Subscribe to Updates
Get the latest creative news from FooBar about art, design and business.
- ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್, ಪವಿತ್ರಾ ಗೌಡಗೆ ಬಿಗ್ ಶಾಕ್; ಪ್ರದೋಷ್ ಮಾಫಿ ಸಾಕ್ಷಿಯಾಗಲು ಕೋರ್ಟ್ ಅಸ್ತು!
- ನೂತನ ಸಚಿವರಿಗೆ ಶೀಘ್ರವೇ ಖಾತೆ ಹಂಚಿಕೆ: ನಮ್ಮಲ್ಲಿ ಯಾವುದೇ ಗೊಂದಲವಿಲ್ಲ : ಡಿಸಿಎಂ ಜಿ. ಪರಮೇಶ್ವರ್
- RSS–ಪಾಕ್ ಲಿಂಕ್ ಬಗ್ಗೆ ತನಿಖೆಯಾಗಲಿ: ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಆಕ್ರೋಶ
- ತುಳುನಾಡು ಕೋಳಿ ಸಾಕಾಣಿಕೆ ರೈತರ ಒಕ್ಕೂಟದ ಜಿಲ್ಲಾ ಸಮಾಲೋಚನಾ ಸಭೆ: ರೈತರ ಹಿತರಕ್ಷಣೆಗೆ ಮಹತ್ವದ ನಿರ್ಣಯ
- ಸರಗೂರು: ಮಕ್ಕಳ ಉತ್ತಮ ಆರೋಗ್ಯಕ್ಕೆ ಜಂತುಹುಳು ನಿವಾರಣಾ ಮಾತ್ರೆ ಸೇವನೆ ಅತ್ಯಗತ್ಯ: ಡಾ. ಚಂದ್ರಶೇಖರ
- ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
- ಐಷಾರಾಮಿ ರೆಸ್ಟೋರೆಂಟ್ ಮೇಲೆ ದಾಳಿ: ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
- ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
Author: admin
ತುಮಕೂರು: ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಬಿದ್ದಿದ್ದ ಚಿರತೆಯು ಕಾಡ್ಗಿಚ್ಚಿಗೆ ಬಲಿಯಾಗಿರೋ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕಿಬ್ಬನಹಳ್ಳಿ ಹೋಬಳಿ ಮದ್ಲೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಅರಣ್ಯ ಇಲಾಖೆಯ ಯಡವಟ್ಟಿನಿಂದ ಚಿರತೆ ಬಲಿಯಾಗಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ತಿಪಟೂರು ತಾಲ್ಲೋಕಿನ ಕಿಬ್ಬನಹಳ್ಳಿ ಹೋಬಳಿ ಮದ್ಲೇಹಳ್ಳಿ ಸುತ್ತಮುತ್ತ ಚಿರತೆ ಹಾವಳಿ ಹೆಚ್ಚಾದ ಹಿನ್ನೆಲೆ ಅರಣ್ಯ ಇಲಾಖೆ ಮದ್ಲೇಹಳ್ಳಿ ಗ್ರಾಮದ ಸರ್ವೇನಂಬರ್ 10ರಲ್ಲಿ ನಾರಾಯಣಪ್ಪ ಬಿನ್ ಶಂಕರಪ್ಪ ಎಂಬುವವರ ಜಮೀನಿನಲ್ಲಿ ಚಿರತೆ ಸೆರೆಗೆ ಬೋನ್ ಇರಿಸಿತ್ತು. ಅರಣ್ಯ ಇಲಾಖೆ ಇಟ್ಟಿದ ಬೋನಿಗೆ ಚಿರತೆ ಸೆರೆಯಾಗಿತ್ತು. ಆದರೆ ಈ ಪ್ರದೇಶದಲ್ಲಿ ಆಕಸ್ಮಿಕ ಅಗ್ನಿ ಅವಘಡ ಉಂಟಾಗಿ ಬೋನಿಗೆ ಬಿದ್ದಿದ್ದ ಚಿರತೆ ಹೊರಬರಲಾಗದೆ ಬೆಂಕಿ ಕೆನ್ನಾಲಿಗೆಗೆ ಉಸಿರುಗಟ್ಟಿ ಸಾವನ್ನಪ್ಪಿದೆ. ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳುಹಾಗೂ ಕಿಬ್ಬನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆ.ಬಿ.ಕ್ರಾಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿರತೆ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಅರಣ್ಯ ಇಲಾಖೆಯ ನಿರ್ಲಕ್ಷ ಕ್ರಮಕ್ಕೆ ಸಾರ್ವಜನಿಕರು…
ತುಮಕೂರು: ದೊಡ್ಡ ಹೊಸೂರಿನಗಾಂಧಿ ಸಹಜ ಬೇಸಾಯ ಆಶ್ರಮದ ಗಾಂಧಿ ರೈತ ವಿಜ್ಞಾನ ಕೇಂದ್ರ–ಜೈವಿಕ ಸಂಪನೂಲಕ ಕೇಂದ್ರವನ್ನು ಶನಿವಾರ ತಿಪಟೂರಿನ ಗುರುಕುಲ ಆಶ್ರಮದ ಮುಮ್ಮಡಿಕರಿಬಸವ ದೇಶೀ ಕೇಂದ್ರ ಸ್ವಾಮೀಜಿ ಉದ್ಘಾಟಿಸಿದರು. ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು, ವಿಷ ಮುಕ್ತವಾಗಿರುವ ಆಹಾರ ಮತ್ತು ಭೂಮಿಯನ್ನು ಸರಿಪಡಿಸಲು ರೈತರು ಸಾವಯವ ಕೃಷಿ ಮಾಡುವ ಅನಿವಾರ್ಯತೆ ಎದುರಾಗಿದ್ದು, ಸಾವಯವ ಕೃಷಿಗೆ ಹೆಚ್ಚಿನ ಆದ್ಯತೆ ದೊರಕಬೇಕು. ಸಹಜ ಬೇಸಾಯ, ಸಾವಯವ ಬೇಸಾಯ ಮಾಡುವ ಮೂಲಕ ಪ್ರಕೃತಿಯ ಧರ್ಮವನ್ನು ಉಳಿಸಬೇಕು. ಯಾವುದೇ ರಾಸಾಯನಿಕ ಗೊಬ್ಬರ, ಕೀಟನಾಶಕ ಬಳಸದೆ ಕೃಷಿ ಮಾಡುವುದರ ಜೊತೆಗೆ ಅವುಗಳನ್ನು ಸರಿಯಾದ ಬೆಲೆಗೆ ಮಾರುವುದನ್ನು ರೈತರು ಕಲಿಯಬೇಕು ಎಂದು ತಿಳಿಸಿದರು. ಕೃಷಿ ವಿಜ್ಞಾನಿ ಮಂಜುನಾಥ್ ಮಾತನಾಡಿ, ಸಾವಯವ ಕೃಷಿ ಬೆಂಬಲಕ್ಕೆ ಸರ್ಕಾರಗಳು ಜಾರಿಗೆ ತರುತ್ತಿರುವ ಯೋಜನೆಗಳು ಕೇವಲ ಜಾಹಿರಾತಿಗೆ ಸೀಮಿತವಾಗಿದ್ದು, ಅರ್ಹರೈತ ಫಲಾನುಭವಿಗಳಿಗೆ ಯೋಜನೆ ಲಾಭ ದೊರಕುತ್ತಿಲ್ಲ. ಸರ್ಕಾರ ಸಾವಯವ ಕೃಷಿಕರಿಗೆ ಸರಿಯಾದ ಬೆಂಬಲ ನೀಡಿದಾಗ ಸಾವಯವ ಕೃಷಿಕರ ಸಂಖ್ಯೆ ಹೆಚ್ಚಾಗುತ್ತದೆ ಎಂದು ತಿಳಿಸಿದರು. ಪರಿಸರವಾದಿ ಸಿ.ವೈ…
