Author: admin

ತುಮಕೂರು:  ಬೆಸ್ಕಾಂ ವ್ಯಾಪ್ತಿಯಲ್ಲಿ ವಿವಿಧ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ಜನವರಿ 8ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ನಗರ ಉಪವಿಭಾಗ-2 :- ಸಪ್ತಗಿರಿ ಪೂರ್ವ/ ದಕ್ಷಿಣ/ ಪಶ್ಚಿಮ, ಮಾರುತಿನಗರ, ಶಿವಮೂಕಾಂಬಿಕ ನಗರ, ಜಯನಗರ ಪೂರ್ವ/ ಪಶ್ಚಿಮ/ ದಕ್ಷಿಣ, ಸಿದ್ದರಾಮೇಶ್ವರ ಬಡಾವಣೆ, ಖಾದರ್ ನಗರ, ಕೆ.ಪಾಲಸಂದ್ರ, ಗೂಳಹರಿವೆ, ಕಿತ್ತಗಾನಹಳ್ಳಿ, ಮಂಚಗೊಂಡನಹಳ್ಳಿ, ಶೆಟ್ಟಿಹಳ್ಳಿ, ವಿಜಯನಗರ, ಚನ್ನಬಸವೇಶ್ವರನಗರ, ಸಂಕಾಪುರ, ಗೌರಿಪುರ, ಲಕ್ಷ್ಮೀಪುರ, ಹೊನ್ನೇನಹಳ್ಳಿ, ಗಂಗಸಂದ್ರ, ಬನಶಂಕರಿ, ಸದಾಶಿವನಗರ, ನಜರಾಬಾದ್, ಶಾಂತಿನಗರ, ಅಮರಜ್ಯೋತಿನಗರ, ಗೂಡ್‌ಶೆಡ್ ಕಾಲೋನಿ, ಉಪ್ಪಾರಹಳ್ಳಿ, ರಿಂಗ್ ರಸ್ತೆ, ರಾಮಜ್ಯೋಯಿಷಿನಗರ, ಸರಸ್ವತಿಪುರಂ, ಮರಳೂರು, ಜನತಾ ಕಾಲೋನಿ, ಯಾದವನಗರ, ಪ್ರಗತಿ ಬಡಾವಣೆ, ಗೆದ್ದಲಹಳ್ಳಿ ಮುಖ್ಯರಸ್ತೆ, ಟೂಡಾ ಲೇಔಟ್, ಮೆಳೆಕೋಟೆ, ಮಯೂರ ನಗರ, ಶೇಷಾದ್ರಿಪುರಂ ಕಾಲೇಜು, ರಾಜೀವ್ ಗಾಂಧಿನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಅನಿಯಮಿತ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಹೆಚ್ಚಿನ ಮಾಹಿತಿಗಾಗಿ ಜಯನಗರ ಶಾಖಾಧಿಕಾರಿ, ಮೊ.ಸಂ.9449844312/ 9449843511 ಹಾಗೂ ಸರಸ್ವತಿಪುರಂ ಶಾಖಾಧಿಕಾರಿ ಮೊ.ಸಂ.9449844296ನ್ನು ಸಂಪರ್ಕಿಸಬಹುದಾಗಿದೆ. ವಾಣಿಜ್ಯ, ಕಾರ್ಯ ಮತ್ತು ಪಾಲನಾ ವಿಭಾಗ…

Read More

ತುಮಕೂರು: ತುಮಕೂರು ತಾಲ್ಲೂಕು ಕೋರಾ ಗ್ರಾಮದ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಪಾಠಶಾಲೆಗೆ ಹಾಗೂ ಕೋರಾ ಗ್ರಾಮ ಪಂಚಾಯ್ತಿಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಡಾ. ತಿಪ್ಪೇಸ್ವಾಮಿ ಕೆ.