Author: admin

ಹೆಚ್.ಡಿ.ಕೋಟೆ: ತಾಲೂಕಿನ ಹಂಪಾಪುರ ಗ್ರಾಮದಲ್ಲಿರುವ ಕ್ಲಾಸಿಕ್ ಲಿಟಲ್ ಬಡ್ಸ್ ಶಾಲೆಯಲ್ಲಿ ಶನಿವಾರ ನಡೆದ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಸುಮಾರು 500ಕ್ಕೂ ಹೆಚ್ಚು ಶಿಬಿರಾರ್ಥಿಗಳು ಪಾಲ್ಗೊಂಡು ಆರೋಗ್ಯ ತಪಾಸಣೆಗೆ ಒಳಗಾದರು. ಕ್ಲಾಸಿಕ್ ಲಿಟಲ್ ಬಡ್ಸ್ ಎಜುಕೇಷನ್ ಟ್ರಸ್ಟ್, ಮೈಸೂರಿನ ಬಸವ ಅಕ್ಯು ಅಕಾಡೆಮಿ, ರೋಟರಿ ಸಂಸ್ಥೆಯಿಂದ ನಡೆದ ಆರೋಗ್ಯ ತಪಾಸಣೆಯಲ್ಲಿ ಹೈ ಬಿಪಿ, ಅಜೀರ್ಣ, ನಿದ್ರಾಹೀನತೆ, ಅಲರ್ಜಿ, ಅಸ್ತಮಾ, ಕೂದಲು ಉದುರುವಿಕೆ, ಮೊಡವೆ ಸಮಸ್ಯೆ, ಮಂಡಿನೋವು, ಥೈರಾಯ್ಡ್, ಫೈಲ್ಸ್, ಬೆನ್ನುನೋವು ಸೇರಿದಂತೆ ಚರ್ಮದ ಕಾಯಿಗಳಿಗೆ ನುರಿತ ತಜ್ಞರು ಕಲರ್ ಥೆರಪಿ, ಅಕ್ಯುಫ್ರೆಸರ್, ಸೀಡ್ ಥೆರಪಿ ನಡೆಸಿ, ಔಷಧಿ ರಹಿತ ಚಿಕಿತ್ಸೆ ನೀಡಿದರು. ಆರೋಗ್ಯವೇ ಭಾಗ್ಯ: ಶಾಲಾ ಆವರಣದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಚಂದ್ರಕಲಾ ಮಾತನಾಡಿ, ಆಹಾರ ಕ್ರಮ ಬದಲಾವಣೆಯಿಂದ ಆನೇಕ ರೋಗಗಳು ಮನುಷ್ಯನ ದೇಹವನ್ನು ಸೇರಿಕೊಳ್ಳುತ್ತಿವೆ. ಒಮ್ಮೆ ಅನಾರೋಗ್ಯಕ್ಕೆ ತುತ್ತಾದರೆ ಚೇತರಿಸಿಕೊಳ್ಳುವುದು ತುಂಬಾ ಕಷ್ಟ. ಹೀಗಾಗಿ ಆರೋಗ್ಯವಂತರಾಗಿರಲು ಎಲ್ಲರೂ ಪಣ ತೊಡಬೇಕು. ಆರೋಗ್ಯವೇ ಭಾಗ್ಯ…

