Subscribe to Updates
Get the latest creative news from FooBar about art, design and business.
- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ
- ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ
- ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!
- ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?
- ಮೂರು ಬಾರಿ ಸಿಎಂ ಹುದ್ದೆ ಕೈತಪ್ಪಿತು, ಅಂದು ನಾನು ಗೆದ್ದಿದ್ದರೆ…: ಭಾವುಕರಾದ ಡಿಸಿಎಂ ಡಾ. ಜಿ. ಪರಮೇಶ್ವರ್!
- ಸರ್ಕಾರಿ ಜಾಹೀರಾತಿನಲ್ಲಿ ಫೋಟೋ ಕೈಬಿಟ್ಟ ವಿವಾದ: ಸಿಎಂ ಡಿಕೆಶಿ ಜೊತೆ ಚರ್ಚಿಸುವೆ ಎಂದ ಡಿಸಿಎಂ ಪರಮೇಶ್ವರ್
- ಪಾವಗಡ: ರಂಗಸಮುದ್ರದಲ್ಲಿ ವಾಲ್ಮೀಕಿ ಮೂರ್ತಿಗೆ ವಿಶೇಷ ಪೂಜೆ
- ಹುಮನಾಬಾದ್ | ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್ ಸೇವೆ ಒದಗಿಸಲು ದಸಂಸ ಆಗ್ರಹ
Author: admin
ಬೆಂಗಳೂರು: ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷರ ಆಯ್ಕೆಯಲ್ಲಿ ನನ್ನ ಪಾತ್ರವಿಲ್ಲ, ನನ್ನ ಬಗ್ಗೆ ಹಗುರವಾಗಿ ಮಾತನಾಡಬೇಡಿ ಎಂದು ಸಂಸದ ಸುಧಾಕರ್ ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 23 ಜಿಲ್ಲೆಗಳ ಜಿಲ್ಲಾಧ್ಯಕ್ಷರ ಆಯ್ಕೆ ವಿರೋಧ ವಿಚಾರವಾಗಿ ಕೆಲವರು ಅಸಮಾಧಾನ ಹೊರಹಾಕಿರಬಹುದು. ಅದನ್ನು ನಾನು ತಪ್ಪು ಎನ್ನುವುದಿಲ್ಲ. ಚುನಾವಣೆ ಪ್ರಕ್ರಿಯೆ ಹೇಗೆ ನಡೆದಿದೆ ಎನ್ನುವುದನ್ನು ಹಿರಿಯರಿಗೆ ತಿಳಿಸಲು ಇಚ್ಚಿಸ್ತೇನೆ. ನಾನು ಯಾವುದೇ ಅಭಿಪ್ರಾಯ ಕೊಟ್ಟಿಲ್ಲ. ಪಕ್ಷದ ವರಿಷ್ಠರು ನನ್ನ ಅಭಿಪ್ರಾಯವನ್ನೂ ಸಹ ಕೇಳಿಲ್ಲ ಎಂದು ಸ್ಪಷ್ಟಪಡಿಸಿದರು. ಪಕ್ಷದ ರಾಜ್ಯಾಧ್ಯಕ್ಷನಾಗಿ ಯಾವುದೇ ಜಿಲ್ಲೆಯ ಜಿಲ್ಲಾಧ್ಯಕ್ಷರ ಚುನಾವಣೆ ಪ್ರಕ್ರಿಯೆಯಲ್ಲಿ ನನ್ನ ಯಾವುದೇ ಪಾತ್ರ ಇಲ್ಲ. ರಾಜ್ಯದ ಅಧ್ಯಕ್ಷನಾಗಿ ಯಾವುದೇ ಜಿಲ್ಲೆಯ ಚುನಾವಣೆ ಸಂಬಂಧ ಅಭಿಪ್ರಾಯ ಕೊಟ್ಟಿಲ್ಲ, ಕೊಡುವುದಕ್ಕೆ ಅವಕಾಶವೂ ಇಲ್ಲ. ಕೇಂದ್ರದಿಂದ ನಮ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅವರಿಗೆ ಚುನಾವಣೆಯ ಜವಾಬ್ದಾರಿ ಕೊಟ್ಟಿದ್ದಾರೆ. 13 ಜನ ವೀಕ್ಷಕರನ್ನು ಕೂಡ ನೇಮಕ ಮಾಡಿದ್ದರು. ಪ್ರತಿಯೊಬ್ಬ ವೀಕ್ಷಕರಿಗೂ ಕೂಡ ಮೂರು-ಮೂರು ಜಿಲ್ಲೆಗಳ ಜವಾಬ್ದಾರಿ…
