Author: admin

ನಮ್ಮತುಮಕೂರು ವಿಶೇಷ:  ದೊಡ್ಡ ದೊಡ್ಡ ಮಾಲ್ ಗಳಲ್ಲಿ ಆಫರ್ ಗಳನ್ನು ನೋಡಿದ್ದೇವೆ. ಬೈ ಒನ್ ಗೆಟ್ ಒನ್ ಫ್ರೀ ಆಫ್ ಕೇಳಿದ್ದೇವೆ. ಆದರೆ ತುಮಕೂರಿನಲ್ಲೊಬ್ಬ ಈರುಳ್ಳಿ ಮಂಡಿ ಮಾಲೀಕ, ತನ್ನ ಅಂಗಡಿಯಲ್ಲಿ ಈರುಳ್ಳಿ ಖರೀದಿ ಮಾಡಿದ್ರೆ ಪ್ರತಿದಿನ ಗ್ರಾಹಕರಿಗೆ ಬಹುಮಾನ ಕೊಡ್ತಾ ಇದ್ದಾರೆ. ಇನ್ನು ಒಂದು ಹೆಜ್ಜೆ ಮುಂದೆ ಹೋಗಿದ್ದು ಯುಗಾದಿ ಹಬ್ಬಕ್ಕೆ ಚಿನ್ನದುಂಗರದ ಉಡುಗೊರೆ ಕೊಡಲು ಮುಂದಾಗಿದ್ದಾನೆ. ಈರುಳ್ಳಿ ಕೊಳ್ಳಿ, ಬಹುಮಾನ ಗೆಲ್ಲಿ. ಹೀಗೊಂದು ಆಫರ್ ನ ಬೋರ್ಡ್ ತುಮಕೂರಿನ ಅಂತರಸನಹಳ್ಳಿಯ ಮಾರುಕಟ್ಟೆಯಲ್ಲಿ ಕಾಣಸಿಗುತ್ತಿದೆ. ಪಿ.ವಿ.ನೃಪತುಂಗ ಆ್ಯಂಡ್ ಸನ್ಸ್ ನ ಈರುಳ್ಳಿ ಮಂಡಿಯಿಂದ ವಿಶೇಷ ಆಫರ್ ಘೋಷಣೆ ಮಾಡಿದ್ದಾರೆ. 100 ರೂಪಾಯಿ ಮೇಲ್ಪಟ್ಟು ಈರುಳ್ಳಿ ಖರೀದಿ ಮಾಡಿದವರಿಗೆ ಈ ಆಫರ್ ಅನ್ವಯವಾಗುತ್ತದೆ. ಈರುಳ್ಳಿ ಖರೀದಿಸಿದ್ದ ಪ್ರತಿಯೊಬ್ಬರಿಗೂ ಕೂಪನ್ ಕೊಡಲಾಗುತ್ತದೆ. ಅದರಲ್ಲಿ ಗ್ರಾಹಕರ ಮಾಹಿತಿ ಬರೆದು ಲಕ್ಕಿ ಡ್ರಾ ಡಬ್ಬಿಯಲ್ಲಿ ಹಾಕಬೇಕು. ಪ್ರತಿ ದಿನ ರಾತ್ರಿ 7 ಗಂಟೆಗೆ ಗ್ರಾಹಕರ ಸಮ್ಮುಖದಲ್ಲೇ ಬಾಕ್ಸ್ ಓಪನ್ ಮಾಡಲಾಗುತ್ತದೆ. ಲಕ್ಕಿ ಡಿಪ್ ಮೂಲಕ ಕೂಪನ್…