ಟಿ. ಭೇಟಿ ನೀಡಿದರು. ಕೋರಾ ಗ್ರಾಮ ಪಂಚಾಯ್ತಿಗೆ ದಿಢೀರ್ ಬೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ, ಗ್ರಾಮ ಪಂಚಾಯ್ತಿಯು ಈವರೆಗೂ ಮಕ್ಕಳ ಹಕ್ಕುಗಳ ಗ್ರಾಮಸಭೆ ನಡೆಸದಿರುವುದು, ಮಹಿಳಾ ಮತ್ತು ಮಕ್ಕಳ ರಕ್ಷಣಾ ಕಾವಲು ಸಮಿತಿ, ಶಿಕ್ಷಣ ಕಾರ್ಯಪಡೆ ರಚಿಸದಿರುವುದು, ಮಕ್ಕಳ ಅಂಕಿಅಂಶಗಳ ದಾಖಲೆ ನಿರ್ವಹಿಸದಿರುವುದನ್ನು ಗಮನಿಸಲಾಯಿತು. ಒಟ್ಟಾರೆ ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ನಿರ್ಲಕ್ಷವಹಿಸಿರುವ ಕೋರಾ ಗ್ರಾಮ ಪಂಚಾಯ್ತಿಯ ಸಂಬಂಧಿಸಿದ ಅಧಿಕಾರಿಗಳ ಮೇಲೆ ನಿಯಮಾನುಸಾರ ಸೂಕ್ತಕ್ರಮ ಕೈಗೊಂಡು ಕೈಗೊಂಡ ಕ್ರಮದ ವರದಿಯನ್ನು ಆಯೋಗಕ್ಕೆ ಸಲ್ಲಿಸಲು ತಮಕೂರು ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಯಿತು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು: ಹದಿ ಹರೆಯದ ವಯಸ್ಸಿನ ಗಂಡಾಗಲಿ, ಹೆಣ್ಣಾಗಲಿ ಸೋಷಿಯಲ್ ಮಿಡಿಯಾ ಬಳಸುವ ವೇಳೆ ಎಚ್ಚರಿಕೆಯಿಂದ ಇರುವಂತೆ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸಾ ಕಿವಿಮಾತು ಹೇಳಿದರು. ತುಮಕೂರಿನ ಬಾಲಭವನದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಹಮ್ಮಿಕೊಂಡಿದ್ದ “ಶಾಲಾ ಮಟ್ಟದಲ್ಲಿ ಮಕ್ಕಳ ರಕ್ಷಣೆ ಕುರಿತು ಜಿಲ್ಲಾ ಮಟ್ಟದ ಕಾರ್ಯಾಗಾರ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಮಕ್ಕಳಲ್ಲಿ ಜಾಗೃತಿ ಮೂಡಿಸಿದರು. ಮಕ್ಕಳ ಮುಗ್ಧತೆಯನ್ನು ದುರುಪಯೋಗಪಡಿಸಿಕೊಳ್ಳುವವರ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿದ್ದು, ಶಾಲಾ, ಕಾಲೇಜುಗಳಲ್ಲಿ ಕಲಿಯುತ್ತಿರುವ, ಹದಿ ಹರೆಯದ ವಯಸ್ಸಿನ ಗಂಡಾಗಲಿ, ಹೆಣ್ಣಾಗಲಿ ಸೋಷಿಯಲ್ ಮಿಡಿಯಾ ಬಳಸುವ ವೇಳೆ ಎಚ್ಚರಿಕೆ ವಹಿಸಬೇಕು ಎಂದು ಅವರು ತಿಳಿಸಿದರು. ನಿಮಗೆ ಗೊತ್ತಿಲ್ಲದೆಯೋ, ಗೊತ್ತಿದ್ದೋ, ಸಮಾಜಘಾತಕರೊಂದಿಗೆ ಸಂಪರ್ಕ ಪಡೆದರೆ, ಜೀವನವಿಡೀ, ಜೈಲು, ಕೋರ್ಟು, ವಿಚಾರಣೆ ಎಂದು ಓಡಾಡುವುದರಿಂದ ನಿಮಗೆ ವಿದ್ಯಾಭ್ಯಾಸವೂ ಕುಂಠಿತವಾಗಲಿದೆ. ನಿಮ್ಮ ಬಾಲ್ಯವೂ ಇಲ್ಲದಂತಾಗುತ್ತದೆ ಎಂದರು. ಜಿಲ್ಲೆಯಲ್ಲಿ ಪ್ರತಿವರ್ಷದಿಂದ ವರ್ಷಕ್ಕೆ ಪೋಕ್ಸೋ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ.…

Read More

