Author: admin

ತುಮಕೂರು: ಮೈಕ್ರೋ ಫೈನಾನ್ಸ್ ಕಂಪನಿಯ ಕಿರುಕುಳದಿಂದ ಬೇಸತ್ತು ಸ್ವಗ್ರಾಮವನ್ನು ತೊರೆದಿದ್ದ ವಿನುತ ಮತ್ತು ಮಾರುತಿ ಕುಟುಂಬ ಮನೆಗೆ ಮರಳಿದ್ದು, ಸ್ವಗ್ರಾಮ ಸೇರಲು ಕಾರಣವಾದ ಜಿಲ್ಲಾಡಳಿತಕ್ಕೆ ಕುಟುಂಬ ಕೃತಜ್ಞತೆ ಸಲ್ಲಿಸಿದೆ. ಜಿಲ್ಲಾಧಿಕಾರಿಗಳ ಆದೇಶಕ್ಕೆ ಜನರಿಂದ ಮೆಚ್ಚುಗೆ : ಕೊರಟಗೆರೆ ತಾಲ್ಲೂಕು ಚನ್ನರಾಯನದುರ್ಗ ಹೋಬಳಿ ಕುರಂಕೋಟೆಯ ನಿವಾಸಿ ವಿನುತ ಮತ್ತು ಮಾರುತಿ ದಂಪತಿ ಫೈವ್ ಸ್ಟಾರ್ ಮೈಕ್ರೋ ಫೈನಾನ್ಸ್ ಕಂಪನಿಯಿಂದ 2.50ಲಕ್ಷ ರೂ.ಗಳ ಸಾಲ ಪಡೆದು, ಕೆಲವು ಕಂತುಗಳನ್ನು ಕಟ್ಟಲು ಸಾಧ್ಯವಾಗದಿದ್ದಾಗ ಫೈನಾನ್ಸ್ ಕಂಪನಿಯು ಯಾವುದೇ ನೋಟೀಸ್ ನೀಡದೆ ಏಕಾಏಕಿ ವಿನುತ ಅವರ ಮನೆಯ ಮೇಲೆ “ಈ ಸ್ವತ್ತು ಫೈವ್ ಸ್ಟಾರ್ ಫೈನಾನ್ಸ್ ಕಂಪನಿಗೆ ಅಡಮಾನವಾಗಿದೆ” ಎಂದು ಬರೆಸಿ ಅವಮಾನ ಮಾಡಿದ್ದರಿಂದ ಕುಟುಂಬವು ಸ್ವಗ್ರಾಮ ಬಿಟ್ಟು ಬೆಂಗಳೂರು ಸೇರಿತ್ತು. ವಿಷಯ ತಿಳಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ. ಅಶೋಕ್ ಅವರು ಜನವರಿ 30ರಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ವಿನುತ ಅವರು ಪಡೆದ 2.50ಲಕ್ಷ ಸಾಲಕ್ಕೆ ಕಂಪನಿಯು 4.50ಲಕ್ಷ…

Read More

ತುಮಕೂರು: ರಾಜ್ಯ ಸರ್ಕಾರಿ ವಾಹನ ಚಾಲಕರ ಸಂಘದ ಸಭೆಯನ್ನು ಫೆಬ್ರವರಿ 2ರಂದು ಆಯೋಜಿಸಲಾಗಿದೆ. ಸಂಘದ ಚಟುವಟಿಕೆ, ಲೆಕ್ಕಪರಿಶೋಧನೆ ವರದಿ, ಗುರುತಿನ ಚೀಟಿ, ನಿವೃತ್ತರಿಗೆ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಸಭೆಯಲ್ಲಿ ಖಾಲಿಯಿರುವ ಸಂಘದ ಕಾರ್ಯದರ್ಶಿ ಹುದ್ದೆಗೆ ಆಯ್ಕೆ ಮಾಡಲಾಗುವುದು. ಸಭೆಯು ಸಾರಥಿ ನಿಲಯ, ಕಾಲ್ಟೆಕ್ಸ್ ಸರ್ಕಲ್, ಕುಣಿಗಲ್ ರಸ್ತೆ, ತುಮಕೂರು ಇಲ್ಲಿ ಫೆ.2ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದ್ದು, ತಾಲ್ಲೂಕು ಮಟ್ಟದ ಅಧ್ಯಕ್ಷರು/ಉಪಾಧ್ಯಕ್ಷರು/ಸದಸ್ಯರುಗಳು ಸಭೆಗೆ ಹಾಜರಾಗಲು ಸಂಘದ ಅಧ್ಯಕ್ಷ ಸಿ. ಜಯರಾಮ್ ಕೋರಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

