Author: admin

ಬೀದರ್:  ಜಿಲ್ಲೆಯ ಹುಮನಾಬಾದ್  ವೀರಭದ್ರೇಶ್ವರ ಜಾತ್ರಾ ಅಂಗವಾಗಿ ಜಿಲ್ಲಾ ಉಸ್ತುವಾರಿ ಸಚಿವರಾದ  ಈಶ್ವರ ಬಿ. ಖಂಡ್ರೆರವರು ಹಾಗೂ ಮಾಜಿ ಸಚಿವರಾದ ರಾಜಶೇಖರ ಬಿ. ಪಾಟೀಲ್ ರವರು ಜಂಟಿಯಾಗಿ ವೀರಭದ್ರೇಶ್ವರ ದೇವರ ದರ್ಶನ ಪಡೆದುಕೊಂಡರು. ಈ ಸಂದರ್ಭದಲ್ಲಿ ಲೋಕಸಭೆ ಸದಸ್ಯರಾದ  ಸಾಗರ ಖಂಡ್ರೆ, ವಿಧಾನ‌ ಪರಿಷತ್ ಸದಸ್ಯರಾದ  ಡಾ.ಚಂದ್ರಶೇಖರ ಪಾಟೀಲ್, ಭೀಮರಾವ ಪಾಟೀಲ್, ಡಿ.ಸಿ.ಸಿ. ಬ್ಯಾಂಕ್ ನ ಉಪಾಧ್ಯಕ್ಷರು ಅಭಿಷೇಕ  ಪಾಟೀಲ್ , ದೇವಸ್ಥಾನ ಮಂಡಳಿಯ ಅಧ್ಯಕ್ಷರಾದ  ವೀರಣ್ಣ ಪಾಟೀಲ್,  ಧನರಾಜ ತಾಳಂಪಳ್ಳಿ  ರವರು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ವರದಿ: ಅರವಿಂದ ಮಲ್ಲಿಗೆ,  ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೀದರ್:  ಲೋಕಸಭಾ ಕ್ಷೇತ್ರದ ಕೋಸಂ ಗ್ರಾಮದ ರೈತ ಶಿವಪುತ್ರ ಸ್ವಾಮಿ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಸಂಬಂಧಿಸಿ ಬೀದರ್ ಲೋಕ ಸಭಾ ಕ್ಷೇತ್ರದ ಸಂಸದರಾದ  ಸಾಗರ್ ಖಂಡ್ರೆ ಅವರು, ಮೃತರ  ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ರೈತನ ಕುಟುಂಬಕ್ಕೆ ತ್ವರಿತ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ತಕ್ಷಣ ಕ್ರಮಕೈಗೊಳ್ಳುವ ಇದೇ ವೇಳೆ ಸಂಸದರು ಸೂಚನೆ ನೀಡಿದಾರೆ. ಆತ್ಮಹತ್ಯೆ ಯಾವ ಸಮಸ್ಯೆಗೂ ಪರಿಹಾರವಲ್ಲ, ರೈತರ ಹಿತ ಕಾಪಾಡುವುದು ನಮ್ಮ ಪ್ರಥಮ ಕರ್ತವ್ಯವಾಗಿದೆ. ದುಡುಕು ನಿರ್ಧಾರ ತೆಗೆದುಕೊಳ್ಳಬಾರದೆಂದು ಸಂಸದ ಸಾಗರ್ ಖಂಡ್ರೆ ಅವರು ಮನವಿ ಮಾಡಿದ್ದಾರೆ. ವರದಿ: ಅರವಿಂದ ಮಲ್ಲಿಗೆ, ಬೀದರ್ ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಕೊರಟಗೆರೆ : ಪಟ್ಟಣದ 9ನೇ ವಾರ್ಡಿನ ದೊಡ್ಡಪೇಟೆಯಲ್ಲಿ ಪೂರ್ವಿಕರ ಕಾಲದಿಂದಲೂ ನೆಲೆಸಿರುವ ರಾಮಾಂಜನನ ಬೀದಿ ಹಟ್ಟಿ ಮಾರಮ್ಮ ಎಂದೇ ಪ್ರಖ್ಯಾತಿಗೊಂಡಿರುವ  ಮಾರಮ್ಮ ದೇವಿಯ  ನೂತನ ದೇವಸ್ಥಾನ ನಿರ್ಮಾಣ ಹಾಗೂ  ದೇವಿಯ ಮೆರವಣಿಗೆ ವಿಗ್ರಹವನ್ನು ಸ್ಥಾಪಿಸಲಾಯಿತು. ವಾರ್ಡಿನ ಪ್ರತಿ ಮನೆಯಿಂದ  ದೇವಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.. ದೇವಸ್ಥಾನದ ಅರ್ಚಕರು ಮಾತನಾಡಿ, ನಮ್ಮ ಹಿಂದೂ ಧರ್ಮದಲ್ಲಿ ಅದರಲ್ಲೂ ಯುವಕರಲ್ಲಿ ದೇವರ ಮೇಲಿನ ಭಕ್ತಿ ದಿನೇ ದಿನೇ  ಕಡಿಮೆಯಾಗುತ್ತಿದೆ ನಮ್ಮ ಹಿಂದೂ ಧರ್ಮವನ್ನು ಉಳಿಸಿ ಬೆಳೆಸಬೇಕು ದೇವರಲ್ಲಿ ನಂಬಿಕೆ ಇಡಬೇಕು ನಮ್ಮ ವಾರ್ಡಿನ ಯುವಕರೆಲ್ಲರೂ ಸೇರಿ ಈ ದೇವಿಯ  ದೇವಸ್ಥಾನದ ಜೀವನೋದ್ಧಾರವನ್ನ ಮಾಡಿದ್ದೇವೆ  ಪ್ರತಿ ಗ್ರಾಮದಲ್ಲೂ ದೇವಸ್ಥಾನ ಶಾಲೆ ಇರಲೇಬೇಕು  ದೇವಸ್ಥಾನದಲ್ಲಿ ಭಕ್ತಿ ಶಾಲೆಯಲ್ಲಿ ವಿದ್ಯೆ  ಪಡೆದವನು ದೇಶವನ್ನೇ ಗೆಲ್ಲಬಲ್ಲ ಎಂದು ತಿಳಿಸಿದರು ಗ್ರಾಮಸ್ಥರು ಒಬ್ಬರು ಮಾತನಾಡಿ,  ನಾವು ಚಿಕ್ಕ ವಯಸ್ಸಿನಲ್ಲಿ ಹುಷಾರಿಲ್ಲದಿದ್ದಾಗ ಆಸ್ಪತ್ರೆಗೆ ಹೋಗುತ್ತಿರಲಿಲ್ಲ ನಮ್ಮ ತಾಯಿ ತಂದೆ ಇಲ್ಲಿ ಹರಕೆ ಕಟ್ಟುತ್ತಿದ್ದರು  ಹರಕೆ ಕಟ್ಟಿದ ಮರುದಿನವೇ  ನಾವು ಆರೋಗ್ಯದಿಂದ ಓಡಾಡುತ್ತಿದ್ದೆವು  ಅದೇ ಭಕ್ತಿ…

