Author: admin

ಕಲಬುರಗಿ: ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ ಎಂದು ನಿನ್ನೆ  ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಶಾಸಕ ಬಿ.ಆರ್.​ ಪಾಟೀಲ್ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಸುಮ್ಮನೇ ರಾಜೀನಾಮೆ ಕೊಟ್ಟಿಲ್ಲ. ಕೆಲವು ಸಮಸ್ಯೆಗಳಿವೆ, ನಾನು ರಾಜಿನಾಮೆ ನೀಡಿದ್ದು ವಿಶೇಷ ಬೆಳವಣಿಗೆಯಲ್ಲ. ಯಾವುತ್ತೋ ರಾಜೀನಾಮೆ ನೀಡಬೇಕಿತ್ತು. ನಿನ್ನೆ ರಾಜೀನಾಮೆ ನೀಡಿದ್ದೇನೆ ಎಂದರು. ನಾನು ಸಿಎಂ ಸಿದ್ದರಾಮಯ್ಯಗೆ 2ನೇ ಬಾರಿಗೆ ಪತ್ರ ಬರೆದಿದ್ದೇನೆ. ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಒತ್ತಡದಲ್ಲಿದ್ದಾರೆ. ಕೊನೇವರೆಗೂ ನಿಮ್ಮ ಸ್ನೇಹಿತನಾಗಿ ಉಳಿಯುತ್ತೇನೆ ಅಂದಿದ್ದಾರೆ ಎಂದು ಬಿ.ಆರ್.ಪಾಟೀಲ್ ತಿಳಿಸಿದರು. ಗ್ಯಾರಂಟಿ ಯೋಜನೆಗಳಿಂದ ಶಾಸಕರ ಕ್ಷೇತ್ರಕ್ಕೆ ಅನುದಾನ ಸಿಗ್ತಿಲ್ಲ. ಹಾಗೆಂದು ನನಗೆ ಯಾವುದೇ ಅಸಮಾಧಾನ ಇಲ್ಲ. ಪತ್ರದಲ್ಲಿ ಸಿಎಂ ಸಿದ್ದರಾಮಯ್ಯಗೆ ಎಲ್ಲವನ್ನೂ ನಾನು ತಿಳಿಸಿದ್ದೇನೆ. ಸಮಸ್ಯೆಗಳನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸುವುದಿಲ್ಲ ಎಂದು ಅವರು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ:…

