Author: admin

ನವದೆಹಲಿ: ಅದಾನಿ ಸಮೂಹದ ಸಂಸ್ಥಾಪಕ ಗೌತಮ್ ಅದಾನಿ ಅವರು ರಿಲಯನ್ಸ್ ಇಂಡಸ್ಟ್ರೀಸ್‌ ನ ಮುಖೇಶ್ ಅಂಬಾನಿ ಅವರನ್ನು ಹಿಂದಿಕ್ಕಿ ಮತ್ತೆ ಭಾರತದ ಹಾಗೂ ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿ ಎಂಬ ಪಟ್ಟವನ್ನು ಅಲಂಕರಿಸಿದ್ದಾರೆ. ಗೌತಮ್ ಅದಾನಿ ಅವರ ಒಟ್ಟು ನಿವ್ವಳ ಆಸ್ತಿ ಮೌಲ್ಯವು ಸುಮಾರು ₹8.59 ಲಕ್ಷ ಕೋಟಿಗೆ (92.6 ಬಿಲಿಯನ್ ಡಾಲರ್) ಏರಿಕೆಯಾಗಿದೆ. ಇದೇ ವೇಳೆ ಮುಖೇಶ್ ಅಂಬಾನಿ ಅವರ ಸಂಪತ್ತು ₹8.42 ಲಕ್ಷ ಕೋಟಿ (90.8 ಬಿಲಿಯನ್ ಡಾಲರ್) ಇದೆ ಎಂದು ವರದಿಯಾಗಿದೆ. ಕಳೆದ ಕೆಲವು ದಿನಗಳಿಂದ ಅದಾನಿ ಸಮೂಹದ 10 ಪ್ರಮುಖ ಕಂಪನಿಗಳ ಷೇರು ಬೆಲೆಗಳಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಇದು ಅದಾನಿ ಅವರ ಒಟ್ಟು ಸಂಪತ್ತು ಹೆಚ್ಚಾಗಲು ಪ್ರಮುಖ ಕಾರಣವಾಗಿದೆ. ಬ್ಲೂಮ್‌ಬರ್ಗ್ ಬಿಲಿಯನೇರ್ಸ್ ಇಂಡೆಕ್ಸ್ (Bloomberg Billionaires Index) ಪ್ರಕಾರ, ವಿಶ್ವದ ಅತ್ಯಂತ ಶ್ರೀಮಂತರ ಪಟ್ಟಿಯಲ್ಲಿ ಗೌತಮ್ ಅದಾನಿ ಸದ್ಯ 19ನೇ ಸ್ಥಾನದಲ್ಲಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಅದಾನಿ ಮತ್ತು ಅಂಬಾನಿ ನಡುವೆ ಅಗ್ರ ಸ್ಥಾನಕ್ಕಾಗಿ…

Read More

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರಗಾಲದ ಭೀತಿ ಎದುರಾಗಿದ್ದು, ರೈತರು ಮತ್ತು ಸಾಮಾನ್ಯ ಜನರು ಸಂಕಷ್ಟದಲ್ಲಿದ್ದಾರೆ. ಆದರೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಗಾಳಿಗೆ ತೂರಿ, ಕೇವಲ ಕುರ್ಚಿ ಉಳಿಸಿಕೊಳ್ಳುವ ಮತ್ತು ದೆಹಲಿ ಪ್ರವಾಸದ ರಾಜಕೀಯದಲ್ಲಿ ಮಗ್ನರಾಗಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರಕ್ಕೆ ಎಚ್ಚರಿಕೆ ನೀಡಿರುವ ಅವರು, ಮಳೆಯ ಅನಿಶ್ಚಿತತೆಯ ಲಾಭ ಪಡೆದು ಕಾಳಸಂತೆಕೋರರು ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಹೆಚ್ಚಿನ ಬೆಲೆಗೆ ಮಾರಿ ರೈತರನ್ನು ಲೂಟಿ ಮಾಡಲು ಹೊಂಚು ಹಾಕುತ್ತಿದ್ದಾರೆ. ಸರ್ಕಾರ ಕೂಡಲೇ ಜಿಲ್ಲಾವಾರು ದಾಸ್ತಾನು ವಿವರಗಳನ್ನು ಪಾರದರ್ಶಕಗೊಳಿಸಬೇಕು ಮತ್ತು ಕೃತಕ ಅಭಾವ ಸೃಷ್ಟಿಯಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದ್ದಾರೆ. ಬರಗಾಲದಿಂದ ಜಾನುವಾರುಗಳಿಗೆ ಮೇವಿನ ತೀವ್ರ ಅಭಾವ ಉಂಟಾಗುವ ಸಾಧ್ಯತೆ ಇದೆ. ತಕ್ಷಣವೇ ತಾಲೂಕು ಮಟ್ಟದಲ್ಲಿ ಮೇವು ಬ್ಯಾಂಕ್‌ಗಳನ್ನು ಸಕ್ರಿಯಗೊಳಿಸಬೇಕು. ರೈತರು ಅನಿವಾರ್ಯವಾಗಿ ತಮ್ಮ ಜಾನುವಾರುಗಳನ್ನು ಕಸಾಯಿಖಾನೆಗೆ ಮಾರಾಟ ಮಾಡುವ ಸ್ಥಿತಿ ಬರಬಾರದು ಎಂದರು. ರಾಜ್ಯದ 12…

