Subscribe to Updates
Get the latest creative news from FooBar about art, design and business.
- ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 963ನೇ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ
- ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಬಿಜೆಪಿ–ಜೆಡಿಎಸ್ ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು ಸ್ಪಷ್ಟನೆ
- ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!
- ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?
- ಮೂರು ಬಾರಿ ಸಿಎಂ ಹುದ್ದೆ ಕೈತಪ್ಪಿತು, ಅಂದು ನಾನು ಗೆದ್ದಿದ್ದರೆ…: ಭಾವುಕರಾದ ಡಿಸಿಎಂ ಡಾ. ಜಿ. ಪರಮೇಶ್ವರ್!
- ಸರ್ಕಾರಿ ಜಾಹೀರಾತಿನಲ್ಲಿ ಫೋಟೋ ಕೈಬಿಟ್ಟ ವಿವಾದ: ಸಿಎಂ ಡಿಕೆಶಿ ಜೊತೆ ಚರ್ಚಿಸುವೆ ಎಂದ ಡಿಸಿಎಂ ಪರಮೇಶ್ವರ್
- ಪಾವಗಡ: ರಂಗಸಮುದ್ರದಲ್ಲಿ ವಾಲ್ಮೀಕಿ ಮೂರ್ತಿಗೆ ವಿಶೇಷ ಪೂಜೆ
- ಹುಮನಾಬಾದ್ | ಚಿತ್ತಕೋಟಾ ಗ್ರಾಮಕ್ಕೆ ಸಮರ್ಪಕ ಬಸ್ ಸೇವೆ ಒದಗಿಸಲು ದಸಂಸ ಆಗ್ರಹ
Author: admin
ತುಮಕೂರು: ಜಿಲ್ಲಾಡಳಿತ ಮತ್ತು ಜಿಲ್ಲಾ ತೋಟಗಾರಿಕಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಗಣರಾಜ್ಯೋತ್ಸವದ ಹಿನ್ನೆಲೆ ತುಮಕೂರು ನಗರದಲ್ಲಿ ಆಯೋಜಿಸಲಾಗಿರುವ ಫಲಪುಷ್ಪ ಪ್ರದರ್ಶನದಲ್ಲಿ ಸರ್ವ ಧರ್ಮ ಗುರುಪರಂಪರೆಯನ್ನು ನೆನಪಿಸಿಕೊಳ್ಳುವ ಪ್ರಯತ್ನ ಮಾಡಲಾಗಿದೆ . ಫಲಪುಷ್ಪ ಪ್ರದಶನದಲ್ಲಿ ಗುರುಪರಂಪರೆಯನ್ನು ಪರಿಚಯಿಸುವ ಪ್ರಯತ್ನ ನಡೆದಿದಿದ್ದು, ತುಮಕೂರಿನ ತ್ರಿವಿಧ ದಾಸೋಹಿ ಶ್ರೀ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರನ್ನು ನೆನಪಿಸಿಕೊಳ್ಳಲಾಗಿದ್ದು. ಅವರ ಭಾವಚಿತ್ರವನ್ನು ಸುಂದರವಾದ ತೆಂಗಿನ ಗರಿಗಳ ಕಲಾಕೃತಿಯೊಳಗೆ ಇರಿಸಿ ಪ್ರದರ್ಶಿಸಲಾಗಿದೆ. ಅದೇ ರೀತಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಅವರುಗಳ ಸಮಾಜಸೇವೆಯನ್ನು ಬಿದಿರಿನ ಸುಂದರವಾದ ಕಲಾಕೃತಿಯಲ್ಲಿ ಇರಿಸಲಾಗಿದ್ದು