Read More

ನವದೆಹಲಿ: ಮಧ್ಯಮ ವರ್ಗವು ಯಾವಾಗಲೂ ಪ್ರಧಾನಿ ಮೋದಿಯವರ ಹೃದಯದಲ್ಲಿದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಕೇಂದ್ರ ಬಜೆಟ್ ನಲ್ಲಿ ತೆರಿಗೆ ಹಣ ಕಡಿತ ಶ್ಲಾಘಿಸಿದ ಅವರು, 12 ಲಕ್ಷ ವಾರ್ಷಿಕ ಆದಾಯ ಹೊಂದಿರುವವರಿಗೆ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ ಎಂದರು. ಮಧ್ಯಮ ವರ್ಗದ ಆರ್ಥಿಕ ಯೋಗಕ್ಷೇಮವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮುನ್ನಡೆದಿದೆ, ಈ ಸಂದರ್ಭದಲ್ಲಿ ಎಲ್ಲಾ ಫಲಾನುಭವಿಗಳಿಗೆ ಅಭಿನಂದನೆಗಳು ಎಂದು ಅಮಿತ್‌ ಶಾ ಎಕ್ಸ್‌ ನಲ್ಲಿ ಪೋಸ್ಟ್‌  ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೆಂಗಳೂರು: ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೇತಗಾನಹಳ್ಳಿ ಬಳಿಯ ಸರ್ಕಾರದ ಜಮೀನು ಒತ್ತುವರಿ ಮಾಡಿರುವ ಆರೋಪದ ಹಿನ್ನೆಲೆ ಹೈಕೋರ್ಟ್‌ ಸೂಚನೆಯಂತೆ ತನಿಖೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಕಂದಾಯ ಸಚಿವ ಕೃಷ್ಣ ಬೇರೈಗೌಡ ಈ ಬಗ್ಗೆ ಮಾತನಾಡಿ, ಹೈಕೋರ್ಟ್‌ ಸೂಚನೆಯಂತೆ ತನಿಖೆಗೆ ನಡೆಸಲು ಉನ್ನತ ಅಧಿಕಾರಿಗಳ ತಂಡ ರಚಿಸಲಾಗಿದ್ದು, ಹೈಕೋರ್ಟ್ ಸೂಚನೆಗಳ ಪಾಲಿಸುವಂತೆ ಸೂಚಿಸಲಾಗಿದೆ. ಹೈಕೋರ್ಟ್ ಸೂಚನೆ ನೀಡಿದಾಗ ಸರ್ಕಾರ ಅದನ್ನು ಗೌರವಿಸಬೇಕಾಗುತ್ತದೆ. ಹೈಕೋರ್ಟ್ ನೀಡಿದ ಸಮಯದೊಳಗೆ ಎಸ್‌ ಐಟಿ ತನ್ನ ವರದಿಯನ್ನು ಸಲ್ಲಿಸಲಿದೆ ಎಂದು ಹೇಳಿದರು. ಕೇತಗಾನಹಳ್ಳಿ ಗ್ರಾಮದ ಸರ್ವೆ ಸಂಖ್ಯೆ 8, 9, 10, 16 ಮತ್ತು 79 ರಲ್ಲಿ 14.04 ಎಕರೆ ಸರ್ಕಾರಿ ಭೂಮಿಯನ್ನು ಅತಿಕ್ರಮಣ ಮಾಡಲಾಗಿದೆ ಎಂಬ ಕುಮಾರಸ್ವಾಮಿ ಅವರ ವಿರುದ್ಧ ಕೇಳಿ ಬಂದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೆಳಗಾವಿ:  ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿಯ ಸಾವು ಸಂಭವಿಸಿದೆ.  ಬಾಣಂತಿಯ ಸಾವಿಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಬೆಳಗಾವಿ ತಾಲೂಕಿನ ಕರಡಿಗುದ್ದಿ ಗ್ರಾಮದ ಗಂಗವ್ವ ಗೊಡಕುಂದ್ರಿ (31) ಮೃತಪಟ್ಟವರಾಗಿದ್ದಾರೆ. ಜನವರಿ 28 ರಂದು ಬಿಮ್ಸ್ ಆಸ್ಪತ್ರೆಗೆ ಗಂಗವ್ವ ದಾಖಲಾಗಿದ್ದರು. ಜನವರಿ 30ರ ರಾತ್ರಿ ಗಂಗವ್ವ ಗೊಡಕುಂದ್ರಿ ಅವರಿಗೆ ಹೆರಿಗೆ ಆಗಿತ್ತು. ಗಂಗವ್ವ ಗೊಡಕುಂದ್ರಿ ಅವರಿಗೆ ಬಿಪಿ ಲೋ ಆಗಿ ಸೀರಿಯಸ್ ಇದೆ ಎಂದು ವೈದ್ಯರು ಜ.31ರಂದು ಕುಟುಂಬಸ್ಥರಿಗೆ ತಿಳಿಸಿದ್ದರು. ಇದಾದ ಸ್ಪಲ್ಪ ಹೊತ್ತಿಗೆ ಬಾಣಂತಿ ಗಂಗವ್ವ ಗೊಡಕುಂದ್ರಿ ಮೃತಪಟ್ಟಿದ್ದಾರೆ. ಬಿಮ್ಸ್​ ವೈದ್ಯರ ನಿರ್ಲಕ್ಷ್ಯದಿಂದಲೇ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಸಿರಿಯಸ್ ಇದ್ದಾಗ ವೈದ್ಯರು ಸರಿಯಾಗಿ ಚಿಕಿತ್ಸೆ ಕೊಟ್ಟಿದ್ದರೇ ಅಕ್ಕ ಉಳಿಯುತ್ತಿದ್ದಳು. ನನ್ನ ಅಕ್ಕನ ಸಾವಿಗೆ ವೈದ್ಯರು ಕಾರಣ ಎಂದು ಗಂಗವ್ವ ಸಹೋದರ ಶಂಕರಪ್ಪ ಆರೋಪಿಸಿದ್ದಾರೆ. ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ಬೆಂಗಳೂರು: ಮೈಕ್ರೋ ಫೈನಾನ್ಸ್ ಗಳ ಕಿರುಕುಳಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಹೊಸ ಕಾನೂನು ಜಾರಿಗೆ ಮುಂದಾಗಿದ್ದು, ಈ ಬಗ್ಗೆ ಶನಿವಾರ ಕಾನೂನು ಸಚಿವ ಎಚ್‌.ಕೆ. ಪಾಟೀಲ್ ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹಿರಿಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ್ದಾರೆ. ಸಾಲ ವಿತರಣೆಗಳ ವಿವರಗಳನ್ನು ಪತ್ತೆಹಚ್ಚಲು ಮತ್ತು ನವೀಕರಿಸಲು ಆನ್‌ ಲೈನ್ ಪೋರ್ಟಲ್, ಪಾರದರ್ಶಕತೆಯನ್ನು ಖಚಿತಪಡಿಸುವುದು ಮತ್ತು ಬಡವರನ್ನು ಸಾಲ ಚಕ್ರಗಳಲ್ಲಿ ಸಿಲುಕಿಸುವ ಚಕ್ರ ಬಡ್ಡಿ ಸಾಲವನ್ನು ತಡೆಗಟ್ಟುವುದು ಸೇರಿದಂತೆ ಹಲವಾರು ಪ್ರಮುಖ ವಿಚಾರಗಳ ಕುರಿತು ಸಭೆಯಲ್ಲಿ ಚರ್ಚೆಗಳು ನಡೆದವು. ಈ ವೇಳೆ ಸಚಿವರು ಸಾಮರ್ಥ್ಯಕ್ಕಿಂತ ಅಧಿಕ ಸಾಲ ನೀಡುವ ಮೂಲಕ ಬಡವರನ್ನು ಸಾಲದ ಸುಳಿಗೆ ಸಿಲುಕಿಸುತ್ತಿರುವ ಹುನ್ನಾರವನ್ನು ತಡೆಯಲು ಆನ್ಲೈನ್ ಪೋರ್ಟಲ್ ಮಾಡಿ, ಯಾರಿಗೆ ಎಷ್ಟು ಸಾಲ ನೀಡಲಾಗಿದೆ ಎಂದು ಅಪ್ಡೇಟ್ ಮಾಡಬೇಕು. ಸಾಲಕ್ಕಾಗಿ ಅರ್ಜಿ ಸಲ್ಲಿಕೆ ಹಾಗೂ ಸಾಲ ನೀಡುವ ಸಂಪೂರ್ಣ ಪ್ರಕ್ರಿಯೆಯನ್ನು ಆನ್ಲೈನ್ ಮೂಲಕವೇ ನಿಭಾಯಿಸಬೇಕು. ಸಾಲಕ್ಕೆ ವಿಧಿಸುವ ಬಡ್ಡಿ ದರದ ಪ್ರಮಾಣ ಪಾರದರ್ಶಕ ಹಾಗೂ…

