Author: admin

ನವದೆಹಲಿ: ವಿದ್ಯಾರ್ಥಿಗಳಿಗೆ ಪರೀಕ್ಷೆಯ ಒತ್ತಡ ನಿವಾರಣೆ ನಿಟ್ಟಿನಲ್ಲಿ ಪ್ರಧಾನಿ ಮೋದಿ ನಡೆಸುವ ವಾರ್ಷಿಕ ಸಂವಾದ “ಪರೀಕ್ಷಾ ಪೆ ಚರ್ಚಾ”ದಲ್ಲಿ ಈ ಬಾರಿ ಸೆಲೆಬ್ರೆಟಿಗಳು ಕೂಡ ಭಾಗಿಯಾಗಲಿದ್ದಾರೆ. ವಿವಿಧ ಕ್ಷೇತ್ರಗಳ ಏಳು ಸೆಲೆಬ್ರಿಟಿಗಳು ಪರೀಕ್ಷೆಯ ಸಮಯದಲ್ಲಾಗುವ ಒತ್ತಡವನ್ನು ನಿವಾರಿಸುವ ಕುರಿತು ವಿದ್ಯಾರ್ಥಿಗಳಿಗೆ ಸಲಹೆ ನೀಡಲಿದ್ದಾರೆ. ಸದ್ಗುರು, ಬಾಲಿವುಡ್ ನಟಿ ದೀಪಿಕಾ ಪಡುಕೋಣೆ, ಮೇರಿ ಕೋಮ್ ಮತ್ತು ಅವನಿ ಲೇಖರಾ ಸಲಹೆಗಳನ್ನು ನೀಡಲಿದ್ದಾರೆ. ಈ ಕಾರ್ಯಕ್ರಮದ ಪ್ರಮುಖ ಅಂಶವೆಂದರೆ ಪ್ರಧಾನಿ ಮೋದಿಯವರು ವಿದ್ಯಾರ್ಥಿಗಳೊಂದಿಗೆ ನಡೆಸುವ ವಿಶೇಷ ಸಂವಾದ, ಇದರಲ್ಲಿ ಅವರು ಅವರ ಪ್ರಶ್ನೆಗಳಿಗೆ ಉತ್ತರಿಸುತ್ತಾರೆ ಮತ್ತು ಶೈಕ್ಷಣಿಕ ಮತ್ತು ಜೀವನದ ಸವಾಲುಗಳನ್ನು ಹೇಗೆ ಎದುರಿಸುವುದು ಎಂಬುದರ ಕುರಿತು ಮಾರ್ಗದರ್ಶನ ನೀಡುತ್ತಾರೆ. ಪರೀಕ್ಷಾ ಪೆ ಚರ್ಚಾದಲ್ಲಿ ಪ್ರಧಾನಿ ನರೇಂದ್ರ ಮೋದಿ 35 ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಎಲ್ಲಾ ವಿದ್ಯಾರ್ಥಿಗಳು ಬೇರೆ ಬೇರೆ ರಾಜ್ಯಗಳಿಂದ ಬಂದವರಾಗಿರುತ್ತಾರೆ. 50–60 ವಿದ್ಯಾರ್ಥಿಗಳು ಮತ್ತು ಇತರೆ ಪ್ರಮುಖರು ಪಾಲ್ಗೊಳ್ಳಲಿದ್ದಾರೆ. ಈ ಬಾರಿ ಸುಮಾರು ಆರುನೂರು ವಿದ್ಯಾರ್ಥಿಗಳು ಈ ಚರ್ಚೆಯಲ್ಲಿ ನೇರವಾಗಿ ಭಾಗವಹಿಸಿದ್ದಾರೆ.…