Read More

ತುಮಕೂರು: ಪಾಲಿಕೆ ವ್ಯಾಪ್ತಿಯಲ್ಲಿ ಗುಂಡಿ ಬಿದ್ದು ಹಾಳಾಗಿರುವ ರಸ್ತೆಗಳಲ್ಲಿ ಗುಂಡಿಗಳನ್ನು ಮುಚ್ಚುವ ಕಾರ್ಯ ಭರದಿಂದ ಸಾಗಿದೆ ಎಂದು ಪಾಲಿಕೆ ಆಯುಕ್ತ ಬಿ.ವಿ. ಅಶ್ವಿಜ ತಿಳಿಸಿದ್ದಾರೆ. ಪಾಲಿಕೆ ವ್ಯಾಪ್ತಿಯ 1 ರಿಂದ 17ನೇ ವಾರ್ಡ್ ನವರೆಗೆ 27ಲಕ್ಷ ಹಾಗೂ 18 ರಿಂದ 35ನೇ ವಾರ್ಡ್ ವರೆಗೆ 24 ಲಕ್ಷ ರೂ.ಗಳ ವೆಚ್ಚದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವ ಕಾಮಗಾರಿಯನ್ನು ಕೈಗೊಳ್ಳಲಾಗಿದೆ. ಪ್ರಮುಖ ರಸ್ತೆಗಳಾದ ಬಿ.ಎಚ್.ರಸ್ತೆ, ಕುಣಿಗಲ್ ರಸ್ತೆ, ಗುಬ್ಬಿ ರಸ್ತೆ, ಮಂಡಿಪೇಟೆ ಮುಖ್ಯರಸ್ತೆ, ಜೆ.ಸಿ.ರಸ್ತೆ, ಅಶೋಕ ರಸ್ತೆ, ರಾಧಾಕೃಷ್ಣ ರಸ್ತೆ, ಉಪ್ಪಾರಹಳ್ಳಿ ಮುಖ್ಯರಸ್ತೆ, ಇನ್ನಿತರೆ ಮುಖ್ಯ ರಸ್ತೆಗಳು ಹಾಗೂ ಅಡ್ಡರಸ್ತೆಗಳಲ್ಲಿ ಗುಂಡಿ ಬಿದ್ದು ಹಾಳಾಗಿದ್ದು, ವಾಹನ ಸಂಚಾರ ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅಡಚಣೆ ಉಂಟಾಗಿರುವ ಬಗ್ಗೆ ಸಾರ್ವಜನಿಕರಿಂದ ದೂರು ದಾಖಲಾದ ಹಿನ್ನೆಲೆಯಲ್ಲಿ ಆಯುಕ್ತರು ಸ್ಥಳಪರಿಶೀಲನೆ ನಡೆಸಿ, ಅತಿ ತುರ್ತಾಗಿ ರಸ್ತೆ ಗುಂಡಿ ಮುಚ್ಚುವ ಕಾಮಗಾರಿಯನ್ನು ಕೈಗೊಳ್ಳಬೇಕೆಂದು ಪಾಲಿಕೆಯ ತಾಂತ್ರಿಕ ಶಾಖೆಗೆ ಸೂಚಿಸಿದ್ದಾರೆ. ರಸ್ತೆ ಗುಂಡಿ ಮುಚ್ಚುವ ಕಾಮಗಾರಿಗೆ ಸಂಬಂಧಿಸಿದಂತೆ ಟೆಂಡರ್ ಆಹ್ವಾನಿಸಿ ಅರ್ಹ ಗುತ್ತಿಗೆದಾರರಿಗೆ…

