Author: admin

ತುಮಕೂರು:  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2024–25ನೇ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಹೆಚ್.ಡಿ. ಅಧ್ಯಯನ ಪ್ರಾರಂಭಿಸಿರುವ(ದಿನಾಂಕ: 10.01.2024 ಮತ್ತು ಅದರ ನಂತರ ಪ್ರಥಮ ವರ್ಷದ ಪಿ.ಹೆಚ್.ಡಿ. ಪ್ರಾರಂಭಿಸಿರಬೇಕು) ಅಭ್ಯರ್ಥಿಗಳಿಗೆ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ–1, 2(ಎ), 3(ಎ) ಹಾಗೂ 3(ಬಿ)ಗೆ ಸೇರಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕದ ಶಾಸನಬದ್ಧ ವಿಶ್ವ ವಿದ್ಯಾಲಯ/ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿ.ಹೆಚ್.ಡಿ. ಅಧ್ಯಯನ ಮಾಡುತ್ತಿರುವ ಹೊಸ ಅಭ್ಯರ್ಥಿಗಳು ಮಾತ್ರ ಆಫ್–ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಫೆಬ್ರವರಿ 10 ಕಡೆಯ ದಿನವಾಗಿದ್ದು, ಹೆಚ್ಚಿನ ವಿವರಗಳಿಗಾಗಿ ಜಿಲ್ಲಾ ಅಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ತುಮಕೂರು ಅಥವಾ ಇಲಾಖಾ ವೆಬ್ ಸೈಟ್ https://bcwd.karnataka.gov.in  ಅಥವಾ ದೂ.ವಾ.ಸಂ 080–8050770004/ 0816–2955528ನ್ನು ಸಂಪರ್ಕಿಸಬಹುದು ಎಂದು ಇಲಾಖೆಯ ಜಿಲ್ಲಾ ಅಧಿಕಾರಿ ಸೋನಿಯಾ ವರ್ಣೇಕರ್ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್…

Read More

ತುಮಕೂರು:  ಪ್ರವಾಸೋದ್ಯಮ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು 1 ತಿಂಗಳ ವಸತಿ ಸಹಿತ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟೀನ್ ನಡೆಸಲು ಸಹಾಯಧನ ನೀಡಲಾಗುವುದು. ಅರ್ಜಿದಾರರು ಪ.ಜಾತಿ ಅಥವಾ ಪ.ಪಂಗಡಕ್ಕೆ ಸೇರಿದವರಾಗಿದ್ದು, 20 ರಿಂದ 45 ವರ್ಷದೊಳಗಿನವರಾಗಿರಬೇಕು ಹಾಗೂ 10ನೇ ತರಗತಿಯಲ್ಲಿ ಉತ್ತೀರ್ಣರಾಗಿದ್ದು, ಲಘು ವಾಹನ ಚಾಲನಾ ಪರವಾನಗಿಯನ್ನು ಪಡೆದಿರಬೇಕು. ನಗರ ಪ್ರದೇಶದವರ ವಾರ್ಷಿಕ ಆದಾಯ 2 ಲಕ್ಷ ರೂ. ಹಾಗೂ ಗ್ರಾಮಾಂತರ ಪ್ರದೇಶದವರ ವಾರ್ಷಿಕ ಆದಾಯ 1.50ಲಕ್ಷ ರೂ.ಗಳನ್ನು ಮೀರಬಾರದು. ಯಾವುದೇ ಸರ್ಕಾರಿ ಇಲಾಖೆ ಅಥವಾ ನಿಗಮ ಮಂಡಳಿಗಳಲ್ಲಿ ಖಾಯಂ ನೌಕರಿಯಲ್ಲಿರಬಾರದು. ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಮಟ್ಟದ ಪ್ರವಾಸೋದ್ಯಮ ಕಚೇರಿಯಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ತಹಶೀಲ್ದಾರರಿಂದ ಪಡೆದುಕೊಂಡಿರುವ ಚಾಲ್ತಿಯಲ್ಲಿರುವ ಜಾತಿ/ಆದಾಯ ಪ್ರಮಾಣಪತ್ರ, ಖಾಯಂ ಲಘು ವಾಹನ ಚಾಲನಾ ಪರವಾನಗಿ, ಎಸ್.ಎಸ್.ಎಲ್.ಸಿ. ಅಂಕಪಟ್ಟಿ, ಆಧಾರ್ ಕಾರ್ಡ್, ಯಾವುದೇ ಸರ್ಕಾರಿ ಇಲಾಖೆ/ನಿಗಮ/ಮಂಡಳಿಗಳಲ್ಲಿ ಖಾಯಂ…

