Subscribe to Updates
Get the latest creative news from FooBar about art, design and business.
- ನಾಳೆ ಕೊರಟಗೆರೆಯಲ್ಲಿ ಡಿಸಿಎಂ ಡಾ.ಜಿ.ಪರಮೇಶ್ವರಗೆ ಮತದಾರರಿಂದ ಅಭಿನಂದನೆ
- ತುಮಕೂರು: ಸರ್ಕಾರಿ ಐಟಿಐ ಆ.31 ರವರೆಗೆ ಪ್ರವೇಶಾವಕಾಶ | SSLC ಫೇಲ್ ಆದವರಿಗೂ ಅವಕಾಶ
- ತುಮಕೂರು: ಹೆತ್ತೇನಹಳ್ಳಿ, ಹೊಳಕಲ್ಲು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಜೂನ್ 14ರಂದು ವಿದ್ಯುತ್ ವ್ಯತ್ಯಯ
- ತುಮಕೂರು: ಜೂ.15ರಂದು ಸಂತಕವಿ ಕನಕದಾಸರ ಕುರಿತು ಸಂಗೀತ ನೃತ್ಯ ರೂಪಕ
- ತುಮಕೂರು: ಜೂ.14ರಂದು ಆರೋಗ್ಯ, ಕಣ್ಣಿನ ತಪಾಸಣೆ
- ತುಮಕೂರು: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
- ಕೆಪಿಟಿಸಿಎಲ್ ಗೆ ಬೇಕಾದ ಭೂಮಿ ಖರೀದಿಗೆ ಕ್ರಮ: ಜಿಲ್ಲಾಧಿಕಾರಿ
- ಹೇಮಾವತಿ ಎಕ್ಸ್’ಪ್ರೆಸ್ ಕೆನಾಲ್ ಯೋಜನೆ ಸ್ಥಗಿತಗೊಳಿಸಿ: ಸರ್ಕಾರಕ್ಕೆ ಶಾಸಕ ಜ್ಯೋತಿಗಣೇಶ್ ಒತ್ತಾಯ
Author: admin
ತುಮಕೂರು: ಯಾವುದೇ ಸಾಹಿತ್ಯ ಜೀವನದ ನೇರ ಪ್ರತಿಬಿಂಬವಲ್ಲ. ಜೀವನದಲ್ಲಿ ಇಲ್ಲದೆ ಇರುವುದು ಸಾಹಿತ್ಯದಲ್ಲಿ ಇರುತ್ತದೆ. ಇದು ಮೂಲಭೂತವಾಗಿ ಸಾಹಿತ್ಯ ಅಷ್ಟೇ ಅಲ್ಲ, ಎಲ್ಲಾ ಕಲೆಗಳಿಗೂ ಅನ್ವಯಿಸುತ್ತದೆ ಎಂದು ಕಥೆಗಾರ ಎಸ್.ದಿವಾಕರ್ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯದ ಡಿವಿಜಿ ಕನ್ನಡ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಮಂಗಳವಾರ ಹಮ್ಮಿಕೊಂಡಿದ್ದ ‘ಸಣ್ಣ ಕಥೆ: ಒಂದು ಅನುಸಂಧಾನ’ ಕುರಿತ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಣ್ಣ ಕಥೆ, ಒಂದು ಹಾಸ್ಯ ಪ್ರಸಂಗ, ಗದ್ಯ ಅಥವಾ ಒಂದು ಘಟನೆಯ ವರದಿ ಮತ್ತು ಒಬ್ಬ ವ್ಯಕ್ತಿಯ ಚಿತ್ರಣ ಅಲ್ಲ, ಇದು ಕಥೆಯದ್ದೇ ಮತ್ತೊಂದು ಆಯಾಮವಾಗಿದೆ. ಕಥೆ ಸೃಷ್ಟಿಯಾಗುವುದು ಜೀವನದ ಅನುಭವಗಳಿಂದ ಎಂಬುದಕ್ಕಿಂದಲೂ ಸುತ್ತಲಿನ ವಾತಾವರಣ ಹಾಗೂ ಕಲ್ಪನಾಶಕ್ತಿಯಿಂದ ಎಂದರು. ಕಥೆಗಳನ್ನು ಮೌಖಿಕವಾಗಿಯೇ ಹೇಳುವ ಕಾಲವಿತ್ತು. ಈಗ ಪುಸ್ತಕದಲ್ಲಿ ಓದಬೇಕಿದೆ. ಕಥೆ ಚಿಕ್ಕದಾದರೂ ಪಾತ್ರಗಳನ್ನು ಹಿಡಿದಿಟ್ಟುಕೊಂಡು ಓದಿಸಿಕೊಳ್ಳುವಂತಿರಬೇಕು. ಸಂಗೀತ, ನಾಟಕ, ಚಿತ್ರಕಲೆ, ನೃತ್ಯ ಕಲೆ ಇವುಗಳಿಗೆಲ್ಲ ಪಠ್ಯಕ್ರಮ ಹಾಗೂ ಗುರುಗಳ ಅವಶ್ಯಕತೆ ಇದೆ. ಆದರೆ ಸಾಹಿತ್ಯ, ಸಣ್ಣ ಕಥೆಗಳ ರಚನೆಗೆ ಪಠ್ಯಕ್ರಮದ…
ವರದಿ : ಮಂಜುಸ್ವಾಮಿ ಎಂ.ಎನ್. ಕೊರಟಗೆರೆ: ತಾಲೂಕಿನ ಅಕ್ಕಿರಾಂಪುರ ಗ್ರಾಮ ಪಂಚಾಯಿತಿಗೆ 15 ದಿನಕ್ಕೊಮ್ಮೆ ಮಾತ್ರ ಪಿಡಿಓ ಬರ್ತಾರೇ. ಸಾಮಾನ್ಯ ಸಭೆಯೇ ಮಾಡದೇ ಪಿಡಿಓ ಮನೆಯ ಬಳಿ ಹೋಗಿ ಸದಸ್ಯರ ಸಹಿ ಪಡಿತಾರೇ. ಅನುದಾನದ ಲೆಕ್ಕಾ ಕೇಳಿದ್ರೇ ಗ್ರಾ.ಪಂ.ಯ ಪಿಡಿಓ ಮತ್ತು ಅಧ್ಯಕ್ಷೆ ಉಡಾಫೆ ಉತ್ತರ ನೀಡ್ತಾರೇ ಎಂದು ಆರೋಪಿಸಿ ಸದಸ್ಯರು ಪ್ರತಿಭಟನೆ ನಡೆಸಿರುವ ಘಟನೆ ಮಂಗಳವಾರ ನಡೆದಿದೆ. ಕೊರಟಗೆರೆ ತಾಲೂಕು ಹೊಳವನಹಳ್ಳಿ ಹೋಬಳಿ ಅಕ್ಕಿರಾಂಪುರ ಗ್ರಾ.ಪಂ.ಯ ಮಧುಸೂಧನ್ ಮತ್ತು ಲೋಕೇಶ್ ಎಂಬ ಸದಸ್ಯರು ತಮ್ಮ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿ, ಅಧ್ಯಕ್ಷೆಯ ಪತಿ ನಾಗರಾಜು ಮತ್ತು ಪಿಡಿಓ ರವಿಕುಮಾರ್ ವಿರುದ್ದ ತಕ್ಷಣ ಶಿಸ್ತುಕ್ರಮ ಕೈಗೊಳ್ಳುವಂತೆ ಗ್ರಾ.ಪಂ. ಕಚೇರಿ ಮುಂಭಾಗ ಸ್ಥಳೀಯರ ಜೊತೆಗೂಡಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಅಕ್ಕಿರಾಂಪುರ ಗ್ರಾ.ಪಂ. ಸದಸ್ಯ ಮಧುಸೂಧನ್ ಮಾತನಾಡಿ, ಗ್ರಾಪಂ ಸಾಮಾನ್ಯ ಸಭೆ ಮಾಡಿ 6 ತಿಂಗಳಾಗಿದೆ. ಅಭಿವೃದ್ದಿಯ ಬಗ್ಗೆ ಪ್ರಶ್ನಿಸಿದ್ರೇ ಗ್ರಾ.ಪಂ. ಪಿಡಿಓ ಉಡಾಫೆ ಉತ್ತರ ನೀಡ್ತಾರೇ. ಜನರಿಗೆ ಉತ್ತರ ಕೊಡಲು ಆಗದೇ…