Read More

ಔರಾದ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ  ವೆಂಕಟೇಶ್ವರ ಆಟೋ ಮೊಬೈಲ್ಸ್ ಅಂಗಡಿಗೆ ಬೆಂಕಿ ತಗುಲಿ ಅಂಗಡಿಯಲ್ಲಿದ್ದ ವಸ್ತುಗಳು ಬೆಂಕಿಗೆ ಆಹುತಿಯಾದ ಘಟನೆ ಔರಾದ ತಾಲೂಕಿನ ವಡಗಾಂವ ಗ್ರಾಮದಲ್ಲಿ ನಡೆದಿದೆ. ಬಾಲಾಜಿ ಪಾಟೀಲ ಎನ್ನುವವರಿಗೆ ಸೇರಿದ  ಅಂಗಡಿ ಬೆಂಕಿಗೆ ಆಹುತಿಯಾಗಿದೆ.  ನಿನ್ನೆ ರಾತ್ರಿ ಸುಮಾರು ಎಂಟು ಗಂಟೆಗೆ ಆಟೋ ಮೊಬೈಲ್ಸ್ ಅಂಗಡಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದೆ ಎಂದು ಅಂಗಡಿಯ ಮಾಲಿಕರು ತಿಳಿಸಿದ್ದಾರೆ. ಮಾಹಿತಿ ಪಡೆದ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಹೆಚ್ಚಿನ ಅನಾಹುತ ಆಗುವುದನ್ನು ತಪ್ಪಿಸಿದ್ದಾರೆ. ಈ ಅವಘಡದಿಂದ ಸುಮಾರು ಎಂಟು ಲಕ್ಷಕ್ಕಿಂತ ಅಧಿಕ ನಷ್ಟ ಆಗಿದೆ ಎಂದು ಅಂದಾಜಿಸಲಾಗಿದೆ. ವಿಷಯ ತಿಳಿದು ಕಾಂಗ್ರೆಸ್ ಮುಖಂಡ ಸುಧಾಕರ ಕೊಳ್ಳುರ ಅವರು ಸ್ಥಳಕ್ಕೆ ಭೇಟಿ ನೀಡಿ, ಅಂಗಡಿಯ ಮಾಲಿಕರಿಗೆ ಧೈರ್ಯ ತುಂಬಿ ,ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ದೂರವಾಣಿ ಮುಖಾಂತರ ಮಾತನಾಡಿ, ಸೂಕ್ತ ಪರಿಹಾರ ಒದಗಿಸಿ ಕೊಡುವಂತೆ ಮನವಿ ಮಾಡಿದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ…

Read More

ಹೆಚ್.ಡಿ.ಕೋಟೆ: ಹೆಚ್.ಡಿ.ಕೋಟೆ ತಾಲೂಕಿನ ಹ್ಯಾಂಡ್ ಪೋಸ್ಟ್ ಯರಳ್ಳಿ ಜಮೀನಿಲ್ಲಿ  ಒಕ್ಕಣೆ ಮಾಡಲು ಹಾಕಿದ್ದ ರಾಗಿ,  ಬತ್ತದ, ಹಾಗೂ ಹುಲ್ಲಿನ ಮೆದೆಗೆ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯ ರಾಗಿ, ಬತ್ತ, ಹುಲ್ಲು ಸೇರಿದಂತೆ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ. ತಾಲೂಕಿನ ಹ್ಯಾಂಡ್ ಪೋಸ್ಟ್ ಯರಳ್ಳಿ ಗ್ರಾಮದ ನಿವಾಸಿಯಾದ  ರೈತ ಶಿವನಂಜು ಎಂಬುವರಿಗೆ ಸೇರಿದ, ಜಮೀನಿನಲ್ಲಿ ಹೊಕ್ಕಣೆ ಮಾಡಲು ಇರಿಸಿದ್ದ ರಾಗಿ, ಭತ್ತ, ಹುಲ್ಲುಗೆ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳ ತಂಡ  ಬೆಂಕಿಯನ್ನು ನಂದಿಸಲು ಸತತ ಪ್ರಯತ್ನ ಮಾಡಿದ್ದಾರೆ ಆದರೆ ಅಷ್ಟರಲ್ಲಿ ಸಂಪೂರ್ಣ ಒಕ್ಕಣೆ ಮಾಡಬೇಕಿದ್ದ ಲಕ್ಷಾಂತರ ರೂ ಮೌಲ್ಯದ ರಾಗಿ, ಭಕ್ತ, ಹುಲ್ಲು, ಸಂಪೂರ್ಣ ಭಸ್ಮವಾಗಿದೆ. ಬಳಿಕ ರೈತ ಶಿವನಂಜು  ಮಾತನಾಡಿ, ಹ್ಯಾಂಡ್ ಪೋಸ್ಟ್ ನಲ್ಲಿರುವ ಕೆಲವು ಮಧ್ಯದ ಅಂಗಡಿ ಹಾಗೂ ಬಾರ್ ನವರು, ಮಧ್ಯ ಸೇವನೆ ಮಾಡಿರುವ ತ್ಯಾಜ್ಯಗಳನ್ನ ನಮ್ಮ ಜಮೀನಿನ ಬಳಿ ತಂದು ಬೆಂಕಿ ಹಚ್ಚುತ್ತಾರೆ, ಆದ್ದರಿಂದ ಇಂಥ ಘಟನೆ ನಡೆದಿದೆ ನಾವು ಹಲವು…