Read More

ಮಹಾರಾಷ್ಟ್ರ: ತಾಯಿಯ ಗರ್ಭದೊಳಗಿರುವ ಪುಟ್ಟ ಮಗುವಿನೊಳಗೂ ಭ್ರೂಣ ಪತ್ತೆಯಾಗಿರುವ ಅಪರೂಪದ ಘಟನೆಯೊಂದು ಮಹಾರಾಷ್ಟ್ರದಲ್ಲಿ ನಡೆದಿದೆ. 32 ವರ್ಷ ವಯಸ್ಸಿನ ಗರ್ಭಿಣಿ ಮಹಿಳೆಯೊಬ್ಬರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ  ಸೋನೋಗ್ರಫಿ ನಡೆಸಿದ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ಭಾರತದಲ್ಲಿ ಕೇವಲ 15ರಿಂದ 20 ಇಂತಹ ಪ್ರಕರಣಗಳು ಈವರೆಗೆ ವರದಿಯಾಗಿವೆ. ಮಹಿಳೆಗೆ 9 ತಿಂಗಳುಗಳಾಗಿವೆ, ಆಕೆ ಇನ್ನು ಕೆಲವೇ ದಿನಗಳಲ್ಲಿ ಮಗುವಿಗೆ ಜನ್ಮ ನೀಡಲಿದ್ದಾರೆ. ಈ ಹಿಂದೆ ಮಾಡಲಾದ ಯಾವುದೇ ಸ್ಕ್ಯಾನಿಂಗ್ ಗಳಲ್ಲೂ ಇದು ಪತ್ತೆಯಾಗಿರಲಿಲ್ಲ ಎಂದು  ವೈದ್ಯರಾದ ಡಾ.ಪ್ರಸಾದ್ ಅಗರ್ವಾಲ್ ತಿಳಿಸಿದ್ದಾರೆ. ಅವಳಿಗಳ ಬೆಳವಣಿಗೆಯ ಸಂದರ್ಭಗಳಲ್ಲಿ ಈ ರೀತಿಯ ಸ್ಥಿತಿಗಳು ಉಂಟಾಗುತ್ತವೆ ಎಂದು ವೈದ್ಯರು ಅಭಿಪ್ರಾಯಪಟ್ಟಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು:  ವಿಕಲಚೇತನರ ಹಾಗೂ ಹಿರಿಯನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯ ಕೊರಟಗೆರೆ, ಗುಬ್ಬಿ, ಶಿರಾ ಹಾಗೂ ಮಧುಗಿರಿ ತಾಲ್ಲೂಕುಗಳಲ್ಲಿ ಹಿರಿಯ ನಾಗರಿಕರಿಗಾಗಿ ಜನವರಿ 30 ರಿಂದ ಫೆಬ್ರವರಿ 4ರವರೆಗೆ ಉಚಿತ ನೇತ್ರ ತಪಾಸಣೆ, ಶಸ್ತ್ರ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿದೆ. ಶಿಬಿರವು ಜನವರಿ 30ರಂದು ಕೊರಟಗೆರೆ ತಾಲ್ಲೂಕು ಎಲೆರಾಂಪುರ ಶ್ರೀ ನರಸಿಂಹಗಿರಿ ಸುಕ್ಷೇತ್ರದ ಶ್ರೀ ಕುಂಚಿಟಿಗರ ಮಹಾ ಸಂಸ್ಥಾನ ಮಠ, ಜನವರಿ 31ರಂದು ಗುಬ್ಬಿ ತಾಲ್ಲೂಕು ತ್ಯಾಗಟೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬೆಳಿಗ್ಗೆ 9:30 ಗಂಟೆಯಿಂದ ಹಾಗೂ ಫೆಬ್ರವರಿ 3ರಂದು ಶಿರಾ ತಾಲ್ಲೂಕು ತಾವರೆಕೆರೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರ, ಫೆಬ್ರವರಿ 4ರಂದು ಮಧುಗಿರಿ ತಾಲ್ಲೂಕು ಮಿಡಿಗೇಶಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬೆಳಿಗ್ಗೆ 9 ಗಂಟೆಯಿಂದ ನಡೆಯಲಿದೆ. ಹಿರಿಯ ನಾಗರಿಕರು ಈ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕೆಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಶಿಲ್ಪ ಎಂ.ದೊಡ್ಡಮನಿ ಪ್ರಕಟಣೆಯಲ್ಲಿ ಕೋರಿದ್ದಾರೆ. ನಮ್ಮತುಮಕೂರಿನ ಕ್ಷಣ…