Read More

ಹೆಚ್.ಡಿ.ಕೋಟೆ: ‘ಪೋಷಕರು ತಮ್ಮ ಮಕ್ಕಳ ಭವಿಷ್ಯವನ್ನು ರೂಪಿಸುವುದು ಬಿಟ್ಟರೇ ಬೇರೆ ಯಾವ ಸಾಧನೆಯತ್ತಲೂ ಗಮನಹರಿಸುವುದಿಲ್ಲ, ಆದ್ದರಿಂದ ಪೋಷಕರ ಶ್ರಮಕ್ಕೆ ಕುಂದುಬಾರದಂತೆ ವಿದ್ಯಾರ್ಥಿಗಳು ಶ್ರಮ ವಹಿಸಬೇಕು ಎಂದು ಹುಣಸೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರಾಮೇಗೌಡ ತಿಳಿಸಿದರು. ತಾಲ್ಲೂಕಿನ ತುಂಬಸೋಗೆ ಗ್ರಾಮದಲ್ಲಿನ ಎಂ.ಎಂ.ಕೆ. ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಕಾರ್ಯಕ್ರಮ ಮತ್ತು ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನಂಜುಂಡಪ್ಪ ವರದಿ ಅನ್ವಯ ಎಚ್.ಡಿ.ಕೋಟೆ ತಾಲ್ಲೂಕು ಹಿಂದುಳಿದ ತಾಲ್ಲೂಕು ಎಂಬ ಹಣೆಪಟ್ಟಿ ಇತ್ತು, ಆದರೆ ಇತ್ತೀಚಿನ ದಿನಗಳಲ್ಲಿ ಶಾಲಾ ಕಾಲೇಜಿನ ಫಲಿತಾಂಶವನ್ನು ಗಮನಿಸಿದಾಗ ಆ ಹಣೆಪಟ್ಟಿ ದೂರವಾಗುತ್ತಾ ಸಾಗಿದೆ’ ಎಂದರು. ‘ಇತ್ತೀಚಿನ ದಿನಗಳಲ್ಲಿ ಖಾಸಗಿ ಶಾಲೆಗಳನ್ನು ಆರಂಭಿಸುವವರು ಕೇವಲ ವಿಜ್ಞಾನ ಮತ್ತು ವಾಣಿಜ್ಯ ವಿಭಾಗಗಳನ್ನು ತೆರೆಯಲಾಗುತ್ತಿದೆ, ಆದರೆ ಎಂ.ಎಂ.ಕೆ. ಪದವಿ ಕಾಲೇಜಿನಲ್ಲಿ ಕಲಾ ವಿಭಾಗವನ್ನು ತೆರೆದಿರುವುದು ಸ್ವಾಗತಾರ್ಹ’ ಎಂದರು. ಎಂ.ಎಂ.ಕೆ. ಕಾಲೇಜಿನ ಪ್ರಾಂಶುಪಾಲ ಪ್ರಕಾಶ್ ಮಾತನಾಡಿ, ಕಾಲೇಜಿನಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ನಮ್ಮ ವಿದ್ಯಾರ್ಥಿಗಳಿಗೆ ಮಾದರಿಯಾಗುವ ದೃಷ್ಟಿಯಿಂದ ಸಾಧನೆ…

Read More

ತುಮಕೂರು: ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಸಂಸ್ಥೆಯ ಸಹಯೋಗದಲ್ಲಿ ತುಮಕೂರು ವಿಶ್ವವಿದ್ಯಾನಿಲಯದ ನೂತನ ಜ್ಞಾನಸಿರಿ ಕ್ಯಾಂಪಸ್‌ ನಲ್ಲಿ ವಿದ್ಯಾರ್ಥಿಗಳಿಗಾಗಿ ಬಹುಪಯೋಗಿ ಕೇಂದ್ರವನ್ನು ಸ್ಥಾಪಿಸಲಾಗುವುದು ಎಂದು ಕುಲಪತಿ ಪ್ರೊ.ಎಂ. ವೆಂಕಟೇಶ್ವರಲು ತಿಳಿಸಿದರು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತ ಬೆಂಗಳೂರು ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಡೆದ ‘ಯುವಜನ ಹಾಗೂ ಸಹಕಾರ’ ಕುರಿತ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಬಿದರಕಟ್ಟೆಯ ಹೊಸ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳಿಗೆ ಉಪಯೋಗವಾಗುವ ಅನೇಕ ಸೌಲಭ್ಯಗಳನ್ನು ಹಂತಹಂತವಾಗಿ ಕಲ್ಪಿಸಲಾಗುತ್ತಿದೆ. ಬಹುಪಯೋಗಿ ಕೇಂದ್ರವನ್ನು ಸ್ಥಾಪಿಸುವ ಸಂಬಂಧ ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ಸಂಸ್ಥೆಯು ಕಳೆದ ಅನೇಕ ವರ್ಷಗಳಿಂದ ರಾಜ್ಯಕ್ಕೆ ವಿಶಿಷ್ಟ ಕೊಡುಗೆ ನೀಡಿದೆ ಎಂದರು. ಎಲ್ಲಾ ಕಾರ್ಯಗಳನ್ನು ಸರ್ಕಾರ ನಿಭಾಯಿಸುವುದು ಕಷ್ಟವಾಗುತ್ತದೆ. ಆದ್ದರಿಂದ ಇಂತಹ ಸರ್ಕಾರೇತರ ಸಂಸ್ಥೆಗಳು ಜನೋಪಯೋಗಿ ಯೋಜನೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಅಧ್ಯಯನದ ಹಂತದಲ್ಲೇ ಸಹಕಾರಿ ಚಳುವಳಿ ಬಗ್ಗೆ ತಿಳಿದುಕೊಂಡು ಅದನ್ನು ಬಲಪಡಿಸಲು ಶ್ರಮಿಸಬೇಕು…