Read More

ತುಮಕೂರು:  ತುಮಕೂರು ತಾಲ್ಲೂಕು ಕಸಬಾ ಹೋಬಳಿ ಸ್ವಾಂದೇನಹಳ್ಳಿ ಗ್ರಾಮದಲ್ಲಿ ಫೆಬ್ರವರಿ 13 ಮತ್ತು 14ರಂದು “ಶ್ರೀ ಆದಿಶಕ್ತಿ ಸ್ವಾಂದೇನಹಳ್ಳಿ ಗ್ರಾಮದೇವತೆ ಮಾರಮ್ಮನವರ ನೂತನ ಸ್ಥಿರ ವಿಗ್ರಹ ಪ್ರಾಣ ಪ್ರತಿಷ್ಠಾಪನೆ, ನೂತನ ದೇವಾಲಯ ಉದ್ಘಾಟನೆ ಹಾಗೂ ವಿಮಾನ ಗೋಪುರಕ್ಕೆ ಕಳಸ ಪ್ರತಿಷ್ಠಾಪನಾ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಫೆಬ್ರವರಿ 13ರಂದು ಸಂಜೆ 4 ಗಂಟೆಗೆ ಗೋಧೂಳಿ ಲಗ್ನದ ಸುಮುಹೂರ್ತದಲ್ಲಿ ಗಣಪತಿಪೂಜೆ, ಗಂಗಾಪೂಜೆ, ಕುಲದೇವತಾ ಪ್ರಾರ್ಥನೆ, ಯಾಗಶಾಲಾ ಪ್ರವೇಶ, ಸ್ವಸ್ತಿಪುಣ್ಯಾಃ, ರಕ್ಷಾಬಂಧನ, ಮಹಾಸಂಕಲ್ಪ, ದೇವಾನಾಂದಿ, ನವಗ್ರಹ ಪೂಜೆ, ಕಳಸಗಳ ಆರಾಧನೆ, ಅಮ್ಮನವರ ಪೀಠಸ್ಥಾಪನೆ, ಚಕ್ರಸ್ಥಾಪನೆ, ಜಲಾದಿವಾಸ, ಕ್ಷೀರಾದಿವಾಸ, ಧಾನ್ಯದಿವಾಸ, ಶಯ್ಯಾದಿವಾಸ, ಪುಷ್ಪದಿವಾಸ, ಗಣಪತಿ ಹೋಮ, ನವಗ್ರಹ ಹೋಮ, ರಾಕ್ಷೊಘ್ನ ಹೋಮ, ಅಘೋರ ಹೋಮ, ಬಲಿಹರಣ, ಮಹಾಮಂಗಳಾರತಿ ನಂತರ ತೀರ್ಥ ಪ್ರಸಾದ ವಿನಿಯೋಗ ಮಾಡಲಾಗುವುದು. ಫೆಬ್ರವರಿ 14ರಂದು ಬೆಳಿಗ್ಗೆ ಬ್ರಾಹ್ಮೀ ಮುಹೂರ್ತದಲ್ಲಿ ಶ್ರೀ ಆದಿಶಕ್ತಿ ಗ್ರಾಮದೇವತೆ ಮಾರಮ್ಮನವರ ಪ್ರಾಣಪ್ರತಿಷ್ಠೆ, ನೇತ್ರೋನ್ಮಿಲನ, ದೃಷ್ಠಿ, ಗರ್ಭಗುಡಿ ಗೋಪುರಕ್ಕೆ ಕಳಸಾರೋಹಣ, ಪ್ರಾಣ ಪ್ರತಿಷ್ಠಾಪನ ಹೋಮ, ತ್ರಿಶಕ್ತಿಯರ ಹೋಮ, ವಾಸ್ತು ಹೋಮ, ಕಲಾ ಹೋಮ,…