Read More

ಬೆಂಗಳೂರು: ಧಾರವಾಡ ಬಿಜೆಪಿ ನಾಯಕ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ತೀರ್ಪು ಪ್ರಕಟಿಸಿದ್ದು, ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಾಧಿ ಶಿಕ್ಷೆ ನೀಡಿದೆ. ಇದೇ ಪ್ರಕರಣದಲ್ಲಿ 15 ಅಪರಾಧಿಗಳಿಗೂ ಜೀವಾವಾಧಿ ಶಿಕ್ಷೆ ವಿಧಿಸಿರುವ ಕೋರ್ಟ್ 19ನೇ ಅಪರಾಧಿ ಚೆನ್ನಕೇಶವ ಟಿಂಗರಿಕರ್ ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಬೆಂಗಳೂರಿನ ವಿಶೇಷ ಜನಪ್ರತಿನಿಧಿಗಳ ಕೋರ್ಟ್ ನ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ಇಂದು ಮಹತ್ವದ ತೀರ್ಪು ಪ್ರಕಟಿಸಿದ್ದಾರೆ. ಇದೇ ವೇಳೆ ಯೋಗೇಶ್ ಗೌಡ ಮಕ್ಕಳಿಗೆ ಪರಿಹಾರವಾಗಿ 16 ಲಕ್ಷ ರೂಪಾಯಿ ನೀಡುವಂತೆ ವಿನಯ್ ಕುಲಕರ್ಣಿಗೆ ಸೂಚಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

Read More

ಬೆಂಗಳೂರು: ರಾಜ್ಯದ ಸಂಘಟಿತ ಮತ್ತು ಅಸಂಘಟಿತ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ‘ಋತುಚಕ್ರದ ವೇತನ ಸಹಿತ ರಜೆ’ (Paid Menstrual Leave) ನೀತಿಯನ್ನು ಕಟ್ಟುನಿಟ್ಟಾಗಿ ಮತ್ತು ಪ್ರಾಮಾಣಿಕವಾಗಿ ಜಾರಿಗೊಳಿಸುವಂತೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಮಹತ್ವದ ನಿರ್ದೇಶನ ನೀಡಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಈ ಆದೇಶ ನೀಡಿದ್ದು, “ಋತುಚಕ್ರದ ಅವಧಿಯಲ್ಲಿ ರಜೆ ನೀಡುವುದು ಕೇವಲ ಸೌಲಭ್ಯವಲ್ಲ, ಅದು ಸಂವಿಧಾನದ ವಿಧಿ 21ರ ಅಡಿಯಲ್ಲಿ ಮಹಿಳೆಯರ ಘನತೆ ಮತ್ತು ಆರೋಗ್ಯದ ಹಕ್ಕಿನ ಭಾಗವಾಗಿದೆ” ಎಂದು ಅಭಿಪ್ರಾಯಪಟ್ಟಿದೆ. ಪುರುಷರು ಮತ್ತು ಮಹಿಳೆಯರು ಕಾನೂನಿನ ದೃಷ್ಟಿಯಲ್ಲಿ ಸಮಾನರಾಗಿದ್ದರೂ, ಜೈವಿಕವಾಗಿ ಭಿನ್ನರಾಗಿದ್ದಾರೆ. ಈ ವ್ಯತ್ಯಾಸವನ್ನು ಗುರುತಿಸಿ ಸೌಲಭ್ಯ ನೀಡುವುದು ಸಮಾನತೆಯ ಉಲ್ಲಂಘನೆಯಲ್ಲ, ಬದಲಿಗೆ ಸಮಾನತೆಗೆ ಅರ್ಥ ನೀಡುವ ಕ್ರಮವಾಗಿದೆ ಎಂದು ಕೋರ್ಟ್ ಹೇಳಿದೆ. ಅಸಂಘಟಿತ ವಲಯಕ್ಕೂ ಅನ್ವಯ: ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಹೋಟೆಲ್ ಕಾರ್ಮಿಕರೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ, ಕೇವಲ ಕಾರ್ಖಾನೆ ಅಥವಾ ಐಟಿ ಕಂಪನಿಗಳಲ್ಲದೆ, ಹೋಟೆಲ್ ಕೆಲಸಗಾರರು,…

