥಳೀಯ ಯುವಕರ ಮೊಬೈಲ್ ಕ್ಯಾಮರಾದಲ್ಲಿ ಸೆರೆಯಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More