Read More

ತುಮಕೂರು: ಲೋಕಾಯುಕ್ತ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಫೆಬ್ರವರಿ 4ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ತಿಪಟೂರು ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ “ಸಾರ್ವಜನಿಕ ಕುಂದು ಕೊರತೆ ಸಭೆ, ಅಹವಾಲು ಸ್ವೀಕಾರ ಸಭೆ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ”ಯನ್ನು ಏರ್ಪಡಿಸಲಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಪೊಲೀಸ್ ಅಧಿಕ್ಷಕ ಲಕ್ಷ್ಮೀನಾರಾಯಣ ಎ.ವಿ. ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು:  ನವದೆಹಲಿಯ ಕೌನ್ಸಿಲ್ ಫಾರ್ ಮೀಡಿಯಾ ಅಂಡ್ ಸ್ಯಾಟಿಲೈಟ್ ಬ್ರಾಡ್ಕಾಸ್ಟಿಂಗ್ (ಸಿಎಂಎಸ್ಬಿ) ಸಂಸ್ಥೆಯು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಜಂಟಿ ನಿರ್ದೇಶಕ ಸಿದ್ದೇಶ್ವರಪ್ಪ ಜಿ.ಬಿ. ಅವರಿಗೆ ಅತ್ಯುತ್ತಮ ಕ್ಷೇತ್ರ ಪ್ರಚಾರಾಧಿಕಾರಿ ಪ್ರಶಸ್ತಿ ನೀಡಿ ಗೌರವಿಸಿದೆ. ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳ ಕುರಿತು ಮೈಸೂರು ದಸರಾ, ಕೃಷಿ ಮೇಳ, ಉತ್ಸವಗಳಲ್ಲಿ ವಸ್ತು ಪ್ರದರ್ಶನ, ಬೀದಿನಾಟಕ, ಜನಪದ ಸಂಗೀತದ ಮೂಲಕ ಜನಜಾಗೃತಿ, ಸಾಂಸ್ಕೃತಿಕ ನಾಯಕ ಬಸವಣ್ಣ, ಮಹಾತ್ಮ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ‘ಗಾಂಧಿ ಭಾರತ’ ಕಾರ್ಯಕ್ರಮ ಆಯೋಜನೆ ಸೇರಿದಂತೆ ಕ್ಷೇತ್ರ ಪ್ರಚಾರ ಚಟುವಟಿಕೆಗಳ ಯಶಸ್ವಿ ಆಯೋಜನೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ. ಸಿದ್ದೇಶ್ವರಪ್ಪ ಅವರು ಮೂಲತಃ ಸಿರಾ ತಾಲ್ಲೂಕಿನ ಗೊಲ್ಲರಹಳ್ಳಿ ಗ್ರಾಮದವರು. ಬೆಂಗಳೂರಿನ ಎಫ್ಕೆಸಿಸಿಐ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಕೆ.ರವಿ, ಸಂಸ್ಥೆಯ ಅಧ್ಯಕ್ಷ ಡಾ: ಬಿ.ಕೆ.ಬಂಗಾರಿ ಮತ್ತಿತರರು ಪ್ರಶಸ್ತಿ ಪ್ರದಾನ ಮಾಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More