ತುಮಕೂರು: ತುಮಕೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಅಭಾವ ತಲೆದೋರದಂತೆ ಪಾಲಿಕೆ ವತಿಯಿಂದ ಅನೇಕ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಪಾಲಿಕೆ ಆಯುಕ್ತೆ ಅಶ್ವಿಜಾ ತಿಳಿಸಿದ್ದಾರೆ. ತುಮಕೂರು ನಗರಕ್ಕೆ ನೀರು ಸರಬರಾಜು ಮಾಡುವ ಬುಗುಡನಹಳ್ಳಿ ಕೆರೆಯ ಸಾಮರ್ಥ್ಯ 363 ಎಂ.ಸಿ.ಎಫ್.ಟಿ ಇದ್ದು, ಪ್ರಸ್ತುತ ನೀರಿನ ಪ್ರಮಾಣ 204 ಎಂ.ಸಿ.ಎಫ್.ಟಿ ಇರುತ್ತದೆ. ಲಭ್ಯವಿರುವ ನೀರನ್ನು ಜೂನ್ ಅಂತ್ಯದವರೆಗೆ ನಗರಕ್ಕೆ ನೀರು ಸರಬರಾಜು ಮಾಡಬಹುದಾಗಿರುತ್ತದೆ ಹಾಗೂ ಪಾಲಿಕೆಗೆ ಸಂಬಂಧಿಸಿದ ಕೊಳವೆಬಾವಿಗಳ ಮೂಲಕ ಸಾರ್ವಜನಿಕರಿಗೆ ನೀರು ಸರಬರಾಜು ಮಾಡಲು ಕ್ರಮವಹಿಸಲಾಗಿದೆ ಎಂದಿದ್ದಾರೆ. ಪ್ರಸ್ತುತ ಲಭ್ಯವಿರುವ ನೀರನ್ನು ಬೇಸಿಗೆ ಅಂತ್ಯದವರೆಗೆ ಸರಬರಾಜು ಮಾಡಲು ಅನುವಾಗುವಂತೆ ಪಂಪಿಂಗ್ ಸಮಯವನ್ನು ಮಾರ್ಪಾಡು ಮಾಡಲಾಗಿದೆ ಹಾಗೂ ಸಾರ್ವಜನಿಕರಿಗೆ ನೀರಿನ ಮಿತಬಳಕೆ ಮಾಡಲು ಕೋರಿದ್ದಾರೆ. ತುಮಕೂರು ನಗರಕ್ಕೆ ನೀರು ಸರಬರಾಜು ಮಾಡಲು ಸಂಬಂಧಿಸಿದಂತಹ ಎಲ್ಲಾ ಜಲಶುದ್ಧೀಕರಣ ಘಟಕಗಳು, ಜ್ಯಾಕ್ ವೆಲ್ ಗಳು ಹಾಗೂ ಪಂಪ್ ಹೌಸ್ಗಳ ಪರವೀಕ್ಷಣೆ ನಡೆಸಿದ್ದು, ಪಂಪ್–ಮೋಟಾರ್ ಗಳು ಸುಸ್ಥಿತಿಯಲ್ಲಿದ್ದು, ನೀರು ಸರಬರಾಜಿನಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮವಹಿಸಲಾಗಿದೆ ಎಂದಿದ್ದಾರೆ.…
ಪಾವಗಡ: ತಾಲೂಕು ನಾಗೇನಹಳ್ಳಿ ಗ್ರಾಮ ಕಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಮಂಗಳವಾರ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ತುಮಕೂರು ಕ್ಲಸ್ಟರ್ ನ CRP ನಾರಾಯಣ್ ನಾಯ್ಕ, ತಿರುಮಣಿ ಶಾಲೆ ಮುಖ್ಯ ಶಿಕ್ಷಕರು ಚಂದ್ರಶೇಖರ್, ರೆಡ್ಡಿವಾರಹಳ್ಳಿ ಶಾಲೆಯ ಮುಖ್ಯ ಶಿಕ್ಷಕರು ಸಂಧ್ಯಾ ನಾಗೇನಹಳ್ಳಿ ಶಾಲೆಯ ಶಿಕ್ಷಕರು ಪ್ರಭಾಕರ್, ಪಾರ್ವತಿ, ಸುಲ್ತಾನಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ನರಸಿಂಹ ಮೂರ್ತಿ, ಮುಖ್ಯ ಅತಿಥಿಗಳಾಗಿ ಜಾನಪದ ರತ್ನ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ಶಿಕ್ಷಕರಾದ ಶಿವಲಿಂಗಪ್ಪ ಜೆ. ನಾಗೇನಹಳ್ಳಿ, ತಾಂಡ ಶಾಲೆಯ ಶಿಕ್ಷಕರಾದ ವಿಜಯಭಾವಿ ಸೇರಿದಂತೆ ಹಲವರು ಹಾಜರಿದ್ದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಪಾವಗಡ: ಪಟ್ಟಣದ ಚಳ್ಳಕೆರೆ ಕ್ರಾಸ್ ಬಳಿ ಇರುವ ಶ್ರೀ ಶಾಲಾ ಇಂಟರ್ನ್ಯಾಷನಲ್ ಶಾಲೆಯ ವಿದ್ಯಾರ್ಥಿನಿ ಮೆಹತಾಬ್ ತಮ್ಮ ಅಪೂರ್ವ ಪ್ರತಿಭೆಯ ಮೂಲಕ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ನಲ್ಲಿ ತನ್ನ ಹೆಸರು ದಾಖಲಿಸಿದ್ದಾರೆ. ಕೇವಲ ಬಾಲ್ಯದಲ್ಲೇ ಅಪೂರ್ವ ಸಾಧನೆ ಮಾಡಿದ ಈ ಪುಟ್ಟ ಪ್ರತಿಭೆ ತನ್ನ “ಗಾಂಧಾರಿ ವಿದ್ಯೆ” ಯ ಮೂಲಕ ಗಮನ ಸೆಳೆದಿದ್ದಾರೆ. ಮೆಹತಾಬ್ ಪಾವಗಡದ ಬ್ರೈಟ್ ಫ್ಯೂಚರ್ ಸಂಸ್ಥೆಯಲ್ಲಿ ಗಾಂಧಾರಿ ವಿದ್ಯೆಯ ತರಬೇತಿ ಪಡೆದಿದ್ದು, ಕಣ್ಣಿಗೆ ಕಪ್ಪು ಬಟ್ಟೆ ಕಟ್ಟಿ, ತನ್ನ ಮುಂದೆ ಇರಿಸಿದ ಬಣ್ಣಗಳು, ಸಂಖ್ಯೆಗಳು ಮತ್ತು ನೋಟುಗಳನ್ನು ಸುಲಭವಾಗಿ ಗುರುತಿಸುವ ಅಪೂರ್ವ ಪ್ರತಿಭೆ ಪ್ರದರ್ಶಿಸಿದ್ದಾರೆ. ಈ ವಿಶಿಷ್ಟ ಸಾಮರ್ಥ್ಯವನ್ನು ಗುರುತಿಸಿದ ವರ್ಲ್ಡ್ ಬುಕ್ ಆಫ್ ರೆಕಾರ್ಡ್ ಸಂಸ್ಥೆ ಮೆಹತಾಬ್ ಅವರ ಸಾಧನೆಯನ್ನು ದಾಖಲು ಮಾಡಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಶ್ರೀ ಶಾಲಾ ಇಂಟರ್ನ್ಯಾಷನಲ್ ಶಾಲೆಯಲ್ಲಿ ಮೆಹತಾಬ್ ಮತ್ತು ಅವರ ಪೋಷಕರಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಮಂಜುಳಾ ನಾಗಭೂಷಣ್ ಮಾತನಾಡಿ, “ನಮ್ಮ ಶಾಲೆಯ…
