Subscribe to Updates
Get the latest creative news from FooBar about art, design and business.
- ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
- ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
- ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
- ಗ್ರಾಮೀಣ ಕುಡಿಯುವ ನೀರು ಪೂರೈಕೆ ವ್ಯತ್ಯಯವಾಗದಂತೆ ಕ್ರಮ: ಸಚಿವ ಈಶ್ವರ ಖಂಡ್ರೆ
- ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ
- ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ
- ಮಧುಗಿರಿ: ರಾಜಣ್ಣ, ಜಮೀರ್ ಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಪ್ರತಿಭಟನೆ
Author: admin
ಹೆಚ್.ಡಿ.ಕೋಟೆ: ತಾಲೂಕಿನ ಹೈರಿಗೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ನಡೆದ ಚುನಾವಣೆಯಲ್ಲಿ ಉಪಾಧ್ಯಕ್ಷ ಸ್ಥಾನಕ್ಕೆ ಅನಿಲ್ ಕುಮಾರ್ ಅವಿರೋಧವಾಗಿ ಆಯ್ಕೆಯಾದರು. ಅವರ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಿಸಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಮತ್ತು ಶ್ರೀ ವಾಲ್ಮೀಕಿ ಅವರ ಪುತ್ತಳಿಗೆ ಮಾಲಾರ್ಪಣೆ ಮಾಡಿದ್ದರು. ಚುನಾವಣೆ ಅಧಿಕಾರಿ ರಾಮಸ್ವಾಮಿ ಮಾತನಾಡಿ, ಚುನಾವಣಾ ಅಧಿಕಾರಿಯಾಗಿ ಹೈರಿಗೆ ಪಂಚಾಯಿತಿಗೆ ನನ್ನನ್ನು ನೇಮಿಸಿದ್ದರು. 12 ದಿನಗಳ ಕಾಲ ಸದಸ್ಯರಿಗೆ ನೋಟಿಸ್ ನೀಡಿ 17 ಸದಸ್ಯರಲ್ಲಿ 14 ಸದಸ್ಯರು ಹಾಜರಾಗಿದ್ದು, 3 ಜನ ಗೈರಾಗಿದ್ದು, ಉಪಾಧ್ಯಕ್ಷ ಸ್ಥಾನಕ್ಕೆ ಒಬ್ಬರೇ ನಾಮಪತ್ರ ಸಲ್ಲಿಸಿದ ಕಾರಣ ಅನಿಲ್ ಕುಮಾರ್ ಅವರನ್ನು ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಲಾಗಿದೆ ಎಂದು ತಿಳಿಸಿದರು. ನೂತನ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಅನಿಲ್ ಕುಮಾರ್ ಮಾತನಾಡಿ, ಈ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದು ಬಹಳ ಸಂತಸ ತಂದಿದೆ. ನನ್ನ ಎಲ್ಲಾ ಸದಸ್ಯರಿಗೂ ಕೃತಜ್ಞತೆ ಹೇಳುತ್ತೇನೆ. ನನ್ನ ಮೇಲೆ ನಂಬಿಕೆ ಇಟ್ಟು…