Read More

ತುಮಕೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಫೆಬ್ರವರಿ 11ರಂದು ಬೆಳಿಗ್ಗೆ 10:30 ಗಂಟೆಗೆ ತುಮಕೂರು ವಿಶ್ವವಿದ್ಯಾನಿಲಯದ ಸರ್.ಎಂ. ವಿಶ್ವೇಶ್ವರಯ್ಯ ಸಭಾಂಗಣದಲ್ಲಿ “ಭಾರತ ರತ್ನ ಡಾ.ಬಿ.ಆರ್. ಅಂಬೇಡ್ಕರ್ ಓದು ಕಾರ್ಯಕ್ರಮ”ವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದ ಅಂಗವಾಗಿ ರಸಪ್ರಶ್ನೆ, ಪ್ರಬಂಧ, ಕವನ ವಾಚನ, ಆಶುಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಣೆ ಮಾಡಲಾಗುವುದು. ಕಾರ್ಯಕ್ರಮವನ್ನು ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಎಂ. ವೆಂಕಟೇಶ್ವರಲು ಉದ್ಘಾಟಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಅಶೋಕ ಎನ್. ಛಲವಾದಿ ಅಧ್ಯಕ್ಷತೆ ವಹಿಸುವರು. ವಿಶ್ರಾಂತ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು, ಕಾನೂನು ಸಲಹೆಗಾರ ಡಾ.ಬಾಬಾ ಸಾಹೇಬ್ ಜಿನರಾಳ್ಕರ್ ಹಾಗೂ ಆನಂದ್ ಪಬ್ಲಿಕೇಶನ್‌ ನ ಲೇಖಕ ಮತ್ತು ಪ್ರಕಾಶಕ ಶಂಕರಾನಂದ್ ಎಂ.ವಿ. ಅವರು ಉಪನ್ಯಾಸ ನೀಡಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು: ಕೇಂದ್ರ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರರ ಮಹತ್ವಾಕಾಂಕ್ಷಿ ಯೋಜನೆ ‘ಮಿಶನ್ ಉತ್ಥಾನ್’ನ ನೋಡಲ್ ಕಚೇರಿಯಾಗಿ ತುಮಕೂರು ವಿಶ್ವವಿದ್ಯಾನಿಲಯವು ಆಯ್ಕೆಯಾಗಿದೆ. ಈ ಯೋಜನೆಗೆ ದೇಶದಲ್ಲಿ ಆಯ್ಕೆಯಾದ ಕೆಲವೇ ಸಂಸ್ಥೆಗಳಲ್ಲಿ ತುಮಕೂರು ವಿವಿ ಒಂದಾಗಿದೆ. ಎರಡು ಹಾಗೂ ಮೂರನೇ ಶ್ರೇಣಿಯ ನಗರಗಳಲ್ಲಿರುವ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ನಾವೀನ್ಯತೆ ಹಾಗೂ ಸಂಶೋಧನೆಯನ್ನು ಬೆಳೆಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಪ್ರಧಾನ ವೈಜ್ಞಾನಿಕ ಸಲಹೆಗಾರರ ಕಚೇರಿಯ ಆಶ್ರಯದಲ್ಲಿ ‘ಮಿಶನ್ ಉತ್ಥಾನ್’ ಅನ್ನು ಆರಂಭಿಸಿದೆ. ಈ ಯೋಜನೆಯಡಿಯಲ್ಲಿ ತುಮಕೂರು ವಿಶ್ವವಿದ್ಯಾನಿಲಯವು ತನ್ನ ‘ಇನ್ಕ್ಯೂಬೇಶನ್, ಇನ್ನೋವೇಶನ್ ಅಂಡ್ ಎಂಟರ್‌ ಪ್ರಿನ್ಯುರ್‌ ಶಿಪ್ ಸೆಂಟರ್’ ಮೂಲಕ ತುಮಕೂರು ಜಿಲ್ಲೆಯಲ್ಲಿ ಸುಸ್ಥಿರ ಅಭಿವೃದ್ಧಿಗೆ ಸಂಬಂಧಿಸಿದ ಅನೇಕ ಯೋಜನೆಗಳನ್ನು ಜಾರಿಗೆ ತರಲಿದೆ. ಮಂಗಳೂರಿನ ತಣ್ಣೀರುಬಾವಿ ಬೀಚ್‌ ನಲ್ಲಿ ಇತ್ತೀಚೆಗೆ ನಡೆದ ‘ಎಮರ್ಜ್– 2025’ ಸ್ಟಾರ್ಟಪ್ ಉತ್ಸವದಲ್ಲಿ ‘ಮಿಶನ್ ಉತ್ಥಾನ್’ ಯೋಜನೆಗೆ ಚಾಲನೆ ನೀಡಲಾಗಿದ್ದು, ತುಮಕೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿದರು. ಕೇಂದ್ರ ಸರ್ಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರರ ಕಚೇರಿಯ ಸ್ಟಾಟೆಜಿಕ್…