Read More

ತುಮಕೂರು: ಮಾಹಿತಿಹಕ್ಕು ಕಾಯಿದೆ–2005 ಎ೦ಬುದು ನಾಗರಿಕರ ಅನುಕೂಲಕ್ಕಾಗಿ, ಭ್ರಷ್ಟಾಚಾರ ನಿರ್ಮೂಲನೆಗಾಗಿ, ಪಾರದರ್ಶಕ ಆಡಳಿತ ವ್ಯವಸ್ಥೆಗಾಗಿ ಕೇ೦ದ್ರ ಸರ್ಕಾರದ ಆಗಿನ ಮಾಜಿ ಪ್ರಧಾನಿ ದಿವ೦ಗತ ಡಾ.ಮನಮೋಹನ್ ಸಿ೦ಗ್ ರವರ ಸರ್ಕಾರದ ಅವಧಿಯಲ್ಲಿ ದಿ.12.10.2005 ರ೦ದು ಜಾರಿಗೆ ತ೦ದ ಸ೦ಸತ್ತಿನ ಒ೦ದು ಕಾಯಿದೆ. ಇದು ಭಾರತದ ಯಾವುದೇ ನಾಗರಿಕನು “ಸಾರ್ವಜನಿಕ ಪ್ರಾಧಿಕಾರ “ ಹೊ೦ದಿದ ದೇಶದ ಯಾವುದೇ ಸರ್ಕಾರದ ಸ೦ಸ್ಥೆ, ಘಟಕ, ಕಚೇರಿಗೆ ಅರ್ಜಿ ಸಲ್ಲಿಸಿ ಕಾನೂನಾತ್ಮಕ ರೀತಿಯಲ್ಲಿ ಕಾಯಿದೆಯ ಅಡಿಯಲ್ಲಿ ಸಾರ್ವಜನಿಕರಿಗೆ ಒದಗಿಸಬಹುದಾದ೦ತಹ ಮಾಹಿತಿಯನ್ನು ಪಡೆಯಬಹುದಾಗಿರುತ್ತದೆ. ಪ್ರಸ್ತುತ ಇದನ್ನು ಅನೇಕ ಮಾಹಿತಿಹಕ್ಕು ಬಳಕೆದಾರರು, ಸಾಮಾಜಿಕ ಹೋರಾಟಗಾರರು, ಸಾರ್ವಜನಿಕರು ಉಪಯೋಗಿಸಿಕೊ೦ಡು ಅನುಕೂಲ ಪಡೆದಿರುವುದ೦ತೂ ಅಕ್ಷರಶಃ  ಸತ್ಯ. ಆದರೆ ಕೆಲವೊ೦ದು ಸರ್ಕಾರಿ ಇಲಾಖೆಗಳಿಗೆ ಸಾರ್ವಜನಿಕರು ನೇರವಾಗಿ ಭೇಟಿ ನೀಡಿ ತಮ್ಮ ಅವಶ್ಯಕತೆಯ ಕೆಲಸ ಕಾರ್ಯಗಳನ್ನು ಮಾಡಿಕೊಳ್ಳಲು ಹರಸಾಹಸಪಡುವ೦ತಾಗಿದೆ ಇ೦ದಿನ ವಾಸ್ತವ. ಇ೦ತಹ ಸ೦ದರ್ಭಗಳಲ್ಲಿ ಮಧ್ಯವರ್ತಿಗಳಿಗೆ ಕೇಳಿದಷ್ಟು ಹಣ ನೀಡಿ ದಲ್ಲಾಳಿಗಳ ಹೊಟ್ಟೆಯನ್ನೂ ತು೦ಬಿಸಿ, ಅಧಿಕಾರಿಗಳ ಖಜಾನೆಯನ್ನು ತು೦ಬಿಸಿ ವಿಧಿಯಿಲ್ಲದೇ ತಮ್ಮ ಕೆಲಸ ಕಾರ್ಯಗಳನ್ನು ಮಾಡಿಸಿಕೊಳ್ಳುವ ಪರಿಸ್ಥಿತಿ…

