Author: admin

ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದ ಕನ್ನಡ ಕಲಾ ಮತ್ತು ಸಾಂಸ್ಕೃತಿಕ ಮಂಡಳಿಯ ಪದಾಧಿಕಾರಿಗಳು ಶುಕ್ರವಾರ ಸಂಜೆ ಕನ್ನಡ ಭವನದಲ್ಲಿ ವರಕವಿ ದ.ರಾ.ಬೇಂದ್ರೆಯವರ 129ನೇ ಜನ್ಮದಿನಾಚರಣೆಯನ್ನು ಆಚರಿಸಿದರು. ಸಾಹಿತಿ ಡಾ.ಎಚ್.ಕೆ. ನರಸಿಂಹಮೂರ್ತಿ ಅವರು ಬೇಂದ್ರೆ ಅವರ ಕಾವ್ಯ ವೈಶಿಷ್ಟತೆಯ ಬಗ್ಗೆ ತಿಳಿಸಿದರು. ಇದೇ ವೇಳೆ ಕನ್ನಡ ಸಾಹಿತ್ಯ ಪರಿಷತ್ತಿನ ಹೋಬಳಿ ಘಟಕದ ಅಧ್ಯಕ್ಷ ಹೋ.ಮ. ನಾಗರಾಜು, ಮಂಡಳಿಯ ಅಧ್ಯಕ್ಷ ಎ.ಓ. ನಾಗರಾಜು, ಕಾರ್ಯದರ್ಶಿ ಪಿಬಿ ವಿಶ್ವನಾಥ್, ಪದಾಧಿಕಾರಿಗಳಾದ ನಾಗಪ್ಪ ನೂರುದ್ದೀನ್ ಪ್ರಶಾಂತ್ ಕಲಾವಿದ ಶಿವಣ್ಣ ಇದ್ದರು. ವರದಿ: ನಂದೀಶ್ ನಾಯ್ಕ ಪಿ, ಪಾವಗಡ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು: ಕರ್ನಾಟಕ ರಕ್ಷಣಾ ವೇದಿಕೆ, ಕನ್ನಡ ಸೇನೆ ಇದರ ಕಾರ್ಮಿಕ ಘಟಕದ ರಾಜ್ಯ ಉಪಾಧ್ಯಕ್ಷರಾಗಿ ಕಿರಣ್ ಸಿಂಗ್ ಅವರನ್ನು ಆಯ್ಕೆ ಮಾಡಲಾಗಿದೆ. ಕಿರಣ್ ಸಿಂಗ್ ಅವರ ಸಾಮಾಜಿಕ ಸೇವೆಯನ್ನು ಪರಿಗಣಿಸಿ, ಕರ್ನಾಟಕ ರಕ್ಷಣಾ ವೇದಿಕೆ, ಕನ್ನಡ ಸೇನೆಯ ರಾಜ್ಯಾಧ್ಯಕ್ಷರಾದ ಅರುಣ್ ಕುಮಾರ್ ಎನ್. ಅವರ ಆದೇಶದಂತೆ ನಾನು ನುಡಿ ಗಡಿ ರಕ್ಷಣೆ ಹಾಗೂ ಸಂಘಟನೆ ಬಲಪಡಿಸಲು ಸಂಪೂರ್ಣ ಅಧಿಕಾರ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು:  ಜಿಲ್ಲೆಯ ಪಾವಗಡದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ 407 ವಾಹನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಶುಕ್ರವಾರ ರಾತ್ರಿ 9 ಗಂಟೆಯಲ್ಲಿ ಪಾವಗಡ ತಾಲೂಕಿನ ಬುಗುಡೂರು ಗ್ರಾಮದ ತಿರುವಿನ ಬಳಿ ನಡೆದಿದೆ. ಈ ಅಪಘಾತದಲ್ಲಿ ಹತ್ತಕ್ಕೂ ಅಧಿಕ ಜನರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಪಾವಗಡ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ತಕ್ಷಣವೇ ತುಮಕೂರು ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ಅಪಘಾತದ ವಿವರ: ಬಿ.