Author: admin

ನವದೆಹಲಿ: ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಹೀನಾಯ ಸೋಲು ಕಂಡ ಬೆನ್ನಲ್ಲೇ ದೆಹಲಿ ಸಿಎಂ ಅತಿಶಿ ಭಾನುವಾರ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಕಲ್ಕಾಜಿ ಸ್ಥಾನದಲ್ಲಿ ಗೆಲುವು ಸಾಧಿಸಿರುವ ಅತಿಶಿ ಅವರು, ರಾಜ್ ನಿವಾಸದಲ್ಲಿ ಸಕ್ಸೇನಾ ಅವರಿಗೆ ರಾಜೀನಾಮೆ ಪತ್ರವನ್ನು ನೀಡಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬರೋಬ್ಬರಿ 26 ವರ್ಷಗಳ ನಂತರ ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಮರಳಿದೆ. 70 ವಿಧಾನಸಭಾ ಕ್ಷೇತ್ರಗಳ ಪೈಕಿ 48 ಕ್ಷೇತ್ರಗಳಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿದೆ. ಫೆಬ್ರವರಿ 5 ರಂದು ನಡೆದ ಚುನಾವಣೆಯಲ್ಲಿ ಎಎಪಿ 22 ಸ್ಥಾನಗಳನ್ನು ಗೆದ್ದರೆ, ಕಾಂಗ್ರೆಸ್ ಶೂನ್ಯಕ್ಕೆ ತೃಪ್ತಿಪಟ್ಟುಕೊಂಡಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೀದರ್: ಬೀದರ್ ನ ಕೇತಕಿ ಶೈಕ್ಷಣಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಸಂಸ್ಥೆ ಮತ್ತು ಹಣ್ಮು ಪಾಜಿ ಗೆಳೆಯರ ಬಳಗದ ವತಿಯಿಂದ ಹೊರ ತರಲಾದ 2025–2026ನೇ ಸಾಲಿನ ಕ್ಯಾಲೆಂಡರ್ ಅನ್ನು ಇನ್ ಸೈಟ್ ಐಎಎಸ್ ತರಬೇತಿ ಕೇಂದ್ರದ ಸಂಸ್ಥಾಪಕ ಜಿ.ಬಿ. ವಿನಯಕುಮಾರ ಬೆಂಗಳೂರಿನಲ್ಲಿ ಶನಿವಾರ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಪ್ರಮುಖರಾದ ಅನಿಲ್ ಜ್ಯಾಂತಿ, ಕುಮಾರ್ ವಿಜಾಪುರ, ಅಭಿಷೇಕ ಪಾಟೀಲ, ಅಯ್ಯಣ್ಣ ಹುಲ್ಕಲ್  ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಮೈಸೂರು:  ದೆಹಲಿ ಫಲಿತಾಂಶ ಕುರಿತು ಪ್ರತಿಕ್ರಿಯೆ ನೀಡಿರುವ ಮೈಸೂರು–ಕೊಡಗು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಸುಮಾರು 27 