Read More

ಬೀದರ್: ಕುಟುಂಬದವರು ತೋರಿಸಿದ ಹುಡುಗನನ್ನು ಮದುವೆಯಾಗಲು ನಿರಾಕರಿಸಿದಕ್ಕೆ, ಅನ್ಯಜಾತಿಯ ಹುಡುಗನನ್ನು ಪ್ರೀತಿಸಿದ್ದಕ್ಕೆ  ಹೆತ್ತ ತಂದೆಯೇ 18 ವರ್ಷದ ಮಗಳನ್ನು ಹಗ್ಗದಿಂದ ಕತ್ತು ಹಿಸುಕಿ ಕೊಲೆ ಮಾಡಿರುವ ಆಘಾತಕಾರಿ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ ಔರಾದ್ ತಾಲ್ಲೂಕಿನ ವಡಗಾಂವ ಸಮೀಪದ ಬ್ರಿಗೇಡ್ ತಾಂಡಾದಲ್ಲಿ ಶುಕ್ರವಾರ (ಫೆ.7) ರಂದು ಘಟನೆ ನಡೆದಿದ್ದು ಮೋನಿಕಾ ಮೋತಿರಾಮ ಜಾಧವ (18) ಕೊಲೆಗೀಡಾದ ಯುವತಿ. ಮಗಳ ಕೊಂದ ತಂದೆ ಮೋತಿರಾಮ ಜಾಧವ ಆರೋಪಿಯಾಗಿದ್ದಾನೆ. ಕೊಲೆ ಆರೋಪಿ ಪತ್ತೆಗೆ ಪೊಲೀಸರ ಕಾರ್ಯಾಚರಣೆ ಮುಂದುವರಿದಿದೆ. ಕುಟುಂಬಸ್ಥರು ತೋರಿಸಿದ ಯುವಕನೊಂದಿಗೆ ಮದುವೆ ಮಾಡಿಕೊಳ್ಳಲು ಯುವತಿಗೆ ಇಷ್ಟ ಇರಲಿಲ್ಲ, ತಾನು ಬೇರೊಬ್ಬ ಯುವಕನೊಂದಿಗೆ ಪ್ರೀತಿ ಮಾಡುತ್ತಿರುವುದಾಗಿ ಹೇಳಿದ್ದಳು. ಈ ಸಂಬಂಧ ತಂದೆ, ಮಗಳೊಂದಿಗೆ ಜಗಳವಾಡಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಕೋಪದಲ್ಲಿ ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹಗ್ಗದಿಂದ ಕತ್ತು ಬಿಗಿದು ಮಗಳನ್ನು ಕೊಂದು ಪಾರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ವಿಷಯ ತಿಳಿದು ಜಿಲ್ಲಾ ಪೊಲೀಸ್…