ಅವರನ್ನು ನೆನಪಿಸುವ ಪ್ರಯತ್ನ ಮಾಡಲಾಗಿದೆ. ಒಟ್ಟಾರೆ ಫಲಪುಷ್ಪ ಪ್ರದಶನದಲ್ಲಿ ಜೈನ ಧಮದ ಶ್ರೀ ಶಾಂತಿಸಾಗರ ಮುನಿಗಳ ಗುರುಪರಂಪರೆಯನ್ನು ಮತ್ತು ದಿವ್ಯಾಕಾಶ ಸಮವಸರಣವನ್ನು ನೆನಪಿಸುವ ಜಿಲ್ಲಾಢಳಿತದ ಪ್ರಯತ್ನ ಶ್ಲಾಘನೆಗೆ ಪಾತ್ರವಾಗಿದೆ. ತುಮಕೂರಿನ ಹೊರವಲಯದಲ್ಲಿರುವ ಮಂದಾರಗಿರಿಯ ಪಿಂಚಿ ಮಂದಿರ ಮತ್ತು ದಿವ್ಯಾಕಾಶ ಸಮವರಣದ ಬೃಹತ್ ಪ್ರತಿಕೃತಿಗಳು ಜನರಲ್ಲಿ ಭಕ್ತಿಭಾವವನ್ನು ಇಮ್ಮಡಿಗೊಳಿಸುತ್ತಿವೆ. ಈ ಮೂಲ್ಕ ತುಮಕೂರು ಜಿಲ್ಲಾಡಳಿತವು ಜಿಲ್ಲೆಯಲ್ಲಿನ ಜೈನ ಧಮದ ಕುರುಹುಗಳನ್ನು ಪರಿಚಯಿಸಿದೆ.…
ಮಂಡ್ಯ: ಮಕ್ಕಳ ಜೊತೆಗೆ ತಾಯಿಯೊಬ್ಬಳು ನಾಲಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಬನಘಟ್ಟ ಬಳಿ ನಡೆದಿದೆ. ಇಬ್ಬರು ಮಕ್ಕಳೊಂದಿಗೆ ತಾಯಿ ಒಬ್ಬಳು ವಿಸಿನಾಲಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಘಟನೆಯಲ್ಲಿ ಇಬ್ಬರು ಮಕ್ಕಳು ನೀರು ಪಾಲಾಗಿದ್ದು, ಇನ್ನು ತಾಯಿಯನ್ನು ಕೂಡಲೇ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಧನಂಜಯ್ ಅವರ ಪತ್ನಿ ವಿದ್ಯಾ ಪಾಂಡವಪುರ ಪಟ್ಟಣದ ಹಾರೋಹಳ್ಳಿ ಗ್ರಾಮದವರಾಗಿದ್ದು, ಅವರ ಮಕ್ಕಳಾದ ಲಿತಿಶಾ (8) ಮತ್ತು ಕಿಶನ್ (2) ಅವರೊಂದಿಗೆ ವಿಶ್ವೇಶ್ವರಯ್ಯ ಕಾಲುವೆಗೆ ಹಾರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ 8.30 ರವರೆಗೆ ಹುಡುಕಾಟ ನಡೆಸಲಾಗಿದ್ದರೂ, ಮಕ್ಕಳ ಶವಗಳು ಪತ್ತೆಯಾಗಿಲ್ಲ. ಆದರೆ, ಪ್ರಾಣಾಪಾಯದಿಂದ ಪಾರಾದ ವಿದ್ಯಾ, ಸೆಲ್ಫಿ ತೆಗೆದುಕೊಳ್ಳುತ್ತಿದ್ದಾಗ ಸಮತೋಲನ ತಪ್ಪಿ ಕಾಲುವೆಗೆ ಬಿದ್ದಿದ್ದೇವೆ ಎಂದು ಹೇಳಿದ್ದಾರೆ. ಕೌಟುಂಬಿಕ ಕಲಹದಿಂದ ಬೇಸತ್ತು ಮಹಿಳೆ ತನ್ನ ಇಬ್ಬರು ಮಕ್ಕಳ ಜೊತೆಗೆ ವಿಸಿ ನಾಲಿಗೆ ಹಾರಿದ್ದಾಳೆ. ಇದನ್ನು ನೋಡಿದ ಸ್ಥಳೀಯರು ತಕ್ಷಣ ಮಹಿಳೆಯನ್ನು ರಕ್ಷಣೆ ಮಾಡಿದ್ದು ದುರಾದೃಷ್ಟ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ನಮ್ಮತುಮಕೂರಿನ…