Read More

ತಿಪಟೂರು: ತಾಲೂಕಿನಾದ್ಯಂತ ಗ್ರಾಮ ಪಂಚಾಯಿತಿಗಳ ಮೂಲಕ ವಿತರಿಸಲಾಗುವ ‘ಇ–ಸ್ವತ್ತು’ (ಆಸ್ತಿ ದಾಖಲೆ) ಮಂಜೂರು ಮಾಡುವಲ್ಲಿ ವಿಪರೀತ ವಿಳಂಬವಾಗುತ್ತಿದ್ದು, ಸಾರ್ವಜನಿಕರು ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಆಸ್ತಿ ನೋಂದಣಿ, ಬ್ಯಾಂಕ್ ಸಾಲ ಮತ್ತು ಮನೆ ನಿರ್ಮಾಣಕ್ಕೆ ಅತ್ಯಗತ್ಯವಾಗಿರುವ ಇ–ಸ್ವತ್ತು ಪಡೆಯಲು ಸಾರ್ವಜನಿಕರು ತಿಂಗಳುಗಟ್ಟಲೆ ಅಲೆಯುವಂತಾಗಿದೆ. ಸರ್ಕಾರದ ನಿಯಮದಂತೆ ‘ಸಕಾಲ’ ಸೇವೆಯಡಿ 30 ರಿಂದ 45 ದಿನಗಳೊಳಗೆ ಈ ದಾಖಲೆ ಸಿಗಬೇಕು. ಆದರೆ ಪ್ರಾಯೋಗಿಕವಾಗಿ ಇದು ಪಾಲನೆಯಾಗುತ್ತಿಲ್ಲ. ಅರ್ಜಿದಾರರು ಇ–ಸ್ವತ್ತು ತಂತ್ರಾಂಶ 2.0 ಮೂಲಕ ಆನ್‌ ಲೈನ್‌ ನಲ್ಲಿ ಅರ್ಜಿ ಸಲ್ಲಿಸಿದರೂ, ಲಾಗಿನ್ ಸಮಸ್ಯೆ ಮತ್ತು ಓಟಿಪಿ (OTP) ಬಾರದಿರುವುದು ದೊಡ್ಡ ಅಡ್ಡಿಯಾಗಿದೆ. ಈ ಬಗ್ಗೆ ಪಂಚಾಯಿತಿ ಅಧಿಕಾರಿಗಳನ್ನು ವಿಚಾರಿಸಿದರೆ, “ಸರ್ವರ್ ಸಮಸ್ಯೆ ಇದೆ, ಲಾಗಿನ್ ಆಗುತ್ತಿಲ್ಲ” ಎಂಬ ಹಾರಿಕೆ ಉತ್ತರ ಸಿಗುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ (EO) ಎಚ್.ಎಂ. ಸುದರ್ಶನ್ ಅವರು, “ಇ-ಸ್ವತ್ತು ತಂತ್ರಾಂಶದಲ್ಲಿ ಮಾಡಲಾದ ಬದಲಾವಣೆ ಹಾಗೂ…