Read More

ತುಮಕೂರು: ಪ್ರಸ್ತುತ ಸಮಾಜದಲ್ಲಿ ಯುವಕ ಯುವತಿಯರಿಗೆ ತಂತ್ರಜ್ಞಾನ ಎಂಬುದು ವ್ಯಸನವಾಗಿದೆ. ಅದರಿಂದ ಅವರು ಹೊರಬರಲಾಗುತ್ತಿಲ್ಲ. ಆದ್ದರಿಂದ ತಂತ್ರಜ್ಞಾನದಲ್ಲಿ ಅನುಕೂಲಕ್ಕಿಂತ ಅನಾನುಕೂಲಗಳೇ ಹೆಚ್ಚು ಆಗುತ್ತಿವೆ ಎಂದು ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಅಭಿಪ್ರಾಯಪಟ್ಟರು. ತುಮಕೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಗಣಕ ವಿಜ್ಞಾನ ವಿಭಾಗವು ಬುಧವಾರ ಹಮ್ಮಿಕೊಂಡಿದ್ದ ‘ಸೈಬರ್ ಭದ್ರತೆ ಮತ್ತು ಎಥಿಕಲ್ ಹ್ಯಾಕಿಂಗ್’ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ತಂತ್ರಜ್ಞಾನಗಳನ್ನು ಬಳಸಲು ಇಂದು ಉತ್ತಮ ವೇದಿಕೆಗಳಿವೆ. ಆದರೆ ಅವುಗಳನ್ನು ಕೆಲವು ಸೈಬರ್ ವಂಚಕ ಗುಂಪುಗಳು ದುರುಪಯೋಗಪಡಿಸಿಕೊಳ್ಳುತ್ತಿವೆ. ಎಷ್ಟೋ ವಿದ್ಯಾವಂತರು ಕೂಡ ಇವರಿಂದ ಶೋಷಣೆಗೊಳಗಾಗಿದ್ದಾರೆ. ವಿದ್ಯಾವಂತರು ಇಂತಹ ಸಮಸ್ಯೆಗಳ ಬಗ್ಗೆ ಸಾಧ್ಯವಾದಷ್ಟು ತಿಳುವಳಿಕೆ ನೀಡಬೇಕು ಎಂದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಆರ್.ವಿ. ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಸಹಪ್ರಾಧ್ಯಾಪಕ ಡಾ.ಮೋಹನ ಮಾತನಾಡಿ, ಸೈಬರ್ ಕ್ರೈಂ ಈಗ ಒಂದು ಆಯುಧವಾಗಿದೆ. ಕೂತಲ್ಲಿಯೇ ಎಲ್ಲವನ್ನು ನಿಯಂತ್ರಿಸುವ ಶಕ್ತಿ ಹೊಂದಿದೆ ಎಂದರು. ಕೋವಿಡ್ ಸಮಯದಲ್ಲಿ ಹೆಚ್ಚು ಪ್ರಾಮುಖ್ಯತೆ ವಹಿಸಿದ ಸಾಮಾಜಿಕ ಮಾಧ್ಯಮವನ್ನು ನಂತರದ ದಿನಗಳಲ್ಲಿ ಹೆಚ್ಚಾಗಿ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ. ಇದರಿಂದ ಹೇಗೆ ತಪ್ಪಿಸಿಕೊಳ್ಳಬೇಕು…