ಬೆಂಗಳೂರು: ಇಂಗ್ಲೆಂಡ್ ನ ಖ್ಯಾತ ಗಾಯಕ ಎಡ್ ಶೀರನ್ ಅನುಮತಿ ಇಲ್ಲದೆ ಬೆಂಗಳೂರಿನ ಚರ್ಚ್ ಸ್ಟ್ರೀಟ್ನಲ್ಲಿ ಸಂಗೀತ ಕಾರ್ಯಕ್ರಮ ನಡೆಸುತ್ತಿದ್ದ ಹಿನ್ನೆಲೆ ಬೆಂಗಳೂರು ಪೊಲೀಸರು ತಡೆದಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಎಡ್ ಶೀರನ್ ಗ್ಲೋಬಲ್ ಪಾಪ್ ಸ್ಟಾರ್ ಆಗಿದ್ದು, ಇವರ ಮ್ಯೂಜಿಕ್ ಕನ್ಸರ್ಟ್ ಎಂದರೆ ಜನರು ಎಗ್ಗಿಲ್ಲದೆ ಸೇರುತ್ತಾರೆ. ಬೆಂಗಳೂರಿನಲ್ಲಿ ಎಡ್ ಶೀರನ್ ಅವರ ತಂಡ ಅನೀರಿಕ್ಷಿತ ಪ್ರದರ್ಶನವನ್ನು ಹಮ್ಮಿಕೊಂಡು ಅಭಿಮಾನಿಗಳಿಗೆ ಸಪ್ರೈಸ್ ನೀಡಿದ್ದರು. ಆದರೆ ಬೆಂಗಳೂರು ಪೊಲೀಸರು ಎಡ್ ಶೀರನ್ ಕಾರ್ಯಕ್ರಮವನ್ನು ತಡೆದು ಎಡ್ ಶೀರನ್ ಗೆ ಸಪ್ರೈಸ್ ನೀಡಿದ್ದಾರೆ. ಸದ್ಯ ಈ ಘಟನೆ ಪರ ವಿರೋಧಕ್ಕೆ ಕಾರಣವಾಗಿದೆ. ಅನುಮತಿ ಇಲ್ಲದೆ ವಿದೇಶಿ ಪ್ರಜೆಗಳು ಹೇಗಬೇಕಾದರೂ ರಸ್ತೆ ಬದಿಯಲ್ಲಿ ವರ್ತಿಸಬಹುದೇ? ಅಂತ ಕೆಲವರು ಪ್ರಶ್ನಿಸಿದರೆ, ಇನ್ನು ಕೆಲವರು ಪೊಲೀಸರ ನಡೆಯ ವಿರುದ್ಧ ವಿರೋಧ ವ್ಯಕ್ತಪಡಿಸಿದ್ದು, ಪರ ವಿರೋಧ ಚರ್ಚೆಗಳು ನಡೆಯುತ್ತಿವೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ…
ಭೋಪಾಲ್: ಸಹೋದರಿಯ ವಿವಾಹ ಸಮಾರಂಭದಲ್ಲಿ ವೇದಿಕೆಯ ಮೇಲೆ ನೃತ್ಯ ಮಾಡುತ್ತಿದ್ದ ಯುವತಿ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶ ವಿದಿಶಾದಲ್ಲಿ ನಡೆದಿದೆ. ಪರಿಣಿತಾ ಜೈನ್(23) ಮೃತಪಟ್ಟ ಯುವತಿಯಾಗಿದ್ದಾಳೆ. ಎಂಬಿಎ ಪದವಿ ವ್ಯಾಸಂಗ ಮಾಡುತ್ತಿದ್ದ ಪರಿಣಿತಾ ಆಕೆಯ ಸಹೋದರಿಯ ಮದುವೆಗಾಗಿ ವಿದಿಶಾಗೆ ಆಗಮಿಸಿದ್ದರು. ಆಶಾ ಭೋಸ್ಲೆ ಹಾಗೂ ಸೋನು ನಿಗಮ್ ಅವರು ಹಾಡಿರುವ ಶರಾರಾ…ಶರಾರಾ ಎಂಬ ಹಿಂದಿ ಗೀತೆಗೆ ಡ್ಯಾನ್ಸ್ ಮಾಡುವಾಗ ಆಕೆಗೆ ಹೃದಯಾಘಾತವಾಗಿದ್ದು, ವೇದಿಕೆ ಮೇಲೆಯೇ ಕುಸಿದು ಸಾವನ್ನಪ್ಪಿದ್ದಾರೆ. ಈ ಕುರಿತ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಯುವತಿ ವೇದಿಕೆ ಮೇಲೆ ಕುಸಿಯುತ್ತಿದ್ದಂತೆಯೇ ಅಲ್ಲಿದ್ದ ಸಂಬಂಧಿಕರು ಆಕೆಗೆ ಸಿಪಿಆರ್ ನೀಡಿದ್ದು, ಆಗಲೂ ಆಕೆ ಎಚ್ಚರಗೊಳ್ಳದ ಕಾರಣ ಕೂಡಲೇ ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಯುವತಿಯ ಪ್ರಾಣ ವೇದಿಕೆಯಲ್ಲಿ ಹೃದಯಾಘಾತವಾಗಿ ಬಿದ್ದಾಗಲೇ ಸಾವಾಗಿದೆ ಎಂದು ವೈದ್ಯರು ಖಚಿತಪಡಿಸಿದ್ದಾರೆ. ಪರಿಣಿತಾ ಅವರ 12 ವರ್ಷ ಸಹೋದರ ಕೂಡ ಈ ಹಿಂದೆ ಇದೇ ರೀತಿ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ್ದ ಎಂದು ಕುಟುಂಬದ…
ಮೈಸೂರಿನ ಕರಾಮುವಿಯ ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ 2024–25ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿಯ ಯುಜಿಸಿ ಅನುಮೋದಿತ ಕೋರ್ಸ್ ಗಳ ಪ್ರವೇಶಾತಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಸ್ನಾತಕ/ ಸ್ನಾತಕೋತ್ತರ ಕೋರ್ಸ್ ಗಳಾದ ಬಿ.ಎ, ಬಿ.ಕಾಂ, ಬಿ.ಬಿ.ಎ, ಬಿ.ಸಿ.ಎ, ಬಿ.ಲಿಬ್.ಐ.ಎಸ್ಸಿ., ಬಿ.ಎಸ್ಸಿ., ಬಿ.ಎಸ್.ಡಬ್ಲ್ಯೂ., ಎಂ.ಎ., ಎಂ.ಸಿ.ಜೆ., ಎಂ.ಕಾಂ., ಎಂ.ಎಸ್ಸಿ., ಎಂ.ಲಿಬ್.ಐ.ಎಸ್ಸಿ., ಎಂ.ಬಿ.ಎ., ಎಂ.ಸಿ.ಎ., ಎಂ.ಎಸ್.ಡಬ್ಲ್ಯೂ ಮತ್ತು ಪಿ.ಜಿ.ಸರ್ಟಿಫಿಕೇಟ್., ಡಿಪ್ಲೊಮಾ., ಸರ್ಟಿಫಿಕೇಟ್ ಕೋರ್ಸ್ ಗಳಿಗೆ ಪ್ರವೇಶಾತಿ ಮಾಡಿಕೊಳ್ಳಲಾಗುತ್ತಿದೆ. “ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಮಾತ್ರ ರಾಜ್ಯದಲ್ಲಿ ದೂರ ಶಿಕ್ಷಣ ನೀಡುವ ಏಕ ಮಾತ್ರ ವಿಶ್ವವಿದ್ಯಾನಿಲಯವಾಗಿರುತ್ತದೆ”. ಯುಜಿಸಿ ನಿಯಮಾವಳಿ ಪ್ರಕಾರ ಮುಕ್ತ ವಿಶ್ವವಿದ್ಯಾನಿಲಯಗಳ ದೂರ ಶಿಕ್ಷಣದ ಪದವಿ ಮತ್ತು ಸಾಂಪ್ರದಾಯಿಕ ವಿವಿಗಳು ನೀಡುವ ಶಿಕ್ಷಣ ಕ್ರಮಗಳ ಪದವಿಗಳಿಗೆ ಸಮನಾಗಿರುತ್ತದೆ. ಪ್ರಥಮ ವರ್ಷದ ಪ್ರವೇಶಾತಿ ಶುಲ್ಕದ ವಿವರ: ಬಿ.ಎ-ರೂ.8,400/-., ಬಿ.ಕಾಂ.-ರೂ.8,900/-.,ಬಿ.ಬಿ.ಎ/ಬಿ.ಎಲ್.ಐ.ಎಸ್ಸಿ-12,400/-., ಬಿ.ಸಿ.ಎ/ಬಿ.ಎಸ್ಸಿ-ರೂ.23,900/-., ಬಿ.ಎಸ್.ಡಬ್ಲ್ಯೂ-ರೂ.12,900/-., ಎಂ.ಎ-ರೂ.10,600/-., ಎಂ.ಸಿ.ಜೆ-ರೂ.16,200/-., ಎಂ.ಕಾಂ-ರೂ.12,400/-., ಎಂ.ಬಿ.ಎ–ರೂ.29,900/-., ಎಂ.ಎಸ್ಸಿ/ಎಂ.ಸಿ.ಎ-ರೂ.29,700/-., ಎಂ.ಎಸ್.ಡಬ್ಲ್ಯೂ-ರೂ.21,300/-., ಎಂ.ಎಲ್.ಐ.ಎಸ್ಸಿ-ರೂ.18,150/-ಗಳಾಗಿರುತ್ತದೆ. ಬೋಧನಾ ಶುಲ್ಕ ರಿಯಾಯಿತಿ: ಬಿಪಿಎಲ್ ಕಾರ್ಡ್ ಹೊಂದಿರುವ ಮಹಿಳಾ ವಿದ್ಯಾರ್ಥಿಗಳಿಗೆ,…
ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಭೇಟಿ ನೀಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ನಂತರ ಅಕ್ಷಯವತ್ ಮತ್ತು ಬಡೇ ಹನುಮಾನ್ ದೇವಾಲಯದಲ್ಲಿ ರಾಷ್ಟ್ರಪತಿಗಳು ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಷ್ಟ್ರಪತಿಗಳ ಜೊತೆಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಹ ಇದ್ದರು. ಪ್ರಯಾಗರಾಜ್ ಗೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಜ್ಯಪಾಲೆ ಆನಂದಿಬೆನ್ ಪಟೇಲ್ ಮತ್ತು ಮುಖ್ಯಮಂತ್ರಿ ಆದಿತ್ಯನಾಥ್ ಅವರು ಸ್ವಾಗತಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಂಗಳೂರು: ಮಧ್ಯಮ ವರ್ಗದ ಜನರ ಜನಪ್ರಿಯ ಸಾರಿಗೆ ಎಂದೇ ಹೆಸರಾಗಿದ್ದ ನಮ್ಮ ಮೆಟ್ರೋ ಇದೀಗ ಬೆಲೆ ಏರಿಕೆಯ ಪರಿಣಾಮ ದುಬಾರಿಯಾಗಿದ್ದು, ಬಿಎಂಆರ್ ಸಿಎಲ್ ಮೆಟ್ರೋ ಪ್ರಯಾಣ ದರವನ್ನು ಶೇ.50ರಷ್ಟು ಏರಿಕೆ ಮಾಡಿ ಆದೇಶ ಹೊರಡಿಸಿದ ಬೆನ್ನಲ್ಲೇ ಸಾರ್ವಜನಿಕರು ತೀವ್ರ ಆಕ್ರೋಶ ಹೊರ ಹಾಕಿದ್ದಾರೆ. ದರ ಏರಿಕೆಯಿಂದ ವಿದ್ಯಾರ್ಥಿಗಳು ಪ್ರತಿ ತಿಂಗಳು 4 ಸಾವಿರ ರೂ. ಗೂ ಹೆಚ್ಚು ಪಾವತಿಸಿ ಪ್ರಯಾಣಿಸಬೇಕಿದೆ. ಇದು ತುಂಬಾ ಅನ್ಯಾಯ ಎಂದು ಪೋಷಕರು ಅಳಲು ತೋಡಿಕೊಂಡಿದ್ದಾರೆ. ಮೆಟ್ರೋ ರೈಲಿನಲ್ಲಿ ದುಬಾರಿ ಹಣ ನೀಡಿ ಪ್ರಯಾಣಿಸುವುದಕ್ಕಿಂತ ಕಡಿಮೆ ಬೆಲೆಯಲ್ಲಿ ಬೈಕ್ ನಲ್ಲೇ ಕಚೇರಿಗಳಿಗೆ ತೆರಳುವುದು ಉತ್ತಮ. ಇದರಿಂದ ಸಾಕಷ್ಟು ಹಣ ಉಳಿಕೆ ಮಾಡಬಹುದು ಎಂದು ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೆಟ್ರೋ ಪ್ರಯಾಣ ದರ ಮಾತ್ರವಲ್ಲ ಪಾರ್ಕಿಂಗ್ ಶುಲ್ಕ ಎಲ್ಲವೂ ಸೇರಿ 200 ರೂ. ಬೇಕಾಗುತ್ತದೆ. ಇದಕ್ಕಿಂತ ಎಲೆಕ್ಟ್ರಿಕ್ ಬೈಕ್ ನಲ್ಲಿ ಪ್ರಯಾಣಿಸಿದರೆ, 100 ರೂ. ಉಳಿಯ ಮಾಡಬಹುದು ಎಂದು ಕೆಲವು ಪ್ರಯಾಣಿಕರು ಅಭಿಪ್ರಾಯಪಟ್ಟಿದ್ದಾರೆ. ನಮ್ಮತುಮಕೂರಿನ ಕ್ಷಣ…