ವರ್ಷಗಳ ಬಳಿಕ ದೆಹಲಿಯಲ್ಲಿ ನಮ್ಮ ಪಕ್ಷ ಚುನಾವಣೆಯಲ್ಲಿ ಗೆಲುವು ಸಾಧಿಸಿರುವುದು ಸಂತೋಷವಾಗಿದೆ. ದೆಹಲಿಯ ಜನತೆ ಪ್ರಧಾನಿ ಮೋದಿಯವರ ಅಭಿವೃದ್ಧಿ ಕಾರ್ಯಗಳನ್ನು ಪರಿಗಣಿಸಿ ನಮ್ಮ ಪಕ್ಷದ ನಾಯಕರಿಗೆ ಮತಗಳನ್ನು ನೀಡಿದ್ದಾರೆ ಎಂದಿದ್ದಾರೆ. ದೆಹಲಿಯಲ್ಲಿ ಇಂದು ಕಮಲ ಅರಳಿರುವುದಕ್ಕೆ ಕಾರಣವಾಗಿರುವ ಪ್ರಧಾನಿ ಮೋದಿ, ಪಕ್ಷದ ಸದಸ್ಯರು ಮತ್ತು ಕಾರ್ಯಕರ್ತರಿಗೆ ಧನ್ಯವಾದಗಳನ್ನು ತಿಳಿಸಲು ಇಚ್ಛಿಸುತ್ತೇನೆ ಎಂದರು. ಇನ್ನೂ ದೇಶದ ಮಹಾರಾಷ್ಟ್ರ, ಹರಿಯಾಣ ಮತ್ತು ಜಮ್ಮು ಕಾಶ್ಮೀರದ ಚುನಾವಣೆಗಳಲ್ಲಿಯೂ ಸಹ ಒಂದು ರೀತಿ ಸಕಾರಾತ್ಮಕವಾದ ಪ್ರತಿಕ್ರಿಯೆ ನೀಡಿದ್ದಾರೆ. ಹೀಗಾಗಿ ದೇಶದ ಜನತೆ ಪ್ರಧಾನಿ ಮೋದಿ ಅವರ ಜನಾಭಿವೃದ್ಧಿ ಕಾರ್ಯಗಳನ್ನು ಮೆಚ್ಚಿದ್ದಾರೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಪಾವಗಡ: ಎಸ್ ಎಸ್ ಎಲ್ ಸಿ ಪರೀಕ್ಷೆಗಳಲ್ಲಿ ಹೆಚ್ಚಿನ ಫಲಿತಾಂಶವನ್ನು ತರಲು ಆಂಗ್ಲ ಮಾಧ್ಯಮದ ಶಾಲೆಗಳ ಕೊಡುಗೆ ಅಪಾರವಾಗಿರುತ್ತದೆ ಎಂದು ಕೋಟಗುಡ್ಡ ಸಹನಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಕಾರ್ಯದರ್ಶಿ ಸಹನಾ ಶ್ರೀನಿವಾಸ್ ತಿಳಿಸಿದ್ದಾರೆ. ಅವರು ಪಾವಗಡ ತಾಲೂಕಿನ ಕೋಟಗುಡ್ಡ ಗ್ರಾಮದಲ್ಲಿರುವ ಸಹನಾ ಆಂಗ್ಲ ಮಾಧ್ಯಮ ಶಾಲೆಯ ಆವರಣದಲ್ಲಿ ಪಾವಗಡ ತಾಲೂಕು ಆಂಗ್ಲ ಮಾಧ್ಯಮ ಶಾಲೆಗಳ ಒಕ್ಕೂಟದಿಂದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗಾಗಿ ವಿಶೇಷ ರಸಪ್ರಶ್ನೆ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿ, ಪಾವಗಡ ತಾಲೂಕಿನ ಬಹುತೇಕ ಎಲ್ಲಾ ಆಂಗ್ಲ ಮಾಧ್ಯಮ ಶಾಲೆಗಳು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಉತ್ತಮ ಜೀವನ ರೂಪಿಸುವ ನಿಟ್ಟಿನಲ್ಲಿ ಅನೇಕ ಪ್ರಯತ್ನಗಳನ್ನು ಮಾಡಲಾಗುತ್ತಿದ್ದು, ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ತರಲು ಶ್ರಮಿಸಲಾಗುತ್ತಿದೆ ಎಂದರು ಇಸಿಓ ಶಿವಕುಮಾರ್ ಮಾತನಾಡಿ, ಪಾವಗಡ ತಾಲೂಕಿಗೆ ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಸ್ಥಾನವನ್ನು ತರುವಂತಹ ನಿಟ್ಟಿನಲ್ಲಿ ಅನೇಕ ಕಾರ್ಯಕ್ರಮಗಳನ್ನು ಕೈಗೊಂಡಿದ್ದು, ವಿದ್ಯಾರ್ಥಿಗಳು ಶಿಕ್ಷಕರು…

Read More

ನವದೆಹಲಿ: ದೆಹಲಿಯಲ್ಲಿ ಎಎಪಿ ಸರ್ಕಾರದ ವಿರುದ್ಧ ವಾತಾವರಣ ಸೃಷ್ಟಿಸುವಲ್ಲಿ ಪಕ್ಷ ಯಶಸ್ವಿಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. 70 ಸದಸ್ಯ ಬಲದ ದೆಹಲಿ ವಿಧಾನಸಭೆಯಲ್ಲಿ ಕಾಂಗ್ರೆಸ್ ಖಾತೆ ತೆರೆಯಲು ವಿಫಲವಾದ ಬೆನ್ನಲ್ಲೇ, ಜನಾದೇಶವನ್ನು ಒಪ್ಪಿಕೊಂಡ ಖರ್ಗೆ, ರಾಷ್ಟ್ರ ರಾಜಧಾನಿಯನ್ನು ಆಳುವ ಜನಾದೇಶ ನೀಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ಮಾಲಿನ್ಯ, ಯಮುನಾ ಸ್ವಚ್ಛತೆ, ವಿದ್ಯುತ್, ರಸ್ತೆಗಳು, ನೀರು ಮತ್ತು ಅಭಿವೃದ್ಧಿಯ ಸಮಸ್ಯೆಗಳ ವಿರುದ್ಧ ಕಾಂಗ್ರೆಸ್ ಹೋರಾಟ ಮುಂದುವರಿಸುತ್ತದೆ ಮತ್ತು ಸಾರ್ವಜನಿಕರೊಂದಿಗೆ ಸಂಪರ್ಕದಲ್ಲಿರುತ್ತದೆ ಎಂದು ಹೇಳಿದರು. ದೆಹಲಿ ವಿಧಾನಸಭಾ ಚುನಾವಣೆಯಲ್ಲಿ, ಸಾರ್ವಜನಿಕ ಹಿತಾಸಕ್ತಿಗಾಗಿ ಕಾಂಗ್ರೆಸ್, ಆಡಳಿತ ವಿರೋಧಿ ಅಲೆ ಸೃಷ್ಟಿಸಿತು. ಆದರೆ ನಾವು ನಿರೀಕ್ಷಿಸಿದಂತೆ ಸಾರ್ವಜನಿಕರು ನಮಗೆ ಜನಾದೇಶ ನೀಡಲಿಲ್ಲ. ನಾವು ಸಾರ್ವಜನಿಕ ಅಭಿಪ್ರಾಯವನ್ನು ಸ್ವೀಕರಿಸುತ್ತೇವೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ನವದೆಹಲಿ: ಭ್ರಷ್ಟಾಚಾರ ಮತ್ತು ಸುಳ್ಳುಗಳಿಂದ ಬೇಸತ್ತಿದ್ದರು, ಅವರು ಉತ್ತಮ ಆಡಳಿತ ಬಯಸಿದರು, ನಾಟಕಗಳನ್ನಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ದೆಹಲಿ ವಿಧಾನ ಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಬೆನ್ನಲ್ಲೇ ಆಮ್ ಆದ್ಮಿ ಪಾರ್ಟಿ ವಿರುದ್ಧ ವಾಗ್ದಾಳಿ ನಡೆಸಿದರು. ಪಕ್ಷದ ಪ್ರಧಾನ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು,  27 ವರ್ಷಗಳ ಬಳಿಕ ದೆಹಲಿಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ದೆಹಲಿಯಲ್ಲಿ ಡಬಲ್ ಇಂಜಿನ್ ಸರ್ಕಾರದಿಂದ “ಡಬಲ್ ಸ್ಪೀಡ್”ನಲ್ಲಿ ಅಭಿವೃದ್ಧಿಯನ್ನು ಜನರು ನಿರೀಕ್ಷಿಸಬಹುದು ಎಂದು ಭರವಸೆ ನೀಡಿದರು. ಕಾಂಗ್ರೆಸ್ ವಿರುದ್ಧವೂ ವಾಗ್ದಾಳಿ ನಡೆಸಿದ ಮೋದಿ, ಭಾರತದ ಅತ್ಯಂತ ಹಳೆಯ ಪಕ್ಷವು ದೆಹಲಿಯಲ್ಲಿ ಆರು ಚುನಾವಣೆಗಳಲ್ಲಿ  ತನ್ನ ಖಾತೆಯನ್ನು ತೆರೆಯಲು ಸಾಧ್ಯವಾಗಿಲ್ಲ. ಕಾಂಗ್ರೆಸ್ ಒಂದು ಪರಾವಲಂಬಿ ಪಕ್ಷ ಎಂದು ನಾನು ನಿಮಗೆ ಹೇಳಿದ್ದೆ. ಅವರು ಮುಳುಗಿದಾಗಲೆಲ್ಲಾ ಇತರ ಪಕ್ಷವನ್ನು ತಮ್ಮೊಂದಿಗೆ ತೆಗೆದುಕೊಂಡು ಮುಳುಗುತ್ತಾರೆ ಎಂದು ಟೀಕಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್…

Read More

ದೆಹಲಿ: ಆಮ್ ಆದ್ಮಿ ಪಕ್ಷದ ವರಿಷ್ಠ, ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಹೀನಾಯ ಸೋಲಾಗಿದ್ದು, ದೆಹಲಿ ವಿಧಾನ ಸಭಾ ಚುನಾವಣೆಯಲ್ಲಿ ಎಎಪಿಗೆ ಭಾರೀ ಮುಖಭಂಗವಾಗಿದೆ. ಸತತ ಎರಡು ಬಾರಿ ದೆಹಲಿಯಲ್ಲಿ ಗೆಲುವು ದಾಖಲಿಸಿದ್ದ ಆಮ್ ಆದ್ಮಿ ಪಾರ್ಟಿಗೆ ಈ ಚುನಾವಣೆಯಲ್ಲಿ ತೀವ್ರ ಹಿನ್ನಡೆಯಾಗಿದ್ದು, ಬಿಜೆಪಿ ಗೆಲುವಿನ ನಗೆಬೀರಿದೆ. ಸೋಲಿನ ಬೆನ್ನಲ್ಲೇ ಎಕ್ಸ್ ನಲ್ಲಿ ವಿಡಿಯೋ ಹಂಚಿಕೊಂಡಿರುವ ಅರವಿಂದ್ ಕೇಜ್ರಿವಾಲ್, ಈ ಗೆಲುವಿಗಾಗಿ ನಾನು ಬಿಜೆಪಿಯನ್ನು ಅಭಿನಂದಿಸುತ್ತೇನೆ. ಚುನಾವಣೆಯಲ್ಲಿ ಅವರು ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸುತ್ತಾರೆ ಎಂದು ನಾನು ಭಾವಿಸುತ್ತೇನೆ, ಜನರ ಸೇವೆಯಲ್ಲಿ ನಮ್ಮ ಪಕ್ಷ ಮುಂದುವರಿಯಲಿದೆ ಎಂದು ಹೇಳಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು:  ಬಡ ರೈತರಿಗೆ ಮಂಜೂರಾಗಬೇಕಾದ ಜಮೀನು ಬೆಂಗಳೂರಿನ ಮಂದಿಗೆ ಮಂಜೂರು ಮಾಡಿ ಅವ್ಯವಹಾರ ಮಾಡಲಾಗುತ್ತಿದೆ ಎಂದು ತುರುವೇಕೆರೆ ಜೆಡಿಎಸ್ ಶಾಸಕ ಎಂ.