Read More

ಹೆಚ್.ಡಿ.ಕೋಟೆ: ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ, ಆಶಾ ಕಾರ್ಯಕರ್ತೆಯರಿಗೆ ಸಮವಸ್ತ್ರ ಸೀರೆ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಶಾಸಕ ಅನಿಲ್ ಚಿಕ್ಕಮಾಧು ಅಧ್ಯಕ್ಷತೆಯನ್ನು ವಹಿಸಿ ಗಿಡಕ್ಕೆ ನೀರು ಹಾಕುವುದರ ಮೂಲಕ ಕಾರ್ಯ ಕ್ರವನ್ನು ಉದ್ಘಾಟಿಸಿದರು. ನಂತರ ಶಾಸಕರಾದ ಅನಿಲ್ ಚಿಕ್ಕಮಾದು ಮಾತನಾಡಿ, ಆರೋಗ್ಯ ಇಲಾಖೆಯ ಆಧಾರ ಸ್ತಂಭವೇ ಆಶಾ ಕಾರ್ಯಕರ್ತೆಯರು , ಹಾಗೂ ಆಶಾ ಕಾರ್ಯಕರ್ತರಿಗೆ ನೀಡುತ್ತಿರುವ ಸಮವಸ್ತ್ರದ ಸೀರೆಯ ಬಣ್ಣ ತುಂಬಾ ಚೆನ್ನಾಗಿದೆ , ಪಿಂಕ್ ಬಣ್ಣದ ಸಮವಸ್ತ್ರ ಧರಿಸುವ ಆಶಾ ಕಾರ್ಯಕರ್ತೆಯರು ಎಷ್ಟೇ ಜನ ಇದ್ದರೂ ಸಹ ಆಶಾ ಕಾರ್ಯಕರ್ತರು ಎಂದು ಎದ್ದು ಕಾಣಿಸುತಾರೆ ಮತ್ತು ಅದರಲ್ಲಿ ಸಿಗುವ ಗೌರವ ಬೇರೆ ಎಲ್ಲೂ ಸಿಗದು, ಊರಿಂದ ಊರಿಗೆ ನಡೆದುಕೊಂಡು ಗ್ರಾಮದ ಮನೆ ಮನೆಗೂ ಹೋಗಿ ಬಾಣಂತಿ ಗರ್ಭಿಣಿಯರ, ಜನರ ಬಗ್ಗೆ ಹೆಚ್ಚಿನ ಕಾಳಜಿಯನ್ನು ವಹಿಸುತ್ತಾರೆ ಹಾಗೂ ಮಕ್ಕಳ ಚುಚ್ಚುಮದ್ದಿನಲ್ಲೂ ಸಹ ಅವರ ಪಾತ್ರ ಮುಖ್ಯವಾಗಿರುತ್ತದೆ ಎಂದರು. ಆರೋಗ್ಯವೇ ಭಾಗ್ಯ , ಜನರ ಆರೋಗ್ಯದ ಜೊತೆಗೆ ನಿಮ್ಮ ಆರೋಗ್ಯವನ್ನು ಸಹ…