Read More

ತುಮಕೂರು:  ರುಡ್‌ ಸೆಟ್ ಸಂಸ್ಥೆಯ ವತಿಯಿಂದ 30 ದಿನಗಳ ಉಚಿತ ಬ್ಯೂಟಿ ಪಾರ್ಲರ್ ತರಬೇತಿ ನೀಡಲು ಆಸಕ್ತ ಗ್ರಾಮೀಣ ನಿರುದ್ಯೋಗಿ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವವರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಬಿಪಿಎಲ್ ಕಾರ್ಡ್ ಅಥವಾ ಜಾಬ್ ಕಾರ್ಡ್ ಹಾಗೂ ಆಧಾರ್ ಕಾರ್ಡನ್ನು ಕಡ್ಡಾಯವಾಗಿ ಹೊಂದಿರಬೇಕು. ತರಬೇತಿಯು ಮಾರ್ಚ್ 4 ರಿಂದ ಪ್ರಾರಂಭವಾಗಲಿದ್ದು, ಕಡ್ಡಾಯವಾಗಿ ವಸತಿಯುತವಾಗಿರುತ್ತದೆ. ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ನೀಡಲಾಗುವುದು. ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್‌ ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9380162042, 9241482541, 9740982585, 9113880324ನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಬೆಂಗಳೂರು ಶಾಖೆ ನಿರ್ದೇಶಕ ರವಿಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ತುಮಕೂರು:  ಬೆವಿಕಂ ನಗರ ಉಪವಿಭಾಗ–1ಕ್ಕೆ ಸಂಬಂಧಿಸಿದಂತೆ ಅಟಲ್  ಭೂಜಲ್ ಕಾಮಗಾರಿ ಕೈಗೊಂಡಿರುವುದರಿಂದ ಜನವರಿ 6, 8, 10, 12, 14, 16 ಮತ್ತು 18ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿಗೇಟ್, ಕುಂಟಮ್ಮನತೋಟ, ದಿಬ್ಬೂರು, ಬಿ.ಹೆಚ್.ಪಾಳ್ಯ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿ ಹಾಗೂ ಜನವರಿ 7, 9, 11, 13, 15, 17ರಂದು ಹನುಮಂತಪುರ, ಕುವೆಂಪುನಗರ, ಆದರ್ಶನಗರ, ಅಣ್ಣೇತೋಟ, ಜಗನ್ನಾಥಪುರ, ಶಾರದಾ ದೇವಿ ನಗರ, ಗಣೇಶ ನಗರ ನಿರ್ವಾಣಿ ಲೇಔಟ್‌ನಲ್ಲಿ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಮಧ್ಯಂತರ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ನಾಗರಾಜು ಹೆಚ್.ಪಿ. ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು:  ಮಹಾತ್ಮ ಗಾಂಧಿ ನರೇಗಾ ಯೋಜನೆಯ ಪರಿಣಾಮಕಾರಿ ಅನುಷ್ಠಾನ, ಅತಿ ಹೆಚ್ಚು ಮಾನವ ದಿನಗಳ ಸೃಜನೆ, ಹೆಚ್ಚು ಜನರಿಗೆ ಉದ್ಯೋಗ ನೀಡಿಕೆ, ಶಾಲಾ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಹಾಗೂ ಜಿಲ್ಲೆಯ ವಿನೂತನ ಕಾರ್ಯಕ್ರಮಗಳನ್ನು ಪರಿಗಣಿಸಿ ತುಮಕೂರು ಜಿಲ್ಲಾ ಪಂಚಾಯಿತಿಗೆ 2025ರ ನರೇಗಾ ಪ್ರಶಸ್ತಿ, ಉತ್ತಮ ಗ್ರಾಮ ಪಂಚಾಯತಿ ಪ್ರಶಸ್ತಿ ಹಾಗೂ ಕಾಯಕ ಬಂಧು ಗಂಗಮ್ಮ ಅವರಿಗೆ ಮೇಟ್ ಪ್ರಶಸ್ತಿ ಸೇರಿ 3 ಪ್ರಶಸ್ತಿಗಳು ಲಭಿಸಿವೆ. ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ನರೇಗಾ ಹಬ್ಬ–2025ರಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರು ತುಮಕೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಭು ಜಿ. ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು. ಈ ವೇಳೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಅಭಿವೃದ್ಧಿ ಆಯುಕ್ತರು ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಉಮಾಮಹದೇವನ್, ಅಪರ ಮುಖ್ಯ ಕಾರ್ಯದರ್ಶಿ(ಗ್ರಾಮೀಣಾಭಿವೃದ್ಧಿ) ಅಂಜುಮ್ ಪರ್ವೇಜ್, ಗ್ರಾಮೀಣಾಭಿವೃದ್ಧಿ ಆಯುಕ್ತ ಪವನ್ ಕುಮಾರ್ ಮಲಪಾಟಿ ಉಪಸ್ಥಿತರಿದ್ದರು. ನರೇಗಾ…