Read More

ತುಮಕೂರು: ಜಿಲ್ಲೆಯಲ್ಲಿ ಕ್ಷಯರೋಗದ (Tuberculosis) ಹಾವಳಿ ಹೆಚ್ಚಾಗುತ್ತಿದ್ದು, ಸುಮಾರು 682 ಹಳ್ಳಿಗಳಲ್ಲಿ ವಾಸಿಸುವ 7.69 ಲಕ್ಷಕ್ಕೂ ಹೆಚ್ಚು ಜನರು ಈ ರೋಗದ ಅಪಾಯದ ಅಂಚಿನಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆಯ ವರದಿ ತಿಳಿಸಿದೆ. ಜಿಲ್ಲೆಯ 682 ಹಳ್ಳಿಗಳನ್ನು ಕ್ಷಯರೋಗದ ಹೆಚ್ಚಿನ ಅಪಾಯವಿರುವ ಪ್ರದೇಶಗಳೆಂದು ಗುರುತಿಸಲಾಗಿದೆ. ಇಲ್ಲಿ ಒಟ್ಟು 7,69,111 ಜನರು ವಾಸಿಸುತ್ತಿದ್ದಾರೆ. ಈ ಗ್ರಾಮಗಳಲ್ಲಿ ಪ್ರಸ್ತುತ 345 ಸಕ್ರಿಯ ಕ್ಷಯರೋಗ ಪ್ರಕರಣಗಳು ವರದಿಯಾಗಿವೆ. ತೀವ್ರ ಅಪೌಷ್ಟಿಕತೆ, ಮಧುಮೇಹ (Diabetes), ರಕ್ತದೊತ್ತಡ (BP) ಮತ್ತು ಬಡತನದ ಕಾರಣದಿಂದಾಗಿ ಈ ಭಾಗದ ಜನರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆಯಾಗುತ್ತಿದ್ದು, ಕ್ಷಯರೋಗ ಬೇಗ ಹರಡುತ್ತಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ‘ಕ್ಷಯ ಮುಕ್ತ ಭಾರತ’ ಅಭಿಯಾನದಡಿ 100 ದಿನಗಳ ವಿಶೇಷ ಪತ್ತೆ ಹಚ್ಚುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ 682 ಹಳ್ಳಿಗಳಲ್ಲಿ ‘ನಿ–ಕ್ಷಯ್’ ಶಿಬಿರಗಳನ್ನು ಆಯೋಜಿಸಿ ಪ್ರತಿಯೊಬ್ಬರಿಗೂ ಕಡ್ಡಾಯವಾಗಿ ತಪಾಸಣೆ ನಡೆಸಲಾಗುತ್ತಿದೆ. ರೋಗ ಲಕ್ಷಣಗಳು ಕಂಡುಬಂದವರಿಗೆ ತಕ್ಷಣ ಚಿಕಿತ್ಸೆ ನೀಡಲಾಗುತ್ತಿದ್ದು, ‘ನಿ–ಕ್ಷಯ್ ಮಿತ್ರ’ ಯೋಜನೆಯಡಿ ದಾನಿಗಳು…

Read More

ಕುಣಿಗಲ್: ತಾಲ್ಲೂಕಿನ ಹುಲಿಯೂರುದುರ್ಗ ಹೋಬಳಿಯ ಉಜ್ಜನಿ ಗ್ರಾಮದ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಎಲೆಕಡಕಲು ಗ್ರಾಮದ ಉದ್ಯಮಿ ವೈ.ಎಚ್.ಗೋಪಿ ಅವರು ₹1.50 ಕೋಟಿ ದೇಣಿಗೆ ನೀಡುವ ಮೂಲಕ ಮಾದರಿಯಾಗಿದ್ದಾರೆ. ತಮ್ಮ ತಂದೆ ವೈ.ಕೆ. ಹೊನ್ನಯ್ಯ ಮತ್ತು ತಾಯಿ ಜಯಮ್ಮ ಅವರ ಸ್ಮರಣಾರ್ಥವಾಗಿ ಹಾಗೂ ತಮ್ಮ ಮಗಳ ಹೆಸರಿನಲ್ಲಿ ಸ್ಥಾಪಿಸಲಾದ ‘ಯಶಿಕಾ ಫೌಂಡೇಶನ್’ ವತಿಯಿಂದ ಈ ಬೃಹತ್ ದೇಣಿಗೆಯನ್ನು ನೀಡಲಾಗುತ್ತಿದೆ. ಈ ಹಣದಲ್ಲಿ ಶಾಲೆಯ ಆವರಣದಲ್ಲಿ 10 ಸುಸಜ್ಜಿತ ಕೊಠಡಿಗಳು, ಅತ್ಯಾಧುನಿಕ ಶೌಚಾಲಯ ಹಾಗೂ ಅವಶ್ಯಕ ಪೀಠೋಪಕರಣಗಳನ್ನು ನಿರ್ಮಿಸಿಕೊಡಲಾಗುವುದು. ಬುಧವಾರ ನಡೆದ ಕಾರ್ಯಕ್ರಮದಲ್ಲಿ ಶಾಸಕ ಡಾ. ರಂಗನಾಥ್ ಅವರು ಈ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿದರು. ಉಜ್ಜನಿ ಗ್ರಾಮದ ಪ್ರಾಥಮಿಕ ಶಾಲಾ ಕೊಠಡಿಗಳು ಸಂಪೂರ್ಣವಾಗಿ ಹದಗೆಟ್ಟಿದ್ದವು. ಇದನ್ನು ಗಮನಿಸಿದ ಬೆಂಗಳೂರು ನಿವಾಸಿ ಗೋಪಿ ಅವರು ಶಾಲೆಯ ಪುನರ್ನಿರ್ಮಾಣಕ್ಕೆ ಕೈಜೋಡಿಸಿದ್ದಾರೆ. ವೈ.ಎಚ್. ಗೋಪಿ ಅವರು ಈ ಹಿಂದೆ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ನೀರಿನ ಬಾಟಲಿ ವಿತರಣೆ ಮತ್ತು ಶಾಲೆಗೆ ಪ್ರೊಜೆಕ್ಟರ್ ನೀಡುವ ಮೂಲಕ ಶಿಕ್ಷಣ ಕ್ಷೇತ್ರಕ್ಕೆ…