ಬೆಂಗಳೂರು: ಬಿಜೆಪಿಯೊಳಗಿನ ಆಂತರಿಕ ಕಚ್ಚಾಟದ ಬಗ್ಗೆ ಸಂಸದ ಬಸವರಾಜ ಬೊಮ್ಮಾಯಿ ಗುರುವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷದಲ್ಲಿನ ಬಣಗಳು ತಾಳ್ಮೆಯಿಂದ ವರ್ತಿಸಿ, ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಚರ್ಚೆಯ ಮೂಲಕ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಬೇಕು ಎಂದರು. ಪಕ್ಷದ ಹೈಕಮಾಂಡ್ ಶೀಘ್ರದಲ್ಲೇ ಕರ್ನಾಟಕ ಬಿಜೆಪಿಯಲ್ಲಿನ ಬೆಳವಣಿಗೆಗಳತ್ತ ಗಮನ ಹರಿಸಿ, ಎಲ್ಲ ಪ್ರಮುಖ ನಾಯಕರೊಂದಿಗೆ ಚರ್ಚೆ ನಡೆಸಿ, ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದು ಅವರು ಆಶಾವಾದ ವ್ಯಕ್ತಪಡಿಸಿದರು. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಇತರ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ ಎರಡೂ ಕಡೆಯ ಸದಸ್ಯರು ತಾಳ್ಮೆಯಿಂದ ವರ್ತಿಸಬೇಕು ಮತ್ತು ಚರ್ಚೆಯ ಮೂಲಕ ತಮ್ಮ ಭಿನ್ನಾಭಿಪ್ರಾಯಗಳನ್ನು ಪರಿಹರಿಸಿಕೊಳ್ಳಬೇಕು. ಇದು ಸಾಧ್ಯವಾಗದಿದ್ದರೆ, ಅವರೆಲ್ಲರೂ ಕೇಂದ್ರ ನಾಯಕತ್ವದ ನಿರ್ಧಾರಕ್ಕೆ ಬದ್ಧರಾಗಿರಬೇಕು ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬಾಗಲಕೋಟೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಮಾಜಿ ಸಚಿವ ಮುರುಗೇಶ್ ನಿರಾಣಿ, ಜನ ಅಪ್ಪನನ್ನು ಇಷ್ಟಪಡುತ್ತಾರೆ ಎಂಬ ಕಾರಣಕ್ಕೆ ಮಗನನ್ನೂ ಇಷ್ಟಪಡುತ್ತಾರೆ ಅಂತ ಹೇಳಲಾಗದು ಎಂದಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೀಳಗಿ ಜನ ತನ್ನನ್ನು ಒಪ್ಪಿಕೊಂಡಿದ್ದಾರೆ ಮತ್ತು ತಿರಸ್ಕರಿಸಿದ್ದಾರೆ. ನನ್ನಂತೆ ನನ್ನ ಮಗನನ್ನು ಅವರು ಇಷ್ಟಪಟ್ಟಾರು ಅಂತ ಹೇಳಲಾಗಲ್ಲ. ಪಕ್ಷದ ನಾಯಕರ ಆಂತರಿಕ ವೈಮನಸ್ಸುಗಳು ಬೀದಿಗೆ ಬರಬಾರದು ಎಂದರು. ವಿಜಯೇಂದ್ರ ಅವರು ಪ್ರತಿಯೊಬ್ಬ ನಾಯಕರೊಂದಿಗೆ ಮುಖಾಮುಖಿಯಾಗಿ ಮಾತಾಡಬೇಕು ಎಂದು ಸಲಹೆ ನೀಡಿದ ಅವರು, ಬಿ.