Read More

ತುಮಕೂರು:  ಪ್ರವಾಸೋದ್ಯಮ ಇಲಾಖೆ ವತಿಯಿಂದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ನೀಡಲಾಗುವ 1 ತಿಂಗಳ ವಸತಿ ಸಹಿತ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ 10ರವರೆಗೆ ವಿಸ್ತರಿಸಲಾಗಿದೆ. ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಸಹಾಯಧನ ನೀಡಲಾಗುವುದು. ಅರ್ಜಿದಾರರು ಪ.ಜಾತಿ ಅಥವಾ ಪ.ಪಂಗಡಕ್ಕೆ ಸೇರಿದವರಾಗಿದ್ದು, 20 ರಿಂದ 45 ವರ್ಷದೊಳಗಿನವರಾಗಿರಬೇಕು ಹಾಗೂ 10ನೇ ತರಗತಿಯಲ್ಲಿ ಉತ್ತೀರ್ಣರಾಗಿದ್ದು, ಲಘು ವಾಹನ ಚಾಲನಾ ಪರವಾನಗಿಯನ್ನು ಪಡೆದಿರಬೇಕು. ನಗರ ಪ್ರದೇಶದವರ ವಾರ್ಷಿಕ ಆದಾಯ 2 ಲಕ್ಷ ರೂ. ಹಾಗೂ ಗ್ರಾಮಾಂತರ ಪ್ರದೇಶದವರ ವಾರ್ಷಿಕ ಆದಾಯ 1.50ಲಕ್ಷ ರೂ.ಗಳನ್ನು ಮೀರಬಾರದು. ಯಾವುದೇ ಸರ್ಕಾರಿ ಇಲಾಖೆ ಅಥವಾ ನಿಗಮ ಮಂಡಳಿಗಳಲ್ಲಿ ಖಾಯಂ ನೌಕರಿಯಲ್ಲಿರಬಾರದು. ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಮಟ್ಟದ ಪ್ರವಾಸೋದ್ಯಮ ಕಚೇರಿಯಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ತಹಶೀಲ್ದಾರರಿಂದ ಪಡೆದುಕೊಂಡಿರುವ ಚಾಲ್ತಿಯಲ್ಲಿರುವ ಜಾತಿ/ಆದಾಯ ಪ್ರಮಾಣಪತ್ರ, ಖಾಯಂ ಲಘು ವಾಹನ ಚಾಲನಾ ಪರವಾನಗಿ, ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಆಧಾರ್ ಕಾರ್ಡ್, ಯಾವುದೇ…