ಹೊಸಳ್ಳಿ ತಾಂಡ ಗ್ರಾಮದ ಲಂಬಾಣಿ ಸಮುದಾಯದ ಪುರುಷರು ಹಾಗೂ ಮಹಿಳಾ ಕಾರ್ಮಿಕರು ತಿರುಮಣಿ ಭಾಗದಲ್ಲಿ ಶುಕ್ರವಾರ ಸೆಂಟ್ರಿಂಗ್ ಕೆಲಸಕ್ಕೆ ತೆರಳಿ, ಕೆಲಸ ಮುಗಿಸಿಕೊಂಡು ಗ್ರಾಮಕ್ಕೆ ಮರಳಿ ಬರುವ ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ 55 ವರ್ಷದ ತಿಪ್ಪ ನಾಯಕ್ ಅವರ ಒಂದು ಕೈ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಲಕ್ಷಮ್ಮ, ಅರುಣಾ, ಕಾವೇರಿ, ಶಾಂತಮ್ಮ, ಶಾಂತಾಬಾಯಿ, ಪ್ರಕಾಶ್, ದೇವಿ ಬಾಯಿ, ಸಕ್ಕಬಾಯಿ ಸೇರಿದಂತೆ ಹಲವರ ತಲೆ, ಸೊಂಟ ಹಾಗೂ ಇತರ ಅಂಗಾಂಗಗಳಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳಿಗೆ ಪಾವಗಡ ಸಾರ್ವಜನಿಕ…

Read More

ಜೆ. ರಂಗನಾಥ, ತುಮಕೂರು ಭರತ ಖಂಡದ ವಾಸ್ತುಶಿಲ್ಪ ಪರಂಪರೆ ತನ್ನದೇ ಆದ ಸಾಂಪ್ರದಾಯಿಕ ವಾಸ್ತು  ಶಿಲ್ಪಕ್ಕೆ ಹೆಸರಾಗಿದೆ. ಇದು ವಿಶ್ವ ಮಾನ್ಯ ಸ್ಥಾನಮಾನ ಹೊಂದಿದೆ. ಭಾರತ ಖಂಡದ ಹಲವಾರು  ರಾಜ ಮನೆತನಗಳು ವಾಸ್ತುಶಿಲ್ಪ ಜಗತ್ತಿಗೆ  ಹಲವಾರು ಕೊಡುಗೆಗಳನ್ನು ನೀಡಿ ವಿಶ್ವ ಮಾನ್ಯವಾಗಿವೆ. ಕನ್ನಡ ನಾಡನ್ನಾಳಿದ ಹಲವಾರು ರಾಜಮನೆತನಗಳು ಅವರ ಸಾಮಂತ ಆಳ್ವಿಕೆಗಾರರು, ಪಾಳು ಪಟ್ಟುಗಳ ನ್ನಾಳಿದ ಪಾಳೆಗಾರರು ನೀಡಿದ ಕೊಡುಗೆ ಅಪಾರ. ಇಂತಹ ಶಿಲ್ಪಕಲಾ ಜಗತ್ತಿಗೆ ಅಂದು  ರಾಜ -ಮಹಾರಾಜರು ನೀಡಿದ ಕೊಡುಗೆಗಳಲ್ಲಿ ಚಿತ್ರದುರ್ಗ ಜಿಲ್ಲೆ ,ಹೊಸದುರ್ಗ ತಾಲೂಕಿನ ,ಶ್ರೀರಾಂಪುರ ಹೋಬಳಿಯ ಹಗ್ಗೆರೆ ಗ್ರಾಮದ  ಹೊಯ್ಸಳ ವಾಸ್ತುಶಿಲ್ಪದ  ಶ್ರೀ ಸುಪಾರ್ಶ್ವನಾಥ ಜೈನಬಸದಿಯೂ ಒಂದು. ಉತ್ತರ ಕರ್ನಾಟಕದ ಬೆಳಗಾವಿಯನ್ನು ತನ್ನ ರಾಜಧಾನಿಯನ್ನಾಗಿ ಮಾಡಿಕೊಂಡು ಆಳ್ವಿಕೆ ನಡೆಸಿದ್ದ ಸವದತ್ತಿಯ ರಟ್ಟರು ಜೈನ ಧರ್ಮೀಯರು. ಅವರು ಬೆಳಗಾವಿಯ ಕೋಟೆಯಲ್ಲಿ ಕಮಲ ಬಸದಿ ಯನ್ನು ನಿರ್ಮಿಸಿದ್ದು, ಅದು ಅವರ ಮೂಲ ಮನೆ ದೇವರಾದ ಶ್ರೀ ನೇಮಿನಾಥ ತೀರ್ಥಂಕರ ಬಸದಿಯಾಗಿದೆ. ಈ ಬಸದಿಯ ಒಳಗೆ  ಹಾಗೂ ಹೊರಭಾಗಗಳೆಲ್ಲ ಕಮಲಕ್ಕೆ…