ತುಮಕೂರು: ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ಹೊಸಹಳ್ಳಿ ಗ್ರಾಮದ ಗಂಗರಾಜುಗೆ ವಿಶೇಷ ಪ್ರಕರಣದಡಿ ನಿವೇಶನ ಕಲ್ಪಿಸಬೇಕೆಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿ.ಪ್ರಭು ಅವರಿಗೆ ಸೂಚನೆ ನೀಡಿದರು. ನಗರದಲ್ಲಿಂದು ಸಚಿವರ ಭೇಟಿಗಾಗಿ ಕಾದು ಕುಳಿತಿದ್ದ ವಿಕಲಚೇತನ ಗಂಗರಾಜು ಅವರನ್ನು ಕಂಡ ಸಚಿವರು ಹತ್ತಿದ್ದ ಕಾರಿನಿಂದಿಳಿದು ಗಂಗರಾಜು ಬಳಿ ತೆರಳಿ ಮನವಿ ಅರ್ಜಿ ಸ್ವೀಕರಿಸಿ ವಿಚಾರಿಸಿದರು. ಹುಟ್ಟುವಾಗಲೇ ಶೇ.80ರಷ್ಟು ಅಂಗವೈಕಲ್ಯ ಹೊಂದಿರುವ ಗಂಗರಾಜು ಅವರು ತುಮಕೂರು ತಾಲೂಕು ಕೋರ ಹೋಬಳಿ ಅರಕೆರೆ ಗ್ರಾಮ ಪಂಚಾಯತಿ ಹೊಸಹಳ್ಳಿ ಗ್ರಾಮದಲ್ಲಿ 20 x 15 ಜಾಗದಲ್ಲಿ ಸುಮಾರು 20 ವರ್ಷಗಳಿಂದ ಅಂಗಡಿಯನ್ನಿಟ್ಟುಕೊಂಡು ಬದುಕಿಗಾಗಿ ಆಸರೆ ಪಡೆದುಕೊಂಡಿದ್ದೇನೆ. ಸದರಿ ಜಾಗವನ್ನು ನನ್ನ ಹೆಸರಿಗೆ ಖಾತೆ ಮಾಡಿಕೊಡಬೇಕೆಂದು ಸಚಿವರಲ್ಲಿ ಮನವಿ ಮಾಡಿದರು. ಮನವಿಗೆ ಸ್ಪಂದಿಸಿದ ಪರಮೇಶ್ವರ ಸ್ಥಳದಲ್ಲಿದ್ದ ಜಿಲ್ಲಾ ಪಂಚಾಯತಿ ಸಿಇಓ ಅವರಿಗೆ ಕೂಡಲೇ ಕ್ರಮ ಕೈಗೊಂಡು ವರದಿ ನೀಡಬೇಕೆಂದು ಸೂಚಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಹೆಚ್ಚುವರಿ ಪೊಲೀಸ್…
ಔರಾದ್: ಔರಾದ್–ಬಿ ಪೊಲೀಸ್ ಠಾಣಾ ವ್ಯಾಪ್ತಿಯ ಔರಾದ ಪಟ್ಟಣದ ಕುಮಾರ ಪ್ಯಾಲೇಸ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜೂಜಾಟದಲ್ಲಿ ತೊಡಗಿದ್ದ ಆರೋಪಿಯ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಆರೋಪಿಯಿಂದ 860 ರೂಪಾಯಿಗಳನ್ನು ವಶಕ್ಕೆ ಪಡೆದು ಕಾನೂನು ರೀತಿಯ ಕ್ರಮಕೈಗೊಂಡಿದ್ದಾರೆ. ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರ ನಿರ್ದೇಶನದಂತೆ ಪಿ.