ಎಸ್. ಯಡಿಯೂರಪ್ಪ ಅವರ ಬಳಿ ಸಹಾಯ ಪಡೆದುಕೊಂಡವರು, ವಿರೋಧಿ ಬಣದ ಆರೋಪಗಳ ಬಗ್ಗೆ ಹಿರಿಯ ನಾಯಕರು ಏನೂ ಮಾತಾಡ್ತಿಲ್ಲ ಎಂಬ ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯಿಸಿದ ನಿರಾಣಿ, ತಂದೆಯವರ ಕಡೆ ಸಹಾಯ ತಗೊಂಡಾರ ಅಂದ್ರೆ, ಅವರು ಬೇರೆ ಮಾತನಾಡುತ್ತಾರೆ. ಆ ಮಾತು ವಾದ–ವಿವಾದಕ್ಕೆ ಕಾರಣವಾಗುತ್ತೆ. ನಾಲ್ಕು ಗೋಡೆಯ ಮಧ್ಯೆ ಅಸಮಾಧಾನವನ್ನು ಸರಿಪಡಿಸಿಕೊಳ್ಳಬೇಕು. ವಿಜಯೇಂದ್ರ ಎಲ್ಲರನ್ನೂ ಕರೆದು ಮಾತನಾಡಬೇಕು ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ಬೆಂಗಳೂರು: POCSO ಕೇಸ್ ಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ತನ್ನ ವಿರುದ್ಧದ ಪ್ರಕರಣ ರದ್ದು ಮಾಡುವಂತೆ ಹಾಗೂ ನಿರೀಕ್ಷಣಾ ಜಾಮೀನು ಮಂಜೂರು ಮಾಡುವಂತೆ ಕೋರಿ ಯಡಿಯೂರಪ್ಪ ಸಲ್ಲಿಸಿದ 2 ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ಸಕ್ಷಮ ನ್ಯಾಯಾಲಯ ಆದೇಶವನ್ನು ವಜಾ ಮಾಡಿ, ಷರತ್ತು ಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಪೋಕ್ಸೋ ಕೇಸ್ ನಲ್ಲಿ ಬಂಧನದ ಭೀತಿಯಲ್ಲಿದ್ದ ಯಡಿಯೂರಪ್ಪ ಸದ್ಯ ನಿರಾಳರಾಗಿದ್ದಾರೆ. ಆದರೆ ತನಿಖಾಧಿಕಾರಿಗಳು ನೀಡುವ ಅಂತಿಮ ವರದಿಯ ಆಧಾರದಲ್ಲಿ ವಿಚಾರಣೆ ಮುಂದುವರೆಸುವಂತೆ ಆದೇಶ ನೀಡಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಬೆಂಗಳೂರು: ಯಡಿಯೂರಪ್ಪ ವಿರುದ್ಧ ರೆಬೆಲ್ ನಾಯಕರು ನಿಂದನೆ, ವಾಗ್ದಾಳಿ ನಡೆಸುತ್ತಿದ್ದರೂ, ತಟಸ್ಥ ನಾಯಕರ ಬಣದಲ್ಲಿರುವವರು ಅದಕ್ಕೆ ಕಡಿವಾಣ ಹಾಕಲು ಮುಂದಾಗದ ಹಿನ್ನೆಲೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಹಿರಂಗವಾಗಿಯೇ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ಭಿನ್ನರ ಬಣ ಒಂದೆಡೆಯಾದರೆ, ಇನ್ನೊಂದೆಡೆ ಯಡಿಯೂರಪ್ಪ ಪರ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ಬಣ ಪರಸ್ಪರ ಹೇಳಿಕೆ, ಪ್ರತಿ ಹೇಳಿಕೆಗಳನ್ನು ನೀಡುತ್ತಿದೆ. ಹಿರಿಯರಾದ ಬಸವರಾಜ ಬೊಮ್ಮಾಯಿ, ಡಿ.ವಿ.ಸದಾನಂದಗೌಡ, ಆರ್.ಅಶೋಕ್, ಡಾ.ಸಿ.ಎನ್.