Read More

ಎಳೆಯ ವಯಸಿನವರು  ಹಠಾತ್ ಸಾವನ್ನಪ್ಪುತ್ತಿರುವ ಬಗ್ಗೆ  ತಜ್ಞರು ಹಾಗೂ ವಿಜ್ಞಾನಿಗಳ ಸಮಿತಿ ನೀಡುವ ವರದಿಯನ್ನು ಆಧರಿಸಿ ಕ್ರಮಗಳನ್ನು ಕೈಗೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿರುವ ಅವರು, ಹಿರಿಯ ಪತ್ರಕರ್ತರಾದ ರಾಜಾರಾಂ ತಲ್ಲೂರು ಅವರು ಈ ಬಗ್ಗೆ ತಮಗೆ ಪತ್ರ ಬರೆದಿದ್ದು,  ಆ ಪತ್ರ ನನ್ನ ಯೋಚನೆಯನ್ನು ಕಾರ್ಯರೂಪಕ್ಕೆ ತರಲು ಪ್ರೇರಣೆಯಾಯ್ತು ಎಂದಿದ್ದಾರೆ. ಕೊವಿಡ್ ಅಥವಾ ಕೊವಿಡ್ ಲಸಿಕೆಯ ಅಡ್ಡಪರಿಣಾಮದಿಂದ ಹಠಾತ್ ಸಾವಿಗೀಡಾದವರ ಬಗ್ಗೆ ಅಧ್ಯಯನ ನಡೆಸಿ, ಮುಂದೆ ಇಂತಹ ಸಾವುಗಳು ಸಂಭವಿಸದಂತೆ ತಡೆಯುವ ಉದ್ದೇಶದಿಂದ ಸಮರ್ಪಕ ಸಂಶೋಧನೆ ನಡೆಸಲು ತಜ್ಞರು ಹಾಗೂ ವಿಜ್ಞಾನಿಗಳನ್ನು ಒಳಗೊಂಡ ಒಂದು ಸಮಿತಿ ರಚನೆಗೆ ನಿರ್ಧರಿಸಲಾಗಿದೆ. ಕೊರೊನಾ ಕಾಲದ ನಂತರದಿಂದ ಎಳೆಯ ವಯಸಿನವರು, ಯುವಜನರು ಸೇರಿದಂತೆ ಬದುಕಿ ಬಾಳಬೇಕಾದವರು ಇದ್ದಕ್ಕಿದ್ದಂತೆ ಇಲ್ಲವಾಗುತ್ತಿದ್ದಾರೆ, ಇವರನ್ನು ನಂಬಿದ ಕುಟುಂಬಗಳು ಬೀದಿಪಾಲಾಗುತ್ತಿವೆ. ಇದೊಂದು ಗಂಭೀರ ಸಮಸ್ಯೆ, ಆದಷ್ಟು ಶೀಘ್ರ ಈ ಸಮಸ್ಯೆಯ ಮೂಲ ಪತ್ತೆಮಾಡಿ, ಪರಿಹರಿಸಬೇಕು ಎನ್ನುವುದು…