Read More

ತುಮಕೂರು: ಇಲ್ಲಿನ ವಿದ್ಯಾನಗರದಲ್ಲಿ ವಿದ್ಯಾನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ವಿಜ್ಞಾನಿ ಶ್ರೇಷ್ಠ ಡಾ.ಸಿ. ದುರ್ಗಾ ಪ್ರಸಾದ್ ರವರನ್ನು ಸನ್ಮಾನಿಸಲಾಯಿತು. ವಿದ್ಯಾನಗರದ ನಿವಾಸಿಯೂ ಆಗಿರುವ ವಿಜ್ಞಾನಿ ದುರ್ಗಾ ಪ್ರಸಾದ್ ರವರು ವಿಶ್ವದ ಪ್ರತಿ ಶತ ಎರಡು ರ‍್ಸೇಂಟ್‌‌ ಶ್ರೇಷ್ಠ ವಿಜ್ಞಾನಿಯೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರಿಂದ ಅವರನ್ನು ನಾಗದೇವತಾ ಪ್ರತಿಷ್ಠಾಪನಾ ರಜತ ಮಹೋತ್ಸವದ  ಸಮಾರಂಭದಲ್ಲಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಆಡಿಟರ್ ಟಿ.ಆರ್.ಅಂಜನಪ್ಪರವರು ವಹಿಸಿದ್ದರು. ಪಾಲಿಕೆಯ ಮಾಜಿ ಸದಸ್ಯರುಗಳಾದ ಲಲಿತಾ ರವೀಶ್, ಶ್ರೀನಿವಾಸಮೂರ್ತಿ ಸೇರಿದಂತೆ ಬಡಾವಣೆಯ ಪ್ರಮುಖರು, ಸಂಘದ ಉಪಾಧ್ಯಕ್ಷರಾದ ವಾಸುದೇವ ತವಳ, ಕಾರ್ಯದರ್ಶಿ  ನಿವೃತ್ತ ಪ್ರಾಚಾರ್ಯ ಕುಮಾರಸ್ವಾಮಿ, ಖಜಾಂಚಿ ಜಿ.ವಿ. ಲಕ್ಷ್ಮೀನರಸಿಂಹಯ್ಯ, ನಿರ್ದೇಶಕರಾದ ಗಂಗಾಧರಮೂರ್ತಿ, ವಿದ್ಯುತ್ ಗುತ್ತಿಗೆದಾರ ಯೋಗೀಶ್,  ಕಲಾವಿದರೂ ಹಾಗೂ ನಿವೃತ್ತ ಬ್ಯಾಂಕ್ ನೌಕರರಾದ ಚಿಕ್ಕಹನುಮಂತಯ್ಯ, ಹೆಚ್ಎಂಟಿ ನಂಜುಂಡಪ್ಪ, ರವೀಶ್ ಮತ್ತಿತರರು ಪಾಲ್ಗೊಂಡಿದ್ದರು.  