ಎಸ್.ಐ. ವಸೀಮ ಪಟೇಲ್ ತಮ್ಮ ಸಿಬ್ಬಂದಿಯೊಂದಿಗೆ ದಾಳಿ ನಡೆಸಿದ್ದು, ಆರೋಪಿಯ ವಿರುದ್ಧ ಕಾನೂನು ಕ್ರಮ ಕೈಗೊಂಡಿದ್ದಾರೆ. ಮಟ್ಕಾ ಜೂಜಾಟ ದಾಳಿಯಲ್ಲಿ ಶ್ರಮಿಸಿದ ಔರಾದ–ಬಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರ ಕಾರ್ಯಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಶ್ಲಾಘಿಸಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx
ಬೀದರ್: ಮಾರ್ಚ್ 21ರಿಂದ ಜರುಗಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸದ್ಯದ ಶೈಕ್ಷಣಿಕ ಚಟುವಟಿಕೆಯನ್ನು ವೀಕ್ಷಿಸಲು ಬೀದರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ನಗರದ ನೌಬಾದ ಸರ್ಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿ ಮಕ್ಕಳ ಅಭ್ಯಾಸ ಕ್ರಮವನ್ನು ಪರಿಶೀಲಿಸಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳೊಂದಿಗೆ ಗಣಿತ ವಿಷಯ ಕುರಿತು ಸಂವಾದ ನಡೆಸಿ, ಈವರೆಗೆ ಕಲಿತ ಗಣಿತ ಪಾಠಗಳ ಪ್ರಶ್ನೆಗಳನ್ನು ಬಿಡಿಸುವಂತೆ ಹೇಳಿದಾಗ ವಿದ್ಯಾರ್ಥಿಗಳು ಒಂದೆರಡು ಪ್ರಶ್ನೆಗಳನ್ನು ಸರಾಗವಾಗಿ ಬಿಡಿಸಿದರು. ನಂತರ ಗಣಿತ ಪಠ್ಯ ಕ್ರಮದ ಒಂದೆರಡು ಪಾಠಗಳನ್ನು ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳು ಬೋಧಿಸಿದರು. ವಿದ್ಯಾರ್ಥಿಗಳಿಗೆ ಇನ್ನು ಹೆಚ್ಚಿನ ತರಬೇತಿಯನ್ನು ಹಾಗೂ ನಿರಂತರ ಪರೀಕ್ಷೆಯನ್ನು ವಾರಕ್ಕೊಮ್ಮೆ ಕೈಗೊಳ್ಳುವಂತೆ ಬೀದರ ತಾಲ್ಲೂಕಾ ಬಿಇಓ ಡಾ.ಬಿ.ಆರ್.