ಟಿ.ಕೃಷ್ಣಪ್ಪ, ಕಂದಾಯ ಇಲಾಖೆ ಅಧಿಕಾರಿಗಳ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ತುರುವೇಕೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ತುರುವೇಕೆರೆ ಕ್ಷೇತ್ರದ ವ್ಯಾಪ್ತಿಯಲ್ಲೇ ಸಾವಿರಾರು ಎಕರೆ ಜಮೀನು ಮಂಜೂರಾತಿಯಲ್ಲಿ ಅವ್ಯವಹಾರ ಆಗಿದೆ. ಒಂದು ಎಕರೆಗೆ 5 ಲಕ್ಷ ರೂ.ನಂತೆ ಲಂಚ ಪಡೆದು ಜಮೀನು ಮಂಜೂರು ಮಾಡಿದ್ದಾರೆ ಎಂದು ಆರೋಪಿಸಿದರು. ಸಾವಿರಾರು ಎಕರೆ ಮಂಜೂರಾತಿ ಜಮೀನು ಅವ್ಯವಹಾರ ನಡೆದಿದ್ದು, ಮೇಲ್ನೋಟಕ್ಕೆ 50 ಕೋಟಿ ಅಂತಾ ಗೊತ್ತಾಗಿದೆ. ಸುಮಾರು 350–400 ಎಕರೆ ಜಮೀನನ್ನ ಕಂದಾಯ ಇಲಾಖೆ ಅಧಿಕಾರಿಗಳು ಅಕ್ರಮವಾಗಿ ಮಂಜೂರು ಮಾಡಿದ್ದಾರೆ ಎಂದು ಶಾಸಕರು ಆರೋಪಿಸಿದರು. ತಹಶೀಲ್ದಾರ್‌ ರಿಂದ ಗ್ರಾಮ ಸಹಾಯಕರವರೆಗೂ ಈ ಅವ್ಯವಹಾರದಲ್ಲಿ ಭಾಗ ಆಗಿದ್ದಾರೆ. ಈಗಾಗಲೇ ಜಿಲ್ಲಾಧಿಕಾರಿ ಗಮನಕ್ಕೆ ತಂದಿದ್ದೇನೆ. ಇನ್ನೂ, ಕ್ರಮ ಆಗಿಲ್ಲ.  ಈ ಬಗ್ಗೆ ಲೋಕಾಯುಕ್ತಗೆ ದೂರು ನೀಡ್ತೇನೆ. ಸಮಗ್ರ ತನಿಖೆ ಆಗಬೇಕು ಅಂತಾ ಒತ್ತಾಯಿಸುತ್ತೇನೆ ಎಂದು ಎಂ.ಟಿ ಕೃಷ್ಣಪ್ಪ…

Read More

ತುಮಕೂರು:   ಹಾಲಿ ಶಾಸಕ ಸುರೇಶ್ ಗೌಡ ವಿರುದ್ಧ ಮಾಜಿ ಶಾಸಕ  ಗೌರಿಶಂಕರ್ ವಾಗ್ದಾಳಿ ನಡೆಸಿದ್ದು,  ಚುನಾವಣೆಗೂ ಮುನ್ನ ನೀಡಿದ ಒಂದು ಭರವಸೆ ಈಡೇರಿಸಿಲ್ಲ.  ಒಂದು ಭರವಸೆ ಈಡೇರಿಸಲಾಗದ ‘ನರಸತ್ತ ಶಾಸಕ’ ಸುರೇಶ್ ಗೌಡ ಎಂದು ಗೌರಿಶಂಕರ್ ವಾಗ್ದಾಳಿ ನಡೆಸಿದ್ದಾರೆ. ತುಮಕೂರು ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ವಾಗ್ದಾಳಿ ನಡೆಸಿದ ಗೌರಿಶಂಕರ್, ಟೀಕಿಸುವ ಭರದಲ್ಲಿ ಆಕ್ಷೇಪಾರ್ಹ ಪದ ಬಳಕೆ ಮಾಡಿದರು. ಮೊನ್ನೆ ಪ್ರಯಾಗ್ ರಾಜ್ ಗೆ ಹೋಗಿ ಸ್ನಾನ ಮಾಡಿಕೊಂಡು ಬಂದಿದ್ದಾರೆ.   