Read More

ಬೀದರ್: ಜಿಲ್ಲೆಯ ಹುಮನಾಬಾದ್ ತಾಲೂಕಿನ ಹುಡುಗಿ ಗ್ರಾಮದಲ್ಲಿ ಬಸ್ ನಿಲ್ದಾಣವಿಲ್ಲದೆ ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ. ಗ್ರಾಮದಿಂದ ಮುಂಬೈ, ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 6.5 ಹಾದು ಹೋಗಿದೆ. ಸುತ್ತಮುತ್ತಲಿನ 10ಕ್ಕೂ ಹೆಚ್ಚು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಗ್ರಾಮ ಇದಾಗಿದೆ. ಗ್ರಾಮದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಸೇರಿದಂತೆ ಬ್ಯಾಂಕ್‌ ಗಳ ವಿವಿಧ ಕೆಲಸ ಕಾರ್ಯಗಳಿಗಾಗಿ ನಿತ್ಯವೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಗ್ರಾಮಕ್ಕೆ ಭೇಟಿ ನೀಡುತ್ತಾರೆ. ಸರ್ಕಾರಿ, ಖಾಸಗಿ ಬಸ್‌ ಗಳು ಗ್ರಾಮದ ಮೂಲಕ ಸಂಚರಿಸುತ್ತವೆ. ಲಾರಿ, ಬೃಹತ್ ವಾಹನಗಳು ಸಹ ಇದೇ ಮಾರ್ಗದಲ್ಲಿ ಸಾಗುತ್ತವೆ. ಬೆಳಗಿನ ಜಾವದಿಂದ ರಾತ್ರಿವರೆಗೆ ಬಸ್‌ ಗಳಿಗಾಗಿ ನೂರಾರು ಪ್ರಯಾಣಿಕರು ಕಾದು ಕುಳಿತಿರುತ್ತಾರೆ. ಬಸ್ ತಂಗುದಾಣವಿಲ್ಲ. ಹೀಗಾಗಿ ಬಿಸಿಲು, ಮಳೆಯಲ್ಲಿಯೇ ಗಂಟೆಗಟ್ಟಲೇ ಕಾದು ಹೈರಾಣಾಗುತ್ತಿದ್ದಾರೆ. ಪ್ರಯಾಣಿಕರು ಬಸ್‌ ಗಾಗಿ ಬಿಸಿಲಿನಲ್ಲಿ ಅಥವಾ ಮರದ ಬುಡದಲ್ಲಿ ಕಾಯಬೇಕಾಗಿದೆ. ಮಳೆಗಾಲದಲ್ಲಿ ಸರಕಿನೊಂದಿಗೆ ಪ್ರಯಾಣಿಸುವವರು, ಮಕ್ಕಳನ್ನು ಕರೆದುಕೊಂಡು ಹೋಗುವವರು, ವೃದ್ಧರು ಹೆಚ್ಚು ಸಂಕಷ್ಟ ಅನುಭವಿಸುವಂತಾಗಿದೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ…

