Subscribe to Updates
Get the latest creative news from FooBar about art, design and business.
- ಸಿರಾನಗರಸಭೆ ವ್ಯಾಪ್ತಿಯಲ್ಲಿ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
- ಜು.18: ನ್ಯಾಯಾಲಯಗಳಲ್ಲಿ ವಿಶೇಷ ಲೋಕ ಅದಾಲತ್: ವಿವಿಧ ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸಹಕಾರಿ
- ಕೊರಟಗೆರೆ: ಆಟೋ ಡಿಕ್ಕಿಯಾಗಿ ಯುವಕ ಸಾವು
- ಸಮಾಜ ಕಲ್ಯಾಣ ಇಲಾಖೆ: ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಆರಂಭ
- ಗ್ರಾಮೀಣ ಕುಡಿಯುವ ನೀರು ಪೂರೈಕೆ ವ್ಯತ್ಯಯವಾಗದಂತೆ ಕ್ರಮ: ಸಚಿವ ಈಶ್ವರ ಖಂಡ್ರೆ
- ಶುಲ್ಕ ಮರುಪಾವತಿ ಯೋಜನೆಯಡಿ ಅರ್ಜಿ ಆಹ್ವಾನ
- ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ
- ಮಧುಗಿರಿ: ರಾಜಣ್ಣ, ಜಮೀರ್ ಗೆ ಸಚಿವ ಸ್ಥಾನ ನೀಡಲು ಒತ್ತಾಯಿಸಿ ಪ್ರತಿಭಟನೆ
Author: admin
ಪಾವಗಡ: ತಾಲ್ಲೂಕಿನ ನಾಗಲಮಾಡಿಕೆ ಹೋಬಳಿಯ ಸೇವಾಲಾಲ್ ಪುರ ಗ್ರಾಮದ ಪರಿಸರ ತಜ್ಞ, ಚಿಂತಕ ಡಾ.ಡಿ.ಪರಮೇಶ ನಾಯ್ಕ ಬರೆದಿರುವ ಪುಸ್ತಕ: ಸೊಸಿಯೋ ಎಕನಾಮಿಕ್ಸ್, ಕಲ್ಚರಲ್ & ಪೊಲಿಟಿಕಲ್ ಡೈಮೆಂಷನ್ ಆಫ್ ಬಂಜಾರ ಕಮ್ಯುನಿಟಿ ಇನ್ ಇಂಡಿಯಾ ಕೃತಿಗೆ ಕನ್ನಡ ಸಂಸ್ಕೃತಿ ಇಲಾಖೆಯ, ಕರ್ನಾಟಕ ಬಂಜಾರ ಸಂಸ್ಕೃತಿ ಮತ್ತು ಭಾಷೆ ಅಕಾಡೆಮಿಯಿಂದ ರಾಜ್ಯ ಮಟ್ಟದ ತಜ್ಞರ ಪರಿಶೀಲನಾ ಸಮಿತಿಯು 2024ನೇ ಸಾಲಿನ ಪುಸ್ತಕ ಬಹುಮಾನಕ್ಕೆ ಆಯ್ಕೆ ಮಾಡಿದೆ. ಪುಸ್ತಕ ಬಹುಮಾನ 25 ಸಾವಿರ ನಗದು ಮಾರ್ಚ್ ತಿಂಗಳಲ್ಲಿ ವಿತರಿಸುವುದಾಗಿ ಅಕಾಡೆಮಿ ಅಧ್ಯಕ್ಷರಾದ ಡಾ.ಎ.ಆರ್.