ಪಾಪಗಳನ್ನೆಲ್ಲ, ಮಾಡಿರುವ ತಪ್ಪುಗಳನ್ನೆಲ್ಲ ತಿದ್ದಿಕೊಂಡು ಬರ್ತರೆ ಮನುಷ್ಯ ಅನ್ಕೊಂಡೆ.  ಇನ್ನು ಮುಂದೆ ಒಳ್ಳೆಯವನಾಗುತ್ತಾನೆ, ಒಳ್ಳೆ ಬುದ್ದಿ ಕಲಿತಾನೆ,  ಜನಗಳಿಗೆ ಗೌರವ ಕೊಡುತಾನೆ, ಒಳ್ಳೆ ಕೆಲಸ ಮಾಡ್ತಾನೆ ಅನ್ಕೊಂಡೆ.  ಎಲ್ಲ ಉಲ್ಟಾ ಆಗಿದೆ ಪ್ರಯಾಗ್ ರಾಜ್ ಹೋಗಿ ಗಂಗಾ ನದಿಯಲ್ಲಿ ಸ್ನಾನ ಮಾಡಿ, ಬಂದ ಮೇಲೆ ಪಾಪ ಜಾಸ್ತಿ ಮಾಡ್ತಿದಾನೆ,  ಎಲ್ಲೋ ಒಂದು ಕಡೆ ಆತನಿಗೆ ಶಾಪ ವಿಮೋಚನೆ ಆಗಿಲ್ಲ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದರು. ಮತ್ತೊಂದು ಕಡೆ ಆ ಕುಂಭಮೇಳ…

Read More

ತುಮಕೂರು: ಕೃಷಿ ಇಲಾಖೆಯ ಅನುಮತಿ ಪಡೆಯದೆ ಕಳಪೆ ದರ್ಜೆಯ ಹರಳು ರೂಪದ ಎನ್‌ಪಿಕೆ ಮಿಶ್ರಣ ರಸಗೊಬ್ಬರವನ್ನು ಮಾರಾಟ ಮಾಡುತ್ತಿದ್ದ ಅಂಗಡಿ ಮೇಲೆ ಕೃಷಿ ಜಾರಿ ದಳದ ಅಧಿಕಾರಿಗಳು ದಾಳಿ ನಡೆಸಿ 1.15 ಲಕ್ಷ ರೂ. ಬೆಲೆ. 11.25 ಟನ್ ರಸಗೊಬ್ಬರವನ್ನು ವಶಪಡಿಸಿಕೊಂಡಿದ್ದಾರೆ. ತುರುವೇಕೆರೆ ಪಟ್ಟಣದ ಬಿ.ಎಸ್. ರಸ್ತೆಯಲ್ಲಿರುವ ಶ್ರೀ ಸ್ವಾಮಿ ಅಯ್ಯಪ್ಪ ಫರ್ಟಿಲೈಸರ್ಸ್ ರಸಗೊಬ್ಬರ ಮಾರಾಟ ಮಳಿಗೆಯಲ್ಲಿ ಇಲಾಖೆ ಅನುಮತಿ ಪಡೆಯದೆ ಕಳಪೆ ದರ್ಜೆಯ ರಸಗೊಬ್ಬರ ಮಾರಾಟ ಮಾಡಲಾಗುತ್ತಿದೆ ಎಂಬ ಬಗ್ಗೆ ಬಂದ ದೂರಿನ ಮೇರೆಗೆ ಕೃಷಿ ಇಲಾಖೆ ಜಾರಿ ದಳದ ಸಹಾಯಕ ನಿರ್ದೇಶಕರಾದ ಪುಟ್ಟರಂಗಪ್ಪ, ಅಶ್ವತ್ಥ್‌ನಾರಾಯಣ ಹಾಗೂ ಸಿಬ್ಬಂದಿ ದಾಳಿ ನಡೆಸಿದಾಗ ವಿಜಾಪುರ ಜಿಲ್ಲೆಯ ಮೆ. ಶಾಂತಿ ಜೀವನ್ ಆಗ್ರೋ ಫುಡ್ಸ್ ‌ರವರಿಂದ ಅನಧಿಕೃತವಾಗಿ ಸರಬರಾಜು ಆದ 225 ಬ್ಯಾಗ್ ಕಳಪೆ ದರ್ಜೆಯ ಹರಳು ರೂಪದ ರಸಗೊಬ್ಬರ ಮಾರಾಟ ಮಾಡುತ್ತಿದ್ದದ್ದು ಪತ್ತೆಯಾಗಿದೆ. ತಕ್ಷಣ ಕಾರ್ಯಪ್ರವೃತ್ತರಾದ ಅಧಿಕಾರಿಗಳು 1,15,425 ರೂ. ಬೆಲೆಯ 11.25 ಟನ್ ರಸಗೊಬ್ಬರವನ್ನು ವಶಕ್ಕೆ ಪಡೆದು ಮುಂದಿನ ಕ್ರಮ…

Read More