Read More

ಹುಬ್ಬಳ್ಳಿ: ಎಲ್ಲಿಯವರೆಗೆ ಕಾಂಗ್ರೆಸ್ ಪಕ್ಷ ರಾಹುಲ್‌ ಗಾಂಧಿ ಅವರ ನಾಯಕತ್ವವನ್ನು ನೆಚ್ಚಿಕೊಂಡಿರುತ್ತದಯೋ, ಅಲ್ಲಿಯವರೆಗೆ ಆ ಪಕ್ಷ ಉದ್ಧಾರವಾಗುವುದಿಲ್ಲ ಎಂದು ಬೆಳಗಾವಿ ಬಿಜೆಪಿ ಸಂಸದ ಜಗದೀಶ್‌ ಶೆಟ್ಟರ್‌ ವ್ಯಂಗ್ಯವಾಡಿದ್ದಾರೆ. ದೆಹಲಿ ವಿಧಾನಸಭೆ ಚುನಾವಣೆಯ ಮತ ಎಣಿಕೆಯಲ್ಲಿ ಬಿಜೆಪಿ ಮುನ್ನಡೆ ಹಿನ್ನೆಲೆ ಮಾತನಾಡಿದ ಅವರು, ಜಗದೀಶ್‌ ಶೆಟ್ಟರ್‌, ದೆಹಲಿ ಜನ ಬಿಜೆಪಿಗೆ ಆಶೀರ್ವಾದ ಮಾಡಿರುವುದು ಸ್ಪಷ್ಟವಾಗಿದೆ ಎಂದರು. ದೆಹಲಿಯ ಜನತೆ ಅರವಿಂದ್‌ ಕೇಜ್ರಿವಾಲ್‌ ಮತ್ತು ಆಮ್‌ ಆದ್ಮಿ ಪಕ್ಷದಿಂದ ರೋಸಿ ಹೋಗಿದ್ದರು. ಕೇವಲ ಬಾಯಿ ಮಾತಿನಲ್ಲಿ ತಮ್ಮದು ವಿನೂತನ ರಾಜಕಾರಣ ಎಂದು ಹೇಳುತ್ತಿದ್ದ ಆಪ್‌ ನಾಯಕರು, ಲಿಕ್ಕರ್‌ ಹಗರಣ, ಅರಮನೆಯಂತಹ ಮನೆ ನಿರ್ಮಿಸಿಕೊಳ್ಳುವುದಲ್ಲಿ ನಿರತರಾಗಿದ್ದರು. ಇದನ್ನೆಲ್ಲಾ ಗಮನಿಸಿದ ದೆಹಲಿ ಮತದಾರ, ಈ ಬಾರಿ ಬಿಜೆಪಿಗೆ ಆಶೀರ್ವಾದ ಮಾಡಿದ್ದಾನೆ  ಎಂದು ಅವರು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೆಂಗಳೂರು: 2025 ಮಾರ್ಚ್‌ 1 ರಿಂದ 8 ರವರೆಗೆ  ನಡೆಯಲಿರುವ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ   ಅಧಿಕೃತ ಲಾಂಛನವನ್ನು  ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಇಂದು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ  ಡಿ.ಕೆ.ಶಿವಕುಮಾರ್‌, ವಿಧಾನಪರಿಷತ್  ಸದಸ್ಯ ನಸೀರ್‌ ಅಹ್ಮದ್‌, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್‌, ‌ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್‌, ಆರ್ಥಿಕ ಇಲಾಖೆ ಕಾರ್ಯದರ್ಶಿ ಡಾ.ಪಿ.ಸಿ.ಜಾಫರ್‌, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಾರ್ಯದರ್ಶಿ ಬಿ.ಬಿ. ಕಾವೇರಿ, ಆಯುಕ್ತರಾದ ಹೇಮಂತ್‌ ಎಂ. ನಿಂಬಾಳ್ಕರ್‌, ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಡಾ.ಸಾಧು ಕೋಕಿಲ, ರಿಜಿಸ್ಟ್ರಾರ್‌ ಹಿಮಂತರಾಜು ಜಿ, ಕಲಾತ್ಮಕ ನಿರ್ದೇಶಕ ಎನ್.‌ ವಿದ್ಯಾಶಂಕರ್‌ ಉಪಸ್ಥಿತರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು ಮಹಾನಗರಪಾಲಿಕೆಯ 2025–26ನೇ ಸಾಲಿನ ಆಯವ್ಯಯ ಸಿದ್ಧಪಡಿಸುವ ಕುರಿತು ಫೆಬ್ರವರಿ 15ರಂದು ಮಧ್ಯಾಹ್ನ 3:30 ಗಂಟೆಗೆ ಮಹಾನಗರಪಾಲಿಕೆ ಸಭಾಂಗಣದಲ್ಲಿ ಸಾರ್ವಜನಿಕ ಸಭೆ ಏರ್ಪಡಿಸಲಾಗಿದೆ. ಮಹಾನಗರಪಾಲಿಕೆ ವ್ಯಾಪ್ತಿಯ ಸಂಘ ಸಂಸ್ಥೆಗಳ ಪದಾಧಿಕಾರಿ, ಹೋಟೆಲ್ ಅಸೋಸಿಯೇಷನ್, ಛತ್ರಗಳ ಮಾಲೀಕರ ಸಂಘ, ಸಿನಿಮಾ ಮಂದಿರಗಳ ಮಾಲೀಕರ ಸಂಘ, ಶಿಕ್ಷಣ ಸಂಸ್ಥೆಯ ಸಂಘಗಳ ಸಂಘ, ನರ್ಸಿಂಗ್ ಹೋಮ್ಸ್ ಸಂಘಗಳ ಪದಾಧಿಕಾರಿ, ವಕೀಲರ ಅಸೋಸಿಯೇಷನ್, ನಾಗರಿಕ ಹಿತರಕ್ಷಣಾ ಸೇವಾ ಸಮಿತಿ, ಸರ್ಕಾರೇತರ ಸಂಘ ಸಂಸ್ಥೆ, ವಾಣಿಜ್ಯ ಮತ್ತು ಕೈಗಾರಿಕೋದ್ಯಮ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಸಭೆಗೆ ಹಾಜರಾಗಿ ಸಲಹೆ/ಸೂಚನೆಗಳನ್ನು ನೀಡಿ, ಆಯವ್ಯಯವನ್ನು ಪ್ರಗತಿಶೀಲವಾಗಿ ರೂಪಿಸಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More