Read More

ತುಮಕೂರು: ಇಂದಿನ ದಿನಗಳಲ್ಲಿ ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಫೋನ್ ಬಳಕೆಯ ವ್ಯಸನವನ್ನು ತಪ್ಪಿಸಲು ಬೇಸಿಗೆ ಶಿಬಿರಗಳು ಅತ್ಯಂತ ಉಪಯುಕ್ತವಾಗಿವೆ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶರಾದ ನೂರುನ್ನೀಸಾ ಅವರು ಅಭಿಪ್ರಾಯಪಟ್ಟರು. ನಗರದಲ್ಲಿ ಇತ್ತೀಚೆಗೆ ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ‘ಮಕ್ಕಳ ಬೇಸಿಗೆ ಶಿಬಿರ’ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಇಂದಿನ ಡಿಜಿಟಲ್ ಯುಗದಲ್ಲಿ ಮಕ್ಕಳು ಆಟಪಾಠಗಳಿಗಿಂತ ಮೊಬೈಲ್‌ ನಲ್ಲೇ ಹೆಚ್ಚು ಕಾಲ ಕಳೆಯುತ್ತಿದ್ದಾರೆ. ಇಂತಹ ಶಿಬಿರಗಳು ಮಕ್ಕಳನ್ನು ಮೊಬೈಲ್ ಗೀಳಿನಿಂದ ಹೊರತರಲು ಒಂದು ‘ಸುವರ್ಣಾವಕಾಶ’ ಎಂದು ನ್ಯಾಯಾಧೀಶರು ತಿಳಿಸಿದರು. ವಿಶೇಷವಾಗಿ ಸರ್ಕಾರಿ ನೌಕರಿಯಲ್ಲಿರುವ ಪೋಷಕರಿಗೆ ರಜೆಯ ಸಮಯದಲ್ಲಿ ಮಕ್ಕಳನ್ನು ಸಂಭಾಳಿಸುವುದು ಸವಾಲಿನ ಕೆಲಸವಾಗಿರುತ್ತದೆ. ಅಂತಹವರಿಗೆ ಇಂತಹ ಶಿಬಿರಗಳು ಆಸರೆಯಾಗಲಿವೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಎಸ್.ಸಿದ್ದರಾಮಣ್ಣ ಅವರು ಮಾತನಾಡಿ, “ಮಕ್ಕಳು ಬೇಸಿಗೆ ರಜೆಯಲ್ಲಿ ಊರುಗಳಿಗೆ ಹೋಗಿ…