Read More

ಕೊರಟಗೆರೆ: ಕರುನಾಡಿನ ಪುಣ್ಯಕ್ಷೇತ್ರ ಕ್ಯಾಮೇನಹಳ್ಳಿ  ಶ್ರೀಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ ಅದ್ದೂರಿಯಾಗಿ ನಡೆಯಿತು. ಬ್ರಹ್ಮ ರಥೋತ್ಸವ ವೇಳೆ ಗರುಡ ಆಗಮನದ ವೇಳೆ ಭಕ್ತರ ಜೈಕಾರ ಮುಗಿಲು ಮುಟ್ಟಿತು. ಬ್ರಹ್ಮರಥೋತ್ಸವದಲ್ಲಿ ರಾಮ, ಲಕ್ಷಣ, ಸೀತೆ ಮತ್ತು ಆಂಜನೇಯ ಸ್ವಾಮಿಯ ವಿಗ್ರಹವನ್ನು ಪ್ರತಿಷ್ಠಾಪನೆ ಮಾಡಿದ ನಂತರ ಆಕಾಶದಲ್ಲಿ ಗರುಡದೇವರ ಆಗಮನವಾಗಿ ಮೂರು ಸುತ್ತು ಪ್ರದಕ್ಷಿಣೆ ಹಾಕಿದ ನಂತರ ಗೃಹಸಚಿವ ಡಾ.ಜಿ.ಪರಮೇಶ್ವರ ರಥೋತ್ಸವಕ್ಕೆ ಚಾಲನೆ ನೀಡಿದರು. ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಕ್ಯಾಮೇನಹಳ್ಳಿ ಸುಪ್ರಸಿದ್ದ ಕಮನೀಯ ಕ್ಷೇತ್ರವಾದ ಶ್ರೀಆಂಜನೇಯ ಸ್ವಾಮಿ ಬ್ರಹ್ಮರಥೋತ್ಸವ ಕಾರ್ಯಕ್ರಮವು ಅದ್ದೂರಿಯಾಗಿ ನಡೆಯಿತು. ಕ್ಯಾಮೇನಹಳ್ಳಿ ಶ್ರೀಆಂಜನೇಯ ಸ್ವಾಮಿ ದರ್ಶನಕ್ಕೆ ಕರ್ನಾಟಕ ರಾಜ್ಯಸೇರಿದಂತೆ ಹೊರ ರಾಜ್ಯದಿಂದಲೂ ಸಾವಿರಾರು ಭಕ್ತಾಧಿಗಳು ಆಗಮಿಸಿ ರಾಮ, ಲಕ್ಷ್ಮಣ, ಸೀತೆ ಮತ್ತು ಆಂಜನೇಯ ಸ್ವಾಮಿಯ ದರ್ಶನ ಪಡೆದರು. 5 ಸಾವಿರ ವರ್ಷಗಳ ಇತಿಹಾಸವುಳ್ಳ ಪ್ರಸಿದ್ದ ಕಮನೀಯ ಕ್ಷೇತ್ರ ಶ್ರೀಆಂಜನೇಯ ದೇವಾಲಯದ ರಾಜಗೋಪುರ ಶಿಲಾನ್ಯಾಸ ಕಾರ್ಯಕ್ರಮಕ್ಕೆ  ಗೃಹಸಚಿವ ಡಾ.ಜಿ.ಪರಮೇಶ್ವರ ಚಾಲನೆ ನೀಡಿದರು. 24 ರಾಸುಗಳಿಗೆ ಬಹುಮಾನ ವಿತರಣೆ: ಕ್ಯಾಮೇನಹಳ್ಳಿ ದನಗಳ ಜಾತ್ರೆಯಲ್ಲಿ…