Read More

ಆಹಾರ ಸುರಕ್ಷತಾ ಗುಣಮಟ್ಟ ಪ್ರಾಧಿಕಾರ ಮೈಸೂರು, ಆಹಾರ ಸುರಕ್ಷತಾ ತರಬೇತಿ ಮತ್ತು ಪ್ರಮಾಣ ಪತ್ರ ಕೇಂದ್ರ ಮೈಸೂರು ಇವರ ವತಿಯಿಂದ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹೆಚ್.ಡಿ.ಕೋಟೆ ಮತ್ತು ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟ ಇವರ ಸಹಯೋಗದೊಂದಿಗೆ ಹಾಲು ಉತ್ಪಾದಕರ ಸಹಕಾರ ಸಂಘಗಳ ಸಿಬ್ಬಂದಿಗಳಿಗೆ ಆಹಾರ ಸುರಕ್ಷತೆ ತರಬೇತಿ ಮತ್ತು ಪ್ರಮಾಣ ಪತ್ರ ವಿತರಣೆ ಕಾರ್ಯಕ್ರಮವನ್ನು ಅಂಬೇಡ್ಕರ್ ಭವನದಲ್ಲಿ ಅಯೋಜಿಸಲಾಯಿತು. ತಾಲೂಕು ದಂಡಾಧಿಕಾರಿಗಳಾದ ಶ್ರೀನಿವಾಸ್ , ಮೈಸೂರು ಜಿಲ್ಲೆ ಹಾಲು ಒಕ್ಕೂಟ ಸಂಘದ ನಿರ್ದೇಶಕರಾದ ಕೆ ಈರೇಗೌಡ್ರು ಮತ್ತು ದ್ರಾಕ್ಷಾಯಿಣಿ ಬಸವರಾಜಪ್ಪ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ.ರವಿಕುಮಾರ್ ಟಿ.ರವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ.ರವಿಕುಮಾರ್ ಮಾತನಾಡಿ, 2020ರಲ್ಲಿ ತರಬೇತಿ ಕಡ್ಡಾಯ ಕಾಯ್ದೆ ಜಾರಿಗೆ ಬಂದಿತು. ಮಾರಾಟಗಾರರು ಜನರಿಗೆ ಉತ್ತಮವಾದ ಆಹಾರವನ್ನು ಕೊಡಬೇಕು. ಜನರು ಬೇಕರಿ, ಹೋಟೆಲ್ , ಪ್ರಾವಿಷನ್ ಸ್ಟೋರ್, ಈ ಟೀ ಸ್ಟಾಲ್ ಹಾಗೂ ಜನರು ತಿನ್ನುವ ಯಾವುದೇ ಪದಾರ್ಥಗಳನ್ನು ಮಾರಾಟ ಮಾಡಬೇಕಾದರೆ ಕಡ್ಡಾಯವಾಗಿ…

Read More

ಕೊರಟಗೆರೆ: ಮೈಕ್ರೋ ಪೈನಾನ್ಸ್ ಕಂಪನಿ ಗೂಂಡಾಗಳ ಮೂಲಕ ಸಾಲ ವಸೂಲಾತಿ ನೆಪದಲ್ಲಿ ಬಡವರ ಮೇಲೆ ಶೋಷಣೆ ಮಾಡಿದ್ರೇ ನಾನು ಮತ್ತು ನಮ್ಮ ಸರಕಾರ ಸುಮ್ಮನೇ ಕೂರೋದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಸಾಲದ ಕಿರುಕುಳದಿಂದ ಊರನ್ನೇ ಬಿಟ್ಟಿದ್ದ ಬಡ ಕಾರ್ಮಿಕನ ಮನೆಗೆ ಭೇಟಿ ನೀಡಿದ ಗೃಹಸಚಿವ ಡಾ.ಜಿ.ಪರಮೇಶ್ವರ ವೈಯಕ್ತಿಕವಾಗಿ 50 ಸಾವಿರ ಧನಸಹಾಯ ಮಾಡಿದರು. ಇದೇ ವೇಳೆ ಮಾತನಾಡಿದ ಅವರು, ನಮ್ಮ ರಾಜ್ಯದಲ್ಲಿ ಕೋಟ್ಯಾಂತರ ಜನರು ಸುಮಾರು 59 ಸಾವಿರ ಕೋಟಿ ಸಾಲವನ್ನ ಅಧಿಕೃತ ಬ್ಯಾಂಕಿನವರು ಗ್ರಾಮದ ಗ್ರಾಹಕರಿಗೆ ನೀಡಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಮೈಕ್ರೋ ಪೈನಾನ್ಸ್ ಕಂಪನಿಯವರು ಮತ್ತೆ ದಬ್ಬಾಳಿಕೆ ನಡೆಸಿದ್ರೆ ತಕ್ಷಣ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯದ ಎಲ್ಲಾ ಎಸ್ಪಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ತಮಿಳುನಾಡಿನ ಪೈವ್ ಸ್ಟಾರ್ ಪೈನಾನ್ಸ್ ಕಂಪನಿಯವ್ರು ತುಮಕೂರಿಗೆ ಬಂದು ಇಂತಹ ದಬ್ಬಾಳಿಕೆಯ ಕೆಲಸ ಮಾಡ್ತೀದ್ದಾರೆ ಅವರ ಮೇಲೆ ಕಾನೂನು ಕ್ರಮ ಆಗಿದೆ ಎಂದರು. ಕೊರಟಗೆರೆ ತಾಲೂಕು ಚನ್ನರಾಯನದುರ್ಗ ಹೋಬಳಿ ಕುರಂಕೋಟೆ ಗ್ರಾಮದ ಮಾರುತಿ…