Read More

ತುಮಕೂರು: ಬೇಸಿಗೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಜಿಲ್ಲೆಯ 73 ಗ್ರಾಮ ಪಂಚಾಯಿತಿಗಳ 109 ಗ್ರಾಮಗಳಲ್ಲಿ ಸಮಸ್ಯೆ ಕಾಣಿಸಿಕೊಂಡಿದ್ದು, ನಾಗರಿಕರಿಗೆ ಕುಡಿಯುವ ನೀರಿನ ಅಭಾವ ಉಂಟಾಗದಂತೆ ಕ್ರಮವಹಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚಿಸಿದರು. ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿಡಿಯೋ ಸಂವಾದದ ಮೂಲಕ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಿ ಮಾತನಾಡಿ ಕೆಲವು ಗ್ರಾಮಗಳಿಗೆ ಖಾಸಗಿ ಟ್ಯಾಂಕರ್‍ಗಳು, ಬೋರ್‍ವೆಲ್‍ಗಳು ಹಾಗೂ ಪರ್ಯಾಯ ವ್ಯವಸ್ಥೆಗಳ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದೆ. ಜೂನ್ 2026ರವರೆಗೆ ಎದುರಾಗಬಹುದಾದ ಸಮಸ್ಯೆಯನ್ನು ಮನಗಂಡು, 141 ಗ್ರಾಮ ಪಂಚಾಯಿತಿಗಳ 194 ಗ್ರಾಮಗಳಿಗೆ 578.90 ಲಕ್ಷ ರೂ. ವೆಚ್ಚದಲ್ಲಿ ತುರ್ತು ಕಾರ್ಯಯೋಜನೆ ರೂಪಿಸಲಾಗಿದೆ. ನಗರ ಪ್ರದೇಶಗಳಲ್ಲಿ ಬುಗುಡನಹಳ್ಳಿ ಕೆರೆಯಲ್ಲಿ ಸಂಗ್ರಹಿತ ನೀರು ಒಂದು ತಿಂಗಳಿಗೆ ಸಾಕಾಗಲಿದ್ದು, ಹೆಚ್ಚುವರಿ ನೀರು ಹರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದರು. ಆಲಿಕಲ್ಲು ಮಳೆ: 840 ರೈತರ ಬೆಳೆ ಹಾನಿ ಮಳೆ ಹಾಗೂ ಆಲಿಕಲ್ಲು ಮಳೆಯಿಂದ ಶಿರಾ, ತಿಪಟೂರು ಮತ್ತು ಚಿಕ್ಕನಾಯಕನಹಳ್ಳಿ ತಾಲೂಕುಗಳಲ್ಲಿ ಕೆಲವು…

Read More

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್‌ಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 17 ಜನರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅಪರಾಧಿಗಳೆಂದು ತೀರ್ಪು ನೀಡಿದೆ. ಈ ಮಹತ್ವದ ಪ್ರಕರಣದ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಲಯವು ಇಂದು (ಶುಕ್ರವಾರ) ಪ್ರಕಟಿಸಲಿದೆ. ಗುರುವಾರ ನಡೆದ ವಿಚಾರಣೆಯ ಸಂದರ್ಭದಲ್ಲಿ ಶಿಕ್ಷೆಯ ಪ್ರಮಾಣಕ್ಕೆ ಸಂಬಂಧಿಸಿದಂತೆ ಸುದೀರ್ಘ ವಾದ-ಪ್ರತಿವಾದಗಳು ನಡೆದವು. ಸಿಬಿಐ ಪರವಾಗಿ ಸುಪ್ರೀಂ ಕೋರ್ಟ್‌ನ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ. ರಾಜು ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿ, “ಇದು ರಾಜಕೀಯ ದುರುದ್ದೇಶದಿಂದ ನಡೆದ ವ್ಯವಸ್ಥಿತ ಕೊಲೆ. ಸಾಕ್ಷ್ಯಗಳನ್ನು ನಾಶಪಡಿಸಲು ಪ್ರಭಾವ ಬಳಸಲಾಗಿದೆ. ಆದ್ದರಿಂದ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಬೇಕು” ಎಂದು ಮನವಿ ಮಾಡಿದರು. ನ್ಯಾಯಾಧೀಶರ ಎದುರು ಅಳಲು ತೋಡಿಕೊಂಡ ಶಾಸಕ ವಿನಯ್ ಕುಲಕರ್ಣಿ, “ನಾನು ಯಾರಿಗೂ ಅನ್ಯಾಯ ಮಾಡಿಲ್ಲ. ರಾಜಕೀಯ ದ್ವೇಷದಿಂದ ನನ್ನನ್ನು ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ನಾನು ಕೃಷಿಕನಾಗಿದ್ದು, ಸಾವಿರಾರು ಹಸುಗಳನ್ನು ಸಾಕುತ್ತಿದ್ದೇನೆ.…

Read More