ಕಾರ್ಯಕ್ರಮಕ್ಕೂ ಮುನ್ನ ಆಗಮಿಸಿದ್ದ ಸಿದ್ದಗಂಗಾ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ ಯವರನ್ನು ಪೂರ್ಣ ಕುಂಭದೊಂದಿಗೆ ಸ್ವಾಗತಿಸಲಾಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ತುಮಕೂರು: ಪ್ರಯೋಗದಾಟಗಳ ರಂಗ ಕೇಂದ್ರವೆಂದೇ ಪ್ರಸಿದ್ಧಿ ಇರುವ ನಾಟಕ ಮನೆ ತುಮಕೂರು ರಂಗ ತಂಡವು ನಿರಂತರವಾಗಿ ರಂಗಉತ್ಸವ, ನಾಟಕಗಳು, ವಿಚಾರ ಸಂಕಿರಣಗಳು, ರಂಗ ಕಾರ್ಯಾಗಾರಗಳು, ಸಾಧಕರಿಗೆ ಅಭಿನಂದನೆ ಹೀಗೆ ಹಲವಾರು ರೀತಿಯ ರಂಗ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ಇದೀಗ ತುಮಕೂರು ನಗರದ ಡಾ.ಗುಬ್ಬಿವೀರಣ್ಣಕಲಾಕ್ಷೇತ್ರದಲ್ಲಿ, ದಿನಾಂಕ 13—02–2025ರ ಗುರುವಾರ ಸಂಜೆ 6.00ಕ್ಕೆ ನಾಟಕೋತ್ಸವದ ಉದ್ಘಾಟನಾ ಸಮಾರಂಭವಿದ್ದು , ನಂತರ ಪ್ರಸ್ತುತ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಸೈಯದ್‌ ಅಹಮದ್‌ ಖಾನ್ (ಎಸ್.ಎ.ಖಾನ್)ರವರಿಗೆ ನಾಟಕ ಮನೆ ತುಮಕೂರು ವತಿಯಿಂದ ಅಭಿನಂದನೆಯನ್ನು ಸಲ್ಲಿಸಲಾಗುತ್ತದೆ. ತದನಂತರ ರಾತ್ರಿ 7.00ಕ್ಕೆ ಯುದ್ಧದಿಂದ, ಧಾರ್ಮಿಕ ಸಂಘರ್ಷಗಳಿಂದ ಕ್ಷೋಭೆಗೊಂಡು ನರಳುತ್ತಿರುವ ಜಗತ್ತಿಗೆ ಬುದ್ಧನ ಕರುಣಾ ಮೈತ್ರಿಯ ವಿಚಾರಗಳು ಮದ್ದಾಗ ಬಲ್ಲವು ಮತ್ತು ತನಗೂ ಒಂದು ದಿನ ಸಾವಿದೆ ಎಂದು ತಿಳಿದ ಮನುಷ್ಯ ಬೇರೆಯವರಿಗೆಕೇಡು ಬಯಸಲಾರ ಎಂಬ ವಿಷಯದ ಆಶಯದೊಂದಿಗೆ ಅಶೋಕ ಚಕ್ರವರ್ತಿಯ ಬಗ್ಗೆ ಕಟ್ಟಿರುವ ನಾಟಕ “ದಯಾನದಿ ದಂಡೆಯಮೇಲೆ” ಮೋದೂರುತೇಜರವರ ರಚನೆಯಲ್ಲಿ ಧೀಮಂತ್‌ ರಾಮ್‌ ರವರ ನಿರ್ದೇಶನದಲ್ಲಿ ಮೂಡಿಬರಲಿದೆ.…