ಬೀದರ್: ಹೊಕ್ರಣಾ ಗ್ರಾಮದ ಶಿವಾಜಿ ಚೌಕ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಸಾರಾಯಿ ಪ್ಯಾಕೇಟ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ದಾಳಿ ಮಾಡಿದ ಔರಾದ–ಬಿ ಪೊಲೀಸ್ ಠಾಣೆ ಪೊಲೀಸರು 1665 ರೂಪಾಯಿ ಬೆಲೆ ಬಾಳುವ ಸಾರಾಯಿ ಪ್ಯಾಕೆಟ್ ಜಪ್ತಿ ಮಾಡಿ ಆರೋಪಿಯ ವಿರುದ್ಧ ಕಾನೂನು ಕ್ರಮಕೈಗೊಂಡಿದ್ದಾರೆ. ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ್ ಗುಂಟಿ ಅವರ ನಿರ್ದೇಶನದಂತೆ ಔರಾದ–ಬಿ ಪೊಲೀಸ್ ಠಾಣೆಯ ಪಿ.ಎಸ್.ಐ ವಾಸೀಮ ಪಟೇಲ್ ಅವರ ನೇತೃತ್ವದಲ್ಲಿ ಪೊಲೀಸರು ವ್ಯಕ್ತಿಯ ಮೇಲೆ ದಾಳಿ ನಡೆಸಿ, ಸಾರಾಯಿ ಪ್ಯಾಕೇಟ್ ಜಪ್ತಿ ಮಾಡಿಕೊಂಡಿದ್ದಾರೆ. ಅಕ್ರಮ ಸರಾಯಿ ಮಾರಾಟದ ಮೇಲೆ ದಾಳಿಯಲ್ಲಿ ಶ್ರಮಿಸಿದ ಔರಾದ–ಬಿ ಪೊಲೀಸ್ ಠಾಣೆಯ ಪಿ.ಎಸ್.ಐ ಮತ್ತು ಹೊಕ್ರಣಾ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯ ಕಾರ್ಯಕ್ಕೆ ಪೊಲೀಸ್ ವರಿಷ್ಠಾಧಿಕಾರಿಗಳಾದ ಪ್ರದೀಪ್ ಗುಂಟಿ ಶ್ಲಾಘಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…
ಬೀದರ್: ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತಿಗೆ ಎರಡನೇ ಬಾರಿಗೆ ತಾಲೂಕು ಅಧ್ಯಕ್ಷರಾಗಿ ಸಾಹಿತಿ ಟಿ.ಎಮ್ ಮಚ್ಚೆ ಆಯ್ಕೆಯಾಗಿದ್ದಾರೆ. ಅವರಿಗೆ ಮಂಗಳವಾರ ಔರಾದ್ ತಾಲೂಕಿನ ಸಂತಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶಾಲು ಹೊದಿಸಿ ಸನ್ಮಾನಿಸಲಾಯಿತು. ಫಾರ್ಮಸಿಸ್ಟ್ ಅಧಿಕಾರಿಗಳಾದ ವೈಜಿನಾಥ ಚನ್ನಶೆಟ್ಟಿ, ಉಮಾಕಾಂತ್, ಪಾಂಡು, ಸೂರ್ಯಕಾಂತ್ ಸೋನಿ ಇತರರು ಇದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ವಿಧಾನಸಭೆ ಕಾರ್ಯಕಲಾಪಗಳ ನೇರಪ್ರಸಾರದಲ್ಲಿ ಪ್ರತಿಪಕ್ಷಗಳ ಶಾಸಕರು ಮಾತನಾಡುವ ವಿಚಾರ ಪ್ರಸ್ತಾಪವಾಗುತ್ತಿಲ್ಲ ಎಂದು ಬಿಜೆಪಿ ಶಾಸಕರು ಮಾಡಿದ್ದು, ಇದು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ವಾಗ್ವಾದಕ್ಕೆ ಕಾರಣವಾಯಿತು. ಈ ಹಿನ್ನೆಲೆಯಲ್ಲಿ ಸದನವನ್ನು 10 ನಿಮಿಷ ಮುಂದೂಡಿದ ಪ್ರಸಂಗ ವಿಧಾನಸಭೆಯಲ್ಲಿ ಜರುಗಿತು. ವಿರೋಧಪಕ್ಷದ ನಾಯಕ ಆರ್.