Read More

ತುಮಕೂರು:  ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ 2025ನೇ ಶೈಕ್ಷಣಿಕ ಸಾಲಿನ 6ನೇ ತರಗತಿ ಪ್ರವೇಶಾತಿಗೆ ಈಗಾಗಲೇ ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 29ರವರೆಗೆ ವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸದೇ ಇರುವ ಅಭ್ಯರ್ಥಿಗಳು ಜನವರಿ 29ರ ರಾತ್ರಿ 11.59 ಗಂಟೆಯೊಳಗಾಗಿ ಆನ್‌ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಫೆಬ್ರವರಿ 15ರಂದು ಪ್ರವೇಶ ಪರೀಕ್ಷೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು:  ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‌ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮುಖ್ಯಮಂತ್ರಿಗಳು 2024–25ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆ ಘೋಷಿಸಿದ್ದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು 4 ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ/ವೇತನ ಪತ್ರ/ಬ್ಯಾಂಕ್ ಸ್ಟೇಟ್‌ಮೆಂಟ್‌ ಗಳಲ್ಲಿ ಯಾವುದಾದರೂ ದಾಖಲೆಗಳನ್ನು ಸೇವಾನುಭವಕ್ಕಾಗಿ ಒದಗಿಸಬೇಕು. ತಹಶೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ ಒದಗಿಸಬೇಕು. ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುವ ವರದಿಗಾರರಿಗೆ ಪ್ರತಿ ತಾಲ್ಲೂಕಿಗೆ ಸಂಪಾದಕರು ಸೂಚಿಸುವ ಒಬ್ಬರು, ಜಿಲ್ಲಾ ಮಟ್ಟದ ಪತ್ರಿಕೆಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಒಬ್ಬರು, ಆರು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಓರ್ವ ವರದಿಗಾರರು ಹಾಗೂ ಓರ್ವ ಫೋಟೋಗ್ರಾಫರ್, ಎಂಟು ಅಥವಾ ಹೆಚ್ಚು ಪುಟಗಳಲ್ಲಿ ಪ್ರಕಟವಾಗುವ…