Read More

ವರದಿ : ಮಂಜುಸ್ವಾಮಿ ಎಂ.ಎನ್. ತುಮಕೂರು: ಸಿಎಂ ಸಿದ್ದರಾಮಯ್ಯ ಕರ್ನಾಟಕ ಸರಕಾರದ 17ನೇ ಬಜೆಟ್ ಮಂಡನೆ ಮಾಡ್ತಾರೇ. ಬಜೆಟ್‍ನಲ್ಲಿ ಗ್ರಾಮೀಣ ಭಾಗದ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡುವಂತೆ ಸಿಎಂಗೆ ನಾನು ಮನವಿ ಮಾಡಿದ್ದೇನೆ. ಗ್ಯಾರಂಟಿ ಯೋಜನೆಯ ಜೊತೆ ಗ್ರಾಮೀಣ ಭಾಗದ ಅಭಿವೃದ್ದಿಯು ಆಗಲಿದೆ. ಟೀಕೆ ಮಾಡೋರಿಗೆ ನಾನು ಅಭಿವೃದ್ದಿಯ ಉತ್ತರವನ್ನೇ ನೀಡೋಣ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು. ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಜೆಟ್ಟಿಅಗ್ರಹಾರ ಗ್ರಾ.ಪಂ. ವ್ಯಾಪ್ತಿಯ ಜಂಪೇನಹಳ್ಳಿ ಕ್ರಾಸಿನ ಬಳಿ ಪಿಡ್ಲ್ಯೂಡಿ ಇಲಾಖೆಯಿಂದ ಬುಧವಾರ ಏರ್ಪಡಿಸಲಾಗಿದ್ದ 26 ಕೋಟಿ ವೆಚ್ಚದ ವಿವಿಧ ರಸ್ತೆ ಅಭಿವೃದ್ದಿ ಕಾಮಗಾರಿಗಳಿಗೆ ಗುದ್ದಲಿಪೂಜೆ ನೇರವೇರಿಸಿ ಮಾತನಾಡಿದರು. ಬಜೆಟ್‍ನಲ್ಲಿ ತುಮಕೂರು ಜಿಲ್ಲೆ ಮತ್ತು ಕೊರಟಗೆರೆ ಕ್ಷೇತ್ರದ ನೀರಾವರಿ ಯೋಜನೆಗೆ ಹೆಚ್ಚಿನ ಅನುದಾನ ಸಿಗಲಿದೆ. ಕೊರಟಗೆರೆ ಪ.ಪಂ.ಯನ್ನು ಪುರಸಭೆಯನ್ನಾಗಿ ಮಾಡಲು ಈಗಾಗಲೇ ಸರಕಾರ ಚಿಂತನೆ ನಡೆಸುತ್ತಿದೆ. ಜಂಪೇನಹಳ್ಳಿ ಕ್ರಾಸ್‍ ನಲ್ಲಿ ಕುಡಿಯುವ ನೀರು, ಹೈಮಾಸ್ಕ್ ಲೈಟ್ ವ್ಯವಸ್ಥೆ ಮಾಡಿಸುತ್ತೇನೆ. ಸರಕಾರದಲ್ಲಿ ದುಡ್ಡಿಲ್ಲ ಅಭಿವೃದ್ದಿ ಕೆಲಸಗಳು ಆಗ್ತಿಲ್ಲ ಎಂಬ ತಪ್ಪು…

Read More

ಪಾವಗಡ: 7 ವರ್ಷದ ಬಾಲಕ ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದು, ಬಾಲಕನ ಪೋಷಕರು ವೈದ್ಯರ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ಆರೋಪಿಸಿ ಪ್ರತಿಭಟನೆ ನಡೆದಿದ್ದಾರೆ. ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಪಾವಗಡ ಪಟ್ಟಣದ ಬಾಬೈನ ಗುಡಿ ಬೀದಿಯ ಹರಿಕುಮಾರ್ ಎನ್ನುವವರ ಪುತ್ರ  ಕರುಣಾಕರ್ (7) ಮೃತಪಟ್ಟಿದ್ದನು. ಬಾಲಕನಿಗೆ ಸರಿಯಾಗಿ ಚಿಕಿತ್ಸೆ ನೀಡದ ಹಿನ್ನೆಲೆ ಸಾವನ್ನಪ್ಪಿದ್ದಾನೆ ಎಂದು ಪಟ್ಟಣದ ಸುಧಾ ಕ್ಲಿನಿಕ್ ಬಳಿ ಬಾಲಕನ ಕುಟುಂಬಸ್ಥರು ಮೃತಪಟ್ಟ ಬಾಲಕನ ಶವವಿಟ್ಟು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮೃತ ಬಾಲಕನ ತಂದೆ ಹರಿಕುಮಾರ್ ಮಾತನಾಡಿ, ಸೋಮವಾರದಿಂದ ನಾವು ಪಟ್ಟಣದ ಸುಧಾ ಕ್ಲಿನಿಕ್ ಸುಧಾಕರ್ ರೆಡ್ಡಿ ಅವರ ಬಳಿ ಮಗುವಿಗೆ ಚಿಕಿತ್ಸೆ ಕೊಡಿಸುತ್ತಿದ್ದು, ಡೆಂಗಿ ಜ್ವರ ಎಂದು ಹೇಳಿದರು ಮಗುವಿನ ದೇಹ ತಣ್ಣಗಾದ ಕೊನೆ ಕ್ಷಣದಲ್ಲಿ ಬೆಂಗಳೂರಿಗೆ ಹೋಗಿ ಎಂದು ತರ ತುರಿಯಲ್ಲಿ ಹೇಳಿ ಆಸ್ಪತ್ರೆ ಬಾಗಿಲು ಹಾಕಿಕೊಂಡು ಮನೆಗೆ ಹೋಗಿದ್ದಾರೆ ಎಂದು ಆರೋಪಿಸಿದರು. ವರದಿ: ನಂದೀಶ್ ನಾಯ್ಕ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ…