ಅಶ್ವತ್ಥ ನಾರಾಯಣ ಇತರರು ತಟಸ್ಥರಾಗಿದ್ದಾರೆ. ಗುರುವಾರ ರಾಜ್ಯ ಬಿಜೆಪಿ ಕಚೇರಿಯಲ್ಲಿ ತಟಸ್ಥ ಬಣದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ವಿಜಯೇಂದ್ರ, ತಟಸ್ಥರು ಏನು ಎಂಬುದು ಗೊತ್ತಿದೆ, ಯಡಿಯೂರಪ್ಪನವರ ತೇಜೋವಧೆ ಮಾಡುತ್ತಿರುವವರ ಬಾಯಿ ಮುಚ್ಚಿಸಲಿ. ಯಡಿಯೂರಪ್ಪನವರನ್ನು ನಿಂದಿಸುತ್ತಿದ್ದರೂ ಕಡಿವಾಣ ಹಾಕದೆ ಸುಮ್ಮನಿರುವುದೂ ಅಪರಾಧ ಎಂದು ವಿಜಯೇಂದ್ರ ಗುಡುಗಿದ್ದಾರೆ. ‘ಯಡಿಯೂರಪ್ಪನವರ ಮೇಲಿನ ವಾಗ್ದಾಳಿ ತಡೆಯಲು ರಾಷ್ಟ್ರೀಯ ನಾಯಕರೇ ಬರಬೇಕೆ? ಹಾಗಾದರೆ ಈ ನಾಯಕರಿಗೆ ಜವಾಬ್ದಾರಿ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ. ನನ್ನ ವಿರುದ್ಧ ವರಿಷ್ಠರಿಗೆ ಏನಾದರೂ ದೂರು ಕೊಡಲಿ ಅಥವಾ…

Read More

ಬಾಗಲಕೋಟೆ: ಅಪಘಾತದ ಗಾಯಾಳುವನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್‌ ಅವರು ತಮ್ಮದೇ ಕಾರಿನಲ್ಲಿ ಕರೆದೊಯ್ದು ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದಾರೆ. ಬಾಗಲಕೋಟೆ ಜಿಲ್ಲೆ‌ ಮುಧೋಳ ತಾಲ್ಲೂಕಿನ ಲೋಕಾಪುರದಲ್ಲಿ ಟ್ರ್ಯಾಕ್ಟರ್ ಹಿಂಬದಿ ಹೊರಟಿದ್ದ ಬೈಕ್ ಸವಾರ ಆಯತಪ್ಪಿ ಬಿದ್ದು ಗಾಯಗೊಂಡಿದ್ದರು. ಈ ವೇಳೆ ಜಮಖಂಡಿಯಿಂದ ಅದೇ ಮಾರ್ಗವಾಗಿ ಬರುತ್ತಿದ್ದ ಸಚಿವ ಸಂತೋಷ ಲಾಡ್ ಅವರು, ಬೈಕ್ ಸವಾರನನ್ನು ಲೋಕಾಪುರ ಸರಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದರು. ಗಾಯಾಳು ಬೈಕ್ ಸವಾರ ಸತೀಶ್ ವೆಂಕಪ್ಪ ಮಾದರ ಅವರಿಗೆ ಮೊಣಕಾಲಿಗೆ ತೀವ್ರ ಗಾಯವಾಗಿತ್ತು. ಲೋಕಾಪುರ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ಆಂಬುಲೆನ್ಸ್ ನಲ್ಲಿ ಕಳುಹಿಸಲು ಕ್ರಮ ಕೈಗೊಂಡರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೆಂಗಳೂರು: ದೇಶ, ಧರ್ಮ ಯಾವುದೇ ಆಗಿರಲಿ ಮಾನವೀಯತೆ ಮುಖ್ಯ. ಸರಪಳಿ ಕಟ್ಟಿ ನಡೆಸಿಕೊಳ್ಳುವುದು ಸರಿಯಲ್ಲ. ಇದು ಖಂಡನೀಯ ಎಂದು ಭಾರತೀಯರನ್ನು ಅಮೆರಿಕ ಸರ್ಕಾರ ಕೈ ಕಾಲಿಗೆ ಕಬ್ಬಿಣದ ಸರಪಳಿ ಕಟ್ಟಿ ಭಾರತಕ್ಕೆ ವಾಪಸ್ ಕಳಿಸಿರುವ  ಘಟನೆಯನ್ನು ಡಿ.ಕೆ.