ಗೋವಿಂದ ಸ್ವಾಮಿ ತಿಳಿಸಿದ್ದಾರೆ. ವರದಿ: ನಂದೀಶ್ ನಾಯ್ಕ ಪಿ., ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಂಗಳೂರು: ಕರ್ನಾಟಕದಲ್ಲಿ ಗ್ಯಾರಂಟಿಯಲ್ಲಿ ಮುಳುಗಿರುವುದು ಸಾಕು. ಗ್ಯಾರಂಟಿ ಒಂದು ಕಡೆ ಇರಲಿ, ಅದು ತಪ್ಪಲ್ಲ. ಆದರೆ, ಅದರಲ್ಲೇ ಮುಳುಗಿದರೆ ಆಗುವುದಿಲ್ಲ. ಚುನಾವಣೆ ವೇಳೆ ಪ್ರಕಟಿಸಿದ ಪ್ರಣಾಳಿಕೆಯ ಭರವಸೆಗಳನ್ನೂ ಜಾರಿಗೆ ತರಬೇಕು ಎಂದು ರಾಜ್ಯ ಸರ್ಕಾರಕ್ಕೆ ಮೇಲ್ಮನೆ ಸದಸ್ಯ, ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ಸಲಹೆ ನೀಡಿದ್ದಾರೆ. ಕೇಂದ್ರ ಸರ್ಕಾರ ಎಪಿಎಂಸಿ ಕಾಯ್ದೆ ಹಿಂಪಡೆದಿದೆ. ಆದರೆ, ನಾವಿನ್ನೂ ಹಿಂಪಡೆದಿಲ್ಲ. ಈ ಕುರಿತು ಕೂಡಲೇ ಆ ಕೆಲಸ ಮಾಡಬೇಕು. ಮತಾಂತರ ನಿಷೇಧ ಕಾಯ್ದೆಯನ್ನು ಬಿಜೆಪಿ ಕಾನೂನುಬಾಹಿರವಾಗಿ ಮಾಡಿತ್ತು. ಅದನ್ನು ನಾವು ಹಿಂಪಡೆಯಬೇಕು. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಸಂಘ–ಪರಿವಾರದವರೇ ಇದ್ದಾರೆ. ಅದನ್ನು ಬದಲಾಯಿಸಬೇಕು. ಜಾತಿ ಗಣತಿ ವರದಿ ಜಾರಿ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಇವುಗಳನ್ನು ಅನುಷ್ಠಾನಕ್ಕೆ ತರದೇ ಇದ್ದರೆ ಮುಂದೆ ನಮಗೆ ಕಷ್ಟ ಆಗಲಿದೆ. ನಮ್ಮ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಗಳು ಇವು. ಕೃಷಿ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿ ಬಗ್ಗೆ ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆಗಳನ್ನು ಆದಷ್ಟು ಬೇಗ ಈಡೇರಿಸಿದರೆ ಮಾತ್ರ ಪಕ್ಷಕ್ಕೆ ಒಳ್ಳೆಯದಾಗಲು ಸಾಧ್ಯ…
ತುಮಕೂರು: ಸಾಂಪ್ರದಾಯಿಕ ಕಲೆಗಳು ಸಮಕಾಲೀನ ವಿಚಾರಗಳಿಗೆ ಸ್ಪಂದಿಸಲಿ. ಅದು ಅವುಗಳ ಸಾಮಾಜಿಕ ಹೊಣೆಗಾರಿಕೆ. ಆಗ ಅವು ಮೌಲ್ಯಗಳ ಪ್ರಸಾರದೊಂದಿಗೆ ಸಾಮಾಜಿಕ ಅಭಿವೃದ್ಧಿಗೂ ಕೊಡುಗೆ ನೀಡಿದಂತಾಗುತ್ತದೆ ಎಂದು ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಹರಿಕಥಾ ವಿದ್ವಾಂಸ ಡಾ. ಲಕ್ಷ್ಮಣದಾಸ್ ಹೇಳಿದರು. ಯಕ್ಷದೀವಿಗೆ ಸಂಸ್ಥೆಯು ಶನಿವಾರ ನಗರದ ಕನ್ನಡ ಭವನದಲ್ಲಿ ಪ್ರಸ್ತುತಪಡಿಸಿದ ವಿನೂತನ ಯಕ್ಷಗಾನ ಪ್ರಸಂಗ ‘ಚಂದ್ರಮಂಡಲಚರಿತೆ’ಯ ಪ್ರಥಮ ಪ್ರಯೋಗವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭೂಮಿಯ ಸಂಪನ್ಮೂಲಗಳನ್ನು ನಾವು ಮಾತ್ರ ಬಳಸಿಕೊಂಡರೆ ಸಾಲದು. ಮುಂದಿನ ತಲೆಮಾರಿಗೆ ಸಂಪನ್ಮೂಲಗಳು ಉಳಿಯಬೇಕು. ಸುಸ್ಥಿರತೆಯನ್ನು ಸಾಧಿಸಬೇಕಾದರೆ ಪ್ರಗತಿಯ ಜೊತೆಜೊತೆಗೆ ಸಮಕಾಲೀನ ಚಿಂತನೆಗಳೂ ಮೇಳೈಸಬೇಕು ಎಂದರು. ಯಕ್ಷದೀವಿಗೆ ಸಂಸ್ಥೆಯು ಹೊಸದಾಗಿ ಸಂಯೋಜಿಸಿ ರಂಗಕ್ಕೆ ತಂದಿರುವ ‘ಚಂದ್ರಮಂಡಲಚರಿತೆ’ ಯಕ್ಷಗಾನವು ಸುಸ್ಥಿರ ಅಭಿವೃದ್ಧಿಯ ಅವಶ್ಯಕತೆಯನ್ನು ಜನಸಾಮಾನ್ಯರಿಗೆ ತಲುಪಿಸುವ ಉದ್ದೇಶವನ್ನು ಹೊಂದಿದೆ. ವಿಶಿಷ್ಟ, ವೈಚಾರಿಕ ಅಂಶಗಳು ಇದರ ಕಥಾಹಂದರದಲ್ಲಿವೆ. ‘ನಾಳೆಗೆ ಉಳಿಯಲಿ ನೆಲ, ಜಲ’ ಎಂಬ ಇದರ ಆಶಯವೇ ವಿನೂತನವಾಗಿದೆ ಎಂದರು. ಯಕ್ಷಗಾನ ಕರಾವಳಿ ಭಾಗಕ್ಕೆ ಮಾತ್ರ ಸೀಮಿತವಾಗಿತ್ತು. ಅದನ್ನು ಬಯಲುಸೀಮೆಯಲ್ಲಿ…
ತುಮಕೂರು: ನಾಡಿನ ಜನತೆಗೆ ಅತ್ಯಮೂಲ್ಯವಾದ ಪುಸ್ತಕಗಳ ವೀಕ್ಷಣೆ ಹಾಗೂ ಖರೀದಿಗಾಗಿ ಫೆಬ್ರವರಿ 27 ರಿಂದ ಮಾರ್ಚ್ 3ರವರೆಗೆ ಬೆಂಗಳೂರಿನ “ವಿಧಾನಸೌಧ ಆವರಣದಲ್ಲಿ ಪುಸ್ತಕ ಮೇಳವನ್ನು” ಏರ್ಪಡಿಸಲಾಗುವುದು. ಕರ್ನಾಟಕ ವಿಧಾನ ಸಭೆ ಸಚಿವಾಲಯದಿಂದ ಪ್ರಥಮ ಬಾರಿಗೆ ಈ ಮೇಳವನ್ನು ಆಯೋಜಿಸಲಾಗುತ್ತಿದ್ದು, ಪುಸ್ತಕ ಮೇಳದಲ್ಲಿ ನಾಡಿನ ಪ್ರಕಾಶಕರು/ಮಾರಾಟಗಾರರು ಭಾಗವಹಿಸಬಹುದಾಗಿದೆ. ಮೇಳದಲ್ಲಿ ಭಾಗವಹಿಸುವವರು ಕಾರ್ಯದರ್ಶಿಗಳು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು ಇವರ ಹೆಸರಿನಲ್ಲಿ ಮಳಿಗೆಯೊಂದಕ್ಕೆ 1,000 ರೂ.ಗಳ ಭದ್ರತಾ ಠೇವಣಿ ಡಿ.ಡಿ. ಸಲ್ಲಿಸಬೇಕು. ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಮುಖ್ಯ ಗ್ರಂಥಪಾಲಕರು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು ಅಥವಾ ವಿಧಾನ ಸಭೆ ಸಚಿವಾಲಯದ ವೆಬ್ಸೈಟ್ www.kla.kar.nic.in ನಿಂದ ಉಚಿತವಾಗಿ ಪಡೆದುಕೊಳ್ಳಬಹುದಾಗಿದೆ. ಭರ್ತಿ ಮಾಡಿದ ಅರ್ಜಿಯೊಂದಿಗೆ ಡಿ.ಡಿ. ಲಗತ್ತಿಸಿ ಫೆಬ್ರವರಿ 12ರ ಸಂಜೆ 5 ಗಂಟೆಯೊಳಗಾಗಿ ಕಾರ್ಯದರ್ಶಿಗಳು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ವಿಧಾನಸೌಧ, ಬೆಂಗಳೂರು ಇವರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮುಖ್ಯ ಗ್ರಂಥಪಾಲಕರು, ಕರ್ನಾಟಕ ವಿಧಾನ ಸಭೆ ಸಚಿವಾಲಯ, ವಿಧಾನಸೌಧ,…
ತುಮಕೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ.ಬಾಬು ಜಗಜೀವನರಾಂ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ ಅಂಗವಾಗಿ ಈ ಪ್ರಶಸ್ತಿ ನೀಡಲಾಗುವುದು. ಆಸಕ್ತರು ಭರ್ತಿ ಮಾಡಿದ ತಮ್ಮ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಫೆಬ್ರವರಿ 27ರೊಳಗಾಗಿ ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಸರ್ಕಾರಿ ಅಧಿಕಾರಿ/ನೌಕರರು ನಿಗದಿತ ಸಮಯಕ್ಕೆ ಸರಿಯಾಗಿ ಕಚೇರಿ ಕೆಲಸಕ್ಕೆ ಹಾಜರಾಗಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ತಮ್ಮ ಕಚೇರಿಯ ಅಧಿಕಾರಿ/ಸಿಬ್ಬಂದಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಅಧಿಕಾರಿ/ಸಿಬ್ಬಂದಿಗಳು ಸಕಾಲಕ್ಕೆ ಕಚೇರಿ ಕೆಲಸಕ್ಕೆ ಹಾಜರಾಗಿ ವಹಿಸಿದ ಕೆಲಸ–ಕಾರ್ಯಗಳನ್ನು ನಿಗದಿತ ಅವಧಿಯೊಳಗಾಗಿ ಪೂರ್ಣಗೊಳಿಸಬೇಕು ಎಂದು ನಿರ್ದೇಶನ ನೀಡಿದರು. ಅಧಿಕಾರಿ/ನೌಕರರು ಪ್ರತಿ ದಿನ ಕಡ್ಡಾಯವಾಗಿ ಬಯೋಮೆಟ್ರಿಕ್ ಹಾಜರಾತಿ ದಾಖಲಿಸಬೇಕು. ಕಚೇರಿ ವೇಳೆಯಲ್ಲಿ ಕರ್ತವ್ಯದ ಸ್ಥಳದಲ್ಲಿ ಹಾಜರಿರಬೇಕು. ಯಾವುದೇ ಕಡತಗಳನ್ನು