ತುಮಕೂರು:  ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶಿಕ್ಷಣ ಇಲಾಖೆಯಲ್ಲಿ ಖಾಲಿಯಿದ್ದ 13,500 ಶಾಲಾ ಶಿಕ್ಷಕರ ನೇಮಕಾತಿ ಮಾಡಲಾಗಿದೆಯಲ್ಲದೆ ಹೊಸದಾಗಿ 15,000 ಶಾಲಾ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎನ್. ಮಧು ಬಂಗಾರಪ್ಪ ತಿಳಿಸಿದರು. ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶನಿವಾರ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಿಕ್ಷಕರ ಕೊರತೆ ನೀಗಿಸಲು ಹೊಸದಾಗಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಮುಂದಾಗಿದೆ. ಖಾಲಿಯಿರುವ ಶಿಕ್ಷಕರ ಹುದ್ದೆಗಳನ್ನು ಹಂತ–ಹಂತವಾಗಿ ಭರ್ತಿ ಮಾಡಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು. ಸರ್ಕಾರಿ ಶಾಲೆಗಳಲ್ಲಿ ಕ್ಷೀಣಿಸುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚಿಸಲು ಹಲವಾರು ವಿನೂತನ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಲಾಗಿದೆ. ಶಾಲೆಗಳಲ್ಲಿದ್ದ ನ್ಯೂನ್ಯತೆಗಳನ್ನು ಸರಿಪಡಿಸಲಾಗಿದೆ. ಶಾಲೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ವಿಜ್ಞಾನ ಲ್ಯಾಬ್ ಗಳನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು. ಸರ್ಕಾರಿ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಇದರಿಂದ ವಿದ್ಯಾರ್ಥಿಗಳ ಸಂಖ್ಯೆ…

Read More

ತುಮಕೂರು:  ನವದೆಹಲಿಯಲ್ಲಿ ಶನಿವಾರ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಭಾರತೀಯ ಮಧ್ಯಮ ವರ್ಗದವರ ಅಶೋತ್ತರಗಳಿಗೆ ಸ್ಪಂದಿಸುವ ಬಜೆಟ್. ಭಾರತೀಯ ಆರ್ಥಿಕತೆಗೆ ಆದ್ಯತೆ ನೀಡಿದ ಈ ಬಜೆಟ್ ಪ್ರಧಾನ ಮಂತ್ರಿಗಳ ವಿಕಸಿತ್ ಭಾರತದ ಕನಸನ್ನು ಸಾಕಾರ ಮಾಡಲಿದೆ ಎಂದು ಕೇಂದ್ರ ಜಲಶಕ್ತಿ ಮತ್ತು ರೇಲ್ವೆ ಖಾತೆಯ ರಾಜ್ಯ ಸಚಿವ ವಿ. ಸೋಮಣ್ಣ ಬಣ್ಣಸಿದ್ದಾರೆ. ಭಾರತ ಕೃಷಿಕರ ದೇಶ. ಬಜೆಟ್‌ನಲ್ಲಿ ಕೃಷಿಕರ ಎಳಿಗೆಗೆ ಪ್ರಧಾನ ಮಂತ್ರಿ ಧನಧ್ಯಾನ್ಯ ಕೃಷಿ ಯೋಜನೆಯನ್ನು 2025-26ರ ಬಜೆಟ್‌ನಲ್ಲಿ ಘೋಷಿಸಿದ್ದು, ಕಡಿಮೆ ಇಳುವರಿ ತಡೆಗಟ್ಟಲು ಪ್ರಥಮವಾಗಿ ದೇಶದ 100 ಜಿಲ್ಲೆಗಳಲ್ಲಿ ಈ ಯೋಜನೆ ಜಾರಿಗೊಳಿಸಲಾಗಿದೆ. ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಏರಿಸಲಾಗಿದೆ. ಕೃಷಿಕರಿಗೆ ಉತ್ತಮ ಗುಣ ಮಟ್ಟದ ಬೀಜ, ರಸಗೊಬ್ಬರ ಖರೀದಿ ಮತ್ತು ತಂತ್ರಜ್ಷಾನ ಅಳವಡಿಕೆಗೆ ಈ ಯೋಜನೆ ಸಹಕಾರಿಯಾಗಲಿದೆ. ರಸಗೊಬ್ಬರದ ಉತ್ಪಾದನೆಯಲ್ಲಿ ಸ್ವಾವಲಂಬಿತ್ವ ಸಾಧಿಸಲು ಯೋಜನೆ ಸಿದ್ಧಪಡಿಸಲಾಗಿದೆ. ಅಸ್ಸಾಂನಲ್ಲಿ 12.7 ಎಲ್.ಎಮ್.ಟಿ ಸಾಮರ್ಥ್ಯದ ಯೂರಿಯಾ ಪ್ಲಾಂಟ್ ಸ್ಥಾಪನೆಗೆ ಈ…