ಬೆಂಗಳೂರು: ಬೆಂಗಳೂರು ಕರಗ ಮಹೋತ್ಸವ ಏ.4ರಿಂದ 14ರವರೆಗೆ ನಡೆಯಲಿದೆ ಎಂದು ತಿಳಿದು ಬಂದಿದೆ. ಏಪ್ರಿಲ್ 12ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದೆ. ಒಟ್ಟು 11 ದಿನಗಳ ಕಾಲ ಬೆಂಗಳೂರು ಕರಗ ಮಹೋತ್ಸವ ನಡೆಯಲಿದ್ದು, ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ ಕರಗ ಹೊರಲಿದ್ದಾರೆ. ಜ್ಞಾನೇಂದ್ರ ಅವರು 15ನೇ ಬಾರಿ ಬೆಂಗಳೂರು ಕರಗ ಹೊರುತ್ತಿದ್ದಾರೆ. ಫೆ.27ರಂದು ನಡೆದ ಸಭೆಯಲ್ಲಿ ಧರ್ಮರಾಯ ಸ್ವಾಮಿ ದೇವಾಲಯದ ಆಡಳಿತ ಮಂಡಳಿ ಹಾಗೂ ಮುಜರಾಯಿ ಇಲಾಖೆ ಎ.ಜ್ಞಾನೇಂದ್ರ ಸ್ವಾಮಿ ಅವರನ್ನು ಕರಗ ಹೊರಲು ಆಯ್ಕೆ ಮಾಡಿದೆ. ಏಪ್ರಿಲ್ 4 ರಿಂದ ಉತ್ಸವ ಆರಂಭವಾಗಿ ಏಪ್ರಿಲ್ 14 ರವರೆಗೆ ನಡೆಯಲಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ಬೆಳಗಾವಿ : ಖ್ಯಾತ ಉದ್ಯಮಿಗಳಾದ ವಿನೋದ್ ದೊಡ್ಡಣ್ಣವರ್, ಪುರುಷೋತ್ತಮ ದೊಡ್ಡಣ್ಣವರ್ ಒಡೆತನದ ಕಂಪನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದೊಡ್ಡಣ್ಣವರ್ ಬ್ರದರ್ಸ್ ಗಣಿ, ಸಕ್ಕರೆ ಕಾರ್ಖಾನೆ ಮಾಲೀಕರಾಗಿದ್ದಾರೆ. ಗೋವಾದಿಂದ ಆಗಮಿಸಿರುವ ಐಟಿ ಅಧಿಕಾರಿಗಳು ಒಟ್ಟು 5 ತಂಡಗಳಾಗಿ ಸೋಮವಾರ ಮಧ್ಯರಾತ್ರಿ ಮೂರು ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಐಟಿ ಅಧಿಕಾರಿಗಳು ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಕಚೇರಿಗೆ ದೊಡ್ಡಣ್ಣವರ್ ಕುಟುಂಬಸ್ಥರನ್ನು ಕರೆಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಉದ್ಯಮಿಗಳಾದ ವಿನೋದ್ ದೊಡ್ಡಣ್ಣವರ, ಪುಷ್ಪದಂತ ದೊಡ್ಡಣ್ಣವರ ಮನೆ, ಕಚೇರಿ ಮೇಲೆ, ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿರುವ ಉದ್ಯಮಿ ಅಜಿತ್ ಪಟೇಲ, ಗಣೇಶ ಪುರದಲ್ಲಿರುವ ಅಶೋಕ ಐರಾನ್ ಕಂಪನಿ ಮಾಲೀಕ ಅಶೋಕ ಹುಂಬರವಾಡಿ ಮನೆ ಮೇಲೂ ದಾಳಿ ನಡೆದಿದೆ. ದೊಡ್ಡಣ್ಣವರ ಕುಟುಂಬದವರು ಎರಡು ಸಕ್ಕರೆ ಕಾರ್ಖಾನೆ, ಐರನ್ ಹಾಗೂ ಗ್ರೈನೆಟ್ ಉದ್ಯಮದಲ್ಲಿ ದೊಡ್ಡ ಹೆಸರು ಮಾಡಿದ್ದಾರೆ. ಅವರ ಉತ್ಪನ್ನಗಳು ವಿದೇಶಗಳಿಗೂ ರಫ್ತಾಗುತ್ತವೆ. ಬೆಳಿಗ್ಗೆಯಿಂದಲೇ ಅಧಿಕಾರಿಗಳ ತಂಡ ದಾಖಲೆಗಳು, ಆಸ್ತಿಪಾಸ್ತಿ ಪರಿಶೀಲನೆ ಶುರು ಮಾಡಿದ್ದಾರೆ. ನಮ್ಮತುಮಕೂರಿನ…