Read More

ತುಮಕೂರು: ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಮಂಗಳವಾರ ನಗರದ ಎಪಿಎಂಸಿ ಯಾರ್ಡ್ ನಲ್ಲಿರುವ ರಾಗಿ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮಧ್ಯವರ್ತಿಗಳನ್ನು ಸಂಪರ್ಕಿಸಬೇಡಿ : ನಂತರ ರೈತರೊಂದಿಗೆ ಮಾತನಾಡಿದ ಅವರು, ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ಜಿಲ್ಲೆಯಲ್ಲಿ ತೆರೆದಿರುವ 10 ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ. ರೈತರು ಖರೀದಿ ಕೇಂದ್ರದಲ್ಲಿ ಮಧ್ಯವರ್ತಿಗಳನ್ನು ಸಂಪರ್ಕಿಸದೆ ನೇರವಾಗಿ ನಿಯೋಜಿತ ಅಧಿಕಾರಿಗಳನ್ನೇ ಸಂಪರ್ಕಿಸಬೇಕೆಂದು ಮನವಿ ಮಾಡಿದರು. ನೋಂದಣಿಗೆ ಮಾರ್ಚ್ ಅಂತ್ಯದವರೆಗೂ ಅವಕಾಶ: ಖರೀದಿ ಕೇಂದ್ರಗಳಲ್ಲಿ ರಾಗಿ ಖರೀದಿಗಾಗಿ ಮಾರ್ಚ್ 31ರವರೆಗೆ ಮಾತ್ರ ಅವಕಾಶವಿದ್ದು, ರೈತರು ತಡ ಮಾಡದೇ ಅಗತ್ಯ ದಾಖಲೆಗಳೊಂದಿಗೆ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ನೋಂದಣಿ ಮಾಡಿಸಿ ಬೆಂಬಲ ಬೆಲೆ ಯೋಜನೆಯ ಸದುಪಯೋಗ ಪಡೆಯಬೇಕೆಂದರು. ರಾಗಿ ಮಾರಾಟಕ್ಕೆ ಫ್ರೂಟ್ಸ್ ಐಡಿ ಕಡ್ಡಾಯ: ಖರೀದಿ ಕೇಂದ್ರದಲ್ಲಿ ರೈತರು ರಾಗಿ ಮಾರಾಟ ಮಾಡಲು ಕಡ್ಡಾಯವಾಗಿ ಫ್ರೂಟ್ಸ್ ಐಡಿ ಹೊಂದಿರಬೇಕು. ಫ್ರೂಟ್ಸ್ ಐಡಿಗೆ ಸೇರ್ಪಡೆಗೊಂಡಿರುವ ಸರ್ವೆ ನಂಬರ್ಗಳಲ್ಲಿ ಬೆಳೆದ ರಾಗಿಯನ್ನು ಮಾತ್ರ ಖರೀದಿ…

Read More