ತುಮಕೂರು: ವಿಶ್ವ ಕ್ಯಾನ್ಸರ್ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸರ್ವೇಲೆನ್ಸ್ ಕಚೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳು, ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಫೆಬ್ರವರಿ 4ರಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಆಸ್ಪತ್ರೆ ಆವರಣದಿಂದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದವರಗೆ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಸಾರ್ವಜನಿಕರ ಆರೋಗ್ಯ ರಕ್ಷಣೆ ಉದ್ದೇಶದಿಂದ ಪ್ರತಿ ವರ್ಷದಂತೆ ಈ ವರ್ಷವೂ “United by Unique” ಎಂಬ ಧ್ಯೇಯ ವಾಕ್ಯದೊಂದಿಗೆ ಜಾಥಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜಾಥಾ ಕಾರ್ಯಕ್ರಮದಲ್ಲಿ ಸಮುದಾಯ ಆರೋಗ್ಯಾಧಿಕಾರಿಗಳು, ಜಿಲ್ಲಾ ಶುಶ್ರೂಷ ತರಬೇತಿ ಕೇಂದ್ರ, ಶ್ರೀದೇವಿ ನರ್ಸಿಂಗ್ ಕಾಲೇಜು, ಶ್ರೀ ಸಿದ್ಧಗಂಗಾ ನರ್ಸಿಂಗ್ ಕಾಲೇಜು, ರಮಣ ಮಹರ್ಷಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಭಾಗವಹಿಸುವರು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ತುಮಕೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ಜಿಲ್ಲಾ/ ತಾಲ್ಲೂಕು ಮಡಿವಾಳ ಸಂಘದ ವತಿಯಿಂದ ಫೆಬ್ರವರಿ 1ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ.ಗುಬ್ಬಿವೀರಣ್ಣ ಕಲಾಕ್ಷೇತ್ರದಲ್ಲಿ “ಶ್ರೀ ಮಡಿವಾಳ ಮಾಚಿದೇವ ಜಯಂತಿ” ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ಹಾಗೂ ಕ್ಷೇತ್ರದ ಸಂಸದ ವಿ.ಸೋಮಣ್ಣ ಅವರ ಘನ ಉಪಸ್ಥಿತಿಯಲ್ಲಿ ಗೃಹ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಕಾರ್ಯಕ್ರಮವನ್ನು ಉದ್ಘಾಟಿಸುವರು. ಚಿತ್ರದುರ್ಗ ಶ್ರೀ ಮಾಚಿದೇವ ಮಹಾಸಂಸ್ಥಾನ ಮಠದ ಪೀಠಾಧಿಪತಿ ಜಗದ್ಗುರು ಡಾ.ಶ್ರೀ ಶ್ರೀ ಬಸವ ಮಾಚಿದೇವ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸುವರು. ನಗರ ವಿಧಾನಸಭಾ ಕ್ಷೇತ್ರದ ಶಾಸಕ ಜಿ.