ದೊಡ್ಡೆ ಇವರಿಗೆ ಸೂಚಿಸಿದರು. ಈಗಾಗಲೇ ಡಿಸೆಂಬರ ತಿಂಗಳಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳ ಪಠ್ಯಕ್ರಮ ಪೂರ್ಣಗೊಂಡಿದ್ದು, ಉಳಿದ ಮೂರು ತಿಂಗಳಲ್ಲಿ ಪಠ್ಯಕ್ರಮ ಪುನರಾವರ್ತನೆ ಹಾಗೂ ಪಾಸಿಂಗ್ ಪ್ಯಾಕೇಜ್ ನಿಟ್ಟಿನಲ್ಲಿ ವಿಶೇಷ ತರಗತಿಗಳನ್ನು ನಿರಂತರವಾಗಿ ಬೋಧಿಸಲಾಗುತ್ತಿದೆ. ಸದ್ಯ ಬೀದರನಲ್ಲಿ ಸುಮಾರು 8 ಸಾವಿರ ವಿದ್ಯಾರ್ಥಿಳು ಎಸ್.ಎಸ್.ಎಲ್.ಸಿ.…
ಕೊರಟಗೆರೆ: ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಜಿ.ಪರಮೇಶ್ವರ ರವರು ಇಂದು ಮಧ್ಯಾಹ್ನ 2 ಗಂಟೆಗೆ ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಜಂಪೇನಹಳ್ಳಿ ಕ್ರಾಸ್ ಬಳಿ ಲೋಕೋಪಯೋಗಿ ಇಲಾಖೆಯ ಸುಮಾರು 6 ಕೋಟಿ ರೂ ವೆಚ್ಚದ ರಸ್ತೆಯ ಗುದ್ದಲಿ ಪೂಜೆಯನ್ನು ನೆರವೇರಿಸಲಿದ್ದಾರೆ. ಶ್ರೀನಿವಾಸಪುರದಿಂದ ಜಂಪೇನಹಳ್ಳಿವರೆಗೆ ಅಭಿವೃದ್ದಿ ಪಡಿಸುವ ಈ ರಸ್ತೆಯು 2.23 ಕಿ.ಮೀ. ಉದ್ದ, 7 ಮೀಟರ್ ಅಗಲ ಇದ್ದು 4 ಕಲ್ವರ್ಟ್ಗಳನ್ನು ಹೊಂದಿದೆ, ಇದೇ ಇಲಾಖೆ ಇಂದ ರಾಹುತನಹಳ್ಳಿ ಮುಖಾಂತರ ಕೋಳಾಲ – ಊರ್ಡಿಗೆರೆ ಸರ್ಕಲ್ ವರೆಗೆ 11.50 ಕೋಟಿ ಗಳಲ್ಲಿ ರಸ್ತೆ ಅಭಿವೃದ್ದಿಯಾಗುತ್ತಿದ್ದು, 4.35 ಕಿ.ಮೀ ಉದ್ದ, 7.00 ಮೀಟರ್ ಅಗಲ, 4.00 ಕಲ್ವರ್ಟ್ಗಳನ್ನು ಹೊಂದಿದೆ. ಈಗಾಗಲೇ ಈ ರಸ್ತೆಯ ಅಭಿವೃದ್ದಿಗೆ ಮುಖ್ಯಮಂತ್ರಿಗಳು ತುಮಕೂರಿನಲ್ಲಿ ಚಾಲನೆ ನೀಡಿದ್ದಾರೆ. ಇಂದು ರಥಸಪ್ತಮಿ ದಿನವಾಗಿದ್ದು ಇಂದು ನಡೆಯುವ ಪ್ರಸಿದ್ದ ಕ್ಯಾಮೇನಹಳ್ಳಿಯ ಆಂಜನೇಯ ಸ್ವಾಮಿಯ ರಥೋತ್ಸವ ಹಾಗೂ ಕುರಂಕೋಟೆಯ ದೊಡ್ಡಕಾಯಪ್ಪ ಸ್ವಾಮಿಯ ಜಾತ್ರೆಗೆ ಗೃಹ ಸಚಿವರು ಆಗಮಿಸಲಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್…