Read More

ತುಮಕೂರು: ಜಿಲ್ಲಾಡಳಿತ ಹಮ್ಮಿಕೊಂಡಿದ್ದ 76ನೇ ಗಣರಾಜ್ಯೋತ್ಸವದ ಪಥಸಂಚಲನದಲ್ಲಿ ವಿಶ್ವವಿದ್ಯಾನಿಲಯ ಕಲಾ ಕಾಲೇಜಿನ ಎನ್‌ ಸಿಸಿ ತಂಡವು ಪ್ರಥಮ ಬಹುಮಾನ ಪಡೆದುಕೊಂಡಿದೆ. ಕ್ಯಾಪ್ಟನ್ ತಿರುಮಲೇಶ್ ಯಾದವ್ ತಂಡವನ್ನು ಮುನ್ನಡೆಸಿದ್ದರು. ಕುಲಪತಿ ಪ್ರೊ.ಎಂ. ವೆಂಕಟೇಶ್ವರಲು, ಕುಲಸಚಿವೆ ನಾಹಿದಾ ಜಮ್ ಜಮ್, ಪರೀಕ್ಷಾಂಗ ಕುಲಸಚಿವ ಪ್ರೊ. ಕೆ.ಪ್ರಸನ್ನಕುಮಾರ್, ಕಲಾ ಕಾಲೇಜಿನ ಪ್ರಾಂಶುಪಾಲ ಪ್ರೊ. ಬಿ. ಕರಿಯಣ್ಣ, ಹಿರಿಯ ಪ್ರಾಧ್ಯಾಪಕ ಪ್ರೊ. ಪಿ. ಪರಮಶಿವಯ್ಯ, ಎನ್‌ಸಿ.ಸಿ. ಅಧಿಕಾರಿ ವಾಸುದೇವ ತಂಡವನ್ನು ಅಭಿನಂದಿಸಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು:  ಬರುವ ಮಾರ್ಚ್ ಮಾಹೆಗೆ ಆರ್ಥಿಕ ವರ್ಷ ಮುಕ್ತಾಯಗೊಳ್ಳುವ ಹಿನ್ನೆಲೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳಿಗಾಗಿ ಬಿಡುಗಡೆಯಾಗಿರುವ ಅನುದಾನ ರದ್ದಾಗದಂತೆ ಕ್ರಮವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತಿ ಆಡಳಿತಾಧಿಕಾರಿ ದೀಪ ಚೋಳನ್ ಅವರು ಎಲ್ಲಾ ಇಲಾಖಾಧಿಕಾರಿಗಳಿಗೆ ನಿರ್ದೇಶನ ನೀಡಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಲಿಂಕ್‌ ಡಾಕ್ಯುಮೆಂಟ್, ರಾಜ್ಯ ಹಾಗೂ ಕೇಂದ್ರದಿಂದ ಯಾವುದೇ ಕಾಮಗಾರಿ/ಕಾರ್ಯಕ್ರಮ/ಯೋಜನೆಗಳಿಗೆ ಬಿಡುಗಡೆಯಾದ ಅನುದಾನವನ್ನು ರದ್ದಾಗದಂತೆ ಈ ಆರ್ಥಿಕ ವರ್ಷದೊಳಗಾಗಿ ಖರ್ಚು ಮಾಡಬೇಕು ಎಂದು ನಿರ್ದೇಶನ ನೀಡಿದರು. ಅಭಿವೃದ್ಧಿ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವುದರಲ್ಲಿ ಜಿಲ್ಲೆಯು ಮೊದಲ ಸ್ಥಾನದಲ್ಲಿರಬೇಕು. ಯಾವುದೇ ಕಾಮಗಾರಿಗಳನ್ನು ಬಾಕಿ ಉಳಿಸಿಕೊಳ್ಳಬಾರದು ಎಂದು ತಿಳಿಸಿದರಲ್ಲದೆ, ಮಳೆಯಿಂದ ಶಿಥಿಲವಾದ ಶಾಲಾ ಕೊಠಡಿಗಳನ್ನು ಕೂಡಲೇ ದುರಸ್ತಿಗೊಳಿಸಬೇಕು. ಕಾಲ ಕಾಲಕ್ಕೆ ದುರಸ್ತಿ ಕೈಗೊಂಡಲ್ಲಿ ಮಕ್ಕಳಿಗೆ ತರಗತಿ ನಡೆಸಲು ಕೊಠಡಿಗಳ ಕೊರತೆ ಉಂಟಾಗದು ಎಂದು ಸಲಹೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲಿಸಿದ ಅವರು ಅಂಕಿ–ಅಂಶಗಳ ಪ್ರಕಾರ ಸರ್ಕಾರದಿಂದ…