ಬಿ.ಜ್ಯೋತಿಗಣೇಶ್ ಅಧ್ಯಕ್ಷತೆವಹಿಸುವರು. ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಸಚಿವರು, ಶಾಸಕರು, ಜನಪ್ರತಿನಿಧಿಗಳು, ಮಡಿವಾಳ ಸಮುದಾಯದ ಸಂಘ–ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಹಾಗೂ ಮುಖಂಡರು ಭಾಗವಹಿಸಲಿದ್ದಾರೆ. ಕಾರ್ಯಕ್ರಮವನ್ನು ಕುರಿತು ಕೆ.ಎಂ.ಎಫ್.ನ ನಿವೃತ್ತ ಜಂಟಿ ನಿರ್ದೇಶಕ ಡಾ.ಟಿ.ಎಂ.ಪ್ರಸಾದ್ ಉಪನ್ಯಾಸ ನೀಡಲಿದ್ದಾರೆ.…
ತುಮಕೂರು: ಸೂಕ್ತ ಚಿಕಿತ್ಸೆಯಿಂದ ಕುಷ್ಠರೋಗವನ್ನು ಸಂಪೂರ್ಣವಾಗಿ ಗುಣಮುಖಪಡಿಸಬಹುದಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನಿಸಾ ತಿಳಿಸಿದರು. ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಗುರುವಾರ ಆಯೋಜಿಸಲಾಗಿದ್ದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸುಮಾರು ವರ್ಷಗಳ ಹಿಂದೆ ಕುಷ್ಠರೋಗವು ಯಾವುದೇ ಔಷಧೋಪಚಾರವಿಲ್ಲದೆ ಗುಣಮುಖವಾಗದ ಖಾಯಿಲೆಯಾಗಿತ್ತು. ಪ್ರಸ್ತುತ ಕುಷ್ಠರೋಗಕ್ಕೆ ಉಚಿತ ಔಷಧಿ ಲಭ್ಯವಿದ್ದು, ಸಕಾಲದಲ್ಲಿ ಚಿಕಿತ್ಸೆ ಪಡೆಯುವುದರಿಂದ ಕುಷ್ಠರೋಗದಿಂದ ಗುಣಮುಖ ಹೊಂದಬಹುದು ಎಂದು ತಿಳಿಸಿದರು. ಜಿಲ್ಲೆಯಲ್ಲಿ ಶೇ.0.06ರಷ್ಟು ಮಾತ್ರ ಕುಷ್ಠರೋಗದ ಪ್ರಕರಣಗಳಿವೆ. ರಾಜ್ಯದಲ್ಲಿ 1,785 ಪ್ರಕರಣಗಳಿವೆ. ಜಿಲ್ಲೆಯಲ್ಲಿ ಕೇವಲ 40 ಕುಷ್ಠರೋಗ ಪ್ರಕರಣಗಳು ಪತ್ತೆಯಾಗಿದ್ದು, ಚಿಕಿತ್ಸೆಯಿಂದ ಗುಣಮುಖರಾಗುತ್ತಿದ್ದಾರೆ ಎಂದು ಅವರು ತಿಳಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಚಂದ್ರಶೇಖರ್ ಮಾತನಾಡಿ, ಹಿಂದಿನ ಕಾಲದಲ್ಲಿ ಕುಷ್ಠರೋಗವನ್ನು ಶಾಪಗ್ರಸ್ಥ ರೋಗವೆಂದು ಪರಿಗಣಿಸಲಾಗುತ್ತಿತ್ತು. ಜಿಲ್ಲೆಯ ಇತರೆ ತಾಲ್ಲೂಕುಗಳಿಗಿಂತ ಶಿರಾ, ಪಾವಗಡ, ಮಧುಗಿರಿ ತಾಲ್ಲೂಕಿನಲ್ಲಿ ಕುಷ್ಠರೋಗ…
ತುಮಕೂರು: ಅವಶ್ಯಕತೆಗಳನ್ನು ಮೀರಿ ಸಾಲ ಮಾಡಿ ಸಮಸ್ಯೆಗಳಿಗೆ ಸಿಲುಕಬಾರದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಾರ್ವಜನಿಕರಲ್ಲಿ ಮನವಿ ಮಾಡಿದರು. ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಸಂಬಂಧಿಸಿದಂತೆ ಕೊರಟಗೆರೆ ತಾಲ್ಲೂಕು ಚನ್ನರಾಯನದುರ್ಗ ಹೋಬಳಿ ಕುರಂಕೋಟೆ ಗ್ರಾಮಕ್ಕೆ ಗುರುವಾರ ಭೇಟಿ ನೀಡಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಕ್ರೋ ಫೈನಾನ್ಸ್ ಗಳಿಗೆ ಅಸಲು ಹಣಕ್ಕಿಂತ ಬಡ್ಡಿಯನ್ನೇ ಹೆಚ್ಚಾಗಿ ಕಟ್ಟಬೇಕಾಗುತ್ತದೆ. ಅತಿ ಹೆಚ್ಚು ಬಡ್ಡಿ ವಸೂಲಿ ಮಾಡುವ ಮೈಕ್ರೋ ಫೈನಾನ್ಸ್ ಗಳಿಂದ ಸಾಲ ಪಡೆಯುವ ಮುನ್ನ ಜನರು ಆಲೋಚಿಸಬೇಕು ಎಂದು ತಿಳಿಸಿದರು. ಸಾರ್ವಜನಿಕರು ತಮ್ಮ ಖರ್ಚು–ವೆಚ್ಚಗಳು ಇತಿ–ಮಿತಿಯೊಳಗಿರುವಂತೆ ಎಚ್ಚರವಹಿಸಬೇಕು. ಮೈಕ್ರೋ ಫೈನಾನ್ಸ್ ನಿಂದ ತಾವು ಸಾಲ ಪಡೆಯುವುದಲ್ಲದೆ ಸ್ನೇಹಿತರು, ಬಂಧುಗಳ ಹೆಸರಲ್ಲಿಯೂ ತೆಗೆದುಕೊಳ್ಳುತ್ತಿರುವುದು ಪರಿಶೀಲನೆ ವೇಳೆಯಲ್ಲಿ ಗಮನಕ್ಕೆ ಬಂದಿದೆ. ಸ್ನೇಹಿತರ ಸಾಲಕ್ಕೆ ಜಾಮೀನು ಹಾಕುವ ಮುನ್ನ ಯೋಚಿಸಬೇಕು. ಇದರಿಂದ ಸಾಲ ಪಡೆದವರು ಹಾಗೂ ಜಾಮೀನು ಹಾಕಿದವರೂ ಸಹ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ ಎಂದು ತಿಳಿ ಹೇಳಿದರು. ಗ್ರಾಮೀಣ ಪ್ರದೇಶದಲ್ಲಿ ಸ್ವ– ಸಹಾಯ ಗುಂಪುಗಳ ಸದಸ್ಯರಿಗೆ ಸರ್ಕಾರದ…
ತುಮಕೂರು: ಡಾ.ಬಿ.ಆರ್. ಅಂಬೇಡ್ಕರ್ ಕೋಚಿಂಗ್ ಸೆಂಟರ್ ನ ದಶಮಾನೋತ್ಸವ ಸಮಾರಂಭವು ತುಮಕೂರು ನಗರದ ಅಮಾನಿ ಕೆರೆ ಎದುರಿನ ಕನ್ನಡ ಭವನದಲ್ಲಿ ಫೆಬ್ರವರಿ 1ರಂದು ಅದ್ಧೂರಿಯಾಗಿ ನಡೆಯಲಿದೆ. ದೇಶದ ನಂಬರ್ 1 IAS ತರಬೇತುದಾರ ಹಾಗೂ ಅಕ್ಕ IAS ಅಕಾಡೆಮಿಯ ನಿರ್ದೇಶಕ ಡಾ.ಶಿವಕುಮಾರ್ ಮತ್ತು ಕನ್ನಡ–ತೆಲುಗು ಚಲನಚಿತ್ರ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. BVS (ಭಾರತೀಯ ವಿದ್ಯಾರ್ಥಿ ಸಂಘ) ಸದಸ್ಯರು, ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು, ಹಾಗೂ ಅಂಬೇಡ್ಕರ್ ತತ್ವದಲ್ಲಿ ನಂಬಿಕೆ ಹೊಂದಿರುವ ಪ್ರತಿಯೊಬ್ಬರೂ ಕಾರ್ಯಕ್ರಮದಲ್ಲಿ ಭಾಗಿಯಾಗಬಹುದಾಗಿದೆ. ಬೆಳಿಗ್ಗೆ 10:30ಕ್ಕೆ ಸರಿಯಾಗಿ ಕಾರ್ಯಕ್ರಮ ಆರಂಭಗೊಳ್ಳಲಿದೆ. IAS ತರಬೇತಿ ಹಾಗೂ ಸಾಮಾಜಿಕ ನ್ಯಾಯದ ಹೋರಾಟದ ಬಗ್ಗೆ ಮಹತ್ವದ ವಿಷಯಗಳು ಕಾರ್ಯಕ್ರಮದಲ್ಲಿ ಚರ್ಚೆಯಾಗಲಿವೆ. ವಿದ್ಯಾರ್ಥಿಗಳು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಈ ವಿಶೇಷ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149…