ತುಮಕೂರು: ಇತ್ತೀಚಿಗೆ ಬದಲಾಗುತ್ತಿರುವ ತಾಂತ್ರಿಕ ವ್ಯವಸ್ಥೆಗಳು ಮಾನವನಿಗೆ ಸಹಕಾರಿ, ಸಹಾಯವು ಅಲ್ಲದೆ ಆರ್ಥಿಕವಾಗಿಯೂ ಅಪಾಯ ತಂದುಡ್ಡುವಂತಹ ವ್ಯವಸ್ಥೆಗೆ ದಾರಿ ಮಾಡಿಕೊಟ್ಟಿದ್ದು, ಸಮಾಜದಲ್ಲಿ ಹೆಚ್ಚುತ್ತಿರುವ ಸೈಬರ್ ಕ್ರೈಂ ಸುರಕ್ಷತೆಗೆ ಸುಧಾರಿತ ಮತ್ತು ಪರಿಣಾಮಕಾರಿಯಾದಂತಹ ತಾಂತ್ರಿಕ ವ್ಯವಸ್ಥೆ ರೂಪುಗೊಳ್ಳಬೇಕಾಗಿದ್ದು, ಇಂದಿನ ತಾಂತ್ರಿಕ ವ್ಯವಸ್ಥೆಗಳ ಅಡಿಯಲ್ಲಿ ತುಮಕೂರು ಮಹಾನಗರ ಪಾಲಿಕೆಯ ತುಮಕೂರು ನಗರ ಟ್ರಾಪಿಕ್ ಜಾಮ್ ಸಮಸ್ಯೆ, ಇತರೆ ವುಷಗಳಿಂದ ಸುರಕ್ಷಿತವಾಗಿ ರಕ್ಷಣೆಯಲ್ಲಿದೆ ಎಂದು ತುಮಕೂರು ಮಹಾನಗರ ಪಾಲಿಕೆ ಆಯುಕ್ತರಾದ ಬಿ.ಅಶ್ವಿಜಾ ಅವರು ತಿಳಿಸಿದರು. ತುಮಕೂರು ನಗರ ಹೊರವಾಲಯದ ಶ್ರೀ ಸಿದ್ಧಾರ್ಥ ಸ್ಕೂಲ್ ಆಫ್ ಇಂಜಿನಿಯರಿಂಗ್ಕಾಲೇಜಿನಲ್ಲಿ ಒಂದು ವಾರಗಳ ಕಾಲ ಏರ್ಪಡಿಸಲಾಗಿದ್ದ ‘ಇ’ ಆಡಳಿತದ ಸುರಕ್ಷತೆ ಮತ್ತು ಸೈಬರ್ ಕ್ರೈಂ ವಸ್ತುಸ್ಥಿತಿ ಆಧುನಿಕ ಕೃತಕ ಬುದ್ಧಿಮತ್ತೆ ವಿಷಯ ಕುರಿತಾದ ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ಇಡೀ ರಾಜ್ಯದಲ್ಲಿ ತುಮಕೂರು ನಗರ ಅತಿ ವೇಗವಾಗಿ ಬೆಳೆಯುತ್ತಿದೆ. ಅನೇಕ ತಂತ್ರಜ್ಞಾನದ ವ್ಯವಸ್ಥೆಗಳು ಇಲ್ಲಿಗೆ ಅವಶ್ಯಕವಾಗಿದ್ದು, ತುಮಕೂರು ನಗರ ಸ್ಮಾರ್ಟ್ ಸಿಟಿಯಾಗಿ ಅನೇಕ ಬದಲಾವಣೆಗಳನ್ನು ಕಂಡಿದೆ.…
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದಬ್ಬಾಳಿಕೆ ತಡೆಗೆ ಸರ್ಕಾರದ ಕ್ರಮ : ಅನಗತ್ಯ ಕಿರುಕುಳ ತಪ್ಪಿಸಲು ನಿಯಮಗಳ ಪಾಲನೆಗೆ ಸೂಚನೆ
ಬೆಂಗಳೂರು: ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ತಮ್ಮ ಅವಶ್ಯಕತೆಗಳಿಗಾಗಿ ಸಣ್ಣ ಫೈನಾನ್ಸ್ ಕಂಪನಿಗಳಲ್ಲಿ ಸಾಲ ಪಡೆದು,ಮರುಪಾವತಿಸುವಲ್ಲಿ ವಿಳಂಬ ಮಾಡಿದ ಸಾಲಗಾರರ ಮೇಲೆ ಅನಧಿಕೃತ ಲೇವಾದೇವಿದಾರರು,ಹಣಕಾಸು ಸಂಸ್ಥೆಗಳಿಂದ ಆಗುತ್ತಿರುವ ದಬ್ಬಾಳಿಕೆ, ದೌರ್ಜನ್ಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ದೌರ್ಜನ್ಯ ತಡೆಗೆ ಹಲವು ಕ್ರಮಗಳನ್ನು ತೆಗೆದುಕೊಂಡಿದೆ. ತುರ್ತು ವೈದ್ಯಕೀಯ ಚಿಕಿತ್ಸೆ, ಮಕ್ಕಳ ವಿದ್ಯಾಭ್ಯಾಸ, ಮದುವೆ ಇನ್ನಿತರ ಖರ್ಚಿಗಾಗಿ ತುರ್ತಾಗಿ ಕೈ ಸಾಲ ಪಡೆಯುವ ಪದ್ಧತಿ ರೂಢಿಯಲ್ಲಿದೆ.