ಬೆಂಗಳೂರು: ಇಂದಿನಿಂದ ಫೆಬ್ರವರಿ 13ವರೆಗೆ ಜಕ್ಕೂರು ಬಳಿಯ ಯಲಹಂಕದ ವಾಯುನೆಲೆಯಲ್ಲಿ ಏರ್ ಶೋ ನಡೆಯುತ್ತಿದೆ. ಆರಂಭಿಕ ದಿನವಾದ ಇಂದು ಹೆಬ್ಬಾಳ, ಬಳ್ಳಾರಿ ರಸ್ತೆ, ಕೊಡಿಗೆಹಳ್ಳಿ, ಜಕ್ಕೂರು ಸೇರಿ ಹಲವೆಡೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದೆ. ಜಕ್ಕೂರು ಬಿಸಿಲಿಗೆ ಬಳಲಿ ಪ್ರಯಾಣಿಕರು ಹೈರಾಣಾಗಿದ್ದು, ವಾಹನಗಳು ನಿಂತಲ್ಲೇ ನಿಂತಿದ್ದು, ಆಮೆಗತಿಯಲ್ಲಿ ಸಂಚರಿಸುತ್ತಿವೆ. ವಿಮಾನ ನಿಲ್ದಾಣಕ್ಕೆ ತೆರಳುವವರು, ಶಾಲೆ, ಕಾಲೇಜು, ಕಚೇರಿ ಹಾಗೂ ಇನ್ನಿತರ ಕೆಲಸಗಳಿಗೆ ತೆರಳುವವರು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದರು. ಏರ್ ಶೋ ಹಿನ್ನೆಲೆ ಬೆಂಗಳೂರು ಟ್ರಾಫಿಕ್ ಪೊಲೀಸರು ಮಾರ್ಗ ಬದಲಾವಣೆ ಮಾಡಿದ್ದಾರೆ. ಏರ್ ಶೋ ಗೆ 4 ದಿನ ಹೋಗುವ ಪ್ಲ್ಯಾನ್ ಮಾಡಿಕೊಂಡಿರುವವರಿಗೆ ಈ ಮಾರ್ಗದಲ್ಲಿ ಸಂಚರಿಸುವಂತೆ ಟ್ರಾಫಿಕ್ ಪೊಲೀಸರು ಸೂಚಿಸಿದ್ದಾರೆ. ಬಾಣಸವಾಡಿ ಕಡೆಯಿಂದ ಬಂದು ನಾಗವಾರ ಜಂಕ್ಷನ್ ಬಳಿ ಬಲ ತಿರುವು ಪಡೆದು ಥಣೆಸಂದ್ರ ಮುಖ್ಯ ರಸ್ತೆ ಮೂಲಕ ಸಂಚರಿಸಬಹುದು ಎಂದು ಸೂಚನೆ ನೀಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ಬೆಂಗಳೂರು: ಬೆಂಗಳೂರು ಏರ್ ಶೋ 2025 ಭಾರತದ ಶಕ್ತಿ, ಪ್ರಗತಿ ಮತ್ತು ನಾಯಕತ್ವದ ಸಂಕೇತವಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಏರ್ ಶೋ 2025ರ ಉದ್ಘಾಟನಾ ಭಾಷಣ ಮಾಡಿದ ಅವರು, ಬೆಂಗಳೂರು, ಏರೋಸ್ಪೇಸ್ ಉದ್ಯಮದಲ್ಲಿ ಅತ್ಯುತ್ತಮ ಪ್ರತಿಭೆಗಳನ್ನು ಹೊಂದಿದೆ. ಇದು ವಿಮಾನ ಮತ್ತು ಹೆಲಿಕಾಪ್ಟರ್ ಉತ್ಪಾದನಾ ಸೌಲಭ್ಯಗಳನ್ನು ಸ್ಥಾಪಿಸಲು ಸೂಕ್ತ ಸ್ಥಳವಾಗಿದೆ. ತಯಾರಕರಿಗೆ ಪ್ರೋತ್ಸಾಹ ನೀಡುವ ಮೂಲಕ, ಪ್ರತಿಭಾ ಪಲಾಯನವನ್ನು ತಡೆದು ನಮ್ಮ ದೇಶದ ಪ್ರತಿಭೆಗಳನ್ನು ಭಾರತದೊಳಗೆ ಉಳಿಸಿಕೊಳ್ಳಬಹುದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ರಕ್ಷಣಾ ಸಚಿವರು ಕರ್ನಾಟಕದಲ್ಲಿ ಏರೋಸ್ಪೇಸ್ ಉದ್ಯಮವನ್ನು ಸ್ಥಾಪಿಸಲು ಹಾಗೂ ವಿಮಾನ ಮತ್ತು ಹೆಲಿಕಾಪ್ಟರ್ಗಳ ತಯಾರಕರನ್ನು ಹೆಚ್ಚು, ಹೆಚ್ಚು ಬೆಂಗಳೂರಿನ ಕಡೆಗೆ ಗಮನ ಹರಿಸುವಂತೆ ಪ್ರೋತ್ಸಾಹ ನೀಡಬೇಕಾಗಿ ಮನವಿ ಮಾಡುತ್ತೇನೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೆಂಗಳೂರು: ಏರ್ ಶೋ ಮೂಲಕ ಮತ್ತೊಂದು ಕುಂಭ ಶುರುವಾದಂತಿದೆ. ಪ್ರಯಾಗ್ ರಾಜ್ ನ ಮಹಾ ಕುಂಭ ಮೇಳ ಸಂಸ್ಕೃತಿ ಬಗ್ಗೆ ತೋರಿಸಿದ್ರೆ, ಏರ್ ಶೋ ಭಾರತದ ರಕ್ಷಣಾ ಬಲಿಷ್ಠತೆಯನ್ನ ಜಗತ್ತಿಗೆ ಸಾರುತ್ತಿದೆ. ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದರು. ಬೆಂಗಳೂರಿನಲ್ಲಿ ಏರ್ ಶೋಗೆ ಚಾಲನೆ ನೀಡಿ ಮಾತನಾಡಿದ ಅವರು, ಅಭಿವೃದ್ಧಿ, ಉತ್ಪಾದನೆಯ ಬಗ್ಗೆ ಭಾರತ ಕೇಂದ್ರೀಕೃತವಾಗಿದೆ. ಏರ್ ಶೋ ರಾಷ್ಟ್ರ–ರಾಷ್ಟ್ರಗಳ ಮಧ್ಯೆ ಸಂಬಂಧ –- ಬಾಂಧವ್ಯಗಳನ್ನ ಅಭಿವೃದ್ಧಿಗೊಳಿಸುತ್ತದೆ ಎಂದು ಅವರು ತಿಳಿಸಿದರು. ದೇಶ-ವಿದೇಶಗಳ ವಾಯುಪಡೆಯ ಅಧಿಕಾರಿಗಳು ಇಲ್ಲಿದ್ದಾರೆ. ಭಾರತದ ಜೊತೆ ಈ ಅಧಿಕಾರಿಗಳ ಸಹಭಾಗಿತ್ವ ಮುಖ್ಯವಾಗಿದೆ. ಈ ಸಂಬಂಧ ವೃದ್ಧಿಯಾದ್ರೆ ಜಗತ್ತಿನಲ್ಲಿ ಬಲಿಷ್ಠರಾಗುತ್ತೇವೆ. ಡಿಜಿಟಲ್, ಸ್ಟಾರ್ಟ್ ಆಪ್, ಕೈಗಾರಿಕೋದ್ಯಮ, ನವೋದ್ಯಮದಲ್ಲಿ ಭಾರತ ಪ್ರಗತಿ ಹೊಂದುತ್ತಿದೆ ಎಂದು ಅವರು ತಿಳಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಅಮರಾವತಿ: ತಿರುಪತಿ ತಿಮ್ಮಪ್ಪನ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆ ಮಾಡಿರುವ ವಿವಾದಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ನಾಲ್ವರು ಆರೋಪಿಗಳನ್ನು ಬಂಧಿಸಿದೆ. ಉತ್ತರಾಖಂಡ ರೂರ್ಕಿಯ ಭೋಲೆ ಬಾಬ ಡೈರಿಯ ಮಾಜಿ ನಿರ್ದೇಶಕ ಪಿವಿನ್ ಜೈನ್, ಪೊಮಿಲ್ ಜೈನ್, ಪೂನಂಬಾಕ್ಕಂನ ವೈಷ್ಣವಿ ಡೈರಿ ಸಿಇಒ ಅಪೂರ್ವ ವಿನಯ್ ಕಾಂತ್ ಚಾವ್ಡಾ, ದುಂಡಿಗಲ್ ಎ ಆರ್ ಡೈರಿ ಎಂಡಿ ರಾಜಶೇಖರನ್ ಬಂಧಿತ ಆರೋಪಿಗಳಾಗಿದ್ದಾರೆ. ಟೆಂಡರ್ ಪಡೆಯುವ ಹಂತದಿಂದ, ಪೂರೈಕೆ ತನಕ ಮಾಡಿರುವ ನಿಯಮ ಉಲ್ಲಂಘನೆ ಹಿನ್ನೆಲೆ ನಾಲ್ವರನ್ನು ಸಿಬಿಐ ಅಧಿಕಾರಿಗಳ ಬಂಧಿಸಿದ್ದು, ನಕಲಿ ದಾಖಲೆ, ನಕಲಿ ಸೀಲ್ ಗಳನ್ನು ಬಳಕೆ ಮಾಡಿದ ಆರೋಪ ಇವರ ಮೇಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4