Read More

ತುಮಕೂರು:  ಆಯಿಲ್‌ ಟ್ಯಾಂಕ್ ಬ್ಲಾಸ್ಟ್ ಆಗಿ ಇಬ್ಬರು ಕಾರ್ಮಿಕರು ಮೃತಪಟ್ಟು, ಮೂವರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿರುವ ಘಟನೆ ತುಮಕೂರಿನ  ಹೊರವಲಯದ ಅಂತಸರನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಅಂತಸರಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿರುವಂತ ಪರಿಮಳ ಆಗ್ರೋ ಫುಡ್ ಇಂಡಸ್ಟ್ರೀಸ್‌ ನಲ್ಲಿ ಆಯಿಲ್ ಟ್ಯಾಂಕ್ ಸ್ಫೋಟಗೊಂಡ ಪರಿಣಾಮ ಬಿಹಾರ ಮೂಲದ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರ್ಮಿಕ ಚಂದನ್ ಮತ್ತು ಶರ್ಮ ಮೃತರು. ಭತ್ತದ ಹೊಟ್ಟಿನಿಂದ ಎಣ್ಣೆ ತೆಗೆಯುವ ಫ್ಯಾಕ್ಟರಿ ಇದಾಗಿದ್ದು, ಆಯಿಲ್ ಟ್ಯಾಂಕ್ ಬಳಿ ಐವರು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಆಯಿಲ್ ಟ್ಯಾಂಕ್ ಬ್ಲಾಸ್ಟ್ ಆಗಿದೆ. ಆಗ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನುಳಿದ ಮೂವರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳು ಕಾರ್ಮಿಕರನ್ನು ತುಮಕೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಸಂಬಂಧ ತುಮಕೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ್ದ ತುಮಕೂರು ಎಸ್ಪಿ ಅಶೋಕ್ ಕೆ. ವೆಂಕಟ್ ಮಾತನಾಡಿ,  ಅಂತಸರನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಪರಿಮಾಳ‌ ರೈಸ್ ಬ್ರಾಯಿನ್ ಆಯಿಲ್…

Read More

ಖಾರ್ಗೋನ್: ಇಂಟರ್ನೆಟ್ ಸ್ಟಾರ್ ಮೋನಾಲಿಸಾಳ ಪ್ರಯಾಗ್‌ರಾಜ್ ಮಹಾಕುಂಭದಲ್ಲಿ ಮಾಲೆ ಮಾರುವ ಬಿಸಿನೆಸ್ ಸಂಪೂರ್ಣವಾಗಿ ನಷ್ಟದಲ್ಲಿದೆಯಂತೆ. ಒಂದೆಡೆ ಜನಪ್ರಿಯತೆ ದೇಶಾದ್ಯಂತ ಮನೆ ಮಾಡಿದ್ರೆ, ಇನ್ನೊಂದೆಡೆ ಅದೇ ಜನಪ್ರಿಯತೆ ತನ್ನ  ವ್ಯಾಪಾರಕ್ಕೆ ಮುಳುವಾಗಿದೆ ಎಂದು ಆಕೆ ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ ನೋವು ತೋಡಿಕೊಂಡಿದ್ದಾಳೆಡ. ಮಹಾಕುಂಭದಲ್ಲಿ ಮಾಲೆ ಮಾರುವ ಬಿಸಿನೆಸ್ ಚೆನ್ನಾಗಿ ನಡೆಯಲಿಲ್ಲ. 35,000 ರೂಪಾಯಿ ಸಾಲ ಮಾಡಿ ವಾಪಸ್ ಬರಬೇಕಾಯ್ತು ಎಂದು  ಆಕೆ ಹೇಳಿದ್ದಾರೆ. ಮಹಾಕುಂಭದಲ್ಲಿ ಮೀಡಿಯಾ ಮತ್ತು ಭಕ್ತರಿಂದ ತುಂಬಾ ಕಿರಿಕಿರಿಯಾಯಿತು, ಅದಕ್ಕೆ ವಾಪಸ್ ಬರಬೇಕಾಯ್ತು ಎಂದೂ ಹೇಳಿದರು ಸೋಮವಾರ ಮೀಡಿಯಾ ಮುಂದೆ ಮಾತನಾಡಿದ ಅವರು,  ಪ್ರಯಾಗ್‌ ರಾಜ್‌ ನಲ್ಲಿ ಚೆನ್ನಾಗಿತ್ತು, ಆದರೆ ನಿರಂತರ ಕಿರಿಕಿರಿ ಮತ್ತು ಅನಾರೋಗ್ಯದಿಂದ ವಾಪಸ್ ಬರಬೇಕಾಯ್ತು ಎಂದು ಹೇಳಿದರು. ಸಿನಿಮಾದಲ್ಲಿ ನಟಿಸುವ ಬಗ್ಗೆ ಮೋನಾಲಿಸಾ, ಅಮ್ಮ–ಅಪ್ಪ ಅನುಮತಿ ಕೊಟ್ಟರೆ ನಟಿಸುತ್ತೇನೆ ಎಂದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ತುಮಕೂರು:  ದೆಹಲಿಯಲ್ಲಿ ಜನವರಿ 26ರಂದು ನಡೆದ 76ನೇ ಗಣರಾಜ್ಯೋತ್ಸವದ ಅಂಗವಾಗಿ ಪಥ ಸಂಚಲನದಲ್ಲಿ ಭಾಗವಹಿಸಿದ್ದ ವಿವಿಧ ರಾಜ್ಯಗಳ ಸ್ತಬ್ಧಚಿತ್ರಗಳನ್ನು ಜನಾಭಿಪ್ರಾಯ ಆಧರಿಸಿ ಪ್ರಶಸ್ತಿಗೆ ಪರಿಗಣಿಸಲು ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯವು ಆನ್‌ ಲೈನ್‌ ನಲ್ಲಿ ಓಟ್ ಮಾಡಲು ಅವಕಾಶ ಕಲ್ಪಿಸಿದೆ. ಈ ಬಾರಿ ಕರ್ನಾಟಕವು ‘ಲಕ್ಕುಂಡಿ: ಶಿಲ್ಪಕಲೆಯ ತೊಟ್ಟಿಲುʼ ಸ್ತಬ್ಧಚಿತ್ರದೊಂದಿಗೆ ದೆಹಲಿಯ ಪಥಸಂಚಲನದಲ್ಲಿ ಭಾಗವಹಿಸಿದ್ದು, ಅಪಾರ ಜನರ ಮೆಚ್ಚುಗೆಗೆ ಪಾತ್ರವಾಗಿರುವ ನಮ್ಮ ರಾಜ್ಯದ ಸ್ತಬ್ಧಚಿತ್ರವನ್ನು ಓಟ್ ಮಾಡಿ ಬೆಂಬಲಿಸುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ಎಂ. ನಿಂಬಾಳ್ಕರ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಕೇಂದ್ರ ಸರ್ಕಾರವು ಅತ್ಯುತ್ತಮ ಸ್ತಬ್ಧಚಿತ್ರದ ಆಯ್ಕೆಗಾಗಿ ಸಾರ್ವಜನಿಕರು ಆನ್‌ಲೈನ್, ಇ–ಮೇಲ್ ಮತ್ತು ಎಸ್‌ ಎಂಎಸ್ ಮೂಲಕ ಓಟ್ ಮಾಡಲು ಅವಕಾಶ ಕಲ್ಪಿಸಿದೆ. ಜನವರಿ 28ರ ಮಧ್ಯರಾತ್ರಿ 12ರವರೆಗೆ ಓಟ್ ಮಾಡಲು ಅವಕಾಶವಿದೆ. ಸಾರ್ವಜನಿಕರು ನಿಗಧಿತ ಅವಧಿಯೊಳಗೆ ಓಟ್ ಮಾಡಿ ರಾಜ್ಯದ ಸ್ತಬ್ಧಚಿತ್ರವನ್ನು ಬೆಂಬಲಿಸುವಂತೆ ಅವರು ಮನವಿ ಮಾಡಿದ್ದಾರೆ. ಓಟ್ ಮಾಡುವ ವಿಧಾನದ ಬಗ್ಗೆ ವಾರ್ತಾ…