ತುಮಕೂರು : ಇತ್ತೀಚೆಗೆ ವಿಜಯಪುರ ಜಿಲ್ಲೆಯ ಗಾಂಧಿನಗರದಲ್ಲಿ ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ದಲಿತ ಕಾರ್ಮಿಕರ ಮೇಲೆ ನಡೆಸಲಾದ ಮಾರಣಾಂತಿಕ ಹಲ್ಲೆಯನ್ನು ಖಂಡಿಸಿ ಇಂದು ತುಮಕೂರು ಜಿಲ್ಲೆಯ ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು. ತಮ್ಮ ಮನವಿ ಪತ್ರದಲ್ಲಿ, ಪರಿಶಿಷ್ಟ ಜಾತಿ ಕೂಲಿ ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ಹಾಗೂ ಜಾತಿನಿಂದನೆಯ ಮಾಡಿರುವವರ ವಿರುದ್ಧ ಕಾನೂನು ರೀತ್ಯಾ ಕ್ರಮ ವಹಿಸುವುದಲ್ಲದೇ ಹಲ್ಲೆಗೊಳಗಾದ ವ್ಯಕ್ತಿಗಳ ಕುಟುಂಬಕ್ಕೆ ಸರ್ಕಾರ ನೆರವನ್ನು ನೀಡಬೇಕು, ಕೂಲಿ ಕಾರ್ಮಿಕರ ಕುಟುಂಬಕ್ಕೆ ಉದ್ಯೋಗ, ಪರಿಹಾರ, ಮೂಲಭೂತ ಸೌಕರ್ಯಗಳು ಹಾಗೂ ಸೂಕ್ತ ರಕ್ಷಣೆ ಕೊಡುವಂತೆ ನಮ್ಮ ಮನವಿಯಲ್ಲಿ ಉಲ್ಲೇಖಿಸಿದ್ದೇವೆಂದು ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿಯ ಜಿಲ್ಲಾಧ್ಯಕ್ಷರಾದ ಎನ್.ಕೆ.ನಿಧಿಕುಮಾರ್ ತಿಳಿಸಿದ್ದಾರೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಊರಿನಲ್ಲಿ ನಡೆಯುವ ಜಾತ್ರೆಗೆಂದು ಉಮೇಶ್ ಮಾದಾರ, ಸದಾಶಿವ ಮಾದಾರ, ಸದಾಶಿವ ಬಬಲಾದಿ…
ಬೀದರ್: ನಗರದ ಭೀಮನಗರ ನಿವಾಸಿಯಾದ ಆರುತಿ (28) ಎಂಬ ಯುವತಿ ಕಾಣೆಯಾಗಿದ್ದು, ಅವರ ಮಾಹಿತಿ ದೊರೆತಲ್ಲಿ ತಿಳಿಸುವಂತೆ ಎಂದು ಬೀದರ್ ಉಪನಗರ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪ ನಿರೀಕ್ಷಕರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ. ಆರುತಿ ಅವರು ಜ.24 ರಂದು ಮನೆಯಿಂದ ಹೊರಗಡೆ ಹೋಗಿ ಕಾಣೆಯಾಗಿದ್ದು, ಅವರು 5 ಅಡಿ ಎತ್ತರವಾಗಿದ್ದು ಸಾಧಾರಣ ಮೈಕಟ್ಟು , ಗೋಧಿ ಮೈಬಣ್ಣ, ಕಪ್ಪು ಕೂದಲು, ಉದ್ದ ಮುಖ, ಅಗಲ ಹಣೆ ಉಳ್ಳವರಾಗಿದ್ದಾರೆ. ಕಾಣೆಯಾದ ಸಮಯದಲ್ಲಿ ಮೈಮೇಲೆ ಚಾಕಲೇಟ್ ಕಲರ್ ಚೆಕ್ಸ್ ಚೂಡಿದಾರ ಸಲ್ವಾರ್ ಮತ್ತು ಟಾಪ್ ಧರಿಸಿರುವ ಇವರು ಕನ್ನಡ, ಹಿಂದಿ, ಮಾರಾಠಿ ಭಾಷೆಯಲ್ಲಿ ಮಾತನಾಡುತ್ತಾರೆ ಎಂದು ಮಾಹಿತಿ ನೀಡಿದ್ದಾರೆ ಈ ಕಾಣೆಯಾದ ಮಹಿಳೆ ಬಗ್ಗೆ ಮಾಹಿತಿ ದೊರೆತಲ್ಲಿ ಬೀದರ್ ನಗರ ಪೊಲೀಸ್ ಠಾಣೆಯ ಪಿ ಎಸ್ ಐ ಮೊಬೈಲ್ ಸಂಖ್ಯೆ: 9480803445 ಗೆ ಸಂಪರ್ಕಿಸುವಂತೆ ಕೋರಲಾಗಿದೆ ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…