ಅಶೋಕ್ರವರು ಕೆಪಿಎಸ್ಸಿ ನೇಮಕಾತಿ ವಿಚಾರ ಕುರಿತು ನಿಲುವಳಿ ಸೂಚನೆ ಪೂರ್ವಭಾವಿ ಪ್ರಸ್ತಾಪ ಮಾಡುತ್ತಿದ್ದ ಸಂದರ್ಭದಲ್ಲಿ ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾತನಾಡಲು ಎದ್ದುನಿಂತರು. ಆ ಸಂದರ್ಭದಲ್ಲಿ ವಿರೋಧಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ಮಾತನಾಡಿ, ಸದನದಲ್ಲಿನ ಕಾರ್ಯಕಲಾಪಗಳು ನೇರ ಪ್ರಸಾರವಾಗುತ್ತಿವೆ. ಆದರೆ ನಮ ನಾಯಕರು ಮಾತನಾಡುವ ವಿಚಾರ ಸದನದ ಸಭಾಂಗಣದಲ್ಲಿ ಅಳವಡಿಸಿರುವ ಟಿವಿಗಳಲ್ಲಿ ಬರುತ್ತಿಲ್ಲ. ನೀವು ಪ್ರಸಾರ ಮಾಡದಂತೆ ಸೂಚನೆ ಕೊಟ್ಟಿದ್ದೀರ. ಈ ವಿಚಾರವನ್ನು ನಾವು ಸದನದ ಕಾರ್ಯಕಲಾಪಗಳ ಸಲಹಾ ಸಮಿತಿ ಸಭೆಯಲ್ಲೂ ಪ್ರಸ್ತಾಪ ಮಾಡಿದ್ದೆವು ಎಂದು ಹೇಳಿದರು. ಅಲ್ಲದೆ ಈ ಹಿಂದೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸದನದ ಕಾರ್ಯಕಲಾಪಗಳ ನೇರ ಪ್ರಸಾರ ಮಾಡುತ್ತಿತ್ತು. ಈಗ ಅದನ್ನು…
ಬೆಂಗಳೂರು: ಕರಾವಳಿ ಪ್ರವಾಸೋದ್ಯಮ ಹೆಚ್ಚು ಜನಪ್ರಿಯವಾಗಿದೆ. ವಾರ್ಷಿಕ 8 ಕೋಟಿ ಪ್ರವಾಸಿಗರು ಕರಾವಳಿ ಜಿಲ್ಲೆಗಳಿಗೆ ಭೇಟಿ ನೀಡಿದ್ದಾರೆ ಎಂದು ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಗುರುರಾಜ ಶೆಟ್ಟಿ ಘಂಟಿಹೊಳೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದ ಕರಾವಳಿ ಭಾಗವೂ ಒಳಗೊಂಡಂತೆ ಒಟ್ಟಾರೆ ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಕರ್ನಾಟಕ ಪ್ರವಾಸೋದ್ಯಮ ನೀತಿ 2024–29 ನ್ನು ಜಾರಿಗೆ ತರಲಾಗಿದೆ ಎಂದರು. ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ತರುವ ಪ್ರಸ್ತಾವನೆ ಇಲ್ಲ. ಪ್ರವಾಸೋದ್ಯಮ ನೀತಿಯಲ್ಲೇ ಕರಾವಳಿ ಭಾಗದಲ್ಲಿನ ಎಲ್ಲಾ ವರ್ಗದ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಅವಕಾಶಗಳನ್ನು ಕಲ್ಪಿಸಲಾಗಿದೆ ಎಂದರು. ಕರಾವಳಿ ಹಾಗೂ ಕಡಲತೀರ ಪ್ರದೇಶಕ್ಕೆ ವಿಶೇಷ ಮಹತ್ವ ನೀಡಲಾಗಿದೆ , ಕರಾವಳಿ ಅಭಿವೃದ್ಧಿ ಮಂಡಳಿ ರಚನೆ ಮಾಡುತ್ತೇವೆ. ಭೂ ಬ್ಯಾಂಕ್ ಮಾಡುತ್ತೇವೆ. ಕಂಬಳಕ್ಕೆ ತಲಾ 5 ಲಕ್ಷ ರೂ. ಅನುದಾನ ನೀಡಲಾಗುತ್ತಿದೆ. 320 ಕಿ.ಮೀ. ಉದ್ದದ ಕರಾವಳಿಯಲ್ಲಿ ಪ್ರವಾಸೋದ್ಯಮ ಇಲಾಖೆ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ…
ಬೆಂಗಳೂರು: ಕನ್ನಡ ಚಲಚಿತ್ರರಂಗದ ವಿಚಾರ ಚರ್ಚೆಯಾಗಲಿ ಎಂಬ ಕಾರಣಕ್ಕಾಗಿಯೇ ತಾವು ನಟ್ಟು, ಬೋಲ್ಟು ವಿಷಯ ಪ್ರಸ್ತಾಪ ಮಾಡಿರುವುದಾಗಿ ಡಿ.ಕೆ.ಶಿವಕುಮಾರ್ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಲನಚಿತ್ರರಂಗದವರಿಗೆ ತಾವು ಎಚ್ಚರಿಕೆ ನೀಡಿದ್ದಕ್ಕೆ ಸಂಬಂಧಪಟ್ಟಂತೆ ಟೀಕೆಗಳಾಗುತ್ತಿವೆ. ಟೀಕೆಗಳು, ಚರ್ಚೆಗಳು ನಡೆಯಬೇಕು, ನನ್ನ ಹೇಳಿಕೆಗೆ ಟೀಕೆ ಪ್ರತಿಕ್ರಿಯೆಗಳು ಬರುತ್ತವೆ ಎಂಬುದು ನನಗೆ ಗೊತ್ತಿತ್ತು. ಅದಕ್ಕೆ ನನಗೆ ಯಾವ ಬೇಜಾರು ಇಲ್ಲ ಎಂದು ಹೇಳಿದ್ದಾರೆ. ನಾನು ಚಿತ್ರರಂಗದವರಿಗೆ ಎಷ್ಟು ಸಹಾಯ ಮಾಡಿದ್ದೇನೆ ಎಂಬುದು ಗೊತ್ತಿದೆ. ಸಹಾಯ ಪಡೆದುಕೊಂಡವರಿಗೂ ಅದರ ಅರಿವಿದೆ. ನೆಲ, ಜಲ, ಭಾಷೆಯ ವಿಷಯ ಬಂದಾಗ ಚಿತ್ರರಂಗ ದನಿಗೂಡಿಸಬೇಕು. ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ನಮಗಾಗಿ ಮಾಡಿಕೊಳ್ಳಲಿಲ್ಲ. ಚಿತ್ರರಂಗದ ಬೆಳವಣಿಗೆಗಾಗಿ ಮಾಡಲಾಯಿತು. ಅವರ ಕಾರ್ಯಕ್ರಮವನ್ನು ಅವರೇ ಪ್ರಚಾರ ಮಾಡಿಕೊಳ್ಳದೆ ದಿನ ಬೆಳಿಗ್ಗೆ, ಸಂಜೆ ನಾವು ಪ್ರಚಾರ ಮಾಡಬೇಕೇ? ಎಂದು ಪ್ರಶ್ನಿಸಿದರು. ಆಹ್ವಾನ ಪತ್ರಿಕೆ ತಲುಪಿಲ್ಲ ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚಿತ್ರರಂಗದ ಕಾರ್ಯಕ್ರಮ ಎಲ್ಲರೂ ಒಟ್ಟಾಗಿ ಮಾಡಬೇಕು. ಚರ್ಚೆಗಳಾಗಲಿ, ಯಾರದು ತಪ್ಪು, ಸರಿ ಎಂದು…