ವಾಷ್ಟಿಂಗನ್: ಹೊರ ದೇಶಗಳ ಮೇಲೆ ಸುಂಕವನ್ನು ವಿಧಿಸುವುದಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದು, ಚೀನಾ, ಭಾರತ ಮತ್ತು ಬ್ರೆಜಿಲ್ ದೇಶಕ್ಕೆ ಹೆಚ್ಚು ಸುಂಕ ವಿಧಿಸಲು ಅಮೆರಿಕ ಮುಂದಾಗಿದೆ. ಎರಡನೇ ಬಾರಿಗೆ ಅಮೆರಿಕದ ಅಧ್ಯಕ್ಷರಾದ ಬಳಿಕ ಸೋಮವಾರ ಫ್ಲೋರಿಡಾದ ರಿಟ್ರೀಟ್ ನಲ್ಲಿ ರಿಪಬ್ಲಿಕನ್ನರೊಂದಿಗೆ ಮಾತನಾಡಿದ ಡೊನಾಲ್ಡ್ ಟ್ರಂಪ್, ನಮಗೆ ನಿಜವಾಗಿಯೂ ಹಾನಿಕಾರವಾಗಿರುವ ಹೊರಗಿನ ದೇಶಗಳು ಮತ್ತು ಜನರ ಮೇಲೆ ಸುಂಕವನ್ನು ಹಾಕಲಿದ್ದೇವೆ ಎಂದಿದ್ದಾರೆ. ಇತರ ರಾಷ್ಟ್ರಗಳು ಏನು ಮಾಡುತ್ತಾರೆ ಎಂಬುದನ್ನು ನೋಡಿ. ಚೀನಾ ಮೊದಲ ಸುಂಕ ಹೆಚ್ಚಳದ ರಾಷ್ಟ್ರವಾಗಿದೆ. ನಂತರ ಭಾರತ, ಬ್ರೆಜಿಲ್ ಸೇರಿದಂತೆ ಇತರ ಹಲವು ದೇಶಗಳಿವೆ. ನಮಗೆ ಅಮೆರಿಕ ಮೊದಲ ಆದ್ಯತೆಯಾಗಿರುವುದರಿಂದ ಅಂತಹ ದೇಶಗಳ ಮೇಲೆ ಸುಂಕವನ್ನು ವಿಧಿಸಲಾಗುವುದು. ಇದರಿಂದ ನಮ್ಮ ಬೊಕ್ಕಸಕ್ಕೆ ಹಣ ಬರಲಿದೆ ಎಂದು ಹೇಳಿದರು. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಸರಿಗಮಪ ಖ್ಯಾತಿಯ ಅಂಧ ಗಾಯಕಿ ಮಂಜಮ್ಮ ನಿಧನರಾಗಿದ್ದಾರೆ ಎಂದು ಮಂಗಳವಾರ ತಿಳಿದುಬಂದಿದೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಸೋಮವಾರ ತಡರಾತ್ರಿ ವಿಧಿವಶರಾಗಿದ್ದಾರೆ. ದೇವಸ್ಥಾನವೊಂದರ ಮುಂದೆ ಅಂಧ ಸಹೋದರಿಯರಾದ ಮಂಜಮ್ಮ-–ರತ್ನಮ್ಮ ಅವರು ಹಾಡುತ್ತಿದ್ದರು. ಬಳಿಕ ʼಸರಿಗಮಪʼ ಶೋನಲ್ಲಿ ಭಾಗಿಯಾದ ಬಳಿಕ ಇಬ್ಬರೂ ಜನಪ್ರಿಯತೆ ಪಡೆದುಕೊಂಡಿದ್ದರು. ಇದೀಗ ಮಂಜಮ್ಮ ನಿಧನ ಹಿನ್ನೆಲೆಯಲ್ಲಿ ಅಕ್ಕ ರತ್ನಮ್ಮ ಕಂಗಾಲಾಗಿದ್ದಾರೆ. ಇಬ್ಬರೂ ಅಕ್ಕ-ತಂಗಿ. ಹುಟ್ಟಿನಿಂದ ಇಬ್ಬರಿಗೂ ಕಣ್ಣಿಲ್ಲ. ರತ್ನಮ್ಮ ಮತ್ತು ಮಂಜಮ್ಮ ಇಬ್ಬರು ಸಂಗೀತ ಕಲಿತಿಲ್ಲ. ಹೊಟ್ಟೆಪಾಡಿಗಾಗಿ ಹಾಡಲು ಆರಂಭಿಸಿದವರಾಗಿದ್ದರು. ಇದೀಗ ಮಂಜಮ್ಮ ನಿಧನ ಹಿನ್ನೆಲೆಯಲ್ಲಿ ರತ್ನಮ್ಮರ ಬದುಕು ಸಂಕಷ್ಟಕ್ಕೆ ಸಿಲುಕಿದೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿ ಜಿಲ್ಲಾದ್ಯಂತ ಜನವರಿ 30 ರಿಂದ ಫೆಬ್ರವರಿ 13ರವರೆಗೆ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ ಮತ್ತು ಪಾಕ್ಷಿಕ ಆಚರಣೆ ನಡೆಯಲಿದೆ. ಈ ಕಾರ್ಯಕ್ರಮದ ಅಂಗವಾಗಿ ಜನವರಿ 30ರಂದು ಬೆಳಿಗ್ಗೆ 9:30 ಗಂಟೆಗೆ ಜಿಲ್ಲಾಸ್ಪತ್ರೆ ಆವರಣದಲ್ಲಿ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ. ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4
ತುಮಕೂರು: ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ವೀರ ಮಹಿಳೆ ಪ್ರಶಸ್ತಿ ನೀಡಲು ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಕಳೆದ 5 ವರ್ಷಗಳಿಂದ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳು ಹಾಗೂ ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರು, ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಆತ್ಮಸ್ಥೈರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರಿಗೆ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ವೀರ ಮಹಿಳೆ ಪ್ರಶಸ್ತಿಯನ್ನು ನೀಡಲಾಗುವುದು. ನಿಗದಿತ ಅರ್ಜಿ ನಮೂನೆಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಬಾಲಭವನ ಆವರಣ, ಎಂ.ಜಿ.ರಸ್ತೆ, ತುಮಕೂರು ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಪೂರಕ ದಾಖಲಾತಿಗಳೊಂದಿಗೆ ಜನವರಿ 6ರೊಳಗಾಗಿ ನೇರವಾಗಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ. 0816–2956624ನ್ನು ಸಂಪರ್ಕಿಸಬೇಕೆಂದು ಇಲಾಖೆಯ ಉಪನಿರ್ದೇಶಕ ಚೇತನ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು…
ತುಮಕೂರು: ಜಿಲ್ಲೆ ಪಾವಗಡ ತಾಲ್ಲೂಕಿನ ತಿರುಮಣಿ ಸಮೀಪ ಸೋಲಾರ್ ಪಾರ್ಕ್ ನಿರ್ಮಾಣದ ವೇಳೆ ಬಂಡೆ ಬ್ಲಾಸ್ಟ್ ದುರಂತ ಸೋಮವಾರ ಸಂಜೆ 4 ಗಂಟೆಯಲ್ಲಿ ಸಂಭವಿಸಿದೆ. ಈ ಘಟನೆದಲ್ಲಿ ರಾಯಚೂರು ಮೂಲದ ಬಸವರಾಜು ಎಂಬವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ, ಮತ್ತು ಅಚ್ಚಮ್ಮನಹಳ್ಳಿಯ ಶಿವಯ್ಯ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ವಿವರ: KSPDCL ನಿಂದ 1002 ಎಕರೆ ಪ್ರದೇಶವನ್ನು ಸೋಲಾರ್ ಪಾರ್ಕ್ ನಿರ್ಮಾಣಕ್ಕೆ JSW ಕಂಪನಿಗೆ ನೀಡಲಾಗಿತ್ತು, ಪಾರ್ಕ್ ನಿರ್ಮಾಣಕ್ಕಾಗಿ ಬಂಡೆ ಬ್ಲಾಸ್ಟ್ ಮಾಡುತ್ತಿದ್ದ ವೇಳೆ ಸ್ಫೋಟಕ ಸಿಡಿದು ಸಮೀಪದಲ್ಲಿ ಇದ್ದ ಬಸವರಾಜು ಸ್ಥಳದಲ್ಲಿ ಸಾವನ್ನಪ್ಪಿದ್ದು ಕಾರ್ಮಿಕ ಶಿವಯ್ಯ ಗಂಭೀರ ಗಾಯಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾನೆ, ಇದರಿಂದಾಗಿ ಅಕ್ಕಪಕ್ಕದ ಜಾಗದಲ್ಲಿ ಹಾಗೂ ಬೆಟ್ಟಕ್ಕೂ ಬೆಂಕಿ ಹಬ್ಬಿದ್ದು, ಸ್ಥಳೀಯರು ಸ್ಥಳಕ್ಕೆ ಧಾವಿಸಿದರು. ಆದರೆ ಪೊಲೀಸರು ಸ್ಥಳೀಯರನ್ನು ಸ್ಥಳಕ್ಕೆ ಬರದಂತೆ ತಡೆದಿದ್ದು, ಅಕ್ರಮವಾಗಿ ಸ್ಪೋಟಕ ವಸ್ತುಗಳನ್ನ ಬ್ಲಾಸ್ಟ್ ಮಾಡುವ ವೇಳೆ ಬಳಸಿರುವುದರಿಂದ ದುರಂತಕ್ಕೆ ಕಾರಣವಾಗಿದೆ ಎಂದು ಶಂಕಿಸಲಾಗುತ್ತಿದೆ. ಸದ್ಯ ಘಟನಾ ಸ್ಥಳಕ್ಕೆ KSPSCL Aee Mahesh ಗ್ರಾಮಾಂತರ ಸಿಪಿಐ ಗಿರೀಶ್ ಬೇಟೆಯಾಡಿ…
ತುಮಕೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ಮತದಾರರೂ ನೈತಿಕ ಮತದಾನದ ದೃಢಸಂಕಲ್ಪ ಹೊಂದಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸ ಕರೆ ನೀಡಿದರು. ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಶನಿವಾರ ಹಮ್ಮಿಕೊಂಡಿದ್ದ 15ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯುವಜನತೆ ದೇಶದ ಸುವ್ಯವಸ್ಥೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿಯನ್ನು ಹೊಂದಬೇಕು. ಚುನಾವಣೆಯಲ್ಲಿ ನ್ಯಾಯಸಮ್ಮತವಾಗಿ, ಪ್ರಾಮಾಣಿಕವಾಗಿ ಮತ ಚಲಾಯಿಸುವ ಮೂಲಕ ದೇಶದ ಭದ್ರತೆಗೆ ಕಾರಣಕರ್ತರಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ರಾಷ್ಟ್ರದ ಮುನ್ನಡೆಗೆ ಮತದಾನದ ಹಕ್ಕು ಅತ್ಯವಶ್ಯ: ಡೀಸಿ ಶುಭ ಯಾವುದೇ ರಾಷ್ಟ್ರವನ್ನು ಮುನ್ನಡೆಸಲು ಪ್ರತಿಯೊಬ್ಬ ಪ್ರಜೆಯೂ ಮತದಾನದ ಹಕ್ಕು ಹೊಂದುವುದು ಅತ್ಯಾವಶ್ಯವೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು. ಪ್ರಜಾಪ್ರಭುತ್ವ ವ್ಯವಸ್ಥೆ ಹೊಂದಿರುವ ಭಾರತದಲ್ಲಿ 18 ವರ್ಷ ತುಂಬಿದ…