Read More

ಚಿಕ್ಕಮಗಳೂರು:  ನಕ್ಸಲ್ ಚಳುವಳಿಯ ಕೊನೆಯ ವ್ಯಕ್ತಿ ಕೋಟೆಹೊಂಡ ರವೀಂದ್ರ ಇಂದು ಮುಖ್ಯವಾಹಿನಿಗೆ ಬರಲಿದ್ದು, ಇಂದು ಬೆಳಿಗ್ಗೆ 11 ಗಂಟೆ ವೇಳೆಗೆ ಎಸ್ಪಿ ಕಚೇರಿಯಲ್ಲಿ ಶರಣಾಗಲಿದ್ದಾರೆ ಎಂದು ತಿಳಿದು ಬಂದಿದೆ. ಶೃಂಗೇರಿ ತಾಲ್ಲೂಕಿನ ಕಿಗ್ಗಾ ಗ್ರಾಮದ ಕೋಟೆಹೊಂಡ ರವೀಂದ್ರ ಕಾಡಿನಲ್ಲೇ ಉಳಿದಿದ್ದ ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿಯಾಗಿದ್ದರು. ಜ.8ರಂದು ಲತಾ ಮುಂಡಗಾರು, ವನಜಾಕ್ಷಿ ಬಾಳೆಹೊಳೆ, ಸುಂದರಿ ಕುತ್ಲೂರು, ಮಾರೆಪ್ಪ ಅರೋಲಿ, ಕೆ.ವಸಂತ(ತಮಿಳುನಾಡು), ಟಿ.ಎನ್.ಜಿಷಾ(ಕೇರಳ) ಒಳಗೊಂಡ ತಂಡ ಶರಣಾಗಿತ್ತು. ಇದೀಗ ಇಂದು ರವೀಂದ್ರ ಶರಣಾಗಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಚಿಕ್ಕನಾಯನಹಳ್ಳಿ: ಐದುನೂರು ವರ್ಷಗಳ ಹಿಂದೆ ನಮ್ಮ ಪೂರ್ವಿಕರು ನಮ್ಮ ದೇಶ ಹಾಗೂ ಧರ್ಮವನ್ನ ಕಾಪಾಡಿಕೊಂಡು ಬಂದಿದ್ದಾರೆ.  ಈ ನಿಟ್ಟಿನಲ್ಲಿ ನಾವುಗಳು ಕೂಡ ಅವರ ಮಾರ್ಗದರ್ಶನದ ಸಂಸ್ಕಾರ ಸಂಸ್ಕೃತಿಯಲ್ಲೇ  ನಡೆಯಬೇಕು ಎಂದು ವಿಜಯನಗರ ಮಹಾ ಸಂಸ್ಥಾನ ಅರಸರಾದ 19ನೇ  ಶ್ರೀಕೃಷ್ಣದೇವರಾಯರು ಹೇಳಿದರು. ಪಟ್ಟಣದಲ್ಲಿ ನೂತನವಾಗಿ ಕೇರಳ ಶೈಲಿಯಲ್ಲಿ ಶ್ರೀ ಮಹಾಲಕ್ಷ್ಮೀ ಮದ್ಧರಲಕ್ಕಮ್ಮ ದೇವಾಲಯದ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಪ್ರಸ್ತುತ ಜನರು ಪಾಶ್ಚಿಮಾತ್ಯ ರಾಷ್ಟ್ರಗಳ ಇಂಗ್ಲೀಷ್ ಭಾಷೆಗೆ ಮಾರುಹೊಗುವುದಲ್ಲದೆ,  ದೇಶದಲ್ಲಿ ಅವಿಭಕ್ತ ಕುಟುಂಬಗಳ ವರ್ಜನೆಯಾಗುತ್ತಿರುವುದು ವಿಷಾದ ಸಂಗತಿಯಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. ನಾವು ಅಮೆರಿಕಾದಲ್ಲಿ ಇದ್ದು, ವಾಸಿಸಿ ಬಂದಿದ್ದಾದರು ನಮ್ಮ ದೇಶದ ಧರ್ಮ ಸಂಸ್ಕತಿ ಬೇರೆ ಯಾವ ರಾಷ್ಟ್ರದಲ್ಲೂ ಸಿಗುವುದಿಲ್ಲ. ನಮ್ಮ ರಾಜ ಮನೆತನದ ಕುಟುಂಬ ಆಗಿರ ಬಹುದು ಅಥವಾ ಜನ ಸಾಮಾನ್ಯರ ಕುಟುಂಬಗಳಾಗಿರ ಬಹುದು ಎಲ್ಲಾ ಅವಿಭಕ್ತ ಕುಟುಂಬದಲ್ಲಿ ಬದುಕಿ ಬಾಳುತ್ತಿದ್ದರು. ರಾಜನಾಗಲಿ ಸಾಮಾನ್ಯ ಪ್ರಜೆಯಾಗಲಿ ಗುರುವಿನ ಅನುಗ್ರಹ ಲಭಿಸಬೇಕು, ಈ ಅನುಭವವನ್ನ ಸ್ವತಃ ತಾವೇ ಪಡೆಕೊಂಡಿರುವುದಾಗಿ ತಿಳಿಸಿದರು. ವಿಜಯನಗರ…

Read More

ತುಮಕೂರು:  ಬೆವಿಕಂ ಗ್ರಾಮೀಣ ಉಪವಿಭಾಗ–1ರ ವ್ಯಾಪ್ತಿಯಲ್ಲಿ ಡಿಟಿಸಿ ಸ್ಥಳಾಂತರ ಕಾಮಗಾರಿ ಕೈಗೊಂಡಿರುವುದರಿಂದ ಫೆಬ್ರವರಿ 2ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ  ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬೆಳ್ಳಾವಿ ಟೌನ್, ಸುಗುಣ, ದೊಡ್ಡವೀರನಹಳ್ಳಿ, ಸಿಂಗೀಪುರ, ದೊಡ್ಡೇರಿ, ಕಾಗ್ಗೆರೆ, ಅಸಲಿಪುರ, ಮಶಣಾಪುರ, ಹರಿವಣಪುರ, ನಾಗಾರ್ಜುನಹಳ್ಳಿ, ಚನ್ನೇನಹಳ್ಳಿ, ಕರಲುಪಾಳ್ಯ, ಚಿಕ್ಕಬೆಳ್ಳಾವಿ, ಮಾವಿನಕುಂಟೆ, ತಿಮ್ಮಲಾಪುರ, ಬಾಣಾವರ, ಲಕ್ಕನಹಳ್ಳಿ, ಅಪ್ಪಿನಾಯಕನಹಳ್ಳಿ, ಬ್ಯಾಲ, ಟಿ.ಗೊಲ್ಲಹಳ್ಳಿ ಹಾಗೂ ಬೆಳ್ಳಾವಿ ಗ್ರಾಮ ಪಂಚಾಯಿತಿಯ ಇತರೆ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು: ಜಿಲ್ಲಾ ವ್ಯಾಪ್ತಿಯ ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕಾಗಿ ಶ್ರಮಿಸುತ್ತಿರುವ ಸರ್ಕಾರೇತರ(ಎನ್ ಜಿಒ) ಸಂಸ್ಥೆಗಳ ಹೊಸ ಯೋಜನೆಗೆ ಕೇಂದ್ರ ಸರ್ಕಾರದಿಂದ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಸ್ವಯಂ ಸೇವಾ ಸಂಸ್ಥೆಗಳು ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ವಯ ಎನ್.ಜಿ.ಓ ಪೋರ್ಟಲ್ ngo.tribal.gov.in ಮೂಲಕ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತ್ಯಾಗರಾಜ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು: ಬೆವಿಕಂ ನಗರ ಉಪವಿಭಾಗ–1ರ ವ್ಯಾಪ್ತಿಯಲ್ಲಿ ದುರಸ್ತಿ ಕಾಮಗಾರಿ ಕೈಗೊಂಡಿರುವುದರಿಂದ ಫೆಬ್ರವರಿ 2 ರಿಂದ 12ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಮಧ್ಯಂತರ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಫೆಬ್ರವರಿ 2ರಂದು ಕೆಎಐಡಿಬಿ ಕೈಗಾರಿಕಾ ಪ್ರದೇಶ, ಫೆ. 