Read More

ನವದೆಹಲಿ: ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31, 2025 ರಿಂದ ಪ್ರಾರಂಭವಾಗಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಜನವರಿ 31 ರಂದು ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಸಂಸತ್ತಿನ ಬಜೆಟ್ ಅಧಿವೇಶನದ ಮೊದಲ ಭಾಗವು 31 ಜನವರಿ 2025 ರಂದು ಪ್ರಾರಂಭವಾಗಿ ಫೆಬ್ರವರಿ 13 ರಂದು ಕೊನೆಗೊಳ್ಳುತ್ತದೆ. ಅಧಿವೇಶನದ ಎರಡನೇ ಭಾಗವು 10 ಮಾರ್ಚ್ 2025 ರಂದು ಪ್ರಾರಂಭವಾಗುತ್ತದೆ ಮತ್ತು 4 ಏಪ್ರಿಲ್ 2025 ರವರೆಗೆ ಮುಂದುವರೆಯುತ್ತದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1 ರಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ 2025 ಅನ್ನು ಮಂಡಿಸಲಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ಬೆಂಗಳೂರು: ಅರಣ್ಯವಾಸಿಗಳನ್ನು ಯಾವುದೇ ಕಾರಣಕ್ಕೂ ಕಾಡಿನಿಂದ ಹೊರಗೆ ಹಾಕಬಾರದು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಾತನಾಡಿದ ಅವರು, ಅನುಸೂಚಿತ ಜಾತಿ, ಬುಡಕಟ್ಟುಗಳ ರಾಜ್ಯಮಟ್ಟದ ಜಾಗೃತ ಉಸ್ತುವಾರಿ ಮೇಲ್ವಿಚಾರಣಾ ಸಮಿತಿ‌ ಜೊತೆ ಸಭೆ ನಡೆಸಿದ ಅವರು, ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಹಕ್ಕು ಪತ್ರ ಸಮರ್ಪಕವಾಗಿ ನೀಡಬೇಕು. ಅರಣ್ಯವಾಸಿಗಳನ್ನು ಕಾಡಿನಿಂದ ಹೊರಗೆ ಹಾಕಬಾರದು ಎಂದು ಅವರು ಸೂಚನೆ ನೀಡಿದರು. ಸಭೆಗೆ ಅಧಿಕಾರಿಗಳು ನೀಡಿರುವ ಅನುಪಾಲನಾ ವರದಿಯಲ್ಲಿ ಮುಂದಿನ ಬಾರಿ ಜಿಲ್ಲಾವಾರು ಅಂಕಿ ಅಂಶ ನಮೂದಿಸಲು ಸಿಎಂ ಸೂಚನೆ ನೀಡಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

Read More

ವಯನಾಡು: ಮಹಿಳೆಯೊಬ್ಬರನ್ನು ಕೊಂದು ತಿಂದಿದ್ದ ನರಭಕ್ಷಕ ಹುಲಿಯೊಂದರ ಹೊಟ್ಟೆಯಲ್ಲಿ ಕಿವಿಯೋಲೆ, ಕೂದಲು, ಬಟ್ಟೆ ಪತ್ತೆಯಾಗಿರುವ ಘಟನೆ ಕೇರಳದ ವಯನಾಡಿನಲ್ಲಿ ನಡೆದಿದೆ. ಕೇರಳದ ವಯನಾಡಿನ ಪಿಲಕಾವುವಿನ ಜನನಿಬಿಡ ಪ್ರದೇಶದ ಮನೆಯೊಂದರ ಹಿಂದೆ ಸತ್ತು ಬಿದ್ದಿದ್ದ ಹುಲಿಯ ಹೊಟ್ಟೆಯಲ್ಲಿ ಮಹಿಳೆಯೊಬ್ಬರ ಕಿವಿಯೋಲೆ, ಕೂದಲು ಮತ್ತು ಬಟ್ಟೆ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಹುಲಿ ಕಳೆದ ಎರಡು ದಿನಗಳ ಹಿಂದೆ ಕಾಫಿ ಬೀಜ ಸಂಗ್ರಹಿಸಲು ತೆರಳಿದ್ದ ರಾಧಾ ಎಂಬ ಮಹಿಳೆಯ ಮೇಲೆ ಹುಲಿ ದಾಳಿ ನಡೆಸಿ, ಕೊಂದು ಹಾಕಿ ಎಳೆದೊಯ್ದಿತ್ತು. ಇದೀಗ ಹುಲಿ ಸಾವಿಗೀಡಾಗಿದ್ದು, ಇದೀಗ ಹುಲಿಯ ಹೊಟ್ಟೆಯಲ್ಲಿ ಮಹಿಳೆ ದೇಹದ ಭಾಗಗಳು ಪತ್ತೆಯಾಗಿದೆ. ಸುಮಾರು ನಾಲ್ಕರಿಂದ ಐದು ವರ್ಷ ವಯಸ್ಸಿನ ಹೆಣ್ಣು ಹುಲಿಯನ್ನು ಸೋಮವಾರ ಬೆಳಗ್ಗೆ ವನ್ಯಜೀವಿ ಸಿಬ್ಬಂದಿಯ ತಂಡ ಗುರುತಿಸಿ ಬೆನ್ನಟ್ಟಿದ್ದರು. ನಂತರ ಪಿಲಕಾವುವಿನ ಜನನಿಬಿಡ ಪ್ರದೇಶದ ಮನೆಯೊಂದರ ಹಿಂದೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಬಳಿಕ ಹುಲಿ ಸಾವಿಗೀಡಾಗಿದೆ ಎಂದು ಖಚಿತ ಪಡಿಸಿಕೊಂಡ ಅಧಿಕಾರಿಗಳು ಅದರ ಮರಣೋತ್ತರ ಪರೀಕ್ಷೆ ನಡೆಸಿದರು. ಈ…