Read More

ನವದೆಹಲಿ: ಕೇಂದ್ರ ಬಜೆಟ್  “ಗುಂಡೇಟಿನಿಂದ ಆದ ಗಾಯಕ್ಕೆ ಬ್ಯಾಂಡೇಜ್ ನೆರವು” ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಟೀಕಿಸಿದ್ದು, ಕೇಂದ್ರ ಸರ್ಕಾರಕ್ಕೆ ಐಡಿಯಾಗಳೇ ಇಲ್ಲ ಎಂದು ಟೀಕಿಸಿದ್ದಾರೆ. ಎಕ್ಸ್ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಮಾಡಿರುವ ಅವರು, ನಮ್ಮ ಆರ್ಥಿಕ ಬಿಕ್ಕಟ್ಟನ್ನು ಪರಿಹರಿಸಲು ಮಾದರಿ ಬದಲಾವಣೆಯ ಅಗತ್ಯವಿತ್ತು. ಆದರೆ ಈ ಸರ್ಕಾರ ದಿವಾಳಿಯಾಗಿದೆ.  ಐಡಿಯಾಗಳ ದಿವಾಳಿತನದಿಂದ ಕೇಂದ್ರ ಸರಕಾರ ಬಳಲುತ್ತಿದೆ ಎಂದು ಆರೋಪಿಸಿದರು. ಬಿಹಾರದಲ್ಲಿ ಈ ವರ್ಷದ ಕೊನೆಯಲ್ಲಿ ನಡೆಯಲಿರುವ ಚುನಾವಣೆಯನ್ನು ಹಿನ್ನಲೆಯಲ್ಲಿ, ಕೇಂದ್ರ ಸರಕಾರವು ಬಿಹಾರಕ್ಕೆ ಮಖಾನಾ ಮಂಡಳಿ ಸ್ಥಾಪನೆ, ಪಶ್ಚಿಮ ಕೋಸಿ ಕಾಲುವೆಗೆ ಆರ್ಥಿಕ ನೆರವು ಮತ್ತು ಐಐಟಿ ಕೇಂದ್ರಗಳನ್ನು ಹೆಚ್ಚಿಸಲು ವಿವಿಧ ಯೋಜನೆಗಳನ್ನು ಮೀಸಲಿಡಿದೆ ಎಂದು ಕಾಂಗ್ರೆಸ್‌ ಹೇಳಿದೆ. ಅದರೊಂದಿಗೆ, ಅವರು ಆಂಧ್ರಪ್ರದೇಶಕ್ಕೆ ಇಂತಹ ಯಾವುದೇ ಪ್ರಾಧಾನ್ಯತೆ ನೀಡದೇ, ಅದನ್ನು ನಿರ್ಲಕ್ಷಿಸಿದ್ದು ಸರಕಾರದ ಅನುತೇಜಿತ ನೀತಿ ಎಂದು ಕಾಂಗ್ರೆಸ್‌ ತೀವ್ರವಾಗಿ ಖಂಡಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…

Read More