Read More

ಲೇಖನ : ಜೆ ರಂಗನಾಥ ತುಮಕೂರು ನಿಡಗಲ್ ದುರ್ಗ ತುಮಕೂರು ಜಿಲ್ಲೆ, ಪಾವಗಡ ತಾಲೂಕಿನ ,ಐತಿಹಾಸಿಕ ತಾಣ ಇದನ್ನ “ದಕ್ಷಿಣದ ಹಂಪಿ” ಎಂದೆಲ್ಲ ಕರೆಯುತ್ತಾರೆ. ಈ ಕ್ಷೇತ್ರಕ್ಕೆ ನೀಲಾಂಜನಗಿರಿ ,ನೀಲಾವತಿ, ಕಾಳಂಜನ ಗಿರಿ ಹಾಗೂ ಕಾಳಂಜನ ದುರ್ಗಕರೆಯುತ್ತಿದ್ದರು. ಐತಿಹಾಸಿಕ ನಿಡಗಲ್ ಬೆಟ್ಟ ಪ್ರವಾಸಿ ತಾಣಗಳಲ್ಲಿ ಒಂದಾಗಿದ್ದು, ಹಲವು ರಾಜ ಮನೆತನಗಳ ರಾಜಧಾನಿಯಾಗಿ ಮೆರೆದು ಇಂದು ಹಾಳು ಕೊಂಪೆಯಾಗಿದೆ. ಸಮುದ್ರಮಟ್ಟದಿಂದ 2,669 ಆಡಿಗಳು,(1149 ಮೀಟರ್ ಗಳು) ಎತ್ತರದಲ್ಲಿರುವ ಈ ಪ್ರದೇಶವನ್ನು ನೊಳಂಬರು, ಚೋಳರು, ಚಾಲುಕ್ಯರು, ವಿಜಯನಗರ ಅರಸರು, ಹೊಯ್ಸಳರು, ಹೈದರಾಲಿ –ಟಿಪ್ಪು ಸುಲ್ತಾನ್, ಹರತಿ — ನಿಡಗಲ್ ಪಾಳೆಗಾರರು ,ಆಳ್ವಿಕೆ ನಡೆಸಿದ್ದಾರೆ. ಇವರು ಹಲವಾರು ದೇಗುಲಗಳು, ಕೋಟಿ ಕೊತ್ತಲುಗಳು, ಕಲ್ಯಾಣಿ ಗಳನ್ನು ಕೊಟ್ಟು ಪಾವನರಾಗಿದ್ದಾರೆ. ನಿಡುಗಲ್ಲು ಬೆಟ್ಟ ನಿಡಿದಾದ ಕೊಡುಗಲ್ಲಿನಂತೆ ಚೂಪಾಗಿರುವ ಈ ಬೆಟ್ಟ ಬಿಸಿಲಿನಲ್ಲಿ ಮಿಂಚುತ್ತಿರುತ್ತದೆ. ಸುತ್ತಲು ಆಚ್ಚಹಸಿರು, ಗಿರಿ ಕಂದರಗಳು, ಪಾಳು ಬಿದ್ದ ದೇಗುಲಗಳು ,ಕೋಟೆ ಕೊತ್ತಲುಗಳು, ಮಾಸ್ತಿ ಗಲ್ಲುಗಳು ,ವೀರಗಲ್ಲುಗಳು , ನಿಷದಿ ಕಲ್ಲುಗಳು, ಫಿರಂಗಿಗಳು, ಕಲ್ಯಾಣಿಗಳು ಶಾಸನಗಳಿದ್ದು…