3ರಂದು ಕೈಗಾರಿಕಾ ಪ್ರದೇಶ, ಮಾರುಕಟ್ಟೆ, ಮಹಾಲಕ್ಷ್ಮೀ ಲೇಔಟ್, ಫೆ.4ರಂದು ಕೈಗಾರಿಕಾ ಪ್ರದೇಶ, ಫೆ. 5ರಂದು ಕೈಗಾರಿಕಾ ಪ್ರದೇಶ, ಫೆ.6ರಂದು ಸತ್ಯಮಂಗಲ, ಕೈಗಾರಿಕಾ ಪ್ರದೇಶ, ಫೆ.8ರಂದು ಕೈಗಾರಿಕಾ ಪ್ರದೇಶ, ಫೆ.9ರಂದು ಕೈಗಾರಿಕಾ ಪ್ರದೇಶ, ಮಾರುಕಟ್ಟೆ, ಮಹಾಲಕ್ಷ್ಮೀ ಲೇಔಟ್, ಫೆ.10ರಂದು ಕೈಗಾರಿಕಾ ಪ್ರದೇಶ, ಫೆ.11ರಂದು ಕೈಗಾರಿಕಾ ಪ್ರದೇಶ, ಫೆ.12ರಂದು ಕೆಎಐಡಿಬಿ ಕೈಗಾರಿಕಾ ಪ್ರದೇಶದಲ್ಲಿ ಮಧ್ಯಂತರ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸಬೇಕೆಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ನಾಗರಾಜು ಹೆಚ್.ಪಿ. ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ತುಮಕೂರು: ಕೆಸರು ಮಾಡು ಗ್ರಾಮದ ಧರ್ಮರಾಯ ಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆರವರು ಆಶೀರ್ವಾದ ಪೂರ್ವಕವಾಗಿ ಎರಡು ಲಕ್ಷ ರೂಗಳ ಡಿ.ಡಿ.ಮೊತ್ತವನ್ನು ತುಮಕೂರು ಜಿಲ್ಲಾ ನಿರ್ದೇಶಕರಾದ ಸತೀಶ್ ಸುವರ್ಣ ರವರು ಕಮಿಟಿಯ ಪದಾಧಿಕಾರಿಗಳಿಗೆ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ತಾಲೂಕು ಯೋಜನಾಧಿಕಾರಿಗಳಾದ ಪ್ರಭಾಕರ್ ರಾಮ್ ನಾಯಕ್, ವಲಯ ಮೇಲ್ವಿಚಾರಕರಾದ ಲೋಕೇಶ್ ಹೆಚ್.ಎಸ್. , ಕಮಿಟಿಯ ಅಧ್ಯಕ್ಷರಾದ ಪಿ.ಧರ್ಮರಾಜ್, ಉಪಾಧ್ಯಕ್ಷರಾದ ಎಸ್.ಎಂ.ಕೃಷ್ಣಮೂರ್ತಿ, ಕಾರ್ಯದರ್ಶಿಗಳಾದ ಗೋಪಾಲ್, ಒಕ್ಕೂಟದ ಅಧ್ಯಕ್ಷರಾದ ಲೇಪಾಕ್ಷಮ್ಮ, ಸೇವಾ ಪ್ರತಿನಿಧಿಯಾದ ಕಲಾವತಿ ಹಾಗೂ ಗ್ರಾಮಸ್ಥರು ಸ್ವಸಹಾಯ ಸಂಘದ ಸದಸ್ಯರುಗಳು ಹಾಜರಿದ್ದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More