ಬಹುತೇಕರು ಪಡೆದ ಸಾಲವನ್ನು ವಾಪಸ್ಸು ನೀಡುತ್ತಾರೆ. ಆದರೆ ಕೆಲವು ವ್ಯಕ್ತಿಗಳು ಸಾಮಾಜಿಕ,ವೈಯಕ್ತಿಕ ಅಥವಾ ಉತ್ಪಾದಕವಲ್ಲದ ಕಾರ್ಯಗಳಿಗಾಗಿ ಹಣ ಖರ್ಚು ಮಾಡುವುದರಿಂದ, ಮರುಪಾವತಿ ಕ್ಷಮತೆ ಕಡಿಮೆ ಇರುತ್ತದೆ. ಇಂತಹ ಸಂದರ್ಭಗಳಲ್ಲಿ ಸಾಲ ನೀಡಿದವರು ಮರು ವಸೂಲಿಗಾಗಿ ಒತ್ತಾಯಿಸುತ್ತಾರೆ.ಕೆಲವೆಡೆ ಇದು ಕಿರುಕುಳವಾಗಿ ಬೆಳೆಯುತ್ತಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ: ಕಳೆದ ಜನವರಿ 25 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ, ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಕರ್ನಾಟಕ ವಲಯದ ಅಧ್ಯಕ್ಷರು, ಭಾರತೀಯ ರಿಸರ್ವ ಬ್ಯಾಂಕ್ (RBI) ನ ಪ್ರಾಂತೀಯ ನಿರ್ದೇಶಕರು, ಹಾಗೂ…
ವರದಿ: ನಂದೀಶ್ ನಾಯ್ಕ ಪಿ. ತುಮಕೂರು ಜಿಲ್ಲೆ ಪಾವಗಡ ತಾಲ್ಲೂಕು ವೈ.ಎನ್.ಹೊಸಕೋಟೆ ಹೋಬಳಿಯ ಬಿ.ಹೊಸಹಳ್ಳಿ ಗ್ರಾಮದ ಬೆಟ್ಟಗುಡ್ಡಗಳ ನಡುವೆ ನೆಲೆ ನಿಂತಿರುವ ವನನಂದೀಶ್ವರ ದೇವರ ತಾಣ ಒಂದು ಮನೋಹರ ಕ್ಷೇತ್ರವಾಗಿದೆ. ಸುತ್ತಲೂ ಬೆಟ್ಟಗುಡ್ಡಗಳು, ಮಧ್ಯೆ ತಗ್ಗು ಪ್ರದೇಶ, ಎಲ್ಲವನ್ನೂ ಆವರಿಸಿರುವ ನೀಲಗಿರಿ ನೆಡುತೋಪು, ಪಕ್ಕದಲ್ಲೇ ಕಟ್ಟಿರುವ ಕೆರೆ, ಬೆಟ್ಟಗುಡ್ಡಗಳ ನಡುವೆ ಎದ್ದು ಕಾಣುವ ಹಸಿರು ವನರಾಶಿ, ಈ ಸುಂದರ ಪರಿಸರದ ನಡುವೆ ಸುತ್ತಲೂ ಬಿಲ್ವಪತ್ರೆ ಮರಗಳಿಂದ ಆವೃತವಾದ ಪ್ರಶಾಂತ ವಾತಾವರಣದಲ್ಲಿ ನೆಲೆ ನಿಂತಿರುವ ವನನಂದಿ ಎಲ್ಲರ ಮನಸ್ಸನ್ನು ಸೂಚಿಗಲ್ಲಿನಂತೆ ಮೊದಲ ನೋಟದಲ್ಲೇ ಹಿಡಿದಿಡುತ್ತದೆ. ತಾಲ್ಲೂಕು ಕೇಂದ್ರದಿಂದ ಮರಿದಾಸನಹಳ್ಳಿ ಹಳ್ಳಿಗೆ ಬಂದು ವನಂತರವನ್ನು ಸೇರಬಹುದು ಅಥವಾ ಹೋಬಳಿ ಕೇಂದ್ರವಾದ ವೈ.