Read More

ಬೀದರ: ಜಿಲ್ಲೆ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಅವರ ನಿರ್ದೇಶನದಂತೆ ಭಾಲ್ಕಿ ಉಪ–ವಿಭಾಗ ಪೊಲೀಸ್ ಉಪಾಧೀಕ್ಷಕ ಶಿವಾನಂದ ಪವಾಡಶೆಟ್ಟಿ ಅವರ ನೇತೃತ್ವದಲ್ಲಿ ಭಾಲ್ಕಿ ನಗರ ಪೊಲೀಸ್ ಠಾಣೆ ಪಿ.ಐ ಅಮರೇಶ ಅವರು ತಮ್ಮ ಪೊಲೀಸ್ ಸಿಬ್ಬಂದಿ ಸಾರ್ವಜನಿಕರಿಗೆ ಸಂಚಾರಿ ನಿಯಮಗಳ ಬಗ್ಗೆ ಜಾಗೃತಿ ಮೂಡಿಸಿದರು. ದ್ವಿಚಕ್ರ ವಾಹನ ಅಪಘಾತಗಳಲ್ಲಿ ಹೆಲ್ಮೆಟ್ ಧರಿಸದ ಹಿನ್ನೆಲೆ, ತಲೆಗೆ ಏಟು ಬಿದ್ದು ಬೈಕ್ ಸವಾರರು ಹಾಗೂ ಹಿಂಬದಿ ಸವಾರರು ಸಾವಿಗೀಡಾಗುತ್ತಿರುವ ಪ್ರಕರಣಗಳೇ ಹೆಚ್ಚು, ಹಾಗಾಗಿ ಭಾಲ್ಕಿ ನಗರದಲ್ಲಿ ಹೆಲ್ಮೆಟ್ ಇಲ್ಲದೇ ಸಂಚರಿಸುತ್ತಿದ್ದ ದ್ವಿಚಕ್ರ ವಾಹನಗಳ ಸವಾರನ್ನು ಗುರುತಿಸಿ, ಅವರಿಗೆ ದಂಡ ವಿಧಿಸುವ ಬದಲು ಹೆಲ್ಮೆಟ್ ವಿತರಿಸಿ, ಹೆಲ್ಮೆಟ್ ಧರಿಸುವಿಕೆಯ ಮಹತ್ವವನ್ನು ತಿಳಿಸಲಾಯಿತು. ಅಪಘಾತದಲ್ಲಿ ವಾಹನ ಸವಾರರು ಸಾವನ್ನಪ್ಪುತ್ತಿರುವ ಪ್ರಮಾಣವನ್ನು ಇಳಿಕೆ ಮಾಡುವ ಸಂಕಲ್ಪದೊಂದಿಗೆ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್…

Read More

ಉಡುಪಿ: ಜಿಲ್ಲೆಯ ಹಿರಿಯಡ್ಕ ಪೊಲೀಸ್ ಠಾಣೆಯ PSI ಮತ್ತು ಸಿಬ್ಬಂದಿಗಳಿಂದ ದಲಿತ ಯುವಕ ಭಾಸ್ಕರ್ ಗಿಳಿಯಾರ್ ಮೇಲೆ ನಡೆದ ಹಲ್ಲೆಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾರ್ಯನಿರತ ಪತ್ರಕರ್ತರ, ಸಂಪಾದಕರ ಹಾಗೂ ವರದಿಗಾರರ ಸಂಘ ಹಾಗೂ ಭೀಮವಾದ ದಲಿತ ಸಂಘರ್ಷ ಸಮಿತಿ ರಾಜ್ಯ ಸಮಿತಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರು, ಜಿಲ್ಲಾಧಿಕಾರಿ, ಸಮಾಜ ಕಲ್ಯಾಣ ಆಯುಕ್ತರು, ಸಮಾಜ ಕಲ್ಯಾಣ ಇಲಾಖೆಯ ಸಚಿವರಿಗೆ ಮನವಿ ಸಲ್ಲಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ ದಲಿತ ಸಮುದಾಯದ ಮೇಲಿನ ದೌರ್ಜನ್ಯಗಳು ದಿನೇ ದಿನೇ ಹೆಚ್ಚುತ್ತಿದ್ದು, ಇತ್ತೀಚೆಗೆ ನಡೆದ ಘಟನೆ ಗಂಭೀರ ಸ್ವರೂಪವನ್ನು ಹೊಂದಿದೆ. 23.01.2025 ರಂದು, ಬೆಳ್ಳಂಪಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಭಾಸ್ಕರ್ ಗಿಳಿಯಾರ್, ದಲಿತ ಯುವಕ, ಯಾವುದೇ ತಪ್ಪು ಮಾಡಿದಿಲ್ಲದಿದ್ದರೂ, ಹಿರಿಯಡ್ಕ ಪೊಲೀಸ್ ಠಾಣೆಯ PSI ಮತ್ತು ಸಿಬ್ಬಂದಿಗಳಿಂದ ಹಲ್ಲೆಗೆ ಒಳಗಾದ ಘಟನೆ ನಡೆದಿದೆ. ಈ ಕೃತ್ಯವನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ ಎಂದು ಸಂಘಟನೆಗಳು ತಿಳಿಸಿವೆ. ಈ ಘಟನೆಯ ಕುರಿತು ಸಮಗ್ರ ತನಿಖೆ ನಡೆಸಿ, ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ…

Read More

ಮೈಕ್ರೋ ಫೈನಾನ್ಸ್‌ ಸಂಸ್ಥೆಗಳಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಗಳ ನಿವಾರಣೆ ಹಾಗೂ ಮೈಕ್ರೋ ಫೈನಾನ್ಸ್ ಗಳ ಹಾವಳಿಗೆ ಕಡಿವಾಣ ಹಾಕುವ ಸಂಬಂಧ ಕೃಷ್ಣಾದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಸಭೆಯಲ್ಲಿ ಕೈಗೊಂಡ ನಿರ್ಧಾರಗಳು: * ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಕಿರುಕುಳ ತಪ್ಪಿಸುವ ಉದ್ದೇಶದಿಂದ ರಚಿಸಲಾಗಿರುವ ಸುಗ್ರೀವಾಜ್ಞೆಯಲ್ಲಿನ ಅಂಶಗಳನ್ನು ಮತ್ತೊಮ್ಮೆ ಪರಿಶೀಲಿಸಿ, ಬಲಿಷ್ಠ ಕಾಯ್ದೆಯನ್ನು ಆದಷ್ಟು ಬೇಗನೆ ಜಾರಿ ಮಾಡಲಾಗುವುದು. ಈ ಕುರಿತು ಕಾನೂನು ಇಲಾಖೆ, ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳ ತಂಡ ರಚನೆ ಮಾಡಲಾಗಿದೆ. * ಕಾಯ್ದೆ ಸಂಪೂರ್ಣ ಸಂವಿಧಾನ ಬದ್ಧವಾಗಿದ್ದು, ಯಾವುದೇ ಲೋಪದೋಷಗಳನ್ನು ಹೊಂದಿರಬಾರದು. * ಸಾಲಗಾರರು ಎದುರಿಸುತ್ತಿರುವ ಕಿರುಕುಳವನ್ನು ತಪ್ಪಿಸಲು ಹಾಗೂ ಸಾಲ ನೀಡಿದವರು ಬಲವಂತದ ವಸೂಲಿ ಮಾಡುವುದನ್ನು ನಿಯಂತ್ರಿಸುವ ಉದ್ದೇಶದಿಂದ ಬಲಿಷ್ಠ ಕಾಯ್ದೆ ರಚಿಸಲಾಗುವುದು. * ಕಾಯ್ದೆಯಲ್ಲಿ ಪೊಲೀಸರಿಗೆ ಹೆಚ್ಚಿನ ಅಧಿಕಾರ ದೊರೆಯಲಿದೆ. ಒಂಬುಡ್ಸ್‌ಮೆನ್‌ ಗಳ ನೇಮಕ ಮಾಡಲಾಗುವುದು. ಅಮಾನವೀಯವಾಗಿ ಬಲವಂತದ ಸಾಲ ವಸೂಲಾತಿ ಮಾಡುವವರಿಗೆ ಜಾಮೀನುರಹಿತ ಪ್ರಕರಣ ದಾಖಲು ಸೇರಿದಂತೆ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸುವ…