Read More

ತುಮಕೂರು:  ಮೈಕ್ರೋ ಫೈನಾನ್ಸ್ ನಲ್ಲಿ ಹಣಕೊಡಿಸೋದಾಗಿ ನಂಬಿಸಿ  50 ಲಕ್ಷಕ್ಕೂ ಅಧಿಕ ಹಣ ಡ್ರಾ ಮಾಡಿ ದಂಪತಿ ಪರಾರಿಯಾಗಿರುವ ಘಟನೆ ದೊಡ್ಡಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ದೊಡ್ಡಹೊಸಹಳ್ಳಿ ಗ್ರಾಮದಲ್ಲಿ ಕಳೆದ 12 ವರ್ಷಗಳಿಂದ ವಾಸವಿದ್ದ ದಂಪತಿ, 10ಕ್ಕೂ ಅಧಿಕ ಮೈಕ್ರೋ ಫೈನಾನ್ಸ್ ಕಂಪನಿಗಳಿಂದ ಗ್ರಾಮಸ್ಥರ ಹೆಸರಿನಲ್ಲಿ ಸಾಲ ತೆಗೆದಿದ್ದರು. ಸಾಲ ಪಡೆದು ಮರಳಿಸದೆ ಹಣದ ಸಮೇತ ದಂಪತಿಗಳು ಪರಾರಿಯಾಗಿದ್ದಾರೆ. ಮೈಕ್ರೋ ಫೈನಾನ್ಸ್ ಕಂಪನಿ ಜತೆಗೆ ದಂಪತಿಗಳಿಗೆ ಒಡನಾಟವಿದ್ದು,  ಗ್ರಾಮದ 35 ಮಂದಿಗೆ ಸಾಲ ಕೊಡಿಸಿ ಪ್ರತಿ ತಿಂಗಳು ನಾವೇ ಹಿಂತಿರುಗಿಸೋದಾಗಿ ಹೇಳಿದ್ದರು ಎನ್ನಲಾಗಿದೆ. ಸದ್ಯ 50 ಲಕ್ಷಕ್ಕೂ ಹೆಚ್ಚು ಹಣ ಪಡೆದು ದಂಪತಿ ಪರಾರಿಯಾಗಿದ್ದಾರೆ. ಸಾಲ ಮರು ಪಾವತಿ ಮಾಡುವಂತೆ ಇದೀಗ ಮೈಕ್ರೋ ಫೈನಾನ್ಸ್ ಕಂಪನಿ ಗ್ರಾಮಸ್ಥರಿಗೆ ನೋಟಿಸ್ ನೀಡಿದೆ. ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.…

Read More