ತುಮಕೂರು: ನಗರದಲ್ಲಿ ಮಾದಕ ವಸ್ತುಗಳನ್ನಾಗಿ ಟೈಡಾಲ್ ಮಾತ್ರೆಗಳನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಏಳು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೆಡ್ ಪ್ಲಸ್ ನಲ್ಲಿ ಕೆಲಸ ಮಾಡುತ್ತಿದ್ದ ಭಾನುಪ್ರಕಾಶ್, ಮೆಡಿಕಲ್ ರೆಪ್ರೆಸೆಂಟಿವ್ ಕೆಲಸ ಮಾಡುತ್ತಿದ್ದ ರಾಘವೇಂದ್ರ, ಆಟೋ ಪ್ಲಾಸ್ಟ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅಭಿಷೇಕ, ಮೊಹಮ್ಮದ್ ಸೈಪ್ , ಸೈಯದ್ ಲುಕ್ಮಾನ್ , ಅಫ್ತಬ್ ಬಿನ್ ಹಮ್ಜು, ಗುರುರಾಜ್ ಬಂಧಿತ ಆರೋಪಿಗಳಾಗಿದ್ದಾರೆ. ತುಮಕೂರು ನಗರದ ಹೊಸಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯ ಎಸ್.ಐ.ಟಿ. ಬಡಾವಣೆ, ರೈಲ್ವೆ ಹಳಿಗಳ ಪಕ್ಕ, ಹಾಗೂ ಉಪ್ಪಾರಹಳ್ಳಿ ಬ್ರೀಡ್ಜ್, ಶ್ರೀದೇವಿ ಕಾಲೇಜುಗಳ ಬಳಿ , ಕೆಲ ಹುಡುಗರು ಮೆಡಿಕಲ್ ಶಾಪ್ ಗಳಲ್ಲಿ ಹೋಗಿ ಸದರಿ ಟೈಡಾಲ್ ಮಾತ್ರೆಗಳನ್ನು ಕೊಡುವಂತೆ ಕೇಳುತ್ತಿದ್ದರು. ಇದರಿಂದ ಪ್ರೇರೇಪಿತರಾದ ತುಮಕೂರು ನಗರದ ಮಧುಗಿರಿ ರಸ್ತೆಯಲ್ಲಿರುವ ಮೆಡ್ ಪ್ಲಸ್ ಮೆಡಿಕಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಭಾನು ಪ್ರಕಾಶ್ ಎಂಬುವನು ಮೆಡಿಕಲ್ ಗಳಿಗೆ ಬರುವವರುಗಳಿಗೆ ಟೈಡಾಲ್ ಮಾತ್ರೆಗಳನ್ನು ತಂದುಕೊಡುವಂತೆ ತಿಳಿಸಿದ್ದನು. ಅದರಲ್ಲಿ ಬೆಂಗಳೂರಿನಲ್ಲಿ ವಾಸವಾಗಿರುವ ರಾಘವೇಂದ್ರ…
ತುಮಕೂರು: ನಗರ ವ್ಯಾಪ್ತಿಯಲ್ಲಿರುವ ಸದಾಶಿವನಗರದ ಎಸ್.ಜಿ.ಆರ್. ಪ್ರೌಢಶಾಲೆ, ಶಿರಾ ಗೇಟ್ ನ ಶ್ರೀ ಕಾಳಿದಾಸ ಪದವಿಪೂರ್ವ ಕಾಲೇಜು, ಆದರ್ಶ ನಗರದ ಶ್ರೀ ಚೈತನ್ಯ ಟೆಕ್ನೋ ಶಾಲೆ, ಹೊರಪೇಟೆಯ ಶ್ರೀ ಚೈತನ್ಯ ಟೆಕ್ನೋಶಾಲೆ ಹಾಗೂ ಲೂರ್ದು ಮಾತಾ ಪ್ರೌಢಶಾಲೆಯಲ್ಲಿ ಫೆಬ್ರವರಿ 2ರಂದು ಬೆಳಿಗ್ಗೆ 10:30 ರಿಂದ 12 ಗಂಟೆ ಹಾಗೂ ಮಧ್ಯಾಹ್ನ 2 ರಿಂದ 3:30 ಗಂಟೆವರೆಗೆ ಎನ್ಎಂಎಂಎಸ್ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ಪ್ರವೇಶ ಪತ್ರಗಳನ್ನು ಆಯಾ ಪ್ರೌಢಶಾಲೆಗಳಿಂದ ಪಡೆದು, ನಿಗದಿಪಡಿಸಿರುವ ಪರೀಕ್ಷಾ ಕೇಂದ್ರಗಳಿಗೆ ಅರ್ಧ ಗಂಟೆ ಮುಂಚಿತವಾಗಿ ಹಾಜರಾಗಬೇಕೆಂದು ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4