Read More

ಯಾದಗಿರಿ:  ಕರ್ನಾಟಕ ರಾಜ್ಯವು ಪ್ರತಿ ಕ್ಷೇತ್ರದಲ್ಲಿ ಅಭೂತಪೂರ್ವ ಪ್ರಗತಿಯನ್ನು ಕಾಣುತ್ತಿದ್ದು, 2024 –25 ನೇ ಸಾಲಿಗೆ 7,560 ಕೋ.ರೂ. ಗಳನ್ನು ರೈಲ್ವೆ ಆಯವ್ಯಯ ಅನುದಾನ ಸಹ ಒದಗಿಸಲಾಗಿದೆ ಎಂದು ಕೇಂದ್ರ  ರೈಲ್ವೆ ಖಾತೆ  ರಾಜ್ಯ ಸಚಿವರಾದ ವಿ.ಸೋಮಣ್ಣ ಅವರು ಹೇಳಿದರು. ಹಜರತ್ ನಿಜಾಮುದ್ದೀನ್ -ಕೆಎಸ್ಆರ್ ಬೆಂಗಳೂರು ರಾಜಧಾನಿ ಎಕ್ಸ್ಪ್ರೆಸ್ ರೈಲು , ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ಪ್ರಾಯೋಗಿಕವಾಗಿ ನಿಲುಗಡೆ ಕಾರ್ಯಕ್ರಮದ ಅಂಗವಾಗಿ ವಿಡಿಯೋ ಕಾನ್ಫರೆನ್ಸ್ ಮೂಲಕ ಹಸಿರು ನಿಶಾನೆ ತೋರಿ ಚಾಲನೆ ನೀಡುವ ಮೂಲಕ  ಅವರು ಮಾತನಾಡಿದರು. ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರ ಘನ ನೇತೃತ್ವದಲ್ಲಿ ಕರ್ನಾಟಕ ರಾಜ್ಯವು ಎಲ್ಲ ಕ್ಷೇತ್ರಗಳಲ್ಲಿ ಗಣನೀಯ ಪ್ರಗತಿ ಕಾಣುತ್ತಿದೆ. ವಿಶೇಷವಾಗಿ ರೈಲ್ವೆ ಕ್ಷೇತ್ರದ ಅಭಿವೃದ್ಧಿಗಾಗಿ 2024– 25 ನೇ ಸಾಲಿಗೆ 7,560 ಕೋ. ರೂ.ಗಳನ್ನು ಒದಗಿಸಿದ್ದು, ಕಳೆದ ನಾಲ್ಕು- ಐದು ವರ್ಷಗಳಲ್ಲಿ ಕರ್ನಾಟಕದಲ್ಲಿ ರೈಲ್ವೆಜಾಲ ಗಣನೀಯ ಪ್ರಗತಿ ಕಂಡಿದೆ. ಹೊಸ ರೈಲ್ವೆ ಲೈನ್, ವಿದ್ಯುದ್ದೀಕರಣ ಹಾಗೂ ಸಾಮರ್ಥ್ಯವನ್ನು ಹೆಚ್ಚಿಸಿಕೊಂಡಿದೆ ಎಂದು ಹೇಳಿದರು. ಯಾದಗಿರಿಯಲ್ಲಿ ರಾಜಧಾನಿ ಎಕ್ಸ್ಪ್ರೆಸ್…

Read More

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಶ್ರೀರಾಮುಲು ನಂತರ ಇದೀಗ ಹಾಲಿ ಸಂಸದ ಡಾ. ಕೆ. ಸುಧಾಕರ್ ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ಆಕ್ರೋಶ ಹೊರ ಹಾಕಿದ್ದಾರೆ. ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಸಂದೀಪ್ ಅವರನ್ನು ಆಯ್ಕೆ ಮಾಡಿರುವುದರಿಂದ ಸಿಡಿದೆದ್ದಿರುವ ಸುಧಾಕರ್ ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಬಹಿರಂಗವಾಗಿಯೇ ವಿಜಯೇಂದ್ರ ವಿರುದ್ಧ ವಾಗ್ದಾಳಿ ನಡೆಸಿದರು. ಜಿಲ್ಲಾಧ್ಯಕ್ಷರ ನೇಮಕದಲ್ಲಿ ವಿಜಯೇಂದ್ರ ಅವರು ಏಕಪಕ್ಷೀಯ ನಿರ್ಧಾರ ಕೈಗೊಂಡಿದ್ದಾರೆ ಎಂದು ಆರೋಪಿಸಿದ ಸುಧಾಕರ್, ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ಕೆಳಗಿಳಿಸಬೇಕು ಎಂದು ಆಗ್ರಹಿಸಿದ್ದಾರೆ. ನಿಮ್ಮ ನಾಯಕತ್ವದಲ್ಲಿ ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಒಂದು ಸೀಟು ಗೆಲ್ಲಿ ನೋಡೋಣ ಎಂದು ಕೆ. ಸುಧಾಕರ್ ಅವರು ವಿಜಯೇಂದ್ರ ಅವರಿಗೆ ಬಹಿರಂಗ ಸವಾಲು ಹಾಕಿದ್ದಾರೆ. ತಮಗೆ ಬೇಕಾದವರಿಗೆ ಅಧ್ಯಕ್ಷ, ರಾಜ್ಯ ಕಾರ್ಯದರ್ಶಿ, ರಾಜ್ಯ ಪ್ರಧಾನ ಕಾರ್ಯದರ್ಶಿ, ರಾಜ್ಯ ಉಪಾಧ್ಯಕ್ಷರನ್ನು ಮಾಡಿಕೊಂಡಿದ್ದಾರೆ. ಇವತ್ತಿನ ರಾಜ್ಯಾಧ್ಯಕ್ಷ ಮಿಸ್ಟರ್ ಬಿ.ವೈ. ವಿಜಯೇಂದ್ರ ಅವರ ಧೋರಣೆ ಬೇಸರ ತಂದಿದೆ ಎಂದು ಅಸಮಾಧಾನ ಹೊರಹಾಕಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…

Read More