Read More

ತುಮಕೂರು: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ.ಬಿ.ಆರ್ ಅಂಬೇಡ್ಕರ್ ಅವರು ಭಾರತ ಸೇರಿದಂತೆ ಇತರೆ ರಾಷ್ಟ್ರಗಳಿಗೆ ನೀಡಿದ ಸಂವಿಧಾನ ಮಾದರಿಯಾಗಿದ್ದು, ದೇಶ ವಿದೇಶಗಳಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಪ್ರಜಾಪ್ರಭುತ್ವದ ಜ್ಞಾನಿಯೆಂದು ಪೂಜಿಸುತ್ತಿದ್ದಾರೆ ಇಂತಹದರ ನಡುವೆ ಭಾರತದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ವಿಶೇಷ ಸ್ಥಾನಮಾನಗಳಿದ್ದು ಎಲ್ಲಾ ರಾಜ್ಯ ಸರ್ಕಾರಗಳು ರಾಷ್ಟ್ರೀಯ ದಿನಾಚರಣೆಗಳ ಸಮಯ ಸಂದರ್ಭದಲ್ಲಿ ಕಡ್ಡಾಯವಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಫೋಟೋಗಳನ್ನು ಇಟ್ಟು ಪೂಜಿಸಬೇಕು ಎಂಬ ಆದೇಶವಿದ್ದರೂ ಕೂಡಾ ಇದನ್ನು ಧಿಕ್ಕರಿಸಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಇಡದೆ 76ನೇ ಗಣರಾಜ್ಯೋತ್ಸವವನ್ನು ಆಚರಣೆ ಮಾಡಿರುವುದು ಖಂಡನೀಯವೆಂದು ಜೆಟ್ಟಿ ಅಗ್ರಹಾರ ನಾಗರಾಜು (ಟೈಗರ್ ನಾಗ್) ಅವರು ಆಕ್ರೋಶ ಹಾಕಿದ್ದಾರೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕೊಡ್ಲಾಪುರ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ 76ನೇ ಗಣರಾಜ್ಯೋತ್ಸವದ ಆಚರಣೆ ವೇಳೆ ದೇಶ ಕಂಡ ಮಹಾನ್ ಮಾನವತವಾದಿ ತತ್ವಜ್ಞಾನಿ ಸಂವಿಧಾನ ರಚನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು, ಈ ರಾಷ್ಟ್ರದ ಎಲ್ಲಾ ಧರ್ಮ ಎಲ್ಲಾ ಜನಾಂಗ ಮತ್ತು ಸ್ತ್ರೀಯರಿಗೆ ವಿಶೇಷವಾದ ಆದ್ಯತೆಯನ್ನು ನೀಡಿ ಇಡೀ…

Read More