ಎನ್.ಹೊಸಕೋಟೆ ಬಂದು ಬಿ.ಹೊಸಹಳ್ಳಿಯ ಮೂಲಕ ಸೇರಬಹುದಾಗಿದೆ. ವನಂತರ ಸ್ಥಳವು ಮರಿದಾಸನಹಳ್ಳಿ ಮತ್ತು ಬಿ.ಹೊಸಹಳ್ಳಿ ಮಾರ್ಗಮಧ್ಯೆ ಪಶ್ಚಿಮದಲ್ಲಿ ಇರುವ ಬೆಟ್ಟಗಳ ಸಾಲಿನಲ್ಲಿ ಮುಖ್ಯ ರಸ್ತೆಯಿಂದ ಸುಮಾರು ಕಾಲಳತೆಯ ದೂರದಲ್ಲಿದೆ. ಬಿಲ್ವಪತ್ರೆ ವನದಲ್ಲಿರುವ ವನಂತರ ವನನಂದಿಗೆ ಹರಕೆ ಹೊತ್ತು ಸೋಮವಾರದ ರಾತ್ರಿ ಪೂಜೆ ಸಲ್ಲಿಸಿ ರಾತ್ರಿ…
ಪಾವಗಡ: ತಾಲ್ಲೂಕಿನ ಗುಂಡಾರ್ಲಹಳ್ಳಿ ಗ್ರಾಮದ ಎಂಜಿಎಂ ಪ್ರೌಢಶಾಲೆಯಲ್ಲಿ 2019–20 ನೇ ಸಾಲಿನಲ್ಲಿ 10ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡಿದ ಕೇಶವ ಕೆ.ಎನ್.ಅವರು ಪ್ರಸ್ತುತ ಅದೇ ಶಾಲೆಯಲ್ಲಿ ಈಗ 10ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಯನ್ನು ಸೋಮವಾರದಂದು ವಿತರಣೆ ಮಾಡಿದರು. ಬಳಿಕ ಕೇಶವ ಕೆ.ಎನ್. ಅವರು ಮಾತನಾಡಿ, ನಾನು ಈಗ ಕರ್ನಾಟಕ ರಾಜ್ಯ ಸಹಕಾರ, ಮಹಾ ಮಂಡಳಿ ನಿಯಮಿತ, ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದೇನೆ. ಈ ಕಲಿಕಾ ಸಾಮಗ್ರಿಯನ್ನು ವಿತರಣೆ ಮಾಡುವ ಉದ್ದೇಶ ಏನಂದ್ರೆ, ನಾನು ಓದಿದಂತಹ ಶಾಲೆಗೆ ನನ್ನ ಕೈಲಾದ ಸಹಾಯವನ್ನು ಮಾಡಬೇಕು. ನೀವು ಕೂಡ ಚೆನ್ನಾಗಿ ವಿದ್ಯಾಭ್ಯಾಸ ಮಾಡಿ ಮುಂದೆ ಬರುವ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶವನ್ನು ಪಡೆದು. ನಮ್ಮ ಶಾಲೆಗೆ, ನಮ್ಮ ಗುರುಗಳಿಗೆ, ನಿಮ್ಮ ಊರಿಗೆ ಮತ್ತು ನಿಮ್ಮ ತಂದೆ — ತಾಯಿಗೆ ಒಳ್ಳೆ ಹೆಸರು ತರಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಇದೇ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಶಿವಣ್ಣ, ಗಣಿತ ಶಿಕ್ಷಕರಾದ ಚಂದ್ರಶೇಖರಯ್ಯ,,…