ಬಾಕಿ ಉಳಿಸಿಕೊಳ್ಳಬಾರದು. ಸ್ವೀಕೃತ ಕಡತಗಳನ್ನು ಇ–ಆಫೀಸ್ ಮೂಲಕವೇ ಮುಂದಿನ ಹಂತಕ್ಕೆ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು. ಜಿಲ್ಲೆಯಲ್ಲಿರುವ ಇತರೆ ಇಲಾಖೆ ಕಚೇರಿಗಳಿಗೂ ಅನಿರೀಕ್ಷಿತ ಭೇಟಿ ನೀಡಿ ಸಿಬ್ಬಂದಿಗಳ ಸಮಯ ಪಾಲನೆ, ಕಾರ್ಯಕ್ಷಮತೆ ಬಗ್ಗೆ ಪರಿಶೀಲಿಸಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಜಿಲ್ಲಾಧಿಕಾರಿಗಳ ಕಚೇರಿಯ ವಿವಿಧ ಅಧಿಕಾರಿ/ಸಿಬ್ಬಂದಿಗಳು ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ಬೀದರ್: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರ ನಿರ್ದೇಶನದಂತೆ ಬೀದರ್ ನಗರ ಸಂಚಾರಿ ಪೊಲೀಸ್ ಠಾಣೆಯ ಪಿ.ಐ. ಬಾಪು ಗೌಡರವರು ತಮ್ಮ ಸಿಬ್ಬಂದಿಯೊಂದಿಗೆ ಸಾರ್ವಜನಿಕರಿಗೆ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸಿದರು. ಹೆಲ್ಮೆಟ್ ಧರಿಸದ ದ್ವಿಚಕ್ರ ವಾಹನ ಸವಾರರನ್ನು ತಡೆದು, ದಂಡ ಹಾಕುವ ಬದಲು ಅವರಿಗೆ ಜಾಗೃತಿ ಮೂಡಿಸಿ, ಅವರಿಗೆ ಹೆಲ್ಮೆಟ್ ವಿತರಿಸುವ ಮೂಲಕ ರಸ್ತೆ ಸುರಕ್ಷತಾ ಜಾಗೃತಿ ಮೂಡಿಸಲಾಯಿತು. ಇದೇ ವೇಳೆ ದ್ವಿಚಕ್ರ ವಾಹನದಲ್ಲಿ ಸಹಸವಾರನಾಗಿ ಪ್ರಯಾಣಿಸುತ್ತಿದ್ದ ಪುಟಾಣಿ ಮಗುವಿಗೂ ಹೆಲ್ಮೆಟ್ ನೀಡುವ ಮೂಲಕ ಪುಟ್ಟ ಮಕ್ಕಳಿಗೆ ಕೂಡ ಹೆಲ್ಮೆಟ್ ಹಾಕಿ ದ್ವಿಚಕ್ರದಲ್ಲಿ ಪ್ರಯಾಣಿಸುವಂತೆ ಜಾಗೃತಿ ಮೂಡಿಸಲಾಯಿತು. ಜಿಲ್ಲೆಯಲ್ಲಿ ಅಪಘಾತದ ಪ್ರಮಾಣ ಇಳಿಸುವ ನಿಟ್ಟಿನಲ್ಲಿ ಬೀದರ್ ನಗರ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿ, ಸಿಬ್ಬಂದಿ ಈ ವಿನೂತನ ಕಾರ್ಯಕ್ರಮವನ್ನು ನಡೆಸಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…