Read More

ತುಮಕೂರು: ದಲಿತರು ತಮ್ಮ ಜಮೀನುಗಳಿಗೆ ಹಾದು ಹೋಗುತ್ತಿರುವ ರಸ್ತೆಗಳನ್ನ ಬಲಾಢ್ಯರು ಅಡ್ಡಿಪಡಿಸಿ ಒತ್ತುವರಿ ಮಾಡಿಕೊಳ್ಳುತ್ತಿದ್ದು, ಒತ್ತುವರಿ ತೆರವುಗೊಳಿಸುವಲ್ಲಿ ಕಂದಾಯ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ದಲಿತ ಸಂಘಟನೆಗಳ ಒಕ್ಕೂಟ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿತು. ಕುಣಿಗಲ್ ತಾಲೂಕಿನ ತರೆದಕುಪ್ಪೆ, ಬೆಣಚಕಲ್ಲು, ಆರ್. ಬ್ಯಾಡರಹಳ್ಳಿ, ಇಪ್ಪಾಡಿ, ಗುನ್ನಾಗೆರೆ, ಕೊಡವತ್ತಿ, ಬ್ಯಾಡರಹಳ್ಳಿ, ತೊರೆಹಳ್ಳಿ, ಶೆಟ್ಟಿಗೆಹಳ್ಳಿ, ಚನ್ನಾಪುರ, ಮಲ್ಲಾಪುರ ಮತ್ತಿತರೆ ಗ್ರಾಮಗಳಲ್ಲಿ ದಲಿತರು ತಮ್ಮ ಪೂರ್ವಜರ ಕಾಲದಿಂದಲೂ ತಮ್ಮ ಜಮೀನುಗಳಿಗೆ ಹಾದು ಹೋಗುತ್ತಿದ್ದ ರಸ್ತೆಗಳನ್ನು ಏಕಾಏಕಿ ಅತಿಕ್ರಮ ಪ್ರವೇಶ ಮಾಡಿ ಬಲಾಢ್ಯರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಬಲಾಢ್ಯರು — ರಸ್ತೆ ಒತ್ತುವರಿ ಮಾಡಿಕೊಂಡಿರುವುದರಿಂದ ದಲಿತರು ತಮ್ಮ ಜಮೀನಿನಲ್ಲಿ ಉಳುಮೆಗೆ, ಬಿತ್ತನೆಗೆ ಮತ್ತು ಕಟಾವು ಕೆಲಸಗಳನ್ನು ಮಾಡಕು ತೊಂದರೆ  ಅನುಭವಿಸುತ್ತಿದ್ದು,  ತರೇದಕುಪ್ಪೆ ಮತ್ತು ಬೆಣಚಕಲ್ಲು ಗ್ರಾಮದಲ್ಲಿ ಬೆಳೆದ ಬೆಳೆಗಳು ದನಕರುಗಳ ಪಾಲಾಗಿ ಉಳಿದ ಬೆಳೆ ನಾಶವಾಗಿ ಹೋಗುತ್ತಿದೆ. ಕೆಲವು ಗ್ರಾಮಗಳಲ್ಲಿ ರಸ್ತೆ ಇಲ್ಲದೆ ಮಕ್ಕಳು ಶಾಲೆಗೆ ಹೋಗಲು ದಲಿತರು ತಮ್ಮ ಮನೆಗಳಿಗೆ ತಿರುಗಾಡಲು ತೊಂದರೆ…

Read More