ಶಿವಕುಮಾರ್ ಟೀಕಿಸಿದ್ದಾರೆ. ಕನಕಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ರಮವಾಗಿ ಅವರ ದೇಶದಲ್ಲಿ ನೆಲೆಸಿದ್ದರೆ, ಅದಕ್ಕೆ ಯಾವ ಶಿಕ್ಷೆ ನೀಡಬೇಕೋ ನೀಡಲಿ. ಅದನ್ನು ಬಿಟ್ಟು, ಈ ರೀತಿ ಖೈದಿಗಳಿಗೆ ಹಾಕಿದಂತೆ ಸರಪಳಿ ಹಾಕಿರುವುದನ್ನು ಯಾರಿಂದಲೂ ಒಪ್ಪಲು ಸಾಧ್ಯವಿಲ್ಲ. ಇದು ಮಾನವ ಕುಲಕ್ಕೆ ಅಗೌರವ ಎಂದು ಡಿ.ಕೆ.ಶಿವಕುಮಾರ್ ಹೇಳಿದರು. ಈ ಹಿಂದೆ ಕೂಲಿ ಕಾರ್ಮಿಕರಿಗೆ ಸರಪಳಿ ಹಾಕಿ ಕಟ್ಟುತ್ತಿದ್ದದ್ದನ್ನು ನಾವು ನೋಡಿದ್ದೇವೆ. ಅದನ್ನು ತಪ್ಪಿಸಲು ಸರ್ಕಾರ ಕಾನೂನು ತಂದು ಶಿಕ್ಷೆ ನೀಡಿದೆ. ಆದರೆ ಮುಂದುವರಿದ, ಜಾಗೃತಿ ಇರುವ ದೇಶಗಳಲ್ಲಿ ಈ ರೀತಿ ನಡೆದಿರುವುದು ಖಂಡನೀಯ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ…

Read More

ಪಾವಗಡ: ದಶಕಗಳ ಹೋರಾಟಕ್ಕೆ ಜಯ ಸಿಕ್ಕ ಹಿನ್ನೆಲೆಯಲ್ಲಿ ಹೋರಾಟದಲ್ಲಿ ಉಪವಾಸ ಸತ್ಯಾಗ್ರಹ ಅಹರ್ನಿಶಿ ಧರಣಿ ಪಾದಯಾತ್ರೆ ಸೇರಿದಂತೆ ನಿತ್ಯ ನಿರಂತರವಾಗಿ ಅನೇಕ ಹೋರಾಟಗಳಲ್ಲಿ ಭಾಗವಹಿಸಿ ಯಶಸ್ವಿಯಾಗಿ ಹೋರಾಟ ಪೂರೈಕೆ ಮಾಡಿದ್ದರ ಹಿನ್ನೆಲೆ,  ಇಂದು ಪಾವಗಡ ತಾಲ್ಲೂಕಿಗೆ ತುಂಗಭದ್ರಾ ಹಿನ್ನೀರು ಪೈಪ್ ಲೈನ್ ಮೂಲಕ ಪಾವಗಡ ತಾಲ್ಲೂಕಿಗೆ ಹರಿಯುತ್ತಿರುವ ಹಿನ್ನೆಲೆಯಲ್ಲಿ ಹೋರಾಟಗಾರರನ್ನು ಸ್ಮರಣೆ ಮಾಡಿಕೊಳ್ಳುವಂತ ಕೆಲಸ ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಹೋರಾಟಗಾರರಿಗೆ ಸನ್ಮಾನ ಮತ್ತು ಕೃತಜ್ಞತಾ ಪೂರ್ವಕವಾಗಿ ಅಭಿನಂದನ ಕಾರ್ಯಕ್ರಮವನ್ನು ನೆರವೇರಿಸಲು ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ ಎಂದು ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷ  ಎಸ್.ಶಿವಪ್ರಸಾದ್ ತಿಳಿಸಿದರು. ಪಾವಗಡದ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಳೆದ ಹತ್ತಾರು ದಶಕಗಳ ಹೋರಾಟದ ಫಲವಾಗಿ ಇಂದು ತುಂಗಭದ್ರಾ ಹಿನ್ನೀರು ಪೈಪ್ ಲೈನ್ ಮೂಲಕ ಪಾವಗಡ ತಾಲ್ಲೂಕಿಗೆ ಕುಡಿಯುವ ನೀರು ಹರಿಯುತ್ತಿರುವುದು ಅತ್ಯಂತ ಹೆಮ್ಮೆಯ ಸಂಗತಿ ಇದು ತಾಲೂಕಿನ ನಾಗರಿಕರ ಹೆಮ್ಮೆಯ ವಿಷಯವೂ ಕೂಡ ಆಗಿದೆ. ಅದರಿಂದ ಎಲ್ಲಾ ಹೋರಾಟಗಾರರನ್ನು…

Read More