ಮೈಸೂರು: ಜಿಲ್ಲೆಯ ಕಾವೇರಿ, ಕಪಿಲ ಹಾಗೂ ಸ್ಫಟಿಕ ಸರೋವರಗಳು ಸೇರುವ ಟಿ.ನರಸೀಪುರದ ತ್ರಿವೇಣಿ ಸಂಗಮದಲ್ಲಿ ಫೆಬ್ರವರಿ 10ರಿಂದ 3 ದಿನಗಳ 13ನೇ ಕುಂಭಮೇಳ ನಡೆಯಲಿದೆ. ಆರು ವರ್ಷಗಳ ನಂತರ ನಡೆಯುತ್ತಿರುವ ಕುಂಭಮೇಳದಲ್ಲಿ ಅಪಾರ ಭಕ್ತರು ಸೇರುವ ನಿರೀಕ್ಷೆ ಇದೆ. ಸರ್ಕಾರ ಹಾಗೂ ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ. ನಡೆಯುತ್ತಿದ್ದರೆ, ಕರ್ನಾಟಕದ ಟಿ.ನರಸೀಪುರದ ತ್ರಿವೇ ಫೆ.12ರಂದು ಪವಿತ್ರ ಕುಂಭಸ್ನಾನ ನಡೆಯಲಿದೆ. ಅಂದು ಬೆಳಗ್ಗೆ 9ರಿಂದ 9.30ರೊಳಗೆ ಶುಭ ಮೀನ ಲಗ್ನ ಮತ್ತು ಮಧ್ಯಾಹ್ನ 12ರಿಂದ 1 ಗಂಟೆವರೆಗೆ ವೃಷಭ ಲಗ್ನದಲ್ಲಿ ಕುಂಭಮೇಳದ ಪುಣ್ಯಸ್ನಾನ ಮಾಡಲು ಮುಹೂರ್ತ ನಿಗದಿ ಮಾಡಲಾಗಿದೆ. ಭರದ ಸಿದ್ಧತೆ ಕುಂಭಮೇಳದ ಧಾರ್ಮಿಕ ಕಾರ್ಯಕ್ರಮಕ್ಕಾಗಿ ವೇದಿಕೆ ನಿರ್ಮಾಣ, ಸ್ವಚ್ಛತಾ, ಲೈಟಿಂಗ್ಸ್ ಅಳವಡಿಕೆ ಕಾರ್ಯ ಮಾಡಲಾಗಿದೆ. ಅಹಿತಕರ ಘಟನೆಗಳು ಜರುಗದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲಾಗಿದೆ. ನದಿ ಪಾತ್ರದ ಹಲವೆಡೆ ಮುಳುಗುತಜ್ಞರನ್ನು ನಿಯೋಜನೆ ಮಾಡಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ನೂರಾರು ಪೊಲೀಸರನ್ನು ನಿಯೋಜಿಸಲಾಗಿದೆ. ಸರ್ಕಾರ ಇದಕ್ಕಾಗಿ 6 ಕೋಟಿ ರೂ ಅನುದಾನ ಬಿಡುಗಡೆ…
ಪಾವಗಡ: ಪಾವಗಡ ತಾಲೂಕಿನ ಅರಸೀಕೆರೆ ಪೊಲೀಸ್ ಠಾಣೆಯ ಎಸ್ ಬಿ ಕಾನ್ ಸ್ಟೇಬಲ್ ಮಟ್ಕಾ ಮತ್ತು ಇಸ್ಪೀಟ್ ದಂಧೆಕೋರರ ಜೊತೆ ಶಾಮೀಲಾಗಿ ಬಡವರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಜಿಲ್ಲಾ ಅಟ್ರಾಸಿಟಿ ಸಮಿತಿಯ ಸದಸ್ಯ ಡಿಜೆಎಸ್ ನಾರಾಯಣಪ್ಪ ಆರೋಪಿಸಿದ್ದಾರೆ ಭಾನುವಾರದಂದು ಪಾವಗಡ ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಎಸ್ಸಿ ಎಸ್ಟಿ ಕುಂದುಕೊರತೆ ಸಭೆಯಲ್ಲಿ ಅವರು ಮಾತನಾಡಿ, ಅರಸೀಕೆರೆ ತಾಣ ವ್ಯಾಪ್ತಿಯಲ್ಲಿ ಸರಿಯಾಗಿ ಎಸ್ಸಿ ಎಸ್ಟಿ ಕುಂದುಕೊರತೆ ಸಭೆ ನಡೆಸುವುದಿಲ್ಲ, ಬರೀ ನಾಲ್ಕು ಜನ ದಂಧೆಕೋರರನ್ನ ಸೇರಿಸಿ ಸಭೆ ನಡೆಸುತ್ತಾರೆ. ಅಲ್ಲಿನ ಜನರಿಗೆ ಇದರ ಬಗ್ಗೆ ಜಾಗೃತಿ ಇಲ್ಲ ದಲಿತರು ಠಾಣೆಗೆ ಹೋಗಿ ದೂರು ನೀಡಲು ಹೋದರೆ ದೂರು ಸ್ವೀಕರಿಸದೆ ಅಲೆದಾಡಿಸುತ್ತಾರೆ ಮತ್ತು ಡೀಲ್ ಮಾಡಿಕೊಳ್ಳುತ್ತಾರೆ ಎಂದು ನೇರವಾಗಿ ಎಸ್ ಬಿ ಕಾನ್ ಸ್ಟೇಬಲ್ ಚೌಕ ತಾಲಿ ವಿರುದ್ಧ ಮಧುಗಿರಿ ಡಿವೈಎಸ್ಪಿ ಮಂಜುನಾಥ್ ಅವರಿಗೆ ದೂರು ಹೇಳಿದರು. ಅದೇ ರೀತಿ ವೈ.ಎನ್.ಹೊಸಕೋಟೆ ಪೊಲೀಸ್ ಠಾಣೆಯ ಪೇದೆ ಸದ್ದಂ ಅವರು ಕೂಡ ಮರಳು ದಂಧೆ…
ಹೆಚ್.ಡಿ.ಕೋಟೆ: ತಾಲೂಕು ಪಡುಕೋಣೆ ಗ್ರಾಮ ಪಂಚಾಯತಿಯ ಕೇಂದ್ರ ಸ್ಥಾನದಲ್ಲಿ ಇಂದು ಡ್ರೀಮ್ ಇಂಡಿಯಾ ಟ್ರಸ್ಟ್ ಅನ್ನು ಉದ್ಘಾಟಿಸಲಾಯಿತು. ಈ ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ರಾಜ್ಯಾಧ್ಯಕ್ಷ ಕೆ.ಎಸ್.ಶಿವರಾಮ್ ಮಾತಾನಾಡಿ, ಈ ಟ್ರಸ್ಟ್ ಹೆಸರಿನಲ್ಲಿಯೇ ಭವ್ಯಭಾರತದ ಕನಸಿದೆ, ಈ ಕನಸನ್ನು ನನಸು ಮಾಡಲಿಕ್ಕೆ ನಾವೆಲ್ಲ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು, ಎಂತಹ ಸಂದರ್ಭದಲ್ಲೂ ಎದೆಗುಂದಬಾರದು ಬಡವರನ್ನ ಮತ್ತು ಶೋಷಿತ ಸಮುದಾಯಗಳನ್ನ ಜಾಗೃತಿಗೊಳಿಸುವಂತ ಅವರನ್ನ ಅಭಿವೃದ್ಧಿ ಪಡಿಸುವಂತ ಕೆಲಸ ಮಾಡಿ ಎಂದು ಸಲಹೆ ನೀಡಿದರು ಮುಖ್ಯ ಅತಿಥಿಯಾಗಿ ಜೀವಿಕ ರಾಜ್ಯ ಸಂಘಟನಾ ಸಂಚಾಲಕ ಉಮೇಶ್ ಬಿ. ನೂರಲಕುಪ್ಪೆ ಮಾತಾನಾಡಿ, ಟ್ರಸ್ಟ್ ಗಳು ಹುಟ್ಟುತ್ತವೆ ಸಾಯುತ್ತವೆ ಆದರೆ ಜನಸಾಮಾನ್ಯರ ಪರವಾಗಿ ಸೇವೆ ಮಾಡಿದ ಸಂಘ ಸಂಸ್ಥೆಗಳು ಶಾಶ್ವತವಾಗಿ ಉಳಿಯುತ್ತವೆ, ನಮ್ಮಲ್ಲೆ ಕೆಲವು ವ್ಯಕ್ತಿಗಳು ಸೇರಿ ವ್ಯಾಟ್ಸ್ ಆಪ್ ಗ್ರೂಪ್ ಮಾಡಿಕೊಂಡು ಜನರಿಂದ ವಂತಿಕೆಯನ್ನ ಸಂಗ್ರಹಿಸಿ ಅದೇ ಹಣವನ್ನು ಜನರಿಗೆ ವಿನಿಯೋಗಿಸುವಂತಹ ಮಹತ್ತರವಾದ ಕೆಲಸ ಮಾಡುತ್ತಿವೆ ಇಂತಹ ಸಂಘ ಸಂಸ್ಥೆಗಳು ನಮಗೆ ಆದರ್ಶವಾಗಿವೆ,…